< ಅರಸುಗಳು - ಪ್ರಥಮ ಭಾಗ 2 >

1 ದಾವೀದನಿಗೆ ಮರಣದ ಸಮಯ ಸಮೀಪಿಸಿದಾಗ ಅವನು ತನ್ನ ಮಗನಾದ ಸೊಲೊಮೋನನಿಗೆ ಆಜ್ಞಾಪಿಸಿದ್ದೇನೆಂದರೆ,
दाऊदको मर्ने दिन नजिकिँदै गर्दा तिनले आफ्ना छोरा सोलोमनलाई यसो भने,
2 “ಭೂಲೋಕದವರೆಲ್ಲರೂ ಹೋಗುವ ದಾರಿಯನ್ನು ನಾನೂ ಈಗ ಹಿಡಿಯಬೇಕು. ನೀನು ಧೈರ್ಯದಿಂದಿರು. ನಿನ್ನ ಪೌರುಷವನ್ನು ತೋರಿಸು.
“संसारको रीतझैँ म पनि मर्दै छु । त्यसकारण, बलिया होऊ, र आफैलाई मर्द साबित गर ।
3 ನಿನ್ನ ದೇವರಾದ ಯೆಹೋವನ ಅಪ್ಪಣೆಗಳನ್ನು ಕೈಕೊಂಡು ಆತನ ಮಾರ್ಗದಲ್ಲಿ ನಡೆದುಕೋ. ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಆತನ ಆಜ್ಞಾನಿಯಮವಿಧಿ ನಿರ್ಣಯಗಳನ್ನು ಪಾಲಿಸು. ಹೀಗೆ ಮಾಡುವುದಾದರೆ ನೀನು ಯಾವುದನ್ನು ಮಾಡಿದರೂ ಎಲ್ಲಿಗೆ ಹೋದರೂ ಸಫಲನಾಗುವಿ.
मोशाको व्यवस्थामा लेखिएका परमप्रभु तिम्रा परमेश्वरका मार्गहरूमा हिँड्न, उहाँका विधिहरू, आज्ञाहरू, निर्णयहरू र उहाँका करारका आदेशहरू पालन गर्न होसियार होऊ ताकि तिमी जता गए पनि तिमीले गर्ने सबै काममा तिम्रो उन्नति होस्,
4 ಮತ್ತು ಯೆಹೋವನು, ‘ನಿನ್ನ ಸಂತಾನದವರು ನಂಬಿಗಸ್ತರಾಗಿ, ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನನಗೆ ನಡೆದುಕೊಳ್ಳುವುದರಲ್ಲಿ ಜಾಗರೂಕರಾಗಿರುವುದಾದರೆ, ಅವರು ತಪ್ಪದೆ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು’ ಎಂಬುದಾಗಿ ತಾನು ನನಗೆ ಮಾಡಿದ ವಾಗ್ದಾನವನ್ನು ಸ್ಥಿರಪಡಿಸುವನು,
ताकि परमप्रभुले मेरो बारेमा यसो भन्नुभएको वचन उहाँले पुरा गर्नुभएको होस्, 'तेरा छोराहरूले तिनीहरूका सारा ह्रदय र सारा प्राणले विश्वसनीयतासाथ मेरो सामु हिँड्न होसियारीपूर्वक आफ्ना आचरणको रेखदेख गरे भने इस्राएलको सिंहासनमा बस्ने उत्तराधिकारीको कहिल्यै अभाव हुने छैन ।'
5 ಚೆರೂಯಳ ಮಗನಾದ ಯೋವಾಬನು ನನಗೆ ಮಾಡಿರುವುದನ್ನು ಬಲ್ಲೆಯಲ್ಲಾ ಅವನು ಇಬ್ಬರು ಇಸ್ರಾಯೇಲರ ಸೇನಾಧಿಪತಿಗಳಾದ ನೇರನ ಮಗನಾದ ಅಬ್ನೇರನನ್ನೂ ಮತ್ತು ಯೆತೆರನ ಮಗನಾದ ಅಮಾಸನನ್ನೂ ಕೊಂದುಹಾಕಿದನು. ಯುದ್ಧ ಕಾಲದಲ್ಲಿಯೋ ಎಂಬಂತೆ ಸಮಾಧಾನ ಕಾಲದಲ್ಲಿಯೂ ರಕ್ತಸುರಿಸಿ ಅದನ್ನು ತನ್ನ ನಡುಕಟ್ಟಿಗೂ ಪಾದರಕ್ಷೆಗಳಿಗೂ ಹಚ್ಚಿಕೊಂಡನು.
