< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 33 >

1 ಮನಸ್ಸೆಯು ಅರಸನಾದಾಗ ಅವನು ಹನ್ನೆರಡು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಐವತ್ತೈದು ವರ್ಷಗಳ ಕಾಲ ಆಳಿದನು.
मनश्शेले राज्य गर्न सुरु गर्दा तिनी बाह्र वर्षका थिए । तिनले यरूशलेममा पचपन्‍न वर्ष राज्य गरे ।
2 ಯೆಹೋವನು ಇಸ್ರಾಯೇಲರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
तिनले परमप्रभुले इस्राएलका मानिसहरूका सामुन्‍नेबाट धपाउनुभएका जातिहरूका घिनलाग्दा चालहरूमा हिंडेर तिनले परमप्रभुको दृष्‍टिमा जे खराब थियो, त्यही गरे ।
3 ತನ್ನ ತಂದೆಯಾದ ಹಿಜ್ಕೀಯನು ತೆಗೆದುಹಾಕಿದ ಪೂಜಾಸ್ಥಳಗಳನ್ನು ತಿರುಗಿ ಸ್ಥಾಪಿಸಿ, ಬಾಳ್ ದೇವತೆಗಳಿಗಾಗಿ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.
तिनका पिता हिजकियाले नाश गरेका डाँडाका थानहरू तिनले फेरि बनाए, र तिनले बाल देवताहरूका निम्ति वेदीहरू खडा गरे, अशेराका खम्बाहरू बनाए, र तिनले आकाशका सबै ताराका सामु निहुरे र तिनको पुजा गरे ।
4 ಯೆಹೋವನು ಯೆರೂಸಲೇಮಿನಲ್ಲಿ ತನ್ನ ಹೆಸರನ್ನು ಸದಾಕಾಲ ಸ್ಥಾಪಿಸುವುದಕ್ಕಾಗಿ ಆರಿಸಿಕೊಂಡ,
“यरूशलेममा नै मेरो नाउँ सदासर्वदा रहनेछ” भनेर परमप्रभुले आज्ञा दिनुभए तापनि मनश्शेले परमप्रभुको मन्दिरमा वेदीहरू बनाए ।
5 ಆಲಯದ ಎರಡು ಪ್ರಾಕಾರಗಳಲ್ಲಿಯೂ ಸರ್ವನಕ್ಷತ್ರಮಂಡಲಗಳಿಗಾಗಿ ಯಜ್ಞವೇದಿಗಳನ್ನು ಕಟ್ಟಿಸಿದನು.
तिनले आकाशका सारा ताराहरूका निम्ति परमप्रभुको मन्दिरका दुवै चोकमा वेदीहरू बनाए ।
6 ಇದಲ್ಲದೆ ಅವನು ತನ್ನ ಮಕ್ಕಳನ್ನು ಬೆನ್ ಹಿನ್ನೋಮ್ ತಗ್ಗಿನಲ್ಲಿ ಅಗ್ನಿಪ್ರವೇಶ ಮಾಡಿಸಿದನು. ಕಣಿಹೇಳಿಸುವುದು, ಶಕುನನೋಡಿಸುವುದು, ಯಂತ್ರಹಾಕಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಸತ್ತವರಲ್ಲಿ ವಿಚಾರಿಸುವವರು ಮತ್ತು ಭೂತ ಪ್ರೇತಗಳನ್ನು ಆರಾಧಿಸುವವರು ತಮ್ಮ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.
