< ಸಮುವೇಲನು - ಪ್ರಥಮ ಭಾಗ 12 >

1 ಸಮುವೇಲನು ಎಲ್ಲಾ ಇಸ್ರಾಯೇಲ್ಯರಿಗೆ, “ನೋಡಿರಿ, ನಾನು ನಿಮ್ಮ ಬಿನ್ನಹಗಳನ್ನು ಆಲಿಸಿ ನಿಮಗೊಬ್ಬ ಅರಸನನ್ನು ನೇಮಿಸಿದೆನು.
तब समुएल ने सब इस्राईलियों से कहा, “देखो जो कुछ तुमने मुझ से कहा, मैंने तुम्हारी एक एक बात मानी और एक बादशाह तुम्हारे ऊपर ठहराया है।
2 ಇನ್ನು ಮುಂದೆ ಇವನೇ ನಿಮ್ಮ ಅರಸನಾಗಿರುವನು. ಚಿಕ್ಕಂದಿನಿಂದ ನಿಮ್ಮ ನಾಯಕನಾಗಿದ್ದ ನಾನು ಈಗ ತಲೆನರೆತ ಮುದುಕನಾಗಿದ್ದೇನೆ; ನನ್ನ ಮಕ್ಕಳು ನಿಮ್ಮೊಂದಿಗಿದ್ದಾರೆ.
और अब देखो यह बादशाह तुम्हारे आगे आगे चलता है, मैं तो बुड्ढा हूँ और मेरा सिर सफ़ेद हो गया और देखो मेरे बेटे तुम्हारे साथ हैं, मैं लड़कपन से आज तक तुम्हारे सामने ही चलता रहा हूँ।
3 ಇಲ್ಲಿ ನಿಂತುಕೊಂಡಿರುವ ನಾನು ಯಾರ ಎತ್ತನ್ನಾಗಲಿ, ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರೂ ವಂಚಿಸಿ, ಪೀಡಿಸಿದ್ದೂ, ಲಂಚ ತೆಗೆದುಕೊಂಡು ಕುರುಡನಂತೆ ತೀರ್ಪು ಮಾಡಿದ್ದೂ ಉಂಟೋ? ಇದ್ದರೆ ಯೆಹೋವನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ” ಅಂದನು.
मैं हाज़िर हूँ, इसलिए तुम ख़ुदावन्द और उसके मम्सूह के आगे मेरे मुँह पर बताओ, कि मैंने किसका बैल ले लिया या किसका गधा लिया? मैंने किसका हक़ मारा या किस पर ज़ुल्म किया, या किस के हाथ से मैंने रिश्वत ली, ताकि अंधा बनज़ाऊँ? बताओ और यह मैं तुमको वापस कर दूँगा।”
4 ಅವರು, “ನೀನು ನಮ್ಮನ್ನು ವಂಚಿಸಿ ಪೀಡಿಸಿದ್ದಾಗಲಿ, ನಮ್ಮಿಂದ ಏನಾದರೂ ಕಸಿದುಕೊಂಡದ್ದಾಗಲಿ ಇರುವುದಿಲ್ಲ” ಎಂದು ಉತ್ತರ ಕೊಟ್ಟರು.
उन्होंने जवाब दिया “तूने हमारा हक़ नहीं मारा और न हम पर ज़ुल्म किया, और न तूने किसी के हाथ से कुछ लिया।”
5 ಸಮುವೇಲನು ಪುನಃ “ನೀವು ನನ್ನಲ್ಲಿ ಇಂಥದನ್ನೇನೂ ಕಾಣಲಿಲ್ಲ ಎಂಬುದಕ್ಕೆ ಯೆಹೋವನೂ ಆತನ ಅಭಿಷಿಕ್ತನೂ ಸಾಕ್ಷಿಯಾಗಿದ್ದಾರೆ” ಎಂದನು. ಅವರು, “ಹೌದು, ಯೆಹೋವನೇ ಸಾಕ್ಷಿಯಾಗಿದ್ದಾನೆ” ಎಂದು ಹೇಳಿದರು.