सरूयाहका छोरा योआबले मलाई के गरे, र इस्राएलका दुई सेनापति अर्थात् नेरका छोरा अबनेर र येतेरका छोरा अमासलाई के गरे, सो तिमीलाई थाहै छ । तिनले दुवैलाई मारिदिए । तिनले शान्तिको समयमा युद्धको रगत बगाए, र युद्धको रगत आफ्नो कम्मरको पटुका र खुट्टाको जुत्तामा दले ।
6 ಅವನಿಗೇನು ಮಾಡಬೇಕೆಂಬುದು ಬುದ್ಧಿವಂತನಾದ ನಿನಗೆ ತಿಳಿದಿದೆಯಲ್ಲಾ. ಅವನ ಮುದಿ ತಲೆಯು ಸಮಾಧಿಯನ್ನು ಸಮಾಧಾನದಿಂದ ಸೇರದಂತೆ ಮಾಡು. (Sheol h7585)
तिमीले सिकेको बुद्धिले योआबसित व्यवहार गर्नू, तर तिनको फुलेको कपाल शान्तिसित चिहानमा जान नपाओस् । (Sheol h7585)
7 ಆದರೆ ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಮಕ್ಕಳಿಗೆ ಉಪಕಾರಮಾಡಬೇಕು. ಅವರು ನಿತ್ಯವೂ ನಿನ್ನ ಪಂಕ್ತಿಯಲ್ಲಿ ಊಟಮಾಡುತ್ತಿರಬೇಕು. ಯಾಕೆಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಬಳಿಯಿಂದ ಓಡಿಹೋದಾಗ ಅವರು ನನ್ನನ್ನು ಉಪಚರಿಸಿದರು.
तथापि, गिलादका बर्जिल्लैका छोराहरूमाथि दया देखाउनू, र तिम्रो टेबलमा खानेहरूमध्ये तिनीहरू पनि होऊन् किनकि म तिम्रो दाजु अब्शालोमबाट भाग्दा तिनीहरू मकहाँ आएका थिए ।
8 ಬೆನ್ಯಾಮೀನ್ಯನಾದ ಗೇರನ ಮಗನೂ ಬಹುರೀಮ್ ಊರಿನವನೂ ಆದ ಶಿಮ್ಮೀಯು ನಿನ್ನ ಬಳಿಯಲ್ಲಿರುತ್ತಾನಲ್ಲಾ. ನಾನು ಮಹನಯಿಮಿಗೆ ಹೋದಾಗ ಅವನು ನನ್ನನ್ನು ಬಹು ಕ್ರೂರವಾಗಿ ಶಪಿಸಿದನು. ಅವನು ನನ್ನನ್ನು ಎದುರುಗೊಳ್ಳುವುದಕ್ಕೆ ಯೊರ್ದನಿಗೆ ಬಂದಾಗ ನಾನು ಅವನಿಗೆ, ‘ನಿನ್ನನ್ನು ಕತ್ತಿಯಿಂದ ಕೊಲ್ಲುವುದಿಲ್ಲ’ ಎಂದು ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದೆನು.
हेर, बहूरीमको बेन्यामीनी गेराको छोरो शिमी तिमीसितै छ, जसले म महनोममा जाँदा त्यस दिन मलाई बेसरी सरापेको थियो । शिमी यर्दनमा मलाई भेट गर्न आयो, र त्यसले परमप्रभुको नाउँमा शपथ खाँदै भन्यो, 'म तिमीलाई तरवारले मार्ने छैनँ ।'
9 ನೀನಾದರೋ ಅವನನ್ನು ಶಿಕ್ಷಿಸದೆ ಬಿಡಬೇಡ. ನೀನು ಬುದ್ಧಿವಂತನಲ್ಲವೋ. ಅವನ ಮುದಿತಲೆಯು ರಕ್ತಮಯವಾಗಿ ಸಮಾಧಿ ಸೇರುವಂತೆ ಏನು ಮಾಡಬೇಕೆಂದು ನಿನಗೆ ಗೊತ್ತಿರುತ್ತದೆ” ಎಂದು ಹೇಳಿದನು. (Sheol h7585)
त्यसकारण, अब त्यसलाई दण्डविना नछोड्नू । तिमी बुद्धिमानी मानिस हौ, र त्यसलाई के गर्नुपर्छ भनी तिमीलाई थाहा छ । तिमीले त्यसको फुलेको कपाल रगतसँगै चिहानमा ल्याउनू ।” (Sheol h7585)
10 ೧೦ ಅನಂತರ ದಾವೀದನು ತನ್ನ ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು.
त्यसपछि दाऊद आफ्ना पुर्खाहरूसित सुते, र तिनलाई दाऊदको सहरमा गाडियो ।
11 ೧೧ ದಾವೀದನು ಇಸ್ರಾಯೇಲರನ್ನು ಆಳಿದ್ದು ಒಟ್ಟು ನಲ್ವತ್ತು ವರ್ಷ. ಹೇಗೆಂದರೆ, ಹೆಬ್ರೋನಿನಲ್ಲಿ ಏಳು ವರ್ಷ ಮತ್ತು ಯೆರೂಸಲೇಮಿನಲ್ಲಿ ಮೂವತ್ತಮೂರು ವರ್ಷ ಆಳ್ವಿಕೆ ಮಾಡಿದನು.
दाऊदले इस्राएलमाथि चालिस वर्षसम्म शासन गरे । तिनले हेब्रोनमा सात वर्षसम्म र यरूशलेममा तेत्तिस वर्षसम्म राज्य गरे ।
12 ೧೨ ಸೊಲೊಮೋನನು ತನ್ನ ತಂದೆಯಾದ ದಾವೀದನ ಸಿಂಹಾಸನವನ್ನು ಏರಿದನು. ಅವನ ರಾಜ್ಯವು ಬಹಳವಾಗಿ ಬಲಗೊಂಡಿತು.
