< ಅರಸುಗಳು - ಪ್ರಥಮ ಭಾಗ 13 >

1 ಆಗ ಯೆಹೂದ ದೇಶದವನಾದ ಒಬ್ಬ ದೇವರ ಮನುಷ್ಯನು ಯೆಹೋವನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪಹಾಕುವುದಕ್ಕಾಗಿ ಯಜ್ಞವೇದಿಯ ಹತ್ತಿರ ನಿಂತುಕೊಂಡಿದ್ದನು
परमेश्वराने आपल्या एका संदेष्ट्याला (देवाच्या मनुष्यास) यहूदाहून बेथेल नगरीला पाठवले. तो तेथे पोहोंचला तेव्हा राजा यराबाम वेदी पुढे धूप जाळत होता.
2 ಆಗ ಆ ಮನುಷ್ಯನು ಯೆಹೋವನ ಅಪ್ಪಣೆಯಿಂದ ಯಜ್ಞವೇದಿಯನ್ನು ಕುರಿತು, “ವೇದಿಯೇ, ವೇದಿಯೇ, ದಾವೀದನ ಸಂತಾನದಲ್ಲಿ ಯೋಷೀಯನು ಎಂಬ ಒಬ್ಬ ಮನುಷ್ಯನು ಹುಟ್ಟುವನು. ಅವನು ನಿನ್ನ ಮೇಲೆ ಧೂಪಹಾಕುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು, ಅವರನ್ನು ನಿನ್ನ ಮೇಲೆಯೇ ಯಜ್ಞಮಾಡುವನು. ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವು ಎಂದು ಯೆಹೋವನು ಹೇಳುತ್ತಾನೆ” ಅಂದನು.
परमेश्वराने या संदेष्ट्याला वेदीविरुध्द बोलायची आज्ञा केली होती. त्याप्रमाणे तो म्हणाला, “हे वेदी, परमेश्वराचे म्हणणे असे आहे दाविदाच्या कुळात योशीया नावाचा पुत्र जन्माला येईल. हे याजक सध्या उंचवट्यावरील ठिकाणी पूजा करत आहेत. पण हे वेदी, योशीया त्यांचेच देह तुला अर्पण करील. योशीया त्या याजकांचा वध करील. आता ते तुझ्यावर धूप जाळत आहेत खरे पण योशीया, मानवी अस्थी तुझ्यावर जाळील. मग तू निरुपयोगी ठरशील.”
3 ಇದಲ್ಲದೆ ಅವನು, “ನನ್ನ ಮಾತು ಯೆಹೋವನದು ಎಂಬುವುದಕ್ಕೆ ಯಜ್ಞವೇದಿಯು ಸೀಳಿ ಅದರ ಮೇಲಣ ಬೂದಿಯು ಬಿದ್ದುಹೋಗುವುದೇ ಗುರುತಾಗಿರುವುದು” ಎಂದು ಹೇಳಿದನು.
हे निश्चित घडेल, अशी संदेष्ट्याने लोकांस खूण दिली. तो म्हणाला, “परमेश्वराने सांगितले त्याची ही साक्ष ही वेदी तडकेल आणि तिच्यावरची राख खाली ओघळेल, असे परमेश्वराने सांगितले आहे.”
4 ಬೇತೇಲಿನ ಯಜ್ಞವೇದಿಯ ಬಳಿಯಲ್ಲಿ ನಿಂತಿದ್ದ ಅರಸನು ಆ ದೇವರ ಮನುಷ್ಯನು ವೇದಿಗೆ ವಿರುದ್ಧವಾಗಿ ನುಡಿದಿದ್ದನ್ನು ಕೇಳಿ, “ಕೈಚಾಚಿ ಅವನನ್ನು ಹಿಡಿಯಿರಿ” ಎಂದು ಆಜ್ಞಾಪಿಸಿದನು. ಕೂಡಲೇ ಅವನ ಕೈ ಬತ್ತಿ ಹೋಯಿತು. ಅವನು ಅದನ್ನು ಹಿಂದಕ್ಕೆ ತೆಗೆದುಕೊಳ್ಳಲು ಅಗಲ್ಲಿಲ್ಲ.
