< ಸಮುವೇಲನು - ಪ್ರಥಮ ಭಾಗ 20 >

1 ದಾವೀದನು ರಾಮದ ನಯೋತಿನಿಂದ ತಪ್ಪಿಸಿಕೊಂಡು ಯೋನಾತಾನನ ಬಳಿಗೆ ಬಂದು ಅವನಿಗೆ, “ನಿನ್ನ ತಂದೆಯು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನಲ್ಲ, ನಾನೇನು ಮಾಡಿದೆನು? ನನ್ನ ಅಪರಾಧವೇನು? ನಾನು ಅವನಿಗೆ ಮಾಡಿದ ದ್ರೋಹವು ಯಾವುದು?” ಎನ್ನಲು,
दावीद रामा येथल्या नायोथाहून पळून योनाथानाकडे येऊन म्हणाला, “मी काय केले आहे? माझा अपराध काय? तुझ्या वडिलाच्यापुढे माझे काय पाप झाले आहे की तो माझा जीव घ्यायला पाहत आहे?”
2 ಯೋನಾತಾನನು ಅವನಿಗೆ, “ಇದು ಆಗಲೇಬಾರದು, ನಿನಗೆ ಮರಣವಾಗಕೂಡದು. ನನ್ನ ತಂದೆಯು ಅಲ್ಪಕಾರ್ಯವನ್ನಾಗಲಿ, ಮಹಾಕಾರ್ಯವನ್ನಾಗಲಿ ನನಗೆ ತಿಳಿಸದೇ ಮಾಡುವುದಿಲ್ಲ. ಈ ಕಾರ್ಯವನ್ನು ನನಗೆ ಹೇಗೆ ಮರೆಮಾಡಲು ಸಾಧ್ಯ?” ಎಂದು ಹೇಳಿದನು.
तेव्हा त्याने त्यास म्हटले, “असे न होवो तू मरणार नाहीस; पाहा माझा बाप लहान मोठे काहीएक कार्य मला सांगितल्या वाचून करीत नाही. तर ही गोष्ट माझा बाप माझ्यापासून कशाला गुप्त ठेवील? असे होणार नाही.”
3 ಅದಕ್ಕೆ ದಾವೀದನು, “ನಿನ್ನ ಕಣ್ಣುಮುಂದೆ ನನಗೆ ದಯೆ ದೊರಕುತ್ತದೆಂಬುದನ್ನು ನಿನ್ನ ತಂದೆಯು ಬಲ್ಲನು. ಆದ್ದರಿಂದ ಇದನ್ನು ಯೋನಾತಾನನಿಗೆ ತಿಳಿಸಿದರೆ ಅವನಿಗೆ ದುಃಖವಾಗುವುದೆಂದು ಮರೆಮಾಡುತ್ತಾನೆ. ನಿನ್ನ ಜೀವದಾಣೆ, ಯೆಹೋವನ ಆಣೆ, ನನಗೂ ಮರಣಕ್ಕೂ ಒಂದು ಗೇಣು ಅಂತರವಿದೆ” ಎಂದು ಖಂಡಿತವಾಗಿ ಹೇಳಿದನು.
मग दावीद शपथ वाहून म्हणाला, “तुझी कृपादृष्टी माझ्यावर आहे हे तुझा बाप खचित जाणतो; म्हणून तो म्हणतो, हे योनाथानाला कळू नये कळले तर त्यास दुःख होईल; परंतु खरोखर परमेश्वर जिवंत आहे व तुझा जीव जिवंत आहे माझा जीव मरणापासून केवळ पावलांच्या अंतरावर आहे.”
4 ಆಗ ಯೋನಾತಾನನು ದಾವೀದನಿಗೆ, “ನಾನು ನಿನಗೋಸ್ಕರ ಮಾಡಬೇಕಾದದ್ದನ್ನು ಹೇಳು ಮಾಡುತ್ತೇನೆ” ಅಂದನು.
तेव्हा योनाथान दावीदाला म्हणाला “जे काही तुझा जीव इच्छितो ते मी तुझ्यासाठी करीन.”
