< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 30 >

1 ತರುವಾಯ ಹಿಜ್ಕೀಯನು, ಇಸ್ರಾಯೇಲ್ ದೇವರಾದ ಯೆಹೋವನ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಬರಬೇಕೆಂದು, ಎಲ್ಲಾ ಇಸ್ರಾಯೇಲರಿಗೂ, ಯೆಹೂದ್ಯರಿಗೂ, ಎಫ್ರಾಯೀಮ್ಯರಿಗೂ, ಮನಸ್ಸೆಯವರಿಗೂ ದೂತರ ಮುಖಾಂತರವಾಗಿ ಮತ್ತು ಪತ್ರಗಳ ಮೂಲಕವಾಗಿ ತಿಳಿಯಪಡಿಸಿದನು.
וַיִּשְׁלַח יְחִזְקִיָּהוּ עַל־כׇּל־יִשְׂרָאֵל וִיהוּדָה וְגַֽם־אִגְּרוֹת כָּתַב עַל־אֶפְרַיִם וּמְנַשֶּׁה לָבוֹא לְבֵית־יְהֹוָה בִּירוּשָׁלָ͏ִם לַעֲשׂוֹת פֶּסַח לַיהֹוָה אֱלֹהֵי יִשְׂרָאֵֽל׃
2 ಎರಡನೆಯ ತಿಂಗಳಿನಲ್ಲಿ ಪಸ್ಕಹಬ್ಬವನ್ನು ಯೆರೂಸಲೇಮಿನಲ್ಲಿ ಆಚರಿಸಬೇಕೆಂದು ಅರಸನು, ಪದಾಧಿಕಾರಿಗಳು ಅಭಿಪ್ರಾಯಪಟ್ಟರು.
וַיִּוָּעַץ הַמֶּלֶךְ וְשָׂרָיו וְכׇל־הַקָּהָל בִּירוּשָׁלָ͏ִם לַעֲשׂוֹת הַפֶּסַח בַּחֹדֶשׁ הַשֵּׁנִֽי׃
3 ಯಾಕೆಂದರೆ ಯಾಜಕರಲ್ಲಿ ಸಾಕಷ್ಟು ಮಂದಿ ತಮ್ಮನ್ನು ಶುದ್ಧಿಪಡಿಸಿಕೊಂಡಿರಲಿಲ್ಲ. ಜನರು ಯೆರೂಸಲೇಮಿನಲ್ಲಿ ಇನ್ನೂ ಒಟ್ಟಾಗಿ ಸೇರಿ ಬಂದಿರಲಿಲ್ಲವಾದುದರಿಂದ ಕೂಡಲೆ ಪಸ್ಕಹಬ್ಬವನ್ನು ಆಚರಿಸಲು ಸಾಧ್ಯವಾಗುವುದಿಲ್ಲವೆಂದು ಅರಸನಿಗೂ ಅವನ ಸರದಾರರಿಗೂ ಯೆರೂಸಲೇಮಿನ ಸರ್ವಸಂಘದವರಿಗೂ ತಿಳಿದುಕೊಂಡರು.
כִּי לֹא יָכְלוּ לַעֲשֹׂתוֹ בָּעֵת הַהִיא כִּי הַכֹּֽהֲנִים לֹֽא־הִתְקַדְּשׁוּ לְמַדַּי וְהָעָם לֹא־נֶאֶסְפוּ לִירוּשָׁלָֽ͏ִם׃
4 ಈ ಅಭಿಪ್ರಾಯವು ಅರಸನಿಗೂ ಸರ್ವಸಮೂಹಕ್ಕೂ ಸರಿಕಂಡದ್ದರಿಂದ
וַיִּישַׁר הַדָּבָר בְּעֵינֵי הַמֶּלֶךְ וּבְעֵינֵי כׇּל־הַקָּהָֽל׃
5 ಅವರು, “ಸರ್ವಜನರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿಗೆ ಬರಬೇಕು” ಎಂಬುದಾಗಿ ಬೇರ್ಷೆಬದಿಂದ ದಾನ್ ವರೆಗೂ ವಾಸಮಾಡುತ್ತಿದ್ದ ಇಸ್ರಾಯೇಲರೊಳಗೆ ಡಂಗುರ ಹೊಡಿಸಬೇಕೆಂದು ನಿರ್ಣಯಿಸಿದರು. ಜನರಲ್ಲಿ ಹೆಚ್ಚು ಮಂದಿ ಆ ವರೆಗೂ ಧರ್ಮಶಾಸ್ತ್ರವಿಧಿಯ ಪ್ರಕಾರ ಪಸ್ಕಹಬ್ಬವನ್ನು ಆಚರಿಸಿರಲಿಲ್ಲ.
