< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 29 >

1 ಹಿಜ್ಕೀಯನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷ ಆಳಿದನು. ಜೆಕರ್ಯನ ಮಗಳಾದ ಅಬೀಯ ಎಂಬಾಕೆಯು ಅವನ ತಾಯಿ.
हिजकियाले राज्य गर्न सुरु गर्दा तिनी पच्‍चिस वर्षका थिए । तिनले यरूशलेममा उनन्‍तिस वर्ष राज्य गरे । तिनकी आमाको नाउँ अबिया थियो । तिनी जकरियाकी छोरी थिइन् ।
2 ಅವನು ಎಲ್ಲಾ ವಿಷಯಗಳಲ್ಲಿಯೂ ನೀತಿವಂತನಾಗಿ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು.
आफ्‍ना पुर्खा दाऊदले गरेझैं परमप्रभुको दृष्‍टिमा जे असल थियो सो तिनले गरे ।
3 ಅವನು ತನ್ನ ಆಳ್ವಿಕೆಯ ಮೊದಲನೆಯ ವರ್ಷದ ಮೊದಲನೆಯ ತಿಂಗಳಲ್ಲಿ ಯೆಹೋವನ ಆಲಯದ ಬಾಗಿಲುಗಳನ್ನು ತೆರೆಯಿಸಿ ಅವುಗಳನ್ನು ಭದ್ರಪಡಿಸಿದನು.
तिनको राजकालको पहिलो वर्षको पहिलो महिनामा हिजकियाले परमप्रभुको मन्‍दिरका ढोकाहरू खोले र तिनको मरम्‍मत गरे ।
4 ಆಮೇಲೆ ಯಾಜಕರನ್ನೂ ಮತ್ತು ಲೇವಿಯರನ್ನೂ ದೇವಾಲಯದ ಮೂಡಣದಿಕ್ಕಿನ ಬಯಲಿನಲ್ಲಿ ಸೇರಿಸಿ
तिनले पुजारीहरू र लेवीहरूलाई ल्‍याए र तिनीहरूलाई पूर्वपट्टिको चोकमा एकसाथ भेला गराए ।
5 ಅವರಿಗೆ, “ಲೇವಿಯರೇ, ನನ್ನ ಮಾತನ್ನು ಕೇಳಿರಿ; ಈಗ ನಿಮ್ಮನ್ನು ಶುದ್ಧೀಕರಿಸಿಕೊಂಡು ನಿಮ್ಮ ಪೂರ್ವಿಕರ ದೇವರಾದ ಯೆಹೋವನ ಪವಿತ್ರಾಲಯದಲ್ಲಿರುವ ಹೊಲಸನ್ನೆಲ್ಲಾ ಹೊರಗೆ ಹಾಕಿ ಆಲಯವನ್ನು ಶುದ್ಧೀಕರಿಸಿರಿ.
तिनले तिनीहरूलाई भने, “ए लेवीहरू हो, मेरा कुरा सुन! आफू-आफूलाई पवित्र गर, र आफ्‍ना पुर्खाहरूका परमप्रभु परमेश्‍वरको मन्‍दिरलाई पवित्र पार, र पवित्रस्‍थानबाट अपवित्र कुरा हटाइदेओ ।
6 ನಮ್ಮ ಪೂರ್ವಿಕರು ನಮ್ಮ ದೇವರಾದ ಯೆಹೋವನಿಗೆ ದ್ರೋಹಮಾಡಿ, ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದು ಆತನನ್ನು ತೊರೆದುಬಿಟ್ಟರು. ಅವರು ಆತನ ನಿವಾಸ ಸ್ಥಳವನ್ನು ತೊರೆದು ವಿಮುಖರಾದರು.
किनकि हाम्रा पुर्खाहरूले पाप गरे र परमप्रभु हाम्रा परमेश्‍वरको दृष्‍टिमा जे खराब थियो सो गरे । तिनीहरूले उहाँलाई त्‍यागे, परमप्रभुको बस्‍नुहुने ठाउँबाट आफ्नो मुहारहरू फर्काए, र त्यसतर्फ आफ्‍ना पीठ फर्काए ।
7 ಅದರ ಮಂಟಪದ ಬಾಗಿಲುಗಳನ್ನು ಮುಚ್ಚಿ, ದೀಪಗಳನ್ನು ನಂದಿಸಿದರು. ಇಸ್ರಾಯೇಲ್ ದೇವರ ಪವಿತ್ರ ಸ್ಥಾನದಲ್ಲಿ ಧೂಪಹಾಕುವುದನ್ನೂ, ಸರ್ವಾಂಗಹೋಮ ಸಮರ್ಪಿಸುವುದನ್ನೂ ನಿಲ್ಲಿಸಿಬಿಟ್ಟರು.
