< ಸಮುವೇಲನು - ಪ್ರಥಮ ಭಾಗ 22 >

1 ದಾವೀದನು ಅಕೀಷ ರಾಜನಿಂದ ತಪ್ಪಿಸಿಕೊಂಡು ಅದುಲ್ಲಾಮ್ ಎಂಬ ಗವಿಗೆ ಹೋದನು. ಈ ವರ್ತಮಾನವು ಅವನ ಅಣ್ಣಂದಿರಿಗೂ, ಬೇರೆ ಎಲ್ಲಾ ಸಂಬಂಧಿಕರಿಗೂ ಮುಟ್ಟಲಾಗಿ, ಅವರೂ ಬಂದು ಅವನನ್ನು ಸೇರಿಕೊಂಡರು.
मग दावीद तेथून निघून अदुल्लाम गुहेत पळून गेला त्याचे भाऊ व त्याच्या बापाचे घरचे सर्व हे ऐकून तेथे खाली त्याच्याकडे गेले.
2 ಇದಲ್ಲದೆ ಕುಗ್ಗಿದವರೂ, ಸಾಲಗಾರರೂ, ಮನನೊಂದವರೂ, ಆಗಿರುವ ಸರ್ವಜನರೂ ಬಂದು ಅವನನ್ನು ಆಶ್ರಯಿಸಿಕೊಳ್ಳಲು, ಅವನು ಸುಮಾರು ನಾನೂರು ಜನರಿಗೆ ನಾಯಕನಾದನು.
कोणी अडचणीत पडलेले कोणी कर्जदार व कोणी त्रासलेले असे सर्व त्याच्याकडे एकत्र मिळाले आणि तो त्यांचा सरदार झाला; सुमारे चारशे माणसे त्याच्याजवळ होती.
3 ಅನಂತರ ದಾವೀದನು ತನ್ನ ತಂದೆತಾಯಿಗಳನ್ನು ಮೋವಾಬ್ ದೇಶದ ಮಿಚ್ಪೆ ಎಂಬಲ್ಲಿಗೆ ಕರೆದುಕೊಂಡು ಹೋಗಿ ಅಲ್ಲಿಯ ಅರಸನಿಗೆ, “ದೇವರು ನನಗೆ ಮಾರ್ಗತೋರಿಸುವವರೆಗೆ ನನ್ನ ತಂದೆತಾಯಿಗಳು ನಿನ್ನ ಬಳಿಯಲ್ಲಿರುವುದಕ್ಕೆ ಅಪ್ಪಣೆಯಾಗಬೇಕು” ಎಂದು ಬೇಡಿಕೊಂಡು, ಅವರನ್ನು ಅವನ ಬಳಿಯಲ್ಲಿ ಬಿಟ್ಟನು.
दावीद तेथून मवाबातील मिस्पा येथे जाऊन मवाबाच्या राजाला म्हणाला, “मी तुला विनंती करतो परमेश्वर माझ्यासाठी काय करील हे मला कळेल तोपर्यंत माझ्या आई-वडीलांना तुझ्याजवळ येऊन राहू दे.”
4 ದಾವೀದನು ದುರ್ಗದಲ್ಲಿದ್ದ ಕಾಲವೆಲ್ಲಾ ಅವನ ತಂದೆತಾಯಿಗಳು ಈ ಅರಸನ ಬಳಿಯಲ್ಲಿ ವಾಸವಾಗಿದ್ದರು.
मग त्याने त्यांना मवाबाच्या राजाकडे आणले आणि दावीद गडात वस्तीस होता तोपर्यंत ते त्याच्याजवळ राहिले.
5 ಗಾದ್ ಪ್ರವಾದಿಯು ದಾವೀದನಿಗೆ, “ನೀನು ಈ ದುರ್ಗದಲ್ಲಿರಬಾರದು, ಇದನ್ನು ಬಿಟ್ಟು ಯೆಹೂದ ದೇಶಕ್ಕೆ ಹೋಗು” ಎಂದು ಹೇಳಿದ್ದರಿಂದ ಅವನು ಹೆರೆತ್ ಅರಣ್ಯಕ್ಕೆ ಹೋದನು.
मग गाद भविष्यवादी दावीदाला म्हणाला, “गडात राहू नको तर तू निघून यहूदा देशात जा.” तेव्हा दावीद निघून हरेथ रानात आला.
