< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 24 >

1 ಯೆಹೋವಾಷನು ಅರಸನಾದಾಗ ಏಳು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ನಲ್ವತ್ತು ವರ್ಷ ರಾಜ್ಯಭಾರ ಮಾಡಿದನು. ಬೇರ್ಷೆಬದವಳಾದ ಚಿಬ್ಯಳು ಅವನ ತಾಯಿ.
योआशले राज्य गर्न सुरु गर्दा तिनी सात वर्षका थिए । तिनले यरूशलेममा चालीस वर्ष राज्य गरे । तिनकी आमा बेर्शेबाकी सिब्या थिइन् ।
2 ಯೆಹೋವಾಷ ಯಾಜಕನಾದ ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಚಿತ್ತಾನುಸಾರವಾಗಿ ನಡೆದುಕೊಳ್ಳುತ್ತಿದ್ದನು.
यहोयादा पुजारीका समयभरि नै योआशले परमप्रभुको दृष्‍टिमा जे असल थियो सो गरे ।
3 ಯೆಹೋಯಾದನು, ಯೆಹೋವಾಷನಿಗೆ ಇಬ್ಬರು ಕನ್ಯೆಯರನ್ನು ಮದುವೆ ಮಾಡಿಸಿದನು; ಅರಸನು ಗಂಡು ಹೆಣ್ಣು ಮಕ್ಕಳನ್ನು ಪಡೆದನು.
यहोयादाले तिनका निम्ति दुई वटी पत्‍नी ल्याएदिए, र तिनी छोराछोरीका पिता भए ।
4 ಕ್ರಮೇಣ ಯೆಹೋವಾಷನು ಯೆಹೋವನ ಆಲಯವನ್ನು ಜೀರ್ಣೋದ್ಧಾರ ಮಾಡುವುದಕ್ಕೆ ಮನಸ್ಸು ಮಾಡಿದನು.
यसपछि यस्‍तो भयो, योआशले परमप्रभुको मन्दिरको पुननिर्माण गर्ने निर्णय गरे ।
5 ಯಾಜಕರನ್ನೂ ಲೇವಿಯರನ್ನೂ ಒಟ್ಟಿಗೆ ಸೇರಿಸಿ ಅವರಿಗೆ, “ನೀವು ಯೆಹೂದದ ಪಟ್ಟಣಗಳಿಗೆ ಹೋಗಿ, ನಿಮ್ಮ ದೇವರಾದ ಯೆಹೋವನ ಆಲಯದ ವಾರ್ಷಿಕ ಜೀರ್ಣೋದ್ಧಾರ ಮಾಡುವುದಕ್ಕಾಗಿ ಎಲ್ಲಾ ಇಸ್ರಾಯೇಲರಿಂದ ಹಣ ಸಂಗ್ರಹಿಸಿರಿ; ಈ ಕಾರ್ಯವನ್ನು ಶೀಘ್ರವಾಗಿ ನೆರವೇರಿಸಿರಿ” ಎಂದು ಆಜ್ಞಾಪಿಸಿದನು. ಆದರೂ ಲೇವಿಯರು ಅವಸರ ಮಾಡಲಿಲ್ಲ.
