< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 15 >

1 ಆಗ ಓದೇದನ ಮಗನಾದ ಅಜರ್ಯನ ಮೇಲೆ ದೇವರ ಆತ್ಮವು ಬಂದಿತು.
परमेश्‍वरका आत्‍मा ओदेदका छोरा अजर्याहमाथि आउनुभयो ।
2 ಅವನು ಆಸನನ್ನು ಎದುರುಗೊಳ್ಳುವುದಕ್ಕೆ ಹೋಗಿ ಅವನಿಗೆ, “ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರೇ, ಕಿವಿಗೊಡಿರಿ, ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟುಬಿಡುವನು.
तिनी आसालाई भेट गर्न गए र तिनलाई भने, “ए आसा, यहूदा र बेन्‍यामीनका सबै जना, मेरा कुरा सुन्‍नुहोस्: जब तपाईंहरू परमप्रभुसँग रहनुहुन्छ, तब उहाँ पनि तपाईंहरूसँग हुनुहुन्‍छ । तपाईंहरूले उहाँलाई खोज्नुभयो भने, तपाईंहरूले उहाँलाई भेट्टाउनुहुनेछ । तर तपाईंहरूले उहाँलाई त्‍याग्‍नुभयो भने उहाँले पनि तपाईंहरूलाई त्‍याग्‍नुहुनेछ ।
3 ಆಗ ಇಸ್ರಾಯೇಲರಿಗೆ ಬಹುಕಾಲದಿಂದ ಸತ್ಯವಾದ ದೇವರೂ, ಬೋಧಿಸುವ ಯಾಜಕರೂ ಹಾಗೂ ಧರ್ಮಶಾಸ್ತ್ರವೂ ಇರಲಿಲ್ಲ.
अब धेरै समयसम्‍म इस्राएल साँचो परमेश्‍वर, सिकाउने पुजारी र व्‍यवस्‍थाविना थियो ।
4 ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವನ ಕಡೆಗೆ ತಿರುಗಿಕೊಂಡರು. ಅವರು ಆತನನ್ನು ಹುಡುಕಿದಾಗ ಆತನು ಅವರಿಗೆ ಸಿಕ್ಕಿದನು.
तर जब आफ्‍नो कष्‍टमा तिनीहरू परमप्रभु इस्राएलका परमेश्‍वरतिर फर्के र उहाँलाई खोजे, तब तिनीहरूले उहाँलाई पाउन सके ।
5 ಆ ಕಾಲದಲ್ಲಿ ಯಾರಿಗೂ ಸಮಾಧಾನವಾಗಿ ತಿರುಗಾಡುವುದಕ್ಕೆ ಸಾಧ್ಯವಾಗುತ್ತಾ ಇರಲಿಲ್ಲ; ದೇಶ ನಿವಾಸಿಗಳೆಲ್ಲರೂ ಕಳವಳಗೊಂಡಿದ್ದರು.
त्यसबेला यहाँबाट यात्रा गरेर टाढा जाने र यात्रा गरेर यहाँ आउने दुबैलाई शान्ति थिएन । बरू, देशमा बसोबास गर्ने सबैमाथि ठूलो संकष्‍ट थियो ।
6 ಒಂದು ಜನಾಂಗವು ಇನ್ನೊಂದು ಜನಾಂಗವನ್ನೂ, ಒಂದು ಪಟ್ಟಣದವರು ಇನ್ನೊಂದು ಪಟ್ಟಣದವರನ್ನೂ ಹಾಳು ಮಾಡುತ್ತಿದ್ದರು. ದೇವರು ಎಲ್ಲಾ ತರಹ ಕಷ್ಟದಿಂದಲೂ ಅವರನ್ನು ತಳಮಳಗೊಳಿಸಿದ್ದನು.
