< ಅರಸುಗಳು - ಪ್ರಥಮ ಭಾಗ 22 >

1 ಮೂರು ವರ್ಷಗಳ ಕಾಲ ಇಸ್ರಾಯೇಲರಿಗೂ ಅರಾಮ್ಯರಿಗೂ ಯುದ್ಧ ನಡೆಯಲಿಲ್ಲ.
अराम र इस्राएलको बिचमा युद्ध नभई तिन वर्ष बित्यो ।
2 ಮೂರನೆಯ ವರ್ಷದಲ್ಲಿ ಯೆಹೂದ್ಯರ ಅರಸನಾದ ಯೆಹೋಷಾಫಾಟನು ಇಸ್ರಾಯೇಲರ ಅರಸನ ಬಳಿಗೆ ಬಂದನು.
तेस्रो वर्षमा यहूदाका राजा यहोशापात इस्राएलका राजाकहाँ गए ।
3 ಆಗ ಇಸ್ರಾಯೇಲರ ಅರಸನು ತನ್ನ ಸೇವಕರಿಗೆ, “ಗಿಲ್ಯಾದಿನ ರಾಮೋತ್ ಪಟ್ಟಣವು ನಮ್ಮದೆಂದು ನಿಮಗೆ ಗೊತ್ತಿದೆಯಲ್ಲಾ. ಅದನ್ನು ಇಷ್ಟರವರೆಗೂ ಅರಾಮ್ಯರ ಅರಸನಿಂದ ಹಿಂತಿರುಗಿ ತೆಗೆದುಕೊಳ್ಳದೆ ಸುಮ್ಮನೆ ಕುಳಿತುಕೊಂಡಿರುತ್ತೇವೆ” ಎಂದು ಹೇಳಿದನು.
इस्राएलका राजाले आफ्ना अधिकारीहरूलाई भनेका थिए, “के रामोत-गिलाद हाम्रै हो भनी तिमीहरूलाई थाहा छ? तर अरामका राजाका हातबाट यसलाई लिन हामीले केही पनि गरिरहेका छैनौँ ।”
4 ಅವನು ಯೆಹೋಷಾಫಾಟನಿಗೆ, “ಯುದ್ಧಮಾಡುವುದಕ್ಕಾಗಿ ನೀನು ನಮ್ಮ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಬರುತ್ತೀಯೋ?” ಎಂದು ಕೇಳಲು ಅವನು, “ನಾನೂ ನೀನೂ, ನನ್ನ ಜನರೂ ನಿನ್ನ ಜನರೂ, ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ ಅಲ್ಲವೇ?” ಎಂದು ಉತ್ತರಕೊಟ್ಟನು.
त्यसैले तिनले यहोशापातलाई भने, “के तपाईं युद्ध गर्नलाई मसितै रामोत-गिलादमा जानुहुन्छ?” यहोशापातले इस्राएलका राजालाई जवाफ दिए, “म तपाईंजस्तै हुँ, मेरा मानिस तपाईंका मानिसजस्तै हुन् र मेरा घोडाहरू तपाईंका घोडाहरू जस्तै हुन् ।”
5 ಯೆಹೋಷಾಫಾಟನು, “ಯೆಹೋವನ ಸನ್ನಿಧಿಯಲ್ಲಿ ಈಗ ವಿಚಾರಿಸು” ಎಂದು ಇಸ್ರಾಯೇಲರ ಅರಸನನ್ನು ಬೇಡಿಕೊಂಡನು.
यहोशापातले इस्राएलका राजालाई भने, “पहिले तपाईंले के गर्नुपर्छ भन्नाका लागि परमप्रभुको वचनबाट निर्देशन खोज्नुहोस् ।”
6 ಆಗ ಇಸ್ರಾಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಪ್ರವಾದಿಗಳನ್ನು ಕೂಡಿಸಿ ಅವರನ್ನು, “ನಾನು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕಾಗಿ ಹೋಗಬಹುದೋ ಹೋಗಬಾರದೋ?” ಎಂದು ಕೇಳಲು ಅವರು, “ಹೋಗಬಹುದು, ಕರ್ತನು ಅದನ್ನು ಅರಸನ ಕೈಗೆ ಒಪ್ಪಿಸುವನು” ಅಂದರು.
तब इस्राएलका राजाले चार सय अगमवक्तालाई जम्मा गरी तिनीहरूलाई भने, “म रामोत-गिलादमा युद्ध गर्न जाऊँ कि नजाऊँ? तिनीहरूले जवाफ दिए, “आक्रमण गर्नुहोस्, किनकि परमप्रभुले यो राजाका हातमा सुम्पिदिनुहुने छ ।”
7 ಆದರೆ ಯೆಹೋಷಾಫಾಟನು ಇಸ್ರಾಯೇಲ್ಯರ ಅರಸನನ್ನು, “ಯೆಹೋವನ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸಬಹುದಾದ ಬೇರೆ ಪ್ರವಾದಿಗಳು ಇರುವುದಿಲ್ಲವೋ?” ಎಂದು ಕೇಳಿದನು.