तिनले पुजारी र लेवीहरूलाई एकसाथ भेला गरे र तिनीहरूलाई भने, “हरेक वर्ष यहूदाका सहरहरूमा जाओ र सबै इस्राएलबाट परमप्रभुको मन्दिरको पुनर्निर्माण गर्नलाई पैसा जम्मा गर । तिमीहरू यो काम झट्टै सुरु गरिहाल ।” लेवीहरूले सुरुमा केही पनि गरेनन् ।
6 ಆದುದರಿಂದ ಅರಸನು ಅವರ ಮುಖ್ಯಸ್ಥನಾದ ಯೆಹೋಯಾದನನ್ನು ಕರೆಯಿಸಿ ಅವನಿಗೆ, “ಯೆಹೋವನ ಸೇವಕನಾದ ಮೋಶೆಯ ವಿಧಿಗನುಸಾರವಾಗಿ ಇಸ್ರಾಯೇಲ್ ಸಮೂಹದವರೆಲ್ಲರು ದೇವದರ್ಶನದ ಗುಡಾರಕ್ಕೋಸ್ಕರ ಕೊಡಬೇಕಾದ ಕಾಣಿಕೆಯನ್ನು ಈ ಲೇವಿಯರು ಯೆಹೂದ್ಯರಿಂದಲೂ ಯೆರೂಸಲೇಮಿನ ಜನರಿಂದಲೂ ಕೂಡಿಸುವ ಹಾಗೆ ನೀನೇಕೆ ನೋಡಿಕೊಳ್ಳಲಿಲ್ಲ?
यसले राजाले प्रधान पुजारी यहोयादालाई बोलाए र तिनलाई भने, “करारका आदेशहरूका पालको निम्ति परमप्रभुका दास मोशा र इस्राएलको समुदायले लगाएको कर यहूदा र यरूशलेमबाट ल्याउन भनी लेवीहरूलाई किन भन्‍नुभएको छैन?”
7 ಅತಿದುಷ್ಟಳಾದ ಅತಲ್ಯಳ ಮನೆಯವರು ದೇವಾಲಯವನ್ನು ಹಾಳುಮಾಡಿ, ಯೆಹೋವನ ಆಲಯದ ಪ್ರತಿಷ್ಠಿತ ವಸ್ತುಗಳನ್ನು ಬಾಳನಿಗಾಗಿ ಕೊಟ್ಟು ಬಿಟ್ಟಿದ್ದಾರಲ್ಲಾ?” ಎಂದು ಹೇಳಿದನು.
किनकि ती दुष्‍ट स्‍त्री अतल्याहका छोराहरूले परमप्रभुको मन्दिर भत्‍काएका र परमप्रभुको मन्दिरका सबै पवित्र थोक बाललाई दिएका थिए ।
8 ಅನಂತರ ಅರಸನು ಒಂದು ಪೆಟ್ಟಿಗೆಯನ್ನು ಮಾಡಿಸಿ ಅದನ್ನು ಯೆಹೋವನ ಆಲಯದ ಬಾಗಿಲಿನ ಹೊರಗೆ ಇರಿಸಿದನು.
यसैले राजाले आदेश दिए र तिनीहरूले एउटा सन्दूक बनाए र त्‍यो परमप्रभुका मन्दिरको मूल ढोकाको बाहिर राख्‍ने हुकुम गरे ।
9 ದೇವರ ಸೇವಕನಾದ ಮೋಶೆಯು ಅರಣ್ಯದಲ್ಲಿ ವಿಧಿಸಿದಂತೆ, ಇಸ್ರಾಯೇಲರು ಯೆಹೋವನಿಗೋಸ್ಕರ ಕೊಡಬೇಕಾದ ಕಾಣಿಕೆಯನ್ನು ತಂದು ಕೊಡಬೇಕು ಎಂಬುದಾಗಿ ಯೆಹೂದದಲ್ಲಿಯೂ, ಯೆರೂಸಲೇಮಿನಲ್ಲಿಯೂ ಪ್ರಕಟಿಸಿದನು.
तब तिनीहरूले यहूदा र यरूशलेमभरि नै परमेश्‍वरका दास मोशाले उजाड-स्थानमा इस्राएलमाथि लगाएको तिरो मानिसहरूले परमप्रभुकहाँ ल्याउनुपर्छ भनी घोषणा गरे ।
10 ೧೦ ಎಲ್ಲಾ ಪ್ರಭುಗಳೂ, ಜನರೂ ಸಂತೋಷದಿಂದ ಬೇಕಾಗುವಷ್ಟು ಹಣವನ್ನು ಪೆಟ್ಟಿಗೆಯಲ್ಲಿ ತಂದು ಹಾಕಿದರು.
