< ಸಮುವೇಲನು - ಪ್ರಥಮ ಭಾಗ 25 >

1 ಸಮುವೇಲನು ಮರಣಹೊಂದಿದನು. ಇಸ್ರಾಯೇಲ್ಯರೆಲ್ಲರೂ ಒಟ್ಟಾಗಿ ಬಂದು ಅವನಿಗಾಗಿ ಗೋಳಾಡುತ್ತಾ ಅವನ ಶವವನ್ನು ರಾಮದಲ್ಲಿದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ದಾವೀದನು ಹೊರಟು ಪಾರಾನ್ ಮರುಭೂಮಿಗೆ ಹೋದನು.
शमुवेल मरण पावला तेव्हा सर्व इस्राएल लोकांनी एकत्र जमून त्याच्यासाठी शोक केला आणि त्यांनी त्यास रामा येथे त्याच्या घरात पुरले. दावीद उठून खाली पारान नावाच्या रानात गेला.
2 ಕರ್ಮೆಲಿನಲ್ಲಿ ಸ್ವಂತ ಸೊತ್ತು ಹೊಂದಿದ್ದ ಒಬ್ಬ ಮನುಷ್ಯನಿದ್ದನು. ಅವನು ಮಾವೋನಿನಲ್ಲಿ ವಾಸಿಸುತ್ತಿದ್ದನು. ಅವನ ಹೆಸರು ನಾಬಾಲ್.
मावोनात एक पुरुष होता त्याची मालमत्ता कार्मेल येथे होती; तो पुरुष फार मोठा होता; त्याची तीन हजार मेंढरे व एक हजार बकरी होती; तो आपली मेंढरे कर्मेलात कातरीत होता.
3 ಅವನ ಹೆಂಡತಿಯ ಹೆಸರು ಅಬೀಗೈಲ್. ಆಕೆಯು ಬಹು ಬುದ್ಧಿವಂತೆಯೂ, ಸುಂದರಿಯೂ ಆಗಿದ್ದಳು. ಕಾಲೇಬನ ವಂಶದವನಾದ ಆ ಮನುಷ್ಯನು ನಿಷ್ಠುರನೂ, ದುಷ್ಕರ್ಮಿಯೂ ಆಗಿದ್ದನು. ಅವನು ಬಹು ಶ್ರೀಮಂತನಾಗಿದ್ದನು. ಅವನಿಗೆ ಮೂರು ಸಾವಿರ ಕುರಿಗಳೂ, ಸಾವಿರ ಆಡುಗಳೂ ಇದ್ದವು. ಅವನು ಒಂದು ಸಾರಿ ಕರ್ಮೆಲಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುತ್ತಿದ್ದನು.
त्या पुरुषाचे नाव नाबाल व त्याच्या पत्नीचे नाव अबीगईल होते; त्याची पत्नी तर बुध्दीने चांगली व सुंदर रूपवती होती परंतु तो पुरूष कठोर व वाईट चालीचा होता; तो कालेबाच्या कुळातला होता.
4 ನಾಬಾಲನು ಉಣ್ಣೆ ಕತ್ತರಿಸುತ್ತಿದ್ದಾನೆಂಬ ವರ್ತಮಾನವು ಅಲ್ಲಿ ಮರುಭೂಮಿಯಲ್ಲಿದ್ದ ದಾವೀದನಿಗೆ ಮುಟ್ಟಿತು.
नाबाल आपली मेंढरे कातरीत आहे, असे दावीदाने रानात ऐकले.
5 ಅವನು ಹತ್ತು ಮಂದಿ ಸೇವಕರನ್ನು ಕರೆದು ಅವರಿಗೆ, “ನೀವು ಕರ್ಮೆಲಿನಲ್ಲಿರುವ ನಮ್ಮ ಸಂಬಂಧಿಕನಾದ ನಾಬಾಲನ ಬಳಿಗೆ ಹೋಗಿ ಅವನ ಕ್ಷೇಮ ಸಮಾಚಾರವನ್ನು ವಿಚಾರಿಸಿರಿ.
मग दावीदाने दहा तरुणास पाठवले आणि दावीद त्या तरुणास म्हणाला, “कर्मेल येथे जा व नाबालाकडे जाऊन माझ्या नावाने त्यास सलाम करा.
6 ಅವನಿಗೆ ನನ್ನ ಹೆಸರಿನಲ್ಲಿ ‘ನಿನಗೂ, ನಿನ್ನ ಕುಟುಂಬಕ್ಕೂ, ನಿನ್ನ ಸರ್ವಸಂಪತ್ತಿಗೂ ಶುಭವಾಗಲಿ.
त्या सुखी जिवाला असे म्हणा, ‘तुला शांती असो. व तुझ्या घराला शांती असो आणि जे काही तुझे आहे त्या अवघ्याला शांती असो.
