< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 12 >

1 ರೆಹಬ್ಬಾಮನು ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಬಲಗೊಂಡ ಮೇಲೆ ಅವನೂ ಮತ್ತು ಅವನ ಪ್ರಜೆಗಳಾದ ಎಲ್ಲಾ ಇಸ್ರಾಯೇಲರೂ ಯೆಹೋವನ ಧರ್ಮೋಪದೇಶವನ್ನು ಬಿಟ್ಟುಬಿಟ್ಟರು.
रहबामाचे सामर्थ्य वाढले. त्याने आपले राज्य बळकट केले. पण त्याचबरोबर त्याने आणि इस्राएल लोकांनी परमेश्वराच्या नियमशास्त्राचे पालन करण्याचे थांबवले.
2 ಅವರು ಯೆಹೋವನಿಗೆ ದ್ರೋಹಮಾಡಿದ್ದರಿಂದ ಅರಸನಾದ ರೆಹಬ್ಬಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ, ಐಗುಪ್ತದ ಅರಸನಾದ ಶೀಶಕನು, ಸೈನಿಕರನ್ನು ಕೂಡಿಸಿಕೊಂಡು ಯೆರೂಸಲೇಮಿಗೆ ವಿರುದ್ಧವಾಗಿ ಹೊರಟನು.
रहबामाच्या कारकिर्दीच्या पाचव्या वर्षी शिशकने यरूशलेमेवर हल्ला चढवला. शिशक हा मिसरचा राजा होता. रहबाम आणि यहूदाचे लोक यांनी परमेश्वराचा मार्ग सोडल्यामुळे असे झाले.
3 ಸಾವಿರದ ಇನ್ನೂರು ರಥಗಳನ್ನೂ, ಅರುವತ್ತು ಸಾವಿರ ಮಂದಿ ರಾಹುತರನ್ನೂ, ಐಗುಪ್ತದಿಂದ ಅಸಂಖ್ಯರಾದ ಲೂಬ್ಯ, ಸುಕ್ಕೀಯ, ಕೂಷ್ಯ ಸೈನಿಕರನ್ನೂ ಕೂಡಿಸಿಕೊಂಡು ಯೆರೂಸಲೇಮಿಗೆ ವಿರುದ್ಧವಾಗಿ ಹೊರಟು,
शिशककडे बारा हजार रथ, साठ हजार घोडेस्वार आणि असंख्य पायदळ होते. त्याच्या सैन्यात लुबी, सुक्की, कुशी हे मिसरातून आलेले लोक होते.
4 ಯೆಹೂದ ದೇಶದ ಕೋಟೆ ಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡ ನಂತರ ಯೆರೂಸಲೇಮನ್ನು ಸಮೀಪಿಸಿದನು.
यहूदातील भक्कम नगरांचा पाडाव केल्यावर शिशकने आपले सैन्य यरूशलेमेला आणले.
5 ಆಗ ಪ್ರವಾದಿಯಾದ‍ ಶೆಮಾಯನು ರೆಹಬ್ಬಾಮನ ಬಳಿಗೂ, ಶೀಶಕನಿಗೆ ಹೆದರಿ ಯೆರೂಸಲೇಮಿನಲ್ಲಿ ಸೇರಿಬಂದಿದ್ದ ಯೆಹೂದ್ಯ ನಾಯಕರ ಬಳಿಗೂ ಬಂದು ಅವರಿಗೆ, “ಯೆಹೋವನು ಹೀಗೆನ್ನುತ್ತಾನೆ, ‘ನೀವು ನನ್ನನ್ನು ಬಿಟ್ಟು ಹೋದುದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಒಪ್ಪಿಸಿದ್ದೇನೆ’” ಎಂದು ಹೇಳಿದನು.
तेव्हा शमाया हा संदेष्टा रहबाम आणि यहूदाच्या वडिलधाऱ्या मंडळीकडे आला. शिशकच्या धास्तीने ही सर्व वडीलधारी मंडळी यरूशलेमेला जमली होती. शमाया रहबामाला आणि या सर्वांना म्हणाला, “परमेश्वराचे म्हणणे असे आहे रहबाम, तू आणि यहूदाचे लोक यांनी माझा त्याग केला आहे. तुमचे आचरण माझ्या नियमांच्या विरुध्द आहे. तेव्हा मीही तुम्हास सोडून शिशकच्या हाती दिले आहे.”