तब सोलोमन आफ्ना पिता दाऊदको सिंहासनमा बसे, र तिनको शासन दृढतापूर्वक स्थापित थियो ।
13 ೧೩ ಹಗ್ಗೀತಳ ಮಗನಾದ ಅದೋನೀಯನು ಸೊಲೊಮೋನನ ತಾಯಿಯಾದ ಬತ್ಷೆಬೆಯ ದರ್ಶನಕ್ಕೆ ಬಂದನು. ಆಕೆಯು ಅವನನ್ನು, “ನೀನು ಸಮಾಧಾನದಿಂದ ಬಂದಿರುವೆಯೋ?” ಎಂದು ಕೇಳಿದಳು. ಅವನು, “ಹೌದು ಸಮಾಧಾನದಿಂದ ಬಂದೆನು” ಎಂದನು.
त्यसपछि हग्गीतका छोरा अदोनियाह सोलोमनकी आमा बतशेबाकहाँ आए । उनले भनिन्, “के तिमी शान्तिसितै आयौ?” तिनले जवाफ दिए, “हजुर, शान्तिसित आएँ ।”
14 ೧೪ ಆಮೇಲೆ ಅವನು, “ನಿನಗೊಂದು ಮಾತು ಹೇಳಬೇಕೆಂದು ಬಂದಿದ್ದೇನೆ” ಎಂದನು. ಅದಕ್ಕೆ ಆಕೆಯು, “ಹೇಳು” ಎಂದಳು.
तब तिनले भने, “मैले तपाईंलाई केही कुरो भन्नु छ ।” उनले भनिन्, “भन ।”
15 ೧೫ ಆಗ ಅವನು, “ಈ ರಾಜ್ಯವು ನನಗೆ ಬರಬೇಕಾಗಿತ್ತು. ನಾನೇ ಅರಸನಾಗುವೆನೆಂದು ಇಸ್ರಾಯೇಲರೆಲ್ಲರೂ ಎದುರುನೋಡುತ್ತಿದ್ದರೆಂಬುದು ನೀನು ಬಲ್ಲೆಯಷ್ಟೇ. ಆದರೆ ಅದು ತಪ್ಪಿ ನನ್ನ ತಮ್ಮನಿಗೆ ಹೋಯಿತು. ಅದು ಯೆಹೋವನಿಂದಲೇ ಅವನಿಗೆ ದೊರಕಿತು. ಅದಿರಲಿ, ಒಂದು ಬಿನ್ನಹವಿದೆ.
अदोनियाहले भने, “तपाईंलाई थाहै छ, कि राज्य मेरै थियो, र सारा इस्राएलले म नै राजा हुने छु भनी अपेक्षा गरेरहेका थिए । तर कुरो परिवर्तन भयो, र राज्य मेरो भाइलाई दिइयो किनकि परमप्रभुले यो तिनलाई दिनुभएको थियो ।
16 ೧೬ ಅದನ್ನು ತಿರಸ್ಕರಿಸಬೇಡ” ಎನ್ನಲು ಆಕೆಯು, “ಅದೇನು ಹೇಳು” ಎಂದಳು.
अब म तपाईंलाई एउटा बिन्ती चढाउँछु र त्यसलाई इन्कार नगरिदिनुहोस् ।” बतशेबाले तिनलाई भनिन्, “भन ।”
17 ೧೭ ಆಗ ಅವನು, “ದಯವಿಟ್ಟು ಶೂನೇಮ್ಯಳಾದ ಅಬೀಷಗ್ ಎಂಬಾಕೆಯನ್ನು ನನಗೆ ಹೆಂಡತಿಯನ್ನಾಗಿ ಕೊಡಬೇಕೆಂದು ಅರಸನಾದ ಸೊಲೊಮೋನನಿಗೆ ಹೇಳು. ಅವನು ನಿನ್ನ ಮಾತನ್ನು ತಳ್ಳಿಹಾಕುವುದಿಲ್ಲ” ಎಂದನು.
तिनले भने, “मैले शुनम्मी अबीशगलाई पत्नीको रूपमा लैजान पाऊँ भनी सोलोमन राजालाई बिन्ती गरिदिनुहोस् ।”
18 ೧೮ ಆಗ ಬತ್ಷೆಬೆಯು, “ಒಳ್ಳೇಯದು, ನಾನು ನಿನಗೋಸ್ಕರ ಅರಸನ ಸನ್ನಿಧಿಯಲ್ಲಿ ಅರಿಕೆಮಾಡುತ್ತೇನೆ” ಎಂದು ಹೇಳಿದಳು.
बतशेबाले भनिन्, “ठिक छ । म राजासित कुरा गर्ने छु ।”
19 ೧೯ ಆಕೆಯು ಅದೋನೀಯನಿಗಾಗಿ ಮಾತನಾಡುವುದಕ್ಕೋಸ್ಕರ ಅರಸನಾದ ಸೊಲೊಮೋನನ ಬಳಿಗೆ ಬರುತ್ತಿರುವಾಗ ಅರಸನು ಎದ್ದುಹೋಗಿ ಆಕೆಯನ್ನು ಎದುರುಗೊಂಡು ನಮಸ್ಕರಿಸಿದನು. ಅನಂತರ ತಾನು ಸಿಂಹಾಸನದ ಮೇಲೆ ಕುಳಿತು, ರಾಜ ಮಾತೆಗೋಸ್ಕರ ಒಂದು ಆಸನವನ್ನು ತರಿಸಲು ಆಕೆಯು ಅವನ ಬಲಗಡೆಯಲ್ಲಿ ಕುಳಿತುಕೊಂಡಳು.