तर यहोशापातले भने, “के यहाँ परमप्रभुका अर्का कुनै अगमवक्ता छैनन् जसबाट हामीले सल्लाह लिन सक्छौँ?”
8 ಅದಕ್ಕೆ ಅವನು “ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ, ಅವನು ನನ್ನ ಕುರಿತು ಯಾವಾಗಲೂ ಶುಭವನ್ನಲ್ಲ ಅಶುಭವನ್ನೇ ಮುಂತಿಳಿಸುತ್ತಾನೆ” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು “ಅರಸನು ಹಾಗನ್ನದಿರಲಿ” ಅಂದನು.
इस्राएलका राजाले यहोशापातलाई भने, “एक जना मानिस छन् जसबाट हामीले मदतको लागि परमप्रभुबाट सल्लाह लिन सक्छौँ । तिनी यिम्लाका छोरा मीकाया हुन्, तर म तिनलाई घृणा गर्छु किनकि तिनले मेरो बारेमा कुनै असल कुरोको भविष्यवाणी गर्दैनन्, केवल खरावी मात्र बोल्छन् ।” तर यहोशापातले भने, “राजाले यस्तो भन्नुहुँदैन ।”
9 ಆಗ ಇಸ್ರಾಯೇಲ್ಯರ ಅರಸನು ಒಬ್ಬ ಕಂಚುಕಿಯನ್ನು ಕರೆದು ಅವನಿಗೆ, “ಹೋಗಿ ಇಮ್ಲನ ಮಗನಾದ ಮೀಕಾಯೆಹುವನ್ನು ಬೇಗನೆ ಕರೆದುಕೊಂಡು ಬಾ” ಎಂದು ಆಜ್ಞಾಪಿಸಿದನು.
तब इस्राएलका राजाले एक जना अधिकारीलाई बोलाई तिनलाई हुकुम गरे, “ठिक अहिले नै इम्लाका छोरा मीकायालाई ल्याउनू ।”
10 ೧೦ ಇಸ್ರಾಯೇಲರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯ ಪಟ್ಟಣದ ಹೆಬ್ಬಾಗಿಲಿನ ಹತ್ತಿರವಿರುವ ಬಯಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕುಳಿತುಕೊಂಡಿರಲು ಎಲ್ಲಾ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಮಾತನಾಡುತ್ತಾ ಇದ್ದರು.
इस्राएलका राजा आहाब र यहूदाका राजा यहोशापात राजकीय पोशाक पहिरेर सामरियाको मूल ढोकाको खुला ठाउँमा आ-आफ्नो सिंहासनमा बसिरहेका थिए, र सबै अगमवक्ताले तिनीहरूका सामु अगमवाणी बोल्दै थिए ।
11 ೧೧ ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬುವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ, ತಲೆಗೆ ಕಟ್ಟಿಕೊಂಡು ಬಂದು, “ಯೆಹೋವನು ಹೀಗೆನ್ನುತ್ತಾನೆ, ಅರಾಮ್ಯರು ನಿರ್ಮೂಲರಾಗುವವರೆಗೂ ಇವುಗಳಿಂದ ನೀನು ಅವರನ್ನು ಇರಿದು ಕೊಂದುಹಾಕುವಿ” ಎಂದನು.
केनानका छोरा सिदकियाहले चाहिँ फलामका सिङहरू बनाएका थिए । तिनले भने, “परमप्रभु यसो भन्नुहुन्छ, 'अरामीहरू नष्ट नभएसम्म तिमीहरूले तिनीहरूलाई यसैले दण्ड दिनू' ।”
12 ೧೨ ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ಹೇಳಿ, “ರಾಮೋತ್ ಗಿಲ್ಯಾದಿಗೆ ಹೋಗು ನೀನು ಸಫಲನಾಗಿ ಬರುವಿ. ಯೆಹೋವನು ಅದನ್ನು ಅರಸನ ಕೈಗೆ ಒಪ್ಪಿಸುವನು” ಅಂದರು.