राजाने जेव्हा देवाच्या मनुष्याचे हे वेदीबद्दलचे बोलणे बेथेल येथे ऐकले. तेव्हा यराबामाने वेदीवरील आपला हात उचलून त्या मनुष्याकडे निर्देश करत म्हटले, “पकडा त्याला” मग ज्या हाताने त्याने त्या मनुष्याकडे निर्देश केला होता तो हे बोलत असताना लुळा पडला. त्यास तो हलवता येईना
5 ಯಜ್ಞವೇದಿಯು ಸೀಳಿ ಅದರ ಮೇಲಣ ಬೂದಿಯು ಬಿದ್ದುಹೋಯಿತು. ಹೀಗೆ ಆ ದೇವರ ಮನುಷ್ಯನು ಯೆಹೋವನ ಅಪ್ಪಣೆಯಿಂದ ಹೇಳಿದ ಗುರುತು ನೆರವೇರಿತು.
तसेच, वेदी भंग पावली. त्यावरील राख जमिनीवर पडली. देवाच्या मनुष्याच्या तोंडून परमेश्वराचे वचन निघत होते याची ती खूण होती.
6 ಅರಸನು ಆ ಮನುಷ್ಯನಿಗೆ, “ನಿನ್ನ ದೇವರಾದ ಯೆಹೋವನು ಪ್ರಸನನ್ನಾಗುವಂತೆ ಬೇಡಿಕೊಂಡು ನಾನು ನನ್ನ ಕೈಯನ್ನು ಹಿಂತೆಗೆಯುವುದಕ್ಕಾಗುವ ಹಾಗೆ ಆತನನ್ನು ನನಗೋಸ್ಕರ ಪ್ರಾರ್ಥಿಸು” ಎಂದು ಕೇಳಿದನು. ದೇವರ ಮನುಷ್ಯನು ಯೆಹೋವನನ್ನು ಬೇಡಿಕೊಂಡಿದ್ದರಿಂದ ಅರಸನ ಕೈ ವಾಸಿಯಾಗಿ ಮುಂಚಿನಂತೆ ಆಯಿತು.
तेव्हा राजा यराबाम त्या संदेष्ट्याला म्हणाला, “माझा हात बरा व्हावा म्हणून तू कृपया तुझ्या परमेश्वर देवाची प्रार्थना कर.” तेव्हा त्याने देवाजवळ तशी विनंती केली आणि राजाचा हात बरा झाला. राजाचा हात मग पूर्ववत झाला.
7 ಆಗ ಅರಸನು ಅವನಿಗೆ, “ನನ್ನ ಮನೆಗೆ ಬಾ, ಸ್ವಲ್ಪ ಊಟ ಮಾಡಿ ವಿಶ್ರಾಂತಿ ಪಡೆದುಕೋ. ನಾನು ನಿನಗೆ ಬಹುಮಾನವನ್ನು ಕೊಡುತ್ತೇನೆ” ಎಂದನು.
राजा त्या देवाच्या मनुष्यास म्हणाला, “माझ्याबरोबर घरी चल, काहीतरी खा मग मी तुला इनाम देईन.”
8 ಆದರೆ ದೇವರ ಮನುಷ್ಯನು ಅರಸನಿಗೆ, “ನೀನು ನನಗೆ ನಿನ್ನ ಆಸ್ತಿಯಲ್ಲಿ ಅರ್ಧವನ್ನು ಕೊಟ್ಟರೂ, ನಾನು ನಿನ್ನ ಸಂಗಡ ಬರುವುದಿಲ್ಲ. ಇಲ್ಲಿ ಅನ್ನ ಪಾನಗಳನ್ನು ತೆಗೆದುಕೊಳ್ಳುವುದಿಲ್ಲ.
पण हा देवाचा मनुष्य म्हणाला, “अर्धे राज्य मला देऊ केलेस तरी मी तुझ्याबरोबर घरी येणार नाही. इथे मी अन्नपाणी घेणार नाही.