तिनीहरू टुक्रा-टुक्रा पारिए, राष्‍ट्रको विरूद्ध राष्‍ट्र, र सहरको विरूद्ध सहर, किनकि परमेश्‍वरले तिनीहरूलाई सबै किसिमका दु: खले समस्‍यामा पार्नुभयो ।
7 ನೀವಾದರೋ ಸ್ಥಿರಚಿತ್ತರಾಗಿರಿ; ನಿಮ್ಮ ಕೈಗಳು ಜೋಲು ಬೀಳದಿರಲಿ. ನಿಮ್ಮ ಪ್ರಯತ್ನಕ್ಕೆ ತಕ್ಕ ಫಲ ಸಿಕ್ಕುವುದು” ಎಂದು ಹೇಳಿದನು.
तर तपाईंहरू बलियो हुनुहोस्, आफ्ना हातहरू कमजोर हुन नदिनुहोस्, किनकि तपाईंका कामहरूको प्रतिफल दिइनेछ ।”
8 ಆಸನು ಓದೇದನ ಮಗನಾದ ಅಜರ್ಯ ಪ್ರವಾದಿಯ ಈ ಮಾತುಗಳನ್ನು ಕೇಳಿದಾಗ ಧೈರ್ಯಗೊಂಡನು. ಯೆಹೂದ, ಬೆನ್ಯಾಮೀನ್ ಪ್ರಾಂತ್ಯಗಳಲ್ಲಿಯೂ ತಾನು ಸ್ವಾಧೀನಮಾಡಿಕೊಂಡ ಎಫ್ರಾಯೀಮ್ ಪರ್ವತ ಪ್ರದೇಶದ ಪಟ್ಟಣಗಳಲ್ಲಿಯೂ ಇದ್ದ ಅಸಹ್ಯ ಪ್ರತಿಮೆಗಳನ್ನು ತೆಗೆದು ಹಾಕಿಸಿದನು. ಯೆಹೋವನ ಆಲಯಕ್ಕೆ ಸೇರಿದ ಮಂಟಪದ ಎದುರಿಗಿದ್ದ ಯೆಹೋವನ ಯಜ್ಞವೇದಿಯನ್ನು ಜೀರ್ಣೋದ್ಧಾರ ಮಾಡಿಸಿದನು.
जब आसाले यी कुरा, ओदेदका छोरा अजर्याह अगमवक्ताका अगमवाणी सुने, तब तिनको साहस बढ्यो, र यहूदा र बेन्‍यामीनका सारा देश र तिनले कब्‍जा गरेका एफ्राइमका पहाडी देशका सहरहरूबाट घिनलाग्‍दा कुराहरू सबै हटाइदिए, र तिनले परमप्रभुको मन्‍दिरका दलानको अगि भएको परमप्रभुको वेदी पनि मरम्‍मत गरे ।
9 ಆ ಮೇಲೆ ಆಸನು ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರನ್ನೂ ತನ್ನ ದೇವರಾದ ಯೆಹೋವನು ತನ್ನ ಸಂಗಡ ಇರುವುದನ್ನು ನೋಡಿ ಇಸ್ರಾಯೇಲರೊಡನೆ ತನ್ನೊಡನೆ ಗುಂಪುಗುಂಪಾಗಿ ಕೂಡಿಕೊಂಡು ಯೆಹೂದ ದೇಶದಲ್ಲಿ ನೆಲಸಿದ್ದ ಎಫ್ರಾಯೀಮ್, ಮನಸ್ಸೆ ಹಾಗೂ ಸಿಮೆಯೋನ್ ಕುಲಗಳವರನ್ನೂ ಕರೆಸಿಕೊಂಡನು.
तिनले सारा यहूदा र बेन्‍यामीन र एफ्राइम, मनश्‍शे र शिमियोनबाट तिनीहरूसँग बस्‍नेहरूलाई भेला गरे । किनभने परमप्रभु तिनका परमेश्‍वर तिनीसँग हुनुभएको तिनीहरूले देखेर इस्राएलबाट तिनीहरू धेरै सङ्‍ख्‍यामा तिनीकहाँ आए ।
10 ೧೦ ಅವರು ಆಸನ ಆಳ್ವಿಕೆಯ ಹದಿನೈದನೆಯ ವರ್ಷದ ಮೂರನೆಯ ತಿಂಗಳಿನಲ್ಲಿ ಯೆರೂಸಲೇಮಿಗೆ ಒಟ್ಟಾಗಿ ಕೂಡಿ ಬಂದರು.
