< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 24 >
1 ೧ ಯೆಹೋವಾಷನು ಅರಸನಾದಾಗ ಏಳು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ನಲ್ವತ್ತು ವರ್ಷ ರಾಜ್ಯಭಾರ ಮಾಡಿದನು. ಬೇರ್ಷೆಬದವಳಾದ ಚಿಬ್ಯಳು ಅವನ ತಾಯಿ.
၁ယောရှသည်သက်တော်ခုနစ်နှစ်ရှိသောအခါ ယုဒပြည်ဘုရင်အဖြစ်နန်းတက်၍ ယေရု ရှလင်မြို့၌အနှစ်လေးဆယ်တိုင်တိုင်နန်းစံ လေသည်။ သူ၏မယ်တော်မှာဗေရရှေဘမြို့ သူဇိဗိဖြစ်၏။-
2 ೨ ಯೆಹೋವಾಷ ಯಾಜಕನಾದ ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಚಿತ್ತಾನುಸಾರವಾಗಿ ನಡೆದುಕೊಳ್ಳುತ್ತಿದ್ದನು.
၂သူသည်ယဇ်ပုရောဟိတ်ယောယဒအသက် ရှင်သမျှကာလပတ်လုံး ထာဝရဘုရား နှစ်သက်တော်မူသောအမှုကိုပြု၏။-
3 ೩ ಯೆಹೋಯಾದನು, ಯೆಹೋವಾಷನಿಗೆ ಇಬ್ಬರು ಕನ್ಯೆಯರನ್ನು ಮದುವೆ ಮಾಡಿಸಿದನು; ಅರಸನು ಗಂಡು ಹೆಣ್ಣು ಮಕ್ಕಳನ್ನು ಪಡೆದನು.
၃ယောယဒသည်ယောရှအတွက်မိဖုရား နှစ်ပါးကိုရွေးချယ်ပေး၏။ ယောရှသည် လည်းထိုမိဖုရားများဖြင့်သားသမီး များကိုရရှိလေသည်။
4 ೪ ಕ್ರಮೇಣ ಯೆಹೋವಾಷನು ಯೆಹೋವನ ಆಲಯವನ್ನು ಜೀರ್ಣೋದ್ಧಾರ ಮಾಡುವುದಕ್ಕೆ ಮನಸ್ಸು ಮಾಡಿದನು.
၄ယောရှသည်နန်းတက်ပြီးနောက်ကာလအတန် ကြာသောအခါ ထာဝရဘုရား၏ဗိမာန် တော်ကိုမွမ်းမံပြင်ဆင်ရန်အကြံရှိတော် မူ၏။-
5 ೫ ಯಾಜಕರನ್ನೂ ಲೇವಿಯರನ್ನೂ ಒಟ್ಟಿಗೆ ಸೇರಿಸಿ ಅವರಿಗೆ, “ನೀವು ಯೆಹೂದದ ಪಟ್ಟಣಗಳಿಗೆ ಹೋಗಿ, ನಿಮ್ಮ ದೇವರಾದ ಯೆಹೋವನ ಆಲಯದ ವಾರ್ಷಿಕ ಜೀರ್ಣೋದ್ಧಾರ ಮಾಡುವುದಕ್ಕಾಗಿ ಎಲ್ಲಾ ಇಸ್ರಾಯೇಲರಿಂದ ಹಣ ಸಂಗ್ರಹಿಸಿರಿ; ಈ ಕಾರ್ಯವನ್ನು ಶೀಘ್ರವಾಗಿ ನೆರವೇರಿಸಿರಿ” ಎಂದು ಆಜ್ಞಾಪಿಸಿದನು. ಆದರೂ ಲೇವಿಯರು ಅವಸರ ಮಾಡಲಿಲ್ಲ.