तिनीहरूले दलानका ढोकाहरू पनि बन्‍द गरिदिए र बत्तीहरू निभाए । तिनीहरूले इस्राएलका परमेश्‍वरको पवित्रस्‍थानमा धूप बाल्‍न र होमबलि चढाउन छोडिदिए ।
8 ಆದುದರಿಂದ ಯೆಹೋವನು ಯೆಹೂದ ದೇಶದ ಮೇಲೆಯೂ ಯೆರೂಸಲೇಮಿನ ಮೇಲೆಯೂ, ಕೋಪವುಳ್ಳವನಾಗಿ ಅವುಗಳನ್ನು ಭಯಭೀತಿಗೂ ನಿಂದೆಗೂ, ಪರಿಹಾಸ್ಯಗಳಿಗೂ ಗುರಿಮಾಡಿದ್ದಾನೆ; ಇದಕ್ಕೆ ನೀವೇ ಸಾಕ್ಷಿಗಳು.
यसकारण परमप्रभुको क्रोध यहूदा र यरूशलेममाथि परेको थियो, र उहाँले तिनीहरूलाई डर, आतङ्क र घृणाका पात्र बनाउनुभएको छ, जस्‍तो तिमीहरूका आफ्नै आँखाले तिमीहरू देख्‍न सक्छौ ।
9 ಅದೇ ಕಾರಣದಿಂದ ನಮ್ಮ ಹಿರಿಯರು ಕತ್ತಿಯಿಂದ ಹತರಾದರು; ನಮ್ಮ ಗಂಡು ಹೆಣ್ಣು ಮಕ್ಕಳೂ, ಹೆಂಡತಿಯರೂ ಸೆರೆಯವರಾಗಿ ಹೋಗಬೇಕಾಯಿತು.
त्‍यसकाणले हाम्रा पुर्खाहरू तरवारले मारिएका छन्, र हाम्रा छोराहरू, हाम्री छोरीहरू र हाम्री पत्‍नीहरू यसैले कैदमा छन्‌ ।
10 ೧೦ ಈಗ ನಮ್ಮ ಮೇಲಿರುವ ಆತನ ಕೋಪಾಗ್ನಿಯು ತೊಲಗಿ ಹೋಗುವಂತೆ ಇಸ್ರಾಯೇಲಿನ ದೇವರಾದ ಯೆಹೋವನೊಡನೆ ಒಡಂಬಡಿಕೆ ಮಾಡಿಕೊಳ್ಳುವುದಕ್ಕೆ ಮನಸ್ಸುಳ್ಳವನಾಗಿದ್ದೇನೆ.
अब इस्राएलका परमप्रभु परमेश्‍वरसँग एउटा करार गर्ने कुरा मेरो हृदयमा छ, ताकि उहाँको प्रचण्‍ड क्रोध हामीहरूबाट हटोस् ।
11 ೧೧ ಹೀಗಿರಲಾಗಿ ನನ್ನ ಮಕ್ಕಳೇ, ಉದಾಸೀನರಾಗಿರಬೇಡಿ; ಯೆಹೋವನು ತನ್ನನ್ನು ಆರಾಧಿಸುವುದಕ್ಕೂ ಧೂಪಹಾಕುವುದಕ್ಕೂ ನಿಮ್ಮನ್ನು ತನ್ನ ಸಾನ್ನಿಧ್ಯ ಸೇವಕರನ್ನಾಗಿ ಆರಿಸಿಕೊಂಡನಲ್ಲಾ” ಎಂದು ಹೇಳಿದನು.