तब उसने उनसे कहा, कि ख़ुदावन्द तुम्हारा गवाह, और उसका मम्सूह आज के दिन गवाह है, “कि मेरे पास तुम्हारा कुछ नहीं निकला।” उन्होंने कहा, “वह गवाह है।”
6 ಆಗ ಸಮುವೇಲನು, “ನಿಮ್ಮ ಪೂರ್ವಿಕರನ್ನು ಐಗುಪ್ತದಿಂದ ಕರೆತರುವುದಕ್ಕಾಗಿ ಮೋಶೆ ಹಾಗೂ ಆರೋನರನ್ನು ನೇಮಿಸಿದ ಯೆಹೋವನೇ ಇದಕ್ಕೆ ಸಾಕ್ಷಿ.
फिर समुएल लोगों से कहने लगा, वह ख़ुदावन्द ही है जिसने मूसा और हारून को मुक़र्रर किया, और तुम्हारे बाप दादा को मुल्क मिस्र से निकाल लाया।
7 ಇಲ್ಲಿ ನಿಂತುಕೊಂಡು ಕೇಳಿರಿ; ಯೆಹೋವನು ನಿಮಗೋಸ್ಕರವೂ, ನಿಮ್ಮ ಪೂರ್ವಿಕರಿಗೋಸ್ಕರವೂ ನಡೆಸಿದ ನೀತಿಕಾರ್ಯಗಳನ್ನು ಕುರಿತು ಆತನ ಎದುರಿನಲ್ಲಿ ನಿಮ್ಮ ನೆನಪಿಗೆ ತಂದು, ನಿಮ್ಮನ್ನು ಎಚ್ಚರಿಸುತ್ತೇನೆ.
इस लिए अब ठहरे रहो ताकि मैं ख़ुदावन्द के सामने उन सब नेकियों के बारे में जो ख़ुदावन्द ने तुम से और तुम्हारे बाप दादा से कीं बातें करूँ।
8 ಐಗುಪ್ತಕ್ಕೆ ಬಂದ ಯಾಕೋಬನ ವಂಶದವರಾದ ನಿಮ್ಮ ಹಿರಿಯರು ಯೆಹೋವನಿಗೆ ಮೊರೆಯಿಟ್ಟಾಗ, ಆತನು ಮೋಶೆ ಆರೋನರ ಮುಖಾಂತರ ಅವರನ್ನು ಐಗುಪ್ತದಿಂದ ಬಿಡಿಸಿ ಈ ದೇಶದಲ್ಲಿ ನೆಲೆಗೊಳಿಸಿದನು.
जब या'क़ूब मिस्र में गया, और तुम्हारे बाप दादा ने ख़ुदावन्द से फ़रियाद की तो ख़ुदावन्द ने मूसा और हारून को भेजा, जिन्होंने तुम्हारे बाप दादा को मिस्र से निकाल कर इस जगह बसाया।
9 ಅವರು ತಮ್ಮ ದೇವರಾದ ಯೆಹೋವನನ್ನು ಮರೆತುಬಿಡಲು ಆತನು ಅವರನ್ನು ಹಾಚೋರಿನ ಸೇನಾಧಿಪತಿಯಾದ ಸೀಸೆರನಿಗೂ, ಫಿಲಿಷ್ಟಿಯರಿಗೂ, ಮೋವಾಬ್‌ ರಾಜನಿಗೂ ಮಾರಿಬಿಟ್ಟನು. ಇವರು ಬಂದು ಅವರೊಡನೆ ಯುದ್ಧಮಾಡಿದರು.
लेकिन वह ख़ुदावन्द अपने ख़ुदा को भूल गए, तब उसने उनको हसूर की फ़ौज के सिपह सालार सीसरा के हाथ और फ़िलिस्तियों के हाथ और शाह — ए — मोआब के हाथ बेच डाला, और वह उनसे लड़े।
10 ೧೦ ಆಗ ಅವರು ಯೆಹೋವನಿಗೆ, ‘ನಾವು ಯೆಹೋವನಾದ ನಿನ್ನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸಿ ಪಾಪಮಾಡಿದ್ದೇವೆ. ಈಗ ಕೃಪೆಮಾಡಿ ನಮ್ಮನ್ನು ಶತ್ರುಗಳ ಕೈಯಿಂದ ಬಿಡಿಸು; ನಾವು ಇನ್ನು ಮುಂದೆ ನಿನ್ನನ್ನೇ ಸೇವಿಸುವೆವು’ ಎಂದು ಮೊರೆಯಿಟ್ಟರು.