सबै अगुवा र सबे मानिस आनन्दित भए र रकम ल्याए र त्‍यो सन्दूक नभरिएसम्‍म त्यसमा हाले ।
11 ೧೧ ಪೆಟ್ಟಿಗೆ ತುಂಬಾ ಹಣವಿರುತ್ತದೆಂದು ಕಂಡು ಬಂದಾಗೆಲ್ಲಾ ಲೇವಿಯರು ಪೆಟ್ಟಿಗೆಯನ್ನು, ಆಸ್ಥಾನದ ಅಧಿಕಾರಿಗಳ ಬಳಿಗೆ ತರುತ್ತಿದ್ದರು. ಆಗ ಅರಸನ ಲೇಖಕನೂ, ಮಹಾಯಾಜಕನ ಉದ್ಯೋಗಸ್ಥನೂ ಬಂದು ಅದನ್ನು ತೆರವು ಮಾಡಿ ಮತ್ತೆ ಅದನ್ನು ಅದರ ಸ್ಥಳದಲ್ಲಿಡುತ್ತಿದ್ದರು.
यस्‍तो भयो, जब लेवीहरूले राजाका अधिकारीहरूकहाँ त्यो सन्दूक ल्याउँथे, र जब त्यसमा तिनीहरूले धेरै पैसा देख्‍थे, तब राजाका सचिव र प्रधान पुजारीका अधिकृत त्यो खाली गर्न आउँथे, र त्यो सन्दूक फेरि त्यसकै स्थानमा राखिदिन्थे । तिनीहरूले दिनदिनै त्‍यसो गरेर धेरै रुपियाँपैसा सञ्‍चय गरे ।
12 ೧೨ ಅರಸನೂ ಯೆಹೋಯಾದನೂ ಅದನ್ನು ಯೆಹೋವನ ಆಲಯದ ಕೆಲಸವನ್ನು ನಡೆಸುವವರಿಗೆ ಒಪ್ಪಿಸಿದರು. ಅವರು ಯೆಹೋವನ ಆಲಯದ ಜೀರ್ಣೋದ್ಧಾರಕ್ಕಾಗಿ ಶಿಲ್ಪಿಗಳನ್ನೂ, ಬಡಗಿಯರನ್ನೂ, ಅದನ್ನು ಭದ್ರಪಡಿಸುವುದಕ್ಕಾಗಿ ಕಮ್ಮಾರರನ್ನೂ, ಕಂಚುಗಾರರನ್ನೂ ಕೆಲಸಕ್ಕೆ ನೇಮಿಸಿದರು.
राजा र यहोयादाले त्यो रुपियाँपैसा परमप्रभुको मन्दिरमा काम गर्न लाउने मानिसहरूको जिम्मामा दिए । ती मानिसहरूले मन्दिरको पुनर्निर्माण गर्न डकर्मी, सिकर्मीहरू, फलाम र काँसाको काम गर्नेहरूलाई ज्यालामा लगाए ।
13 ೧೩ ಕೆಲಸ ಮಾಡುವವರು ಆಸಕ್ತಿಯಿಂದ ಜೀರ್ಣೋದ್ಧಾರದ ಕೆಲಸವನ್ನು ಮಾಡಿ ಮುಗಿಸಿದರು. ಹೀಗೆ ಅವರು ದೇವಾಲಯವನ್ನು ಭದ್ರಪಡಿಸಿ ಪೂರ್ವಸ್ಥಿತಿಗೆ ತಂದರು.