ए मेरा छोराहरू, अब अल्छे नहोओ, किनकि परमप्रभुले उहाँको आराधना गर्नलाई उहाँको सामु खडा हुन, र तिमीहरू उहाँका सेवकहरू होऊ र धूप बाल भनेर तिमीहरूलाई चुन्‍नुभएको छ ।”
12 ೧೨ ಕೂಡಲೆ ಲೇವಿಯರು ಮುಂದೆ ಬಂದರು: ಕೆಹಾತ್ಯರಲ್ಲಿ ಅಮಾಸೈಯ ಮಗನಾದ ಮಹತ್, ಅಜರ್ಯನ ಮಗನಾದ ಯೋವೇಲ್, ಮೆರಾರೀಯರಲ್ಲಿ ಅಬ್ದೀಯ ಮಗನಾದ ಕೀಷ್, ಯೆಹಲ್ಲೆಲೇಲನ ಮಗನಾದ ಅಜರ್ಯ, ಗೇರ್ಷೋನ್ಯರಲ್ಲಿ ಜಿಮ್ಮನ ಮಗನಾದ ಯೋವಾಹ, ಯೋವಾಹನ ಮಗನಾದ ಏದೆನ್,
तब लेवीहरू खडा भएः कहातीहरूका मानिसहरूबाट अमासैका छोरा महत र अजर्याहका छोरा योएल, अनि मरारीहरूका मानिसहरूबाट अब्‍दीका छोरा कीश र यहललेलका छोरा अजर्याह, अनि गेर्शोनीहरूबाट जिम्‍माहका छोरा योआ र योआका छोरा अदन ।
13 ೧೩ ಎಲೀಚಾಫಾನ್ಯರಲ್ಲಿ ಶಿಮ್ರಾ, ಯೆಗೀಯೇಲ್, ಆಸಾಫ್ಯರಲ್ಲಿ ಜೆಕರ್ಯ ಮತ್ತು ಮತ್ತನ್ಯ,
एलीजापानका छोराहरूबाट शिम्री र यहीएल, अनि आसापका छोराहरूबाट जकरिया र मत्तन्‍याह ।
14 ೧೪ ಹೇಮಾನ್ಯರಲ್ಲಿ ಯೆಹೀಯೇಲ್, ಶಿಮ್ಮೀ, ಯೆದೂತೂನ್ಯರಲ್ಲಿ ಶೆಮಾಯ ಹಾಗು ಉಜ್ಜೀಯೇಲ್,
हेमानका छोराहरूबाट यहीएल र शिमी, अनि यदूतूनका छोराहरूबाट शमायाह र उज्‍जीएल ।
15 ೧೫ ಎಂಬ ಲೇವಿಯರು ಎದ್ದು ತಮ್ಮ ಸಹೋದರರನ್ನು ಸೇರಿಕೊಂಡರು. ಅವರು ಅರಸನ ಆಜ್ಞಾನುಸಾರವಾಗಿ ಯೆಹೋವನ ಧರ್ಮಶಾಸ್ತ್ರ ವಿಧಿಯ ಮೇರೆಗೆ ತಮ್ಮನ್ನು ಶುದ್ಧೀಕರಿಸಿಕೊಂಡು ಯೆಹೋವನ ಆಲಯವನ್ನು ಶುದ್ಧೀಕರಿಸುವುದಕ್ಕೆ ಬಂದರು.
तिनीहरूले आआफ्‍ना दाजुभाइलाई भेला गराए, र तिनीहरूले आफैलाई पवित्र गरे, अनि परमप्रभुको वचनको अनुसरण गर्दै राजाले हुकुम गरेबमोजिम परमप्रभुको मन्‍दिरलाई शुद्ध पार्न तिनीहरू त्‍यसभित्र पसे ।
16 ೧೬ ಯಾಜಕರು ಯೆಹೋವನ ಆಲಯವನ್ನು ಶುದ್ಧಮಾಡುವುದಕ್ಕಾಗಿ ಒಳಗೆ ಹೋಗಿ ಪವಿತ್ರಸ್ಥಾನದಲ್ಲಿದ್ದ ಹೊಲಸನ್ನೆಲ್ಲಾ ತಂದು ಪ್ರಾಕಾರದಲ್ಲಿ ಹಾಕಿದರು. ಲೇವಿಯರು ಅದನ್ನು ಕೂಡಿಸಿ ಹೊರಗೆ ಒಯ್ದು ಕಿದ್ರೋನ್ ಹಳ್ಳದಲ್ಲಿ ಹಾಕಿದರು.