तिनले आफ्ना छोराहरूलाई बेन-हिन्‍नोमको बेसीमा आगोमा हिंड्न लगाए । तिनले टुनामुना गरे, जोखना हेरे, मन्त्रतन्त्र गरे र मृतहरूसँग कुरा गर्नेहरू र आत्माहरूसँग कुरा गर्नेहरूसित सल्लाह लिए । मनश्शेले परमप्रभुको दृष्‍टिमा धेरै दुष्‍ट काम गरे र तिनले उहाँलाई रिस उठाए ।
7 ತಾನು ಮಾಡಿಸಿದ ವಿಗ್ರಹ ಸ್ತಂಭವನ್ನು ದೇವಾಲಯದಲ್ಲಿಡಿಸಿದನು. ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ, “ಇಸ್ರಾಯೇಲರು ಮೋಶೆಯ ಮುಖಾಂತರ ತಮಗೆ ಕೊಡಲ್ಪಟ್ಟ ನನ್ನ ಎಲ್ಲಾ ಧರ್ಮಶಾಸ್ತ್ರದ ವಿಧಿವಿಧಾನಗಳನ್ನು ಅನುಸರಿಸಿ ನಡೆಯುವುದಾದರೆ ನನ್ನ ನಾಮಮಹತ್ತು ಈ ದೇವಾಲಯದಲ್ಲಿಯೂ ಇಸ್ರಾಯೇಲರ ಎಲ್ಲಾ ಊರುಗಳಲ್ಲಿಯೂ ನನಗೆ ಇಷ್ಟವಾಗಿರುವ ಯೆರೂಸಲೇಮಿನಲ್ಲಿಯೂ ಸದಾಕಾಲವಿರುವುದು.
तिनले बनाएको खोपेका मूर्तिलाई तिनले परमेश्‍वरको मन्दिरभित्र राखे । यस मन्दिरको विषयमा परमप्रभुले दाऊद र तिनका छोरा सोलोमनसित बोल्‍नुभएको थियो । गहाँले यसो भन्‍नुभएको थियोः “मैले इस्राएलका सबै कुलमध्ये चुनेको यो मन्दिर र यरूशलेममा म सदासर्वदाको निम्ति मेरो नाउँ राख्नेछु ।
8 ಇಸ್ರಾಯೇಲರು ಇನ್ನು ಮುಂದೆ ದೇಶಭ್ರಷ್ಟರಾಗಿರದೆ ತಮ್ಮ ಪೂರ್ವಿಕರಿಗೆ ನೇಮಿಸಲ್ಟಟ್ಟ ದೇಶದಲ್ಲಿಯೇ ವಾಸವಾಗಿರುವಂತೆ ಮಾಡುವೆನು” ಎಂದು ಹೇಳಿದನು.
इस्राएलका मानिसहरूले मेरा सबै आज्ञा मानेर मेरो दास मोशामार्फत् मैले तिनीहरूलाई दिएका सबै व्‍यवस्‍था, विधिहरू र आदेशहरू होसियारसाथ पालन गरे भने, मैले तिनीहरूका पुर्खाहरूलाई दिएको देशबाट तिनीहरूलाई म फेरि पर हटाउनेछैनँ ।”
9 ಆದರೆ ಯೆಹೂದ್ಯರೂ ಯೆರೂಸಲೇಮಿನವರೂ ಮನಸ್ಸೆಯಿಂದ ಪ್ರೇರಿತರಾಗಿ ಇಸ್ರಾಯೇಲರ ಮುಂದೆಯೇ ಯೆಹೋವನಿಂದ ನಾಶಹೊಂದಿದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.
परमप्रभुले इस्राएलको सामुन्‍ने नाश गर्नुभएका जातिहरूले भन्दा पनि धेरै दुष्‍ट काम गर्न मनश्शेले यहूदा र यरूशलेमका बासिन्दाहरूलाई अगुवाइ गरे ।
10 ೧೦ ಯೆಹೋವನು ಮನಸ್ಸೆಯನ್ನೂ ಅವನ ಪ್ರಜೆಗಳನ್ನೂ ಎಚ್ಚರಿಸಿದರೂ ಅವರು ಲಕ್ಷಿಸಲಿಲ್ಲ.
मनश्शे र तिनका मानिसहरूसित परमप्रभु बोल्नुभयो, तर तिनीहरूले ध्‍यान नै दिएनन् ।
11 ೧೧ ಆದುದರಿಂದ ಆತನು ಅಶ್ಶೂರದ ಅರಸನ ಸೈನ್ಯಾಧಿಪತಿಗಳನ್ನು ಅವರ ಮೇಲೆ ಬರಮಾಡಿದನು. ಅವರು ಮನಸ್ಸೆಯನ್ನು ಹಿಡಿದು ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು.