וַיַּעֲמִידוּ דָבָר לְהַעֲבִיר קוֹל בְּכׇל־יִשְׂרָאֵל מִבְּאֵֽר־שֶׁבַע וְעַד־דָּן לָבוֹא לַעֲשׂוֹת פֶּסַח לַיהֹוָה אֱלֹהֵֽי־יִשְׂרָאֵל בִּירוּשָׁלָ͏ִם כִּי לֹא לָרֹב עָשׂוּ כַּכָּתֽוּב׃
6 ಅರಸನ ಮತ್ತು ಅವನ ಪದಾಧಿಕಾರಿಗಳಿಂದ ಪತ್ರಗಳನ್ನು ತೆಗೆದುಕೊಂಡು ಹೋದ ದೂತರು ಇಸ್ರಾಯೇಲ್ ಮತ್ತು ಯೆಹೂದ ದೇಶಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಹೀಗೆಂದು ಪ್ರಕಟಿಸಿದರು: “ಇಸ್ರಾಯೇಲರೇ, ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆಗ ಆತನು ನಿಮ್ಮಲ್ಲಿ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದಿರುವ ನಿಮ್ಮ ಕಡೆಗೆ ತಿರುಗಿಕೊಳ್ಳುವನು.
וַיֵּלְכוּ הָרָצִים בָּאִגְּרוֹת מִיַּד הַמֶּלֶךְ וְשָׂרָיו בְּכׇל־יִשְׂרָאֵל וִֽיהוּדָה וּכְמִצְוַת הַמֶּלֶךְ לֵאמֹר בְּנֵי יִשְׂרָאֵל שׁוּבוּ אֶל־יְהֹוָה אֱלֹהֵי אַבְרָהָם יִצְחָק וְיִשְׂרָאֵל וְיָשֹׁב אֶל־הַפְּלֵיטָה הַנִּשְׁאֶרֶת לָכֶם מִכַּף מַלְכֵי אַשּֽׁוּר׃
7 ನಿಮ್ಮ ಪೂರ್ವಿಕರು ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ವಿರೋಧವಾಗಿ ದ್ರೋಹಿಗಳಾಗಿದ್ದುದರಿಂದ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಅದಕ್ಕೆ ನೀವೇ ಸಾಕ್ಷಿಗಳು.
וְאַל־תִּֽהְיוּ כַּאֲבֽוֹתֵיכֶם וְכַאֲחֵיכֶם אֲשֶׁר מָעֲלוּ בַּיהֹוָה אֱלֹהֵי אֲבוֹתֵיהֶם וַיִּתְּנֵם לְשַׁמָּה כַּאֲשֶׁר אַתֶּם רֹאִֽים׃
8 ಈಗ ನೀವು ನಿಮ್ಮ ಪೂರ್ವಿಕರಂತೆ ರಾಜಾಜ್ಞೆಗೆ ಮಣಿಯದವರಾಗಿರಬೇಡಿರಿ, ಯೆಹೋವನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಯೆಹೋವನು ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡಿರುವ ಪವಿತ್ರಾಲಯಕ್ಕೆ ಬಂದು ಆತನನ್ನು ಆರಾಧಿಸಿರಿ. ಆಗ ನಿಮ್ಮ ಮೇಲಿರುವ ಆತನ ಉಗ್ರಕೋಪವು ತೊಲಗಿಹೋಗುವುದು.