तब सबै अगमवक्ताले यसो भनी अगमवाणी बोले, “रामोत-गिलादमाथि आक्रमण गरी विजयी हुनुहोस् किनकि परमप्रभुले यो राजाको हातमा सुम्पिदिनुभएको छ ।”
13 ೧೩ ಮೀಕಾಯೆಹುವನ್ನು ಕರೆಯುವುದಕ್ಕೆ ಹೋದ ದೂತನು ಅವನಿಗೆ, “ಎಲ್ಲಾ ಪ್ರವಾದಿಗಳೂ ಏಕ ಮನಸ್ಸಿನಿಂದ ಅರಸನಿಗೆ ಶುಭವನ್ನೇ ಮುಂತಿಳಿಸುತ್ತಾರೆ, ದಯವಿಟ್ಟು ನೀನೂ ಅವರಂತೆ ಶುಭವನ್ನೇ ಮುಂತಿಳಿಸು” ಎಂದು ಹೇಳಿದನು.
मीकायालाई बोलाउन गएका सन्देशवाहकले तिनलाई भने, “अब हेर्नुहोस्, अगमवक्ताहरूका वचनहरूले एउटै मुखले राजालाई असल कुरा भन्छन् । तपाईंको वचन तिनीहरूको जस्तै होस् र असल कुराहरू भन्नुहोस् ।”
14 ೧೪ ಅದಕ್ಕೆ ಮೀಕಾಯೆಹುವು, “ಯೆಹೋವನಾಣೆ, ಯೆಹೋವನು ಹೇಳುವುದನ್ನೇ ನುಡಿಯುತ್ತೇನೆ” ಎಂದು ಉತ್ತರಕೊಟ್ಟನು.
मीकायले जवाफ दिए, “परमप्रभुको नाउँमा शपथ खाएर म भन्दछु, कि परमप्रभुले मलाई जे भन्नुहुन्छ, म त्यही भन्ने छु ।”
15 ೧೫ ಅವನು ಅರಸನ ಬಳಿಗೆ ಬಂದಾಗ ಅರಸನು, “ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ, ಹೋಗಬಾರದೋ?” ಎಂದು ಕೇಳಲು ಅವನು, “ಹೋಗಬಹುದು, ಸಫಲನಾಗುವಿ, ಯೆಹೋವನು ಪಟ್ಟಣವನ್ನು ಅರಸನ ಕೈಗೆ ಒಪ್ಪಿಸುವನು” ಎಂದು ಹೇಳಿದನು.
जब तिनी राजाकहाँ आए राजाले तिनलाई भने, “मीकाया, हामी युद्धको लागि रामोत-गिलादमा जाऊँ कि नजाऊँ?” मीकायाले तिनलाई जवाफ दिए, “आक्रमण गर्नुहोस् र विजयी हुनुहोस् । परमप्रभुले यो तपाईंको हातमा सुम्पिदिनुहुने छ ।”
16 ೧೬ ಆಗ ಅರಸನು, “ಅವನಿಗೆ ಸತ್ಯವನ್ನೇ ತಿಳಿಸಬೇಕೆಂದು ಯೆಹೋವನ ಹೆಸರಿನಲ್ಲಿ ನಿನ್ನಿಂದ ಎಷ್ಟು ಸಾರಿ ಪ್ರಮಾಣ ಮಾಡಿಸಬೇಕು?” ಎಂದನು.
तब राजाले तिनलाई भने, “परमप्रभुको नाउँमा अरू कुरा नभनी साँचो कुरा मात्र भन्नू भनी म तिमीलाई कति पटक शपथ खान लगाऊँ?”
17 ೧೭ ಆಗ ಮೀಕಾಯೆಹುವು, “ಇಸ್ರಾಯೇಲರೆಲ್ಲರು ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದುರಿಹೋದದ್ದನ್ನು ಕಂಡೆನು. ಆಗ ಯೆಹೋವನು, ‘ಇವರು ಒಡೆಯನಿಲ್ಲದವರಾಗಿರುತ್ತಾರೆ, ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ’ ಎಂದನು” ಎಂಬುದಾಗಿ ಉತ್ತರಕೊಟ್ಟನು.
तब मीकायाले भने, “मैले गोठाला नभएका भेडाझैँ सारा इस्राएल पहाडहरूतिर तितर-बितर भएको देखेँ, र परमप्रभुले भन्नुभयो, 'तिनीहरूसित कुनै गोठालो छैन । हरेक मानिस शान्तिसित आफ्नै घरमा फर्कोस्' ।”
18 ೧೮ ಆಗ ಇಸ್ರಾಯೇಲರ ಅರಸನು ಯೆಹೋಷಾಫಾಟನಿಗೆ, “ಇವನು ನನಗೆ ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆಂದು ನಾನು ನಿನಗೆ ಹೇಳಲಿಲ್ಲವೋ?” ಎಂದನು.
त्यसैले इस्राएलका राजाले यहोशापातलाई भने, “तिनले मेरो बारेमा असल कुरा नभई केवल विपत्तिको बारेमा अगमवाणी बोल्छन् भनी के मैले तपाईंलाई भनेको होइन र?”