परमप्रभुको मन्‍दिर शुद्ध गर्न पुजारीहरू त्यसको भित्री भागमा पसे । तिनीहरूले परमप्रभुको मन्‍दिरभित्र भेट्टाएका सबै अशुद्ध कुराहरू बाहिर परमप्रभुका मन्‍दिरको चोकमा ल्‍याए । लेवीहरूले ती कुराहरू बोकेर किद्रोन खोल्‍सामा लगे ।
17 ೧೭ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಶುದ್ಧೀಕರಣ ಕಾರ್ಯವನ್ನು ಪ್ರಾರಂಭಿಸಿದರು. ಎಂಟನೆಯ ದಿನದಲ್ಲಿ ಯೆಹೋವನ ಆಲಯದ ಮಂಟಪಕ್ಕೆ ಕೈಹಾಕಿದರು. ಹೀಗೆ ಯೆಹೋವನ ಆಲಯವನ್ನು ಪರಿಶುದ್ಧಪಡಿಸುವುದರಲ್ಲಿ ಎಂಟು ದಿನಗಳು ಕಳೆದು ಹೋದವು. ಮೊದಲನೆಯ ತಿಂಗಳಿನ ಹದಿನಾರನೆಯ ದಿನದಲ್ಲಿ ಕೆಲಸವೆಲ್ಲಾ ಮುಗಿಯಿತು.
पहिलो महिनाको पहिलो दिनमा तिनीहरूले शुद्ध पार्ने काम सुरु गरे । आठौँ दिनमा तिनीहरू परमप्रभुको दलानसम्‍म पुगेका थिए । अनि अझै आठ दिनसम्‍म तिनीहरूले परमप्रभुको मन्‍दिर पवित्र गरिरहे । पहिलो महिनाको सोह्रौँ दिनमा तिनीहरूले त्‍यो काम सिद्ध्याए ।
18 ೧೮ ಆಮೇಲೆ ಅವರು ಅರಮನೆಯೊಳಗೆ ಹೋಗಿ, ಅರಸನಾದ ಹಿಜ್ಕೀಯನಿಗೆ, “ನಾವು ಯೆಹೋವನ ಸಮಸ್ತಾಲಯವನ್ನೂ, ಯಜ್ಞವೇದಿಯನ್ನೂ, ಅದರ ಉಪಕರಣಗಳನ್ನೂ, ನೈವೇದ್ಯ ರೊಟ್ಟಿಗಳನ್ನಿಡತಕ್ಕ ಮೇಜನ್ನೂ ಹಾಗು ಅದರ ಸಾಮಾನುಗಳನ್ನೂ ಶುದ್ಧಿಮಾಡಿದೆವು.
त्‍यसपछि तिनीहरू राजमहलभित्र हिजकिया राजाकहाँ गए र भने, “हामीले परमप्रभुको मन्‍दिर जम्‍मै पवित्र गरिसक्‍यौं, अर्थात्‌ होमबलिको वेदी, त्‍यसका सबै भाँडाकुँडासमेत, अनि अर्पण गरिएको रोटी राख्‍ने टेबल, त्‍यसका सबै सामानसमेत ।
19 ೧೯ ಅರಸನಾದ ಆಹಾಜನು ತನ್ನ ಆಳ್ವಿಕೆಯಲ್ಲಿ ದೈವದ್ರೋಹಿಯಾಗಿ ತಳ್ಳಿಬಿಟ್ಟಿದ್ದ ಪಾತ್ರೆಗಳನ್ನು ತಿರುಗಿ ತಂದಿಟ್ಟು ಪ್ರತಿಷ್ಠಿಸಿದ್ದೇವೆ; ಅವು ಈಗ ಯೆಹೋವನ ಯಜ್ಞವೇದಿಯ ಮುಂದಿರುತ್ತವೆ” ಎಂದರು.
यसैले हामीले राजा आहाजले आफ्‍नो शासनकालमा विश्‍वासघाती भएर हटाएका जम्‍मै सरसामान पनि हामीले तयारी र पवित्र गर्‍यौँ । हेर्नुहोस्, ती परमप्रभुका वेदीको सामुन्‍ने राखिएका छन्‌ ।”
20 ೨೦ ಅರಸನಾದ ಹಿಜ್ಕೀಯನು ಮರುದಿನ ಬೆಳಗಿನ ಜಾವದಲ್ಲೆದ್ದು ಪಟ್ಟಣದ ಅಧಿಕಾರಿಗಳನ್ನು ಕರೆಸಿ ಅವರೊಡನೆ ಯೆಹೋವನ ಆಲಯಕ್ಕೆ ಹೋದನು.