9 ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದೂ ಮತ್ತು ಹಿಂದಿರುಗಿ ಹೋಗುವಾಗ ಬೇರೆ ದಾರಿಯಿಂದ ಹೋಗಬೇಕೆಂತಲೂ ನನಗೆ ಯೆಹೋವನ ಅಪ್ಪಣೆಯಾಗಿದೆ” ಎಂದು ಹೇಳಿದನು.
काहीही न खाण्यापिण्याबद्दल परमेश्वराने मला बजावले आहे. तसेच, येताना ज्या रस्त्याने आलो त्याने परत जायचे नाही, अशीही त्याची आज्ञा आहे.”
10 ೧೦ ಆ ದೇವರ ಮನುಷ್ಯನು ಬಂದ ದಾರಿಯನ್ನು ಬಿಟ್ಟು ಇನ್ನೊಂದು ದಾರಿಯನ್ನು ಹಿಡಿದು ಹೊರಟು ಹೋದನು.
१०त्याप्रमाणे तो वेगळ्या रस्त्याला लागला. बेथेलला येताना, ज्या रस्त्याने आला त्याने तो गेला नाही.
11 ೧೧ ಬೇತೇಲಿನಲ್ಲಿ ಒಬ್ಬ ವೃದ್ಧ ಪ್ರವಾದಿಯು ವಾಸವಾಗಿದ್ದನು. ಅವನ ಮಕ್ಕಳು ಬಂದು ದೇವರ ಮನುಷ್ಯನು ಆ ದಿನ ಬೇತೇಲಿನಲ್ಲಿ ಮಾಡಿದ್ದನ್ನೂ ಮತ್ತು ಅವನು ಅರಸನಿಗೆ ಹೇಳಿದ್ದನ್ನೂ ತಮ್ಮ ತಂದೆಗೆ ತಿಳಿಸಿದರು.
११बेथेल नगरात एक वृध्द देवाचा मनुष्य राहत होता. त्याच्या मुलांनी त्यास या संदेष्ट्याने बेथेल मध्ये काय केले ते येऊन सांगितले. राजाला तो संदेष्टा काय म्हणाला तेही त्यांनी सांगितले.
12 ೧೨ ತಂದೆಯು ಅವರನ್ನು, “ಅವನು ಯಾವ ದಾರಿಯಿಂದ ಹೋದನು?” ಎಂದು ಕೇಳಲು ಅವರು ಯೆಹೂದ ದೇಶದವನಾದ ಆ ದೇವರ ಮನುಷ್ಯನು ಹೋದ ದಾರಿಯನ್ನು ತೋರಿಸಿದರು.
१२तेव्हा देवाचा मनुष्य म्हणाला, “कोणत्या रस्त्याने तो परतला?” तेव्हा मुलांनी आपल्या वडिलांना यहूदाच्या संदेष्ट्याचा मार्ग दाखवला.
13 ೧೩ ಆಗ ಅವನು ತನ್ನ ಮಕ್ಕಳಿಗೆ, “ಕತ್ತೆಗೆ ತಡಿಹಾಕಿರಿ” ಎಂದು ಆಜ್ಞಾಪಿಸಿಲು ಅವರು ತಡಿಹಾಕಿದರು. ಅವನು ಕತ್ತೆಯ ಮೇಲೆ ಕುಳಿತುಕೊಂಡು ಹೊರಟನು.
१३त्या वृध्द संदेष्ट्याने “मुलांना गाढवावर खोगीर चढवायला सांगितले.” त्याप्रमाणे त्यांनी केल्यावर संदेष्टा गाढवावरुन निघाला.
14 ೧೪ ದೇವರ ಮನುಷ್ಯನ ಹಿಂದೆ ಹೋಗಿ ಏಲಾ ವೃಕ್ಷದ ಕೆಳಗೆ ಕುಳಿತ್ತಿದ್ದ ಅವನನ್ನು ಕಂಡು, “ಯೆಹೂದದಿಂದ ಬಂದ ದೇವರ ಮನುಷ್ಯನು ನೀನೋ?” ಎಂದು ಕೇಳಿದನು. ಅವನು ಹೌದೆಂದನು.