עַתָּה אַל־תַּקְשׁוּ עׇרְפְּכֶם כַּאֲבוֹתֵיכֶם תְּנוּ־יָד לַיהֹוָה וּבֹאוּ לְמִקְדָּשׁוֹ אֲשֶׁר הִקְדִּישׁ לְעוֹלָם וְעִבְדוּ אֶת־יְהֹוָה אֱלֹהֵיכֶם וְיָשֹׁב מִכֶּם חֲרוֹן אַפּֽוֹ׃
9 ನೀವು ಯೆಹೋವನ ಕಡೆಗೆ ತಿರುಗಿಕೊಳ್ಳವುದಾದರೆ ನಿಮ್ಮ ಸಹೋದರರೂ, ಮಕ್ಕಳೂ ತಮ್ಮನ್ನು ಸೆರೆ ಒಯ್ದವರ ದೃಷ್ಟಿಯಲ್ಲಿ ದಯೆಗೆ ಪಾತ್ರರಾಗಿ, ತಿರುಗಿ ಸ್ವದೇಶಕ್ಕೆ ಬರುವರು. ನಿಮ್ಮ ದೇವರಾದ ಯೆಹೋವನು ದಯೆಯೂ, ಕನಿಕರವೂ ಉಳ್ಳವನಾಗಿದ್ದಾನೆ. ಆತನು ತನ್ನ ಕಡೆಗೆ ತಿರುಗಿಕೊಳ್ಳುವ ನಿಮ್ಮನ್ನು ಕಟಾಕ್ಷಿಸದೆ ಇರುವುದಿಲ್ಲ.”
כִּי בְשׁוּבְכֶם עַל־יְהֹוָה אֲחֵיכֶם וּבְנֵיכֶם לְרַֽחֲמִים לִפְנֵי שֽׁוֹבֵיהֶם וְלָשׁוּב לָאָרֶץ הַזֹּאת כִּֽי־חַנּוּן וְרַחוּם יְהֹוָה אֱלֹהֵיכֶם וְלֹֽא־יָסִיר פָּנִים מִכֶּם אִם־תָּשׁוּבוּ אֵלָֽיו׃
10 ೧೦ ದೂತರು ಎಫ್ರಾಯೀಮ್, ಮನಸ್ಸೆ, ಜೆಬುಲೂನ್ ಪ್ರಾಂತ್ಯಗಳಲ್ಲಿ, ಪಟ್ಟಣದಿಂದ ಪಟ್ಟಣಕ್ಕೆ ಹೋದರು. ಜನರು ಅವರನ್ನು ಕಂಡು ನಕ್ಕು ಗೇಲಿಮಾಡಿದರು.
וַיִּהְיוּ הָרָצִים עֹבְרִים מֵעִיר ׀ לָעִיר בְּאֶרֶץ־אֶפְרַיִם וּמְנַשֶּׁה וְעַד־זְבֻלוּן וַיִּֽהְיוּ מַשְׂחִיקִים עֲלֵיהֶם וּמַלְעִגִים בָּֽם׃
11 ೧೧ ಕೆಲವು ಮಂದಿ ಆಶೇರ್ಯರೂ, ಮನಸ್ಸೆಯವರೂ, ಜೆಬುಲೂನ್ಯರೂ ಮಾತ್ರ ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು.
אַךְ־אֲנָשִׁים מֵאָשֵׁר וּמְנַשֶּׁה וּמִזְּבֻלוּן נִֽכְנְעוּ וַיָּבֹאוּ לִירוּשָׁלָֽ͏ִם׃
12 ೧೨ ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ ಪ್ರೇರಣೆಹೊಂದಿ ಏಕ ಮನಸ್ಸುಳ್ಳವರಾಗಿ, ಯೆಹೋವನ ವಾಕ್ಯಕ್ಕೆ ಅನುಸಾರವಾಗಿ ಅರಸನಿಂದಲೂ, ಪದಾಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.