၅သူသည်ယဇ်ပုရောဟိတ်များနှင့်လေဝိအနွယ် ဝင်များအားယုဒပြည်အမြို့မြို့သို့စေလွှတ် ၍ ဗိမာန်တော်ကိုနှစ်စဉ်မွမ်းမံပြင်ဆင်ရန် အတွက်ပြည်သူအပေါင်းတို့ထံမှ ငွေအလုံ အလောက်ကောက်ခံစေတော်မူ၏။ မင်းကြီး သည်ဤအမှုကိုဆောလျင်စွာဆောင်ရွက် ရန်အမိန့်ပေးခဲ့သော်လည်း လေဝိအနွယ် ဝင်တို့သည်ဖင့်နွဲလျက်နေကြ၏။-
6 ೬ ಆದುದರಿಂದ ಅರಸನು ಅವರ ಮುಖ್ಯಸ್ಥನಾದ ಯೆಹೋಯಾದನನ್ನು ಕರೆಯಿಸಿ ಅವನಿಗೆ, “ಯೆಹೋವನ ಸೇವಕನಾದ ಮೋಶೆಯ ವಿಧಿಗನುಸಾರವಾಗಿ ಇಸ್ರಾಯೇಲ್ ಸಮೂಹದವರೆಲ್ಲರು ದೇವದರ್ಶನದ ಗುಡಾರಕ್ಕೋಸ್ಕರ ಕೊಡಬೇಕಾದ ಕಾಣಿಕೆಯನ್ನು ಈ ಲೇವಿಯರು ಯೆಹೂದ್ಯರಿಂದಲೂ ಯೆರೂಸಲೇಮಿನ ಜನರಿಂದಲೂ ಕೂಡಿಸುವ ಹಾಗೆ ನೀನೇಕೆ ನೋಡಿಕೊಳ್ಳಲಿಲ್ಲ?
၆သို့ဖြစ်၍သူသည်ထိုသူအပေါင်းတို့၏ ခေါင်းဆောင်ယောယဒကိုခေါ်ပြီးလျှင်``ထာ ဝရဘုရားကိန်းဝပ်တော်မူရာတဲတော် အတွက် ပြည်သူတို့ပေးဆောင်ရန်ထာဝရ ဘုရား၏အစေခံမောရှေပြဋ္ဌာန်းသည့် အလှူငွေကို လေဝိအနွယ်ဝင်တို့အား အဘယ်ကြောင့်ယုဒပြည်နှင့်ယေရုရှလင် မြို့မှမကောက်ခံစေပါသနည်း'' ဟုမေး တော်မူ၏။
7 ೭ ಅತಿದುಷ್ಟಳಾದ ಅತಲ್ಯಳ ಮನೆಯವರು ದೇವಾಲಯವನ್ನು ಹಾಳುಮಾಡಿ, ಯೆಹೋವನ ಆಲಯದ ಪ್ರತಿಷ್ಠಿತ ವಸ್ತುಗಳನ್ನು ಬಾಳನಿಗಾಗಿ ಕೊಟ್ಟು ಬಿಟ್ಟಿದ್ದಾರಲ್ಲಾ?” ಎಂದು ಹೇಳಿದನು.
၇(ဖောက်ပြန်ဆိုးညစ်သည့်အမျိုးသမီး အာသလိ၏နောက်လိုက်တို့သည် ဗိမာန်တော် ကိုဖျက်ဆီးပြီးလျှင်အမြတ်တနိုးထားအပ် သည့်ပစ္စည်းအသုံးအဆောင်များကို ဗာလ ဘုရားအားဝတ်ပြုကိုးကွယ်ရာတွင် အသုံးပြုခဲ့ကြသတည်း။)
8 ೮ ಅನಂತರ ಅರಸನು ಒಂದು ಪೆಟ್ಟಿಗೆಯನ್ನು ಮಾಡಿಸಿ ಅದನ್ನು ಯೆಹೋವನ ಆಲಯದ ಬಾಗಿಲಿನ ಹೊರಗೆ ಇರಿಸಿದನು.