तब राजा हिजकिया बिहान सबेरै उठेर सहरका अगुवाहरूलाई भेला गराए । तिनी परमप्रभुको मन्‍दिरमा उक्‍लेर गए ।
21 ೨೧ ಅವರು ರಾಜ್ಯಾಡಳಿತ ದೇವಾಲಯ, ಯೆಹೂದ ಪ್ರಜೆಗಳು ಇವುಗಳಿಗೋಸ್ಕರ ದೋಷಪರಿಹಾರಕ ಯಜ್ಞಮಾಡುವುದಕ್ಕಾಗಿ ಹೋರಿ, ಟಗರು, ಕುರಿಮರಿ, ಆಡು ಇವುಗಳಲ್ಲಿ ಏಳೇಳನ್ನು ತಂದರು. ಅರಸನು ಯಾಜಕರಾದ ಆರೋನನ ಸಂತಾನದವರಿಗೆ ಯೆಹೋವನ ಯಜ್ಞವೇದಿಯ ಮೇಲೆ ಸರ್ವಾಂಗಹೋಮ ಮಾಡಬೇಕೆಂದು ಆಜ್ಞಾಪಿಸಿದನು.
तिनीहरूले सात वटा साँढे, सात वटा भेडा र सात वटा थुमा ल्‍याए, अनि राज्‍य, पवित्रस्‍थान र यहूदाको लागि पापबलिको निम्‍ति सात वटा बोका ल्‍याए । तिनले पुजारीहरू, हारूनका छोराहरूलाई यी सबै परमप्रभुको वेदीमा चढाउने हुकुम गरे ।
22 ೨೨ ಹೋರಿಗಳನ್ನು ವಧಿಸಿದ ಮೇಲೆ ಯಾಜಕರು ಅವುಗಳ ರಕ್ತವನ್ನು ಕೂಡಿಸಿ ಯಜ್ಞವೇದಿಗೆ ಪ್ರೋಕ್ಷಿಸಿದರು. ಅನಂತರ ಟಗರುಗಳನ್ನು ವಧಿಸಿದ ಮೇಲೆ ಯಾಜಕರು, ರಕ್ತವನ್ನು ಕೂಡಿಸಿ ಯಜ್ಞವೇದಿಗೆ ಅನಂತರ ಟಗರುಗಳನ್ನು ವಧಿಸಿ ಅವುಗಳ ರಕ್ತವನ್ನು ಯಜ್ಞವೇದಿಗೆ ಪ್ರೋಕ್ಷಿಸಿದರು. ಆ ಮೇಲೆ ಕುರಿಮರಿಗಳನ್ನು ವಧಿಸಿ ಅವುಗಳ ರಕ್ತವನ್ನೂ ಯಜ್ಞವೇದಿಗೆ ಪ್ರೋಕ್ಷಿಸಿದರು.
यसैले तिनीहरूले ती साँढेहरू मारे, र पुजारीहरूले तिनका रगत लिएर वेदीमा छर्के । त्यसपछि तिनीहरूले भेडाहरू मारे, र तिनका रगत लिएर वेदीमा छर्के, र तिनीहरूले थुमाहरू पनि मारे र तिनका रगत वेदीमा छर्के ।
23 ೨೩ ಕಡೆಯಲ್ಲಿ ದೋಷಪರಿಹಾರಕ ಯಜ್ಞಕ್ಕಾಗಿ ತಂದ ಹೋತಗಳನ್ನು ಅರಸನ ಮುಂದೆಯೂ ಮತ್ತು ಸಮೂಹದವರ ಮುಂದೆಯೂ ನಿಲ್ಲಿಸಿದರು. ಅವರು ಅವುಗಳ ಮೇಲೆ ತಮ್ಮ ಕೈಗಳನ್ನಿಟ್ಟರು.