5 ಅದಕ್ಕೆ ದಾವೀದನು, “ನಾಳೆ ಅಮಾವಾಸ್ಯೆ. ನಾನು ಅರಸನ ಪಂಕ್ತಿಯಲ್ಲಿ ಊಟಮಾಡಬೇಕಾಗಿರುವುದು. ನೀನು ಅಪ್ಪಣೆಕೊಟ್ಟರೆ ನಾನು ಈಗಲೇ ಹೋಗಿ ಮೂರನೆಯ ದಿನ ಸಾಯಂಕಾಲದವರೆಗೆ ಹೊಲದಲ್ಲಿ ಅಡಗಿಕೊಂಡಿರುವೆನು.
दावीद योनाथानाला म्हणाला, “पाहा उद्या चंद्रदर्शन आहे तेव्हा मला राजाबरोबर जेवण्यास बसणे भागच आहे; परंतु मला जाऊ दे परवा संध्याकाळपर्यंत मी रानात लपून राहीन.
6 ನಿನ್ನ ತಂದೆಯು ನನ್ನನ್ನು ಕುರಿತು ವಿಚಾರ ಮಾಡಿದರೆ, ನೀನು, ‘ದಾವೀದನು ತನ್ನ ಊರಾದ ಬೇತ್ಲೆಹೇಮಿಗೆ ಹೋಗಿ ಬರುವುದಕ್ಕೆ ಅಪ್ಪಣೆಯಾಗಬೇಕೆಂದು ನನ್ನನ್ನು ಬಹಳವಾಗಿ ಬೇಡಿಕೊಂಡನು. ಅವನ ಗೋತ್ರದವರು ಅಲ್ಲಿ ವಾರ್ಷಿಕ ಯಜ್ಞಮಾಡುತ್ತಾರೆ’ ಎಂದು ಹೇಳು.
जर तुझ्या वडिलाने माझी आठवण काढलीच तर सांग की, दावीदाने आपले गाव बेथलहेम येथे जायला माझ्याकडे आग्रह करून रजा मागितली कारण तेथे त्याच्या सर्व कुटुंबाचा वार्षिक यज्ञ आहे.
7 ಅವನು ಆಗಲಿ ಅಂದರೆ ನಿನ್ನ ಸೇವಕನಾದ ನಾನು ಸುರಕ್ಷಿತನಾಗಿರುವೆನು. ಸಿಟ್ಟುಮಾಡಿದರೆ ಅವನಿಂದ ನನಗೆ ಕೇಡು ಸಿದ್ಧವಾಗಿದೆ ಎಂದು ತಿಳಿದುಕೋ, ಸೇವಕನ ಮೇಲೆ ದಯೆಯಿರಲಿ.
जर तो, ठीक आहे असे म्हणेल तर तुझ्या दासास शांती प्राप्त होईल. परंतु जर त्यास राग आला, तर त्याने माझे वाईट करण्याचा निश्चय केला आहे असे जाण.
8 ನೀನು ಯೆಹೋವನ ಸನ್ನಿಧಿಯಲ್ಲಿ ನನ್ನೊಡನೆ ಒಡಂಬಡಿಕೆ ಮಾಡಿಕೊಂಡಿಯಲ್ಲಾ, ನಾನು ಅಪರಾಧಿಯಾಗಿದ್ದರೆ ನನ್ನನ್ನು ನಿನ್ನ ತಂದೆಗೆ ಒಪ್ಪಿಸುವುದೇಕೆ? ನೀನೇ ನನ್ನನ್ನು ಕೊಂದುಹಾಕು” ಎಂದು ಹೇಳಿದನು.
यास्तव तू आपल्या दासावर कृपा कर. कारण तू आपल्या दासास आपल्याबरोबर परमेश्वराच्या करारात आणले आहे; तथापि माझ्या ठायी अन्याय असला तर तूच मला जिवे मार; तू आपल्या बापाजवळ मला का आणावे?”
9 ಯೋನಾತಾನನು ಅವನಿಗೆ, “ಇದು ಆಗಲೇ ಬಾರದು, ನಿನಗೆ ನನ್ನ ತಂದೆಯಿಂದ ಕೇಡು ಸಿದ್ಧವಾಗಿದ್ದರೆ ಅದನ್ನು ನಿನಗೆ ತಿಳಿಸದಿರುತ್ತೇನೆಯೇ?” ಅಂದನು.
तेव्हा योनाथान म्हणाला, “तुला असे न होवो माझ्या वडिलाने तुझे वाईट करण्याचा निश्चय केला आहे असे मला खचित समजले तर मी ते तुला सांगणार नाही काय?”
