< ಅರಸುಗಳು - ಪ್ರಥಮ ಭಾಗ 12 >

1 ರೆಹಬ್ಬಾಮನು ಶೆಕೆಮಿಗೆ ಹೋದನು. ಅಲ್ಲಿ ಎಲ್ಲಾ ಇಸ್ರಾಯೇಲರೂ ಅವನನ್ನು ಅರಸನನ್ನಾಗಿ ಮಾಡುವುದಕ್ಕೆ ಸೇರಿಬಂದಿದ್ದರು.
रहबाम शखेम येथे गेला कारण त्यास राजा करण्यास सर्व इस्राएल लोक तेथे गेले होते.
2 ಇದಲ್ಲದೆ ಅರಸನಾದ ಸೊಲೊಮೋನನಿಗೆ ತಪ್ಪಿಸಿಕೊಂಡು ಐಗುಪ್ತಕ್ಕೆ ಓಡಿಹೋಗಿದ್ದ ನೆಬಾಟನ ಮಗನಾದ ಯಾರೊಬ್ಬಾಮನನ್ನು ಇದನ್ನು ಕೇಳಿ ಕರೆಯಿಸಿಕೊಂಡಿದ್ದರು.
शलमोन राजाकडून पळाल्यावर नबाटाचा पुत्र यराबाम मिसरमध्ये जाऊन राहीला होता, त्याने हे ऐकले,
3 ಯಾರೊಬ್ಬಾಮನು ನಡೆದ ಸಂಗತಿಗಳ ವರ್ತಮಾನವನ್ನು ಕೇಳಿ ಎಲ್ಲಾ ಇಸ್ರಾಯೇಲರೊಡನೆ ರೆಹಬ್ಬಾಮನ ಬಳಿಗೆ ಹೋಗಿ,
लोकांनी त्यास बोलावून आणले, तेव्हा यराबाम व सर्व इस्राएल लोक रहबामाकडे येऊन त्यास म्हणाले,
4 ಅವನಿಗೆ, “ನಿನ್ನ ತಂದೆಯು ನಮ್ಮ ಮೇಲೆ ಭಾರವಾದ ನೊಗವನ್ನು ಹೇರಿದನು. ನಿನ್ನ ತಂದೆಯು ನೇಮಿಸಿದ ಬಿಟ್ಟೀಕೆಲಸವನ್ನು ನೀನು ಕಡಿಮೆ ಮಾಡಿ ನಮ್ಮ ಮೇಲಿರುವ ಭಾರವಾದ ನೊಗವನ್ನು ಹಗುರ ಮಾಡುವುದಾದರೆ ನಾವು ನಿನಗೆ ಸೇವೆಮಾಡುತ್ತೇವೆ” ಎಂದು ಹೇಳಿದರು.
“तुझ्या वडिलांनी कामाच्या ओझ्याखाली आम्हास भरडून काढले. आता आमचे ओझे थोडे हलके कर. आमच्यावर लादलेले मेहनतीचे जू काढ म्हणजे आम्ही तुझी सेवा करु.”
5 ಅದಕ್ಕೆ ಅವನು, “ನೀವು ಈಗ ಹೋಗಿ ಮೂರು ದಿನಗಳಾದ ನಂತರ ಪುನಃ ಬನ್ನಿರಿ” ಎಂದು ಉತ್ತರಕೊಟ್ಟನು. ಜನರು ಹಿಂದಿರುಗಿ ಹೋದರು.
रहबाम म्हणाला, “तीन दिवसानंतर मला भेटा. तेव्हा मी तुमच्या प्रश्नाचे उत्तर देईन.” मग लोक निघून गेले.
6 ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನ ಕಾಲದಲ್ಲಿ ಮಂತ್ರಿಗಳಾಗಿದ್ದ ಹಿರಿಯರನ್ನು ಕರೆಯಿಸಿ ತಾನು ಜನರಿಗೆ ಕೊಡತಕ್ಕ ಉತ್ತರದ ವಿಷಯದಲ್ಲಿ ಅವರ ಆಲೋಚನೆಯನ್ನು ಕೇಳಿದನು.
शलमोन ज्यांच्याशी सल्लामसलत करत असे अशी काही वृध्द मंडळी होती. त्यांनाच राजा रहबामाने याबाबतीत सल्ला विचारला. तो म्हणाला, “या लोकांस मी काय सांगू?”