यसरी कामदारहरूले श्रम गरे, र तिनीहरूकै हातमा यस मरम्मतका काम अगाडि बढ्यो । तिनीहरूले पहिलेकै नमूनाअनुसार परमप्रभुका मन्दिरको पुनर्निर्माण गरे र त्यसलाई बलियो बनाए ।
14 ೧೪ ಕೆಲಸ ಮುಗಿದಾಗ ಅವರು ಉಳಿದ ಹಣವನ್ನು ಅರಸನಿಗೂ, ಯೆಹೋಯಾದನಿಗೂ ಒಪ್ಪಿಸಿದರು. ಇವರು ಅದರಿಂದ ಯೆಹೋವನ ಆಲಯದ ಆರಾಧನೆಗಾಗಿಯೂ, ಯಜ್ಞಸಮರ್ಪಣೆಗಾಗಿಯೂ ಉಪಯೋಗವಾಗುವ ಧೂಪಾರತಿ, ಬೆಳ್ಳಿಬಂಗಾರದ ಪಾತ್ರೆ ಮೊದಲಾದ ಸಾಮಾನುಗಳನ್ನು ಮಾಡಿಸಿದರು. ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಆಲಯದಲ್ಲಿ ಪ್ರತಿನಿತ್ಯವೂ ಸರ್ವಾಂಗಹೋಮಯಜ್ಞವು ನಡೆಯುತ್ತಿತ್ತು.
जब तिनीहरूले त्यो काम सिद्ध्याए, तब तिनीहरूले बाँकी बचेको रुपियाँपैसा राजा र यहोयादाकहाँ ल्याइदिए । ती पैसाबाट परमप्रभुका मन्दिरमा चाहिने सामानहरूको निम्ति प्रयोग गरियो, सेवाको काम र होमबलिको काम दुवैका निम्ति भाँडाहरू—सुन र चाँदीका चम्चा र भाँडाहरू । यहोयादाको समयभरि नै तिनीहरूले परमप्रभुको मन्दिरमा निरन्तर होमबलि चढाए ।
15 ೧೫ ಯೆಹೋಯಾದನು ಮುಪ್ಪಿನ ಮುದುಕನಾಗಿ ಮರಣ ಹೊಂದಿದನು; ಅವನು ಸಾಯುವಾಗ ನೂರಮೂವತ್ತು ವರ್ಷದವನಾಗಿದ್ದನು.
यहोयादा वृद्ध भए र दीर्घायु भए अनि त्‍यसपछि तिनी मरे । तिनको मृत्‍यु हुँदा तिनी एक सय तिस वर्षका थिए ।
16 ೧೬ ಅವನು ಇಸ್ರಾಯೇಲರ ಕುರಿತಾಗಿಯೂ ದೇವರ ಮತ್ತು ದೇವಾಲಯದ ವಿಷಯದಲ್ಲಿಯೂ ಸತ್ಕಾರ್ಯಗಳನ್ನು ಮಾಡಿದ್ದರಿಂದ ಅವನ ಶವವನ್ನು ದಾವೀದನಗರದೊಳಗೆ ರಾಜಸ್ಮಶಾನದಲ್ಲಿ ಸಮಾಧಿ ಮಾಡಿದರು.
तिनीहरूले तिनलाई दाऊदको सहरमा राजाहरूकै चिहानमा गाडे, किनभने तिनले इस्राएलमा परमेश्‍वर र परमेश्‍वरको मन्दिरको निम्ति असल काम गरेका थिए ।
17 ೧೭ ಯೆಹೋಯಾದನು ಮೃತನಾದ ಮೇಲೆ ಯೆಹೂದ ಪ್ರಭುಗಳು ಅರಸನ ಬಳಿಗೆ ಬಂದು ಅವನಿಗೆ ಅಡ್ಡಬಿದ್ದು ಅವನನ್ನು ಒಲಿಸಿಕೊಂಡರು.
