< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 29 >

1 ಹಿಜ್ಕೀಯನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷ ಆಳಿದನು. ಜೆಕರ್ಯನ ಮಗಳಾದ ಅಬೀಯ ಎಂಬಾಕೆಯು ಅವನ ತಾಯಿ.
عِنْدَمَا تَوَلَّى حَزَقِيَّا الْمُلْكَ كَانَ فِي الْخَامِسَةِ وَالْعِشْرِينَ مِنْ عُمْرِهِ، وَدَامَ حُكْمُهُ تِسْعاً وَعِشْرِينَ سَنَةً فِي أُورُشَلِيمَ، وَاسْمُ أُمِّهِ أَبِيَّةُ بِنْتُ زَكَرِيَّا.١
2 ಅವನು ಎಲ್ಲಾ ವಿಷಯಗಳಲ್ಲಿಯೂ ನೀತಿವಂತನಾಗಿ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು.
وَصَنَعَ مَا هُوَ قَوِيمٌ فِي عَيْنَيِ الرَّبِّ عَلَى غِرَارِ دَاوُدَ أَبِيهِ.٢
3 ಅವನು ತನ್ನ ಆಳ್ವಿಕೆಯ ಮೊದಲನೆಯ ವರ್ಷದ ಮೊದಲನೆಯ ತಿಂಗಳಲ್ಲಿ ಯೆಹೋವನ ಆಲಯದ ಬಾಗಿಲುಗಳನ್ನು ತೆರೆಯಿಸಿ ಅವುಗಳನ್ನು ಭದ್ರಪಡಿಸಿದನು.
وَفِي الشَّهْرِ الأَوَّلِ مِنَ السَّنَةِ الأُولَى مِنْ مُلْكِهِ فَتَحَ أَبْوَابَ الْهَيْكَلِ وَرَمَّمَهَا.٣
4 ಆಮೇಲೆ ಯಾಜಕರನ್ನೂ ಮತ್ತು ಲೇವಿಯರನ್ನೂ ದೇವಾಲಯದ ಮೂಡಣದಿಕ್ಕಿನ ಬಯಲಿನಲ್ಲಿ ಸೇರಿಸಿ
وَأَدْخَلَ الْكَهَنَةَ وَاللّاوِيِّينَ وَجَمَعَهُمْ فِي سَاحَةِ الْهَيْكَلِ الشَّرْقِيَّةِ،٤
5 ಅವರಿಗೆ, “ಲೇವಿಯರೇ, ನನ್ನ ಮಾತನ್ನು ಕೇಳಿರಿ; ಈಗ ನಿಮ್ಮನ್ನು ಶುದ್ಧೀಕರಿಸಿಕೊಂಡು ನಿಮ್ಮ ಪೂರ್ವಿಕರ ದೇವರಾದ ಯೆಹೋವನ ಪವಿತ್ರಾಲಯದಲ್ಲಿರುವ ಹೊಲಸನ್ನೆಲ್ಲಾ ಹೊರಗೆ ಹಾಕಿ ಆಲಯವನ್ನು ಶುದ್ಧೀಕರಿಸಿರಿ.
وَقَالَ لَهُمْ: «أَصْغُوا إِلَيَّ أَيُّهَا اللّاوِيُّونَ، تَقَدَّسُوا الآنَ، وَقَدِّسُوا بَيْتَ الرَّبِّ إِلَهِ آبَائِكُمْ، وَأَزِيلُوا النَّجَاسَةَ مِنَ الْقُدْسِ،٥
6 ನಮ್ಮ ಪೂರ್ವಿಕರು ನಮ್ಮ ದೇವರಾದ ಯೆಹೋವನಿಗೆ ದ್ರೋಹಮಾಡಿ, ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದು ಆತನನ್ನು ತೊರೆದುಬಿಟ್ಟರು. ಅವರು ಆತನ ನಿವಾಸ ಸ್ಥಳವನ್ನು ತೊರೆದು ವಿಮುಖರಾದರು.
لأَنَّ آبَاءَنَا خَانُوا الرَّبَّ إِلَهَنَا، وَارْتَكَبُوا الشَّرَّ فِي عَيْنَيْهِ وَتَرَكُوهُ، وَحَوَّلُوا وُجُوهَهُمْ عَنْ هَيْكَلِهِ وَأَدَارُوا لَهُ ظُهُورَهُمْ،٦
7 ಅದರ ಮಂಟಪದ ಬಾಗಿಲುಗಳನ್ನು ಮುಚ್ಚಿ, ದೀಪಗಳನ್ನು ನಂದಿಸಿದರು. ಇಸ್ರಾಯೇಲ್ ದೇವರ ಪವಿತ್ರ ಸ್ಥಾನದಲ್ಲಿ ಧೂಪಹಾಕುವುದನ್ನೂ, ಸರ್ವಾಂಗಹೋಮ ಸಮರ್ಪಿಸುವುದನ್ನೂ ನಿಲ್ಲಿಸಿಬಿಟ್ಟರು.
