< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 29 >
1 ೧ ಹಿಜ್ಕೀಯನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷ ಆಳಿದನು. ಜೆಕರ್ಯನ ಮಗಳಾದ ಅಬೀಯ ಎಂಬಾಕೆಯು ಅವನ ತಾಯಿ.
၁ဟေဇကိသည်အသက်နှစ်ဆယ့်ငါးနှစ်ရှိ သောအခါ ယုဒပြည်ဘုရင်အဖြစ်နန်းတက်၍ ယေရုရှလင်မြို့တွင်နှစ်ဆယ့်ကိုးနှစ်နန်းစံရ လေသည်။ သူ၏မယ်တော်မှာဇာခရိ၏သမီး အာဘိဖြစ်၏။-
2 ೨ ಅವನು ಎಲ್ಲಾ ವಿಷಯಗಳಲ್ಲಿಯೂ ನೀತಿವಂತನಾಗಿ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು.
၂သူသည်ဘေးတော်ဒါဝိဒ်မင်း၏စံနမူနာ ကိုလိုက်၍ ထာဝရဘုရားနှစ်သက်တော်မူ သောအမှုတို့ကိုပြု၏။
3 ೩ ಅವನು ತನ್ನ ಆಳ್ವಿಕೆಯ ಮೊದಲನೆಯ ವರ್ಷದ ಮೊದಲನೆಯ ತಿಂಗಳಲ್ಲಿ ಯೆಹೋವನ ಆಲಯದ ಬಾಗಿಲುಗಳನ್ನು ತೆರೆಯಿಸಿ ಅವುಗಳನ್ನು ಭದ್ರಪಡಿಸಿದನು.
၃ဟေဇကိသည်မိမိနန်းတက်သည့်နှစ် ပထမလ၌ ဗိမာန်တော်တံခါးများကို ပြန်လည်ဖွင့်လှစ်၍ပြုပြင်စေတော်မူ၏။-
4 ೪ ಆಮೇಲೆ ಯಾಜಕರನ್ನೂ ಮತ್ತು ಲೇವಿಯರನ್ನೂ ದೇವಾಲಯದ ಮೂಡಣದಿಕ್ಕಿನ ಬಯಲಿನಲ್ಲಿ ಸೇರಿಸಿ
၄သူသည်ယဇ်ပုရောဟိတ်များနှင့်လေဝိအနွယ် ဝင်တို့အား ဗိမာန်တော်အရှေ့တံတိုင်းအတွင်း တွင်စုဝေးစေပြီးလျှင်၊-
5 ೫ ಅವರಿಗೆ, “ಲೇವಿಯರೇ, ನನ್ನ ಮಾತನ್ನು ಕೇಳಿರಿ; ಈಗ ನಿಮ್ಮನ್ನು ಶುದ್ಧೀಕರಿಸಿಕೊಂಡು ನಿಮ್ಮ ಪೂರ್ವಿಕರ ದೇವರಾದ ಯೆಹೋವನ ಪವಿತ್ರಾಲಯದಲ್ಲಿರುವ ಹೊಲಸನ್ನೆಲ್ಲಾ ಹೊರಗೆ ಹಾಕಿ ಆಲಯವನ್ನು ಶುದ್ಧೀಕರಿಸಿರಿ.
၅မိန့်ခွန်းမြွက်ကြားတော်မူသည်။ မင်းကြီး က``အချင်းလေဝိအနွယ်ဝင်တို့၊ သင်တို့ သည်မိမိတို့ကိုယ်ကိုဆက်ကပ်ပူဇော်လျက် သင်တို့ဘိုးဘေးများ၏ ဘုရားသခင် ထာဝရဘုရား၏ဗိမာန်တော်သန့်စင်မှု ကိုဆောင်ရွက်ကြလော့။ ဗိမာန်တော်ကိုညစ် ညမ်းစေသည့်အရာဟူသမျှကိုဖယ်ရှား ကြလော့။-
6 ೬ ನಮ್ಮ ಪೂರ್ವಿಕರು ನಮ್ಮ ದೇವರಾದ ಯೆಹೋವನಿಗೆ ದ್ರೋಹಮಾಡಿ, ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದು ಆತನನ್ನು ತೊರೆದುಬಿಟ್ಟರು. ಅವರು ಆತನ ನಿವಾಸ ಸ್ಥಳವನ್ನು ತೊರೆದು ವಿಮುಖರಾದರು.
၆ငါတို့ဘိုးဘေးများသည်ငါတို့ဘုရားသခင်ထာဝရဘုရားကိုသစ္စာဖောက်၍ ကိုယ်တော်မနှစ်သက်သည့်အမှုတို့ကိုပြု ကြ၏။ သူတို့သည်ကိုယ်တော်ကိုစွန့်၍ စံတော်မူရာဌာနကိုကျောခိုင်းကြ၏။-
7 ೭ ಅದರ ಮಂಟಪದ ಬಾಗಿಲುಗಳನ್ನು ಮುಚ್ಚಿ, ದೀಪಗಳನ್ನು ನಂದಿಸಿದರು. ಇಸ್ರಾಯೇಲ್ ದೇವರ ಪವಿತ್ರ ಸ್ಥಾನದಲ್ಲಿ ಧೂಪಹಾಕುವುದನ್ನೂ, ಸರ್ವಾಂಗಹೋಮ ಸಮರ್ಪಿಸುವುದನ್ನೂ ನಿಲ್ಲಿಸಿಬಿಟ್ಟರು.