၈မင်းကြီးသည်လေဝိအနွယ်ဝင်တို့အားအလှူ ခံသေတ္တာကိုပြုလုပ်စေ၍ ဗိမာန်တော်တံခါး ဝတွင်ထားရှိစေတော်မူ၏။-
9 ೯ ದೇವರ ಸೇವಕನಾದ ಮೋಶೆಯು ಅರಣ್ಯದಲ್ಲಿ ವಿಧಿಸಿದಂತೆ, ಇಸ್ರಾಯೇಲರು ಯೆಹೋವನಿಗೋಸ್ಕರ ಕೊಡಬೇಕಾದ ಕಾಣಿಕೆಯನ್ನು ತಂದು ಕೊಡಬೇಕು ಎಂಬುದಾಗಿ ಯೆಹೂದದಲ್ಲಿಯೂ, ಯೆರೂಸಲೇಮಿನಲ್ಲಿಯೂ ಪ್ರಕಟಿಸಿದನು.
၉သူတို့သည်ယေရုရှလင်မြို့နှင့်ယုဒပြည် တစ်လျှောက်လုံးရှိလူအပေါင်းတို့အား တော ကန္တာရတွင်ဘုရားသခင်၏အစေခံမောရှေ ကောက်ခံခဲ့သည်အတိုင်း ထာဝရဘုရားထံ တော်သို့အလှူငွေများကိုယူဆောင်လာ ကြရန်ထုတ်ဆင့်ကြေညာလေသည်။-
10 ೧೦ ಎಲ್ಲಾ ಪ್ರಭುಗಳೂ, ಜನರೂ ಸಂತೋಷದಿಂದ ಬೇಕಾಗುವಷ್ಟು ಹಣವನ್ನು ಪೆಟ್ಟಿಗೆಯಲ್ಲಿ ತಂದು ಹಾಕಿದರು.
၁၀ပြည်သူများနှင့်သူတို့၏ခေါင်းဆောင်များ သည်ဝမ်းမြောက်စွာဖြင့် မိမိတို့အလှူငွေ များကိုယူဆောင်ကာအလှူခံသေတ္တာ ပြည့်အောင်ထည့်ဝင်ကြကုန်၏။-
11 ೧೧ ಪೆಟ್ಟಿಗೆ ತುಂಬಾ ಹಣವಿರುತ್ತದೆಂದು ಕಂಡು ಬಂದಾಗೆಲ್ಲಾ ಲೇವಿಯರು ಪೆಟ್ಟಿಗೆಯನ್ನು, ಆಸ್ಥಾನದ ಅಧಿಕಾರಿಗಳ ಬಳಿಗೆ ತರುತ್ತಿದ್ದರು. ಆಗ ಅರಸನ ಲೇಖಕನೂ, ಮಹಾಯಾಜಕನ ಉದ್ಯೋಗಸ್ಥನೂ ಬಂದು ಅದನ್ನು ತೆರವು ಮಾಡಿ ಮತ್ತೆ ಅದನ್ನು ಅದರ ಸ್ಥಳದಲ್ಲಿಡುತ್ತಿದ್ದರು.
၁၁နေ့စဉ်နေ့တိုင်းလေဝိအနွယ်ဝင်တို့သည် ထို သေတ္တာကိုတာဝန်ခံအရာရှိထံသို့ယူ ဆောင်သွားရကြလေသည်။ သေတ္တာပြည့် သည့်အခါတိုင်းဘုရင့်အတွင်းဝန်နှင့်ယဇ် ပုရောဟိတ်မင်း၏ကိုယ်စားလှယ်တစ်ဦး သည်လာ၍ ငွေများကိုထုတ်ယူပြီးလျှင် သေတ္တာကိုနေရာတကျပြန်၍ထားရ ကြ၏။ ဤနည်းအားဖြင့်သူတို့သည်ငွေ အမြောက်အမြားကိုရရှိကြလေသည်။
12 ೧೨ ಅರಸನೂ ಯೆಹೋಯಾದನೂ ಅದನ್ನು ಯೆಹೋವನ ಆಲಯದ ಕೆಲಸವನ್ನು ನಡೆಸುವವರಿಗೆ ಒಪ್ಪಿಸಿದರು. ಅವರು ಯೆಹೋವನ ಆಲಯದ ಜೀರ್ಣೋದ್ಧಾರಕ್ಕಾಗಿ ಶಿಲ್ಪಿಗಳನ್ನೂ, ಬಡಗಿಯರನ್ನೂ, ಅದನ್ನು ಭದ್ರಪಡಿಸುವುದಕ್ಕಾಗಿ ಕಮ್ಮಾರರನ್ನೂ, ಕಂಚುಗಾರರನ್ನೂ ಕೆಲಸಕ್ಕೆ ನೇಮಿಸಿದರು.