7 ನಿನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವ ಕೆಲಸವು ನಡೆಯುತ್ತದೆಂಬ ವರ್ತಮಾನವನ್ನು ಕೇಳಿದ್ದೇನೆ. ನಿನ್ನ ಕುರುಬರು ನಮ್ಮೊಡನೆ ಕರ್ಮೆಲಿನಲ್ಲಿದ್ದ ಕಾಲವೆಲ್ಲಾ ನಾವು ಅವರನ್ನು ತೊಂದರೆಪಡಿಸಲಿಲ್ಲ. ಅವರಿಗೇನೂ ನಷ್ಟವಾಗಲಿಲ್ಲ.
तुझ्याकडे कातरणारे आहेत असे मी आता ऐकले. आताच तुझे मेंढपाळ आम्हाजवळ होते त्यांना आम्ही उपद्रव केला नाही आणि जितके दिवस ते कर्मेलात होते तितके दिवस त्यांचे काही हरवले नाही.
8 ನಿನ್ನ ಆಳುಗಳನ್ನು ಕೇಳು, ಅವರೇ ಹೇಳುವರು. ಹೀಗಿರುವುದರಿಂದ ಶುಭಕಾಲದಲ್ಲಿ ನಿನ್ನ ಬಳಿಗೆ ಬಂದಿರುವ ನನ್ನ ಸೇವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ. ಕೃಪೆಮಾಡಿ ನಿನ್ನ ಸೇವಕರಿಗೂ ಮಗನಾದ ದಾವೀದನಿಗೂ ನಿನಗಿರುವುದರಲ್ಲಿ ಕೊಡು’ ಎಂದು ಹೇಳಿರಿ” ಎಂದು ಅವರನ್ನು ಕಳುಹಿಸಿದನು.
तू आपल्या तरुणास विचार म्हणजे ते तुला सांगतील; तर या तरुणावर तुझी कृपादृष्टी व्हावी कारण आम्ही चांगल्या दिवशी आलो”
9 ದಾವೀದನ ಸೇವಕರು ಹೋಗಿ ಅವನ ಹೆಸರಿನಲ್ಲಿ ಈ ಮಾತುಗಳನ್ನೆಲ್ಲಾ ನಾಬಾಲನಿಗೆ ತಿಳಿಸಿ ಉತ್ತರಕ್ಕಾಗಿ ಕಾಯುತ್ತಿದ್ದರು.
मी तुला विनंती करतो जे काही तुझ्या हाताशी येईल ते तू तुझ्या दासांना व तुझा मुलगा दावीद याला दे. मग दावीदाचे तरुण येऊन या सर्व शब्दांप्रमाणे दावीदाच्या नावाने नाबालाशी बोलून शांत राहिले.
10 ೧೦ ನಾಬಾಲನು ಅವರಿಗೆ, “ದಾವೀದನಾರು? ಇಷಯನ ಮಗನಾರು? ಯಜಮಾನರನ್ನು ಬಿಟ್ಟು ಹೋದ ಸೇವಕರು ಈಗಿನ ಕಾಲದಲ್ಲಿ ಎಷ್ಟು ಮಂದಿಯಿಲ್ಲ.
१०तेव्हा नाबालाने त्याच्या चाकरांना उत्तर देऊन म्हटले, “दावीद कोण आहे? इशायाचा मुलगा कोण? जे आपआपल्या धन्याला सोडून पळतात असे पुष्कळ चाकर या दिवसात आहेत.
11 ೧೧ ಉಣ್ಣೆಕತ್ತರಿಸುವವರಿಗೋಸ್ಕರ ನಾನು ಸಿದ್ಧ ಮಾಡಿಸಿರುವ ಮಾಂಸವನ್ನು ಆಹಾರಪಾನಗಳನ್ನೂ, ಎಲ್ಲಿಂದಲೋ ಬಂದವರಿಗೆ ಕೊಟ್ಟುಬಿಡಬೇಕೋ?” ಎಂದು ಉತ್ತರ ಕೊಟ್ಟನು.
११माझी भाकर व माझे पाणी व माझ्या मारलेल्या पशूंचे मांस जे मी आपल्या मेंढरे कातरणाऱ्यांसाठी तयार केले ते घेऊन, ही जी माणसे कोठून आली आहेत हे माला माहित नाही अशांना मी द्यावे काय?”
12 ೧೨ ಆ ಸೇವಕರು ಹಿಂದಿರುಗಿ ತಮ್ಮ ದಾರಿ ಹಿಡಿದು ದಾವೀದನ ಬಳಿಗೆ ಬಂದು ಅವನಿಗೆ ಎಲ್ಲವನ್ನೂ ತಿಳಿಸಲಾಗಿ,
१२मग दावीदाचे तरुण आपल्या वाटेने परत गेले आणि माघारे येऊन त्यांनी हे सर्व शब्द त्यास जसेच्या तसे सांगितले.