१४हा वृध्द संदेष्टा त्या देवाच्या माणासाच्या मागावर निघाला. तेव्हा तो एला वृक्षाखाली बसलेला आढळला. वृध्द संदेष्ट्याने त्यास विचारले, “तूच का तो यहूदाहून आलेला देवाचा मनुष्य?” संदेष्ट्याने यावर होकार दिला.
15 ೧೫ ಆಗ ಆ ಮುದುಕನು ಅವನಿಗೆ, “ನೀನು ನನ್ನ ಮನೆಗೆ ಬಂದು ಊಟಮಾಡು” ಎಂದು ಹೇಳಿದನು.
१५तेव्हा वृध्द संदेष्टा म्हणाला, “माझ्याबरोबर घरी चल आमच्याकडे जेव.”
16 ೧೬ ಅದಕ್ಕೆ ಅವನು, “ನಾನು ನಿನ್ನ ಸಂಗಡ ಬರವುದಿಲ್ಲ ಮತ್ತು ಈ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳುವುದಿಲ್ಲ.
१६पण हा देवाचा मनुष्य म्हणाला, “तुझ्याबरोबर मी येऊ शकणार नाही. तसेच तेथे खाऊपिऊ शकणार नाही.
17 ೧೭ ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದೂ, ಬಂದ ದಾರಿಯನ್ನು ಬಿಟ್ಟು ಬೇರೆ ದಾರಿಯಿಂದ ಹಿಂದಿರುಗಿ ಹೋಗಬೇಕೆಂದು ನನಗೆ ಯೆಹೋವನ ಅಪ್ಪಣೆಯಾಗಿದೆ” ಎಂದು ಉತ್ತರಕೊಟ್ಟನು.
१७तेथे काही खायचे प्यायचे नाही आणि गेलास त्या रस्त्याने परतायचे नाही असे परमेश्वराने मला सांगितले आहे.”
18 ೧೮ ಆಗ ಆ ಮುದುಕನು, “ನಾನು ನಿನ್ನಂತೆ ಪ್ರವಾದಿಯಾಗಿದ್ದೇನೆ. ಒಬ್ಬ ದೇವದೂತನು ನನಗೆ ಕಾಣಿಸಿಕೊಂಡು, ನಿನ್ನನ್ನು ಕರೆದುಕೊಂಡು ಬರಬೇಕೆಂದೂ ನಿನಗೆ ಅನ್ನಪಾನಗಳನ್ನು ಕೊಡಬೇಕೆಂದೂ ಯೆಹೋವನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಆದರೆ ದೇವರ ಮನುಷ್ಯನಿಗೆ ಪ್ರವಾದಿ ಹೇಳಿದ ಮಾತು ಸುಳ್ಳಾಗಿತ್ತು.
१८यावर तो वृध्द संदेष्टा म्हणाला, “मीही तुझ्याप्रमाणेच एक संदेष्टा आहे.” आणि पुढे त्याने खोटे सांगितले, “मला नुकतेच परमेश्वराच्या दूताचे दर्शन झाले. त्याने तुला माझ्या घरी घेऊन यायला आणि खाऊपिऊ घालायला मला सांगितले आहे.”
19 ೧೯ ದೇವರ ಮನುಷ್ಯನು ಆ ಪ್ರವಾದಿಯ ಮಾತನ್ನು ನಂಬಿ ಅವನ ಮನೆಗೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡನು.
१९तेव्हा तो देवाचा मनुष्य वृध्द संदेष्ट्याच्या घरी गेला आणि तेथे त्याने जेवणखाण केले.
20 ೨೦ ಅವರು ಊಟಮಾಡುತ್ತಿರುವಾಗ ದೇವರ ಮನುಷ್ಯನನ್ನು ತನ್ನ ಮನೆಗೆ ಕರೆದುಕೊಂಡು ಬಂದ ಪ್ರವಾದಿಗೆ ಯೆಹೋವನು ಒಂದು ವಾಕ್ಯವನ್ನು ದಯಪಾಲಿಸಿದನು.
