< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 32 >

1 ಈ ಭಕ್ತಿ ಕಾರ್ಯಗಳಾದ ನಂತರ ಅಶ್ಶೂರದ ಅರಸನಾದ ಸನ್ಹೇರೀಬನು ಯುದ್ಧಕ್ಕೆ ಹೊರಟು ಯೆಹೂದದಲ್ಲಿ ನುಗ್ಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿ ಕೊಳ್ಳಬೇಕೆಂದು ಅವುಗಳಿಗೆ ಮುತ್ತಿಗೆ ಹಾಕಿದನು.
यी सबै कुराहरू र यी विश्‍वासयोग्य कामहरू भएपछि, अश्शूरका राजा सनहेरीब आए र यहूदामा पसे । किल्ला भएका सहरहरूलाई आक्रमण गर्नलाई तिनले छाउनी हाले, जसलाई तिनले आफ्नो निम्ति कब्‍जा गर्न इच्‍छा गरे ।
2 ದೇಶದೊಳಗೆ ನುಗ್ಗಿದ ಸನ್ಹೇರೀಬನು ಯೆರೂಸಲೇಮಿನ ಮೇಲೆಯೂ ಯುದ್ಧಕ್ಕಾಗಿ ಬರಬೇಕೆಂದಿರುವುದು ಹಿಜ್ಕೀಯನಿಗೆ ತಿಳಿದುಬಂದಿತು.
सनहेरीब आएका थिए र यरूशलेमको विरुद्ध युद्ध गर्ने अठोट गरेका थिए भनी जब हिजकियालाई थाहा पाए,
3 ಅವನು ಪಟ್ಟಣದ ಹೊರಗಿರುವ ಎಲ್ಲಾ ಒರತೆಗಳನ್ನು ಮುಚ್ಚಿಸಬೇಕೆಂದು ಮನಸ್ಸು ಮಾಡಿ ತನ್ನ ಸರದಾರರ ಮತ್ತು ಶೂರರ ಮುಂದೆ ಆ ಪ್ರಸ್ತಾಪವನ್ನೆತ್ತಿ ಅವರ ಸಹಾಯವನ್ನು ಪಡೆದುಕೊಂಡನು.
तब तिनले सहरबाहिरका मूलहरूका पानी बन्द गरिदिन तिनले आफ्ना अगुवाहरू र आफ्ना शक्तिशाली मानिसहरूसित सल्लाह लिए । तिनीहरूले तिनलाई त्‍यसो गर्न सहयोग गरे ।
4 ಆಗ ಅನೇಕರು ಸೇರಿ, “ಇಲ್ಲಿಗೆ ಬರುವ ಅಶ್ಶೂರದ ರಾಜರು ಬೇಕಾದಷ್ಟು ನೀರನ್ನು ನೋಡುವುದೇತಕ್ಕೆ?” ಎಂದುಕೊಂಡು ಎಲ್ಲಾ ಒರತೆಗಳನ್ನೂ ದೇಶದ ಮಧ್ಯದಲ್ಲಿ ಹರಿಯುವ ಹೊಳೆಯನ್ನು ಮುಚ್ಚಿಬಿಟ್ಟರು.
धेरै संख्यामा मानिसहरू एकसाथ भेला भए र देशको मध्यभाग भएर बग्‍ने सबै मूलहरू र खोलाहरू थुनिदिए । तिनीहरूले भने, “अश्शूरका राजाहरू यहाँ आएर किन प्रशस्त पानी पाउने?”
5 ಇದರಿಂದ ಅರಸನು ಧ್ಯೆರ್ಯಗೊಂಡು, ಅಲ್ಲಲ್ಲಿ ಬಿದ್ದುಹೋಗಿದ್ದ ಪೌಳಿಗೋಡೆಯನ್ನು ಜೀರ್ಣೋದ್ಧಾರ ಮಾಡಿಸಿ, ಅದರ ಮೇಲೆ ಗೋಪುರಗಳನ್ನೂ, ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿಸಿದನು. ದಾವೀದನಗರದ ಮಿಲ್ಲೋ ಕೋಟೆಯನ್ನು ಭದ್ರಪಡಿಸಿದಲ್ಲದೆ. ಅನೇಕ ಆಯುಧಗಳನ್ನೂ, ಗುರಾಣಿಗಳನ್ನೂ ಮಾಡಿಸಿದನು.