13 ೧೩ ಅವನು ತನ್ನ ಜನರಿಗೆ “ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ” ಎಂದು ಆಜ್ಞಾಪಿಸಿದನು. ಅವರೆಲ್ಲರು ಕಟ್ಟಿಕೊಂಡರು. ದಾವೀದನೂ ಸೊಂಟಕ್ಕೆ ಕತ್ತಿಯನ್ನು ಕಟ್ಟಿಕೊಂಡನು. ಹೆಚ್ಚುಕಡಿಮೆ ನಾನೂರು ಮಂದಿ ದಾವೀದನ ಜೊತೆಯಲ್ಲಿ ಹೋದರು. ಇನ್ನೂರು ಮಂದಿ ಸಾಮಾನುಗಳ ಬಳಿಯಲ್ಲಿ ಇದ್ದರು.
१३तेव्हा दावीद आपल्या मनुष्यांना म्हणाला, “तुम्ही आपापली तलवार कंबरेस बांधा.” मग प्रत्येकाने आपआपली तलवार कंबरेस बांधली दावीदानेही आपली तलवार कंबरेस बांधली आणि दावीदामागे सुमारे चारशे मनुष्ये वर गेली आणि दोनशे मनुष्ये सामानाजवळ राहिली.
14 ೧೪ ನಾಬಾಲನ ಸೇವಕರಲ್ಲಿ ಒಬ್ಬನು ಅವನ ಹೆಂಡತಿಯಾದ ಅಬೀಗೈಲಳಿಗೆ, “ಮರುಭೂಮಿಯಲ್ಲಿರುವ ದಾವೀದನು ನಮ್ಮ ಧಣಿಯ ಕ್ಷೇಮವಿಚಾರಕ್ಕಾಗಿ ದೂತರನ್ನು ಕಳುಹಿಸಲು, ಧಣಿಯು ಬಂದವರನ್ನು ಬೈದನು ಕಳುಹಿಸಿದನು.
१४नाबालाची पत्नी अबीगईल हिला चाकरातील एकाने सांगितले, “पाहा दावीदाने रानातून आमच्या धन्याला सलाम सांगायला दूत पाठवले. परंतु तो त्यांच्या अंगावर धावून गेला.
15 ೧೫ ಆ ಜನರು ನಮಗೆ ಬಹಳ ಉಪಕಾರ ಮಾಡಿದವರು. ನಾವು ಅವರೊಡನೆ ಮರುಭೂಮಿಯಲ್ಲಿದ್ದ ಕಾಲವೆಲ್ಲಾ ಅವರು ನಮಗೆ ಏನೂ ತೊಂದರೆಕೊಡಲಿಲ್ಲ, ನಾವು ನಷ್ಟಹೊಂದಲಿಲ್ಲ.
१५ती माणसे तर आम्हाशी फार चांगली वागली; त्यांनी आम्हास काही उपद्रव केला नाही; जितके दिवस आम्ही रानात त्यांच्याबरोबर राहिलो तितके दिवस आमची काही हानी झाली नाही.
16 ೧೬ ನಾವು ಕುರಿಗಳನ್ನು ಮೇಯಿಸುವವರಾಗಿ ಅವರೊಡನೆ ಇದ್ದಾಗ ಅವರು ಹಗಲಿರುಳು ನಮಗೆ ಕಾವಲು ಗೋಡೆಯಂತಿದ್ದರು.
१६आम्ही त्याच्याजवळ मेंढरे राखीत होतो तितके दिवस ती आम्हांला रात्रदिवस तटबंदीसारखी होती.
17 ೧೭ ಈಗ ಮಾಡಬೇಕಾದದ್ದನ್ನು ನೀನೇ ಆಲೋಚಿಸಿ ಗೊತ್ತುಮಾಡು. ನಮ್ಮ ಯಜಮಾನನಿಗೂ, ಅವನ ಕುಟುಂಬದವರೆಲ್ಲರಿಗೂ ಕೇಡು ಹತ್ತಿರವಾಗಿದೆ. ಮೂರ್ಖನಾದ ಅವನೊಡನೆ ಮಾತನಾಡುವುದು ಅಸಾಧ್ಯ” ಎಂದು ಹೇಳಿದನು.
१७तर आता तू काय करणार हे समजून विचार कर कारण आमच्या धन्यावर व त्याच्या सर्व घरावर वाईट येण्याचे ठरले आहे; कारण त्याच्याशी कोणाच्याने बोलवत नाही एवढा तो वाईट आहे.”