२०ते मेजावर बसलेले त्यास परत आणणाऱ्या संदेष्ट्याशी परमेश्वर बोलला.
21 ೨೧ ಅವನು ಆ ಯೆಹೂದ ದೇಶದವನಾದ ಆ ದೇವರ ಮನುಷ್ಯನಿಗೆ, “ನಿನ್ನ ದೇವರಾದ ಯೆಹೋವನು ನಿನಗೆ ಈ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದು ಆಜ್ಞಾಪಿಸಿದರೂ ನೀನು ಆತನ ಆಜ್ಞೆಯನ್ನು ಮೀರಿ ಅವಿಧೇಯನಾಗಿ,
२१वृध्द संदेष्टा या यहूदातील देवाच्या मनुष्यास म्हणाला, “तू परमेश्वराच्या आज्ञेचे उल्लंघन केले आहेस, असे परमेश्वर म्हणाला, तू त्याच्या आज्ञेप्रमाणे वागला नाहीस.
22 ೨೨ ಅನ್ನಪಾನಗಳನ್ನು ತೆಗೆದುಕೊಳ್ಳುವುದಕ್ಕೋಸ್ಕರ ಹಿಂದಿರುಗಿ ಬಂದದ್ದರಿಂದ, ನಿನ್ನ ಶವವು ನಿನ್ನ ಕುಟುಂಬ ಸ್ಮಶಾನಭೂಮಿಯನ್ನು ಸೇರುವುದೇ ಇಲ್ಲವೆಂದು ಯೆಹೋವನು ಹೇಳುತ್ತಾನೆ” ಅಂದನು.
२२येथे काहीही खायला प्यायला परमेश्वराने तुला सक्त, मनाई केली होती. तरी तू इथे आलास आणि जेवलास. तेव्हा तुझे आता तुझ्या कुटुंबियाबरोबर दफन होणार नाही.”
23 ೨೩ ಅನ್ನಪಾನಗಳನ್ನು ತೆಗೆದುಕೊಂಡ ನಂತರ ಅವನು ತಾನು ಕರೆದುಕೊಂದು ಬಂದಿದ್ದ ಪ್ರವಾದಿಗೋಸ್ಕರ ಕತ್ತೆಗೆ ತಡಿಹಾಕಿಸಿದನು.
२३या देवाच्या माणासाचे खाणेपिणे झाल्यावर वृध्द संदेष्ट्याने त्याच्या गाढवावर खोगीर घातले आणि हा यहूदाचा संदेष्टा (देवाचा मनुष्य) निघाला.
24 ೨೪ ದೇವರ ಮನುಷ್ಯನು ಸ್ವಲ್ಪ ದೂರ ಹೋದ ನಂತರ ಒಂದು ಸಿಂಹವು ಅವನಿಗೆ ಎದುರಾಗಿ ಬಂದು ಅವನನ್ನು ಕೊಂದು ಹಾಕಿತು. ಅವನ ಶವವು ದಾರಿಯಲ್ಲಿಯೇ ಬಿದ್ದಿತ್ತು. ಕತ್ತೆಯೂ ಸಿಂಹವೂ ಶವದ ಹತ್ತಿರ ನಿಂತುಕೊಂಡಿದ್ದವು.
२४परतीच्या वाटेवर एका सिंहाने त्याच्यावर हल्ला चढवला आणि त्यास मारुन टाकले. देवाच्या मनुष्याचा मृतदेह रस्त्यातच पडला होता. गाढव आणि सिंह त्याच्या प्रेताशेजारीच होते.
25 ೨೫ ಹಾದುಹೋಗುವವರು ಶವವು ದಾರಿಯಲ್ಲಿ ಬಿದ್ದಿರುವುದನ್ನೂ, ಸಿಂಹವು ಅದರ ಬಳಿಯಲ್ಲಿ ನಿಂತಿರುವುದನ್ನೂ ಕಂಡು ವೃದ್ಧ ಪ್ರವಾದಿಯ ಊರಿಗೆ ಬಂದು ಅದನ್ನು ತಿಳಿಸಿದರು.