19 ೧೯ ಅದಕ್ಕೆ ಮೀಕಾಯೆಹುವು “ಅದಿರಲಿ, ಈಗ ಯೆಹೋವನ ವಾಕ್ಯವನ್ನು ಕೇಳು, ಯೆಹೋವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಳಲ್ಲಿ ನಿಂತಿದ್ದನ್ನೂ ಕಂಡೆನು.
तब मीकायाले भने, “त्यसकारण परमप्रभुको वचन सुन्नुहोस्: मैले परमप्रभुलाई उहाँको सिंहासनमा विराजमान हुनुभएको अनि उहाँको दाहिने र देब्रे हातपट्टि उहाँनेर सबै स्वर्गीय सेना उभिरहेका देखेँ ।
20 ೨೦ ಯೆಹೋವನು ತನ್ನ ಹತ್ತಿರ ನಿಂತವರನ್ನು, ‘ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ ಗಿಲ್ಯಾದಿನ ಯುದ್ಧಕ್ಕೆ ಹೋಗಲು ಯಾರು ಪ್ರೇರೇಪಿಸುವಿರಿ’ ಎಂದು ಕೇಳಿದಾಗ ಒಬ್ಬನು ಒಂದು ರೀತಿಯಾಗಿ, ಇನ್ನೊಬ್ಬನು ಇನ್ನೊಂದು ರೀತಿಯಾಗಿ ಉತ್ತರಕೊಟ್ಟರು.
परमप्रभुले भन्नुभयो, 'आहाब रामोत-गिलादमा उक्लेर गई त्यहाँ त्यसको पतन होस् भन्नाका लागि त्यसलाई कसले बहकाउने छ?’ एउटाले एउटा कुरा भन्यो र अर्कोचाहिँले अर्कै कुरा भन्यो ।
21 ೨೧ ಕೊನೆಯಲ್ಲಿ ಒಂದು ಆತ್ಮವು ಯೆಹೋವನ ಮುಂದೆ ಬಂದು ನಿಂತು ಅವನಿಗೆ, ‘ನಾನು ಹೋಗಿ ಅವರನ್ನು ಪ್ರೇರೇಪಿಸುವೆನು’ ಅಂದಿತು.
तब एउटा आत्मा अगाडि बढी त्यो परमप्रभुको सामु उभियो । त्यसले भन्यो, 'म तिनलाई उक्साउने छु ।' परमप्रभुले त्यसलाई भन्नुभयो, 'कसरी?’
22 ೨೨ ‘ಹೇಗೆ ಪ್ರೇರೇಪಿಸುವಿ?’ ಎಂದು ಯೆಹೋವನು ಕೇಳಲು ಅದು, ‘ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳಲ್ಲಿ ಸೇರುವೆನು’ ಎಂದು ಉತ್ತರಕೊಟ್ಟಿತು. ಆಗ ಆತನು ಅದಕ್ಕೆ, ‘ಹೋಗಿ ಅದರಂತೆ ಮಾಡು ಅವನನ್ನು ಪ್ರೇರೇಪಿಸಿ ಸಫಲವಾಗುವಿ’ ಅಂದನು.
आत्माले जवाफ दियो, 'म बाहिर जाने छु, र तिनका सबै अगमवक्ताका मुखमा झुट बोल्ने आत्मा बन्ने छु ।' परमप्रभुले भन्नुभयो, 'तैँल त्यसलाई बहकाउने छस्, र तँ सफल पनि हुने छस् । अब जा र त्यसै गर् ।'
23 ೨೩ ನೋಡು ಯೆಹೋವನು ನಿನ್ನ ವಿಷಯದಲ್ಲಿ ಕೇಡು ನುಡಿದು ನಿನ್ನ ಎಲ್ಲಾ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನು ಕಳುಹಿಸಿದ್ದಾನೆ” ಎಂದು ಹೇಳಿದನು.
त्यसैले अब हेर्नुहोस्, परमप्रभुले तपाईंका यी सबै अगमवक्ताका मुखमा झुट बोल्ने आत्मा हालिदिनुभएको छ, र परमप्रभुले तपाईंको लागि विपत्तिको घोषणा गर्नुभएको छ ।”
24 ೨೪ ಆಗ ಕೆನಾನನ ಮಗನಾದ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಹೋಗಿ ಅವನ ಕೆನ್ನೆಗೆ ಒಂದು ಏಟು ಹಾಕಿ, “ಯೆಹೋವನ ಆತ್ಮವು ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತನಾಡುವುದಕ್ಕೋಸ್ಕರ ಯಾವ ಮಾರ್ಗವಾಗಿ ಬಂದಿತು?” ಎನ್ನಲು
तब केनानका छोरा सिदकियाह माथि उक्लेर आई मीकायाको गालामा थप्पड हानेर भने, “तिमीसित बोल्न परमप्रभुका आत्मा मबाट कुनचाहिँ बाटो भएर जानुभयो त?”