18 ೧೮ ಆಗ ಅಬೀಗೈಲಳು ಶೀಘ್ರವಾಗಿ ಇನ್ನೂರು ರೊಟ್ಟಿ, ಎರಡು ಬುದ್ದಲಿ ದ್ರಾಕ್ಷಾರಸ, ಸಿದ್ಧಮಾಡಿದ ಐದು ಕುರಿಗಳ ಮಾಂಸ, ಐವತ್ತು ಸೇರು ಹುರಿಗಾಳು, ಒಣಗಿದ ನೂರು ದ್ರಾಕ್ಷಿ ಗೊಂಚಲುಗಳು, ಅಂಜೂರ ಹಣ್ಣುಗಳು, ಇನ್ನೂರು ಉಂಡೆಗಳು ಇವುಗಳನ್ನು ಕತ್ತೆಗಳ ಮೇಲೆ ಹೇರಿಸಿ,
१८अबीगईलेने घाई करून दोनशे भाकरी व द्राक्षरसाचे दोन बुधले व शिजवून तयार केलेली पाच मेंढरे व पाच मापे हुरडा व खिसमिसाचे शंभर घड व अंजिराच्या दोनशे ढेपा ही घेतली व गाढवावर लादली.
19 ೧೯ ತನ್ನ ಸೇವಕರಿಗೆ, “ನೀವು ಮುಂದೆ ನಡೆಯಿರಿ, ನಾನು ಹಿಂದೆ ಬರುತ್ತೇನೆ” ಎಂದು ಹೇಳಿ ಅವರನ್ನು ಕಳುಹಿಸಿದಳು. ಗಂಡನಾದ ನಾಬಾಲನಿಗೆ ಏನೂ ತಿಳಿಸಲಿಲ್ಲ.
१९तिने आपल्या चाकरांना म्हटले, “माझ्यापुढे चला पाहा मी तुमच्यामागून येते.” परंतु तिने आपला पती नाबाल याला काही सांगितले नाही.
20 ೨೦ ಆಕೆ ಕತ್ತೆಯ ಮೇಲೆ ಕುಳಿತುಕೊಂಡು ಗುಡ್ಡದ ಬದಿಯಲ್ಲಿ ಹೋಗುತ್ತಿರುವಾಗ, ದಾವೀದನೂ ಅವನ ಜನರೂ ಗುಡ್ಡ ಇಳಿದು ಆ ಕಡೆಯಿಂದ ಬರಲು ಆಕೆಯು ಅವರನ್ನು ಎದುರುಗೊಂಡಳು.
२०मग असे झाले की, ती आपल्या गाढवावर बसून डोंगराच्या कडेने जात असता पाहा दावीद व त्याची माणसे समोरून येत होती आणि त्यांना ती भेटली.
21 ೨೧ ಅಷ್ಟರಲ್ಲಿ ದಾವೀದನು, “ನಾನು ಮರುಭೂಮಿಯಲ್ಲಿ ಈ ಮನುಷ್ಯನ ಆಸ್ತಿಯಲ್ಲಿ ಏನೂ ನಷ್ಟವಾಗದಂತೆ ಕಾಪಾಡಿದ್ದು ವ್ಯರ್ಥವಾಯಿತು. ಅವನು ಉಪಕಾರಕ್ಕೆ ಅಪಕಾರ ಮಾಡಿದನು.
२१दावीदाने म्हटले होते की, “रानात त्यांचे जे होते त्या सर्वांतले हरवले नाही असे मी त्यांचे राखले ते व्यर्थ गेले; माझ्याशी बऱ्याची त्याने वाईटाने परत फेड केली आहे.
22 ೨೨ ಬೆಳಗಾಗುವಷ್ಟರಲ್ಲಿ ಅವನ ಜನರೊಳಗೆ ಒಬ್ಬ ಗಂಡಸಾದರೂ ಉಳಿದರೆ ದೇವರು ದಾವೀದನಿಗೆ ಬೇಕಾದದ್ದನ್ನು ಮಾಡಲಿ” ಎಂದು ಪ್ರತಿಜ್ಞೆ ಮಾಡಿದನು.
२२जे काही त्याचे आहे त्या सर्वातून एकही पुरूष जर मी सकाळ उजाडेपर्यंत राहू दिला, तर परमेश्वर दावीदाला तसे व त्यापेक्षा अधिक करो.”
23 ೨೩ ಅಬೀಗೈಲಳು ದಾವೀದನನ್ನು ಕಂಡ ಕೂಡಲೇ ಕತ್ತೆಯಿಂದಿಳಿದು, ಅವನಿಗೆ ಸಾಷ್ಟಾಂಗವಾಗಿ ನಮಸ್ಕರಿಸಿದಳು.
२३अबीगईलेने दावीदाला पाहिले तेव्हा ती लवकर गाढवा वरून उतरली आणि दावीदापुढे उपडे पडून तिने भूमीकडे नमन केले.