हिजकियाले साहस गरे र भत्किएका सबै पर्खालको निर्माण गरे । तिनले धरहराहरू अग्‍लो बनाए, र बाहिरका अरू पर्खालहरू पनि त्यसै गरे । दाऊदको सहरका टेवा दिने गाराहरू पनि तिनले सुदृढ पारे, र तिनले ठुलो सङ्‍ख्‍यामा हातहतियार र ढालहरू बनाए ।
6 ಅನಂತರ ಅವನು ಜನರನ್ನು ಮುನ್ನಡೆಸಲು ಸೇನಾಪತಿಗಳನ್ನು ನೇಮಿಸಿ ಅವರನ್ನು ಊರುಬಾಗಲಿನ ಬಯಲಿನಲ್ಲಿ ಒಟ್ಟಾಗಿ ಸೇರಿಸಿಕೊಂಡು ಅವರಿಗೆ,
तिनले मानिसहरूमाथि फौजी कमाण्‍डरहरू नियुक्त गरे । तिनले तिनीहरूलाई सहरको मूल ढोकाको खुल्ला ठाउँमा एकसाथ भेला गरे र तिनीहरूसँग हौसलासहित कुरा गरे । तिनले भने,
7 “ಶೂರರಾಗಿರಿ, ಧೈರ್ಯದಿಂದಿರಿ; ಅಶ್ಶೂರದ ಅರಸನಿಗೂ ಅವನೊಂದಿಗಿರುವ ಆ ದೊಡ್ಡ ಗುಂಪಿಗೂ ಅಂಜಬೇಡಿರಿ, ಕಳವಳಪಡಬೇಡಿರಿ. ಅವನಿಗಿರುವ ಸಹಾಯಕ್ಕಿಂತ ನಮಗಿರುವ ಸಹಾಯವು ದೊಡ್ಡದ್ದು. ಅವನೊಂದಿಗಿರುವದಕ್ಕಿಂತ ದೊಡ್ಡವನಾಗಿರುವವನು ನಮ್ಮೊಂದಿಗಿದ್ದಾನೆ.
“बलिया र साहसिला होओ । अश्शूरका राजा र तिनीसँग भएको त्‍यो सबै ठुलो फौज को कारणले नडराओ वा हतोत्साही नहोओ, किनकि हामीसित हुनुहुने उनीहरूसित हुनेभन्‍दा महान् हुनुहुन्छ ।
8 ಅವನಿಗಿರುವ ಸಹಾಯವು ನಶ್ವರವಾದ ತೋಳುಬಲ; ನಮಗಾದರೋ ನಮ್ಮ ಸಹಾಯಕನು ದೇವರಾದ ಯೆಹೋವನೇ. ಆತನು ನಮಗೆ ನೆರವಾಗಿ, ಯುದ್ಧಗಳಲ್ಲಿ ನಮಗೋಸ್ಕರ ಕಾದಾಡುವನು” ಎಂದು ಹೇಳಿ ಧೈರ್ಯಪಡಿಸಿದನು. ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸೆಯುಳ್ಳವರಾದರು.