גַּם בִּיהוּדָה הָֽיְתָה יַד הָאֱלֹהִים לָתֵת לָהֶם לֵב אֶחָד לַעֲשׂוֹת מִצְוַת הַמֶּלֶךְ וְהַשָּׂרִים בִּדְבַר יְהֹוָֽה׃
13 ೧೩ ಹೀಗೆ, ಅನೇಕಾನೇಕ ಜನರು ಎರಡನೆಯ ತಿಂಗಳಿನಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿನಲ್ಲಿ ಸೇರಿಬಂದರು; ಆ ಜನಸಮೂಹವು ಮಹಾಸಮೂಹವಾಗಿತ್ತು.
וַיֵּאָסְפוּ יְרוּשָׁלַ͏ִם עַם־רָב לַעֲשׂוֹת אֶת־חַג הַמַּצּוֹת בַּחֹדֶשׁ הַשֵּׁנִי קָהָל לָרֹב מְאֹֽד׃
14 ೧೪ ಅವರು ಯೆರೂಸಲೇಮಿನಲ್ಲಿದ್ದ ಯಜ್ಞವೇದಿಗಳನ್ನೂ ಎಲ್ಲಾ ಧೂಪವೇದಿಗಳನ್ನೂ ತೆಗೆದುಕೊಂಡು ಹೋಗಿ ಕಿದ್ರೋನ್ ಹಳ್ಳದಲ್ಲಿ ಬಿಸಾಡಿಬಿಟ್ಟರು.
וַיָּקֻמוּ וַיָּסִירוּ אֶת־הַֽמִּזְבְּחוֹת אֲשֶׁר בִּירוּשָׁלָ͏ִם וְאֵת כׇּל־הַֽמְקַטְּרוֹת הֵסִירוּ וַיַּשְׁלִיכוּ לְנַחַל קִדְרֽוֹן׃
15 ೧೫ ನಂತರ ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕಹಬ್ಬಕ್ಕಾಗಿ ಕುರಿಮರಿಗಳನ್ನು ಕೊಯ್ದರು. ಆಗ ಯಾಜಕರೂ, ಲೇವಿಯರೂ ನಾಚಿಕೆಪಟ್ಟು, ತಮ್ಮನ್ನು ಶುದ್ಧಿಪಡಿಸಿಕೊಂಡು ಯೆಹೋವನ ಆಲಯದಲ್ಲಿ ಸರ್ವಾಂಗಹೋಮಗಳನ್ನ ಸಮರ್ಪಿಸಿದರು.
וַיִּשְׁחֲטוּ הַפֶּסַח בְּאַרְבָּעָה עָשָׂר לַחֹדֶשׁ הַשֵּׁנִי וְהַכֹּהֲנִים וְהַלְוִיִּם נִכְלְמוּ וַיִּֽתְקַדְּשׁוּ וַיָּבִיאוּ עֹלוֹת בֵּית יְהֹוָֽה׃
16 ೧೬ ಅವರು ತಮ್ಮ ತಮ್ಮ ಸ್ಥಳಗಳಲ್ಲಿ ನಿಂತು, ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಿಂದ ತಮಗೆ ನೇಮಕವಾದ ಸೇವೆಯನ್ನು ಮಾಡುತ್ತಿದ್ದರು. ಯಾಜಕರೂ ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಅದನ್ನು ಪ್ರೋಕ್ಷಿಸಿದರು.
וַיַּעַמְדוּ עַל־עׇמְדָם כְּמִשְׁפָּטָם כְּתוֹרַת מֹשֶׁה אִישׁ־הָאֱלֹהִים הַכֹּֽהֲנִים זֹרְקִים אֶת־הַדָּם מִיַּד הַלְוִיִּֽם׃
17 ೧೭ ಸಮೂಹದಲ್ಲಿ ಅನೇಕರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಇದ್ದುದರಿಂದ ಅಶುದ್ಧರಾದವರೆಲ್ಲರ, ಪಸ್ಕಹಬ್ಬದ ಯಜ್ಞಪಶುಗಳು ಯೆಹೋವನಿಗೆ ಮೀಸಲಾಗುವಂತೆ ಅವುಗಳನ್ನು ಲೇವಿಯರೇ ವಧಿಸಿದರು.