၁၂မင်းကြီးနှင့်ယောယဒသည် ထိုငွေကိုဗိမာန် တော်မွမ်းမံပြင်ဆင်မှုလုပ်ငန်းကြီးကြပ်သူ များ၏လက်သို့ပေးအပ်ကြ၏။ ကြီးကြပ်သူ တို့သည်မွမ်းမံပြင်ဆင်မှုအတွက် ပန်းရန် သမား၊ လက်သမား၊ ပန်းပဲ၊ ပန်းတဉ်း သမားတို့ကိုငှားရမ်းကြ၏။-
13 ೧೩ ಕೆಲಸ ಮಾಡುವವರು ಆಸಕ್ತಿಯಿಂದ ಜೀರ್ಣೋದ್ಧಾರದ ಕೆಲಸವನ್ನು ಮಾಡಿ ಮುಗಿಸಿದರು. ಹೀಗೆ ಅವರು ದೇವಾಲಯವನ್ನು ಭದ್ರಪಡಿಸಿ ಪೂರ್ವಸ್ಥಿತಿಗೆ ತಂದರು.
၁၃ထိုအလုပ်သမားအားလုံးပင်အလုပ်ကို ကြိုးစားလုပ်ကိုင်လျက် ဗိမာန်တော်ကိုနဂို အတိုင်းခိုင်ခိုင်ခံ့ခံ့ပြန်လည်ရောက်ရှိစေ ကြ၏။-
14 ೧೪ ಕೆಲಸ ಮುಗಿದಾಗ ಅವರು ಉಳಿದ ಹಣವನ್ನು ಅರಸನಿಗೂ, ಯೆಹೋಯಾದನಿಗೂ ಒಪ್ಪಿಸಿದರು. ಇವರು ಅದರಿಂದ ಯೆಹೋವನ ಆಲಯದ ಆರಾಧನೆಗಾಗಿಯೂ, ಯಜ್ಞಸಮರ್ಪಣೆಗಾಗಿಯೂ ಉಪಯೋಗವಾಗುವ ಧೂಪಾರತಿ, ಬೆಳ್ಳಿಬಂಗಾರದ ಪಾತ್ರೆ ಮೊದಲಾದ ಸಾಮಾನುಗಳನ್ನು ಮಾಡಿಸಿದರು. ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಆಲಯದಲ್ಲಿ ಪ್ರತಿನಿತ್ಯವೂ ಸರ್ವಾಂಗಹೋಮಯಜ್ಞವು ನಡೆಯುತ್ತಿತ್ತು.
၁၄သူတို့သည်မွမ်းမံပြင်ဆင်မှုပြီးစီးသွားသော အခါ မင်းကြီးနှင့်ယောယဒတို့သည်ပိုလျှံ သောရွှေ၊ ငွေကိုဗိမာန်တော်အတွက်ခွက်ဖလား များနှင့်အခြားအသုံးအဆောင်များကိုပြု လုပ်ရာတွင်အသုံးပြုကြ၏။ ယောယဒအသက်ရှင်နေသမျှကာလပတ်လုံး ဗိမာန်တော်တွင်ယဇ်များကိုအစဉ်ပူဇော်လေ့ ရှိ၏။-
15 ೧೫ ಯೆಹೋಯಾದನು ಮುಪ್ಪಿನ ಮುದುಕನಾಗಿ ಮರಣ ಹೊಂದಿದನು; ಅವನು ಸಾಯುವಾಗ ನೂರಮೂವತ್ತು ವರ್ಷದವನಾಗಿದ್ದನು.