၇သူတို့သည်ဗိမာန်တော်တံခါးများကို ပိတ်ထားပြီးလျှင် မီးခွက်များတွင်မီးငြိမ်း စေကာဣသရေလအမျိုးသားတို့ ဘုရားသခင်၏ဗိမာန်တော်၌နံ့သာပေါင်းကို မီးရှို့ပူဇော်မှုမပြုကြ။ မီးရှို့ရာပူဇော် သကာများကိုလည်းမဆက်သကြ။-
8 ೮ ಆದುದರಿಂದ ಯೆಹೋವನು ಯೆಹೂದ ದೇಶದ ಮೇಲೆಯೂ ಯೆರೂಸಲೇಮಿನ ಮೇಲೆಯೂ, ಕೋಪವುಳ್ಳವನಾಗಿ ಅವುಗಳನ್ನು ಭಯಭೀತಿಗೂ ನಿಂದೆಗೂ, ಪರಿಹಾಸ್ಯಗಳಿಗೂ ಗುರಿಮಾಡಿದ್ದಾನೆ; ಇದಕ್ಕೆ ನೀವೇ ಸಾಕ್ಷಿಗಳು.
၈သို့ဖြစ်၍ထာဝရဘုရားသည်ယုဒပြည် နှင့် ယေရုရှလင်မြို့တို့ကိုအမျက်ထွက်၍ ပြုတော်မူသောအမှုတို့ကို မြင်ရကြသူ အပေါင်းတို့သည်ထိတ်လန့်တုန်လှုပ်ကြ ကုန်၏။ ဤအဖြစ်အပျက်ကိုသင်တို့ကောင်း စွာသိကြ၏။-
9 ೯ ಅದೇ ಕಾರಣದಿಂದ ನಮ್ಮ ಹಿರಿಯರು ಕತ್ತಿಯಿಂದ ಹತರಾದರು; ನಮ್ಮ ಗಂಡು ಹೆಣ್ಣು ಮಕ್ಕಳೂ, ಹೆಂಡತಿಯರೂ ಸೆರೆಯವರಾಗಿ ಹೋಗಬೇಕಾಯಿತು.
၉ငါတို့၏ဖခင်များသည်စစ်ပွဲတွင်ကျဆုံး ခဲ့ကြ၍ ငါတို့သားမယားများသည်ဖမ်း ဆီးခေါ်ဆောင်သွားခြင်းကိုခံရကြလေ သည်။
10 ೧೦ ಈಗ ನಮ್ಮ ಮೇಲಿರುವ ಆತನ ಕೋಪಾಗ್ನಿಯು ತೊಲಗಿ ಹೋಗುವಂತೆ ಇಸ್ರಾಯೇಲಿನ ದೇವರಾದ ಯೆಹೋವನೊಡನೆ ಒಡಂಬಡಿಕೆ ಮಾಡಿಕೊಳ್ಳುವುದಕ್ಕೆ ಮನಸ್ಸುಳ್ಳವನಾಗಿದ್ದೇನೆ.
၁၀``အမျက်တော်ပြေစေရန်ယခုငါသည် ဣသရေလအမျိုးသားတို့၏ဘုရားသခင် ထာဝရဘုရားနှင့်ပဋိညာဉ်ပြုရန်အကြံ ရှိ၏။-
11 ೧೧ ಹೀಗಿರಲಾಗಿ ನನ್ನ ಮಕ್ಕಳೇ, ಉದಾಸೀನರಾಗಿರಬೇಡಿ; ಯೆಹೋವನು ತನ್ನನ್ನು ಆರಾಧಿಸುವುದಕ್ಕೂ ಧೂಪಹಾಕುವುದಕ್ಕೂ ನಿಮ್ಮನ್ನು ತನ್ನ ಸಾನ್ನಿಧ್ಯ ಸೇವಕರನ್ನಾಗಿ ಆರಿಸಿಕೊಂಡನಲ್ಲಾ” ಎಂದು ಹೇಳಿದನು.