25 ೨೫ ಮೀಕಾಯೆಹುವು, “ನೀನು ಅಡಗಿಕೊಳ್ಳುವುದಕ್ಕೆ ಒಳಗಿನ ಕೋಣೆಗೆ ಹೋಗುವ ದಿನದಲ್ಲಿ ಅದು ನಿನಗೆ ಗೊತ್ತಾಗುವುದು” ಎಂದು ಉತ್ತರಕೊಟ್ಟನು.
मीकायाले भने, “हेर, तिमी भित्र कोठामा लुक्न जाँदा त्यस दिन तिमी आफैले देख्ने छौ ।”
26 ೨೬ ಆಗ ಇಸ್ರಾಯೇಲಿನ ಅರಸನು ಸೇವಕರಿಗೆ, “ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪುರಾಧಿಕಾರಿಯಾದ ಆಮೋನನಿಗೂ, ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿ ಅವರಿಗೆ,
इस्राएलका राजाले आफ्ना अधिकारीलाई हुकुम दिए, “मीकायालाई समात्, अनि त्यसलाई सहरका शासक र मेरो छोरा योआशकहाँ लैजा ।”
27 ೨೭ ‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಅನ್ನುತ್ತಾನೆ’ ಎಂದು ಹೇಳಿರಿ” ಎಂಬುದಾಗಿ ಆಜ್ಞಾಪಿಸಿದನು.
त्यसलाई भन्, ‘राजा भन्नुहुन्छः यो मानिसलाई झ्यालखानामा हाल्, र म सुरक्षितसाथ नफर्केसम्म त्यसलाई थोरै रोटी र थोरै पानी मात्र खुवाउनू' ।”
28 ೨೮ ಮೀಕಾಯೆಹುವು ಅರಸನಿಗೆ, “ನೀನು ಸುರಕ್ಷಿತವಾಗಿ ಬರುವುದಾದರೆ ನಾನು ನುಡಿದದ್ದು ಯೆಹೋವನ ಮಾತಲ್ಲವೆಂದು ತಿಳಿದುಕೋ” ಎಂದು ಹೇಳಿ “ಎಲ್ಲಾ ಜನರೇ, ಇದನ್ನು ಕೇಳಿರಿ” ಎಂದು ಕೂಗಿದನು.
तब मीकायाले भने, “तपाईं सुरक्षितसाथ आउनुभयो भने परमप्रभुले मद्वारा बोल्नुभएको होइन ।” तब तिनले थपे, “हे सारा मानिस हो, यो कुरा सुन ।”
29 ೨೯ ಇಸ್ರಾಯೇಲರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಮೋತ್ ಗಿಲ್ಯಾದಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟರು.
त्यसैले इस्राएलका राजा आहाब र यहूदाका राजा यहोशापात रामोत-गिलादमा गए ।
30 ೩೦ ಇಸ್ರಾಯೇಲರ ಅರಸನೂ ಯೆಹೋಷಾಫಾಟನಿಗೆ, “ನಾನು ವೇಷಹಾಕಿಕೊಂಡು ರಣರಂಗಕ್ಕೆ ಬರುವೆನು. ನೀನಾದರೂ ನಿನ್ನ ರಾಜವಸ್ತ್ರಗಳನ್ನೇ ಧರಿಸಿಕೊಂಡು ಬಾ” ಎಂದು ಹೇಳಿ ವೇಷಹಾಕಿಕೊಂಡು ರಣರಂಗಕ್ಕೆ ಹೋದನು.
इस्राएलका राजाले यहोशापातलाई भने, “म भेष बद्लेर युद्धमा जाने छु, तर तपाईंले आफ्नो राजकीय पोशाक पहिरिनुहोस् ।” त्यसैले इस्राएलका राजाले भेष बद्ले, र तिनी युद्धमा गए ।
31 ೩೧ ಅರಾಮ್ಯರ ಅರಸನು ತನ್ನ ರಥಬಲದ ಮೂವತ್ತೆರಡು ಅಧಿಪತಿಗಳಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನು ಬಿಟ್ಟು ಇಸ್ರಾಯೇಲರ ಅರಸನಿಗೇ ಗುರಿಯಿಡಿರಿ” ಎಂದು ಆಜ್ಞಾಪಿಸಿದನು.
अरामका राजाले आफ्ना रथहरूका बत्तिस जना सेनापतिलाई यसो भनी आज्ञा दिएका थिए, “साना-ठुला जोसुकैलाई आक्रमण नगर्नू । बरु, इस्राएलका राजालाई मात्र आक्रमण गर्नू ।”
32 ೩೨ ಅವರು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲರ ಅರಸನೆಂದು ತಿಳಿದು ಅವನ ವಿರುದ್ಧ ಯುದ್ಧಮಾಡಿದರು.