तिनीहरूले पापबलिको निम्‍ति बोकाहरू राजा र समुदायको अघि ल्‍याए । तिनीहरूले तीमाथि आआफ्‍ना हात राखे ।
24 ೨೪ ನಂತರ ಯಾಜಕರು ಅವುಗಳನ್ನು ವಧಿಸಿ ಅವುಗಳ ರಕ್ತವನ್ನು ಸಮಸ್ತ ಇಸ್ರಾಯೇಲರ ದೋಷ ಪರಿಹಾರಕ್ಕಾಗಿ ಯಜ್ಞವೇದಿಯ ಮೇಲೆ ಸುರಿದರು. ಆ ಸರ್ವಾಂಗಹೋಮಗಳೂ, ದೋಷಪರಿಹಾರಕ ಯಜ್ಞಗಳೂ ಎಲ್ಲಾ ಇಸ್ರಾಯೇಲರಿಗಾಗಿ ಇರಬೇಕೆಂದು ಅರಸನು ಆಜ್ಞಾಪಿಸಿದ್ದನು.
पुजारीहरूले ती बोकाहरू मारे, र सारा इस्राएलको निम्‍ति प्रायश्‍चित गर्न पापबलि स्‍वरूप वेदीमा चढाए, किनकि होमबलि र पापबलिचाहिं सारा इस्राएलको निम्‍ति चढाउनुपर्छ भन्‍ने हुकुम राजाले दिएका थिए ।
25 ೨೫ ಇದಲ್ಲದೆ, ಅವನು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಭಜಿಸುವುದಕ್ಕೋಸ್ಕರ ಲೇವಿಯರನ್ನು, ದಾವೀದನ ರಾಜದರ್ಶಿಯಾದ ಗಾದ್ ಹಾಗು ಪ್ರವಾದಿಯಾದ ನಾತಾನ್ ಇವರ ಆಜ್ಞಾನುಸಾರವಾಗಿ ಯೆಹೋವನ ಆಲಯದಲ್ಲಿ ನಿಲ್ಲಿಸಿದನು. ಯೆಹೋವನು ತಾನೇ ಪ್ರವಾದಿಗಳ ಮುಖಾಂತರ ಹೀಗೆ ಆಜ್ಞಾಪಿಸಿದ್ದನು.
हिजकियाले लेवीहरूलाई परमेश्‍वरको मन्‍दिरमा दाऊद राजा, राजाका दर्शी गाद र नातान अगमवक्ताले आज्ञा गरेअनुसार झ्‍याली, वीणा र सारङ्गीका साथमा आआफ्‍नो काममा खटाए, किनकि यो आज्ञा परमप्रभुले आफ्‍ना अगमवक्ताहरूद्वारा दिनुभएको थियो ।
26 ೨೬ ಆ ಲೇವಿಯರು ದಾವೀದನ ವಾದ್ಯಗಳನ್ನೂ, ಯಾಜಕರೂ ತುತ್ತೂರಿಗಳನ್ನೂ ಹಿಡಿದು ನಿಂತಿದ್ದರು.
लेवीहरू दाऊदका बाजाहरू र पुजारीहरू तुरहीहरू लिएर खडा भए ।
27 ೨೭ ಆಗ ಹಿಜ್ಕೀಯನು ಯಜ್ಞವೇದಿಯ ಮೇಲೆ ಸರ್ವಾಂಗಹೋಮವನ್ನು ಸಮರ್ಪಿಸುವುದಕ್ಕೆ ಆಜ್ಞಾಪಿಸಿದನು. ಹೀಗೆ ಸರ್ವಾಂಗಹೋಮ ಸಮರ್ಪಣೆ ಪ್ರಾರಂಭಿಸಿದೊಡನೆ ಇಸ್ರಾಯೇಲ್ ರಾಜನಾದ ದಾವೀದನ ವಾದ್ಯಗಳಿಂದ ಯೆಹೋವನನ್ನು ಭಜಿಸುವುದೂ, ತುತ್ತೂರಿ ಊದುವುದೂ ಆರಂಭವಾಯಿತು.
हिजकियाले वेदीमा होमबलि वेदीमा चढाउने हुकुम दिए । जब होमबलि सुरु भयो, तब तुरहीहरू र इस्राएलका राजा दाऊदका बाजाहरूका साथमा परमप्रभुको गीत पनि सुरु भयो ।
28 ೨೮ ಸರ್ವಾಂಗಹೋಮ ಸಮರ್ಪಣೆಯು ಮುಗಿಯುವವರೆಗೆ ಸರ್ವಸಮೂಹದವರು ಸಾಷ್ಟಾಂಗ ನಮಸ್ಕಾರ ಮಾಡುತ್ತಲೂ, ಗಾಯಕರೂ ಗಾನಮಾಡುತ್ತಲೂ, ತುತ್ತೂರಿ ಊದುವವರು ತುತ್ತೂರಿ ಊದುತ್ತಲೂ ಇದ್ದರು.