तिनीसित शारीरिक हतिहार मात्र छन्, तर हामीलाई सहायता गर्न र हाम्रो युद्ध गर्न हामीसित हाम्रा परमप्रभु परमेश्‍वर हुनुहुन्छ ।” तब यहूदाका राजा हिजकियाको वचनले गर्दा यहूदाका मानिसहरूले आफैलाई सान्त्वना दिए ।
9 ಇದಾದ ಮೇಲೆ, ಸರ್ವಸೇನೆಯೊಡನೆ ಲಾಕೀಷಿನ ಎದುರಿನಲ್ಲಿ ಪಾಳೆಯಮಾಡಿಕೊಂಡಿದ್ದ ಅಶ್ಶೂರದ ಅರಸನಾದ ಸನ್ಹೇರೀಬನು ತನ್ನ ಸೇವಕರನ್ನು ಯೆರೂಸಲೇಮಿಗೆ ಕಳುಹಿಸಿದನು. ಅವರ ಮುಖಾಂತರ ಯೆಹೂದದ ಅರಸನಾದ ಹಿಜ್ಕೀಯನಿಗೂ ಯೆರೂಸಲೇಮಿನಲ್ಲಿದ್ದ ಎಲ್ಲಾ ಯೆಹೂದ್ಯರಿಗೂ ಹೀಗೆ ಹೇಳಿ ಕಳುಹಿಸಿದನು,
त्यसपछि अश्शूरका राजा सनहेरीबले यरूशलेममा, (उनी लाकीश अगाडि थिए, र उनका सबै फौज उनीसित थियो) यहूदाका राजा हिजकिया र यरूशलेममा भएका यहूदाका सबै मानिसहरूकहाँ आफ्ना सेवकहरू पठाए । तिनले भने,
10 ೧೦ “ಅಶ್ಶೂರದ ಅರಸನಾದ ಸನ್ಹೇರೀಬನು ಈ ರೀತಿಯಾಗಿ ಹೇಳುತ್ತಿದ್ದಾನೆ: ನೀವು ಯಾವುದರ ಮೇಲೆ ಭರವಸೆಯಿಟ್ಟು ಮುತ್ತಿಗೆಗೆ ಗುರಿಯಾಗಲಿರುವ ಯೆರೂಸಲೇಮಿನಲ್ಲಿ ನಿಂತಿದ್ದೀರಿ?
“अश्शूरका राजा सनहेरीब यसो भन्छन्: यरूशलेममा भएको घेराबन्दी सहनलाई तिमीहरू के कुरामा भर परिरहेका छौ?
11 ೧೧ ಹಿಜ್ಕೀಯನು, ‘ನಮ್ಮ ದೇವರಾದ ಯೆಹೋವನು ಅಶ್ಶೂರದ ಅರಸನ ಕೈಯಿಂದ ನಮ್ಮನ್ನು ರಕ್ಷಿಸುವನು’ ಎಂಬ ನಂಬಿಕೆ ನಿಮ್ಮಲ್ಲಿ ಹುಟ್ಟಿಸುವುದಕ್ಕೆ ಪ್ರಯತ್ನಿಸುತ್ತಿರುವುದು ನಿಮ್ಮನ್ನು ಹಸಿವೆ ನೀರಡಿಕೆಗಳಿಂದ ಸಾಯಿಸುವುದಕ್ಕಾಗಿಯೇ ಅಲ್ಲದೆ ಮತ್ತ್ಯಾವುದಕ್ಕೂ ಅಲ್ಲ.
जब ‘परमप्रभु हाम्रा परमेश्‍वरले अश्शूरका राजाको हातबाट बचाउनुहुनेछ’ भनी हिजकियाले तिमीहरूलाई भन्छन्, तब तिमीहरू बसेकै ठाउँमा तिमीहरूलाई अनिकाल वा तिर्खाले मार्नलाई तिनले तिमीहरूलाई भ्रममा पारिरहेका छैनन् र?
12 ೧೨ ಹಿಜ್ಕೀಯನು ಒಂದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಿ ಅದರ ಮೇಲೆಯೇ ಧೂಪಹಾಕಬೇಕೆಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ, ದೇವರ ಬೇರೆ ಎಲ್ಲಾ ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಕೆಡವಿಸಿ ಬಿಟ್ಟನಲ್ಲವೆ?
आफ्‍ना अल्गा ठाउँहरू र आफ्‍ना वेदीहरू हटाएका, अनि यहूदा र यरूशलेमलाई ‘एउटै मात्र वेदीमा तिमीहरूले आराधना गर्नुपर्छ र त्‍यसमा तिमीहरूले आफ्‍ना बलिदान चढाउनुपर्छ,’ भन्‍ने हिजकिया यिनै होइनन् र?