२५इतर वाटसंरुनी ते प्रेत आणि जवळ उभा राहिलेला सिंह हे पाहिले. तेव्हा ती माणसे गावात आली आणि त्यांनी आपल्या डोळ्यांनी पाहिलेली ही घटना वृध्द संदेष्ट्याला सांगितली.
26 ೨೬ ಅವನನ್ನು ಹಿಂದಕ್ಕೆ ಕರೆದುಕೊಂಡು ಹೋಗಿದ್ದ ಪ್ರವಾದಿಯು ಈ ಸುದ್ದಿಯನ್ನು ಕೇಳಿ ಅವರಿಗೆ, “ಆ ಶವವು ದೇವರ ಮನುಷ್ಯನದೇ ಆಗಿರಬೇಕು. ಅವನು ಯೆಹೋವನ ಆಜ್ಞೆಗೆ ಅವೀಧೆಯನಾದ್ದರಿಂದ ಯೆಹೋವನು ಅವನ ವಿಷಯದಲ್ಲಿ ತಾನು ಹೇಳಿದ ಮಾತು ನೆರವೇರುವಂತೆ ಅವನನ್ನು ಸಿಂಹದ ಬಾಯಿಗೆ ಒಪ್ಪಿಸಿದನು. ಅದು ಅವನ ಮೇಲೆ ಹಾರಿ ಅವನನ್ನು ಕೊಂದುಬಿಟ್ಟಿತು” ಎಂದು ಹೇಳಿದನು.
२६वृध्द संदेष्ट्याने या देवाच्या मनुष्यास फसवून आणले होते. तेव्हा हे सर्व ऐकून तो म्हणाला, “असा हा देवाचा मनुष्य. त्याने परमेश्वराचे म्हणणे अवमानले नाही. तेव्हा परमेश्वरानेच त्यास मारायला सिंहाच्या स्वाधीन केले असावे. असे होणार हे परमेश्वराने सांगितले होते.”
27 ೨೭ ಅವನು, “ಕತ್ತೆಗೆ ತಡಿಹಾಕಿರಿ” ಎಂದು ಮಕ್ಕಳಿಗೆ ಆಜ್ಞಾಪಿಸಲು ಅವರು ತಡಿಹಾಕಿದರು.
२७मग हा संदेष्टा आपल्या मुलांना म्हणाला, “माझ्या गाढवावर खोगीर घाला.” मुलांनी त्याचे ऐकले.
28 ೨೮ ಅವನು ಹೋಗಿ ಶವವು ದಾರಿಯಲ್ಲಿ ಬಿದ್ದಿರುವುದನ್ನೂ ಕತ್ತೆಯೂ ಸಿಂಹವೂ ಅದರ ಬಳಿಯಲ್ಲಿ ನಿಂತಿರುವುದನ್ನು ಕಂಡನು. ಸಿಂಹವು ಶವವನ್ನು ತಿನ್ನಲಿಲ್ಲ, ಕತ್ತೆಯನ್ನು ಕೊಲ್ಲಲೂ ಇಲ್ಲ.
२८तेव्हा तो निघाला आणि वाटेवरच्या मृतदेहापाशी आला. सिंह आणि गाढव अजूनही तिथेच होते. सिंहाने आपल्या भक्ष्याला तोंड लावले नव्हते की गाढवाला इजा केली नव्हती.
29 ೨೯ ಪ್ರವಾದಿಯು ದೇವರ ಮನುಷ್ಯನ ಶವವನ್ನು ಹೂಣಿಟ್ಟು, ಗೋಳಾಡಬೇಕೆಂದು ಕತ್ತೆಯ ಮೇಲೆ ಹಾಕಿ, ತನ್ನ ಊರಿಗೆ ತೆಗೆದುಕೊಂಡು ಬಂದು,
२९वृध्द देवाच्या संदेष्ट्याने तो मृतदेह गाढवावर ठेवला आणि मृत्यूबद्दल शोक करायला आणि देहाचे दफन करायला तो गावात आणला.