၁၅သူသည်အလွန်အို၍အသက်တစ်ရာ့သုံး ဆယ်ရှိသောအခါကွယ်လွန်လေသည်။-
16 ೧೬ ಅವನು ಇಸ್ರಾಯೇಲರ ಕುರಿತಾಗಿಯೂ ದೇವರ ಮತ್ತು ದೇವಾಲಯದ ವಿಷಯದಲ್ಲಿಯೂ ಸತ್ಕಾರ್ಯಗಳನ್ನು ಮಾಡಿದ್ದರಿಂದ ಅವನ ಶವವನ್ನು ದಾವೀದನಗರದೊಳಗೆ ರಾಜಸ್ಮಶಾನದಲ್ಲಿ ಸಮಾಧಿ ಮಾಡಿದರು.
၁၆ဣသရေလပြည်သူတို့အတွက်၊ ဘုရားသခင် အတွက်နှင့် ဗိမာန်တော်အတွက်ဆောင်ရွက်ခဲ့ သည်ကိုအသိအမှတ်ပြုသည့်အနေဖြင့် ပြည်သူတို့သည်သူ၏အလောင်းကို ဒါဝိဒ် မြို့ဘုရင်တို့၏သင်္ချိုင်းတော်တွင်သင်္ဂြိုဟ်ကြ၏။
17 ೧೭ ಯೆಹೋಯಾದನು ಮೃತನಾದ ಮೇಲೆ ಯೆಹೂದ ಪ್ರಭುಗಳು ಅರಸನ ಬಳಿಗೆ ಬಂದು ಅವನಿಗೆ ಅಡ್ಡಬಿದ್ದು ಅವನನ್ನು ಒಲಿಸಿಕೊಂಡರು.
၁၇သို့ရာတွင်ယောယဒကွယ်လွန်ပြီးသည်နောက် ယုဒအမျိုးသားခေါင်းဆောင်များသည် ယောရှ မင်းအားမိမိတို့၏စကားကိုနားထောင်ရန် သွေးဆောင်ကြ၏။-
18 ೧೮ ಅಂದಿನಿಂದ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಆಲಯವನ್ನು ನಿರಾಕರಿಸಿ, ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ ಪೂಜಿಸುವವರಾದರು. ಅವರ ಈ ಅಪರಾಧದ ದೆಸೆಯಿಂದ ಯೆಹೂದದ ಮೇಲೆಯೂ ಯೆರೂಸಲೇಮಿನ ಮೇಲೆಯೂ, ಯೆಹೋವನಿಗೆ ಕೋಪವುಂಟಾಯಿತು.
၁၈ပြည်သူတို့သည်ဗိမာန်တော်တွင်ဘိုးဘေး များ၏ ဘုရားသခင်ထာဝရဘုရားဝတ် ပြုကိုးကွယ်မှုကိုစွန့်လျက် ရုပ်တုများနှင့် အာရှရဘုရားမ၏တံခွန်တိုင်များကို ဝတ်ပြုရှိခိုးကြလေသည်။ ဤသို့သူတို့ ကူးလွန်သည့်အပြစ်အတွက် ထာဝရ ဘုရား၏အမျက်တော်သည်ယုဒပြည် နှင့်ယေရုရှလင်မြို့အပေါ်သို့သက် ရောက်တော်မူ၏။-
19 ೧೯ ಯೆಹೋವನು ಅವರನ್ನು ತನ್ನ ಕಡೆಗೆ ತಿರುಗಿಸಿಕೊಳ್ಳುವುದಕ್ಕಾಗಿ ಅವರ ಬಳಿಗೆ ಪ್ರವಾದಿಗಳನ್ನು ಕಳುಹಿಸಿದರು. ಅವರ ಮುಖಾಂತರವಾಗಿ ಎಷ್ಟು ಎಚ್ಚರಿಸಿದರೂ ಅವರು ಕಿವಿಗೊಡಲಿಲ್ಲ.