13 ೧೩ ನಾನೂ, ನನ್ನ ತಂದೆ, ತಾತಂದಿರೂ ಎಲ್ಲಾ ದೇಶಗಳ ಜನಾಂಗಗಳಿಗೆ ಮಾಡಿದ್ದನ್ನು ಕೇಳಲಿಲ್ಲವೋ? ಆ ಜನಾಂಗಗಳ ದೇವತೆಗಳಿಗೆ ಅವರ ದೇಶವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸುವುದಕ್ಕೆ ಸಾಧ್ಯವಾಯಿತೋ?
म र मेरा पुर्खाहरूले अरू देशका सबै मानिसलाई के गरेका छौं सो तिमीहरूलाई थाहा छैन र? के वरिपरिका देशका मानिसहरूका देवताहरूले मेरो शक्तिबाट आफ्‍ना देशहरूलाई बचाउन सकेका थिए र?
14 ೧೪ ನನ್ನ ತಂದೆತಾತಂದಿರು ನಾಶಮಾಡಿಬಿಟ್ಟ ಆ ಜನಾಂಗಗಳ ದೇವರುಗಳಲ್ಲಿ ಯಾವನು ತಾನೆ ತನ್ನ ಪ್ರಜೆಯನ್ನು ನನ್ನ ಕೈಯಿಂದ ಬಿಡಿಸುವುದಕ್ಕೆ ಸಮರ್ಥನಾಗಿದ್ದನು? ಹೀಗಿರುವಲ್ಲಿ ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಯೋ
मेरा पुर्खाहरूले पूर्ण रूपले नाश गरेका जातिहरूका देवतामध्ये के त्‍यहाँ कुनै देवता थियो जसले मेरो हातबाट आफ्ना मानिसहरूलाई बचाउन सक्यो? तिमीहरूका परमेश्‍वरले तिमीहरूलाई मेरो शक्तिबाट किन बचाउनुपर्छ र?
15 ೧೫ ನೀವು ಹಿಜ್ಕೀಯನಿಂದ ಮರುಳಾಗಿ ಈ ರೀತಿಯಾಗಿ ಮೋಸಹೋಗಬೇಡಿರಿ, ಅವನನ್ನು ನಂಬಲೂ ಬೇಡಿರಿ. ಯಾವ ರಾಜ್ಯಜನಾಂಗಗಳ ದೇವತೆಗಳೂ ತನ್ನ ಪ್ರಜೆಗಳನ್ನು ನನ್ನ ಮತ್ತು ನನ್ನ ಪೂರ್ವಿಕರ ಕೈಯಿಂದ ಬಿಡಿಸಲಾರದೆ ಹೋದನು ಅಂದ ಮೇಲೆ, ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕಿದಂತೆ ತಪ್ಪಿಸಬಲ್ಲನೇ?” ಎಂದು ಹೇಳಿಸಿದನು.
अब हिजकियाले यसो भनेर तिमीहरूलाई छलमा पार्न र तिमीहरूलाई मनाउन नदेओ । तिमीहरू तिनीमाथि विश्‍वास नगर, किनकि कुनै पनि जाति वा राज्यका देवताले आफ्ना मानिसलाई मेरो वा मेरा पुर्खाहरूका हातबाट बचाउन सकेको छैन । तिमीहरूका परमेश्‍वरले तिमीहरूलाई मेरो हातबाट कति थोरै बचाउने छन् र?”
16 ೧೬ ಸನ್ಹೇರೀಬನು ದೇವರಾದ ಯೆಹೋವನಿಗೂ ಆತನ ಸೇವಕನಾದ ಹಿಜ್ಕೀಯನಿಗೂ ವಿರುದ್ಧವಾಗಿ ಆಡಿದ ಈ ಮಾತುಗಳನ್ನು ತನ್ನ ಸೇವಕರ ಮುಖಾಂತರ ಹೇಳಿ ಕಳುಹಿಸಿದನು.