10 ೧೦ ದಾವೀದನು, “ನಿನ್ನ ತಂದೆಯು ಬಿರುನುಡಿಯಿಂದ ಉತ್ತರಕೊಟ್ಟರೆ ಅದನ್ನು ಯಾರ ಮುಖಾಂತರವಾಗಿ ತಿಳಿಸುವಿ?” ಎಂದು ಅವನನ್ನು ಕೇಳಲು
१०तेव्हा दावीद योनाथानाला म्हणाला, “जर कदाचित तुझ्या वडिलाने तुला कठोर उत्तर दिले तर ते मला कोण सांगेल?”
11 ೧೧ ಯೋನಾತಾನನು ಅವನಿಗೆ, “ನಾವು ಹೊಲಕ್ಕೆ ಹೋಗೋಣ ಬಾ” ಎಂದು ಹೇಳಿದನು.
११योनाथान दावीदाला म्हणाला, “चल आपण रानात जाऊ.” मग ते दोघे बाहेर रानात गेले.
12 ೧೨ ಅವರಿಬ್ಬರೂ ಹೊಲಕ್ಕೆ ಹೋದ ಮೇಲೆ ಯೋನಾತಾನನು ದಾವೀದನಿಗೆ, “ಇಸ್ರಾಯೇಲರ ದೇವರಾದ ಯೆಹೋವನೇ ಸಾಕ್ಷಿ, ನಾನು ನಾಳೆ ಇಲ್ಲವೆ ನಾಡಿದ್ದು ನಿನ್ನ ವಿಷಯದಲ್ಲಿ ನನ್ನ ತಂದೆಯೊಡನೆ ಮಾತನಾಡಿ, ನಿನ್ನ ಮೇಲೆ ಅವನಿಗೆ ದಯೆ ಉಂಟೆಂದು ಗೊತ್ತಾದರೆ ಕೂಡಲೆ ನಿನಗೆ ತಿಳಿಸುವೆನು.
१२योनाथान दावीदाला म्हणाला, “इस्राएलाचा देव परमेश्वर साक्षी असो. उद्या किंवा परवा या वेळेस मी आपल्या बापाचे मन पाहीन, तेव्हा पाहा जर, दावीदाविषयी त्याचे मन चांगले असेल तर मी तुझ्याकडे निरोप पाठवून ते तुला कळवणार नाही काय?
13 ೧೩ ನನ್ನ ತಂದೆಯು ನಿನಗೆ ಕೇಡುಮಾಡುವ ಮನಸ್ಸುಳ್ಳವನಾಗಿದ್ದಾನೆಂದು ಗೊತ್ತಾದರೆ, ಅದನ್ನೂ ನಿನಗೆ ತಿಳಿಸಿ, ನೀನು ತಪ್ಪಿಸಿಕೊಂಡು ಸುರಕ್ಷಿತವಾಗುವ ಹಾಗೆ ನಿನ್ನನ್ನು ಕಳುಹಿಸಿಬಿಡುವೆನು. ಹಾಗೆ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ, ಆತನು ನನ್ನ ತಂದೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರಲಿ.
१३जर तुझे वाईट करावे असे माझ्या बापाला वाटले आणि जर मी ते तुला कळवले नाही, आणि तू शांतीने जावे म्हणून मी तुला रवाना केले नाही, तर परमेश्वर देव योनाथानाचे तसे व त्यापेक्षा अधिक करो. परमेश्वर जसा माझ्या बापा बरोबर होता तसा तो तुझ्या बरोबर असो.”
14 ೧೪ ನೀನು ಯೆಹೋವನನ್ನು ನೆನಸಿ ನನ್ನ ಜೀವಮಾನದಲ್ಲೆಲ್ಲಾ ನನಗೆ ಕೃಪೆತೋರಿಸು.
१४मी जिवंत आहे तोपर्यंत माझा घात होऊ नये म्हणून तू परमेश्वराची प्रेमदया माझ्यावर करावी असे केवळ नाही,
15 ೧೫ ನಾನು ಸತ್ತನಂತರ ನನ್ನ ಮನೆಯ ಮೇಲೆಯೂ ಶಾಶ್ವತವಾದ ನಿನ್ನ ದಯೆಯಿರಲಿ. ಯೆಹೋವನು ನಿನ್ನ ಎಲ್ಲಾ ಶತ್ರುಗಳನ್ನು ಭೂಮಿಯಿಂದ ತೆಗೆದು ಹಾಕಿದರೂ ಅದು ನನ್ನ ಮನೆಯಿಂದ ಅಗಲದಿರಲಿ.