כִּי־רַבַּת בַּקָּהָל אֲשֶׁר לֹא־הִתְקַדָּשׁוּ וְהַלְוִיִּם עַל־שְׁחִיטַת הַפְּסָחִים לְכֹל לֹא טָהוֹר לְהַקְדִּישׁ לַיהֹוָֽה׃
18 ೧೮ ಜನರಲ್ಲಿ ಅನೇಕರು ಅಂದರೆ, ಹೆಚ್ಚಾಗಿ ಎಫ್ರಾಯೀಮ್, ಮನಸ್ಸೆ, ಇಸ್ಸಾಕಾರ್, ಹಾಗು ಜೆಬುಲೂನ್ ಪ್ರಾಂತ್ಯಗಳವರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಧರ್ಮಶಾಸ್ತ್ರಕ್ಕೆ ವಿರುದ್ಧವಾದ ರೀತಿಯಿಂದ ಪಸ್ಕದ (ಹಬ್ಬ) ಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು, “ಯೆಹೋವನೇ, ದಯಾಪರನಾದ ದೇವರೇ, ಅವರೆಲ್ಲರಿಗೆ ಕ್ಷಮೆಯನ್ನು ಅನುಗ್ರಹಿಸು” ಎಂದು ವಿಜ್ಞಾಪನೆ ಮಾಡಿದನು.
כִּי מַרְבִּית הָעָם רַבַּת מֵאֶפְרַיִם וּמְנַשֶּׁה יִשָּׂשכָר וּזְבֻלוּן לֹא הִטֶּהָרוּ כִּֽי־אָכְלוּ אֶת־הַפֶּסַח בְּלֹא כַכָּתוּב כִּי הִתְפַּלֵּל יְחִזְקִיָּהוּ עֲלֵיהֶם לֵאמֹר יְהֹוָה הַטּוֹב יְכַפֵּר בְּעַֽד׃
19 ೧೯ ದೇವಾಲಯಕ್ಕೆ ಯಾತ್ರಿಕರಾಗಿ ಬಂದಿರುವವರಲ್ಲಿ ಇರಬೇಕಾದ ಪರಿಶುದ್ಧತ್ವವು ಅನೇಕರಲ್ಲಿ ಇಲ್ಲದಿದ್ದರೂ ಪೂರ್ವಿಕರ ದೇವರಾದ ಯೆಹೋವನನ್ನು ಹುಡುಕಬೇಕೆಂದು ಮನಸ್ಸುಮಾಡಿರುವವರಿಗೆಲ್ಲರಿಗೂ ಕ್ಷಮೆಯನ್ನು ಅನುಗ್ರಹಿಸು ಎಂದು ವಿಜ್ಞಾಪನೆ ಮಾಡಿದನು.
כׇּל־לְבָבוֹ הֵכִין לִדְרוֹשׁ הָאֱלֹהִים ׀ יְהֹוָה אֱלֹהֵי אֲבוֹתָיו וְלֹא כְּטׇהֳרַת הַקֹּֽדֶשׁ׃
20 ೨೦ ಯೆಹೋವನು ಹಿಜ್ಕೀಯನ ಪ್ರಾರ್ಥನೆಯನ್ನು ಲಾಲಿಸಿ ಜನರನ್ನು ಸ್ವಸ್ಥಗೊಳಿಸಿದನು.