၁၉ထာဝရဘုရားသည်ပရောဖက်များကို စေလွှတ်၍ ထိုသူတို့အားအထံတော်သို့ ပြန်လာကြရန်သတိပေးစေတော်မူ သော်လည်းသူတို့သည်မလိုက်နာကြ။-
20 ೨೦ ಆಗ ಯಾಜಕನಾದ ಯೆಹೋಯಾದನ ಮಗ ಜೆಕರ್ಯನು ದೇವರ ಆತ್ಮನಿಂದ ತುಂಬಿದವನಾಗಿ ಆವೇಶ ಉಳ್ಳವನಾದನು. ಆಗ ಅವನು ಜನರ ಎದುರಿನಲ್ಲಿ ಉನ್ನತ ಸ್ಥಾನದಲ್ಲಿ ನಿಂತುಕೊಂಡು ಅವರಿಗೆ, “ದೇವರ ಮಾತನ್ನು ಕೇಳಿರಿ; ನೀವು ಯೆಹೋವನ ಆಜ್ಞೆಗಳನ್ನು ಮೀರಿ, ನಿಮ್ಮನ್ನೆ ಏಕೆ ನಾಶಮಾಡಿಕೊಳ್ಳುತ್ತಿದ್ದೀರಿ? ನೀವು ಯೆಹೋವನನ್ನು ಕಡೆಗಣಿಸಿರುವುದರಿಂದ; ಆತನೂ ನಿಮ್ಮನ್ನು ಕಡೆಗಣಿಸಿದ್ದಾನೆ” ಎಂದನು.
၂၀ထိုအခါဘုရားသခင်၏ဝိညာဉ်တော် သည် ယဇ်ပုရောဟိတ်ယောယဒ၏သား ဇာခရိအပေါ်သို့သက်ရောက်တော်မူ သဖြင့် ဇာခရိသည်ပြည်သူတို့မြင်သာ သည့်နေရာတွင်ရပ်လျက်``သင်တို့သည်မိမိ တို့အပေါ်သို့ဘေးအန္တရာယ်ဆိုက်ရောက် စေရန် အဘယ်ကြောင့်ငါထာဝရဘုရား ၏အမိန့်တော်ကိုဖီဆန်ကြပါသနည်း။ ငါ့အားသင်တို့စွန့်ပယ်ကြသဖြင့်ငါ သည်လည်းသင်တို့အားစွန့်ပယ်တော်မူ ပြီ'' ဟုဗျာဒိတ်တော်ဆင့်ဆို၏။-
21 ೨೧ ಆಗ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಯೆಹೋವನ ಆಲಯದ ಪ್ರಾಕಾರದಲ್ಲಿ ಅವನನ್ನು ಕಲ್ಲೆಸೆದು ಕೊಂದರು. ಇದು ಅರಸನಾದ ಯೆಹೋವಾಷನ ಅಪ್ಪಣೆಯಿಂದಲೇ ಆಯಿತು.
၂၁ယောရှမင်းသည်ဇာခရိအားမကောင်းကြံ မှုတွင်ပါဝင်လျက် သူ၏အမိန့်အရပြည်သူ တို့သည်ဇာခရိအားဗိမာန်တော်တံတိုင်း အတွင်း၌ခဲနှင့်ပစ်သတ်ကြ၏။
22 ೨೨ ಯೆಹೋವಾಷನು ಜೆಕರೀಯನ ತಂದೆಯಾದ ಯೆಹೋಯಾದನಿಂದ ತನಗಾದ ಕೃಪೆಯನ್ನು ಮರೆತು ಅವನ ಮಗನನ್ನು ಕೊಲ್ಲಿಸಿದನು. ಜೆಕರೀಯನು ಸಾಯುವಾಗ, “ಯೆಹೋವನೇ ಇದನ್ನು ನೋಡಿ, ತಕ್ಕ ಶಿಕ್ಷೆಯನ್ನು ವಿಧಿಸಲಿ” ಎಂದನು.