၁၁ငါ့သားတို့၊ မဖင့်နွှဲကြနှင့်၊ ထာဝရဘုရား အားနံ့သာပေါင်းမီးရှို့ပူဇော်ရန်နှင့် ကိုယ် တော်အားကိုးကွယ်ဝတ်ပြုရာတွင်ဦးဆောင် ရန် ကိုယ်တော်ရွေးချယ်ခန့်ထားသူများမှာ သင်တို့ပင်ဖြစ်ကြ၏'' ဟုမိန့်တော်မူ၏။
12 ೧೨ ಕೂಡಲೆ ಲೇವಿಯರು ಮುಂದೆ ಬಂದರು: ಕೆಹಾತ್ಯರಲ್ಲಿ ಅಮಾಸೈಯ ಮಗನಾದ ಮಹತ್, ಅಜರ್ಯನ ಮಗನಾದ ಯೋವೇಲ್, ಮೆರಾರೀಯರಲ್ಲಿ ಅಬ್ದೀಯ ಮಗನಾದ ಕೀಷ್, ಯೆಹಲ್ಲೆಲೇಲನ ಮಗನಾದ ಅಜರ್ಯ, ಗೇರ್ಷೋನ್ಯರಲ್ಲಿ ಜಿಮ್ಮನ ಮಗನಾದ ಯೋವಾಹ, ಯೋವಾಹನ ಮಗನಾದ ಏದೆನ್,
၁၂ထိုအရပ်၌ရှိသောလေဝိအနွယ်ဝင်များမှာ အောက်ပါအတိုင်းဖြစ်သည်။ ကောဟပ်သားချင်း စုမှအာမသဲ၏သားမာဟတ်နှင့်အာဇရိ ၏သားယောလ။ မေရာရိသားချင်းစုမှအာ ဗဒိ၏သားကိရှနှင့်ယေဟလေလ၏သား အာဇရိ။ ဂေရရှုံသားချင်းစုမှဇိမ္မ၏သား ယောအာနှင့်ယောအာ၏သားဧဒင်။ ဧလိ ဇဖန်သားချင်းစုမှရှိမရိနှင့်ယေယေလ။ အာသပ်သားချင်းစုမှဇာခရိနှင့်မတ္တနိ။ ဟေမန်သားချင်းစုမှယေဟေလနှင့်ရှိမိ။ ယေဒုသုန်သားချင်းစုမှရှေမာယနှင့် သြဇေလ။
13 ೧೩ ಎಲೀಚಾಫಾನ್ಯರಲ್ಲಿ ಶಿಮ್ರಾ, ಯೆಗೀಯೇಲ್, ಆಸಾಫ್ಯರಲ್ಲಿ ಜೆಕರ್ಯ ಮತ್ತು ಮತ್ತನ್ಯ,
၁၃
14 ೧೪ ಹೇಮಾನ್ಯರಲ್ಲಿ ಯೆಹೀಯೇಲ್, ಶಿಮ್ಮೀ, ಯೆದೂತೂನ್ಯರಲ್ಲಿ ಶೆಮಾಯ ಹಾಗು ಉಜ್ಜೀಯೇಲ್,
၁၄
15 ೧೫ ಎಂಬ ಲೇವಿಯರು ಎದ್ದು ತಮ್ಮ ಸಹೋದರರನ್ನು ಸೇರಿಕೊಂಡರು. ಅವರು ಅರಸನ ಆಜ್ಞಾನುಸಾರವಾಗಿ ಯೆಹೋವನ ಧರ್ಮಶಾಸ್ತ್ರ ವಿಧಿಯ ಮೇರೆಗೆ ತಮ್ಮನ್ನು ಶುದ್ಧೀಕರಿಸಿಕೊಂಡು ಯೆಹೋವನ ಆಲಯವನ್ನು ಶುದ್ಧೀಕರಿಸುವುದಕ್ಕೆ ಬಂದರು.
၁၅ထိုသူတို့သည်လေဝိအနွယ်ဝင်အချင်း ချင်းတို့အားစုဝေးစေပြီးလျှင် ဘာသာ ရေးထုံးနည်းအရသန့်စင်မှုကိုပြုစေ ကြ၏။ ထိုနောက်သူတို့သည်မင်းကြီးမိန့် မှာတော်မူခဲ့သည့်အတိုင်း ထာဝရဘုရား ၏တရားနှင့်အညီဗိမာန်တော်ကို သန့်စင်စေကြ၏။-
16 ೧೬ ಯಾಜಕರು ಯೆಹೋವನ ಆಲಯವನ್ನು ಶುದ್ಧಮಾಡುವುದಕ್ಕಾಗಿ ಒಳಗೆ ಹೋಗಿ ಪವಿತ್ರಸ್ಥಾನದಲ್ಲಿದ್ದ ಹೊಲಸನ್ನೆಲ್ಲಾ ತಂದು ಪ್ರಾಕಾರದಲ್ಲಿ ಹಾಕಿದರು. ಲೇವಿಯರು ಅದನ್ನು ಕೂಡಿಸಿ ಹೊರಗೆ ಒಯ್ದು ಕಿದ್ರೋನ್ ಹಳ್ಳದಲ್ಲಿ ಹಾಕಿದರು.