सारा समुदायले आराधना गरे, गायकहरूले गाए, र तुरही बजाउनेहरूले बजाए । यो काम होमबलि खतम नहोउञ्‍जेल निरन्‍तर जारी रह्‍यो ।
29 ೨೯ ಸರ್ವಾಂಗಹೋಮ ಸಮರ್ಪಣೆಯು ಮುಗಿದ ಮೇಲೆ ಅರಸನೂ ಅವನ ಜೊತೆಯಲ್ಲಿದ್ದವರೆಲ್ಲರೂ ಸಾಷ್ಟಾಂಗ ನಮಸ್ಕಾರ ಮಾಡಿದರು.
जब तिनीहरूले बलिदान चढाइसके, राजा र तिनीसँग भएका सबैले घोप्‍टो परे र आराधना गरे ।
30 ೩೦ ಅರಸನಾದ ಹಿಜ್ಕೀಯನೂ, ಪ್ರಭುಗಳೂ ದಾವೀದನ ಮತ್ತು ದರ್ಶಿಯಾದ ಆಸಾಫನ ಕೀರ್ತನೆಗಳಿಂದ ಯೆಹೋವನನ್ನು ಸ್ತುತಿಸಬೇಕೆಂದು ಲೇವಿಯರಿಗೆ ಆಜ್ಞಾಪಿಸಲು, ಅವರು ಉತ್ಸಾಹದಿಂದ ಸ್ತುತಿಸುತ್ತಾ ತಲೆಬಾಗಿ ನಮಸ್ಕರಿಸಿದರು.
यसको साथै राजा हिजकिया र तिनका अगुवाहरूले लेवीहरूलाई दाऊद र दर्शी आसापका शब्‍दमा परमप्रभुको स्‍तुतिगान गर्न लाए । तिनीहरूले खुसीसाथ स्‍तुति गाए र घोप्‍टो परे र आरधना गरे ।
31 ೩೧ ಆಮೇಲೆ ಹಿಜ್ಕೀಯನು ಸಮೂಹದವರಿಗೆ, “ನೀವು ಈಗ ಯೆಹೋವನಿಗೋಸ್ಕರ ನಿಮ್ಮನ್ನು ಪ್ರತಿಷ್ಠಿಸಿಕೊಂಡಿರುವಿಯಲ್ಲಾ; ಹತ್ತಿರ ಬಂದು ಯೆಹೋವನಿಗೆ ಸ್ತೋತ್ರಮಾಡಿ ಆತನ ಆಲಯಕ್ಕೋಸ್ಕರ ಸಮಾಧಾನ ಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿರಿ” ಎನ್ನಲು ಸಮೂಹದವರು ಸಮಾಧಾನಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿದ್ದಲ್ಲದೆ, ಅನೇಕರು ಸ್ವ ಇಚ್ಛೆಯಿಂದ ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು.
तब हिजकियाले भने, “अब तिमीहरूले परमप्रभुमा आफैलाई अर्पण गरेका छौ । यहाँ आओ र परमप्रभुको मन्दिरमा बलिदान र धन्‍यवादका बलिहरू ल्याओ ।” समुदायले बलिदानहरू र धन्‍यवाद बलिहरू ल्‍याए, र राजीखुशी हृदय हुनेहरू सबैले आआफ्‍ना होमबलि ल्‍याए ।
32 ೩೨ ಸಮೂಹದವರು ಸರ್ವಾಂಗಹೋಮಕ್ಕೋಸ್ಕರ ತಂದೊಪ್ಪಿಸಿದ ಹೋರಿಗಳು ಎಪ್ಪತ್ತು, ಟಗರುಗಳು ನೂರು, ಕುರಿಮರಿಗಳು ಇನ್ನೂರು. ಇವೆಲ್ಲವು ಯೆಹೋವನಿಗೆ ಸರ್ವಾಂಗಹೋಮ ಸಮರ್ಪಣೆಗಾಗಿಯೇ ಮೀಸಲಾದವು.