जब रथहरूका सेनापतिहरूले यहोशापातलाई देखे तिनीहरूले भने, “निश्चय नै यिनी इस्राएलका राजा हुन् ।” तिनलाई आक्रमण गर्न तिनीहरू फर्कंदा यहोशापात चिच्च्याए ।
33 ೩೩ ಆಗ ಅವನು ಇಸ್ರಾಯೇಲ್ಯರ ಅರಸನಲ್ಲವೆಂಬುದು ರಥಬಲದ ಅಧಿಪತಿಗಳಿಗೆ ಗೊತ್ತಾದಾಗ ಅವರು ಅವನನ್ನು ಬಿಟ್ಟು ಹಿಂದಿರುಗಿದರು.
तिनी इस्राएलका राजा होइनन् रहेछ भनी जब रथहरूका सेनापतिहरूले देखे तिनीहरू तिनको पिछा गर्नबाट फर्के ।
34 ೩೪ ಅರಾಮ್ಯರ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಬಾಣವನ್ನೆಸೆಯಲು ಆ ಬಾಣವು ಇಸ್ರಾಯೇಲ್ಯರ ಅರಸನಿಗೆ ಅವನ ಕವಚದ ಸಂದಿಯಲ್ಲಿ ತಾಗಿತು. ಆಗ ಅವನು ತನ್ನ ಸಾರಥಿಗೆ, “ರಥವನ್ನು ಹಿಂತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ಕರೆದುಕೊಂಡು ಹೋಗು, ನನಗೆ ದೊಡ್ಡ ಗಾಯವಾಗಿದೆ” ಎಂದು ಹೇಳಿದನು.
तर एक जना सेनापतिले जथाभावी काँड हाने, र त्यस काँडले इस्राएलका राजाको कवचको जोर्नीमा लाग्यो । तब आहाबले आफ्नो सारथीलाई भने, “फर्की, र मलाई युद्धबाट बाहिर लैजा, किनकि मलाई बेसरी चोट लागेको छ ।”
35 ೩೫ ಆದರೂ ಆ ದಿನ ಯುದ್ಧವು ಬಹು ಘೋರವಾಗಿದ್ದುದರಿಂದ ಅರಸನು ಅರಾಮ್ಯರ ಎದುರಾಗಿ ತನ್ನ ರಥದಲ್ಲಿಯೇ ಆತುಕೊಂಡು ನಿಂತಿದ್ದು ಸಾಯಂಕಾಲವಾದಾಗ ಸತ್ತನು. ಗಾಯದಿಂದ ರಕ್ತವು ಸುರಿದು ಸುರಿದು ರಥದ ಅಡಿಯಲ್ಲಿ ನಿಂತಿತು.
त्यस दिन युद्ध झन् चर्कंदै गयो, र आफ्ना रथमा अडिएर राजाले अरामीहरूको सामना गरिरहे । साँझमा तिनी मरे । तिनको घाउबाट निस्केको रगतचाहिँ रथभित्रै बगिरहेको थियो ।
36 ೩೬ ಸೂರ್ಯಸ್ತಮಾನವಾದ ಕೂಡಲೆ “ಪ್ರತಿಯೊಬ್ಬನೂ ತನ್ನ ಪ್ರಾಂತ್ಯಕ್ಕೂ ಪಟ್ಟಣಕ್ಕೂ ಹೋಗಲಿ” ಎಂಬ ಕೂಗು ಇಸ್ರಾಯೇಲ್ ಸೈನ್ಯದಲ್ಲಿ ಹಬ್ಬಿಕೊಂಡಿತು
तब सूर्य अस्ताउँदै गर्दा सेनाका बिचमा एउटा यस्तो आवाज फैलियो, “हरेक मानिस आ-आफ्नो सहरमा फर्केर जाओस्, र हरेक मानिस आ-आफ्नो बस्तीमा फर्केर जाओस् ।”
37 ೩೭ ಅರಸನು ಸಾಯಲು ಅವನನ್ನು ಸಮಾರ್ಯಕ್ಕೆ ತಂದು ಅಲ್ಲಿ ಸಮಾಧಿ ಮಾಡಿದರು.
यसरी राजा आहाब मरे, र तिनलाई सामरियामा लगी त्यहीँ नै गाडियो ।
38 ೩೮ ದೇವದಾಸಿಯರು ಸ್ನಾನಮಾಡುವ ಸಮಾರ್ಯದ ಕೆರೆಯಲ್ಲಿ ಅವನ ರಥವನ್ನು ತೊಳೆಯುತ್ತಿದ್ದಾಗ ನಾಯಿಗಳು ಬಂದು ಅದರಲ್ಲಿದ್ದ ರಕ್ತವನ್ನು ನೆಕ್ಕಿದವು. ಹೀಗೆ ಯೆಹೋವನು ಹೇಳಿದ ಮಾತು ನೆರವೇರಿತು.