यहोयादाको मृत्युपछि यहूदाका अधिकारीहरू राजाकहाँ आएर आदर देखाए । तब राजाले तिनीहरूका कुरा सुने ।
18 ೧೮ ಅಂದಿನಿಂದ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಆಲಯವನ್ನು ನಿರಾಕರಿಸಿ, ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ ಪೂಜಿಸುವವರಾದರು. ಅವರ ಈ ಅಪರಾಧದ ದೆಸೆಯಿಂದ ಯೆಹೂದದ ಮೇಲೆಯೂ ಯೆರೂಸಲೇಮಿನ ಮೇಲೆಯೂ, ಯೆಹೋವನಿಗೆ ಕೋಪವುಂಟಾಯಿತು.
तिनीहरूले परमप्रभु आफ्ना पुर्खाहरूका परमेश्‍वरको मन्दिरलाई त्यागे र अशेरा देवीका खम्बाहरू र मूर्तिहरूको पुजा गरे । तिनीहरूका यस खराबीले गर्दा यहूदा र यरूशलेममाथि परमेश्‍वरको क्रोध आइपर्‍यो ।
19 ೧೯ ಯೆಹೋವನು ಅವರನ್ನು ತನ್ನ ಕಡೆಗೆ ತಿರುಗಿಸಿಕೊಳ್ಳುವುದಕ್ಕಾಗಿ ಅವರ ಬಳಿಗೆ ಪ್ರವಾದಿಗಳನ್ನು ಕಳುಹಿಸಿದರು. ಅವರ ಮುಖಾಂತರವಾಗಿ ಎಷ್ಟು ಎಚ್ಚರಿಸಿದರೂ ಅವರು ಕಿವಿಗೊಡಲಿಲ್ಲ.
तापनि तिनीहरूलाई फेरि आफूकहाँ फर्काएर ल्याउन परमप्रभुले अगमवक्ताहरू पठाउनुभयो । ती अगमवक्ताहरूले तिनीहरूका कामको विरुद्धमा बोले, तर तिनीहरूले त्‍यो सुन्‍नलाई इन्कार गरे ।
20 ೨೦ ಆಗ ಯಾಜಕನಾದ ಯೆಹೋಯಾದನ ಮಗ ಜೆಕರ್ಯನು ದೇವರ ಆತ್ಮನಿಂದ ತುಂಬಿದವನಾಗಿ ಆವೇಶ ಉಳ್ಳವನಾದನು. ಆಗ ಅವನು ಜನರ ಎದುರಿನಲ್ಲಿ ಉನ್ನತ ಸ್ಥಾನದಲ್ಲಿ ನಿಂತುಕೊಂಡು ಅವರಿಗೆ, “ದೇವರ ಮಾತನ್ನು ಕೇಳಿರಿ; ನೀವು ಯೆಹೋವನ ಆಜ್ಞೆಗಳನ್ನು ಮೀರಿ, ನಿಮ್ಮನ್ನೆ ಏಕೆ ನಾಶಮಾಡಿಕೊಳ್ಳುತ್ತಿದ್ದೀರಿ? ನೀವು ಯೆಹೋವನನ್ನು ಕಡೆಗಣಿಸಿರುವುದರಿಂದ; ಆತನೂ ನಿಮ್ಮನ್ನು ಕಡೆಗಣಿಸಿದ್ದಾನೆ” ಎಂದನು.
यहोयादाका छोरा जकरिया पुजारीमाथि परमेश्‍वरका आत्मा आउनुभयो । जकरिया मानिसहरूका सामु खडा भए र तिनीहरूलाई भने, “परमेश्‍वर यसो भन्‍नुहुन्छ: ‘तिमीहरू किन परमप्रभुका आज्ञा उल्लङ्घन गर्छौ, जसले गर्दा तिमीहरूले उन्‍नति गर्न सक्दैनौ? तिमीहरूले परमप्रभुलाई त्यागेका हुनाले उहाँले पनि तिमीहरूलाई त्याग्‍नुभएको छ ।”
21 ೨೧ ಆಗ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಯೆಹೋವನ ಆಲಯದ ಪ್ರಾಕಾರದಲ್ಲಿ ಅವನನ್ನು ಕಲ್ಲೆಸೆದು ಕೊಂದರು. ಇದು ಅರಸನಾದ ಯೆಹೋವಾಷನ ಅಪ್ಪಣೆಯಿಂದಲೇ ಆಯಿತು.