וַיִּשְׁמַע יְהֹוָה אֶל־יְחִזְקִיָּהוּ וַיִּרְפָּא אֶת־הָעָֽם׃
21 ೨೧ ಯೆರೂಸಲೇಮಿನಲ್ಲಿ ಸೇರಿಬಂದಿದ್ದ ಇಸ್ರಾಯೇಲರು ಏಳು ದಿನಗಳವರೆಗೂ ಮಹಾ ಸಂತೋಷದಿಂದ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುತ್ತಾ ಇದ್ದರು. ಲೇವಿಯರೂ, ಯಾಜಕರೂ ಮಹಾವಾದ್ಯಗಳೊಡನೆ ಯೆಹೋವನನ್ನು ಪ್ರತಿದಿನವೂ ಸ್ತುತಿ ಕೀರ್ತಿಸುತ್ತಾ ಇದ್ದರು.
וַיַּעֲשׂוּ בְנֵֽי־יִשְׂרָאֵל הַנִּמְצְאִים בִּירוּשָׁלַ͏ִם אֶת־חַג הַמַּצּוֹת שִׁבְעַת יָמִים בְּשִׂמְחָה גְדוֹלָה וּֽמְהַלְלִים לַיהֹוָה יוֹם ׀ בְּיוֹם הַלְוִיִּם וְהַכֹּהֲנִים בִּכְלֵי־עֹז לַיהֹוָֽה׃
22 ೨೨ ಹಿಜ್ಕೀಯನು ಯೆಹೋವನ ಸೇವೆಯಲ್ಲಿ ನಿಪುಣರಾದ ಎಲ್ಲಾ ಲೇವಿಯರೊಡನೆ ಪ್ರೀತಿಯಿಂದ ಮಾತನಾಡಿದನು. ನೇಮಕವಾದ ಏಳು ದಿನಗಳ ಹಬ್ಬದವರೆಗೂ ಜನರು ಸಮಾಧಾನ ಯಜ್ಞಗಳನ್ನು ಅರ್ಪಿಸುತ್ತಾ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತಮ್ಮ ದೇವರೆಂದು ಅರಿಕೆಮಾಡಿಕೊಳ್ಳುತ್ತಾ ಔತಣಮಾಡಿದರು.
וַיְדַבֵּר יְחִזְקִיָּהוּ עַל־לֵב כׇּל־הַלְוִיִּם הַמַּשְׂכִּילִים שֵֽׂכֶל־טוֹב לַיהֹוָה וַיֹּאכְלוּ אֶת־הַמּוֹעֵד שִׁבְעַת הַיָּמִים מְזַבְּחִים זִבְחֵי שְׁלָמִים וּמִתְוַדִּים לַיהֹוָה אֱלֹהֵי אֲבוֹתֵיהֶֽם׃
23 ೨೩ ಅಲ್ಲದೆ ಸಮೂಹದವರು ಇನ್ನೂ ಏಳು ದಿನಗಳ ಕಾಲ ಹಬ್ಬವನ್ನು ಆ ಆಚರಿಸಬೇಕೆಂದು ತೀರ್ಮಾನಿಸಿ ಇನ್ನೂ ಏಳು ದಿನಗಳ ಕಾಲ ಬಹಳ ಸಂತೋಷದಿಂದ ಹಬ್ಬವನ್ನು ಆಚರಿಸಿದರು
וַיִּוָּֽעֲצוּ כׇּל־הַקָּהָל לַעֲשׂוֹת שִׁבְעַת יָמִים אֲחֵרִים וַיַּעֲשׂוּ שִׁבְעַת־יָמִים שִׂמְחָֽה׃
24 ೨೪ ಹೂದದ ಅರಸನಾದ ಹಿಜ್ಕೀಯನು ಹಿಂಡುಗಳಿಂದ ಸಾವಿರ ಹೋರಿಗಳನ್ನೂ, ಏಳು ಸಾವಿರ ಕುರಿಗಳನ್ನೂ, ಪದಾಧಿಕಾರಿಗಳು ಸಾವಿರ ಹೋರಿಗಳನ್ನೂ, ಹತ್ತು ಸಾವಿರ ಕುರಿಗಳನ್ನೂ ಯಜ್ಞಕ್ಕಾಗಿ ದಾನಮಾಡಿದರು. ಯಾಜಕರಲ್ಲಿ ಬಹು ಮಂದಿ ತಮ್ಮನ್ನು ಶುದ್ಧಿಪಡಿಸಿಕೊಂಡರು.