सनहेरीबका सेवकहरूले परमप्रभु परमेश्‍वर र उहाँका सेवक हिजकियाका विरुद्धमा अझै धेरै बोले ।
17 ೧೭ ಅಷ್ಟು ಮಾತ್ರವಲ್ಲದೆ, ಇಸ್ರಾಯೇಲಿನ ದೇವರಾದ ಯೆಹೋವನನ್ನು ನಿಂದಿಸಿ ದೂಷಿಸುವುದಕ್ಕಾಗಿ, “ಅನ್ಯದೇಶಗಳವರ ದೇವರುಗಳು ತಮ್ಮ ಜನರನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದಂತೆ ಹಿಜ್ಕೀಯನ ದೇವರು ತನ್ನ ಪ್ರಜೆಗಳನ್ನು ನನ್ನ ಕೈಯಿಂದ ಬಿಡಿಸಲಾರನು” ಎಂಬುದಾಗಿ ಪತ್ರದಲ್ಲಿ ಬರೆದು ಕಳುಹಿಸಿದನು.
परमप्रभु इस्राएलका परमेश्‍वरको गिल्ला गर्नको निम्ति समेत सनहेरीबले पत्रहरू पनि लेखे । तिनले भने: “जसरी अरू देशका जातिहरूका देवताहरूले आफ्ना मानिसहरूलाई मेरो हातबाट बचाउन सकेका छैनन्, त्यसरी नै हिजकियाका परमेश्‍वरले पनि आफ्ना मानिसहरूलाई मेरो हातबाट बचाउन सक्‍ने छैनन् ।”
18 ೧೮ ಯೆರೂಸಲೇಮಿಗೆ ಬಂದ ಆ ಅಶ್ಶೂರ್ಯರು ಗೋಡೆಯ ಮೇಲಿದ್ದ ಜನರನ್ನು ಬೆದರಿಸಿ, ದಿಗ್ಭ್ರಮೆಗೊಳಿಸಿ ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕಾಗಿ ಗಟ್ಟಿಯಾಗಿ ಕೂಗುತ್ತಾ ಅವರೊಡನೆ ಯೆಹೂದ್ಯರ ಭಾಷೆಯಲ್ಲಿ ಅವರಿಗೆ
तब उनीहरूले सहर कब्जा गर्न सकुन् भनेर यरूशलेमको पर्खालमा खडा हुने मानिसहरूलाई, तिनीहरूलाई त्रासमा पार्न र तिनीहरूलाई कष्‍ट दिन उनीहरूले चर्को सोरले यहूदीहरूका भाषामा कराए ।
19 ೧೯ ಯೆರೂಸಲೇಮಿನ ದೇವರಾದ ಯೆಹೋವನು ಮನುಷ್ಯರ ಕೈಕೆಲಸವಾಗಿರುವ ಅನ್ಯದೇಶಗಳವರ ದೇವತೆಗಳಿಗೆ ಸಮಾನನಾಗಿರುವನನು ಎಂದು ಅನ್ಯದೇವರುಗಳಿಗೆ ಹೋಲಿಸಿ ಮಾತನಾಡಿದರು.
केवल मानिसका हातले बनाएका पृथ्वीका अरू मानिसका देवताहरूका बारेमा उनीहरूले बोलेझैं यरूशलेमका परमेश्‍वरको बारेमा पनि उनीहरूले बोले ।
20 ೨೦ ಈ ಕಾರಣದಿಂದ ಅರಸನಾದ ಹಿಜ್ಕೀಯನು ಹಾಗು ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಪರಲೋಕದ ದೇವರಿಗೆ ಮೊರೆಯಿಟ್ಟು ಪ್ರಾರ್ಥಿಸಿದರು.
यस विषयको कारणले हिजकिया राजा र आमोजका छोरा यशैया अगमवक्ताले प्रार्थना गरे र तिनले स्वर्गतिर पुकारा गरे ।
21 ೨೧ ಯೆಹೋವನು ದೂತನನ್ನು ಕಳುಹಿಸಿ ಅಶ್ಶೂರದ ಅರಸನ ದಂಡಿನಲ್ಲಿದ್ದ ಎಲ್ಲಾ ಶೂರರನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ಸಂಹರಿಸಿದನು; ಅಶ್ಶೂರದ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿಹೋಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದು ಹಾಕಿದರು.