၂၂မင်းကြီးသည်မိမိအားဇာခရိ၏ဖခင်ယော ဒယသစ္စာရှိစွာအမှုထမ်းခဲ့သည်ကိုသတိ မရဘဲသားကိုသတ်လေ၏။ ဇာခရိသည် သေအံ့ဆဲဆဲ၌``ထာဝရဘုရားသည်သင် ပြုသည့်အမှုကိုမြင်၍ သင့်အားအပြစ်ဒဏ် ခတ်တော်မူပါစေသော'' ဟုဆို၏။
23 ೨೩ ವರ್ಷಾಂತ್ಯದಲ್ಲಿ ಅರಾಮ್ಯರ ಸೈನ್ಯವು ಯೆಹೋವಾಷನಿಗೆ ವಿರುದ್ಧವಾಗಿ ದಾಳಿಮಾಡಲು ಹೊರಟಿತು. ಆ ಸೈನ್ಯದವರು ಯೆಹೂದ ದೇಶದೊಳಗೆ ನುಗ್ಗಿ, ಯೆರೂಸಲೇಮಿಗೆ ಬಂದು ಇಸ್ರಾಯೇಲರ ಎಲ್ಲಾ ಜನಾಧಿಪತಿಗಳನ್ನು ನಿರ್ನಾಮ ಮಾಡಿ ಅವರಲ್ಲಿ ಸಿಕ್ಕಿದ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿಬಿಟ್ಟರು.
၂၃ထိုနှစ်ဆောင်းဦးပေါက်၌ရှုရိတပ်မတော် သည်ယုဒပြည်နှင့်ယေရုရှလင်မြို့သို့ချီ တက်တိုက်ခိုက်၍ ခေါင်းဆောင်အပေါင်းကို သတ်ပြီးလျှင်လက်ရပစ္စည်းအမြောက်အမြား ကိုဒမာသက်မြို့သို့ယူဆောင်သွား၏။-
24 ೨೪ ಅರಾಮ್ಯ ಸೈನ್ಯದಿಂದ ಬಂದ ಗುಂಪು ಚಿಕ್ಕದಾಗಿದ್ದರೂ ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಕಡೆಗಣಿಸಿದ್ದರಿಂದ ಮಹಾಸೈನ್ಯವಾಗಿದ್ದ ಅವರನ್ನು ಯೆಹೋವನು ಅರಾಮ್ಯರ ಕೈಯಲ್ಲಿ ಸೋಲುವಂತೆ ಮಾಡಿ, ಯೆಹೋವಾಷನನ್ನು ಅವರ ಮುಖಾಂತರ ಶಿಕ್ಷಿಸಿದನು.
၂၄ရှုရိတပ်မတော်သည်သေးငယ်သော်လည်း ထာဝရဘုရားသည်ပိုမိုကြီးမားသည့် ယုဒတပ်မတော်ကိုနှိမ်နင်းခွင့်ပေးတော် မူ၏။ အဘယ်ကြောင့်ဆိုသော်ယုဒပြည်သူ တို့သည် မိမိတို့ဘိုးဘေးများ၏ဘုရားသခင်ထာဝရဘုရားအားစွန့်ပယ်ကြ သောကြောင့်ဖြစ်၏။ ဤနည်းအားဖြင့် ယောရှမင်းသည်အပြစ်ဒဏ်စီရင် တော်မူခြင်းကိုခံရသတည်း။-
25 ೨೫ ಕಠಿಣವಾಗಿ ಗಾಯಗೊಂಡಿದ್ದ ಅವನನ್ನು ಅರಾಮ್ಯರು ಬಿಟ್ಟು ಹೋದ ಕೂಡಲೆ, ಅವನ ಸೇವಕರು ಅವನು ಯಾಜಕನಾದ ಯೆಹೋಯಾದನ ಮಗನನ್ನು ಕೊಲ್ಲಿಸಿದ ನಿಮಿತ್ತ, ಅವನಿಗೆ ವಿರುದ್ಧವಾಗಿ ಒಳಸಂಚುಮಾಡಿ, ಅವನನ್ನು ಹಾಸಿಗೆಯಲ್ಲೇ ಕೊಂದುಹಾಕಿದರು. ಅವನ ಶವವನ್ನು ದಾವೀದನಗರದೊಳಗೆ ಸಮಾಧಿಮಾಡಿದರು. ಆದರೆ ರಾಜಸ್ಮಶಾನದಲ್ಲಿ ಅವನನ್ನು ಸಮಾಧಿ ಮಾಡಲಿಲ್ಲ.