यसैले परमप्रभुले तिनीहरूका विरुद्धमा अश्शूरका राजाका फौजका कमाण्‍डरहरू ल्याउनुभयो, जसले मनश्शेलाई साङ्लाले बाँधे, हतकडीहरू लगाए र तिनलाई बेबिलोनमा लिएर गए ।
12 ೧೨ ಆದರೆ ಆ ಕಷ್ಟದಲ್ಲಿ ಮನಸ್ಸೆಯು ತನ್ನ ದೇವರಾದ ಯೆಹೋವನ ಪ್ರಸನ್ನತೆಯನ್ನು ಬೇಡಿಕೊಂಡನು. ಅವನು ತನ್ನ ಪೂರ್ವಿಕರ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನನ್ನು ಪ್ರಾರ್ಥಿಸಲು
जब मनश्शे कष्‍टमा परे, तब तिनले परमप्रभु आफ्ना परमेश्‍वरलाई खोजे, र आफ्ना पुर्खाहरूका परमेश्‍वरकहाँ अत्यन्तै विनम्र भएर झुके ।
13 ೧೩ ಆತನು ಲಾಲಿಸಿ, ಅವನಿಗೆ ಸದುತ್ತರವನ್ನು ದಯಪಾಲಿಸಿ ಅವನನ್ನು ತಿರುಗಿ ಯೆರೂಸಲೇಮಿಗೆ ಬರಮಾಡಿ ಅರಸುತನವನ್ನು ಕೊಟ್ಟನು. ಆಗ ಯೆಹೋವನೇ ದೇವರೆಂಬುದು ಮನಸ್ಸೆಗೆ ಮನದಟ್ಟಾಯಿತು.
तिनले उहाँसँग प्रार्थना गरे । अनि तिनले परमेश्‍वरसँग बिन्ती चढाए र परमेश्‍वरले तिनलाई यरूशलेममा ल्‍याएर फेरि राजा बनाउनुभयो । तब मनश्शेले परमप्रभु नै परमेश्‍वर हुनुहुन्‍छ भनी जाने ।
14 ೧೪ ಇದಾದ ಮೇಲೆ ಅವನು ಗೀಹೋನ್ ಬುಗ್ಗೆಯ ಪಡುವಣ ಕಡೆಯಿಂದ ಮೀನುಬಾಗಿಲಿನ ಮಾರ್ಗದವರೆಗಿರುವ ತಗ್ಗಿನಲ್ಲಿ ಓಫೆಲ್ ಗುಡ್ಡದ ಸುತ್ತಲೂ ದಾವೀದನಗರದ ಹೊರಗಿನ ಗೋಡೆಯನ್ನು ಇನ್ನೂ ಎತ್ತರವಾಗಿ ಕಟ್ಟಿಸಿ, ಯೆಹೂದ ದೇಶದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳಲ್ಲಿ ಸೇನಾಧಿಪತಿಗಳನ್ನಿರಿಸಿದನು.
त्यसपछि मनश्शेले बेसीको गीहोनको पश्‍चिमपट्टिदेखि माछा ढोकासम्म दाऊदको सहरका बाहिरको पर्खाल बनाए । तिनले ओफेल डाँडा घेरे र त्यो पर्खाल धेरै अल्गो बनाए । तिनले यहूदाका किल्ला भएका सबै सहरमा साहसी फौजका कमाण्‍डरहरू पनि खटाइदिए ।
15 ೧೫ ಅನ್ಯದೇವತಾಪ್ರತಿಮೆಗಳನ್ನೂ, ತಾನು ಮಾಡಿಸಿದ್ದ ಸ್ತಂಭವನ್ನೂ ಯೆಹೋವನ ಆಲಯದಿಂದ ತೆಗೆಸಿ ಯೆಹೋವನ ಮಂದಿರವಿರುವ ಗುಡ್ಡದಲ್ಲಿಯೂ, ಯೆರೂಸಲೇಮಿನಲ್ಲಿಯೂ ಕಟ್ಟಿಸಿದ್ದ ಎಲ್ಲಾ ಯಜ್ಞವೇದಿಗಳನ್ನು ಕೆಡವಿ ಪಟ್ಟಣದ ಹೊರಗೆ ಹಾಕಿಸಿದನು.