समुदायले ल्‍याएका होमबलिको संख्‍या सत्तरी वटा साँढे, एक सय वटा भेडा, र दुई सय वटा थुमा थिए । यी सबै परमप्रभुको निम्‍ति होमबलि थिए ।
33 ೩೩ ದೇವರಿಗೆ ಕಾಣಿಕೆಯಾಗಿ ಕೊಡಲ್ಪಟ್ಟ ಹಿಂಡುಗಳಲ್ಲಿ ಹೋರಿಗಳು ಆರುನೂರು, ಕುರಿಗಳು ಮೂರು ಸಾವಿರ.
परमप्रभुमा अर्पण गरिएका बलिदानहरू छ सय साँढे र तीन हजार भेडा थिए ।
34 ೩೪ ಯಾಜಕರು ಕೆಲವು ಮಂದಿಯಾದುದ್ದರಿಂದ ಸರ್ವಾಂಗಹೋಮದ ಪ್ರಾಣಿಗಳ ಚರ್ಮವನ್ನು ಸುಲಿಯುವುದು ಅವರಿಂದ ಆಗದೆ ಹೋಯಿತು. ಆದುದರಿಂದ ಮಿಕ್ಕ ಯಾಜಕರೂ ತಮ್ಮನ್ನು ಶುದ್ಧಿಪಡಿಸಿಕೊಳ್ಳುವವರೆಗೂ ಆ ಕೆಲಸವು ಮುಗಿಯುವ ತನಕ, ಅವರ ಬಂಧುಗಳಾದ ಲೇವಿಯರು ಅವರಿಗೆ ಸಹಾಯಮಾಡುತ್ತಿದ್ದರು. ತಮ್ಮನ್ನು ಶುದ್ಧಿಪಡಿಸಿಕೊಳ್ಳುವುದರಲ್ಲಿ ಯಾಜಕರಿಗಿಂತ ಲೇವಿಯರೇ ಹೆಚ್ಚು ಶ್ರದ್ಧೆಯುಳ್ಳವರಾಗಿದ್ದರು.
तर सबै होमबलिका छाला काढ्नका निम्ति पुजारीहरू साह्रै थोरै थिए, यसैले तिनीहरूका दाजुभाइ लेवीहरूले त्‍यो काम नसिद्धिएसम्‍म र पुजारीहरूले आफूलाई पवित्र नपारेसम्‍म तिनीहरूलाई सघाए, किनकि आआफूलाई पवित्र पार्नलाई पुजारीहरूभन्‍दा लेवीहरू नै बढी होसियार भएका थिए ।
35 ೩೫ ಇದಲ್ಲದೆ ಯಾಜಕರೂ ಯೆಹೋವನಿಗೆ ಸಮರ್ಪಿಸಬೇಕಾಗಿದ್ದ ಸರ್ವಾಂಗಹೋಮ, ಸಮಾಧಾನ ಯಜ್ಞಗಳ ಕೊಬ್ಬು ಹಾಗು ಸರ್ವಾಂಗಹೋಮ ಸಂಬಂಧವಾದ ಪಾನದ್ರವ್ಯ ಇವು ಅಪಾರವಾಗಿದ್ದವು.
यसबाहेक, त्यहाँ धेरै होमबलिहरू थिए । मेलबलिको बोसोको साथमा ती चढाइए र हरेक होमबलिको निम्ति त्‍यहाँ अर्घबलि थिए । यसरी परमप्रभुका मन्‍दिरको सेवा व्‍यवस्‍थित गरियो ।
36 ೩೬ ಹೀಗೆ ಯೆಹೋವನ ಆಲಯದ ಸೇವಾಕ್ರಮವು ಪುನಃ ಸ್ಥಾಪಿತವಾಯಿತು. ದೇವರು ತಾನೇ ತನ್ನ ಪ್ರಜೆಗಳಿಗಾಗಿ ಈ ಕಾರ್ಯವನ್ನು ನೆರವೇರಿಸಿದ್ದರಿಂದ, ಹಿಜ್ಕೀಯನೂ ಮತ್ತು ಎಲ್ಲಾ ಜನರೂ ಸಂತೋಷಿಸಿದರು.
परमेश्‍वरले मानिसहरूका निम्‍ति तयार पार्नुभएको कामको कारणले हिजकिया र सबै मानिसहरू आनन्दित भए, किनकि त्‍यो काम चाँडै नै पूरा भयो ।

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 29 >