၁၆ယဇ်ပုရောဟိတ်တို့သည်သန့်စင်မှုကို ဆောင်ရွက်ရန် ဗိမာန်တော်သို့ဝင်၍ဘာသာ ရေးထုံးနည်းအရ မသန့်စင်သည့်အရာ ဟူသမျှကိုတံတိုင်းတော်သို့ထုတ်လာ သောအခါ ထိုအရာများကိုလေဝိအနွယ် ဝင်တို့ကမြို့ပြင်ကေဒြုန်ချိုင့်ဝှမ်းသို့ သယ်ပို့ကြလေသည်။
17 ೧೭ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಶುದ್ಧೀಕರಣ ಕಾರ್ಯವನ್ನು ಪ್ರಾರಂಭಿಸಿದರು. ಎಂಟನೆಯ ದಿನದಲ್ಲಿ ಯೆಹೋವನ ಆಲಯದ ಮಂಟಪಕ್ಕೆ ಕೈಹಾಕಿದರು. ಹೀಗೆ ಯೆಹೋವನ ಆಲಯವನ್ನು ಪರಿಶುದ್ಧಪಡಿಸುವುದರಲ್ಲಿ ಎಂಟು ದಿನಗಳು ಕಳೆದು ಹೋದವು. ಮೊದಲನೆಯ ತಿಂಗಳಿನ ಹದಿನಾರನೆಯ ದಿನದಲ್ಲಿ ಕೆಲಸವೆಲ್ಲಾ ಮುಗಿಯಿತು.
၁၇သူတို့သည်ပထမလတစ်ရက်နေ့မှအစ ပြု၍ မုခ်ဦးခန်းအပါအဝင်ဗိမာန်တော် သန့်စင်မှုကိုဆောင်ရွက်ကြရာရှစ်ရက်နေ့ ၌ပြီးစီးသွား၏။ ထိုနောက်သူတို့သည် ထပ်မံ၍ရှစ်ရက်တိုင်တိုင် လဆန်းတစ်ဆယ့် ခြောက်ရက်နေ့အထိဗိမာန်တော်ကိုဝတ် ပြုကိုးကွယ်မှုအတွက်ပြင်ဆင်ကြလေ သည်။
18 ೧೮ ಆಮೇಲೆ ಅವರು ಅರಮನೆಯೊಳಗೆ ಹೋಗಿ, ಅರಸನಾದ ಹಿಜ್ಕೀಯನಿಗೆ, “ನಾವು ಯೆಹೋವನ ಸಮಸ್ತಾಲಯವನ್ನೂ, ಯಜ್ಞವೇದಿಯನ್ನೂ, ಅದರ ಉಪಕರಣಗಳನ್ನೂ, ನೈವೇದ್ಯ ರೊಟ್ಟಿಗಳನ್ನಿಡತಕ್ಕ ಮೇಜನ್ನೂ ಹಾಗು ಅದರ ಸಾಮಾನುಗಳನ್ನೂ ಶುದ್ಧಿಮಾಡಿದೆವು.
၁၈လေဝိအနွယ်ဝင်တို့သည် ဟေဇကိမင်း အား``အကျွန်ုပ်တို့သည်မီးရှို့ရာပူဇော် သကာများအတွက်ယဇ်ပလ္လင်၊ ရှေ့တော်မုန့် တင်ရာစားပွဲနှင့်အသုံးအဆောင်များ အပါအဝင်ဗိမာန်တော်တစ်ခုလုံးကို ဘာသာရေးထုံးနည်းအရသန့်စင်မှု ဆောင်ရွက်ပြီးကြပါပြီ။-
19 ೧೯ ಅರಸನಾದ ಆಹಾಜನು ತನ್ನ ಆಳ್ವಿಕೆಯಲ್ಲಿ ದೈವದ್ರೋಹಿಯಾಗಿ ತಳ್ಳಿಬಿಟ್ಟಿದ್ದ ಪಾತ್ರೆಗಳನ್ನು ತಿರುಗಿ ತಂದಿಟ್ಟು ಪ್ರತಿಷ್ಠಿಸಿದ್ದೇವೆ; ಅವು ಈಗ ಯೆಹೋವನ ಯಜ್ಞವೇದಿಯ ಮುಂದಿರುತ್ತವೆ” ಎಂದರು.
၁၉အကျွန်ုပ်တို့သည်ဘုရားသခင်အားအာ ခတ်မင်းသစ္စာဖောက်စဉ်အခါက ယူသွား သည့်အသုံးအဆောင်များကိုလည်းပြန် ၍ယူဆောင်ကာပြန်လည်ဆက်ကပ်ပြီး ကြပါပြီ။ ထိုအရာအားလုံးသည် ထာဝရဘုရား၏ယဇ်ပလ္လင်တော်ရှေ့တွင် ရှိပါ၏'' ဟုသံတော်ဦးတင်ကြ၏။
20 ೨೦ ಅರಸನಾದ ಹಿಜ್ಕೀಯನು ಮರುದಿನ ಬೆಳಗಿನ ಜಾವದಲ್ಲೆದ್ದು ಪಟ್ಟಣದ ಅಧಿಕಾರಿಗಳನ್ನು ಕರೆಸಿ ಅವರೊಡನೆ ಯೆಹೋವನ ಆಲಯಕ್ಕೆ ಹೋದನು.