तिनले विदेशी देवताहरू र खोपेर बनाएका मूर्ति परमप्रभुको मन्दिरबाट हटाए, र परमप्रभुको मन्दिरको डाँडा र यरूशलेममा तिनी आफैले बनाएका सबै वेदी पनि हटाइदिए र तिनले ती सबैलाई सहरबाट बाहिर फ्याँकिदिए ।
16 ೧೬ ಯೆಹೋವನ ಯಜ್ಞವೇದಿಯನ್ನು ತಿರುಗಿ ಕಟ್ಟಿಸಿ ಅದರ ಮೇಲೆ ಸಮಾಧಾನಯಜ್ಞಗಳನ್ನೂ, ಕೃತಜ್ಞತಾಯಜ್ಞಗಳನ್ನೂ, ಅರ್ಪಿಸಿ ಇಸ್ರಾಯೇಲಿನ ದೇವರಾದ ಯೆಹೋವನನ್ನೇ ಸೇವಿಸಬೇಕೆಂದು ಯೆಹೂದ್ಯರಿಗೆ ಆಜ್ಞಾಪಿಸಿದನು.
तिनले परमप्रभुको वेदीको पुननिर्माण गरे र त्यसमा मेलबलि र धन्यवाद बलि चढाए । तिनले यहूदालाई परमप्रभु इस्राएलका परमेश्‍वरको सेवा गर्नू भनी हुकुम दिए ।
17 ೧೭ ಅವರು ಈ ಪ್ರಕಾರ ದೇವರಾದ ಯೆಹೋವನೊಬ್ಬನಿಗೇ ಯಜ್ಞವನ್ನು ಅರ್ಪಿಸುವವರಾದರೂ ಆ ಯಜ್ಞಗಳನ್ನೂ ಇನ್ನೂ ಪೂಜಾಸ್ಥಳಗಳಲ್ಲಿಯೇ ಸಮರ್ಪಿಸುತ್ತಿದ್ದರು.
तापनि मानिसहरूले डाँडाका थानहरूमा बलिदानहरू चढाउँदैरहे, तर परमप्रभु तिनीहरूका परमेश्‍वरको निम्ति मात्रै चढाए ।
18 ೧೮ ಮನಸ್ಸೆಯ ಉಳಿದ ಚರಿತ್ರೆಯೂ, ಅವನು ತನ್ನ ದೇವರಿಗೆ ಮಾಡಿದ ಪ್ರಾರ್ಥನೆಯೂ ದರ್ಶಕರು ಇಸ್ರಾಯೇಲಿನ ದೇವರಾದ ಯೆಹೋವನ ಹೆಸರಿನಲ್ಲಿ ಅವನಿಗೆ ಹೇಳಿದ ಮಾತುಗಳೂ ಇಸ್ರಾಯೇಲ್ ರಾಜರ ವೃತ್ತಾಂತಗಳಲ್ಲಿ ಬರೆಯಲ್ಪಟ್ಟಿವೆ.
मनश्शेको राजकालका अरू विषयहरू, आफ्‍नो परमेश्‍वरमा तिनले चढाएको प्रार्थना र परमप्रभु इस्राएलका परमेश्‍वरको नाउँमा दर्शीहरूले तिनलाई बोलेका वचनहरू, हेर, ती इस्राएलका राजाहरूका इतिहासको पुस्तकमा लेखिएका छन् ।
19 ೧೯ ಅವನ ದೇವರಿಗೆ ಮಾಡಿದ ಪ್ರಾರ್ಥನೆಯೂ, ಅವನಿಗೆ ದೊರಕಿದ ಸದುತ್ತರವೂ, ಅವನು ತನ್ನನ್ನು ತಗ್ಗಿಸಿಕೊಳ್ಳುವುದಕ್ಕಿಂತ ಮೊದಲು ಮಾಡಿದ ಅಪರಾಧದ್ರೋಹಗಳೂ, ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ನಿರ್ಮಿಸಿ ಅಶೇರ ಸ್ತಂಭ ವಿಗ್ರಹ ಇವುಗಳನ್ನು ನಿಲ್ಲಿಸಿದ್ದೂ ದರ್ಶಕರ ಚರಿತ್ರೆಯಲ್ಲಿ ಬರೆದಿರುತ್ತವೆ.