7 ಅವರು ಅವನಿಗೆ, “ನೀನು ಈ ಹೊತ್ತು ಈ ಜನರ ಮಾತನ್ನು ಕೇಳಿ, ಅವರಿಗೆ ವಿನಯವಾಗಿ ಒಳ್ಳೆಯ ಉತ್ತರ ಕೊಡುವುದಾದರೆ ಅವರು ಯಾವಾಗಲೂ ನಿನ್ನ ಸೇವಕರಾಗಿರುವರು” ಎಂದರು.
यावर ही वयोवृध्द मंडळी म्हणाली, “तू आज यांचा सेवक बनलास तर तेही तुझी सेवा करतील. त्यांच्याशी प्रेमाने, समजुतीने बोललास तर तेही आयुष्यभर तुझे काम करतील.”
8 ಆದರೆ ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ ತನ್ನ ಸಂಗಡ ಬೆಳೆದ ತನ್ನ ಮಂತ್ರಿಗಳಾದ ಯೌವನಸ್ಥರನ್ನು ಕರೆಯಿಸಿ,
पण रहबामाने हा सल्ला मानला नाही. आपल्या समवयस्क मित्रांना त्यांचे मत विचारले.
9 “ನನ್ನ ತಂದೆಯು ಹೇರಿದ ನೊಗವನ್ನು ಹಗುರಮಾಡಬೇಕೆಂದು ಬೇಡಿಕೊಳ್ಳುವ ಈ ಜನರಿಗೆ ಯಾವ ಉತ್ತರವನ್ನು ಕೊಡಬೇಕು, ಈ ವಿಷಯದಲ್ಲಿ ನಿಮ್ಮ ಆಲೋಚನೆ ಏನು?” ಎಂದು ಕೇಳಿದನು.
रहबाम त्यांना म्हणाला, माझ्या वडिलांच्या कारकिर्दीतल्यापेक्षा “या लोकांस कामाचे जू हलके करून हवे आहे. त्यांना आता मी काय सांगू, त्यांच्याशी काय बोलू?”
10 ೧೦ ಅವರು ಅವನಿಗೆ, “ನಿನ್ನ ತಂದೆಯು ನಮ್ಮ ಮೇಲೆ ಹೇರಿರುವ ನೊಗವನ್ನು ಹಗುರಮಾಡು ಎಂಬುದಾಗಿ ನಿನ್ನನ್ನು ಬೇಡಿಕೊಂಡ ಜನರಿಗೆ ನೀನು, ‘ನನ್ನ ತಂದೆಯ ನಡುವಿಗಿಂತ ನನ್ನ ಕಿರಿಬೆರಳು ದಪ್ಪವಾಗಿದೆ.
१०तेव्हा ते तरुण मित्र म्हणाले, “ते लोक येऊन असे म्हणत आहेत, ‘तुझ्या वडिलांनी आमच्याकडून बेदम कष्ट करवून घेतले, तर आता आमचे जू हलके करा.’ तर तू त्यांना बढाई मारुन सांग, ‘माझ्या वडिलांच्या कंबरेपेक्षा ही माझी करंगळी जास्त मोठी आहे.
11 ೧೧ ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹಾಕಿರುವುದು ನಿಜ. ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ. ನಾನಾದರೋ ನಿಮ್ಮನ್ನು ಮುಳ್ಳುಕೊರಡೆಗಳಿಂದ ದಂಡಿಸುವೆನು’ ಎಂಬುದಾಗಿ ಹೇಳಬೇಕು” ಎಂದು ಉತ್ತರಕೊಟ್ಟನು.
११माझ्या वडिलांनी तुम्हावर भारी जू लादले. मी ते काम आणखी वाढवीन. त्यांनी तुम्हास चाबकाचे फटकारे मारले असतील तर मी तर तुम्हास विंचवानी शिक्षा करीन.”
12 ೧೨ ಯಾರೊಬ್ಬಾಮನೂ ಮತ್ತು ಎಲ್ಲಾ ಜನರೂ ಅರಸನಾದ ರೆಹಬ್ಬಾಮನ ಅಪ್ಪಣೆಯಂತೆ ಮೂರನೆಯ ದಿನದಲ್ಲಿ ತಿರುಗಿ ಅವನ ಬಳಿಗೆ ಬಂದರು.
१२रहबाम राजाने त्या लोकांस “तीन दिवसानी यायला” सांगितले होते. त्याप्रमाणे यराबाम व सर्व इस्राएल लोक तीन दिवसानी रहबामाकडे आले.