وَأَغْلَقُوا أَيْضاً أَبْوَابَ الرَّوَاقِ، وَأَطْفَأُوا السُّرُجَ، وَلَمْ يُوْقِدُوا بَخُوراً، وَلَمْ يُقَرِّبُوا مُحْرَقَةً فِي القُدْسِ، لإِلَهِ إِسْرَائِيلَ.٧
8 ಆದುದರಿಂದ ಯೆಹೋವನು ಯೆಹೂದ ದೇಶದ ಮೇಲೆಯೂ ಯೆರೂಸಲೇಮಿನ ಮೇಲೆಯೂ, ಕೋಪವುಳ್ಳವನಾಗಿ ಅವುಗಳನ್ನು ಭಯಭೀತಿಗೂ ನಿಂದೆಗೂ, ಪರಿಹಾಸ್ಯಗಳಿಗೂ ಗುರಿಮಾಡಿದ್ದಾನೆ; ಇದಕ್ಕೆ ನೀವೇ ಸಾಕ್ಷಿಗಳು.
فَانْصَبَّ غَضَبُ الرَّبِّ عَلَى يَهُوذَا وَأُورُشَلِيمَ، وَجَعَلَهُمْ مَحَلَّ رُعْبٍ وَدَهْشَةٍ وَاحْتِقَارٍ، كَمَا أَنْتُمْ تَشْهَدُونَ الآنَ.٨
9 ಅದೇ ಕಾರಣದಿಂದ ನಮ್ಮ ಹಿರಿಯರು ಕತ್ತಿಯಿಂದ ಹತರಾದರು; ನಮ್ಮ ಗಂಡು ಹೆಣ್ಣು ಮಕ್ಕಳೂ, ಹೆಂಡತಿಯರೂ ಸೆರೆಯವರಾಗಿ ಹೋಗಬೇಕಾಯಿತು.
وَهُوَذَا آبَاؤُنَا قَدْ سَقَطُوا صَرْعَى السَّيْفِ، وَأَبْنَاؤُنَا وَبَنَاتُنَا وَنِسَاؤُنَا فِي الأَسْرِ مِنْ جَرَّاءِ هَذَا.٩
10 ೧೦ ಈಗ ನಮ್ಮ ಮೇಲಿರುವ ಆತನ ಕೋಪಾಗ್ನಿಯು ತೊಲಗಿ ಹೋಗುವಂತೆ ಇಸ್ರಾಯೇಲಿನ ದೇವರಾದ ಯೆಹೋವನೊಡನೆ ಒಡಂಬಡಿಕೆ ಮಾಡಿಕೊಳ್ಳುವುದಕ್ಕೆ ಮನಸ್ಸುಳ್ಳವನಾಗಿದ್ದೇನೆ.
لِذَلِكَ قَرَّرْتُ أَنْ أَقْطَعَ عَهْداً مَعَ الرَّبِّ إِلَهِ إِسْرَائِيلَ فَيَرُدُّ عَنَّا لَهِيبَ غَضَبِهِ.١٠
11 ೧೧ ಹೀಗಿರಲಾಗಿ ನನ್ನ ಮಕ್ಕಳೇ, ಉದಾಸೀನರಾಗಿರಬೇಡಿ; ಯೆಹೋವನು ತನ್ನನ್ನು ಆರಾಧಿಸುವುದಕ್ಕೂ ಧೂಪಹಾಕುವುದಕ್ಕೂ ನಿಮ್ಮನ್ನು ತನ್ನ ಸಾನ್ನಿಧ್ಯ ಸೇವಕರನ್ನಾಗಿ ಆರಿಸಿಕೊಂಡನಲ್ಲಾ” ಎಂದು ಹೇಳಿದನು.