30 ೩೦ ತನ್ನ ಸ್ಮಶಾನಭೂಮಿಯಲ್ಲಿ ಅದನ್ನು ಸಮಾಧಿಮಾಡಿದನು. ಅವರು, “ಅಯ್ಯೋ, ನನ್ನ ಸಹೋದರನೇ!” ಎಂದು ಗೋಳಾಡಿದರು.
३०त्याने तो आपल्याच घराण्याच्या दफनभूमीत पुरला. त्याच्यासाठी शोक प्रकट केला. तो म्हणाला, “माझ्या भावासारखाच तू मला होतास. मला फार वाईट वाटते.”
31 ೩೧ ಅನಂತರ ಅವನು ತನ್ನ ಮಕ್ಕಳಿಗೆ, “ನಾನು ಸತ್ತಾಗ ನನ್ನ ಶವವನ್ನು ದೇವರ ಮನುಷ್ಯನ ಶವವಿರುವಲ್ಲೇ ಸಮಾಧಿಮಾಡಿರಿ. ನನ್ನ ಎಲುಬುಗಳನ್ನು ಅವನ ಎಲುಬುಗಳು ಇರುವಲ್ಲೇ ಇಡಿರಿ.
३१मग त्याने त्याचे दफन केले. आपल्या मुलांना तो म्हणाला, “मी मरण पावल्यावर माझेही याच ठिकाणी दफन करा. माझ्या अस्थी देवाच्या मनुष्या शेजारीच विसावू द्या.
32 ೩೨ ಅವನು ಯೆಹೋವನ ಅಪ್ಪಣೆಯಿಂದ ಬೇತೇಲಿನ ಯಜ್ಞವೇದಿಗೆ ವಿರುದ್ಧವಾಗಿಯೂ ಸಮಾರ್ಯದ ಪಟ್ಟಣಗಳಲ್ಲಿರುವ ಎಲ್ಲಾ ಪೂಜಾಸ್ಥಳಗಳ ವಿರುದ್ಧವಾಗಿಯೂ, ಹೇಳಿದ ಮಾತುಗಳು ಸಂದೇಹವಿಲ್ಲದೆ ನೆರವೇರುವವು” ಎಂದನು.
३२परमेश्वराने त्याच्या तोंडून वदवलेले सर्व प्रत्यक्षात येईल. बेथेलची वेदी आणि शोमरोनच्या नगरातील उंच देवळांबद्दल त्याने सांगितलेले खरे होईल.”
33 ೩೩ ಇಷ್ಟಾದರೂ ಯಾರೊಬ್ಬಾಮನು ತನ್ನ ದುರ್ಮಾರ್ಗವನ್ನು ಬಿಡದೆ, ಪುನಃ ಕನಿಷ್ಠರಾದ ಜನರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ಪ್ರತಿಷ್ಠಿಸಿದನು.
३३राजा यराबामामध्ये काहीही फरक पडला नाही. तो दुष्कृत्ये करतच राहिला. वेगवेगळ्या कुळांमधल्या मनुष्यांची तो याजक म्हणून निवड करत राहिला. हे पूरोहित उंच देवळांमध्ये पूजा करत. ज्याला हवे त्यास याजक बनता येई.
34 ೩೪ ಈ ಕಾರಣದಿಂದ ಯಾರೊಬ್ಬಾಮನ ಕುಟುಂಬದವರು ಪಾಪಿಗಳಾಗಿ ಭೂಲೋಕದಿಂದ ತೆಗೆದುಹಾಕಲ್ಪಟ್ಟು ನಿರ್ನಾಮವಾದರು.
३४या गोष्टीने यराबामाच्या घराण्यास पाप लागले व त्यामुळे त्यांचा सर्वनाश झाला. आणि भूतलावरून ते नष्ट झाले.

< ಅರಸುಗಳು - ಪ್ರಥಮ ಭಾಗ 13 >