फिर उन्होंने ख़ुदावन्द से फ़रियाद की और कहा कि हमने गुनाह किया, इसलिए कि हमने ख़ुदावन्द को छोड़ा, और बा'लीम और इस्तारात की इबादत की लेकिन अब तू हमको हमारे दुश्मनों के हाथ, से छुड़ा, तो हम तेरी इबादत करेंगे।
11 ೧೧ ಯೆಹೋವನು ಯೆರುಬ್ಬಾಳ್, ಬಾರಾಕ್, ಯೆಫ್ತಾಹ, ಸಮುವೇಲ್ ಇವರನ್ನು ಕಳುಹಿಸಿ ನಿಮ್ಮನ್ನು ಎಲ್ಲಾ ಶತ್ರುಗಳ ಕೈಯಿಂದ ಬಿಡಿಸಿ ಸುರಕ್ಷಿತವಾಗಿ ಜೀವಿಸುವಂತೆ ಮಾಡಿದನು.
इस लिए ख़ुदावन्द ने यरुब्बा'ल और बिदान और इफ़्ताह और समुएल को भेजा और तुम को तुम्हारे दुश्मनों के हाथ से जो तुम्हारी चारों तरफ़ थे, रिहाई दी और तुम चैन से रहने लगे।
12 ೧೨ ಅಮ್ಮೋನಿಯರ ಅರಸನಾದ ನಾಹಾಷನು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತಾನೆಂದು ನಿಮಗೆ ಗೊತ್ತಾಗಲು, ನಿಮ್ಮ ದೇವರಾದ ಯೆಹೋವನು ನಿಮ್ಮ ಅರಸನಾಗಿದ್ದರೂ ನೀವು, ‘ನಮಗೊಬ್ಬ ಅರಸನನ್ನು ನೇಮಿಸು’ ಎಂದು ನನ್ನನ್ನು ಬೇಡಿಕೊಂಡಿರಿ.
और जब तुमने देखा कि बनी अम्मून का बादशाह नाहस तुम पर चढ़ आया, तो तुमने मुझ से कहा कि हम पर कोई बादशाह हुकूमत करे हालाँकि ख़ुदावन्द तुम्हारा ख़ुदा तुम्हारा बादशाह था।
13 ೧೩ ಇಗೋ, ನೀವು ಅಪೇಕ್ಷಿಸಿ ಆರಿಸಿಕೊಂಡ ಅರಸನು ಇವನೇ; ಯೆಹೋವನು ಇವನನ್ನು ನಿಮ್ಮ ಮೇಲೆ ಅರಸನನ್ನಾಗಿ ನೇಮಿಸಿದ್ದಾನೆ.
इसलिए अब उस बादशाह को देखो जिसे तुमने चुन लिया, और जिसके लिए तुमने दरख़्वास्त की थी, देखो ख़ुदावन्द ने तुम पर बादशाह मुक़र्रर कर दिया है।
14 ೧೪ ನೀವೂ, ನಿಮ್ಮ ಅರಸನೂ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದುಕೊಂಡು, ಆತನಿಗೆ ವಿಧೇಯರಾಗಿ, ಆತನನ್ನು ಸೇವಿಸುತ್ತಾ, ತಪ್ಪದೆ ಆತನ ಮಾತನ್ನು ಪಾಲಿಸುವವರಾಗಿ, ಆತನನ್ನೇ ಹೊಂದಿಕೊಂಡಿರುವುದಾದರೆ ಎಷ್ಟೋ ಒಳ್ಳೆಯದು.
अगर तुम ख़ुदावन्द से डरते और उसकी इबादत करते और उस की बात मानते रहो, और ख़ुदावन्द के हुक्म से सरकशी न करो और तुम और वह बादशाह भी जो तुम पर हुकूमत करता है ख़ुदावन्द अपने ख़ुदा के पैरौ बने रहो तो भला;
15 ೧೫ ನೀವು ಯೆಹೋವನ ಮಾತನ್ನು ಕೇಳದೆಯೂ, ಆತನ ಆಜ್ಞೆಗಳನ್ನು ಕೈಕೊಳ್ಳದೆಯೂ ಹೋದರೆ, ಆತನ ಹಸ್ತವು ನಿಮ್ಮ ಹಿರಿಯರಿಗೆ ವಿರೋಧವಾಗಿದ್ದಂತೆ ನಿಮಗೂ ವಿರೋಧವಾಗಿಯೇ ಇರುವುದು.