6 ಒಂದು ದಿನ ಸೌಲನು ತನ್ನ ಎಲ್ಲಾ ಪರಿವಾರದವರ ನಡುವೆ ಕೈಯಲ್ಲಿ ಬರ್ಜಿಯನ್ನು ಹಿಡಿದುಕೊಂಡು, ಗಿಬೆಯ ಗುಡ್ಡದ ಪಿಚುಲ ವೃಕ್ಷದ ಕೆಳಗೆ ಕುಳಿತುಕೊಂಡಿರಲು ದಾವೀದನೂ ಅವನ ಜನರೂ ಅಡಗಿಕೊಂಡಿರುವ ಸ್ಥಳವು ತಿಳಿದುಬಂದಿದೆ ಎಂಬ ಸುದ್ದಿಯು ಅವನಿಗೆ ಮುಟ್ಟಿತು.
दावीद व त्याच्याबरोबरची माणसे यांचा शोध लागला असे शौलाने ऐकले. शौल तर रामातल्या गिब्यात एशेल झाडाखाली बसला होता; त्याचा भाला त्याच्या हातात होता व त्याचे सर्व चाकर उभे होते.
7 ಆಗ ಅವನು ತನ್ನ ಸುತ್ತಲೂ ನಿಂತಿದ್ದ ಪರಿವಾರದವರಿಗೆ, “ಬೆನ್ಯಾಮೀನನ ಮಕ್ಕಳೇ ಕೇಳಿರಿ. ನೀವೆಲ್ಲರೂ ನನಗೆ ಒಳಸಂಚು ಮಾಡುವುದೇಕೆ? ಇಷಯನ ಮಗನು ನಿಮ್ಮೆಲ್ಲರಿಗೂ ಹೊಲಗಳನ್ನು, ದ್ರಾಕ್ಷಿತೋಟಗಳನ್ನು ಕೊಡುವನೋ? ಎಲ್ಲರನ್ನು ಸಹಸ್ರಾಧಿಪತಿಗಳನ್ನಾಗಲಿ, ಶತಾಧಿಪತಿಗಳನ್ನಾಗಲಿ ಮಾಡುವನೋ?
तेव्हा शौल आपल्याजवळ जे आपले चाकर उभे होते त्यांना म्हणाला, “अहो बन्यामिनी लोकांनो ऐका हा इशायाचा मुलगा तुम्हा प्रत्येकाला शेते व द्राक्षमळे देणार आहे काय? तो तुम्हा सर्वांना हजाराचे व शंभराचे सरदार करणार आहे काय?
8 ನನ್ನ ಮಗನು ಇಷಯನ ಮಗನೊಡನೆ ಒಡಂಬಡಿಕೆ ಮಾಡಿಕೊಂಡದ್ದನ್ನು ನಿಮ್ಮಲ್ಲಿ ಒಬ್ಬನಾದರೂ ನನಗೆ ತಿಳಿಸಲಿಲ್ಲವಲ್ಲಾ. ನನ್ನ ಸೇವಕನು ನನಗೆ ವಿರೋಧವಾಗಿ ಒಳಸಂಚುಮಾಡುವ ಹಾಗೆ ನನ್ನ ಮಗನೇ, ಅವನನ್ನು ಎಬ್ಬಿಸಿದ್ದಾನೆಂಬುದನ್ನು ಒಬ್ಬನಾದರೂ ನನಗೆ ಯಾಕೆ ತಿಳಿಸಲಿಲ್ಲ? ನೀವು ನನ್ನ ಚಿಂತೆಯನ್ನೇ ಬಿಟ್ಟಿದ್ದೀರಿ” ಅಂದನು
म्हणून तुम्ही सगळे माझ्यावर फितुरी करीत आहा आणि माझा मुलगा इशायाच्या मुलाशी करार करतो तेव्हा मला कोणी कळवीत नाही आणि तुम्हातला कोणी माझ्यासाठी दुखीत होत नाही आणि माझ्या मुलाने माझ्या चाकराला आजच्यासारखे माझ्यासाठी टपून बसायला चेतवले आहे हे कोणी मला कळवीत नाही.”
9 ಆಗ ಸೌಲನ ಸೇವಕರ ಬಳಿಯಲ್ಲಿ ನಿಂತಿದ್ದ ಎದೋಮ್ಯನಾದ ದೋಯೇಗನು, “ಇಷಯನ ಮಗನು ನೋಬದಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ಕಂಡೆನು.