24 ೨೪ ಆ ಮೇಲೆ ಅವನ ಪಾದಗಳ ಮೇಲೆ ಬಿದ್ದು ಅವನಿಗೆ, “ಸ್ವಾಮೀ ಅಪರಾಧವು ನನ್ನ ಮೇಲೆ ಇರಲಿ. ನಿನ್ನ ದಾಸಿಯು ಮಾತನಾಡುವುದಕ್ಕೆ ಅಪ್ಪಣೆಯಾಗಲಿ. ನನ್ನ ಮಾತನ್ನು ಲಾಲಿಸಬೇಕು.
२४तिने त्याच्या पाया पडून म्हटले, “माझ्या प्रभू अन्याय माझ्याकडे माझ्याकडेच असावा आणि मी तुम्हास विनंती करते तुमच्या दासीला तुमच्या कानी काही बोलू द्या, आणि तुम्ही आपल्या दासीचे शब्द ऐका.
25 ೨೫ ಸ್ವಾಮಿಯು ಆ ಮೂರ್ಖನಾದ ನಾಬಾಲನನ್ನು ಲಕ್ಷಿಸದಿರಲಿ. ಅವನ ಹೆಸರು ನಾಬಾಲ. ಹೆಸರಿಗೆ ತಕ್ಕಂತೆ ಅವನು ಮೂರ್ಖನೇ ಆಗಿದ್ದಾನೆ. ನಿನ್ನ ದಾಸಿಯಾದ ನಾನು ಸ್ವಾಮಿಯು ಕಳುಹಿಸಿದ ಸೇವಕರನ್ನು ನೋಡಲಿಲ್ಲ.
२५मी तुम्हास विनंती करते, माझ्या प्रभूने त्या वाईट मनुष्यास नाबालाला मारू नये, कारण जसे त्याचे नाव तसाच आहे, त्याचे नाव नाबाल (म्हणजे मूर्ख) असे आहे. आणि त्याच्याठायी मूर्खपणच आहे. परंतु माझ्या प्रभूची तरुण माणसे जी तुम्ही पाठवली त्यांना मी तुमच्या दासीने पाहिले नाही.
26 ೨೬ ಸ್ವಾಮೀ, ನೀನು ಸ್ವಹಸ್ತದಿಂದ ಮುಯ್ಯಿ ತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ಯೆಹೋವನು ನಿನ್ನನ್ನು ಕಾಪಾಡಿದ್ದಾನೆ. ಯೆಹೋವನಾಣೆ, ನಿನ್ನ ಜೀವದಾಣೆ ನಿನ್ನ ವಿರೋಧಿಗಳೂ, ನಿನಗೆ ಕೇಡು ಬಗೆಯುವವರೂ ನಾಬಾಲನ ಗತಿಯನ್ನು ಹೊಂದಲಿ.
२६तर आता माझ्या प्रभू परमेश्वर जिवंत आहे आणि तुझा जीव जिवंत आहे. रक्त पाडण्याच्या दोषापासून आणि आपल्या हाताने सूड घेण्यापासून परमेश्वराने तुम्हास आवरले आहे. तर आता जे तुमचे शत्रू व जे माझ्या प्रभूचे वाईट करायला पाहतात ते नाबालासारखे होवोत.
27 ೨೭ ನಿನ್ನ ದಾಸಿಯು ತಂದ ಈ ಕಾಣಿಕೆಯನ್ನು ಸ್ವಾಮಿಯು ತಮ್ಮ ಸೇವಕರಿಗೆ ಸಲ್ಲಿಸಲಿ.
२७आता ही जी भेट तुमच्या दासीने माझ्या प्रभूकडे आणली आहे ती माझ्या प्रभूच्यामागून चालणाऱ्या तरुण मनुष्यांना द्यावी.
28 ೨೮ ನಿನ್ನ ದಾಸಿಯ ಅಪರಾಧಕ್ಕೆ ಕ್ಷಮಾಪಣೆಯಾಗಲಿ. ಸ್ವಾಮಿಯೇ, ನೀನು ಯೆಹೋವನ ಶತ್ರುಗಳೊಡನೆ ಯುದ್ಧಮಾಡುವುದರಿಂದ ಆತನು ನಿನ್ನ ಮನೆಯನ್ನು ಶಾಶ್ವತವಾಗಿ ಸ್ಥಿರಪಡಿಸುವನು. ಆದ್ದರಿಂದ ನಿನ್ನ ಜೀವಮಾನದಲ್ಲೆಲ್ಲಾ ನಿನ್ನಲ್ಲಿ ಕೆಟ್ಟತನವು ಕಾಣದಿರಲಿ.
२८मी तुम्हास विनंती करते, तुम्ही आपल्या दासीच्या अपराधाची क्षमा करा; कारण माझे प्रभू परमेश्वराच्या लढाया लढत आहेत, म्हणून परमेश्वर माझ्या प्रभूचे घर खरोखर स्थिर करील; आणि तुम्ही जिवंत आहात तो पर्यंत तुमच्याठाई दुष्टाई सापडणार नाही.