१५तर तू आपली कृपा माझ्या घराण्यावरून कधीही काढू नको; परमेश्वर दावीदाचा प्रत्येक शत्रू भूमीच्या पाठीवरून छेदून टाकील तेव्हाही ती काढू नको;
16 ೧೬ ಅಗಲಿದರೆ ಯೆಹೋವನೇ ಶತ್ರುಗಳ ಕೈಯಿಂದ ದಾವೀದನಿಗೆ ಮುಯ್ಯಿ ತೀರಿಸಲಿ” ಎಂದು ಹೇಳಿ ಅವರ ಮನೆಯವರೊಡನೆ ಒಡಂಬಡಿಕೆ ಮಾಡಿಕೊಂಡು,
१६म्हणून योनाथानाने दावीदाच्या घराण्याशी करार करून म्हटले, “परमेश्वर दावीदाच्या शत्रूंच्या हातून याची झडती घेवो.”
17 ೧೭ ತಾನು ದಾವೀದನನ್ನು ಸ್ವಂತ ಪ್ರಾಣದಂತೆ ಪ್ರೀತಿಸುತ್ತಿದ್ದುದರಿಂದ ಆ ಪ್ರೀತಿಸಾಕ್ಷಿಯಾಗಿ ಅವನಿಂದ ಪ್ರಮಾಣಮಾಡಿಸಿದನು.
१७मग योनाथानाने दावीदाकडून त्याच्यावरच्या आपल्या प्रीती करता आणखी शपथ वाहवली कारण जशी आपल्या स्वत: च्या जिवावर तशी त्याने त्याच्यावर प्रीती केली.
18 ೧೮ ಯೋನಾತಾನನು ದಾವೀದನಿಗೆ, “ನಾಳೆ ಅಮಾವಾಸ್ಯೆ, ನಿನ್ನ ಸ್ಥಳವು ಬರಿದಾಗಿರುವುದನ್ನು ಅರಸನು ಕಂಡು ನಿನ್ನ ವಿಷಯವಾಗಿ ವಿಚಾರಿಸುವನು.
१८योनाथान त्यास म्हणाला, “उद्या चंद्रदर्शन आहे आणि तू नाहीस म्हणून कळेल कारण तुझे आसन रिकामे राहील.
19 ೧೯ ನೀನು ಮೂರನೆಯ ದಿನದಲ್ಲಿ ಮೊದಲು ಅಡಗಿಕೊಂಡಿದ್ದ ಸ್ಥಳಕ್ಕೆ ಬೇಗ ಬಂದು ಅಲ್ಲಿನ ಕಲ್ಲುಕುಪ್ಪೆಯ ಬಳಿಯಲ್ಲಿ ಕುಳಿತುಕೊಂಡಿರು.
१९तू तीन दिवस तू दूर राहील्या नंतर, ते कार्य घडले त्या दिवशी ज्या ठिकाणी तू लपला होतास तेथे लवकर ऊतरून, एजेल दगडाजवळ तू राहा.
20 ೨೦ ನಾನು ಗುರಿಯಿಟ್ಟವನೋ ಎಂಬಂತೆ ಅದರ ಕಡೆಗೆ ಮೂರು ಬಾಣಗಳನ್ನು ಎಸೆದು ಕೂಡಲೇ ಅವುಗಳನ್ನು
२०मी निशाणावर नेम धरत आहे असे दाखवून तीन बाण त्याच्या बाजूला मारीन.
21 ೨೧ ತರುವುದಕ್ಕಾಗಿ ನನ್ನ ಆಳುಗಳನ್ನು ಕಳುಹಿಸುವೆನು. ನಾನು ಅವನಿಗೆ, ‘ಬಾಣಗಳು ಈಚೆ ಬಿದ್ದಿರುತ್ತವೆ ಅವುಗಳನ್ನು ತೆಗೆದುಕೊಂಡು ಬಾ’ ಎಂದು ಹೇಳಿದರೆ ನೀನು ಬಾ ಯೆಹೋವನ ಆಣೆ ಯಾವ ಕೇಡು ಸಂಭವಿಸದೆ ಸುರಕ್ಷಿತನಾಗಿರುವಿ.