၂၀ဟေဇကိမင်းသည်မဆိုင်းမတွဘဲ ယေရု ရှလင်မြို့မှလူကြီးလူကောင်းများကို စုဝေးစေပြီးလျှင် သူတို့နှင့်အတူဗိမာန် တော်သို့ကြွတော်မူ၏။-
21 ೨೧ ಅವರು ರಾಜ್ಯಾಡಳಿತ ದೇವಾಲಯ, ಯೆಹೂದ ಪ್ರಜೆಗಳು ಇವುಗಳಿಗೋಸ್ಕರ ದೋಷಪರಿಹಾರಕ ಯಜ್ಞಮಾಡುವುದಕ್ಕಾಗಿ ಹೋರಿ, ಟಗರು, ಕುರಿಮರಿ, ಆಡು ಇವುಗಳಲ್ಲಿ ಏಳೇಳನ್ನು ತಂದರು. ಅರಸನು ಯಾಜಕರಾದ ಆರೋನನ ಸಂತಾನದವರಿಗೆ ಯೆಹೋವನ ಯಜ್ಞವೇದಿಯ ಮೇಲೆ ಸರ್ವಾಂಗಹೋಮ ಮಾಡಬೇಕೆಂದು ಆಜ್ಞಾಪಿಸಿದನು.
၂၁မင်းဆွေမင်းမျိုးများအပြစ်၊ ယုဒပြည်သူ များအပြစ်ပြေစေရန်နှင့် ဗိမာန်တော်သန့် စင်စေရန်သူတို့သည်နွားခုနစ်ကောင်၊ သိုး ခုနစ်ကောင်၊ သိုးငယ်ခုနစ်ကောင်နှင့်ဆိတ် ခုနစ်ကောင်ကိုယူဆောင်သွားကြ၏။ မင်း ကြီးသည်အာရုန်မှဆင်းသက်သောယဇ် ပုရောဟိတ်တို့အား``တိရစ္ဆာန်များကိုယဇ် ပလ္လင်ပေါ်တွင်တင်၍ပူဇော်ကြလော့'' ဟု မိန့်တော်မူ၏။-
22 ೨೨ ಹೋರಿಗಳನ್ನು ವಧಿಸಿದ ಮೇಲೆ ಯಾಜಕರು ಅವುಗಳ ರಕ್ತವನ್ನು ಕೂಡಿಸಿ ಯಜ್ಞವೇದಿಗೆ ಪ್ರೋಕ್ಷಿಸಿದರು. ಅನಂತರ ಟಗರುಗಳನ್ನು ವಧಿಸಿದ ಮೇಲೆ ಯಾಜಕರು, ರಕ್ತವನ್ನು ಕೂಡಿಸಿ ಯಜ್ಞವೇದಿಗೆ ಅನಂತರ ಟಗರುಗಳನ್ನು ವಧಿಸಿ ಅವುಗಳ ರಕ್ತವನ್ನು ಯಜ್ಞವೇದಿಗೆ ಪ್ರೋಕ್ಷಿಸಿದರು. ಆ ಮೇಲೆ ಕುರಿಮರಿಗಳನ್ನು ವಧಿಸಿ ಅವುಗಳ ರಕ್ತವನ್ನೂ ಯಜ್ಞವೇದಿಗೆ ಪ್ರೋಕ್ಷಿಸಿದರು.
၂၂ယဇ်ပုရောဟိတ်တို့သည်ဦးစွာနွားများ ကိုသတ်၍ သွေးကိုယဇ်ပလ္လင်ပေါ်တွင်ပက် ဖြန်းကြ၏။ ထိုနောက်သိုးများကိုသတ်၍ သွေးကိုယဇ်ပလ္လင်ပေါ်တွင်ပက်ဖြန်းကြ၏။ ထိုနောက်သိုးငယ်များကိုသတ်၍သွေး ကိုယဇ်ပလ္လင်ပေါ်တွင်ပက်ဖြန်းကြ၏။-
23 ೨೩ ಕಡೆಯಲ್ಲಿ ದೋಷಪರಿಹಾರಕ ಯಜ್ಞಕ್ಕಾಗಿ ತಂದ ಹೋತಗಳನ್ನು ಅರಸನ ಮುಂದೆಯೂ ಮತ್ತು ಸಮೂಹದವರ ಮುಂದೆಯೂ ನಿಲ್ಲಿಸಿದರು. ಅವರು ಅವುಗಳ ಮೇಲೆ ತಮ್ಮ ಕೈಗಳನ್ನಿಟ್ಟರು.
၂၃နောက်ဆုံး၌သူတို့သည်ဆိတ်များကိုမင်းကြီး နှင့်လူပရိသတ်တို့ထံသို့ယူဆောင်ကာ ဆိတ် တို့အပေါ်သို့လက်များကိုတင်စေကြ၏။-
24 ೨೪ ನಂತರ ಯಾಜಕರು ಅವುಗಳನ್ನು ವಧಿಸಿ ಅವುಗಳ ರಕ್ತವನ್ನು ಸಮಸ್ತ ಇಸ್ರಾಯೇಲರ ದೋಷ ಪರಿಹಾರಕ್ಕಾಗಿ ಯಜ್ಞವೇದಿಯ ಮೇಲೆ ಸುರಿದರು. ಆ ಸರ್ವಾಂಗಹೋಮಗಳೂ, ದೋಷಪರಿಹಾರಕ ಯಜ್ಞಗಳೂ ಎಲ್ಲಾ ಇಸ್ರಾಯೇಲರಿಗಾಗಿ ಇರಬೇಕೆಂದು ಅರಸನು ಆಜ್ಞಾಪಿಸಿದ್ದನು.
