< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 10 >
1 ೧ ರೆಹಬ್ಬಾಮನು ಶೆಕೆಮಿಗೆ ಹೋದನು. ಅಲ್ಲಿ ಎಲ್ಲಾ ಇಸ್ರಾಯೇಲರೂ ಅವನನ್ನು ಅರಸನನ್ನಾಗಿ ಮಾಡುವುದಕ್ಕೆ ಕೂಡಿಬಂದಿದ್ದರು.
और रहुब 'आम सिकम को गया, इसलिए कि सब इस्राईली उसे बादशाह बनाने को सिकम में इकठ्ठठे हुए थे
2 ೨ ಇದಲ್ಲದೆ ಅರಸನಾದ ಸೊಲೊಮೋನನಿಂದ ತಪ್ಪಿಸಿಕೊಂಡು ಐಗುಪ್ತಕ್ಕೆ ಓಡಿ ಹೋಗಿದ್ದ ನೆಬಾಟನ ಮಗನಾದ ಯಾರೊಬ್ಬಾಮನು ನಡೆದ ಸಂಗತಿಗಳನ್ನು ಕೇಳಿದೊಡನೆ ಐಗುಪ್ತದಿಂದ ಹಿಂತಿರುಗಿ ಬಂದಿದ್ದನು.
जब नबात के बेटे युरब'आम ने यह सुना क्यूँकि वह मिस्र में था जहाँ वह सुलेमान बादशाह के आगे से भाग गया था तो युरब'आम मिस्र से लौटा।
3 ೩ ಇಸ್ರಾಯೇಲರು ಅವನನ್ನೂ ತಮ್ಮ ಬಳಿಗೆ ಕರೆಸಿಕೊಂಡರು. ಯಾರೊಬ್ಬಾಮನು ಎಲ್ಲಾ ಇಸ್ರಾಯೇಲರೊಡನೆ ರೆಹಬ್ಬಾಮನ ಬಳಿಗೆ ಹೋಗಿ,
और लोगों ने उसे बुलवा भेजा। तब युरब'आम और सब इस्राईली आए और रहुब'आम से कहने लगे।
4 ೪ ಅವನಿಗೆ, “ನಿನ್ನ ತಂದೆಯು ನಮ್ಮ ಮೇಲೆ ಹೊರೆಯನ್ನು ಹೊರಿಸಿದ್ದನು; ನಿನ್ನ ತಂದೆಯು ನೇಮಿಸಿದ ಬಿಟ್ಟಿ ಕೆಲಸವನ್ನು ನೀನು ಕಡಿಮೆ ಮಾಡಿ, ನಮ್ಮ ಮೇಲಿರುವ ಭಾರವಾದ ನೊಗವನ್ನು ಹಗುರ ಮಾಡುವುದಾದರೆ, ನಾವು ನಿನ್ನನ್ನು ಸೇವಿಸುವೆವು” ಎಂದು ಹೇಳಿದರು.
कि तेरे बाप ने हमारा बोझ सख़्त कर रखा था। इसलिए अब तू अपने बाप की उस सख़्त ख़िदमत को और उस भारी बोझ को जो उस ने हम पर डाल रखा था; कुछ हल्का कर दे और हम तेरी ख़िदमत करेंगे।
5 ೫ ಅದಕ್ಕೆ ರೆಹಬ್ಬಾಮನು, “ನೀವು ಮೂರು ದಿನಗಳ ಬಳಿಕ ಬನ್ನಿರಿ” ಎಂದು ಉತ್ತರಕೊಟ್ಟನು; ಜನರು ಹೊರಟು ಹೋದರು.
और उसने उन से कहा, तीन दिन के बाद फिर मेरे पास आना “चुनाँचे वह लोग चले गए
6 ೬ ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನ ಕಾಲದಲ್ಲಿ ಮಂತ್ರಿಗಳಾಗಿದ್ದ ಹಿರಿಯರನ್ನು ಕರೆಸಿ ಅವರಿಗೆ, “ಈ ಜನರಿಗೆ ಉತ್ತರ ಕೊಡಲು ನೀವು ಯಾವ ಆಲೋಚನೆಯನ್ನು ನನಗೆ ಹೇಳುವಿರಿ?” ಎಂದನು.
तब रहुब'आम बादशाह ने उन बुज़ुर्गों से जो उसके बाप सुलेमान के सामने उसके जीते जी खड़े रहते थे, सलाह की और कहा तुम्हारी क्या सलाह है? मैं इन लोगो को क्या जवाब दूँ?
7 ೭ ಅವರು ಅವನಿಗೆ, “ನೀನು ಈ ಜನರಿಗೆ ದಯತೋರಿಸಿ, ಅವರನ್ನು ಮೆಚ್ಚಿಸುವ ಒಳ್ಳೆಯ ಉತ್ತರ ಕೊಟ್ಟರೆ ಅವರು ಯಾವಾಗಲೂ ನಿನಗೆ ಅಧೀನರಾಗಿರುವರು” ಎಂದರು.