लेकिन अगर तुम ख़ुदावन्द की बात न मानों बल्कि ख़ुदावन्द के हुक्म से सरकशी करो तो ख़ुदावन्द का हाथ तुम्हारे ख़िलाफ़ होगा, जैसे वह तुम्हारे बाप दादा के ख़िलाफ़ होता था।
16 ೧೬ ಈಗ ಯೆಹೋವನು ನಿಮ್ಮ ಕಣ್ಣುಮುಂದೆ ಮಾಡುವ ಮಹತ್ಕಾರ್ಯವನ್ನು ಹತ್ತಿರ ಬಂದು ನೋಡಿರಿ.
इसलिए अब तुम ठहरे रहो और इस बड़े काम को देखो जिसे ख़ुदावन्द तुम्हारी आँखों के सामने करेगा।
17 ೧೭ ನಾನು ಯೆಹೋವನಿಗೆ ಮೊರೆಯಿಡುವೆನು; ಈಗ ಗೋದಿಯ ಸುಗ್ಗಿಯಿದ್ದರೂ ಆತನು ಗುಡುಗನ್ನೂ, ಮಳೆಯನ್ನೂ ಕಳುಹಿಸುವುದರ ಮೂಲಕ ನೀವು ಅರಸನನ್ನು ಕೇಳಿಕೊಂಡದ್ದು ತನ್ನ ದೃಷ್ಟಿಯಲ್ಲಿ ತಪ್ಪು ಎಂಬುದನ್ನು ತೋರಿಸಿಕೊಡುವನು” ಎಂದು ಅವರಿಗೆ ಹೇಳಿ ಯೆಹೋವನಿಗೆ ಮೊರೆಯಿಟ್ಟನು.
क्या आज गेहूँ काटने का दिन नही, मैं ख़ुदावन्द से दरख़्वास्त करूँगा, कि बादल गरजे और पानी बरसे, और तुम जान लोगे, और देख भी लोगे कि तुमने ख़ुदावन्द के सामने अपने लिए, बादशाह माँगने से कितनी बड़ी शरारत की।
18 ೧೮ ಆಗ ಯೆಹೋವನು ಗುಡುಗು ಮಳೆಗಳನ್ನು ಕಳುಹಿಸಿದನು. ಎಲ್ಲಾ ಜನರು ಯೆಹೋವನಿಗೂ ಸಮುವೇಲನಿಗೂ ಬಹಳವಾಗಿ ಭಯಪಟ್ಟು
चुनाँचे समुएल ने ख़ुदावन्द से दरख़्वास्त की और ख़ुदावन्द की तरफ़ से उसी दिन बादल गरजा और पानी बरसा; तब सब लोग ख़ुदावन्द और समुएल से निहायत डर गए।
19 ೧೯ ಸಮುವೇಲನನ್ನು, “ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದ್ದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪ ಸೇರಿಕೊಂಡಿತು; ಆದ್ದರಿಂದ ನಿನ್ನ ಸೇವಕರಾದ ನಾವು ಸಾಯದಂತೆ ನಿನ್ನ ದೇವರಾದ ಯೆಹೋವನನ್ನು ಬೇಡಿಕೋ” ಎಂದು ವಿಜ್ಞಾಪಿಸಲು
और सब लोगों ने समुएल से कहा, कि अपने ख़ादिमों के लिए ख़ुदावन्द अपने ख़ुदा से दुआ कर कि हम मर न जाएँ क्यूँकि हमने अपने सब गुनाहों पर यह शरारत भी बढ़ा दी है कि अपने लिए एक बादशाह माँगा।
20 ೨೦ ಅವನು, “ಭಯಪಡಬೇಡಿರಿ; ಇಷ್ಟು ಪಾಪಮಾಡಿದ ನೀವು ಇನ್ನು ಮುಂದೆಯಾದರೂ ಅದನ್ನು ಬಿಟ್ಟು, ಯೆಹೋವನನ್ನು ಅಂಟಿಕೊಂಡು, ಪೂರ್ಣಮನಸ್ಸಿನಿಂದ ಆತನೊಬ್ಬನನ್ನೇ ಸೇವಿಸಿರಿ.