तिनीहरूले रथलाई सामरियाको तलाउमा धोए, र परमप्रभुको वचनले घोषणा गरेझैँ कुकुरहरूले तिनको रगत चाटे (यहीँ नै वेश्याहरू नुहाउने गर्थे) ।
39 ೩೯ ಅಹಾಬನ ಉಳಿದ ಚರಿತ್ರೆಯೂ ಅವನು ಕಟ್ಟಿಸಿದ ದಂತ ಮಂದಿರ ಪಟ್ಟಣಗಳು, ಇವುಗಳ ವಿವರವೂ ಮತ್ತು ಅವನ ಬೇರೆ ಎಲ್ಲಾ ಕೃತ್ಯಗಳೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
के आहाबले गरेका अरू कार्यहरू, तिनले बनाएको हस्ती-हाडको महलसाथै सबै सहरहरूको विषयमा इस्राएलका राजाहरूको इतिहासको पुस्तकमा लेखिएका छैनन् र?
40 ೪೦ ಅಹಾಬನು ಪೂರ್ವಿಕರ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಅಹಜ್ಯ ಎಂಬುವನು ಅರಸನಾದನು.
यसरी आहाब आफ्ना पित्रहरूसित सुते, र तिनको ठाउँमा तिनका छोरा अहज्याह राजा भए ।
41 ೪೧ ಇಸ್ರಾಯೇಲ್ಯರ ಅರಸನಾದ ಅಹಾಬನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಆಸನ ಮಗನಾದ ಯೆಹೋಷಾಫಾಟನು ಯೆಹೂದ್ಯರ ಅರಸನಾದನು.
इस्राएलका राजा आहाबको चौथो वर्षमा आसाका छोरा यहोशापातले यहूदामाथि शासन गर्न थाले ।
42 ೪೨ ಅವನು ಅರಸನಾದಾಗ ಮೂವತ್ತೈದು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಶಿಲ್ಹಿಯ ಮಗಳಾದ ಅಜೂಬಳೆಂಬಾಕೆಯು ಅವನ ತಾಯಿ
यहोशापातले शासन गर्न थाल्दा तिनी पैँतिस वर्षका थिए, र तिनले यरूशलेममा पच्चिस वर्ष राज्य गरे । तिनकी आमाको नाउँ अजूबा थियो, जो शिल्हीकी छोरी थिइन् ।
43 ೪೩ ಅವನು ತಪ್ಪದೆ ತನ್ನ ತಂದೆಯಾದ ಆಸನ ಮಾರ್ಗದಲ್ಲಿ ನಡೆಯುತ್ತಾ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದರೂ, ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ಆ ಸ್ಥಳಗಳಲ್ಲಿ ಯಜ್ಞಮಾಡುತ್ತಾ ಧೂಪಹಾಕುತ್ತಾ ಇದ್ದರು.
तिनी आफ्ना पिता आसाका मार्गमा हिँडे । तिनी तीबाट फर्केनन् । तिनले परमप्रभुको दृष्टिमा जे ठिक छ, त्यही गरे । तथापि डाँडाका थानहरू भने हटाइएनन् । मानिसहरूले डाँडाका थानहरूमा अझै पनि बलिदान चढाउँदै थिए, र धूप बाल्दै थिए ।
44 ೪೪ ಅವನು ಇಸ್ರಾಯೇಲ್ಯರ ಅರಸರೊಡನೆ ಸಮಾಧಾನದಿಂದಿದ್ದನು.
यहोशापात इस्राएलका राजासित शान्तिमा रहे ।
45 ೪೫ ಅವನ ಉಳಿದ ಚರಿತ್ರೆಯೂ ಅವನು ಯುದ್ಧಗಳಲ್ಲಿ ನಡಿಸಿದ ಶೂರಕೃತ್ಯಗಳ ವಿವರವೂ ಯೆಹೂದ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
के यहोशापातका अरू कार्यहरू, तिनले देखाएका शक्ति र कसरी तिनले युद्ध लडे भन्ने विषयमा यहूदाका राजाहरूको इतिहासको पुस्तकमा लेखिएका छैनन् र?
46 ೪೬ ಅವನು ತನ್ನ ತಂದೆಯಾದ ಅಸನ ಕಾಲದಲ್ಲಿ ತಪ್ಪಿಸಕೊಂಡ ದೇವದಾಸದಾಸಿಯರನ್ನು ದೇಶದಿಂದ ತೆಗೆದುಹಾಕಿದನು.