२१मग पाहा मी पोराला पाठवून म्हणेन जा बाणांचा शोध कर. जर मी पोराला म्हणालो, पाहा बाण तुझ्या अलीकडे आहेत ते घेऊन ये, तर तू ये; कारण तुझे कुशल आहे आणि तुझे वाईट होणार नाही; परमेश्वर जिवंत आहे.
22 ೨೨ ಆದರೆ, ‘ಬಾಣಗಳು ಆಚೆ ಬಿದ್ದಿರುತ್ತವೆ’ ಎಂದು ಹೇಳಿದರೆ ಹೊರಟುಹೋಗು, ನೀನು ಹೋಗುವುದೇ ಯೆಹೋವನ ಚಿತ್ತವಾಗಿದೆ.
२२परंतु जर मी पोराला म्हणेन, पाहा बाण तुझ्या पलीकडे आहेत; तर तू निघून जा कारण परमेश्वराने तुला पाठवून दिले आहे.
23 ೨೩ ನಮ್ಮಿಬ್ಬರ ಒಡಂಬಡಿಕೆಗೆ ಯೆಹೋವನೇ ನಿತ್ಯ ಸಾಕ್ಷಿಯಾಗಿರುವನು” ಅಂದನು.
२३आणि जी गोष्ट तू व मी बोलतो आहे तिच्याविषयी तर पाहा परमेश्वर तुझ्यामध्ये व माझ्यामध्ये निरंतर साक्षी आहे.”
24 ೨೪ ದಾವೀದನು ಹೊಲದಲ್ಲಿ ಅಡಗಿಕೊಂಡನು.
२४मग दावीद रानात लपून राहिला आणि चंद्रदर्शन आली तेव्हा राजा जेवायला बसला.
25 ೨೫ ಅರಸನು ಅಮಾವಾಸ್ಯೆ ದಿನ, ಪದ್ದತಿಯ ಪ್ರಕಾರ ಗೋಡೆಯ ಬಳಿಯಲ್ಲಿರುವ ತನ್ನ ಆಸನದ ಮೇಲೆ ಭೋಜನಕ್ಕೆ ಕುಳಿತುಕೊಂಡನು. ಅರಸನ ಎದುರಾಗಿ ಯೋನಾತಾನನೂ, ಅರಸನ ಪಕ್ಕದಲ್ಲಿ ಅಬ್ನೇರನೂ ಕುಳಿತುಕೊಂಡನು. ಸೌಲನು ದಾವೀದನ ಸ್ಥಳವು ಬರಿದಾಗಿರುವುದನ್ನು ಕಂಡರೂ,
२५राजा आपल्या आसनावर जसा इतर वेळी तसा भिंतीजवळ आसनावर बसला व योनाथान उठून उभा राहिला व अबनेर शौलाच्या बाजूला बसला परंतु दावीदाची जागा रिकामी होती.
26 ೨೬ ಆ ದಿನ ಅವನ ವಿಷಯ ಏನೂ ಹೇಳಲಿಲ್ಲ. ಅವನಿಗೆ ಏನಾದರೂ ಸಂಭವಿಸಿರಬೇಕು. ಅವನು ಹೊಲೆಯಾಗಿದ್ದಾನು, ತನ್ನನ್ನು ಇನ್ನು ಶುದ್ಧಪಡಿಸಿಕೊಳ್ಳದೆ ಇರಬಹುದು ಅಂದುಕೊಂಡನು.
२६तरी शौल त्या दिवशी काही बोलला नाही. कारण त्यास असे वाटले, त्यास काही झाले असेल, खचित तो शुद्ध नसेल.
27 ೨೭ ಮರುದಿನದಲ್ಲಿಯೂ, ಅಂದರೆ ತಿಂಗಳಿನ ಎರಡನೆಯ ದಿನದಲ್ಲಿಯೂ ದಾವೀದನ ಸ್ಥಾನ ಬರಿದಾಗಿದ್ದರಿಂದ ಸೌಲನು, “ಇಷಯನ ಮಗನು ನಿನ್ನೆಯೂ, ಈ ಹೊತ್ತೂ ಭೋಜನಕ್ಕೆ ಯಾಕೆ ಬರಲಿಲ್ಲ?” ಎಂದು ತನ್ನ ಮಗನಾದ ಯೋನಾತಾನನನ್ನು ಕೇಳಿದನು.