तब परमप्रभुले एउटा स्वर्गदूत पठाउनुभयो, जसले छाउनीमा भएका राजाका योद्धाहरू, कमाण्‍डरहरू र अधिकृतहरूलाई मारे । यसरी सनहेरीब आफ्‍नो मुहारमा बेइज्‍जती लिएर तिनको आफ्नो देशमा फर्के । जब उनी आफ्नो देवताको मन्दिरमा पसेका थिए, तब उनका आफ्‍नै छोरामध्येका कसैले उनलाई तरवारले काटेर मारे ।
22 ೨೨ ಹೀಗೆ ಯೆಹೋವನು ಹಿಜ್ಕೀಯನನ್ನೂ ಯೆರೂಸಲೇಮಿನವರನ್ನೂ ಅಶ್ಶೂರ್ಯದ ಅರಸನಾದ ಸನ್ಹೇರೀಬನ ಕೈಗೂ ಸುತ್ತಲಿನ ಎಲ್ಲಾ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡುತ್ತಿದ್ದನು.
यसरी परमप्रभुले हिजकिया र यरूशलेमका बासिन्दाहरूलाई अश्शूरका राजा सनहेरीबका हातबाट र अरू सबैका हातबाट बचाउनुभयो, र तिनीहरूलाई चारैतिरबाट आराम दिनुभयो ।
23 ೨೩ ಅನೇಕರು ಯೆಹೋವನಿಗೋಸ್ಕರ ಕಾಣಿಕೆಗಳನ್ನೂ, ಯೆಹೂದ್ಯರ ಅರಸನಾದ ಹಿಜ್ಕೀಯನಿಗೋಸ್ಕರ ಶ್ರೇಷ್ಠ ವಸ್ತುಗಳನ್ನೂ ಯೆರೂಸಲೇಮಿಗೆ ತೆಗೆದುಕೊಂಡು ಬಂದರು. ಅಂದಿನಿಂದ ಎಲ್ಲಾ ಜನಾಂಗಗಳವರು ಹಿಜ್ಕೀಯನನ್ನು ಬಹಳ ದೊಡ್ಡವನೆಂದು ಪರಿಗಣಿಸುತ್ತಿದ್ದರು.
धेरै जनाले यरूशलेममा परमप्रभुको निम्ति भेटीहरू र यहूदाका राजा हिजकियाको निम्ति बहुमूल्य उपहारहरू ल्याए, ताकि त्यो समयदेखि पछि सबै जातिका दृष्‍टिमा तिनी उच्‍च पारिए ।
24 ೨೪ ಆ ಕಾಲದಲ್ಲಿ ಹಿಜ್ಕೀಯನು ಮರಣಕರವಾದ ರೋಗಕ್ಕೆ ತುತ್ತಾದನು ಆಗ ಅವನು ಯೆಹೋವನಿಗೆ ಪ್ರಾರ್ಥಿಸಲು ಆತನು ಅದ್ಭುತವಾಗಿ ಸದುತ್ತರವನ್ನು ದಯಪಾಲಿಸಿ ಅವನಿಗೆ ಒಂದು ಗುರುತನ್ನು ಅನುಗ್ರಹಿಸಿದನು.
ती दिनमा हिजकिया मरणासन्‍न हुने गरी बिरामी भए । तिनले परमप्रभुमा प्रार्थना गरे, जो तिनीसित बोल्‍नुभयो र तिनी निको हुनेछन् भनेर एउटा चिन्ह तिनलाई दिनुभयो ।
25 ೨೫ ಆದರೆ ಹಿಜ್ಕೀಯನು ಈ ಉಪಕಾರಕ್ಕೆ ತಕ್ಕಂತೆ ನಡೆಯದೆ ಅಹಂಕಾರಿಯಾದನು. ಆದುದರಿಂದ ಯೆಹೂದದ ಮೇಲೆಯೂ ಯೆರೂಸಲೇಮಿನವರ ಮೇಲೆಯೂ ದೇವರ ಕೋಪವುಂಟಾಯಿತು.