मग दवेग अदोमी जो शौलाच्या चाकरांसोबत उभा होता, त्याने उत्तर देऊन म्हटले, “मी इशायाच्या मुलाला नोब येथे अहीटूबाचा मुलगा अहीमलेख याच्याकडे येताना पाहिले;
10 ೧೦ ಅವನು ಇವನಿಗೆ ಯೆಹೋವನ ಚಿತ್ತವನ್ನು ತಿಳಿಸಿ, ಆಹಾರವನ್ನೂ, ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನೂ ಕೊಟ್ಟನು” ಎಂದು ಹೇಳಿದನು.
१०त्याने त्याच्यासाठी परमेश्वरास विचारले व त्यास अन्न दिले आणि गल्याथ पलिष्टी याची तलवार त्यास दिली.”
11 ೧೧ ಕೂಡಲೆ ಸೌಲನು ಅಹೀಟೂಬನ ಮಗನೂ ಯಾಜಕನೂ ಆಗಿದ್ದ ಅಹೀಮೆಲೆಕನನ್ನೂ, ಅವನ ಕುಟುಂಬಕ್ಕೆ ಸೇರಿದ ನೋಬದ ಬೇರೆ ಎಲ್ಲಾ ಯಾಜಕರೊಡನೆ ಕರೆದುಕೊಂಡು ಬರುವಂತೆ ಕಳುಹಿಸಿದನು. ಅವರೆಲ್ಲರೂ ಅರಸನ ಸನ್ನಿಧಿಗೆ ಬರಲು,
११तेव्हा राजाने अहीटूबाचा मुलगा अहीमलेख याजक याला व त्याच्या वडिलाच्या सर्व घराण्यातले जे याजक नोब येथे होते त्यांना बोलवायला माणसे पाठवली आणि ते सर्व राजाकडे आले.
12 ೧೨ ಸೌಲನು, “ಅಹೀಟೂಬನ ಮಗನೇ ಕೇಳು” ಅಂದನು. ಅದಕ್ಕೆ ಅವನು, “ಒಡೆಯಾ ಅಪ್ಪಣೆಯಾಗಲಿ” ಎಂದು ಉತ್ತರಕೊಟ್ಟನು.
१२तेव्हा शौलाने म्हटले, “अहीटूबाच्या मुला आता ऐक.” तो म्हणाला, “माझ्या प्रभू मी येथे आहे.”
13 ೧೩ ಆಗ ಸೌಲನು ಅವನಿಗೆ, “ನೀನು ನನಗೆ ವಿರೋಧವಾಗಿ ಇಷಯನ ಮಗನೊಡನೆ ಒಳಸಂಚುಮಾಡಿದ್ದೇಕೆ? ಅವನು ನನಗೆ ವಿರೋಧವಾಗಿ ಎದ್ದು ನನ್ನ ಜೀವಕ್ಕಾಗಿ ಹೊಂಚುಹಾಕುವಂತೆ ನೀನು ಅವನಿಗೆ ರೊಟ್ಟಿಕತ್ತಿಗಳನ್ನು ಕೊಟ್ಟು, ದೈವೋತ್ತರವನ್ನು ತಿಳಿಸಿದ್ದೇಕೆ?” ಎಂದು ಕೇಳಿದನು
१३शौल त्यास म्हणाला, “तू आणि इशायाचा मुलगा अशा तुम्ही दोघांनी माझ्यावर फितुरी केली तू त्यास भाकर व तलवार दिली आणि त्याच्यासाठी देवापाशी विचारले यासाठी की, त्याने आजच्यासारखे माझ्यावर उठून माझ्यासाठी टपून बसावे?”
14 ೧೪ ಅವನು, “ನಿನ್ನ ಎಲ್ಲಾ ಸೇವಕರಲ್ಲಿ ಅರಸನ ಅಳಿಯನಾಗಿರುವ ದಾವೀದನಂತೆ ನಂಬಿಗಸ್ತನಾದವನು ಯಾವನಿದ್ದಾನೆ? ಅವನು ನಿನ್ನ ಆಲೋಚಕರಲ್ಲೊಬ್ಬನು, ನಿನ್ನ ಮನೆಯಲ್ಲಿ ಗೌರವಸ್ಥನೂ ಆಗಿದ್ದನಲ್ಲವೇ?
