< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 10 >

1 ರೆಹಬ್ಬಾಮನು ಶೆಕೆಮಿಗೆ ಹೋದನು. ಅಲ್ಲಿ ಎಲ್ಲಾ ಇಸ್ರಾಯೇಲರೂ ಅವನನ್ನು ಅರಸನನ್ನಾಗಿ ಮಾಡುವುದಕ್ಕೆ ಕೂಡಿಬಂದಿದ್ದರು.
रहबाम शखेम येथे गेला कारण त्यास राजा करण्यासाठी सर्व इस्राएल लोक तेथे गेले होते.
2 ಇದಲ್ಲದೆ ಅರಸನಾದ ಸೊಲೊಮೋನನಿಂದ ತಪ್ಪಿಸಿಕೊಂಡು ಐಗುಪ್ತಕ್ಕೆ ಓಡಿ ಹೋಗಿದ್ದ ನೆಬಾಟನ ಮಗನಾದ ಯಾರೊಬ್ಬಾಮನು ನಡೆದ ಸಂಗತಿಗಳನ್ನು ಕೇಳಿದೊಡನೆ ಐಗುಪ್ತದಿಂದ ಹಿಂತಿರುಗಿ ಬಂದಿದ್ದನು.
यावेळी यराबाम मिसरमध्ये होता कारण त्याने राजा शलमोनापुढून पळ काढला होता. यराबाम हा नबाटाचा पुत्र. रहबाम राजा होणार हे त्याने ऐकले म्हणून तो मिसरहून आला.
3 ಇಸ್ರಾಯೇಲರು ಅವನನ್ನೂ ತಮ್ಮ ಬಳಿಗೆ ಕರೆಸಿಕೊಂಡರು. ಯಾರೊಬ್ಬಾಮನು ಎಲ್ಲಾ ಇಸ್ರಾಯೇಲರೊಡನೆ ರೆಹಬ್ಬಾಮನ ಬಳಿಗೆ ಹೋಗಿ,
तेव्हा इस्राएल लोकांनी यराबामालाही आपल्याबरोबर येण्यास सांगितले. अशा तऱ्हेने यराबाम आणि सर्व इस्राएल लोक रहबामाकडे आले. त्यास ते म्हणाले, “रहबामा,
4 ಅವನಿಗೆ, “ನಿನ್ನ ತಂದೆಯು ನಮ್ಮ ಮೇಲೆ ಹೊರೆಯನ್ನು ಹೊರಿಸಿದ್ದನು; ನಿನ್ನ ತಂದೆಯು ನೇಮಿಸಿದ ಬಿಟ್ಟಿ ಕೆಲಸವನ್ನು ನೀನು ಕಡಿಮೆ ಮಾಡಿ, ನಮ್ಮ ಮೇಲಿರುವ ಭಾರವಾದ ನೊಗವನ್ನು ಹಗುರ ಮಾಡುವುದಾದರೆ, ನಾವು ನಿನ್ನನ್ನು ಸೇವಿಸುವೆವು” ಎಂದು ಹೇಳಿದರು.
तुमच्या पित्याने आमचे जू फार भारी केले होते तर आता आपल्या पित्याने लादलेली कठीण सेवा व आम्हावरील भारी जू आता हलके करा म्हणजे आम्ही तुमच्या आज्ञेत राहू.”
5 ಅದಕ್ಕೆ ರೆಹಬ್ಬಾಮನು, “ನೀವು ಮೂರು ದಿನಗಳ ಬಳಿಕ ಬನ್ನಿರಿ” ಎಂದು ಉತ್ತರಕೊಟ್ಟನು; ಜನರು ಹೊರಟು ಹೋದರು.
यावर रहबाम त्यांना म्हणाला, “तुम्ही तीन दिवसानी परत या.” तेव्हा लोक निघून गेले.
6 ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನ ಕಾಲದಲ್ಲಿ ಮಂತ್ರಿಗಳಾಗಿದ್ದ ಹಿರಿಯರನ್ನು ಕರೆಸಿ ಅವರಿಗೆ, “ಈ ಜನರಿಗೆ ಉತ್ತರ ಕೊಡಲು ನೀವು ಯಾವ ಆಲೋಚನೆಯನ್ನು ನನಗೆ ಹೇಳುವಿರಿ?” ಎಂದನು.
राजा रहबामाने मग आपला पिता शलमोनाच्या पदरी असणाऱ्या वडीलधाऱ्या मंडळीशी चर्चा केली. रहबाम त्यांना म्हणाला, “मी या लोकांस काय उत्तर द्यावे? याबाबतीत मला तुमचा सल्ला हवा आहे.”
7 ಅವರು ಅವನಿಗೆ, “ನೀನು ಈ ಜನರಿಗೆ ದಯತೋರಿಸಿ, ಅವರನ್ನು ಮೆಚ್ಚಿಸುವ ಒಳ್ಳೆಯ ಉತ್ತರ ಕೊಟ್ಟರೆ ಅವರು ಯಾವಾಗಲೂ ನಿನಗೆ ಅಧೀನರಾಗಿರುವರು” ಎಂದರು.