समुएल ने लोगों से कहा, “खौफ़ न करो, यह सब शरारत तो तुमने की है तो भी ख़ुदावन्द की पैरवी से किनारा कशी न करो बल्कि अपने सारे दिल से ख़ुदावन्द की इबादत करो।
21 ೨೧ ದೇವರಿಗೆ ಇಷ್ಟವಿಲ್ಲದ ವಿಷಯಗಳನ್ನು ಹಿಂಬಾಲಿಸಬೇಡಿರಿ; ಅವುಗಳಿಂದ ನಿಮಗೆ ಲಾಭವೂ, ರಕ್ಷಣೆಯೂ ಸಿಕ್ಕುವುದಿಲ್ಲ. ಅವು ವ್ಯರ್ಥವಾದವುಗಳೇ.
तुम किनारा कशी न करना, वरना बातिल चीज़ों की पैरवी करने लगोगे जो न फ़ायदा पहुंचा सकती न रिहाई दे सकती हैं, इसलिए कि वह सब बातिल हैं।
22 ೨೨ ಯೆಹೋವನು ದಯದಿಂದ ನಿಮ್ಮನ್ನು ಸ್ವಕೀಯಜನವನ್ನಾಗಿ ಆರಿಸಿಕೊಂಡ ಮೇಲೆ ಆತನು ತನ್ನ ಮಹೋನ್ನತ ನಾಮದ ನಿಮಿತ್ತ ನಿಮ್ಮನ್ನು ಕೈಬಿಡುವುದೇ ಇಲ್ಲ.
क्यूँकि ख़ुदावन्द अपने बड़े नाम के ज़रिए' अपने लोगों को नहीं छोड़ेगा, इस लिए कि ख़ुदावन्द को यही पसंद आया कि तुम को अपनी क़ौम बनाए।
23 ೨೩ ನಾನಾದರೋ ನಿಮಗೋಸ್ಕರವಾಗಿ ಯೆಹೋವನನ್ನು ಪ್ರಾರ್ಥಿಸುತ್ತಾ, ಆತನ ಉತ್ತಮ ನೀತಿಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದೇ ಇಲ್ಲ; ಬಿಟ್ಟರೆ ಆತನ ದೃಷ್ಟಿಯಲ್ಲಿ ಪಾಪಿಯಾಗಿರುವೆನು.
अब रहा मैं इसलिए ख़ुदा न करे कि तुम्हारे लिए दुआ करने से बाज़ आकर ख़ुदावन्द का गुनहगार ठहरुँ, बल्कि मैं वही रास्ता जो अच्छा और सीधा है, तुमको बताऊँगा।
24 ೨೪ ನೀವಾದರೋ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದು, ಆತನು ನಿಮಗೋಸ್ಕರವಾಗಿ ಮಾಡಿದ ಮಹತ್ಕಾರ್ಯಗಳನ್ನು ಸ್ಮರಿಸಿಕೊಂಡು, ಆತನನ್ನು ಸತ್ಯದಿಂದಲೂ, ಪೂರ್ಣಮನಸ್ಸಿನಿಂದಲೂ ಸೇವಿಸುತ್ತಾ ಬರಬೇಕು;
सिर्फ़ इतना हो कि तुम ख़ुदावन्द से डरो, और अपने सारे दिल और सच्चाई से उसकी इबादत करो क्यूँकि सोचो कि उसने तुम्हारे लिए कैसे बड़े काम किए हैं।
25 ೨೫ ನೀವು ದ್ರೋಹಿಗಳಾಗಿಯೇ ಇದ್ದರೆ ನೀವು ಮತ್ತು ನಿಮ್ಮ ಅರಸನು ನಾಶವಾಗುವಿರಿ” ಎಂದು ಹೇಳಿದನು.
लेकिन अगर तुम अब भी शरारत ही करते जाओ, तो तुम और तुम्हारा बादशाह दोनों के दोनों मिटा दिए जाओगे।”

< ಸಮುವೇಲನು - ಪ್ರಥಮ ಭಾಗ 12 >