29 ೨೯ ಯಾವನಾದರೂ ನನ್ನ ಒಡೆಯನಾದ ನಿನ್ನನ್ನು ಹಿಂಸಿಸಿ ಜೀವತೆಗೆಯಬೇಕೆಂದಿದ್ದರೂ, ಆ ನಿನ್ನ ಜೀವವು ನಿನ್ನ ದೇವರಾದ ಯೆಹೋವನ ರಕ್ಷಣೆಯಲ್ಲಿರುವ ಜೀವ ನಿಕ್ಷೇಪದಲ್ಲಿ ಭದ್ರವಾಗಿರಲಿ. ಆದರೆ ಆತನು ನಿನ್ನ ಶತ್ರುಗಳ ಜೀವವನ್ನು ಕವಣೆಯ ಕಲ್ಲನ್ನೋ ಎಂಬಂತೆ ಎಸೆದು ಬಿಡಲಿ.
२९जरी मनुष्ये उठून तुमच्या पाठीस लागले व तुमचा जीव घ्यायला पाहत असले, तरी माझ्या प्रभूचा जीव परमेश्वर तुमचा देव याच्याजवळ जीवांच्या समुहात बांधलेला राहील, आणि जसे गोफणीच्या खळग्यातून फेकतात, तसे तुमच्या शत्रूंचे जीव तो गोफणीतून फेकून देईल.
30 ೩೦ ಯೆಹೋವನು ನನ್ನ ಸ್ವಾಮಿಯಾದ ನಿನಗೆ ವಾಗ್ದಾನಮಾಡಿರುವ ಎಲ್ಲಾ ಸೌಭಾಗ್ಯವನ್ನು ದಯಪಾಲಿಸಲಿ. ನಿನ್ನನ್ನು ಇಸ್ರಾಯೇಲ್ಯರ ಪ್ರಭುವನ್ನಾಗಿ ಮಾಡಿದ ಮೇಲೆ,
३०असे होईल की, परमेश्वराने तुमच्यविषयी जे चांगले सांगितले आहे, ते सर्व तो माझ्या प्रभूचे करून तुम्हास इस्राएलाचा अधिपती नेमील.
31 ೩೧ ನಿರಪರಾಧಿಯ ರಕ್ತವನ್ನು ಸುರಿಸಿ ಮುಯ್ಯಿ ತೀರಿಸಿದ್ದರಿಂದ ಉಂಟಾಗುವ ಪಶ್ಚಾತ್ತಾಪ ಮನೋವ್ಯಥೆಗಳಿಗೆ ಕಾರಣವಿರುವುದಿಲ್ಲ. ಆತನೇ ನಿನ್ನನ್ನು ಮಹಾ ಪದವಿಗೆ ತರುವಾಗ ನಿನ್ನ ದಾಸಿಯಾದ ನನ್ನನ್ನು ಮರೆತುಬಿಡಬೇಡ” ಅಂದಳು.
३१तेव्हा माझ्या प्रभूने विनाकारण रक्त पाडले व सूड घेतला ह्याबद्दल तुम्हास खेद होणार नाही किंवा मनाचा संताप माझ्या प्रभूला होणार नाही. आणि परमेश्वर माझ्या प्रभूचे बरे करील तेव्हा तुम्ही आपल्या दासीचे स्मरण करा.”
32 ೩೨ ಆಗ ದಾವೀದನು ಅಬೀಗೈಲಳಿಗೆ, “ಈ ದಿನ ನನ್ನನ್ನು ಎದುರುಗೊಳ್ಳುವುದಕ್ಕಾಗಿ ನಿನ್ನನ್ನು ಕಳುಹಿಸಿದ ಇಸ್ರಾಯೇಲ್ಯರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ.
३२तेव्हा दावीद अबीगईलेला म्हणाला, “परमेश्वर इस्राएलाचा देव ज्याने तुला आज मला भेटायला पाठवले तो धन्यवादित असो.
33 ೩೩ ಸ್ವಹಸ್ತದಿಂದ ಮುಯ್ಯಿ ತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ನನ್ನನ್ನು ತಡೆದ ನೀನೂ, ನಿನ್ನ ಬುದ್ಧಿಯೂ ಸ್ತೋತ್ರಾರ್ಹವೆ. ಸರಿ.
३३तुझा बोध आशीर्वादित होवो; आज रक्त पाडण्याच्या दोषापासून आणि आपल्या हाताने सूड घेण्यापासून मला जिने आवरिले ती तू आशीर्वादित हो.