१४तेव्हा अहीमलेखाने राजाला उत्तर देऊन म्हटले, “तुझ्या सर्व चाकरांमध्ये दावीदासारखा कोण विश्वासू आहे? तो राजाचा जावई आहे व एकांती तुझ्याजवळ मसलतीला येत असतो व तुझ्या घरात प्रतिष्ठीत आहे.
15 ೧೫ ನಾನು ಅವನಿಗೋಸ್ಕರ ದೇವರ ಸನ್ನಿಧಿಯಲ್ಲಿ ವಿಚಾರಮಾಡಿದ್ದು ಇದೇ ಮೊದಲನೆಯ ಸಾರಿಯೋ? ಇದು ನನಗೆ ದೂರವಾಗಿರಲಿ. ಅರಸನು ತನ್ನ ಸೇವಕರ ಮೇಲೆ ಅವನ ಮನೆಯವರ ಮೇಲೆ ಇಂಥ ಮಾತನ್ನು ಹೊರಿಸಬಾರದು. ಈ ವಿಷಯದಲ್ಲಿ ನಿನ್ನ ಸೇವಕನಿಗೆ ಸ್ವಲ್ಪವೂ ಗೊತ್ತಿರಲಿಲ್ಲ” ಎಂದು ಉತ್ತರ ಕೊಟ್ಟನು.
१५आजच मी त्याच्यासाठी परमेश्वरास विचारू लागलो काय? असे करणे माझ्यापासून दूर असो; राजाने आपल्या दासास किंवा माझ्या वडिलाच्या घराण्यातील कोणाला अपराध लावू नये कारण या सर्वांतले अधिक उणे काहीच तुझ्या दासास ठाऊक नाही.”
16 ೧೬ ಆಗ ಅರಸನು ಅವನಿಗೆ, “ಅಹೀಮೆಲೆಕನೇ ನೀನೂ ನಿನ್ನ ಮನೆಯವರೂ ಸಾಯಲೇ ಬೇಕು” ಎಂದು ಹೇಳಿ ತನ್ನ ಬಳಿಯಲ್ಲಿದ್ದ
१६राजा म्हणाला, “अहीमलेखा, तुला खचित मरण पावले पाहिजे; तुला व तुझ्या वडिलाच्या घराण्यातील सर्वांना मरण पावले पाहिजे”
17 ೧೭ ಸಿಪಾಯಿಗಳಿಗೆ, “ನೀವು ಯೆಹೋವನ ಈ ಯಾಜಕರನ್ನು ಕೊಲ್ಲಿರಿ. ದಾವೀದನು ಓಡಿಹೋದದ್ದು ಗೊತ್ತಿದ್ದರೂ ನನಗೆ ತಿಳಿಸದೇ ಅವನಿಗೆ ಸಹಾಯ ಮಾಡಿದ್ದಾರೆ” ಎಂದು ಹೇಳಿ ಅವರನ್ನು ಕೊಲ್ಲಲು ಆಜ್ಞಾಪಿಸಿದನು. ಆದರೆ ಅರಸನ ಸಿಪಾಯಿಗಳು ಯಾಜಕರ ಮೇಲೆ ಕೈಹಾಕುವುದಕ್ಕೆ ಮನಸ್ಸು ಮಾಡಲಿಲ್ಲ.
१७मग राजा आपणाजवळ जे शिपाई उभे होते त्यांना म्हणाला, “परमेश्वराच्या याजकांच्या अंगावर जाऊन त्यांना मारा कारण त्यांनीही दावीदाचा पक्ष धरला आहे; आणि तो पळाला असे त्यांना कळले असता त्यांनी मला कळवले नाही.” परंतु राजाचे चाकर परमेश्वराच्या याजकांवर तुटून पडायला आपले हात पुढे करीनात.
18 ೧೮ ಆದ್ದರಿಂದ ಸೌಲನು ಎದೋಮ್ಯನಾದ ದೋಯೇಗನಿಗೆ, “ನೀನು ಹೋಗಿ ಅವರನ್ನು ಕೊಲ್ಲು” ಎಂದು ಆಜ್ಞಾಪಿಸಲು, ಅವನು ನಾರು ಬಟ್ಟೆಯ ಎಪೋದನ್ನು ಧರಿಸಿಕೊಂಡಿದ್ದ ಎಂಭತ್ತೈದು ಯಾಜಕರನ್ನು ಆ ದಿನ ಕೊಂದುಹಾಕಿದನು.
