< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 34 >

1 ಯೋಷೀಯನು ಅರಸನಾದಾಗ ಅವನು ಎಂಟು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಮೂವತ್ತೊಂದು ವರ್ಷಗಳ ಕಾಲ ಆಳಿದನು.
जब योशिय्याह राज्य करने लगा, तब वह आठ वर्ष का था, और यरूशलेम में इकतीस वर्ष तक राज्य करता रहा।
2 ಅವನು ಯೆಹೋವನನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳದೆ ತನ್ನ ಪೂರ್ವಿಕನಾದ ದಾವೀದನ ಮಾರ್ಗದಲ್ಲೇ ಯೆಹೋವನ ಚಿತ್ತಾನುಸಾರವಾಗಿ ನಡೆದನು.
उसने वह किया जो यहोवा की दृष्टि में ठीक है, और जिन मार्गों पर उसका मूलपुरुष दाऊद चलता रहा, उन्हीं पर वह भी चला करता था और उससे न तो दाहिनी ओर मुड़ा, और न बाईं ओर।
3 ಅವನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಇನ್ನೂ ಯೌವನಸ್ಥನಾಗಿರುವಾಗಲೇ ತನ್ನ ಪೂರ್ವಿಕನಾದ ದಾವೀದನ ದೇವರನ್ನು ಹುಡುಕುವವನಾದನು. ಹನ್ನೆರಡನೆಯ ವರ್ಷ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿ ಇದ್ದ ಪೂಜಾಸ್ಥಳಗಳನ್ನೂ, ಅಶೇರ ಸ್ತಂಭಗಳನ್ನೂ, ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನೂ ತೆಗೆದುಹಾಕಿ ದೇಶವನ್ನು ಶುದ್ಧಿಗೊಳಿಸಿದನು.
वह लड़का ही था, अर्थात् उसको गद्दी पर बैठे आठ वर्ष पूरे भी न हुए थे कि अपने मूलपुरुष दाऊद के परमेश्वर की खोज करने लगा, और बारहवें वर्ष में वह ऊँचे स्थानों और अशेरा नामक मूरतों को और खुदी और ढली हुई मूरतों को दूर करके, यहूदा और यरूशलेम को शुद्ध करने लगा।
4 ಇದಲ್ಲದೆ ಅವನು ಬಾಳ್ ದೇವತೆಗಳ ಯಜ್ಞವೇದಿಗಳನ್ನು ತನ್ನೆದುರಿನಲ್ಲಿಯೇ ಕೆಡವಿಸಿ ಅವುಗಳ ಮೇಲಿದ್ದ ಸೂರ್ಯಸ್ತಂಭಗಳನ್ನು ಕಡಿಸಿ, ಕೆತ್ತಿಸಿದ ಅಶೇರ ಸ್ತಂಭ ಮತ್ತು ಎರಕದ ವಿಗ್ರಹಗಳನ್ನು ಒಡೆದುಹಾಕಿಸಿ ಪುಡಿಪುಡಿ ಮಾಡಿಸಿ ಅವುಗಳಿಗೆ ಯಜ್ಞವನ್ನರ್ಪಿಸಿದವರ ಸಮಾಧಿಗಳ ಮೇಲೆ ಆ ಧೂಳನ್ನು ಚೆಲ್ಲಿಸಿದನು.
बाल देवताओं की वेदियाँ उसके सामने तोड़ डाली गई, और सूर्य की प्रतिमाएँ जो उनके ऊपर ऊँचे पर थीं, उसने काट डाली, और अशेरा नामक, और खुदी और ढली हुई मूरतों को उसने तोड़कर पीस डाला, और उनकी बुकनी उन लोगों की कब्रों पर छितरा दी, जो उनको बलि चढ़ाते थे।
5 ಪೂಜಾರಿಗಳ ಎಲುಬುಗಳನ್ನು ಆ ಯಜ್ಞವೇದಿಗಳ ಮೇಲೆ ಸುಡಿಸಿ ಯೆಹೂದ ಮತ್ತು ಯೆರೂಸಲೇಮನ್ನು ಶುದ್ಧಪಡಿಸಿದನು.