၂၅သူသည်ပြင်းစွာဒဏ်ရာရလျက်ကျန်ရစ်ခဲ့၏။ ရန်သူများဆုတ်ခွာသွားသောအခါအမတ် နှစ်ယောက်သည်ယဇ်ပုရောဟိတ်ယောယဒ၏ သားကိုသတ်သည့်အတွက် လက်စားချေသည့် အနေဖြင့်လျှို့ဝှက်ကြံစည်ကာသူ့အား သလွန်ပေါ်တွင်လုပ်ကြံကြ၏။ သူ၏ အလောင်းကိုဒါဝိဒ်မြို့တွင်သင်္ဂြိုဟ်ကြ သော်လည်းဘုရင်တို့၏သင်္ချိုင်းတော်၌ မသင်္ဂြိုဟ်ကြချေ။-
26 ೨೬ ಅಮ್ಮೋನಿಯರ ದೇಶದ ಶಿಮ್ಗಾತೆಂಬಾಕೆಯ ಮಗನಾದ ಜಾಬಾದ್, ಮೋವಾಬ್ ದೇಶದ ಶಿಮ್ರಾತೆಂಬಾಕೆಯ ಮಗನಾದ ಯೆಹೋಜಾಬಾದ್ ಎಂಬುವರೇ ಅವನ ವಿರುದ್ಧವಾಗಿ ಒಳಸಂಚು ಮಾಡಿದವರು.
၂၆(သူ့အားလျှို့ဝှက်လုပ်ကြံကြသူများမှာ အမ္မုန်အမျိုးသမီးရှိမတ်၏သားယောဇဗဒ် နှင့်မောဘအမျိုးသမီးရှိမရိတ်၏သား ယဟောဇဗဒ်တို့ဖြစ်သတည်း။-)
27 ೨೭ ಅವನ ಮಕ್ಕಳು ಅವನಿಗೆ ವಿರುದ್ಧವಾಗಿ ಹೇಳಲಾದ ಅನೇಕ ದೈವೋಕ್ತಿಗಳೂ, ಹಾಗು ದೇವಾಲಯದ ಜೀರ್ಣೋದ್ಧಾರ ವೃತ್ತಾಂತವು, ರಾಜರ ಗ್ರಂಥದ ವ್ಯಾಖ್ಯಾನದಲ್ಲಿ ದಾಖಲಿಸಲಾಗಿದೆ. ಅವನಿಗೆ ಬದಲಾಗಿ ಅವನ ಮಗನಾದ ಅಮಚ್ಯನು ಅರಸನಾದನು.
၂၇ဋ္ဌမ္မရာဇဝင်ကျမ်းတွင်ယောရှ၏သားများ အကြောင်း၊ သူ့အားဆင့်ဆိုသည့်ဗျာဒိတ် တော်များအကြောင်း၊ ဗိမာန်တော်ကိုသူ ပြန်လည်တည်ဆောက်ခြင်းအကြောင်းများ ပါရှိ၏။ သားတော်အာမဇိသည်သူ၏ အရိုက်အရာကိုဆက်ခံ၍နန်းတက် လေသည်။