يَا بَنِيَّ لَا تَضِلُّوا الآنَ، فَقَدِ اخْتَارَكُمُ الرَّبُّ لِتَمْثُلُوا أَمَامَهُ عَابِدِينَ خَادِمِينَ، وَمُوْقِدِينَ لَهُ».١١
12 ೧೨ ಕೂಡಲೆ ಲೇವಿಯರು ಮುಂದೆ ಬಂದರು: ಕೆಹಾತ್ಯರಲ್ಲಿ ಅಮಾಸೈಯ ಮಗನಾದ ಮಹತ್, ಅಜರ್ಯನ ಮಗನಾದ ಯೋವೇಲ್, ಮೆರಾರೀಯರಲ್ಲಿ ಅಬ್ದೀಯ ಮಗನಾದ ಕೀಷ್, ಯೆಹಲ್ಲೆಲೇಲನ ಮಗನಾದ ಅಜರ್ಯ, ಗೇರ್ಷೋನ್ಯರಲ್ಲಿ ಜಿಮ್ಮನ ಮಗನಾದ ಯೋವಾಹ, ಯೋವಾಹನ ಮಗನಾದ ಏದೆನ್,
عِنْدَئِذٍ قَامَ اللّاوِيُّونَ: مَحَثُ بْنُ عَمَاسَايَ وَيُوئِيلُ بْنُ عَزَرْيَا مِنْ ذُرِّيَّةِ الْقَهَاتِيِّينَ، وَقَيْسُ بْنُ عَبْدِي وَعَزَرْيَا بْنُ يَهْلَلْئِيلَ مِنْ ذُرِّيَّةِ الْمَرَارِيِّينَ، وَيُوآخُ بْنُ زِمَّةَ وَعِيدَنُ بْنُ يُوآخَ مِنْ ذُرِّيَّةِ الْجَرْشُونِيِّينَ.١٢
13 ೧೩ ಎಲೀಚಾಫಾನ್ಯರಲ್ಲಿ ಶಿಮ್ರಾ, ಯೆಗೀಯೇಲ್, ಆಸಾಫ್ಯರಲ್ಲಿ ಜೆಕರ್ಯ ಮತ್ತು ಮತ್ತನ್ಯ,
وَمِنْ عَشِيرَةِ أَلِيصَافَانَ: شِمْرِى وَيَعِيئِيلُ، وَمِنْ ذُرِّيَّةِ آسَافَ: زَكَرِيَّا وَمَتَّنْيَا.١٣
14 ೧೪ ಹೇಮಾನ್ಯರಲ್ಲಿ ಯೆಹೀಯೇಲ್, ಶಿಮ್ಮೀ, ಯೆದೂತೂನ್ಯರಲ್ಲಿ ಶೆಮಾಯ ಹಾಗು ಉಜ್ಜೀಯೇಲ್,
وَمِنْ ذُرِّيَّةِ هَيْمَانَ: يَحِيئِيلُ وَشِمْعِي، وَمِنْ ذُرِّيَّةِ يَدُوثُونَ: شَمْعِيَا وَعُزِّيئِيلُ.١٤
15 ೧೫ ಎಂಬ ಲೇವಿಯರು ಎದ್ದು ತಮ್ಮ ಸಹೋದರರನ್ನು ಸೇರಿಕೊಂಡರು. ಅವರು ಅರಸನ ಆಜ್ಞಾನುಸಾರವಾಗಿ ಯೆಹೋವನ ಧರ್ಮಶಾಸ್ತ್ರ ವಿಧಿಯ ಮೇರೆಗೆ ತಮ್ಮನ್ನು ಶುದ್ಧೀಕರಿಸಿಕೊಂಡು ಯೆಹೋವನ ಆಲಯವನ್ನು ಶುದ್ಧೀಕರಿಸುವುದಕ್ಕೆ ಬಂದರು.
وَجَمَعُوا أَقْرِبَاءَهُمُ اللّاوِيِّينَ، وَتَقَدَّسُوا، وَبَدَأُوا يُطَهِّرُونَ الْهَيْكَلَ بِمُوْجِبِ أَمْرِ الْمَلِكِ، وَكَمَا نَصَّتْ عَلَيْهِ شَرِيعَةُ الرَّبِّ.١٥
16 ೧೬ ಯಾಜಕರು ಯೆಹೋವನ ಆಲಯವನ್ನು ಶುದ್ಧಮಾಡುವುದಕ್ಕಾಗಿ ಒಳಗೆ ಹೋಗಿ ಪವಿತ್ರಸ್ಥಾನದಲ್ಲಿದ್ದ ಹೊಲಸನ್ನೆಲ್ಲಾ ತಂದು ಪ್ರಾಕಾರದಲ್ಲಿ ಹಾಕಿದರು. ಲೇವಿಯರು ಅದನ್ನು ಕೂಡಿಸಿ ಹೊರಗೆ ಒಯ್ದು ಕಿದ್ರೋನ್ ಹಳ್ಳದಲ್ಲಿ ಹಾಕಿದರು.