त्यसकारण अदोनियाहको निम्ति कुरा गर्न बतशेबा राजा सोलोमनकहाँ गइन् । उनलाई भेट्न राजा खडा भए र तिनले उनलाई दण्डवत् गरे । त्यसपछि राजा आफ्नो सिंहासनमा बसे, र राजाकी आमाको निम्ति एउटा सिंहासन ल्याउने हुकुम गरे । उनी राजाको दाहिने हातपट्टि बसिन् ।
20 ೨೦ ಆಗ ಆಕೆಯು, “ಒಂದು ಸಣ್ಣ ಬಿನ್ನಹ ಉಂಟು. ಅದನ್ನು ತಿರಸ್ಕರಿಸಬೇಡ” ಎಂದು ಹೇಳಿದಳು. ಅರಸನು, “ನನ್ನ ತಾಯಿಯೇ ಏನು ಬೇಕು ಕೇಳು, ನಾನು ಆಗದು ಅನ್ನುವುದಿಲ್ಲ” ಎಂದನು.
त्यसपछि उनले भनिन्, “तिमीलाई एउटा सानो बिन्ती चढाउने इच्छा छ, किनकि तिमीले इन्कार गर्ने छैनौ ।” राजाले उनलाई भने, “भन्नुहोस् मेरी आमा । म त्यसलाई इन्कार गर्ने छैनँ ।”
21 ೨೧ ಆಗ ಆಕೆಯು, “ಶೂನೇಮ್ಯಳಾದ ಅಬೀಷಗ್ ಎಂಬಾಕೆಯು ನಿನ್ನ ಅಣ್ಣನಾದ ಅದೋನೀಯನಿಗೆ ಮದುವೆ ಮಾಡಿಕೊಡು” ಎಂದಳು.
उनले भनिन्, “तिम्रो दाजु अदोनियाहलाई शूनम्मी अबीशग पत्नीको रूपमा देऊ ।”
22 ೨೨ ಆಗ ಅರಸನಾದ ಸೊಲೊಮೋನನು ತನ್ನ ತಾಯಿಗೆ, “ಅದೋನೀಯನಿಗೋಸ್ಕರ ಶೂನೇಮ್ಯಳಾದ ಅಬೀಷಗ್ ಎಂಬಾಕೆಯನ್ನು ಮಾತ್ರ ಕೇಳುವುದೇಕೆ ಅವನಿಗೆ ರಾಜ್ಯವನ್ನೂ ಕೊಡಬೇಕೆಂದು ಕೇಳು. ಅವನು ನನ್ನ ಅಣ್ಣನಲ್ಲವೇ. ಯಾಜಕನಾದ ಎಬ್ಯಾತಾರನೂ ಚೆರೂಯಳ ಮಗನಾದ ಯೋವಾಬನೂ ಅವನ ಪಕ್ಷದವರಾಗಿದ್ದಾರೆ” ಎಂದು ಉತ್ತರಕೊಟ್ಟನು.
राजा सोलोमनले आफ्नी आमालाई भने, “तपाईं किन शूनम्मी अबीशगलाई अदोनियाहको लागि माग्नुहुन्छ? तपाईं तिनको लागि किन राज्य नै माग्नुहुन्न? किनकि तिनी मेरा दाजु हुन् । किन पुजारी अबियाथार र सरूयाहका छोरा योआबको निम्ति पनि माग्नुहुन्न?”
23 ೨೩ ಇದಲ್ಲದೆ ಅರಸನಾದ ಸೊಲೊಮೋನನು, “ಯೆಹೋವನಾಣೆ, ಅದೋನೀಯನ ಈ ಮಾತಿಗೋಸ್ಕರ ನಾನು ಅವನನ್ನು ಮರಣಕ್ಕೆ ಪಾತ್ರನೆಂದು ಎಣಿಸದಿದ್ದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ.
तब राजा सोलोमनले परमप्रभुको नाउँमा यसो भनी शपथ खाए, “यो बिन्तिको निम्ति अदोनियाहले आफ्नो ज्यान गुमाएनन् भने परमेश्वरले मलाई त्योभन्दा कठोर व्यवहार गरून् ।
24 ೨೪ ನನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕುಳ್ಳಿರಿಸಿ, ಬಲಪಡಿಸಿ, ತಾನು ವಾಗ್ದಾನ ಮಾಡಿದಂತೆ ನನಗೆ ಮನೆಯನ್ನು ಕಟ್ಟಿದ ಯೆಹೋವನಾಣೆ, ಅದೋನೀಯನು ಈ ಹೊತ್ತೇ ಸಾಯಬೇಕು” ಎಂದು ಹೇಳಿದನು.