उनके पुजारियों की हड्डियाँ उसने उन्हीं की वेदियों पर जलाईं। अतः उसने यहूदा और यरूशलेम को शुद्ध किया।
6 ಮನಸ್ಸೆ, ಎಫ್ರಾಯೀಮ್, ಸಿಮೆಯೋನ್, ನಫ್ತಾಲಿ ಪ್ರಾಂತ್ಯಗಳ ಸುತ್ತಣ ಊರುಗಳಲಿಯೂ ಬಯಲುಗಳಲ್ಲಿದ್ದ,
फिर मनश्शे, एप्रैम और शिमोन के वरन् नप्ताली तक के नगरों के खण्डहरों में, उसने वेदियों को तोड़ डाला,
7 ಯಜ್ಞವೇದಿಗಳನ್ನು ಕೆಡವಿಸಿ ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ ಒಡೆದು ಪುಡಿಪುಡಿ ಮಾಡಿಸಿ ಇಸ್ರಾಯೇಲ್ ದೇಶದಲ್ಲಿದ್ದ ಸೂರ್ಯಸ್ತಂಭಗಳನ್ನು ಕೆಡವಿಹಾಕಿಸಿ ಯೆರೂಸಲೇಮಿಗೆ ಹಿಂದಿರುಗಿದನು.
और अशेरा नामक और खुदी हुई मूरतों को पीसकर बुकनी कर डाला, और इस्राएल के सारे देश की सूर्य की सब प्रतिमाओं को काटकर यरूशलेम को लौट गया।
8 ಅವನು ತನ್ನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ದೇಶವನ್ನೂ, ದೇವಾಲಯವನ್ನೂ ಶುದ್ಧಿಪಡಿಸಿದ ಮೇಲೆ ತನ್ನ ದೇವರಾದ ಯೆಹೋವನ ಆಲಯವನ್ನು ಜೀರ್ಣೋದ್ಧಾರ ಮಾಡಿಸುವುದಕ್ಕಾಗಿ ಅಚಲ್ಯನ ಮಗನಾದ ಶಾಫಾನನನ್ನೂ ಪಟ್ಟಣದ ಅಧಿಕಾರಿಯಾದ ಮಾಸೇಯನನ್ನೂ ಪ್ರಧಾನಮಂತ್ರಿಯಾಗಿದ್ದ ಯೋವಾಹಾಜನ ಮಗನಾದ ಯೋವಾಹನನ್ನೂ ಕಳುಹಿಸಿದನು.
फिर अपने राज्य के अठारहवें वर्ष में जब वह देश और भवन दोनों को शुद्ध कर चुका, तब उसने असल्याह के पुत्र शापान और नगर के हाकिम मासेयाह और योआहाज के पुत्र इतिहास के लेखक योआह को अपने परमेश्वर यहोवा के भवन की मरम्मत कराने के लिये भेज दिया।
9 ಇವರು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗಿ ದೇವಾಲಯಕ್ಕಾಗಿ ಸಂಗ್ರಹವಾದ ಹಣವನ್ನು ಅಂದರೆ ದ್ವಾರಪಾಲಕರಾದ ಲೇವಿಯರು ಮನಸ್ಸೆ, ಎಫ್ರಾಯೀಮ್ ಮುಂತಾದ ಇಸ್ರಾಯೇಲ್ ಕುಲಗಳಲ್ಲಿ ಉಳಿದವರಿಂದಲೂ, ಎಲ್ಲಾ ಯೆಹೂದ ಬೆನ್ಯಾಮೀನ್ಯರಿಂದಲೂ, ಯೆರೂಸಲೇಮಿನವರಿಂದಲೂ ಕೂಡಿಸಿದ್ದ ಹಣವನ್ನು