२७मग चंद्रदर्शनाच्या दुसऱ्या दिवशी असे झाले की, दावीदाची जागा रिकामी होती आणि शौलाने आपला मुलगा योनाथानाला म्हटले, “इशायाचा मुलगा काल व आजही जेवायला का आला नाही.”
28 ೨೮ ಅದಕ್ಕೆ ಯೋನಾತಾನನು, “ದಾವೀದನು ‘ಬೇತ್ಲೆಹೇಮಿನಲ್ಲಿ ನಮ್ಮ ಗೋತ್ರದವರು ಯಜ್ಞಮಾಡುತ್ತಾರೆ
२८तेव्हा योनाथानाने शौलाला उत्तर दिले की, “दावीदाने बेथलहेमास जायला आग्रहाने माझ्याकडे रजा मागितली.
29 ೨೯ ನನ್ನ ಅಣ್ಣನು ಅದಕ್ಕಾಗಿ ನನ್ನನ್ನು ಕರೆದಿದ್ದಾನೆ. ದಯವಿಟ್ಟು ನನಗೆ ಅಪ್ಪಣೆಕೊಡು ನಾನು ಹೋಗಿ ನನ್ನ ಅಣ್ಣಂದಿರನ್ನು ನೋಡಿ ಬರುತ್ತೇನೆ’ ಎಂದು ನನ್ನನ್ನು ಬಹಳವಾಗಿ ಬೇಡಿಕೊಂಡು ಹೋದನು. ಆದ್ದರಿಂದ ಅವನು ಅರಸನ ಪಂಕ್ತಿಗೆ ಬರಲಿಲ್ಲ” ಎಂದು ಉತ್ತರಕೊಟ್ಟನು.
२९तो म्हणाला, मी तुला विनंती करतो मला जाऊ दे कारण आमचे घराणे नगरात यज्ञ करणार आहे आणि मला माझ्या भावाने आज्ञा केली आहे म्हणून आता तुझी कृपादृष्टी माझ्यावर झाली तर मला माझ्या भावांना भेटायला जाऊ दे. यामुळे तो राजाच्या पंक्तीस आला नाही.”
30 ೩೦ ಆಗ ಸೌಲನು ಬಹಳವಾಗಿ ಕೋಪಗೊಂಡು ಯೋನಾತಾನನಿಗೆ, “ಎಲೈ ದುಷ್ಟ ದಾಸಿಯ ಮಗನೇ, ನೀನು ಇಷಯನ ಮಗನೊಡನೆ ಸ್ನೇಹದಿಂದಿರುವುದು ನನಗೆ ಗೊತ್ತಿಲ್ಲವೋ? ಇದರಿಂದ ನಿನಗೂ, ನಿನ್ನನ್ನು ಹೆತ್ತವಳಿಗೂ ಮಾನಭಂಗವಾಗುವುದು.
३०तेव्हा योनाथानावर शौलाचा राग पेटला तो त्यास म्हणाला, “अरे विपरीत फितूर खोर पत्नीच्या मुला तुझी फजिती व तुझ्या आईच्या नागवेपणाची फजिती होण्यास तू इशायाच्या मुलाशी जडलास हे मला ठाऊक नाही काय?
31 ೩೧ ಆ ಇಷಯನ ಮಗನು ಭೂಲೋಕದಲ್ಲಿರುವವರೆಗೆ ನಿನಗಾದರೂ, ನಿನ್ನ ರಾಜ್ಯಕ್ಕಾದರೂ ನೆಲೆಯಿಲ್ಲ. ಆದುದರಿಂದ ಅವನನ್ನು ಕರಿಸಿ ನನ್ನ ಬಳಿಗೆ ತೆಗೆದುಕೊಂಡು ಬಾ. ಅವನು ಸಾಯಬೇಕು” ಅಂದನು.
३१कारण जोपर्यंत इशायाचा मुलगा पृथ्वीवर आहे तोपर्यंत तू आणि तुझे राज्यही स्थापित होणार नाही. म्हणून आता माणसे पाठवून त्यास माझ्याकडे आण, कारण त्यास खचित मरण पावले पाहिजे.”