उन्होंने उससे कहा कि अगर तू इन लोगों पर मेहरबान हो और उनको राज़ी करें और इन से अच्छी अच्छी बातें कहे, तो वह हमेशा तेरी ख़िदमत करेंगे।
8 ೮ ಆದರೆ ಅವನು ಅ ಹಿರಿಯರ ಆಲೋಚನೆಯನ್ನು ನಿರಾಕರಿಸಿ, ತನ್ನ ಸಂಗಡವೇ ಬೆಳೆದು ತನಗೆ ಮಂತ್ರಿಗಳಾದ ಯೌವನಸ್ಥರನ್ನು ಕರೆಯಿಸಿದನು.
लेकिन उस ने उन बुज़ुर्गों की सलाह को जो उन्होंने उसे दी थी छोड़कर कर उन जवानों से जिन्होंने उसके साथ परवरिश पाई थी और उसके आगे हाज़िर रहते थे सलाह की।
9 ೯ “ನನ್ನ ತಂದೆಯು ಹೇರಿದ ನೊಗವನ್ನು ಹಗುರ ಮಾಡಬೇಕೆಂದು ಬೇಡಿಕೊಳ್ಳುವ ಈ ಜನರಿಗೆ ಯಾವ ಉತ್ತರವನ್ನು ಕೊಡಬೇಕು? ಈ ವಿಷಯದಲ್ಲಿ ನಿಮ್ಮ ಆಲೋಚನೆ ಏನು?” ಎಂದು ಕೇಳಿದನು.
और उन से कहा तुम मुझे क्या सलाह देते हो कि हम इन लोगों को क्या जवाब दे जिन्होंने मुझ से यह दरखवास्त की है कि उस बोझ को जो तेरे बाप ने हम पर रखा कुछ हल्का कर?
10 ೧೦ ಅವರು ಅವನಿಗೆ, “ನಿನ್ನ ತಂದೆಯು ನಮ್ಮ ಮೇಲೆ ಹೇರಿರುವ ಭಾರವಾದ ನೊಗವನ್ನು ಹಗುರ ಮಾಡು ಎಂಬುದಾಗಿ ನಿನ್ನನ್ನು ಬೇಡಿಕೊಂಡಿರುವ ಈ ಜನರಿಗೆ ನೀನು, ‘ನನ್ನ ತಂದೆಯ ನಡುವಿಗಿಂತ ನನ್ನ ಕಿರುಬೆರಳು ದಪ್ಪವಾಗಿದೆ.
उन जवानों ने जिन्होंने उसके साथ परवरिश पाई थी उस से कहा, तू उन लोगों को जिन्होंने तुझ से कहा तेरे बाप ने हमारे बोझे को भारी किया लेकिन तू उसको हमारे लिए कुछ हल्का कर दे यूँ जवाब देना और उन से कहना कि मेरी छिंगुली मेरे बाप के कमर से भी मोटी है।
11 ೧೧ ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವುದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ; ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳುಕೊರಡೆಗಳಿಂದ ದಂಡಿಸುವೆನು’ ಎಂಬುದಾಗಿ ಹೇಳಬೇಕು” ಎಂದು ಉತ್ತರಕೊಟ್ಟರು.
और मेरे बाप ने तो भारी बोझ तुम पर रखा ही था लेकिन मैं उस बोझ को और भी भारी करूँगा। मेरे बाप ने तुम्हे कोड़ों से ठीक किया लेकिन मैं तुम को बिच्छुयों से ठीक करूँगा।”
12 ೧೨ ಯಾರೊಬ್ಬಾಮನೂ ಮತ್ತು ಜನರೆಲ್ಲರೂ ಅರಸನಾದ ರೆಹಬ್ಬಾಮನ ಅಪ್ಪಣೆಯಂತೆ ಮೂರನೆಯ ದಿನ ಹಿಂತಿರುಗಿ ಅವನ ಬಳಿಗೆ ಬಂದರು.
और जैसा बादशाह ने हुक्म दिया था कि तीसरे दिन मेरे पास फिर आना तीसरे दिन युरब'आम और सब लोग रहब'आम के पास हाज़िर हुए।
13 ೧೩ ಅರಸನಾದ ರೆಹಬ್ಬಾಮನು ಅವರಿಗೆ ಕಠಿಣವಾದ ಉತ್ತರವನ್ನು ಕೊಟ್ಟನು. ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿದನು.