34 ೩೪ ನಿನಗೆ ಕೇಡು ಮಾಡದಂತೆ ನನ್ನನ್ನು ತಡೆದ ಇಸ್ರಾಯೇಲರ ದೇವರಾದ ಯೆಹೋವನ ಆಣೆ, ನೀನು ಬೇಗನೇ ಬಂದು ನನ್ನನ್ನು ಎದುರುಗೊಳ್ಳದಿದ್ದರೆ ನಿಜವಾಗಿ ನಾಳೆ ಬೆಳಗಾಗುವಷ್ಟರಲ್ಲಿ ನಾಬಾಲನವರಲ್ಲಿ ಒಬ್ಬ ಗಂಡಸಾದರೂ ಉಳಿಯುತ್ತಿರಲಿಲ್ಲ” ಎಂದು ಹೇಳಿದನು.
३४कारण तुझे वाईट मी करणार होतो ते ज्याने मला करू दिले नाही तो इस्राएलाचा देव परमेश्वर जिवंत आहे; जर तू मला भेटायला लवकर आली नसतीस तर खचित नाबालाचा एक पुरूष देखील सकाळ उजाडेपर्यंत जिवंत राहिला नसता.”
35 ೩೫ ಅವನು ಆಕೆ ತಂದ ಪದಾರ್ಥಗಳನ್ನು ತೆಗೆದುಕೊಂಡು ಆಕೆಗೆ “ಸಮಾಧಾನದಿಂದ ಮನೆಗೆ ಹೋಗು, ನಿನ್ನನ್ನು ನೋಡಿ ನಿನ್ನ ವಿಜ್ಞಾಪನೆಯನ್ನು ಲಾಲಿಸಿದ್ದೇನೆ” ಅಂದನು.
३५मग जे तिने दावीदासाठी आणले होते ते त्याने तिच्या हातातून घेतले व तिला म्हटले, “तू आपल्या घरी शांतीने जा, पाहा मी तुझी वाणी ऐकली आहे आणि तुला मान्य केले आहे.”
36 ೩೬ ಅಬೀಗೈಲಳು ನಾಬಾಲನ ಬಳಿಗೆ ಬಂದಳು. ಅವನು ತನ್ನ ಮನೆಯಲ್ಲಿ ರಾಜರಂತೆ ಒಂದು ದೊಡ್ಡ ಔತಣವನ್ನು ಮಾಡಿಸಿ ಬಹಳವಾಗಿ ಕುಡಿದು ಬಹು ಸಂಭ್ರಮದಿಂದ ಕಾರಣ ಆಕೆಯು ಮರುದಿನದ ವರೆಗೆ ಇದರ ವಿಷಯವಾಗಿ ಏನೂ ಹೇಳಲಿಲ್ಲ.
३६मग अबीगईल नाबालाकडे आली आणि पाहा त्याने आपल्या घरी राजाच्या मेजवाणीसारखी मेजवाणी केली होती. तेव्हा नाबालाचे मन त्याच्या आत संतुष्ट होते कारण तो मद्य पिऊन फार मस्त झाला होता, म्हणून तिने पहाट उजाडेपर्यंत त्यास अधिक उणे काहीच सांगितले नाही.
37 ೩೭ ಮರುದಿನ ಬೆಳಿಗ್ಗೆ ಅಮಲಿಳಿದ ನಂತರ ಈಕೆಯು ಈ ವರ್ತಮಾನವನ್ನು ಅವನಿಗೆ ತಿಳಿಸಲಾಗಿ, ಅವನ ಹೃದಯವೇ ನಿಂತಂತೆ ಆಯಿತು. ಅವನು ಸ್ತಬ್ಧನಾದನು.
३७मग असे झाले की, सकाळी नाबालाची नशा उतरल्यावर त्याच्या पत्नीने या गोष्टी त्यास सांगितल्या तेव्हा त्याचे मन त्याच्या आत मेल्यासारखे झाले व तो दगडासारखा झाला.
38 ೩೮ ಸುಮಾರು ಹತ್ತು ದಿನಗಳಾದನಂತರ ನಾಬಾಲನು ಯೆಹೋವನಿಂದ ಹತನಾಗಿ ಸತ್ತನು.
३८नंतर असे झाले की, सुमारे दहा दिवसानंतर परमेश्वराने नाबालाला मारले व तो मेला.
39 ೩೯ ನಾಬಾಲನು ಸತ್ತನೆಂಬ ವರ್ತಮಾನವು ದಾವೀದನು ಕೇಳಿ, “ನನಗೆ ಅಪಮಾನ ಮಾಡಿದ ನಾಬಾಲನಿಗೆ ಮುಯ್ಯಿತೀರಿಸಿದಂತ ಯೆಹೋವನಿಗೆ ಸ್ತೋತ್ರವಾಗಲಿ. ಆತನು ನನ್ನನ್ನು ಕೆಟ್ಟತನಕ್ಕೆ ದೂರಮಾಡಿ ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆಯೇ ಹೊರಿಸಿದನಲ್ಲಾ” ಎಂದು ಹೇಳಿದನು. ಅನಂತರ ಅವನು ಅಬೀಗೈಲಳನ್ನು ತನಗೆ ಹೆಂಡತಿಯಾಗಿರಬೇಕೆಂದು ದೂತರ ಮೂಲಕ ಹೇಳಿ ಕಳುಹಿಸಿದನು.