तेव्हा ती वयोवृध्द मंडळी रहबामाला म्हणाली, “तू या लोकांशी प्रेमाने वागलास, त्यांना संतुष्ट केलेस आणि त्यांच्याशी गोड बोललास तर ते चिरकाल तुझी सेवा करतील.”
8 ಆದರೆ ಅವನು ಅ ಹಿರಿಯರ ಆಲೋಚನೆಯನ್ನು ನಿರಾಕರಿಸಿ, ತನ್ನ ಸಂಗಡವೇ ಬೆಳೆದು ತನಗೆ ಮಂತ್ರಿಗಳಾದ ಯೌವನಸ್ಥರನ್ನು ಕರೆಯಿಸಿದನು.
पण रहबामाने त्यांचा हा सल्ला मानला नाही तो मग आपल्या पदरी असलेल्या आणि आपल्याबरोबर लहानाचे मोठे झालेल्या तरुण मंडळीशी बोलला.
9 “ನನ್ನ ತಂದೆಯು ಹೇರಿದ ನೊಗವನ್ನು ಹಗುರ ಮಾಡಬೇಕೆಂದು ಬೇಡಿಕೊಳ್ಳುವ ಈ ಜನರಿಗೆ ಯಾವ ಉತ್ತರವನ್ನು ಕೊಡಬೇಕು? ಈ ವಿಷಯದಲ್ಲಿ ನಿಮ್ಮ ಆಲೋಚನೆ ಏನು?” ಎಂದು ಕೇಳಿದನು.
रहबाम त्यांना म्हणाला, “तुम्ही मला काय सल्ला द्याल? आपण लोकांस काय सांगावे? त्यांना आपले ओझे हलके करून हवे आहे. माझ्या पित्यानी त्यांच्या मानेवर ठेवलेले जू आता त्यांना मी हलके करायला हवे आहे.”
10 ೧೦ ಅವರು ಅವನಿಗೆ, “ನಿನ್ನ ತಂದೆಯು ನಮ್ಮ ಮೇಲೆ ಹೇರಿರುವ ಭಾರವಾದ ನೊಗವನ್ನು ಹಗುರ ಮಾಡು ಎಂಬುದಾಗಿ ನಿನ್ನನ್ನು ಬೇಡಿಕೊಂಡಿರುವ ಈ ಜನರಿಗೆ ನೀನು, ‘ನನ್ನ ತಂದೆಯ ನಡುವಿಗಿಂತ ನನ್ನ ಕಿರುಬೆರಳು ದಪ್ಪವಾಗಿದೆ.
१०तेव्हा त्याच्या पिढीची ती युवा मंडळी रहबामाला म्हणाली, “तुमच्याकडे आलेल्या लोकांस तुम्ही असे सांगावे. लोक तुम्हास म्हणाले की, मानेवर जू ठेवल्याप्रमाणे तुमच्या वडिलांनी आम्हास कठोर जिणे जगायला लावले. तुम्ही आता ते हलके करावे असे आम्हास वाटते पण रहबाम, तुम्ही त्यांना असे सांगावे, माझी करंगळी माझ्या पित्याच्या कमरेपेक्षा जाड असेल.
11 ೧೧ ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವುದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ; ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳುಕೊರಡೆಗಳಿಂದ ದಂಡಿಸುವೆನು’ ಎಂಬುದಾಗಿ ಹೇಳಬೇಕು” ಎಂದು ಉತ್ತರಕೊಟ್ಟರು.
११माझ्या पित्याने तुमच्यावर फार ओझे लादले ना! मी तर ते अधिकच भारी करणार आहे; माझ्या पित्याने तुम्हास चाबकांचे फटकारे मारले, मी तर तुम्हास विंचवांनी शासन करीन.”
12 ೧೨ ಯಾರೊಬ್ಬಾಮನೂ ಮತ್ತು ಜನರೆಲ್ಲರೂ ಅರಸನಾದ ರೆಹಬ್ಬಾಮನ ಅಪ್ಪಣೆಯಂತೆ ಮೂರನೆಯ ದಿನ ಹಿಂತಿರುಗಿ ಅವನ ಬಳಿಗೆ ಬಂದರು.
१२“यराबाम आणि सर्व लोक तीन दिवसानी रहबामाकडे आले.” राजा रहबामाने त्यांना तसेच सांगितले होते.
13 ೧೩ ಅರಸನಾದ ರೆಹಬ್ಬಾಮನು ಅವರಿಗೆ ಕಠಿಣವಾದ ಉತ್ತರವನ್ನು ಕೊಟ್ಟನು. ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿದನು.
१३रहबाम त्यांच्याशी यावेळी उद्धटपणे बोलला. मोठ्यांचा सल्ला त्याने मानला नाही.
14 ೧೪ ಯೌವನಸ್ಥರ ಆಲೋಚನೆಗನುಸಾರವಾಗಿ ಜನರಿಗೆ, “ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನೂ ಹೇರಿರುವದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುವೆನು. ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳುಕೊರಡೆಗಳಿಂದ ದಂಡಿಸುವೆನು” ಎಂದು ನುಡಿದನು.