त्यसकारण मलाई स्थापित गर्नुहुने, मलाई मेरा पिता दाऊदको सिंहासनमा राख्नुहुने र आफ्नो प्रतिज्ञाअनुसार मेरो वंश खडा गर्नुहुने जीवित परमप्रभुको नाउँमा म भन्दछु, कि आज निश्चय नै अदोनियाह मारिने छन् ।”
25 ೨೫ ಆಮೇಲೆ ಅರಸನು ಯೆಹೋಯಾದಾವನ ಮಗನಾದ ಬೆನಾಯನಿಗೆ ಆಜ್ಞಾಪಿಸಿದ್ದರಿಂದ ಅವನು ಹೋಗಿ ಅದೋನೀಯನನ್ನು ಹೊಡೆದು ಕೊಂದುಹಾಕಿದನು.
त्यसैले राजा सोलोमनले यहोयादाका छोरा बनायाहलाई पठाए, र बनायाहले अदोनियाहलाई फेला पारी मारे ।
26 ೨೬ ತರುವಾಯ ಅರಸನು ಯಾಜಕನಾದ ಎಬ್ಯಾತಾರನಿಗೆ, “ನೀನು ಅಣತೋತಿನಲ್ಲಿರುವ ನಿನ್ನ ಮನೆಗೆ ಹೋಗು, ನೀನು ಮರಣಕ್ಕೆ ಪಾತ್ರನು. ಆದರೆ ನೀನು ಕರ್ತನಾದ ಯೆಹೋವನ ಮಂಜೂಷವನ್ನು ಹೊತ್ತುಕೊಂಡು ನನ್ನ ತಂದೆಯಾದ ದಾವೀದನೊಡನೆ ಸಂಚರಿಸುತ್ತಾ ಅವನ ಎಲ್ಲಾ ಕಷ್ಟಗಳಲ್ಲಿ ಪಾಲುಗಾರನಾಗಿದ್ದುದ್ದರಿಂದ ಈ ಹೊತ್ತು ನಿನ್ನನ್ನು ಕೊಲ್ಲಿಸುವುದಿಲ್ಲ” ಎಂದು ಹೇಳಿದನು.
तब राजाले पुजारी अबियाथारलाई भने, “तिम्रो आफ्नै जग्गा अनातोतमा जाऊ । तिमी मृत्युको लायक छौ, तर मेरा पिता दाऊदको सामु तिमीले परमप्रभुको सन्दुक बोकेकाले र मेरा पिताजस्तै हरेक मार्गमा तिमीले दुःख भोगेकाले तिमीलाई म यस बेला मार्दिनँ ।”
27 ೨೭ ಸೊಲೊಮೋನನು ಅವನನ್ನು ಯೆಹೋವನ ಯಾಜಕೋದ್ಯೋಗದಿಂದ ತೆಗೆದುಹಾಕಿದನು. ಹೀಗೆ ಯೆಹೋವನು ಶೀಲೋವಿನಲ್ಲಿದ್ದ ಏಲಿಯ ಮನೆಯನ್ನು ಕುರಿತು ಹೇಳಿದ ಮಾತು ನೆರವೇರಿತು.
त्यसैले सोलोमनले अबियाथारलाई पुजारीको पदबाट हटाइदिए । यसरी शीलोमा बस्ने एलीका घरानाको बारेमा परमप्रभुले भन्नुभएको वचन पुरा भयो ।
28 ೨೮ ಈ ವರ್ತಮಾನವು ಯೋವಾಬನಿಗೆ ಮುಟ್ಟಿದ ಕೂಡಲೆ ಅವನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದನು. ಅವನು ಅಬ್ಷಾಲೋಮನ ಪಕ್ಷವನ್ನು ಬೆಂಬಲಿಸದಿದ್ದರು ಅದೋನೀಯನ ಪಕ್ಷವನ್ನು ಬೆಂಬಲಿಸಿದ್ದನು.
यो खबर योआबकहाँ आयो किनकि योआबले अदोनियाहलाई समर्थन गरेका थिए, यद्यपि तिनले अब्शालोमलाई भने समर्थन गरेका थिएनन् । त्यसैले योआब परमप्रभुको पालभित्र भागे, र वेदीका सिङहरू पक्रेर बसे ।
29 ೨೯ ಯೋವಾಬನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಯ ಹತ್ತಿರ ಇದ್ದಾನೆ ಎಂಬ ಸುದ್ದಿಯು ಅರಸನಾದ ಸೊಲೊಮೋನನಿಗೆ ತಲುಪಿದಾಗ ಅವನು ಯೆಹೋಯಾದಾವನ ಮಗನಾದ ಬೆನಾಯನಿಗೆ, “ಹೋಗಿ ಅವನನ್ನು ಕೊಂದು ಹಾಕು” ಎಂದು ಆಜ್ಞಾಪಿಸಿದನು.