وَدَخَلَ الْكَهَنَةُ إِلَى قُدْسِ الْهَيْكَلِ لِيُطَهِّرُوهُ، وَأَخْرَجُوا مِنْهُ كُلَّ النَّجَاسَةِ الَّتِي وَجَدُوهَا فِي الْهَيْكَلِ إِلَى فِنَاءِ الْهَيْكَلِ، فَأَخَذَهَا اللّاوِيُّونَ وَطَرَحُوهَا فِي وَادِي قَدْرُونَ خَارِجَ الْمَدِينَةِ.١٦
17 ೧೭ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಶುದ್ಧೀಕರಣ ಕಾರ್ಯವನ್ನು ಪ್ರಾರಂಭಿಸಿದರು. ಎಂಟನೆಯ ದಿನದಲ್ಲಿ ಯೆಹೋವನ ಆಲಯದ ಮಂಟಪಕ್ಕೆ ಕೈಹಾಕಿದರು. ಹೀಗೆ ಯೆಹೋವನ ಆಲಯವನ್ನು ಪರಿಶುದ್ಧಪಡಿಸುವುದರಲ್ಲಿ ಎಂಟು ದಿನಗಳು ಕಳೆದು ಹೋದವು. ಮೊದಲನೆಯ ತಿಂಗಳಿನ ಹದಿನಾರನೆಯ ದಿನದಲ್ಲಿ ಕೆಲಸವೆಲ್ಲಾ ಮುಗಿಯಿತು.
وَشَرَعُوا فِي التَّقْدِيسِ فِي أَوَّلِ الشَّهْرِ الأَوَّلِ، وَانْتَهَوْا فِي الْيَوْمِ الثَّامِنِ إِلَى رِوَاقِ الرَّبِّ. وَهَكَذَا طَهَّرُوهُ فِي ثَمَانِيَةِ أَيَّامٍ، وَتَمَّ تَقْدِيسُ هَيْكَلِ الرَّبِّ بِكَامِلِهِ فِي الْيَوْمِ السَّادِسَ عَشَرَ مِنَ الشَّهْرِ الأَوَّلِ.١٧
18 ೧೮ ಆಮೇಲೆ ಅವರು ಅರಮನೆಯೊಳಗೆ ಹೋಗಿ, ಅರಸನಾದ ಹಿಜ್ಕೀಯನಿಗೆ, “ನಾವು ಯೆಹೋವನ ಸಮಸ್ತಾಲಯವನ್ನೂ, ಯಜ್ಞವೇದಿಯನ್ನೂ, ಅದರ ಉಪಕರಣಗಳನ್ನೂ, ನೈವೇದ್ಯ ರೊಟ್ಟಿಗಳನ್ನಿಡತಕ್ಕ ಮೇಜನ್ನೂ ಹಾಗು ಅದರ ಸಾಮಾನುಗಳನ್ನೂ ಶುದ್ಧಿಮಾಡಿದೆವು.
وَمَثَلَ اللّاوِيُّونَ فِي حَضْرَةِ حَزَقِيَّا قَائِلِينَ: «قَدْ طَهَّرْنَا كُلَّ هَيْكَلِ الرَّبِّ وَمَذْبَحَ الْمُحْرَقَةِ وَكُلَّ آنِيَتِهِ، وَمَائِدَةَ خُبْزِ التَّقْدِمَةِ وَكُلَّ آنِيَتِهَا،١٨
19 ೧೯ ಅರಸನಾದ ಆಹಾಜನು ತನ್ನ ಆಳ್ವಿಕೆಯಲ್ಲಿ ದೈವದ್ರೋಹಿಯಾಗಿ ತಳ್ಳಿಬಿಟ್ಟಿದ್ದ ಪಾತ್ರೆಗಳನ್ನು ತಿರುಗಿ ತಂದಿಟ್ಟು ಪ್ರತಿಷ್ಠಿಸಿದ್ದೇವೆ; ಅವು ಈಗ ಯೆಹೋವನ ಯಜ್ಞವೇದಿಯ ಮುಂದಿರುತ್ತವೆ” ಎಂದರು.
وَسَائِرَ الأَوَانِي الَّتِي أَزَالَهَا الْمَلِكُ آحَازُ فِي أَثْنَاءِ فَتْرَةِ حُكْمِهِ الَّتِي خَانَ فِيهَا الرَّبَّ، وَأَعْدَدْنَاهَا وَقَدَّسْنَاهَا، وَهَا هِيَ أَمَامَ مَذْبَحِ الرَّبِّ».١٩
20 ೨೦ ಅರಸನಾದ ಹಿಜ್ಕೀಯನು ಮರುದಿನ ಬೆಳಗಿನ ಜಾವದಲ್ಲೆದ್ದು ಪಟ್ಟಣದ ಅಧಿಕಾರಿಗಳನ್ನು ಕರೆಸಿ ಅವರೊಡನೆ ಯೆಹೋವನ ಆಲಯಕ್ಕೆ ಹೋದನು.