13 ೧೩ ಅರಸನು ಅವರಿಗೆ ಕಠಿಣವಾದ ಉತ್ತರವನ್ನು ಕೊಟ್ಟನು. ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ ಯೌವನಸ್ಥರ ಆಲೋಚನೆಗನುಸಾರವಾಗಿ ಜನರಿಗೆ,
१३त्यावेळी राजा रहबाम त्यांच्याशी अतिशय कठोरपणे बोलला. वडिलधाऱ्यांच्या सल्ल्याकडे त्याने दुर्लक्ष केले.
14 ೧೪ “ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹಾಕಿರುವುದು ನಿಜ. ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ, ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ. ನಾನಾದರೋ ನಿಮ್ಮನ್ನು ಮುಳ್ಳು ಕೊರಡೆಗಳಿಂದ ದಂಡಿಸುವೆನು” ಎಂದು ನುಡಿದನು.
१४मित्रांच्या सल्ल्याप्रमाणे तो बोलला. तो म्हणाला, “माझ्या वडिलांनी तुमच्यावर कष्टाचे जू लादले. मी तर तुम्हास आणखीच कामाला लावीन. त्यांनी तुमच्यावर आसूड उगवले, पण ती तर तुम्हास विंचवानी शिक्षा करील.”
15 ೧೫ ಅವನು ಜನರ ಮಾತನ್ನು ಕೇಳದೇ ಹೋದದ್ದು ಯೆಹೋವನಿಂದಲೇ. ಈ ಪ್ರಕಾರ ಯೆಹೋವನು ಶಿಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.
१५या प्रकारे राजाने इस्राएल लोकांचे ऐकले नव्हते. परमेश्वरानेच हे घडवून आणले होते. नबाटाचा पुत्र यराबाम याला दिलेले वचन पूर्ण करण्यासाठी परमेश्वराने हे केले. शिलो येथील संदेष्टा अहीया याच्यामार्फत परमेश्वराने हे वचन दिले.
16 ೧೬ ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲವೆಂದೂ ತಿಳಿದು ಇಸ್ರಾಯೇಲರೆಲ್ಲರೂ ಅವನಿಗೆ, “ದಾವೀದನಲ್ಲಿ ನಮಗೇನು ಪಾಲು? ಇಷಯನ ಮಗನಲ್ಲಿ ನಮಗೇನು ಬಾಧ್ಯತೆ? ಇಸ್ರಾಯೇಲರೇ, ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಿರಿ, ದಾವೀದನವರೇ ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ” ಎಂದು ಹೇಳಿ ತಮ್ಮ ತಮ್ಮ ನಿವಾಸಗಳಿಗೆ ಹೋದರು.
१६नवा राजा आपले म्हणणे मानत नाही, हे इस्राएली लोकांच्या लक्षात आले. तेव्हा ते राजाला म्हणाले, “आम्ही दाविदाच्या घराण्यातील थोडेच आहोत. काय? नाही! इशायच्या जमिनीत आम्हास थोडाच वाटा मिळणार आहे काय? नाही! तेव्हा इस्राएलींनो, जा आपापल्या घरी तंबूकडे जा, या दाविदाच्या मुलाला आपल्या घराण्यापुरतेच राज्य करू दे.” एवढे बोलून ते निघून गेले.
17 ೧೭ ಯೆಹೂದ್ಯ ಪ್ರಾಂತ್ಯದಲ್ಲಿದ್ದ ಇಸ್ರಾಯೇಲರಾದರೋ ರೆಹಬ್ಬಾಮನ ಅಧೀನದಲ್ಲಿದ್ದರು.
१७तरीही यहूदा नगरांमध्ये राहणाऱ्या इस्राएल लोकांवर रहबामाची सत्ता होतीच.
18 ೧೮ ರೆಹಬ್ಬಾಮನು ಬಿಟ್ಟೀ ಕೆಲಸದವರ ಮೇಲ್ವಿಚಾರಕನಾದ ಅದೋರಾಮನನ್ನು ಇಸ್ರಾಯೇಲರ ಬಳಿಗೆ ಕಳುಹಿಸಲು ಅವರು ಅವನನ್ನು ಕಲ್ಲೆಸೆದು ಕೊಂದರು. ಅರಸನಾದ ರೆಹಬ್ಬಾಮನು ಬೇಗನೆ ರಥವನ್ನೇರಿ ಯೆರೂಸಲೇಮಿಗೆ ಓಡಿಹೋದನು.