योआब भागेर गई वेदीको छेउमा बसेका छन् भनी सोलोमनलाई बताइयो । तब सोलोमनले यहोयादाका छोरा बनायाहलाई यसो भनी पठाए, “जाऊ र तिनलाई मार ।”
30 ೩೦ ಬೆನಾಯನು ಯೆಹೋವನ ಗುಡಾರಕ್ಕೆ ಹೋಗಿ ಯೋವಾಬನಿಗೆ, “ಅರಸನು ನಿನಗೆ ಹೊರಗೆ ಬರಬೇಕೆಂದು ಆಜ್ಞಾಪಿಸುತ್ತಾನೆ” ಎಂದು ಹೇಳಲು ಅವನು “ಬರುವುದಿಲ್ಲ, ನಾನು ಇಲ್ಲಿಯೇ ಸಾಯುತ್ತೇನೆ” ಎಂದು ಉತ್ತರಕೊಟ್ಟನು. ಬೆನಾಯನು ಅರಸನ ಬಳಿಗೆ ಹೋಗಿ ಯೋವಾಬನು ಹೇಳಿದ್ದನ್ನು ತಿಳಿಸಿದನು.
त्यसैले बनायाह परमप्रभुको पालभित्र प्रवेश गरी योआबलाई भने, “राजाले तिमीलाई बाहिर आउनू हुकुम गर्नुभएको छ ।” योआबले जवाफ दिए, “अँहँ, म यहीँ नै मर्ने छु ।” त्यसैले बनायाह राजाकहाँ फर्के र भने, “योआब वेदीमा नै मर्न चाहन्छन् ।”
31 ೩೧ ಅದಕ್ಕೆ ಅರಸನು ಅವನಿಗೆ, “ಅವನು ಹೇಳಿದಂತೆಯೇ ಮಾಡು. ಅವನನ್ನು ಕೊಂದು ಅವನ ಶವವನ್ನು ಸಮಾಧಿಮಾಡು. ಯೋವಾಬನು ನಿಷ್ಕಾರಣವಾಗಿ ರಕ್ತಸುರಿಸಿದ್ದರಿಂದ ನನಗೂ ನನ್ನ ತಂದೆಯ ಮನೆಯವರಿಗೂ ಹತ್ತಿರುವ ದೋಷವನ್ನು ಈ ಪ್ರಕಾರ ಪರಿಹರಿಸು.
राजाले तिनलाई भने, “तिनले भनेजस्तै गर । तिनलाई मारेर गाड । यसरी म र तिमीले मेरा पिताको घरानाबाट विनाकारण योआबले बगाएको रगतको दोष लैजाने छौ ।
32 ೩೨ ಯೆಹೋವನು ಈ ರಕ್ತಾಪರಾಧವನ್ನು ಅವನ ತಲೆ ಮೇಲೆಯೇ ಬರಮಾಡಲಿ. ಅವನು ನನ್ನ ತಂದೆಯಾದ ದಾವೀದನಿಗೆ ತಿಳಿಯದೇ ತನಗಿಂತ ಉತ್ತಮರೂ ಮತ್ತು ನೀತಿವಂತರೂ ಆದ ಇಬ್ಬರು ಮನುಷ್ಯರನ್ನು ಎಂದರೆ ಇಸ್ರಾಯೇಲ್ ಸೇನಾಧಿಪತಿಯೂ, ನೇರನ ಮಗನೂ ಆದ ಅಬ್ನೇರನನ್ನೂ, ಯೆಹೂದ ಸೇನಾಧಿಪತಿಯೂ ಯೆತೆರನ ಮಗನೂ ಆದ ಅಮಾಸನನ್ನೂ ಕತ್ತಿಯಿಂದ ಕೊಂದನಲ್ಲಾ.
तिनले बगाएको रगतको दोष तिनकै शिरमाथि परोस् किनकि तिनले मेरा पिता दाऊदको जानकारीविनै आफूभन्दा धर्मी र उत्तम दुई जना मानिस अर्थात् इस्राएलका सेनापति नेरका छोरा अबनेर र यहूदाका सेनापति येतेरका छोरा अमासलाई आक्रमण गरी तिनीहरूलाई तरवारले मारे ।
33 ೩೩ ಈ ಇಬ್ಬರನ್ನೂ ಕೊಂದ ಪಾಪವು ಯೋವಾಬನ ತಲೆಯ ಮೇಲೆಯೂ ಅವನ ಸಂತಾನದವರ ತಲೆಯ ಮೇಲೆಯೂ ಇರಲಿ. ಆದರೆ ದಾವೀದನಿಗೂ ಅವನ ಸಿಂಹಾಸನ, ಕುಟುಂಬ, ಸಂತಾನದವರಿಗೂ ಯೆಹೋವನಿಂದ ನಿತ್ಯ ಸಮಾಧಾನ ದೊರಕಲಿ” ಎಂದನು.
त्यसैले तिनीहरूको रगतको दोष सदाको निम्ति योआब र तिनका सन्तानहरूका शिरमाथि परोस् । तर दाऊद र तिनका सन्तानहरू अनि तिनको वंश र तिनको सिंहासनमा भने सदासर्वदा परमप्रभुबाट शान्ति आओस् ।”
34 ೩೪ ಯೆಹೋಯಾದಾವನ ಮಗನಾದ ಬೆನಾಯನು ಹೋಗಿ ಯೋವಾಬನನ್ನು ಕೊಂದನು. ಅವನ ಶವವನ್ನು ಅರಣ್ಯದಲ್ಲಿರುವ ಅವನ ಮನೆಯ ನಿವೇಶನದಲ್ಲಿ ಸಮಾಧಿಮಾಡಿದರು.