وَفِي الصَّبَاحِ التَّالِي اسْتَدْعَى حَزَقِيَّا الْمَلِكُ رُؤَسَاءَ الْمَدِينَةِ، وَتَوَجَّهَ إِلَى هَيْكَلِ الرَّبِّ.٢٠
21 ೨೧ ಅವರು ರಾಜ್ಯಾಡಳಿತ ದೇವಾಲಯ, ಯೆಹೂದ ಪ್ರಜೆಗಳು ಇವುಗಳಿಗೋಸ್ಕರ ದೋಷಪರಿಹಾರಕ ಯಜ್ಞಮಾಡುವುದಕ್ಕಾಗಿ ಹೋರಿ, ಟಗರು, ಕುರಿಮರಿ, ಆಡು ಇವುಗಳಲ್ಲಿ ಏಳೇಳನ್ನು ತಂದರು. ಅರಸನು ಯಾಜಕರಾದ ಆರೋನನ ಸಂತಾನದವರಿಗೆ ಯೆಹೋವನ ಯಜ್ಞವೇದಿಯ ಮೇಲೆ ಸರ್ವಾಂಗಹೋಮ ಮಾಡಬೇಕೆಂದು ಆಜ್ಞಾಪಿಸಿದನು.
فَقَدَّمُوا سَبْعَةَ ثِيرَانٍ وَسَبْعَةَ كِبَاشٍ وَسَبْعَةَ خِرَافٍ وَسَبْعَةَ تُيُوسِ مِعْزَى لِتَكُونَ ذَبِيحَةَ خَطِيئَةٍ عَنِ الْمَمْلَكَةِ وَعَنِ الْمَقْدِسِ وَعَنْ يَهُوذَا. وَطَلَبَ الْمَلِكُ مِنَ الْكَهَنَةِ الْمُنْحَدِرِينَ مِنْ ذُرِّيَّةِ هرُونَ أَنْ يُقَرِّبُوهَا عَلَى مَذْبَحِ الرَّبِّ،٢١
22 ೨೨ ಹೋರಿಗಳನ್ನು ವಧಿಸಿದ ಮೇಲೆ ಯಾಜಕರು ಅವುಗಳ ರಕ್ತವನ್ನು ಕೂಡಿಸಿ ಯಜ್ಞವೇದಿಗೆ ಪ್ರೋಕ್ಷಿಸಿದರು. ಅನಂತರ ಟಗರುಗಳನ್ನು ವಧಿಸಿದ ಮೇಲೆ ಯಾಜಕರು, ರಕ್ತವನ್ನು ಕೂಡಿಸಿ ಯಜ್ಞವೇದಿಗೆ ಅನಂತರ ಟಗರುಗಳನ್ನು ವಧಿಸಿ ಅವುಗಳ ರಕ್ತವನ್ನು ಯಜ್ಞವೇದಿಗೆ ಪ್ರೋಕ್ಷಿಸಿದರು. ಆ ಮೇಲೆ ಕುರಿಮರಿಗಳನ್ನು ವಧಿಸಿ ಅವುಗಳ ರಕ್ತವನ್ನೂ ಯಜ್ಞವೇದಿಗೆ ಪ್ರೋಕ್ಷಿಸಿದರು.
فَذَبَحُوا الثِّيرَانَ أَوَّلاً ثُمَّ الْكِبَاشَ ثُمَّ الْخِرْفَانَ، وَرَشُّوا دَمَ كُلِّ ذَبِيحَةٍ بِدَوْرِهَا عَلَى الْمَذْبَحِ.٢٢
23 ೨೩ ಕಡೆಯಲ್ಲಿ ದೋಷಪರಿಹಾರಕ ಯಜ್ಞಕ್ಕಾಗಿ ತಂದ ಹೋತಗಳನ್ನು ಅರಸನ ಮುಂದೆಯೂ ಮತ್ತು ಸಮೂಹದವರ ಮುಂದೆಯೂ ನಿಲ್ಲಿಸಿದರು. ಅವರು ಅವುಗಳ ಮೇಲೆ ತಮ್ಮ ಕೈಗಳನ್ನಿಟ್ಟರು.
بَعْدَ ذَلِكَ جَاءُوا بِتُيُوسِ ذَبِيحَةِ الْخَطِيئَةِ وَأَقَامُوهَا أَمَامَ الْمَلِكِ وَالْحَاضِرِينَ مَعَهُ، فَوَضَعُوا أَيْدِيَهُمْ عَلَيْهَا.٢٣
24 ೨೪ ನಂತರ ಯಾಜಕರು ಅವುಗಳನ್ನು ವಧಿಸಿ ಅವುಗಳ ರಕ್ತವನ್ನು ಸಮಸ್ತ ಇಸ್ರಾಯೇಲರ ದೋಷ ಪರಿಹಾರಕ್ಕಾಗಿ ಯಜ್ಞವೇದಿಯ ಮೇಲೆ ಸುರಿದರು. ಆ ಸರ್ವಾಂಗಹೋಮಗಳೂ, ದೋಷಪರಿಹಾರಕ ಯಜ್ಞಗಳೂ ಎಲ್ಲಾ ಇಸ್ರಾಯೇಲರಿಗಾಗಿ ಇರಬೇಕೆಂದು ಅರಸನು ಆಜ್ಞಾಪಿಸಿದ್ದನು.