१८अदोराम नावाचा एक मनुष्य सर्व कामगारांवर देखरेख करत असे. तेव्हा राजा रहबामाने त्यास लोकांशी बोलणी करायला पाठवले. पण इस्राएल लोकांनी त्याच्यावर इतकी दगडफेक केली की तो प्राणाला मुकला. तेव्हा राजाने आपल्या रथात बसून पळ काढला आणि तो यरूशलेम येथे आला.
19 ೧೯ ಇಸ್ರಾಯೇಲರು ಅಂದಿನಿಂದ ಇಂದಿನವರೆಗೂ ದಾವೀದನ ಕುಟುಂಬದವರೊಡನೆ ಸಮಾಧಾನವಾಗಲೇ ಇಲ್ಲ.
१९इस्राएल लोकांनी दाविदाच्या घराण्याविरुध्द बंड पुकारले. आजही त्या घराण्याशी त्यांचे वैर आहे.
20 ೨೦ ಯಾರೊಬ್ಬಾಮನು ಹಿಂತಿರುಗಿ ಬಂದಿದ್ದಾನೆಂಬ ವರ್ತಮಾನವು ಇಸ್ರಾಯೇಲರಿಗೆ ತಿಳಿದಾಗ ಅವರೆಲ್ಲರೂ ಅವನನ್ನು ನೆರೆದ ಸಭೆಯ ಮುಂದೆ ಕರೆಯಿಸಿ ತಮ್ಮ ಅರಸನನ್ನಾಗಿ ನೇಮಿಸಿಕೊಂಡರು. ದಾವೀದನ ಕುಟುಂಬದವರನ್ನು ಯೆಹೂದ ಕುಲವೇ ಹೊರತು ಬೇರೆ ಯಾವ ಕುಲವೂ ಹಿಂಬಾಲಿಸಲಿಲ್ಲ.
२०यराबाम परत आला आहे असे इस्राएल लोकांस कळले. तेव्हा त्यांनी सगळ्यांची सभा भरवून त्यास सर्व इस्राएलचा राजा म्हणून घोषित केले. फक्त एका यहूदाच्या घराण्याने तेवढा दाविदाच्या घराण्याला आपला पठिंबा दिला.
21 ೨೧ ಸೊಲೊಮೋನನ ಮಗನಾದ ರೆಹಬ್ಬಾಮನು ಯೆರೂಸಲೇಮನ್ನು ತಲುಪಿದ ನಂತರ ಇಸ್ರಾಯೇಲರಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೂ ರಾಜ್ಯವನ್ನು ತಿರುಗಿ ತನಗೆ ವಶಪಡಿಸಿಕೊಳ್ಳುವುದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಲಕ್ಷದ ಎಂಬತ್ತು ಸಾವಿರ ಶ್ರೇಷ್ಠ ಸೈನಿಕರನ್ನು ಕೂಡಿಸಿದನು.
२१रहबाम यरूशलेमेला परतला. यहूदा आणि बन्यामीन यांच्या वंशातील सर्वांना त्याने एकत्र केले. एकंदर एक लक्ष ऐंशी हजाराचे सैन्य जमले. इस्राएल लोकांशी लढून शलमोनाचे राज्य परत मिळवायचा रहबामाचा विचार होता.
22 ೨೨ ಆಗ ದೇವರ ಮನುಷ್ಯನಾದ ಶೆಮಾಯನಿಗೆ ದೈವೋತ್ತರವುಂಟಾಯಿತು.
२२शमाया नामक देवाच्या मनुष्याशी या सुमारास परमेश्वर बोलला. तो म्हणाला,
23 ೨೩ “ನೀನು ಹೋಗಿ, ಸೊಲೊಮೋನನ ಮಗನೂ ಯೆಹೂದದ ಅರಸನೂ ಆದ ರೆಹಬ್ಬಾಮನಿಗೂ, ಯೆಹೂದ ಬೆನ್ಯಾಮೀನ್ ಕುಲಗಳವರಿಗೂ ಮತ್ತು ಉಳಿದ ಜನರಿಗೂ
२३“शलमोनाचा पुत्र आणि यहूदाचा राजा रहबाम, तसेच यहूदा आणि बन्यामीन लोक यांना जाऊन सांग,
24 ೨೪ ‘ಯೆಹೋವನ ಮಾತನ್ನು ಕೇಳಿರಿ, ನೀವು ನಿಮ್ಮ ಸಹೋದರರಾದ ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕೆ ಹೋಗಬಾರದು. ಎಲ್ಲರೂ ಹಿಂತಿರುಗಿ ಹೋಗಿರಿ. ಈ ಕಾರ್ಯವು ಯೆಹೋವನಿಂದಾಗಿದೆ’ ಎಂದು ಹೇಳಬೇಕು” ಎಂಬ ಯೆಹೋವನ ಮಾತನ್ನು ಜನರಿಗೆ ಹೇಳಿದನು. ಆಗ ಅವರು ಯೆಹೋವನ ಮಾತನ್ನು ಕೇಳಿ ವಿಧೇಯರಾಗಿ ಹಿಂದಿರುಗಿ ಹೋದರು.