तब बादशाह उनको सख़्त जवाब दिया और रहुब'आम बादशाह ने बुज़ुर्गों की सलाह को छोड़कर।
14 ೧೪ ಯೌವನಸ್ಥರ ಆಲೋಚನೆಗನುಸಾರವಾಗಿ ಜನರಿಗೆ, “ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನೂ ಹೇರಿರುವದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುವೆನು. ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳುಕೊರಡೆಗಳಿಂದ ದಂಡಿಸುವೆನು” ಎಂದು ನುಡಿದನು.
जवानों की सलाह के मुताबिक़ उनसे कहा कि मेरे बाप ने तुम्हारा बोझ भारी किया लेकिन मैं उसको और भी भारी करूँगा। मेरे बाप ने तुमको कोड़ों से ठीक किया लेकिन मैं तुम को बिच्छुओं से ठीक करूँगा।
15 ೧೫ ಅರಸನು ಜನರ ಮಾತನ್ನು ಕೇಳದೆ ಹೋದದ್ದು ದೈವಯೋಗದಿಂದಲೇ. ಈ ಪ್ರಕಾರ ಯೆಹೋವನು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿದ ಮಾತು ನೆರವೇರಿತು.
तब बादशाह ने लोगों की न मानी क्यूँकि यह ख़ुदा ही की तरफ़ से था ताकि ख़ुदावंद उस बात को जो उसने सैलानी अखि़याह की ज़रिए नबात के बेटे युरब'आम को फ़रमाई थी पूरा करे।
16 ೧೬ ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲ ಎಂದು ತಿಳಿದು; ಇಸ್ರಾಯೇಲರೆಲ್ಲರು ಅವನಿಗೆ, “ದಾವೀದನಿಗೂ ನಮಗೂ ಇನ್ನು ಮೇಲೆ ಏನೂ ಸಂಬಂಧವಿಲ್ಲ. ಇಷಯನ ಮಗನಿಗೂ ನಮಗೂ ಯಾವ ಬಾಧ್ಯತೆಯೂ ಇಲ್ಲ. ಇಸ್ರಾಯೇಲರೇ, ನಿಮ್ಮ ನಿಮ್ಮ ಸ್ವತ್ತುಗಳಿಗೆ ಹೋಗಿರಿ; ದಾವೀದನ ಕಡೆಯವರೇ, ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ” ಎಂದು ಹೇಳಿ ತಮ್ಮ ತಮ್ಮ ಗುಡಾರಗಳಿಗೆ ಹಿಂತಿರುಗಿದರು.
जब सब इस्राईलियों ने यह देखा कि बादशाह ने उनकी न मानी तो लोगों ने बादशाह को जवाब दिया और यूँ कहा कि दाऊद के साथ हमारा क्या हिस्सा है? यस्सी के बेटे के साथ हमारी कुछ मीरास नहीं। ऐ इस्राईलियों! अपने अपने डेरे को चले जाओ। अब ऐ दाऊद अपने ही घराने को संभाल। इसलिए सब इस्राईली अपने ख़ेमों को चल दिए।
17 ೧೭ ಯೆಹೂದ ಪಟ್ಟಣದಲ್ಲಿದ್ದ ಇಸ್ರಾಯೇಲರಾದರೋ ಅರಸನಾದ ರೆಹಬ್ಬಾಮನ ಅಧೀನದಲ್ಲಿದ್ದರು.
लेकिन उन बनी इस्राईल पर जो यहूदाह के शहरों में रहते थे रहुब'आम हुकूमत करता रहा।
18 ೧೮ ರೆಹಬ್ಬಾಮನು ಬಿಟ್ಟೀಕೆಲಸದವರ ಮೇಲ್ವಿಚಾರಕನಾದ ಹದೋರಾಮನನ್ನು ಇಸ್ರಾಯೇಲರ ಬಳಿಗೆ ಕಳುಹಿಸಿದಾಗ, ಅವರು ಅವನನ್ನು ಕಲ್ಲೆಸೆದು ಕೊಂದರು. ಆಗ ಅರಸನಾದ ರೆಹಬ್ಬಾಮನು ಬೇಗನೆ ರಥವನ್ನೇರಿ ಯೆರೂಸಲೇಮಿಗೆ ಓಡಿ ಹೋದನು.
तब रहुब'आम बादशाह ने हदुराम को जो बेगारियों का दरोग़ा था भेजा लेकिन बनी इस्राईल ने उसको पथराव किया और वह मर गया। तब रहुब'आम येरूशलेम को भाग जाने के लिए झट अपने रथ पर सवार हो गया।
19 ೧೯ ಇಸ್ರಾಯೇಲರು ಅಂದಿನಿಂದ ಇಂದಿನವರೆಗೂ ದಾವೀದನ ಕುಟುಂಬದವರೊಡನೆ ಸಮಾಧಾನವಾಗಲೇ ಇಲ್ಲ.
तब इस्राईली आज़ के दिन तक दाऊद के घराने से बा'ग़ी है।