כִּי חִזְקִיָּהוּ מֶֽלֶךְ־יְהוּדָה הֵרִים לַקָּהָל אֶלֶף פָּרִים וְשִׁבְעַת אֲלָפִים צֹאן וְהַשָּׂרִים הֵרִימוּ לַקָּהָל פָּרִים אֶלֶף וְצֹאן עֲשֶׂרֶת אֲלָפִים וַיִּֽתְקַדְּשׁוּ כֹהֲנִים לָרֹֽב׃
25 ೨೫ ಯೆಹೂದ್ಯರ ಸರ್ವಸಮೂಹದವರೂ, ಯಾಜಕರು, ಲೇವಿಯರೂ, ಇಸ್ರಾಯೇಲ್ ಪ್ರಾಂತ್ಯಗಳಿಂದ ಸೇರಿಬಂದವರೆಲ್ಲರೂ ಹಾಗು ಇಸ್ರಾಯೇಲ್ ಯೆಹೂದ ಪ್ರಾಂತ್ಯಗಳಲ್ಲಿದ್ದ ಪ್ರವಾಸಿಗಳು ಈ ಉತ್ಸವದಲ್ಲಿ ಪಾಲುಗೊಂಡಿದ್ದರು.
וַֽיִּשְׂמְחוּ ׀ כׇּל־קְהַל יְהוּדָה וְהַכֹּֽהֲנִים וְהַלְוִיִּם וְכׇל־הַקָּהָל הַבָּאִים מִיִּשְׂרָאֵל וְהַגֵּרִים הַבָּאִים מֵאֶרֶץ יִשְׂרָאֵל וְהַיּוֹשְׁבִים בִּיהוּדָֽה׃
26 ೨೬ ದಾವೀದನ ಮಗನೂ ಇಸ್ರಾಯೇಲರ ಅರಸನೂ ಆದ ಸೊಲೊಮೋನನ ಕಾಲದಿಂದ ಯೆರೂಸಲೇಮಿನಲ್ಲಿ ಅಂಥ ಉತ್ಸವವು ನಡೆದಿರಲಿಲ್ಲವಾದುದರಿಂದ ಯೆರೂಸಲೇಮಿನಲ್ಲಿ ಮಹಾಸಂತೋಷವುಂಟಾಯಿತು.
וַתְּהִי שִׂמְחָֽה־גְדוֹלָה בִּירוּשָׁלָ͏ִם כִּי מִימֵי שְׁלֹמֹה בֶן־דָּוִיד מֶלֶךְ יִשְׂרָאֵל לֹא כָזֹאת בִּירוּשָׁלָֽ͏ִם׃
27 ೨೭ ಆಮೇಲೆ ಯಾಜಕರಾಗಿದ್ದ ಲೇವಿಯರು ಎದ್ದು ನಿಂತು ಜನರನ್ನು ಆಶೀರ್ವದಿಸಿದರು. ಅವರ ಪ್ರಾರ್ಥನೆಯ ಸ್ವರವು ದೇವರಿಗೆ ಕೇಳಿಸಿತು; ಅವರ ಪ್ರಾರ್ಥನೆಯು ಪರಲೋಕದಲ್ಲಿರುವ ಆತನ ಪರಿಶುದ್ಧ ನಿವಾಸಕ್ಕೆ ತಲುಪಿತು.
וַיָּקֻמוּ הַכֹּהֲנִים הַלְוִיִּם וַיְבָרְכוּ אֶת־הָעָם וַיִּשָּׁמַע בְּקוֹלָם וַתָּבוֹא תְפִלָּתָם לִמְעוֹן קׇדְשׁוֹ לַשָּׁמָֽיִם׃

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 30 >