وَذَبَحَهَا الْكَهَنَةُ، وَكَفَّرُوا بِدَمِهَا عَلَى الْمَذْبَحِ عَنْ جَمِيعِ إِسْرَائِيلَ، لأَنَّ الْمَلِكَ أَمَرَ أَنْ تَكُونَ الْمُحْرَقَةُ وَذَبِيحَةُ الْخَطِيئَةِ عَنْ كُلِّ إِسْرَائِيلَ.٢٤
25 ೨೫ ಇದಲ್ಲದೆ, ಅವನು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಭಜಿಸುವುದಕ್ಕೋಸ್ಕರ ಲೇವಿಯರನ್ನು, ದಾವೀದನ ರಾಜದರ್ಶಿಯಾದ ಗಾದ್ ಹಾಗು ಪ್ರವಾದಿಯಾದ ನಾತಾನ್ ಇವರ ಆಜ್ಞಾನುಸಾರವಾಗಿ ಯೆಹೋವನ ಆಲಯದಲ್ಲಿ ನಿಲ್ಲಿಸಿದನು. ಯೆಹೋವನು ತಾನೇ ಪ್ರವಾದಿಗಳ ಮುಖಾಂತರ ಹೀಗೆ ಆಜ್ಞಾಪಿಸಿದ್ದನು.
وَأَوْقَفَ حَزَقِيَّا الْمَلِكُ اللّاوِيِّينَ فِي هَيْكَلِ الرَّبِّ بِالصُّنُوجِ وَالرَّبَابِ وَالأَعْوَادِ، بِمُقْتَضَى أَمْرِ دَاوُدَ وَجَادَ النَّبِيِّ وَنَاثَانَ النَّبِيِّ، تَلْبِيَةً لِوَصَايَا الرَّبِّ الَّتِي نَطَقَ بِها عَلَى لِسَانِ أَنْبِيَائِهِ،٢٥
26 ೨೬ ಆ ಲೇವಿಯರು ದಾವೀದನ ವಾದ್ಯಗಳನ್ನೂ, ಯಾಜಕರೂ ತುತ್ತೂರಿಗಳನ್ನೂ ಹಿಡಿದು ನಿಂತಿದ್ದರು.
فَوَقَفَ اللّاوِيُّونَ بِآلاتِ دَاوُدَ، وَالْكَهَنَةُ بِالأَبْوَاقِ.٢٦
27 ೨೭ ಆಗ ಹಿಜ್ಕೀಯನು ಯಜ್ಞವೇದಿಯ ಮೇಲೆ ಸರ್ವಾಂಗಹೋಮವನ್ನು ಸಮರ್ಪಿಸುವುದಕ್ಕೆ ಆಜ್ಞಾಪಿಸಿದನು. ಹೀಗೆ ಸರ್ವಾಂಗಹೋಮ ಸಮರ್ಪಣೆ ಪ್ರಾರಂಭಿಸಿದೊಡನೆ ಇಸ್ರಾಯೇಲ್ ರಾಜನಾದ ದಾವೀದನ ವಾದ್ಯಗಳಿಂದ ಯೆಹೋವನನ್ನು ಭಜಿಸುವುದೂ, ತುತ್ತೂರಿ ಊದುವುದೂ ಆರಂಭವಾಯಿತು.
وَأَمَرَ حَزَقِيَّا بِتَقْرِيبِ الْمُحْرَقَةِ عَلَى الْمَذْبَحِ. وَمَا إِنِ ابْتَدَأَ تَقْدِيمُ الْمُحْرَقَةِ حَتَّى ارْتَفَعَ نَشِيدُ الرَّبِّ مَصْحُوباً بِالْعَزْفِ عَلَى الأَبْوَاقِ وَآلاتِ دَاوُدَ مَلِكِ إِسْرَائِيلَ.٢٧
28 ೨೮ ಸರ್ವಾಂಗಹೋಮ ಸಮರ್ಪಣೆಯು ಮುಗಿಯುವವರೆಗೆ ಸರ್ವಸಮೂಹದವರು ಸಾಷ್ಟಾಂಗ ನಮಸ್ಕಾರ ಮಾಡುತ್ತಲೂ, ಗಾಯಕರೂ ಗಾನಮಾಡುತ್ತಲೂ, ತುತ್ತೂರಿ ಊದುವವರು ತುತ್ತೂರಿ ಊದುತ್ತಲೂ ಇದ್ದರು.