6 ಆಗ ಅರಸನೂ ಮತ್ತು ಇಸ್ರಾಯೇಲರ ನಾಯಕರೂ ಯೆಹೋವನು ನೀತಿವಂತನೆಂದು ಒಪ್ಪಿ ತಮ್ಮನ್ನು ತಾವೇ ತಗ್ಗಿಸಿಕೊಂಡರು.
तेव्हा इस्राएलाचे सरदार आणि राजे यांनी पश्चाताप करून ते विनम्र झाले. “परमेश्वर न्यायी आहे.” असे त्यांनी उदगार काढले.
7 ಯೆಹೋವನ ವಾಕ್ಯವು ಶೆಮಾಯನಿಗೆ, “ಇವರು ತಮ್ಮನ್ನು ತಗ್ಗಿಸಿಕೊಂಡಿದ್ದರಿಂದ ಇವರನ್ನು ಸಂಹರಿಸುವುದಿಲ್ಲ; ಸ್ವಲ್ಪ ಕಾಲದಲ್ಲಿಯೇ ಇವರಿಗೆ ರಕ್ಷಣೆಯನ್ನು ಅನುಗ್ರಹಿಸುವೆನು; ಶೀಶಕನ ಮುಖಾಂತರವಾಗಿ ನನ್ನ ರೌದ್ರವನ್ನು ಯೆರೂಸಲೇಮಿನ ಮೇಲೆ ಸುರಿದು ಬಿಡುವುದಿಲ್ಲ.
ते नम्र झाले आहेत हे परमेश्वराने पाहिले. तेव्हा पुन्हा शमायाला परमेश्वराचा संदेश आला. परमेश्वर त्यास म्हणाला, “राजा आणि ही मंडळी माझ्यापुढे नम्र झाल्यामुळे मी त्यांचा नाश करणार नाही. थोड्याफार प्रमाणात मी त्यांना मुक्त करीन. शिशक मार्फत यरूशलेमेला मी माझ्या कोपाचे लक्ष्य करणार नाही.
8 ಆದರೂ ಅವರು ನನ್ನ ಸೇವೆಗೂ ಅನ್ಯರಾಜ್ಯಗಳ ಸೇವೆಗೂ ಇರುವ ವ್ಯತ್ಯಾಸವು ಗೊತ್ತಾಗುವಂತೆ ಇವರು ಶೀಶಕನಿಗೆ ದಾಸರಾಗಬೇಕು” ಎಂದು ಹೇಳಿದನು.
पण यरूशलेमचे लोक शिशकचे चाकर होतील. माझी सेवा आणि इतर देशांतील राजाची सेवा यामधला भेद त्यांना कळावा म्हणून ते त्याचे अंकित होतील.”
9 ಹೀಗೆ ಯೆರೂಸಲೇಮಿಗೆ ವಿರೋಧವಾಗಿ ಬಂದು ಐಗುಪ್ತ್ಯ ರಾಜನಾದ ಶೀಶಕನು ಯೆಹೋವನ ಆಲಯದ ಮತ್ತು ಅರಮನೆಯ ಎಲ್ಲಾ ದ್ರವ್ಯವನ್ನೂ ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತೆಗೆದುಕೊಂಡು ಹೋದನು.
शिशकने यरूशलेमेवर स्वारी केली आणि परमेश्वराच्या मंदिरातील खजिना लुटून नेला. शिशक हा मिसरचा राजा होता. राजमहालातील खजिनाही त्याने लुटला. शलमोनाने केलेल्या सोन्याच्या ढाली त्याने हस्तगत केल्या.
10 ೧೦ ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ ಅವುಗಳನ್ನು ಅರಮನೆಯ ದ್ವಾರಪಾಲಕರಾಗಿದ್ದ ಮೈಗಾವಲಿನವರ ದಳಪತಿಗೆ ಒಪ್ಪಿಸಿದನು.
१०त्या सोन्याच्या ढालीऐवजी रहबामाने पितळेच्या ढाली केल्या. त्या त्याने महालाचे संरक्षण करणाऱ्या द्वारपालांना दिल्या.
11 ೧೧ ಅರಸನು ಯೆಹೋವನ ಅಲಯಕ್ಕೆ ಹೋಗುವಾಗಲೆಲ್ಲಾ ಮೈಗಾವಲಿನವರು ಅವುಗಳನ್ನು ಹಿಡಿದುಕೊಂಡು ಹೋಗುವರು; ಅಲ್ಲಿಂದ ಹಿಂತಿರುಗಿ ಬಂದ ಮೇಲೆ ಅವುಗಳನ್ನು ತಮ್ಮ ಕೋಣೆಗಳಲ್ಲಿಡುವರು.