३९नाबाल मेला असे दावीदाने ऐकले, तेव्हा तो म्हणाला, “ज्याने माझ्या अपमानाचा सूड नाबालावर उगवला आहे आणि ज्याने आपल्या सेवकाला वाईट करण्यापासून आवरून धरले तो परमेश्वर धन्यवादीत असो. परमेश्वराने नाबालाची दुष्टाई त्याच्याच मस्तकावर परत घातली आहे.” मग दावीदाने अबीगईलेकडे सेवकाला पाठवून तिला आपली पत्नी करण्याविषयीची गोष्ट काढली.
40 ೪೦ ಅವರು ಕರ್ಮೆಲಿನಲ್ಲಿದ್ದ ಅಬೀಗೈಲಳ ಬಳಿಗೆ ಹೋಗಿ ಆಕೆಗೆ, “ದಾವೀದನು ನಿನ್ನನ್ನು ತನಗೆ ಹೆಂಡತಿಯಾಗಿರುವುದಕ್ಕೆ ಕರೆದುಕೊಂಡು ಬರಬೇಕೆಂದು ನಮ್ಮನ್ನು ಕಳುಹಿಸಿದ್ದಾನೆ” ಅಂದರು.
४०आणि दावीदाने चाकर कर्मेलास अबीगईलेकडे येऊन तिला म्हणाले, “दावीदाने तू त्याची पत्नी व्हावे म्हणून आम्हांला तूझ्याकडे पाठवले आहे.”
41 ೪೧ ಆಕೆ ಎದ್ದು ನಮಸ್ಕಾರಮಾಡಿ ಸೇವಕರಿಗೆ, “ನಿನ್ನ ದಾಸಿಯಾದ ನಾನು ನನ್ನ ಸ್ವಾಮಿಯ ಸೇವಕರ ಪಾದಗಳನ್ನು ತೊಳೆಯುವ ಸೇವಕಿಯಾಗುವುದಕ್ಕೆ ಸಿದ್ಧಳಾಗಿದ್ದೇನೆ” ಎಂದು ಉತ್ತರಕೊಟ್ಟು,
४१तेव्हा ती उठून भूमीकडे लवून नमली व म्हणाली, “पाहा तुमची दासी माझ्या प्रभूच्या चाकरांचे पाय धुवायला चाकरीण होण्यास तयार आहे.”
42 ೪೨ ಬೇಗನೇ ಒಂದು ಕತ್ತೆಯನ್ನು ಹತ್ತಿ, ತನ್ನ ಐದು ಮಂದಿ ದಾಸಿಯರ ಸಹಿತವಾಗಿ ದಾವೀದನ ಸೇವಕರ ಜೊತೆಯಲ್ಲಿ ಹೊರಟು ಹೋಗಿ ಅವನ ಹೆಂಡತಿಯಾದಳು.
४२मग अबीगईल घाई करून उठली व गाढवावर बसून निघाली आणि तिच्या पाच सख्या तिच्या मागे गेल्या; आणि ती दावीदाच्या सेवकाच्या मागून गेली आणि त्याची पत्नी झाली.
43 ೪೩ ಇದಲ್ಲದೆ ದಾವೀದನು ಇಜ್ರೇಲಿನವಳಾದ ಅಹೀನೋವಮಳನ್ನು ಮದುವೆಮಾಡಿಕೊಂಡಿದ್ದನು. ಅವರಿಬ್ಬರೂ ಅವನ ಹೆಂಡತಿಯರಾದರು.
४३दावीदाने इज्रेलकरीण अहीनवामलाही पत्नी करून घेतले; त्या दोघीही त्याच्या स्त्रिया झाल्या.
44 ೪೪ ಸೌಲನು ದಾವೀದನ ಹೆಂಡತಿಯಾಗಿದ್ದ ಮೀಕಲಳೆಂಬ ತನ್ನ ಮಗಳನ್ನು ಪುನಃ ಗಲ್ಲೀಮ್ ಊರಿನ ಲಯಿಷನ ಮಗನಾದ ಪಲ್ಟೀ ಎಂಬವನಿಗೆ ಮದುವೆ ಮಾಡಿಕೊಟ್ಟನು.
४४शौलाने तर आपली मुलगी मीखल दावीदाची पत्नी गल्लीमातील लईशाचा मुलगा पालती याला दिली होती.

< ಸಮುವೇಲನು - ಪ್ರಥಮ ಭಾಗ 25 >