وَرَاحَ كُلُّ الْحَاضِرِينَ يَشْتَرِكُونَ فِي الْعِبَادَةِ، وَأَخَذَ الْمُغَنُّونَ يَشْدُونَ، وَالْمُبَوِّقُونَ يَنْفُخُونَ بِالأَبْوَاقِ، إِلَى أَنِ انْتَهَى تَقْدِيمُ الْمُحْرَقَةِ.٢٨
29 ೨೯ ಸರ್ವಾಂಗಹೋಮ ಸಮರ್ಪಣೆಯು ಮುಗಿದ ಮೇಲೆ ಅರಸನೂ ಅವನ ಜೊತೆಯಲ್ಲಿದ್ದವರೆಲ್ಲರೂ ಸಾಷ್ಟಾಂಗ ನಮಸ್ಕಾರ ಮಾಡಿದರು.
عِنْدَئِذٍ سَجَدَ الْمَلِكُ وَسَائِرُ الْمَاثِلِينَ مَعَهُ وَعَبَدُوا الرَّبَّ.٢٩
30 ೩೦ ಅರಸನಾದ ಹಿಜ್ಕೀಯನೂ, ಪ್ರಭುಗಳೂ ದಾವೀದನ ಮತ್ತು ದರ್ಶಿಯಾದ ಆಸಾಫನ ಕೀರ್ತನೆಗಳಿಂದ ಯೆಹೋವನನ್ನು ಸ್ತುತಿಸಬೇಕೆಂದು ಲೇವಿಯರಿಗೆ ಆಜ್ಞಾಪಿಸಲು, ಅವರು ಉತ್ಸಾಹದಿಂದ ಸ್ತುತಿಸುತ್ತಾ ತಲೆಬಾಗಿ ನಮಸ್ಕರಿಸಿದರು.
وَطَلَبَ حَزَقِيَّا الْمَلِكُ وَالرُّؤَسَاءُ مِنَ اللّاوِيِّينَ أَنْ يُسَبِّحُوا الرَّبَّ بِتَرَانِيمِ دَاوُدَ وَآسَافَ النَّبِيِّ، فَرَتَّلُوا بِابْتِهَاجٍ، وَسَجَدُوا وَعَبَدُوا الرَّبَّ.٣٠
31 ೩೧ ಆಮೇಲೆ ಹಿಜ್ಕೀಯನು ಸಮೂಹದವರಿಗೆ, “ನೀವು ಈಗ ಯೆಹೋವನಿಗೋಸ್ಕರ ನಿಮ್ಮನ್ನು ಪ್ರತಿಷ್ಠಿಸಿಕೊಂಡಿರುವಿಯಲ್ಲಾ; ಹತ್ತಿರ ಬಂದು ಯೆಹೋವನಿಗೆ ಸ್ತೋತ್ರಮಾಡಿ ಆತನ ಆಲಯಕ್ಕೋಸ್ಕರ ಸಮಾಧಾನ ಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿರಿ” ಎನ್ನಲು ಸಮೂಹದವರು ಸಮಾಧಾನಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿದ್ದಲ್ಲದೆ, ಅನೇಕರು ಸ್ವ ಇಚ್ಛೆಯಿಂದ ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು.
ثُمَّ قَالَ حَزَقِيَّا لِلْحَاضِرِينَ: «الآنَ قَدْ كَرَّسْتُمْ أَنْفُسَكُمْ لِلرَّبِّ، فَهَاتُوا ذَبَائِحَ وَقَرَابِينَ الشُّكْرِ لِهَيْكَلِ الرَّبِّ». فَأَقْبَلَتِ الْجَمَاعَةُ بِذَبَائِحَ وَقَرَابِينِ شُكْرٍ، وَأَتَى كُلُّ سَخِيٍّ بِمُحْرَقَاتٍ.٣١
32 ೩೨ ಸಮೂಹದವರು ಸರ್ವಾಂಗಹೋಮಕ್ಕೋಸ್ಕರ ತಂದೊಪ್ಪಿಸಿದ ಹೋರಿಗಳು ಎಪ್ಪತ್ತು, ಟಗರುಗಳು ನೂರು, ಕುರಿಮರಿಗಳು ಇನ್ನೂರು. ಇವೆಲ್ಲವು ಯೆಹೋವನಿಗೆ ಸರ್ವಾಂಗಹೋಮ ಸಮರ್ಪಣೆಗಾಗಿಯೇ ಮೀಸಲಾದವು.
وَبَلَغَتْ جُمْلَةُ مَا تَقَدَّمَتْ بِهِ الْجَمَاعَةُ مِنْ مُحْرَقَاتٍ سَبْعِينَ ثَوْراً وَمِئَةَ كَبْشٍ وَمِئَتَيْ خَرُوفٍ، قُرِّبَتْ جَمِيعُهَا مُحْرَقَاتٍ لِلرَّبِّ.٣٢
33 ೩೩ ದೇವರಿಗೆ ಕಾಣಿಕೆಯಾಗಿ ಕೊಡಲ್ಪಟ್ಟ ಹಿಂಡುಗಳಲ್ಲಿ ಹೋರಿಗಳು ಆರುನೂರು, ಕುರಿಗಳು ಮೂರು ಸಾವಿರ.