तब यहोयादाका छोरा बनायाह माथि उक्ले अनि योआबलाई प्रहार गरी मारे । तिनलाई उजाड-स्थानमा तिनको आफ्नै जग्गामा गाडियो ।
35 ೩೫ ಅರಸನು ಯೋವಾಬನಿಗೆ ಬದಲಾಗಿ ಯೆಹೋಯಾದಾವನ ಮಗನಾದ ಬೆನಾಯನನ್ನು ಸೈನ್ಯಾಧಿಪತಿಯನ್ನಾಗಿಯೂ ಮತ್ತು ಎಬ್ಯಾತಾರನಿಗೆ ಬದಲಾಗಿ ಚಾದೋಕನನ್ನು ಯಾಜಕನನ್ನಾಗಿಯೂ ನೇಮಿಸಿದನು.
राजाले तिनको ठाउँमा यहोयादाका छोरा बनायाहलाई सेनापतिमा र अबियाथारको ठाउँमा सादोकलाई पुजारीमा नियुक्त गरे ।
36 ೩೬ ತರುವಾಯ ಅರಸನು ಶಿಮ್ಮೀಯನ್ನು ಕರೆಸಿ ಅವನಿಗೆ, “ನೀನು ಒಂದು ಮನೆಯನ್ನು ಕಟ್ಟಿಸಿಕೊಂಡು ಯೆರೂಸಲೇಮಿನಲ್ಲಿ ವಾಸಮಾಡಬೇಕು. ಇದನ್ನು ಬಿಟ್ಟು ಎಲ್ಲಿಗೂ ಹೋಗಬಾರದು.
त्यसपछि राजाले शिमीलाई डाक्न पठाए र तिनलाई भने, “आफ्नो निम्ति यरूशलेममा घर बनाएर त्यहीँ बस, अनि त्यहाँबाट कतै नजाऊ ।
37 ೩೭ ನೀನು ಇದನ್ನು ಬಿಟ್ಟು ಕಿದ್ರೋನ್ ಹಳ್ಳದ ಆಚೆಗೆ ಹೋದೆಯಾದರೆ ಅದೇ ದಿನದಲ್ಲಿ ನಿನಗೆ ಮರಣಶಿಕ್ಷೆಯಾಗುವುದೆಂದು ತಿಳಿದುಕೋ ಮತ್ತು ಆ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರುವುದು” ಎಂದು ಹೇಳಿದನು.
किनकि जुन दिन तिमी किद्रोन उपत्यका पार गरेर जान्छौ, निश्चय नै तिमी मारिने छौ भनी जान । तिम्रो रगतको दोष तिम्रै शिरमाथि पर्ने छ ।”
38 ೩೮ ಅದಕ್ಕೆ ಶಿಮ್ಮೀಯು, “ಒಳ್ಳೇಯದು ನನ್ನ ಒಡೆಯನು ಅರಸನೂ ಆದ ನೀನು ಹೇಳಿದಂತೆಯೇ ಸೇವಕನಾದ ನಾನು ಮಾಡುವೆನು” ಎಂದು ಉತ್ತರಕೊಟ್ಟು ಬಹುದಿನಗಳ ವರೆಗೂ ಯೆರೂಸಲೇಮಿನಲ್ಲೇ ವಾಸಮಾಡುತ್ತಿದ್ದನು.
त्यसैले शिमीले राजालाई भने, “तपाईंले भन्नुभएको कुरो राम्रो छ । मेरा मालिक राजाले भन्नुभएझैँ हजुरको दासले गर्ने छ ।” त्यसैले धेरै दिनसम्म शिमी यरूशलेममा नै बसे ।
39 ೩೯ ಮೂರು ವರ್ಷಗಳಾದನಂತರ ಶಿಮ್ಮೀಯ ಇಬ್ಬರು ದಾಸರು ಗತ್ ಊರಿನ ಅರಸನೂ ಮಾಕನ ಮಗನೂ ಆದ ಆಕೀಷನ ಬಳಿಗೆ ಓಡಿಹೋದರು. ದಾಸರು ಗತ್ ಊರಿನಲ್ಲಿರುವುದು ಶಿಮ್ಮೀಗೆ ಗೊತ್ತಾಯಿತು.
तर तिन वर्षको अन्त्यमा शिमीका दुई जना दास गातका राजा माकाका छोरा आकीशकहाँ भागेर गए । त्यसैले तिनीहरूले शिमीलाई यसो भने, “हेर्नुहोस्, तपाईंका दासहरू गातमा छन् ।”
40 ೪೦ ಆಗ ಅವನು ಕತ್ತೆಗೆ ತಡಿಹಾಕಿಸಿ ತನ್ನ ದಾಸರನ್ನು ಹುಡುಕುವುದಕ್ಕಾಗಿ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಹೊರಟು ಹೋಗಿ ಅವರನ್ನು ಗತ್ ಊರಿನಿಂದ ಹಿಡಿದುಕೊಂಡು ಬಂದನು.