यसैले आसाका राजकालको पन्‍ध्रौँ वर्षको तेस्रो महिनामा तिनीहरू यरूशलेममा एकसाथ भेला भए ।
11 ೧೧ ಯೆಹೋವನಿಗಾಗಿ ಆ ದಿನ ತಾವು ತಂದ ಕೊಳ್ಳೆಯಿಂದ ಏಳು ನೂರು ಹೋರಿಗಳನ್ನೂ, ಏಳು ಸಾವಿರ ಕುರಿಗಳನ್ನೂ ಯಜ್ಞಮಾಡಿದರು.
त्‍यस दिन तिनीहरूले ल्‍याएको लूटका मालबाट परमप्रभुलाई सात सय साँढे र सात हजार भेडाहरू र बाख्राहरू बलिदान चढाए ।
12 ೧೨ ಅವರು ತಾವು ಪೂರ್ಣ ಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ತಮ್ಮ ಪೂರ್ವಿಕರ ದೇವರಾದ ಯೆಹೋವನ ಭಕ್ತರಾಗಿರುವೆವೆಂದೂ ಒಡಂಬಡಿಕೆ ಮಾಡಿದರು.
तिनीहरू आफ्‍ना सारा हृदय र आफ्‍ना सारा प्राणले परमप्रभु आफ्‍ना पुर्खाका परमेश्‍वरको खोजी गर्नलाई करार बाँधे ।
13 ೧೩ ಇದಲ್ಲದೆ, ತಮ್ಮಲ್ಲಿ ಇಸ್ರಾಯೇಲ್ ದೇವರಾದ ಯೆಹೋವನ ಭಕ್ತಿಯನ್ನು ಬಿಟ್ಟವರು ಚಿಕ್ಕವರಾಗಲಿ, ದೊಡ್ಡವರಾಗಲಿ, ಗಂಡಸರಾಗಲಿ ಹೆಂಗಸರಾಗಲಿ, ಅವರೆಲ್ಲರನ್ನೂ ಕೊಲ್ಲಲಾಗುವುದು ಎಂದು
अनि परमप्रभु इस्राएलका परमेश्‍वरलाई नखोज्‍ने जोसुकैलाई मारिनुपर्छ भन्‍ने कुरामा तिनीहरूले सहमती गरेः चाहे त्यो व्यक्ति सानो होस् वा ठूलो होस्, चाहे पुरुष होस् वा स्‍त्री होस् ।
14 ೧೪ ತುತ್ತೂರಿ ಕೊಂಬುಗಳನ್ನೂ ಊದಿಸಿ ದೊಡ್ಡ ಅರ್ಭಟದೊಡನೆ ಯೆಹೋವನಿಗೆ ಪ್ರಮಾಣಮಾಡಿದರು.
तिनीहरूले ठूलो सोर, चिच्‍च्‍याएर, र तुरहीहरू र नरसिङ्गा बजाउँदै परमप्रभुसँग शपथ खाए ।
15 ೧೫ ಈ ಪ್ರಮಾಣದ ನಿಮಿತ್ತವಾಗಿ ಯೆಹೂದ್ಯರೆಲ್ಲರಿಗೂ ಸಂತೋಷವಾಯಿತು. ಅವರು ಪೂರ್ಣಮನಸ್ಸಿನಿಂದ ಪ್ರಮಾಣಮಾಡಿ ತುಂಬಾ ಸಂತೋಷದಿಂದ ಯೆಹೋವನನ್ನು ಬಯಸಿದ ಕಾರಣ ಆತನು ಅವರಿಗೆ ಪ್ರಸನ್ನನಾಗಿ ಎಲ್ಲಾ ಕಡೆಗಳಿಂದಲೂ ಅವರಿಗೆ ಸಮಾಧಾನವನ್ನು ಅನುಗ್ರಹಿಸಿದನು.