१४तरुणांनी दिलेल्या सल्ल्याप्रमाणे तो बोलला तो लोकांस म्हणाला, “माझ्या पित्याने तुमच्यावर फार ओझे लादले ते मी अधिकच भारी करीन. त्यांनी तुम्हास चाबकाने शासन केले असेल पण मी तर तुम्हास विंचवांनी शासन करीन.”
15 ೧೫ ಅರಸನು ಜನರ ಮಾತನ್ನು ಕೇಳದೆ ಹೋದದ್ದು ದೈವಯೋಗದಿಂದಲೇ. ಈ ಪ್ರಕಾರ ಯೆಹೋವನು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿದ ಮಾತು ನೆರವೇರಿತು.
१५राजा रहबामाने लोकांचे ऐकून घेतले नाही. तो असे बोलला कारण हा बदल परमेश्वरानेच घडवून आणला होता. अहीया मार्फत परमेश्वर यराबामाशी जे बोलला होता ते प्रत्यक्षात यावे म्हणूनच त्याने अशी वेळ येऊ दिली. अहीया हा शिलोनी लोकांपैकी होता आणि यराबाम नबाटाचा पुत्र होता.
16 ೧೬ ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲ ಎಂದು ತಿಳಿದು; ಇಸ್ರಾಯೇಲರೆಲ್ಲರು ಅವನಿಗೆ, “ದಾವೀದನಿಗೂ ನಮಗೂ ಇನ್ನು ಮೇಲೆ ಏನೂ ಸಂಬಂಧವಿಲ್ಲ. ಇಷಯನ ಮಗನಿಗೂ ನಮಗೂ ಯಾವ ಬಾಧ್ಯತೆಯೂ ಇಲ್ಲ. ಇಸ್ರಾಯೇಲರೇ, ನಿಮ್ಮ ನಿಮ್ಮ ಸ್ವತ್ತುಗಳಿಗೆ ಹೋಗಿರಿ; ದಾವೀದನ ಕಡೆಯವರೇ, ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ” ಎಂದು ಹೇಳಿ ತಮ್ಮ ತಮ್ಮ ಗುಡಾರಗಳಿಗೆ ಹಿಂತಿರುಗಿದರು.
१६राजा रहबामाने आपल्या म्हणण्याकडे दुर्लक्ष केले हे इस्राएल लोकांच्या लक्षात आले. ते राजाला म्हणाले, “आम्ही काय दावीदाच्या घराण्यातले आहोत का? मुळीच नाही! इशायचा पुत्र आमचा वतन भाग आहे का? नाही! तेव्हा इस्राएल लोकांनो, आपण आपले आपापल्या घरी जाऊ या दावीदाच्या पुत्राला आपल्या घरच्यांवरच राज्य करु द्या.” सर्व इस्राएल लोक मग घरोघर गेले.
17 ೧೭ ಯೆಹೂದ ಪಟ್ಟಣದಲ್ಲಿದ್ದ ಇಸ್ರಾಯೇಲರಾದರೋ ಅರಸನಾದ ರೆಹಬ್ಬಾಮನ ಅಧೀನದಲ್ಲಿದ್ದರು.
१७पण यहूदाच्या नगरांमध्ये राहणारे काही इस्राएल लोक होते. रहबाम त्यांच्यावर राज्य करत राहिला.
18 ೧೮ ರೆಹಬ್ಬಾಮನು ಬಿಟ್ಟೀಕೆಲಸದವರ ಮೇಲ್ವಿಚಾರಕನಾದ ಹದೋರಾಮನನ್ನು ಇಸ್ರಾಯೇಲರ ಬಳಿಗೆ ಕಳುಹಿಸಿದಾಗ, ಅವರು ಅವನನ್ನು ಕಲ್ಲೆಸೆದು ಕೊಂದರು. ಆಗ ಅರಸನಾದ ರೆಹಬ್ಬಾಮನು ಬೇಗನೆ ರಥವನ್ನೇರಿ ಯೆರೂಸಲೇಮಿಗೆ ಓಡಿ ಹೋದನು.
१८हदोराम हा वेठबिगारांवरचा मुकादम होता. रहबामाने त्यास इस्राएल लोकांकडे पाठवले. पण इस्राएल लोकांनी त्याच्यावर दगडफेक करून त्यास मरेपर्यंत मारले. इकडे रहबामाने रथाचा आश्रय घेतला आणि त्वरेने पळ काढला. तो यरूशलेमेला पळून गेला.
19 ೧೯ ಇಸ್ರಾಯೇಲರು ಅಂದಿನಿಂದ ಇಂದಿನವರೆಗೂ ದಾವೀದನ ಕುಟುಂಬದವರೊಡನೆ ಸಮಾಧಾನವಾಗಲೇ ಇಲ್ಲ.
१९तेव्हापासून आजतागायत इस्राएलाचे दावीदाच्या घराण्याशी बंड केले आहे.

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 10 >