तर तिनीहरूले तिनको विरुद्धमा षड्यन्त्र रचे । राजाको हुकुम पाएर तिनीहरूले परमप्रभुका मन्दिरको चोकमा ढुङ्गा हानेर तिनलाई मारे ।
22 ೨೨ ಯೆಹೋವಾಷನು ಜೆಕರೀಯನ ತಂದೆಯಾದ ಯೆಹೋಯಾದನಿಂದ ತನಗಾದ ಕೃಪೆಯನ್ನು ಮರೆತು ಅವನ ಮಗನನ್ನು ಕೊಲ್ಲಿಸಿದನು. ಜೆಕರೀಯನು ಸಾಯುವಾಗ, “ಯೆಹೋವನೇ ಇದನ್ನು ನೋಡಿ, ತಕ್ಕ ಶಿಕ್ಷೆಯನ್ನು ವಿಧಿಸಲಿ” ಎಂದನು.
यसरी किसिमले, योआश राजाले जकरियाका बुबा यहोयादाले आफूप्रति गरेको दयालाई बेवास्‍ता गरे । बरु, यहोयादाका छोरालाई मारे । जब जकरियाको मृत्‍यु हुन लागेको थियो, तब तिनले यसो भने, “परमप्रभुले यो देख्‍नुभएको होस् र तिमीहरूका लेखा लिनुभएको होस् ।”
23 ೨೩ ವರ್ಷಾಂತ್ಯದಲ್ಲಿ ಅರಾಮ್ಯರ ಸೈನ್ಯವು ಯೆಹೋವಾಷನಿಗೆ ವಿರುದ್ಧವಾಗಿ ದಾಳಿಮಾಡಲು ಹೊರಟಿತು. ಆ ಸೈನ್ಯದವರು ಯೆಹೂದ ದೇಶದೊಳಗೆ ನುಗ್ಗಿ, ಯೆರೂಸಲೇಮಿಗೆ ಬಂದು ಇಸ್ರಾಯೇಲರ ಎಲ್ಲಾ ಜನಾಧಿಪತಿಗಳನ್ನು ನಿರ್ನಾಮ ಮಾಡಿ ಅವರಲ್ಲಿ ಸಿಕ್ಕಿದ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿಬಿಟ್ಟರು.
वर्षको अन्त्यमा यस्‍तो भयो, अरामी छाउनीका फौज योआशको विरुद्धमा आयो । तिनीहरू यहूदा र यरूशलेममा आए । तिनीहरूले मानिसहरूका सबै अगुवालाई मारे र तिनीहरूबाट लूटका माल लिएर दमस्कसका राजालाई पठाइदिए ।
24 ೨೪ ಅರಾಮ್ಯ ಸೈನ್ಯದಿಂದ ಬಂದ ಗುಂಪು ಚಿಕ್ಕದಾಗಿದ್ದರೂ ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಕಡೆಗಣಿಸಿದ್ದರಿಂದ ಮಹಾಸೈನ್ಯವಾಗಿದ್ದ ಅವರನ್ನು ಯೆಹೋವನು ಅರಾಮ್ಯರ ಕೈಯಲ್ಲಿ ಸೋಲುವಂತೆ ಮಾಡಿ, ಯೆಹೋವಾಷನನ್ನು ಅವರ ಮುಖಾಂತರ ಶಿಕ್ಷಿಸಿದನು.