१८मग राजाने दवेगाला म्हटले, “तू याजकांच्या अंगावर चालून जा. तेव्हा दवेग अदोमी याजकांच्या अंगावर जाऊन तुटून पडला.” त्या दिवशी त्याने तागाचे एफोद नेसलेल्या पंच्याऐंशी मनुष्यांना जिवे मारले.
19 ೧೯ ಅನಂತರ ಅವನು ಯಾಜಕರ ಪಟ್ಟಣವಾದ ನೋಬಕ್ಕೆ ಹೋಗಿ ಅಲ್ಲಿನ ಸ್ತ್ರೀಪುರುಷರನ್ನೂ, ಶಿಶುಬಾಲಕರನ್ನೂ ದನ, ಕುರಿ, ಕತ್ತೆಗಳನ್ನು, ಕತ್ತಿಯಿಂದ ಸಂಹರಿಸಿದನು.
१९त्याने याजकांचे नोब नगर याचा तलवारीच्या धारेने नाश केला; पुरुष स्त्रिया बालके व तान्ही बाळे, आणि गुरे, आणि गाढवे आणि मेंढरे ही त्याने तलवारीच्या धारेने जिवे मारली.
20 ೨೦ ಅಹೀಟೂಬನ ಮಗನಾದ ಅಹೀಮೆಲೆಕನ ಮಕ್ಕಳಲ್ಲೊಬ್ಬನಾದ ಎಬ್ಯಾತಾರನೆಂಬುವನು ತಪ್ಪಿಸಿಕೊಂಡು ದಾವೀದನ ಬಳಿಗೆ ಓಡಿಬಂದು,
२०तेव्हा अहीटूबाचा मुलगा अहीमलेख याचा अब्याथार नांवाचा एक मुलगा सुटून दावीदाकडे पळून गेला.
21 ೨೧ ಸೌಲನು ಯೆಹೋವನ ಯಾಜಕರನ್ನು ಕೊಲ್ಲಿಸಿದ ಸಂಗತಿಯನ್ನು ಅವನಿಗೆ ತಿಳಿಸಿದನು.
२१शौलाने परमेश्वराच्या याजकांना जिवे मारले हे अब्याथाराने दावीदाला कळवले.
22 ೨೨ ದಾವೀದನು ಎದೋಮ್ಯನಾದ ದೋಯೇಗನನ್ನು, “ನಾನು ಅಲ್ಲಿ ಕಂಡಾಗಲೇ ಇವನು ಸೌಲನಿಗೆ ಹೇಗೂ ಈ ಸಂಗತಿಯನ್ನು ತಿಳಿಸುವನೆಂದು ತಿಳಿದುಕೊಂಡೆನು. ನಿನ್ನ ಸಂಬಂಧಿಕರ ಸಾವಿಗೆ ನಾನೇ ಕಾರಣನಾದೆನಲ್ಲಾ.
२२तेव्हा दावीदाने अब्याथाराला म्हटले, “दवेग अदोमी येथे होता, त्याच दिवशी मला समजले की, तो शौलाला खचित सांगेल. मी तुझ्या वडिलाच्या घराण्याच्या सर्व मनुष्यांस मरणास कारण झालो आहे.
23 ೨೩ ನೀನಾದರೋ ಹೆದರದೆ ನನ್ನ ಸಂಗಡ ಇರು. ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವನೇ ನಿನ್ನ ಪ್ರಾಣವನ್ನೂ ತೆಗೆಯಬೇಕೆಂದಿರುತ್ತಾನೆ. ನೀನು ನನ್ನ ಜೊತೆಯಲ್ಲಿರುವುದಾದರೆ ಸುರಕ್ಷಿತನಾಗಿರುವಿ” ಎಂದನು.
२३माझ्याजवळ राहा भिऊ नको; कारण जो मला जिवे मारायला पाहतो तोच तुला जिवे मारायला पाहतो आहे. पण माझ्याजवळ तुझे रक्षण होईल.”

< ಸಮುವೇಲನು - ಪ್ರಥಮ ಭಾಗ 22 >