أَمَّا الذَّبَائِحُ الْمُخَصَّصَةُ كَأَقْدَاسٍ فَقَدْ بَلَغَ عَدَدُهَا سِتَّ مِئَةٍ مِنَ الْبَقَرِ وَثَلاثَةَ آلافٍ مِنَ الضَّأْنِ.٣٣
34 ೩೪ ಯಾಜಕರು ಕೆಲವು ಮಂದಿಯಾದುದ್ದರಿಂದ ಸರ್ವಾಂಗಹೋಮದ ಪ್ರಾಣಿಗಳ ಚರ್ಮವನ್ನು ಸುಲಿಯುವುದು ಅವರಿಂದ ಆಗದೆ ಹೋಯಿತು. ಆದುದರಿಂದ ಮಿಕ್ಕ ಯಾಜಕರೂ ತಮ್ಮನ್ನು ಶುದ್ಧಿಪಡಿಸಿಕೊಳ್ಳುವವರೆಗೂ ಆ ಕೆಲಸವು ಮುಗಿಯುವ ತನಕ, ಅವರ ಬಂಧುಗಳಾದ ಲೇವಿಯರು ಅವರಿಗೆ ಸಹಾಯಮಾಡುತ್ತಿದ್ದರು. ತಮ್ಮನ್ನು ಶುದ್ಧಿಪಡಿಸಿಕೊಳ್ಳುವುದರಲ್ಲಿ ಯಾಜಕರಿಗಿಂತ ಲೇವಿಯರೇ ಹೆಚ್ಚು ಶ್ರದ್ಧೆಯುಳ್ಳವರಾಗಿದ್ದರು.
وَلَمَّا كَانَ عَدَدُ الْكَهَنَةِ غَيْرَ كَافٍ لِلْقِيَامِ بِسَلْخِ كُلِّ تِلْكَ الْمُحْرَقَاتِ، سَاعَدَهُمُ اللّاوِيُّونَ حَتَّى اكْتَمَلَ الْعَمَلُ، وَحَتَّى تَطَهَّرَ بَقِيَّةُ الْكَهَنَةِ، لأَنَّ اللّاوِيِّينَ كَانُوا أَكْثَرَ اهْتِمَاماً بِتَطْهِيرِ أَنْفُسِهِمْ مِنَ الْكَهَنَةِ.٣٤
35 ೩೫ ಇದಲ್ಲದೆ ಯಾಜಕರೂ ಯೆಹೋವನಿಗೆ ಸಮರ್ಪಿಸಬೇಕಾಗಿದ್ದ ಸರ್ವಾಂಗಹೋಮ, ಸಮಾಧಾನ ಯಜ್ಞಗಳ ಕೊಬ್ಬು ಹಾಗು ಸರ್ವಾಂಗಹೋಮ ಸಂಬಂಧವಾದ ಪಾನದ್ರವ್ಯ ಇವು ಅಪಾರವಾಗಿದ್ದವು.
وَفَضْلاً عَنِ الْمُحْرَقَاتِ الْكَثِيرَةِ فَقَدْ تَوَافَرَ شَحْمُ ذَبَائِحِ السَّلامِ وَسَكَائِبُ خَمْرِ الْمُحْرَقَاتِ. وَهَكَذَا عَادَتِ الْعِبَادَةُ فِي الْهَيْكَلِ إِلَى سَابِقِ عَهْدِهَا.٣٥
36 ೩೬ ಹೀಗೆ ಯೆಹೋವನ ಆಲಯದ ಸೇವಾಕ್ರಮವು ಪುನಃ ಸ್ಥಾಪಿತವಾಯಿತು. ದೇವರು ತಾನೇ ತನ್ನ ಪ್ರಜೆಗಳಿಗಾಗಿ ಈ ಕಾರ್ಯವನ್ನು ನೆರವೇರಿಸಿದ್ದರಿಂದ, ಹಿಜ್ಕೀಯನೂ ಮತ್ತು ಎಲ್ಲಾ ಜನರೂ ಸಂತೋಷಿಸಿದರು.
وَابْتَهَجَ حَزَقِيَّا وَجَمِيعُ الشَّعْبِ بِمَا أَنْعَمَ الرَّبُّ بِهِ عَلَيْهِمْ، لأَنَّ الأَمْرَ حَدَثَ بِصُورَةٍ مُفَاجِئَةٍ.٣٦

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 29 >