तर हिजकियालाई दिइएको मदतका निम्‍ति तिनी परमप्रभुप्रति कृतज्ञ भएनन्, किनकि तिनको हृदय अहङ्‍कारी भएको थियो । यसैले तिनीमाथि र यहूदा र यरूशलेममाथि क्रोध पर्‍यो ।
26 ೨೬ ಆಗ ಹಿಜ್ಕೀಯನ ತನ್ನ ಗರ್ವವನ್ನು ಬಿಟ್ಟು, ಯೆರೂಸಲೇಮಿನವರೊಡನೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ಅವನ ಉಳಿದ ಜೀವಮಾನದಲ್ಲಿ ಯೆಹೋವನ ಕೋಪವು ಅವನ ಮೇಲೆ ಬರಲಿಲ್ಲ.
तापनि आफ्नो हृदयको अभिमानको निम्ति हिजकिया र यरूशलेमका बासिन्दा दुवैले पश्‍चात्ताप गरे, जसले गर्दा हिजकियाको समयमा परमप्रभुको क्रोध तिनीहरूमाथि परेन ।
27 ೨೭ ಹಿಜ್ಕೀಯನಿಗೆ ಅತ್ಯಧಿಕವಾದ ಧನ ಘನತೆಗಳು ಒದಗಿದವು; ಅವನು ಬೆಳ್ಳಿಬಂಗಾರ, ರತ್ನ, ಪರಿಮಳ ದ್ರವ್ಯ, ಗುರಾಣಿ, ಆಭರಣ ಮುಂತಾದ ಶ್ರೇಷ್ಠಾಯುಧಗಳನ್ನು ಇಡುವುದಕ್ಕೋಸ್ಕರ ಭಂಡಾರಗಳನ್ನು ಸಿದ್ಧಪಡಿಸಿದನು
हिजकियाले धेरै धनसम्पत्ति र धेरै मान पाएका थिए । तिनले आफ्ना निम्ति सुन, चाँदी, बहुमूल्य पत्थर र मसलाहरू, अनि ढालहरू र अरू दामी-दामी चीजहरू राख्ने भण्डारहरू बनाए ।
28 ೨೮ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು ಸಂಗ್ರಹಿಸುವುದಕ್ಕಾಗಿ ಉಗ್ರಾಣಗಳನ್ನು ಕಟ್ಟಿಸಿದನು. ಆಯಾ ಜಾತಿಯ ಪಶುಗಳಿಗೋಸ್ಕರ ಕೊಟ್ಟಿಗೆಗಳನ್ನೂ, ಆಡುಕುರಿಗಳ ಹಿಂಡುಗಳಿಗೋಸ್ಕರ ಹಟ್ಟಿಗಳನ್ನೂ ಸಿದ್ಧಮಾಡಿಸಿಕೊಂಡನು.
तिनीसँग अन्‍न, नयाँ दाखमद्य र तेल जम्‍मा गर्ने भण्‍डारहरू, र सबै किसिमका जनावरका लागि गोठहरू थिए । र तिनीसित भेडाबाख्राहरूका गोठहरू पनि थिए ।
29 ೨೯ ಇದಲ್ಲದೆ, ಪಟ್ಟಣಗಳನ್ನೂ ಕಟ್ಟಿಸಿ ದನಕುರಿಗಳ ದೊಡ್ಡ ಹಿಂಡುಗಳನ್ನು ಸಂಪಾದಿಸಿಕೊಂಡನು. ದೇವರು ಅವನಿಗೆ ಕೊಟ್ಟ ಸಂಪತ್ತು ಅಪರಿಮಿತವಾಗಿತ್ತು.
यसको साथमा तिनीसँग सहरहरू र प्रसस्त बथान र बगालहरू पनि थिए, किनकि परमेश्‍वरले तिनलाई धेरै धनसम्पत्ति दिनुभएको थियो ।
30 ೩೦ ಮೇಲಣ ಗೀಹೋನ್ ಎಂಬ ಬುಗ್ಗೆಗೆ ಅಣೆಕಟ್ಟು ಕಟ್ಟಿಸಿ ಅದರ ನೀರು ನೆಟ್ಟಗೆ ದಾವೀದನಗರದ ಪಡುವಣ ತಗ್ಗಿಗೆ ಹರಿಯುವಂತೆ ಮಾಡಿದವನು ಹಿಜ್ಕೀಯನೇ. ಅವನು ತನ್ನ ಎಲ್ಲಾ ಕಾರ್ಯಗಳಲ್ಲಿಯೂ ಕೃತಾರ್ಥನಾದನು.