तब शिमी उठे अनि गधामा जीनकाठी कसेर आफ्ना दासहरूको खोजीमा आकीशकहाँ गए र गातबाट आफ्ना दासहरूलाई फर्काएर ल्याए ।
41 ೪೧ ಶಿಮ್ಮೀಯು ಯೆರೂಸಲೇಮಿನಿಂದ ಗತ್ ಊರಿಗೆ ಬಂದ ಸಂಗತಿಯು ಅರಸನಾದ ಸೊಲೊಮೋನನಿಗೆ ತಿಳಿದುಬಂದಾಗ ಅವನು ಅವನನ್ನು ಕರೆಸಿ ಅವನಿಗೆ,
शिमी यरूशलेमबाट गातमा गएर फर्केका छन् भनी जब सोलोमनलाई सुनाइयो,
42 ೪೨ “ನೀನು ಈ ಊರನ್ನು ಬಿಟ್ಟು ಎಲ್ಲಿಗಾದರೂ ಹೋದರೆ ಅದೇ ದಿನದಲ್ಲಿ ನಿನಗೆ ಮರಣ ಶಿಕ್ಷೆಯಾಗುವುದು ಎಂದು ಖಂಡಿತವಾಗಿ ಹೇಳಿ ಯೆಹೋವನ ಹೆಸರಿನಲ್ಲಿ ನಿನ್ನಿಂದ ಪ್ರಮಾಣ ತೆಗೆದುಕೊಂಡೆನಲ್ಲವೋ? ಆಗ, ‘ನೀನು ಹೇಳುವುದು ಒಳ್ಳೇಯದು, ಹಾಗೆಯೇ ಮಾಡುತ್ತೇನೆ’ ಎಂದು ಹೇಳಿದಿಯಲ್ಲಾ.
तब राजाले शिमीलाई डाक्न पठाए र तिनलाई भने, “'जुन दिन तिमी यहाँबाट अन्त कतै जान्छौ, तिमी निश्चय नै मारिने छौ भनी जान' भनी के मैले परप्रभुको नाउँमा शपथ खाई तिमीलाई गवाही दिएको थिइनँ र? तब तिमीले मलाई भन्यौ, 'हजुरले भन्नुभएको कुरा राम्रो छ ।'
43 ೪೩ ಹಾಗಾದರೆ ಯೆಹೋವನ ಹೆಸರಿನಲ್ಲಿ ನೀನು ಮಾಡಿದ ಪ್ರಮಾಣವನ್ನೂ ನಾನು ನಿನಗೆ ಕೊಟ್ಟ ಅಪ್ಪಣೆಯನ್ನೂ ನೀನು ಯಾಕೆ ಕೈಕೊಳ್ಳಲಿಲ್ಲ” ಎಂದನು.
तब तिमीले किन परमप्रभुसित खाएको सपथ र मेरो आज्ञा पालन गरेनौ?”
44 ೪೪ ಇದಲ್ಲದೆ ಅರಸನು ಶಿಮ್ಮೀಗೆ ನೀನು ನನ್ನ ತಂದೆಯಾದ ದಾವೀದನಿಗೆ ವಿರುದ್ಧವಾಗಿ ಮಾಡಿದ ಪಾಪಕ್ಕೆ ನಿನ್ನ ಮನವೇ ಸಾಕ್ಷಿ. ಯೆಹೋವನು ಅದರ ಫಲವನ್ನು ನಿನ್ನ ತಲೆಯ ಮೇಲೆ ಬರಮಾಡುವನು.
राजाले शिमीलाई यसो पनि भने, “तिमीले मेरा पितालाई गरेका सबै दुष्टता तिमीलाई आफ्नो मनमा थाहा छ । त्यसकारण परमप्रभुले तिम्रो दुष्टता तिम्रै शिरमाथि फर्काइदिनुहुने छ ।
45 ೪೫ ಆದರೆ ಸೊಲೊಮೋನ ರಾಜನಿಗೆ ಆಶೀರ್ವಾದವಾಗಲಿ. ದಾವೀದನ ಸಿಂಹಾಸನವು ಯೆಹೋವನ ಸನ್ನಿಧಿಯಲ್ಲಿ ಸದಾಕಾಲವು ಸ್ಥಿರವಾಗಿಯೂ ಇರಲಿ ಎಂದು ಹೇಳಿ,
तर राजा सोलोमनचाहिँ आशिषित हुने छन्, र दाऊदको सिंहासन परमप्रभुको सामु सदाको निम्ति स्थापित हुने छ ।”
46 ೪೬ ಯೆಹೋಯಾದಾವನ ಮಗನಾದ ಬೆನಾಯನಿಗೆ, “ಅವನನ್ನು ಸಂಹರಿಸು” ಎಂದು ಆಜ್ಞಾಪಿಸಲು ಅವನು ಹೊರಗೆ ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಹೀಗೆ ಸೊಲೊಮೋನನ ರಾಜ್ಯಾಧಿಕಾರವು ಸುಭದ್ರವಾಯಿತು.
तब राजाले यहोयादाका छोरा बनायाहलाई आज्ञा दिएअनुसार तिनले शिमीलाई मारे । यसरी सोलोमनको हातमा शासन बलियो गरी स्थापित भयो ।

< ಅರಸುಗಳು - ಪ್ರಥಮ ಭಾಗ 2 >