32 ೩೨ ಅದಕ್ಕೆ ಯೋನಾತಾನನು, “ಅವನು ಯಾಕೆ ಸಾಯಬೇಕು? ಅವನು ಏನು ಮಾಡಿದನು?” ಎಂದು ತನ್ನ ತಂದೆಯನ್ನು ಕೇಳಿದನು.
३२मग योनाथानाने आपला बाप शौल याला उत्तर देऊन म्हटले, “त्याने कशासाठी मरावे? त्याने काय केले आहे?”
33 ೩೩ ಕೂಡಲೆ ಸೌಲನು ಅವನನ್ನು ತಿವಿಯಬೇಕೆಂದು ಈಟಿಯನ್ನೆಸೆದನು. ತನ್ನ ತಂದೆಯು ದಾವೀದನನ್ನು ಕೊಲ್ಲುವುದಕ್ಕೆ ನಿಶ್ಚಯಿಸಿದ್ದಾನೆಂಬುದು ಯೋನಾತಾನಾನಿಗೆ ಗೊತ್ತಾಗಲು
३३तेव्हा शौलाने त्यास मारायला भाला फेकला यावरुन योनाथानाला कळले की, आपल्या वडिलाने दावीदाला जिवे मारण्याचा निश्चय केला आहे.
34 ೩೪ ಅವನು ಬಲು ಸಿಟ್ಟುಗೊಂಡು ಪಂಕ್ತಿಯಿಂದೆದ್ದು ಹೋದನು. ತನ್ನ ತಂದೆಯು ದಾವೀದನನ್ನು ಅಪಮಾನಪಡಿಸಿದ್ದರಿಂದ ಯೋನಾತಾನನಿಗೆ ಬಹಳ ದುಃಖವುಂಟಾಗಿ ಅವನು ಆ ದಿನ ಊಟಮಾಡಲೇ ಇಲ್ಲ.
३४मग योनाथान फार रागे भरून पक्तींतून उठला. महिन्याच्या दुसऱ्या दिवशी त्याने काही अन्न खाल्ले नाही कारण दावीदाविषयी त्यास वाईट वाटले कारण त्याच्या वडिलाने त्याचा अपमान केला.
35 ೩೫ ಅವನು ಮರುದಿನ ಬೆಳಿಗ್ಗೆ ಒಬ್ಬ ಹುಡುಗನನ್ನು ಕರೆದುಕೊಂಡು ದಾವೀದನನ್ನು ನೋಡುವುದಕ್ಕಾಗಿ ಹೊಲಕ್ಕೆ ಹೋಗಿ,
३५मग असे झाले की, योनाथान सकाळी दावीदाशी नेमेलेल्या वेळी आपल्याबरोबर एक लहान पोर घेऊन रानांत गेला.
36 ೩೬ ಹುಡುಗನಿಗೆ, “ಬೇಗ ಹೋಗಿ ನಾನು ಎಸೆದ ಬಾಣಗಳನ್ನು ಕೂಡಿಸಿಕೊಂಡು ಬಾ” ಎಂದು ಹೇಳಿದನು. ಆ ಹುಡುಗನು ಹೋಗುತ್ತಿರುವಾಗ ಯೋನಾತಾನನು ಬಾಣವನ್ನು ಅವನ ಆಚೆಗೆ ಎಸೆದನು.
३६तो आपल्या पोराला म्हणाला, धाव आता मी बाण मारतो त्याचा शोध कर. पोर धावत असता त्याने त्याच्या पलीकडे बाण मारला.
37 ೩೭ ಹುಡುಗನು ಬಾಣ ಬಿದ್ದ ಸ್ಥಳಕ್ಕೆ ಬಂದಾಗ ಯೋನಾತಾನನು ಅವನಿಗೆ, “ಬಾಣವು ನಿನ್ನ ಆಚೆ ಬಿದ್ದಿತಲ್ಲಾ
३७जो बाण योनाथानाने मारला होता त्याच्या ठिकाणावर पोर पोहचला तेव्हा योनाथान पोराच्या मागून हाक मारून बोलला, “बाण तुझ्या पलीकडे आहे की नाही?”