अरामीहरू थोरै सिपाहीहरू लिएर आएका भए तापनि परमप्रभुले एउटा ठूलो फौजमाथि तिनीहरूलाई विजय दिनुभयो, किनभने यहूदाका मानिसहरूले परमप्रभु आफ्ना पुर्खाहरूका परमेश्‍वरलाई त्यागेका थिए । यसरी आरामीहरूले योआशमाथि दण्ड ल्याए ।
25 ೨೫ ಕಠಿಣವಾಗಿ ಗಾಯಗೊಂಡಿದ್ದ ಅವನನ್ನು ಅರಾಮ್ಯರು ಬಿಟ್ಟು ಹೋದ ಕೂಡಲೆ, ಅವನ ಸೇವಕರು ಅವನು ಯಾಜಕನಾದ ಯೆಹೋಯಾದನ ಮಗನನ್ನು ಕೊಲ್ಲಿಸಿದ ನಿಮಿತ್ತ, ಅವನಿಗೆ ವಿರುದ್ಧವಾಗಿ ಒಳಸಂಚುಮಾಡಿ, ಅವನನ್ನು ಹಾಸಿಗೆಯಲ್ಲೇ ಕೊಂದುಹಾಕಿದರು. ಅವನ ಶವವನ್ನು ದಾವೀದನಗರದೊಳಗೆ ಸಮಾಧಿಮಾಡಿದರು. ಆದರೆ ರಾಜಸ್ಮಶಾನದಲ್ಲಿ ಅವನನ್ನು ಸಮಾಧಿ ಮಾಡಲಿಲ್ಲ.
अरामीहरू जाने बेलासम्‍म योआश गम्‍भीर रूपले घाइते भएका थिए । पुजारी यहोयादाका छोराहरूका मृत्युको कारणले तिनका आफ्नै सेवकहरूले तिनको विरुद्धमा षड्यन्त्र रचे । तिनको ओछ्यानमा तिनीहरूले तिनलाई मारे, र तिनी मरे । तिनीहरूले तिनलाई दाऊदको सहरमा गाडे, तर राजाहरूका चिहानमा चाहिं होइन ।
26 ೨೬ ಅಮ್ಮೋನಿಯರ ದೇಶದ ಶಿಮ್ಗಾತೆಂಬಾಕೆಯ ಮಗನಾದ ಜಾಬಾದ್, ಮೋವಾಬ್ ದೇಶದ ಶಿಮ್ರಾತೆಂಬಾಕೆಯ ಮಗನಾದ ಯೆಹೋಜಾಬಾದ್ ಎಂಬುವರೇ ಅವನ ವಿರುದ್ಧವಾಗಿ ಒಳಸಂಚು ಮಾಡಿದವರು.
तिनको विरुद्धमा षड्यन्त्र गर्ने व्‍यक्तिहरू अम्मोनी स्‍त्री शिम्मतका छोरा जाबाद र मोआबी स्‍त्री शिम्रितका छोरा यहोजाबाद थिए ।
27 ೨೭ ಅವನ ಮಕ್ಕಳು ಅವನಿಗೆ ವಿರುದ್ಧವಾಗಿ ಹೇಳಲಾದ ಅನೇಕ ದೈವೋಕ್ತಿಗಳೂ, ಹಾಗು ದೇವಾಲಯದ ಜೀರ್ಣೋದ್ಧಾರ ವೃತ್ತಾಂತವು, ರಾಜರ ಗ್ರಂಥದ ವ್ಯಾಖ್ಯಾನದಲ್ಲಿ ದಾಖಲಿಸಲಾಗಿದೆ. ಅವನಿಗೆ ಬದಲಾಗಿ ಅವನ ಮಗನಾದ ಅಮಚ್ಯನು ಅರಸನಾದನು.
अब तिनका सन्‍तानको विवरण, तिनको विषय गरिएका महत्त्वपूर्ण अगमवाणीहरू, र परमेश्‍वरको मन्दिरको पुनर्निर्माण गर्ने कामका विषय, हेर, ती राजाहरूका इतिहासको पुस्तकमा लेखिएका छन् । तिनका छोरा अमस्याह तिनको ठाउँमा राजा भए ।

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 24 >