तिनका पिता आसाको समयसम्म बाँकी रहेका झुटो धर्मसम्बन्धी वेश्याहरूलाई तिनले देशबाट हटाए ।
47 ೪೭ ಆ ಕಾಲದಲ್ಲಿ ಎದೋಮ್ ದೇಶದಲ್ಲಿ ಅರಸನಿರಲಿಲ್ಲ. ಅವನ ಪ್ರತಿನಿಧಿಯೇ ಅದನ್ನು ಆಳುತ್ತಿದ್ದನು.
एदोममा कुनै राजा थिएन, तर त्यहाँ सहायकले शासन गर्थ्यो ।
48 ೪೮ ಇದಲ್ಲದೆ ಯೆಹೋಷಾಫಾಟನು ಓಫೀರಿನಿಂದ ಬಂಗಾರ ತರುವುದಕ್ಕಾಗಿ ತಾರ್ಷಿಷ್ ಹಡಗುಗಳನ್ನು ಮಾಡಿಸಿದನು.
यहोशापातले समुद्रमा आवात-जावत गर्ने जहाजहरू बनाए । ती सुनको लागि ओपीरमा जानुपर्थ्यो, तर एस्योन-गेबेरमा ध्वंश भएको कारण ती जान सकेनन् ।
49 ೪೯ ಆಗ ಅಹಾಬನ ಮಗನಾದ ಅಹಜ್ಯನು ಅವನನ್ನು, “ನಿನ್ನ ಜನರ ಜೊತೆಯಲ್ಲಿ ನನ್ನ ಜನರೂ ಸಮುದ್ರ ಪ್ರಯಾಣ ಮಾಡುವುದಕ್ಕೆ ಅಪ್ಪಣೆಯಾಗಲಿ” ಎಂದು ಬೇಡಿಕೊಂಡನು. ಅವನು ಅದಕ್ಕೆ ಒಪ್ಪಲಿಲ್ಲ. ಆದರೆ ಆ ಹಡಗುಗಳು ಎಚ್ಯೋನ್ಗೆಬೆರಿನಲ್ಲಿ ಒಡೆದುಹೋದುದರಿಂದ ಓಫೀರನ್ನು ಮುಟ್ಟಲಿಲ್ಲ.
तब आहाबका छोरा अहज्याहले यहोशापातलाई भने, “यी जहाजहरूमा मेरा अधिकारीहरूलाई तपाईंका अधिकारीहरूसँगै जान दिनुहोस् ।” तर यहोशापातले अनुमति दिएनन् ।
50 ೫೦ ಯೆಹೋಷಾಫಾಟನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅವನ ಪೂರ್ವಿಕನಾದ ದಾವೀದನ ಪಟ್ಟಣದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೆಹೋರಾಮನು ಅರಸನಾದನು.
यहोशापात आफ्ना पित्रहरूसित सुते, र तिनीहरूसितै आफ्ना पुर्खा दाऊदको सहरमा गाडिए । तिनको ठाउँमा तिनका छोरा यहोराम राजा भए ।
51 ೫೧ ಯೆಹೂದ್ಯರ ಅರಸನಾದ ಯೆಹೋಷಾಫಾಟನ ಆಳ್ವಿಕೆಯ ಹದಿನೇಳನೆಯ ವರ್ಷದಲ್ಲಿ ಅಹಾಬನ ಮಗನಾದ ಅಹಜ್ಯ ಎಂಬುವನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಎರಡು ವರ್ಷ ಆಳ್ವಿಕೆ ಮಾಡಿದನು.
यहूदाका राजा यहोशापातको सत्रौँ वर्षमा आहाबका छोरा अहज्याहले सामरियामा बसेर इस्राएलमाथि शासन गर्न थाले, र तिनले इस्राएलमाथि दुई वर्ष राज्य गरे ।
52 ೫೨ ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ ನೆಬಾಟನ ಮಗನಾದ ಯಾರೊಬ್ಬಾಮನ ಮತ್ತು ತನ್ನ ತಂದೆತಾಯಿಗಳ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
तिनले परमप्रभुको दृष्टिमा जे खराब छ, त्यही गरे, र तिनका बुबाआमाको चालमा हिँडे अनि इस्राएललाई पाप गर्न लगाउने नबातका छोरा यारोबामको मार्गमा हिँडे ।
53 ೫೩ ತನ್ನ ತಂದೆಯಂತೆ ಬಾಳ್ ದೇವರನ್ನು ಪೂಜಿಸಿ ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪ ಉಂಟುಮಾಡಿನು.
तिनले आफ्ना पिताले गरेझैँ बालको सेवा गरे, त्यसको पुजा गरे अनि इस्राएलका परमेश्वर परमप्रभुलाई रिस उठाए ।

< ಅರಸುಗಳು - ಪ್ರಥಮ ಭಾಗ 22 >