सारा यहूदा शपथमा आनन्‍दित भयो, किनकि तिनीहरूले आफ्‍ना पूरा हृदयले शपथ खाएका थिए, र तिनीहरूले आफ्‍ना सारा इच्‍छाले परमेश्‍वरलाई खोजे, र तिनीहरूले उहाँलाई पाउन सके । तिनीहरूका वरिपरि सबैतिरबाट परमप्रभुले तिनीहरूलाई शान्ति दिनुभयो ।
16 ೧೬ ಅರಸನಾದ ಆಸನ ಅಜ್ಜಿಯಾದ ಮಾಕಳು ಅಶೇರ ದೇವತೆಯ ಒಂದು ಅಸಹ್ಯ ಮೂರ್ತಿಯನ್ನು ಮಾಡಿಸಿಕೊಂಡಿದ್ದಳು. ಆದುದರಿಂದ ಅವನು ಆಕೆಯನ್ನು ರಾಜಮಾತೆಯ ಸ್ಥಾನದಿಂದ ತೆಗೆದುಹಾಕಿದನು. ಅಲ್ಲದೆ ಆ ಮೂರ್ತಿಯನ್ನು ತೆಗೆದು ಕಿದ್ರೋನ್ ಹಳ್ಳದ ಬಳಿಯಲ್ಲಿ ಚೂರು ಚೂರು ಮಾಡಿ ಸುಟ್ಟುಹಾಕಿಸಿದನು.
तिनले आफ्‍नी हजुरआमा माकालाई पनि राजमाताको पदबाट हटाइदिए, किनभने तिनले अशेरा देवीको खम्‍बोबाट घिनलाग्‍दो मूर्ति बनाएकी थिइन् । आसाले त्‍यो घिनलाग्दो मूर्तिलाई काटेर ढालिदिए, त्‍यसलाई धुलोपिठो पारे र किद्रोन खोल्‍सामा जलाइदिए ।
17 ೧೭ ಅವನು ಇಸ್ರಾಯೇಲ್ ಪ್ರಾಂತ್ಯದಲ್ಲಿದ್ದ ಪೂಜಾಸ್ಥಳಗಳನ್ನು ಹಾಳು ಮಾಡದೆ ಇದ್ದರೂ ಆಸನು ತನ್ನ ಜೀವಮಾನದಲ್ಲೆಲ್ಲಾ ಯೆಹೋವನಿಗೆ ಯಥಾರ್ಥಚಿತ್ತನಾಗಿ ನಡೆದುಕೊಂಡನು.
तर डाँडाहरूमा भएका अल्‍गा थानहरू इस्राएलबाट हटाइएनन् । तापनि आसाको जीवनकालभरि तिनको हृदय विश्‍वासयोग्य रहिरह्यो ।
18 ೧೮ ತನ್ನ ತಂದೆಯೂ ತಾನೂ ದೇವರಿಗೆ ಪ್ರತಿಷ್ಠಿಸಿದ್ದ ಬೆಳ್ಳಿಬಂಗಾರವನ್ನೂ, ಪಾತ್ರೆಗಳನ್ನೂ ದೇವಾಲಯದಲ್ಲಿ ತಂದಿಟ್ಟನು.
तिनले आफ्‍ना पिताले अर्पण गरेका सुन, चाँदी र भाँडाकुँडाहरू परमेश्‍वरको मन्‍दिरमा ल्‍याए ।
19 ೧೯ ಆಸನ ಆಳ್ವಿಕೆಯ ಮೂವತ್ತೈದನೆಯ ವರ್ಷದವರೆಗೂ ಯುದ್ಧವಿರಲಿಲ್ಲ.
आसाको राजकालको पैँतिसौँ वर्षसम्‍म कुनै युद्ध भएन ।

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 15 >