38 ೩೮ ಬೇಗ ಹೋಗು ನಿಲ್ಲಬೇಡ” ಎಂದು ಕೂಗಿ ಹೇಳಿದನು. ಹುಡುಗನು ಬಾಣಗಳನ್ನು ಕೂಡಿಸಿಕೊಂಡು ಯಜಮಾನನ ಬಳಿಗೆ ಬಂದನು.
३८योनाथानाने पोराच्या मागून हाक मारली की, “त्वरा कर, धाव, विलंब लावू नको.” तेव्हा योनाथानाचा पोर बाण गोळा करून धन्याकडे आला.
39 ೩೯ ಇದರ ರಹಸ್ಯವು ಯೋನಾತಾನ ದಾವೀದರಿಗೆ ತಿಳಿದಿತ್ತೇ ಹೊರತು ಆ ಹುಡುಗನಿಗೆ ಗೊತ್ತಿರಲಿಲ್ಲ.
३९मग पोराला काहीच ठाऊक नव्हते योनाथानाला व दावीदाला मात्र गोष्ट ठाऊक होती.
40 ೪೦ ಯೋನಾತಾನನು ತನ್ನ ಆಯುಧಗಳನ್ನು ಹುಡುಗನ ಕೈಯಲ್ಲಿ ಕೊಟ್ಟು ಅವನಿಗೆ, “ಅವುಗಳನ್ನು ಊರಿಗೆ ತೆಗೆದುಕೊಂಡು ಹೋಗು” ಎಂದು ಹೇಳಿದನು.
४०योनाथानाने आपली हत्यारे आपल्या पोराला दिली व त्यास म्हटले, “चल ही उचलून घेऊन नगरात जा.”
41 ೪೧ ಹುಡುಗನು ಹೋಗುತ್ತಲೇ ದಾವೀದನು ಕಲ್ಲುಕುಪ್ಪೆಯ ಬಳಿಯಿಂದ ಎದ್ದುಬಂದು ಮೂರು ಸಾರಿ ಸಾಷ್ಟಾಂಗವಾಗಿ ಯೋನಾತಾನನನ್ನು ವಂದಿಸಿದನು. ಅವರು ಒಬ್ಬರಿಗೊಬ್ಬರು ಮುದ್ದಿಟ್ಟುಕೊಂಡು ಅತ್ತರು. ದಾವೀದನು ಬಹಳವಾಗಿ ಅತ್ತನು.
४१पोर गेल्यावर दावीद दक्षिणेकडील एका ठिकाणातून उठून भूमीवर उपडा पडला व तीन वेळा नमला; तेव्हा ते एकमेकाचे चुंबन घेऊन एकमेकांसाठी रडले पण दावीद अधीक रडला.
42 ೪೨ ಅನಂತರ ಯೋನಾತಾನನು ದಾವೀದನಿಗೆ, “ಸಮಾಧಾನದಿಂದ ಹೋಗು. ನಾವು ಯೆಹೋವನ ಹೆಸರಿನಲ್ಲಿ ಆಣೆಯಿಟ್ಟು ಒಡಂಬಡಿಕೆಯನ್ನು ಮಾಡಿಕೊಂಡಿದ್ದೇವಲ್ಲಾ. ಆತನೇ ನನಗೂ ನಿನಗೂ, ನನ್ನ ಸಂತಾನಕ್ಕೂ ನಿನ್ನ ಸಂತಾನಕ್ಕೂ ಸದಾ ಸಾಕ್ಷಿಯಾಗಿರಲಿ” ಎಂದು ಹೇಳಿದನು. ತರುವಾಯ ದಾವೀದನು ಹೊರಟುಹೋದನು. ಯೋನಾತಾನನು ಊರೊಳಕ್ಕೆ ಹೋದನು.
४२योनाथान दावीदाला म्हणाला, “शांतीने जा; कारण आपण दोघांनी परमेश्वराच्या नावाने शपथ वाहून म्हटले आहे की माझ्यामध्ये व तुझ्यामध्ये आणि माझ्या संतानामध्ये व तुझ्या संतानामध्ये परमेश्वर साक्षी सर्वकाळ असो” मग तो उठून निघून गेला व योनाथान नगरात गेला.

< ಸಮುವೇಲನು - ಪ್ರಥಮ ಭಾಗ 20 >