၂၄ထိုနောက်ယဇ်ပုရောဟိတ်တို့သည်ဣသရေလ အမျိုးသားတစ်ရပ်လုံးအတွက် အပြစ်ဖြေ ရာယဇ်ကိုပူဇော်ရန်မင်းကြီးအမိန့်ပေး ထားသည့်အတိုင်း ဆိတ်များကိုသတ်၍ ယဇ်ပလ္လင်ပေါ်သို့သွေးကိုသွန်းလောင်းကြ လေသည်။
25 ೨೫ ಇದಲ್ಲದೆ, ಅವನು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಭಜಿಸುವುದಕ್ಕೋಸ್ಕರ ಲೇವಿಯರನ್ನು, ದಾವೀದನ ರಾಜದರ್ಶಿಯಾದ ಗಾದ್ ಹಾಗು ಪ್ರವಾದಿಯಾದ ನಾತಾನ್ ಇವರ ಆಜ್ಞಾನುಸಾರವಾಗಿ ಯೆಹೋವನ ಆಲಯದಲ್ಲಿ ನಿಲ್ಲಿಸಿದನು. ಯೆಹೋವನು ತಾನೇ ಪ್ರವಾದಿಗಳ ಮುಖಾಂತರ ಹೀಗೆ ಆಜ್ಞಾಪಿಸಿದ್ದನು.
၂၅မင်းကြီးသည်ဒါဝိဒ်မင်းအား ဘုရင့်ပရော ဖက်ဂဒ်နှင့်ပရောဖက်နာသန်အားဖြင့် ထာဝရဘုရားပေးတော်မူသည့်ညွှန်ကြား ချက်များကိုလိုက်နာကာစောင်းများ၊ လင်း ကွင်းများကိုင်သူလေဝိအနွယ်ဝင်တို့ကို နေရာချထားတော်မူ၏။-
26 ೨೬ ಆ ಲೇವಿಯರು ದಾವೀದನ ವಾದ್ಯಗಳನ್ನೂ, ಯಾಜಕರೂ ತುತ್ತೂರಿಗಳನ್ನೂ ಹಿಡಿದು ನಿಂತಿದ್ದರು.
၂၆သူတို့သည်ဒါဝိဒ်မင်းအသုံးပြုခဲ့သော တူရိယာမျိုးများကိုကိုင်၍ရပ်နေကြ၏။ ယဇ်ပုရောဟိတ်များကတံပိုးခရာများ ကိုင်၍ရပ်နေကြ၏။-
27 ೨೭ ಆಗ ಹಿಜ್ಕೀಯನು ಯಜ್ಞವೇದಿಯ ಮೇಲೆ ಸರ್ವಾಂಗಹೋಮವನ್ನು ಸಮರ್ಪಿಸುವುದಕ್ಕೆ ಆಜ್ಞಾಪಿಸಿದನು. ಹೀಗೆ ಸರ್ವಾಂಗಹೋಮ ಸಮರ್ಪಣೆ ಪ್ರಾರಂಭಿಸಿದೊಡನೆ ಇಸ್ರಾಯೇಲ್ ರಾಜನಾದ ದಾವೀದನ ವಾದ್ಯಗಳಿಂದ ಯೆಹೋವನನ್ನು ಭಜಿಸುವುದೂ, ತುತ್ತೂರಿ ಊದುವುದೂ ಆರಂಭವಾಯಿತು.
၂၇မီးရှို့ရာပူဇော်သကာများကိုဆက်သရန် မင်းကြီးအမိန့်ပေးတော်မူသဖြင့် ပူဇော် ဆက်သမှုကိုအစပြုသောအခါလူတို့ သည်ထာဝရဘုရား၏ဂုဏ်တော်ကို ထောမနာပြု၍သီချင်းဆိုကြလေသည်။ ဂီတပညာသည်တို့လည်း တံပိုးခရာ များနှင့်အခြားတူရိယာများကိုတီး မှုတ်ကြလေသည်။-
28 ೨೮ ಸರ್ವಾಂಗಹೋಮ ಸಮರ್ಪಣೆಯು ಮುಗಿಯುವವರೆಗೆ ಸರ್ವಸಮೂಹದವರು ಸಾಷ್ಟಾಂಗ ನಮಸ್ಕಾರ ಮಾಡುತ್ತಲೂ, ಗಾಯಕರೂ ಗಾನಮಾಡುತ್ತಲೂ, ತುತ್ತೂರಿ ಊದುವವರು ತುತ್ತೂರಿ ಊದುತ್ತಲೂ ಇದ್ದರು.