११राजा परमेश्वराच्या मंदिरात जात असे तेव्हा ते ढाली घेऊन पुढे होत. नंतर त्या पहारेदारांच्या खोलीत ठेवून देत.
12 ೧೨ ರೆಹಬ್ಬಾಮನು ತನ್ನನ್ನು ತಗ್ಗಿಸಿ ಕೊಂಡದ್ದರಿಂದಲೂ ಯೆಹೂದ್ಯರಲ್ಲಿ ಕೆಲವು ಸುಲಕ್ಷಣಗಳು ತೋರಿ ಬಂದಿದ್ದರಿಂದಲೂ ಯೆಹೋವನು ರೆಹಬ್ಬಾಮನ ಮೇಲಣ ಕೋಪವನ್ನು ಬಿಟ್ಟನು; ಅವನನ್ನು ಪೂರ್ಣವಾಗಿ ಹಾಳುಮಾಡಲಿಲ್ಲ.
१२रहबाम असा नम्र झाल्यामुळे परमेश्वराचा त्याच्यावरील राग कमी झाला. त्याचा परमेश्वराने पूर्ण नायनाट केला नाही. शिवाय यहूदात थोडा चांगुलपणाही शिल्लक होता.
13 ೧೩ ಅರಸನಾದ ರೆಹಬ್ಬಾಮನು ಯೆರೂಸಲೇಮಿನಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಆಳುವವನಾದನು. ಅವನು ತನ್ನ ನಲ್ವತ್ತೊಂದನೆಯ ವರ್ಷ ತುಂಬಿದ ಮೇಲೆ ಪಟ್ಟಕ್ಕೆ ಬಂದು ಯೆಹೋವನು ತನ್ನ ಹೆಸರಿಗೋಸ್ಕರ ಇಸ್ರಾಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ಹದಿನೇಳು ವರ್ಷ ಆಳಿದನು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ.
१३रहबामाने यरूशलेमामध्ये आपले सामर्थ्य वाढवले व राज्य केले. तो राज्यावर आला तेव्हा एक्के चाळीस वर्षांचा होता. त्याने यरूशलेमामध्ये सतरा वर्षे राज्य केले, इस्राएलच्या सर्व वंशांमधून परमेश्वराने यरूशलेमची निवड केली होती. आपले नाव रहावे म्हणून त्याने यरूशलेम निवडले होते. रहबामाच्या आईचे नाव नामा; नामा अम्मोनीण नगरातली होती.
14 ೧೪ ಅವನು ಯೆಹೋವನನ್ನು ಅನುಸರಿಸುವುದಕ್ಕೆ ಮನಸ್ಸುಮಾಡದೆ ದ್ರೋಹಿಯಾದನು.
१४रहबामाने वाईट गोष्टी केल्या कारण परमेश्वराच्या आज्ञांचे पालन करण्याविषयी त्याने मनात निश्चय केला नव्हता.
15 ೧೫ ರೆಹಬ್ಬಾಮನ ಪೂರ್ವೋತ್ತರ ಕೃತ್ಯಗಳು ಪ್ರವಾದಿಯಾದ ಶೆಮಾಯ, ದರ್ಶಕನಾದ ಇದ್ದೋ ಎಂಬುವರ ಚರಿತ್ರೆಗಳ ವಂಶಾವಳಿ ಭಾಗದಲ್ಲಿ ಬರೆದಿರುತ್ತವೆ. ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧನಡೆಯುತ್ತಿತ್ತು.
१५शमाया हा संदेष्टा आणि इद्दो हा द्रष्टा यांच्या इतिहासात रहबामाने आपल्या कारकीर्दीत केलेल्या सर्व गोष्टींची पूर्ण हकिकत आहे. शमाया आणि इद्दो वंशाळींचा इतिहास लिहीत. रहबाम आणि यराबाम या दोघांमध्ये नित्य लढाया होत.
16 ೧೬ ರೆಹಬ್ಬಾಮನು ತನ್ನ ಪೂರ್ವಿಕರ ಬಳಿಗೆ ಸೇರಲು, ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಲಾಯಿತು. ಅವನ ಮಗನಾದ ಅಬೀಯನು ಅವನ ನಂತರ ಅರಸನಾದನು.
१६रहबामाने मृत्यूनंतर आपल्या पूर्वजांबरोबर विश्रांती घेतली. दावीद नगरात त्याचे दफन झाले. त्याचा पुत्र अबीया राजा झाला.

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 12 >