२४इस्राएलांनी आपल्या बांधवांशी तुम्ही लढू नये अशी परमेश्वराची इच्छा आहे.” प्रत्येक जण आपापल्या ठिकाणी परत जा. या सगळ्यांचा करता करविता मीच होतो. या आदेशानुसार रहबामाचे सैन्य माघारी गेले.
25 ೨೫ ಯಾರೊಬ್ಬಾಮನು ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ ಅಲ್ಲಿ ವಾಸಿಸಿದನು. ಅಲ್ಲಿಂದ ಪೆನೂವೇಲಿಗೆ ಹೋಗಿ ಅದನ್ನೂ ಭದ್ರಪಡಿಸಿದನು.
२५शखेम हे एफ्राईमाच्या डोंगराळ प्रदेशातील नगर होते. ते चांगले मजबूत आणि सुरक्षित करून यराबाम तेथे राहिला. पुढे त्याने पनुएल नगराची उभारणी केली.
26 ೨೬ ಅವನು ತನ್ನ ಮನಸ್ಸಿನಲ್ಲಿ, “ರಾಜ್ಯವು ಪುನಃ ದಾವೀದನ ಕುಟುಂಬದವರಿಗೆ ಆಗುವುದೋ ಏನೋ,
२६यराबाम मनाशीच म्हणाला, “हे राज्य दाविदाच्या घराण्याकडे जाण्याचा संभव आहे.
27 ೨೭ ಜನರು ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಯಜ್ಞಸಮರ್ಪಣೆಗಾಗಿ ಹೋಗುವುದಾದರೆ, ಅವರ ಮನಸ್ಸು ಅವರ ಒಡೆಯನೂ ಯೆಹೂದದ ಅರಸನೂ ಆದ ರೆಹಬ್ಬಾಮನ ಕಡೆಗೆ ತಿರುಗಿತು. ಅವರು ನನ್ನನ್ನು ಕೊಂದು ಅವನ ಬಳಿಗೆ ಹೋದಾರು” ಅಂದುಕೊಂಡನು.
२७लोक यरूशलेमेस परमेश्वराच्या घराकडे यज्ञ करावयास गेले तर यहूदाचा राजा रहबाम याच्याच मागे ते जातील मग ते माझा वध करतील व पुन्हा यहूदाचा राजा रहबाम याचे पुन्हा: होतील.”
28 ೨೮ ಅವನು ಬಹಳವಾಗಿ ಆಲೋಚಿಸಿ, ಕಡೆಯಲ್ಲಿ ಬಂಗಾರದ ಎರಡು ಬಸವನ ಮೂರ್ತಿಗಳನ್ನು ಮಾಡಿಸಿ ಇಸ್ರಾಯೇಲರಿಗೆ, “ನೀವು ಜಾತ್ರೆಗಾಗಿ ಯೆರೂಸಲೇಮಿಗೆ ಹೋದದ್ದು ಸಾಕಾಯಿತು, ಇಗೋ, ನಿಮ್ಮನ್ನು ಐಗುಪ್ತದಿಂದ ಕರೆತಂದ ದೇವರುಗಳು ಇಲ್ಲಿರುತ್ತವೆ” ಎಂದು ಹೇಳಿದನು.
२८त्याने मग आपल्या सल्लागाराबरोबर विचार विनिमय केला. “त्यांनी त्यास एक तोड सुचवली. त्यानुसार राजा यराबामाने सोन्याची दोन वासरे करवून घेतली. मग तो लोकांस म्हणाला, तुम्हास यरूशलेमेला उपासनेसाठी जायची गरज नाही. हे इस्राएला तुम्हास मिसर देशाबाहेर ज्यांनी काढले तेच हे देव.”
29 ೨೯ ನಂತರ ಅವನು ಅವುಗಳಲ್ಲಿ ಒಂದನ್ನು ಬೇತೇಲಿನಲ್ಲಿರಿಸಿ, ಇನ್ನೊಂದನ್ನು ದಾನಿಗೆ ಕಳುಹಿಸಿದನು.