၂၈ထိုအရပ်တွင်ရှိနေသောသူအပေါင်းတို့ သည် ယဇ်များကိုမီးရှို့ပူဇော်ပြီးသည် အထိပါဝင်၍ဝတ်ပြုကိုးကွယ်ကြ၏။ သီချင်းသီဆိုသူများကသီချင်းသီဆို၍ တံပိုးခရာမှုတ်သူများကတံပိုးခရာ မှုတ်ကြကုန်၏။-
29 ೨೯ ಸರ್ವಾಂಗಹೋಮ ಸಮರ್ಪಣೆಯು ಮುಗಿದ ಮೇಲೆ ಅರಸನೂ ಅವನ ಜೊತೆಯಲ್ಲಿದ್ದವರೆಲ್ಲರೂ ಸಾಷ್ಟಾಂಗ ನಮಸ್ಕಾರ ಮಾಡಿದರು.
၂၉ထိုနောက်မင်းကြီးနှင့်ပြည်သူအပေါင်းတို့ သည်ဒူးထောက်လျက် ဘုရားသခင်အား ရှိခိုးကြလေသည်။-
30 ೩೦ ಅರಸನಾದ ಹಿಜ್ಕೀಯನೂ, ಪ್ರಭುಗಳೂ ದಾವೀದನ ಮತ್ತು ದರ್ಶಿಯಾದ ಆಸಾಫನ ಕೀರ್ತನೆಗಳಿಂದ ಯೆಹೋವನನ್ನು ಸ್ತುತಿಸಬೇಕೆಂದು ಲೇವಿಯರಿಗೆ ಆಜ್ಞಾಪಿಸಲು, ಅವರು ಉತ್ಸಾಹದಿಂದ ಸ್ತುತಿಸುತ್ತಾ ತಲೆಬಾಗಿ ನಮಸ್ಕರಿಸಿದರು.
၃၀ဟေဇကိမင်းနှင့်ပြည်သူခေါင်းဆောင်များ သည် လေဝိအနွယ်ဝင်တို့အားဒါဝိဒ်နှင့် ပရောဖက်အာသပ်စပ်ဆိုခဲ့သော ထောမနာ သီချင်းများကိုသီဆိုစေကြ၏။ သို့ဖြစ် ၍သူတို့သည်ဝမ်းမြောက်ရွှင်လန်းစွာသီ ချင်းဆို၍ ဒူးထောက်လျက်ဘုရားသခင် ကိုရှိခိုးကြ၏။
31 ೩೧ ಆಮೇಲೆ ಹಿಜ್ಕೀಯನು ಸಮೂಹದವರಿಗೆ, “ನೀವು ಈಗ ಯೆಹೋವನಿಗೋಸ್ಕರ ನಿಮ್ಮನ್ನು ಪ್ರತಿಷ್ಠಿಸಿಕೊಂಡಿರುವಿಯಲ್ಲಾ; ಹತ್ತಿರ ಬಂದು ಯೆಹೋವನಿಗೆ ಸ್ತೋತ್ರಮಾಡಿ ಆತನ ಆಲಯಕ್ಕೋಸ್ಕರ ಸಮಾಧಾನ ಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿರಿ” ಎನ್ನಲು ಸಮೂಹದವರು ಸಮಾಧಾನಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿದ್ದಲ್ಲದೆ, ಅನೇಕರು ಸ್ವ ಇಚ್ಛೆಯಿಂದ ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು.
၃၁ဟေဇကိကပြည်သူတို့အား``ယခုသင် တို့သည်ဘာသာရေးထုံးနည်းအရ သန့်စင် မှုကိုပြုပြီးဖြစ်၍ ထာဝရဘုရားထံ တော်သို့ကျေးဇူးတော်ချီးမွမ်းရာပူဇော် သကာအဖြစ်ဖြင့် ယဇ်များကိုယူဆောင်လာ ကြလော့'' ဟုမိန့်တော်မူသည့်အတိုင်းလူ တို့လိုက်နာဆောင်ရွက်ကြ၏။ အချို့သော သူတို့သည်မိမိတို့စေတနာအလျောက် မီးရှို့ပူဇော်ရန်တိရစ္ဆာန်များကိုယူဆောင် လာကြလေသည်။-
32 ೩೨ ಸಮೂಹದವರು ಸರ್ವಾಂಗಹೋಮಕ್ಕೋಸ್ಕರ ತಂದೊಪ್ಪಿಸಿದ ಹೋರಿಗಳು ಎಪ್ಪತ್ತು, ಟಗರುಗಳು ನೂರು, ಕುರಿಮರಿಗಳು ಇನ್ನೂರು. ಇವೆಲ್ಲವು ಯೆಹೋವನಿಗೆ ಸರ್ವಾಂಗಹೋಮ ಸಮರ್ಪಣೆಗಾಗಿಯೇ ಮೀಸಲಾದವು.
၃၂သူတို့သည်နွားကောင်ရေခုနစ်ဆယ်၊ သိုး ကောင်ရေတစ်ရာနှင့်သိုးငယ်ကောင်ရေနှစ် ရာတို့ကိုထာဝရဘုရားအား မီးရှို့ရာ ပူဇော်သကာအဖြစ်ယူဆောင်လာပြီးလျှင်၊-
33 ೩೩ ದೇವರಿಗೆ ಕಾಣಿಕೆಯಾಗಿ ಕೊಡಲ್ಪಟ್ಟ ಹಿಂಡುಗಳಲ್ಲಿ ಹೋರಿಗಳು ಆರುನೂರು, ಕುರಿಗಳು ಮೂರು ಸಾವಿರ.