गीहोन नदीको माथिल्लो मुहानलाई थुन्‍ने र त्‍यसलाई दाऊदको सहरको पश्‍चिमपट्टि सिधा ल्याउने हिजकिया पनि यिनै थिए । आफ्‍ना सब परियोजनामा हिजकिया सफल भए ।
31 ೩೧ ಆದರೂ ಅವನ ದೇಶದಲ್ಲಿ ಉಂಟಾದ ಅದ್ಭುತ ವಿಷಯವನ್ನು ವಿಚಾರಿಸುವುದಕ್ಕಾಗಿ ಬಾಬೆಲಿನ ಅರಸನ ರಾಯಭಾರಿಗಳು ಅವನ ಬಳಿಗೆ ಬಂದಾಗ, ದೇವರು ಅವನನ್ನು ಪರೀಕ್ಷಿಸುವುದಕ್ಕೂ ಹಾಗು ಅವನ ಸರ್ವಾಂತರ್ಯವನ್ನು ತಿಳಿದುಕೊಳ್ಳುವುದಕ್ಕೂ ಅವನನ್ನು ಬಿಟ್ಟುಕೊಟ್ಟನು
तापनि देशमा देखिएको आश्‍चर्यका चिन्हको विषयमा जानकारहरूका बारेमा प्रश्‍नहरू सोध्‍नलाई बेबिलोनका शासकहरूले पठाएका राजदूतहरूका सम्‍बन्‍धमा तिनको जाँच गर्न र तिनको हृदयका सबै कुरा पत्ता लगाउन परमेश्‍वरले तिनलाई छोड्नुभयो ।
32 ೩೨ ಹಿಜ್ಕೀಯನ ಉಳಿದ ಚರಿತ್ರೆಯೂ ಅವನ ಭಕ್ತಿ ಕಾರ್ಯಗಳೂ ಆಮೋಚನ ಮಗನಾದ, ಪ್ರವಾದಿಯಾದ ಯೆಶಾಯನ ದರ್ಶನಗ್ರಂಥದಲ್ಲಿಯೂ, ಯೆಹೂದ್ಯರ ಮತ್ತು ಇಸ್ರಾಯೇಲರ ರಾಜ ಗ್ರಂಥದಲ್ಲಿಯೂ ಬರೆದಿರುತ್ತವೆ.
हिजकियाको बारेमा अन्य कुराहरू, तिनका करारका बफादर कामहरूसमेतका कुरा, आमोजका छोरा यशैया अगमवक्ताको दर्शन र यहूदा र इस्राएलका राजाहरूको इतिहासको पुस्तकमा ती लेखिएका तपाईंले पाउनुहुन्‍छ ।
33 ೩೩ ಹಿಜ್ಕೀಯನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದವಂಶದವರ ಕುಟುಂಬ ಸ್ಮಶಾನ ಭೂಮಿಯ ದಿಬ್ಬದ ಮೇಲೆ ಸಮಾಧಿಮಾಡಿದರು. ಅವನ ಉತ್ತರಕ್ರಿಯೆ ನಡೆಯುವಾಗ ಎಲ್ಲಾ ಯೆಹೂದ್ಯರೂ, ಯೆರೂಸಲೇಮಿನವರು ಅವನನ್ನು ಬಹಳವಾಗಿ ಸನ್ಮಾನಿಸಿದರು. ಅವನಿಗೆ ಬದಲಾಗಿ ಅವನ ಮಗನಾದ ಮನಸ್ಸೆಯು ಅರಸನಾದನು.
हिजकिया आफ्ना पुर्खाहरूसित सुते, र तिनीहरूले दाऊदका सन्तानहरूका चिहानहरू भएको डाँडामा तिनलाई गाडे । तिनको मृत्युमा सारा यहूदा र यरूशलेमका मानिसहरूले तिनलाई श्रद्धासुमन प्रकट गरे । तिनको ठाउँमा तिनका छोरा मनश्शे राजा भए ।

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 32 >