त्‍यो वर्णनमा, तिनको प्रार्थना र परमेश्‍वर कसरी त्‍यसबाट चल्‍नुभयो भन्‍ने कुराको इतिहास छ । तिनले आफैलाई विनम्र तुल्याउनु अगि तिनले गरेका सबै पाप र अविश्‍वासका काम, तिनले बनाएका डाँडाका थानहरू र अशेराका खम्बा र मूर्तिहरू— पनि यी सबै दर्शीहरूका इतिहासको पुस्तकमा लेखिएका छन् ।
20 ೨೦ ಮನಸ್ಸೆಯು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅರಮನೆಯ ನಿವೇಶನದಲ್ಲಿ ಸಮಾಧಿ ಮಾಡಿದರು. ಅವನ ನಂತರ ಅವನ ಮಗನಾದ ಆಮೋನನು ಅರಸನಾದನು.
यसरी मनश्शे आफ्ना पुर्खाहरूसित सुते, र तिनीहरूले तिनलाई तिनको आफ्नै महलमा गाडे । तिनको ठाउँमा तिनका छोरा अमोन राजा भए ।
21 ೨೧ ಆಮೋನನು ಅರಸನಾದಾಗ ಅವನು ಇಪ್ಪತ್ತೆರಡು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಎರಡು ವರ್ಷಗಳ ಕಾಲ ಆಳಿದನು.
अमोनले राज्य गर्न सुरु गर्दा तिनी बाइस वर्षका थिए । तिनले यरूशलेममा दुई वर्ष राज्य गरे ।
22 ೨೨ ಆಮೋನನು ತನ್ನ ತಂದೆಯಾದ ಮನಸ್ಸೆಯ ಹಾಗೆಯೇ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು. ತನ್ನ ತಂದೆಯಾದ ಮನಸ್ಸೆಯು ಮಾಡಿಸಿದ್ದ ಎಲ್ಲಾ ವಿಗ್ರಹಗಳಿಗೆ ಯಜ್ಞವನ್ನರ್ಪಿಸಿ ಅವುಗಳನ್ನು ಪೂಜಿಸಿದನು.
तिनका पिता मनश्शेले गरेझैं तिनले परमप्रभुको दृष्‍टिमा जे खराब थियो, त्यही गरे । तिनले आफ्ना पिता मनश्शेले बनाएका सबै मूर्तिमा बलिदान चढाए र तिनको पुजा गरे ।
23 ೨೩ ಆದರೂ ಆಮೋನನ ತಂದೆಯಾದ ಮನಸ್ಸೆಯು ಯೆಹೋವನ ಮುಂದೆ ತನ್ನನ್ನು ತಗ್ಗಿಸಿಕೊಂಡಿದ್ದನಷ್ಠೆ. ಅಮೋನನಾದರೋ ತನ್ನನ್ನು ತಗ್ಗಿಸಿಕೊಳ್ಳದೆ ಮಹಾ ಅಪರಾಧಿಯಾದನು.
आफ्ना पिता मनश्शेले गरेझैं तिनले परमप्रभुको सामुन्‍ने आफैलाई विनम्र पारेनन् । यसरी तिनी झन् बढी अनाज्ञाकारी भए ।
24 ೨೪ ಅವನ ಸೇವಕರು ಅವನಿಗೆ ವಿರುದ್ಧವಾಗಿ ಒಳಸಂಚುಮಾಡಿ ಅವನನ್ನು ಅರಮನೆಯಲ್ಲಿಯೇ ಕೊಂದು ಹಾಕಿದರು.
तिनका सेवकहरूले तिनको विरुद्धमा षड्‌यन्‍त्र रचे, र तिनको आफ्नै महलमा तिनलाई मारे ।
25 ೨೫ ಆದರೆ ದೇಶದ ಜನರು ಅರಸನಾದ ಆಮೋನನಿಗೆ ವಿರುದ್ಧವಾಗಿ ಒಳಸಂಚು ಮಾಡಿದವರನ್ನೆಲ್ಲಾ ಕೊಂದುಹಾಕಿ ಆಮೋನನಿಗೆ ಬದಲಾಗಿ ಅವನ ಮಗನಾದ ಯೋಷೀಯನನ್ನು ಅರಸನನ್ನಾಗಿ ಮಾಡಿದರು.
तर देशका मानिसहरूले राजा अमोनको विरुद्धमा षड्‌यन्‍त्र गर्ने सबैलाई मारे, र तिनको छोरा योशियाहलाई तिनको ठाउँमा तिनीहरूले राजा बनाए ।

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 33 >