၃၃လူတို့စားရန်အတွက်နွားကောင်ရေခြောက် ရာနှင့် သိုးကောင်ရေသုံးထောင်ကိုလည်း ယဇ် ပူဇော်ဖို့ယူဆောင်လာကြ၏။-
34 ೩೪ ಯಾಜಕರು ಕೆಲವು ಮಂದಿಯಾದುದ್ದರಿಂದ ಸರ್ವಾಂಗಹೋಮದ ಪ್ರಾಣಿಗಳ ಚರ್ಮವನ್ನು ಸುಲಿಯುವುದು ಅವರಿಂದ ಆಗದೆ ಹೋಯಿತು. ಆದುದರಿಂದ ಮಿಕ್ಕ ಯಾಜಕರೂ ತಮ್ಮನ್ನು ಶುದ್ಧಿಪಡಿಸಿಕೊಳ್ಳುವವರೆಗೂ ಆ ಕೆಲಸವು ಮುಗಿಯುವ ತನಕ, ಅವರ ಬಂಧುಗಳಾದ ಲೇವಿಯರು ಅವರಿಗೆ ಸಹಾಯಮಾಡುತ್ತಿದ್ದರು. ತಮ್ಮನ್ನು ಶುದ್ಧಿಪಡಿಸಿಕೊಳ್ಳುವುದರಲ್ಲಿ ಯಾಜಕರಿಗಿಂತ ಲೇವಿಯರೇ ಹೆಚ್ಚು ಶ್ರದ್ಧೆಯುಳ್ಳವರಾಗಿದ್ದರು.
၃၄ဤတိရစ္ဆာန်များကိုသတ်ရန်ယဇ်ပုရောဟိတ် မလုံလောက်သဖြင့် မိမိတို့ကိုယ်ကိုသန့်စင် မှုပြုပြီးသူ၊ ယဇ်ပုရောဟိတ်များကိုမရ ရှိမီအတွင်းဆောင်ရွက်စရာများပြီးဆုံး ချိန်အထိ လေဝိအနွယ်ဝင်တို့ကကူညီ ရကြ၏။ (ယဇ်ပုရောဟိတ်များထက် လေဝိအနွယ်ဝင်များကဘာသာရေး ထုံးနည်းအရ သန့်စင်မှုကိုပို၍တိကျ စွာပြုတတ်ကြသည်။-)
35 ೩೫ ಇದಲ್ಲದೆ ಯಾಜಕರೂ ಯೆಹೋವನಿಗೆ ಸಮರ್ಪಿಸಬೇಕಾಗಿದ್ದ ಸರ್ವಾಂಗಹೋಮ, ಸಮಾಧಾನ ಯಜ್ಞಗಳ ಕೊಬ್ಬು ಹಾಗು ಸರ್ವಾಂಗಹೋಮ ಸಂಬಂಧವಾದ ಪಾನದ್ರವ್ಯ ಇವು ಅಪಾರವಾಗಿದ್ದವು.
၃၅တစ်ကောင်လုံးမီးရှို့ပူဇော်ရသည့်ယဇ် များအပြင် လူတို့စားသုံးသည့်ယဇ်များ မှဆီဥကိုမီးရှို့ပူဇော်မှု၊ မီးရှို့ရာပူဇော် သကာများနှင့်အတူဆက်ကပ်ရသည့် စပျစ်ရည်ကို သွန်းလောင်းပူဇော်မှုတို့ကို လည်းယဇ်ပုရောဟိတ်များကတာဝန် ယူရကြလေသည်။ သို့ဖြစ်၍ဗိမာန်တော်၌ဝတ်ပြုကိုးကွယ် မှုသည်ပြန်လည်တည်မြဲလေ၏။-
36 ೩೬ ಹೀಗೆ ಯೆಹೋವನ ಆಲಯದ ಸೇವಾಕ್ರಮವು ಪುನಃ ಸ್ಥಾಪಿತವಾಯಿತು. ದೇವರು ತಾನೇ ತನ್ನ ಪ್ರಜೆಗಳಿಗಾಗಿ ಈ ಕಾರ್ಯವನ್ನು ನೆರವೇರಿಸಿದ್ದರಿಂದ, ಹಿಜ್ಕೀಯನೂ ಮತ್ತು ಎಲ್ಲಾ ಜನರೂ ಸಂತೋಷಿಸಿದರು.
၃၆ထာဝရဘုရားသည်ဤအမှုတို့ကိုလျင် မြန်စွာဆောင်ရွက်နိုင်ခွင့်ပေးတော်မူသဖြင့် ဟေဇကိမင်းနှင့်ပြည်သူတို့သည် ရွှင်လန်းဝမ်းမြောက်ကြကုန်၏။