२९राजाने मग एक सोन्याचे वासरु बेथेल येथे आणि दुसरे दान या शहरात बसवले.
30 ೩೦ ಇದು ಪಾಪಕ್ಕೆ ಕಾರಣವಾಯಿತು. ಜನರು ಈ ಎರಡನೆಯ ವಿಗ್ರಹವನ್ನು ಮೆರವಣಿಗೆಯಾಗಿ ದಾನಿಗೆ ಒಯ್ದರು.
३०पण त्याने हे मोठे पाप केले होते. इसाएलाचे लोक बेथेल आणि दान येथे वासरांच्या पूजेसाठी जाऊ लागले. पण हेही मोठेच पाप होते.
31 ೩೧ ಇದಲ್ಲದೆ ಅವನು ಪೂಜಾಗಿರಿಗಳ ಮೇಲೆ ಗುಡಿಗಳನ್ನು ಕಟ್ಟಿಸಿ, ಲೇವಿಯರಲ್ಲದ ಸಾಮಾನ್ಯ ಜನರನ್ನು ಯಾಜಕರನ್ನಾಗಿ ನೇಮಿಸಿದನು.
३१उंचवट्याच्या ठिकाणीही यराबामाने देऊळे बांधली. त्यासाठी याजकही त्याने फक्त लेवी वंशातले न निवडता इस्राएलाच्या वेगवेगळ्या वंशांमधून निवडले.
32 ೩೨ ಅವನು ಎಂಟನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ, “ಬೇತೇಲಿನಲ್ಲಿ ಯೆಹೂದ ದೇಶದ ಜಾತ್ರೆಗೆ ಸರಿಯಾದ ಜಾತ್ರೆಯು ನಡೆಯಬೇಕು” ಎಂದು ಅಪ್ಪಣೆ ಮಾಡಿ, ತಾನು ಅಲ್ಲಿಗೆ ಹೋಗಿ ಅಲ್ಲಿ ನಿಲ್ಲಿಸಿದ ಬಸವನ ಮೂರ್ತಿಗಳಿಗೋಸ್ಕರ ಯಜ್ಞವೇದಿಯ ಮೇಲೆ ಯಜ್ಞ ಮಾಡಿದನು. ತಾನು ಏರ್ಪಡಿಸಿದ ಪೂಜಾಸ್ಥಳಗಳ ಯಾಜಕರನ್ನು ಬೇತೇಲಿನ ದೇವಸ್ಥಾನದ ಸೇವೆಗೆ ನೇಮಿಸಿದನು.
३२याखेरीज त्याने एक नवा सणही सुरु केला. यहूदामधील वल्हांडणाच्या सणासारखाच हा होता. पण पहिल्या महिन्याच्या पंधराव्या दिवसाऐवजी हा आठव्या महिन्याच्या पंधराव्या दिवशी यराबामाने ठेवला. या दिवशी हा राजा बेथेल नगरातील वेदीवर यज्ञ करत असे. तसेच त्याने केलेल्या वासरांना बली अर्पण करत असे. त्याने उंच ठिकाणी बांधलेल्या देवाळांसाठी बेथेल मधले याजकही नेमले.
33 ೩೩ ಇಸ್ರಾಯೇಲರು ಎಂಟನೆಯ ತಿಂಗಳ ಹದಿನೈದನೆಯ ದಿನದಲ್ಲಿ ಹಬ್ಬವನ್ನಾಚರಿಸಬೇಕೆಂದು ಯಾರೊಬ್ಬಾಮನು ಸ್ವ ಇಚ್ಛೆಯಿಂದ ಗೊತ್ತುಮಾಡಿ ಆ ಸಮಯಕ್ಕೆ ತಾನೂ ಬೇತೇಲಿನ ಯಜ್ಞವೇದಿಯ ಬಳಿಗೆ ಹೋಗಿ ಧೂಪಹಾಕುವುದಕ್ಕಾಗಿ ಅದರ ಮೆಟ್ಟಲುಗಳನ್ನು ಹತ್ತುತ್ತಿದ್ದನು.
३३अशाप्रकारे यराबामाने इस्राएल लोकांसाठी आठव्या महिन्याचा पंधरावा दिवस सण म्हणून ठरवला. त्यादिवशी बेथेलच्या वेदीवर तो यज्ञ करत असे आणि धूप जाळत असे.

< ಅರಸುಗಳು - ಪ್ರಥಮ ಭಾಗ 12 >