अतः उन्होंने हिल्किय्याह महायाजक के पास जाकर जो रुपया परमेश्वर के भवन में लाया गया था, अर्थात् जो लेवीय दरबानों ने मनश्शेइयों, एप्रैमियों और सब बचे हुए इस्राएलियों से और सब यहूदियों और बिन्यामीनियों से और सब यरूशलेम के निवासियों के हाथ से लेकर इकट्ठा किया था, उसको सौंप दिया।
10 ೧೦ ಯೆಹೋವನ ದೇವಾಲಯದ ಕೆಲಸಮಾಡಿಸುವವರಿಗೆ ಕೊಡುವುದಕ್ಕಾಗಿ ಅವನಿಗೆ ಒಪ್ಪಿಸಿದರು. ದೇವಾಲಯದ ಕೆಲಸಮಾಡಿಸುತ್ತಿದ್ದವರು ಆ ಹಣವನ್ನು
१०अर्थात् उन्होंने उसे उन काम करनेवालों के हाथ सौंप दिया जो यहोवा के भवन के काम पर मुखिए थे, और यहोवा के भवन के उन काम करनेवालों ने उसे भवन में जो कुछ टूटा फूटा था, उसकी मरम्मत करने में लगाया।
11 ೧೧ ಕೆತ್ತಿದ ಕಲ್ಲು, ಜೋಡಿಸತಕ್ಕ ತೊಲೆ ಇವುಗಳನ್ನು ಕೊಂಡುಕೊಳ್ಳುವುದಕ್ಕಾಗಿಯೂ, ಯೆಹೂದ ರಾಜರ ಅಲಕ್ಷ್ಯದಿಂದ ಹಾಳಾಗಿದ್ದ ಕಟ್ಟಡಗಳಿಗೆ ಮಾಳಿಗೆ ಹಾಕುವುದಕ್ಕಾಗಿಯೂ, ದೇವಾಲಯವನ್ನೂ ಜೀರ್ಣೋದ್ಧಾರಮಾಡಿ ಭದ್ರಪಡಿಸುವುದಕ್ಕೆ ಬಡಗಿಗಳಿಗೂ ಶಿಲ್ಪಿಗಳಿಗೂ ಕೊಟ್ಟರು.
११अर्थात् उन्होंने उसे बढ़इयों और राजमिस्त्रियों को दिया कि वे गढ़े हुए पत्थर और जोड़ों के लिये लकड़ी मोल लें, और उन घरों को छाएँ जो यहूदा के राजाओं ने नाश कर दिए थे।
12 ೧೨ ಕೆಲಸಮಾಡುವವರು ನಂಬಿಗಸ್ತರಾಗಿದ್ದರು; ಮೆರಾರಿಯರಲ್ಲಿ ಯಹತ್, ಓಬದ್ಯ ಎಂಬ ಲೇವಿಯರೂ ಕೆಹಾತ್ಯರಲ್ಲಿ ಜೆಕರ್ಯ, ಮೆಷುಲ್ಲಾಮ್ ಎಂಬ ಲೇವಿಯರೂ ಅವರ ಮೇಲ್ವಿಚಾರಕರಾಗಿದ್ದರು.
१२वे मनुष्य सच्चाई से काम करते थे, और उनके अधिकारी मरारीय, यहत और ओबद्याह, लेवीय और कहाती, जकर्याह और मशुल्लाम, काम चलानेवाले और गाने-बजाने का भेद सब जाननेवाले लेवीय भी थे।
13 ೧೩ ಗಾಯನ ನಿಪುಣರಾದ ಲೇವಿಯರೆಲ್ಲರೂ ಹೊರೆಹೊರುವವರ ಮೇಲ್ವಿಚಾರಕರಾಗಿದ್ದು ಎಲ್ಲಾ ವಿಧವಾದ ಕೆಲಸಮಾಡುವವರನ್ನು ನಡೆಸುತ್ತಿದ್ದರು; ಲೇವಿಯರಲ್ಲಿ ಕೆಲವರು ಲೇಖಕರೂ, ಕೆಲವರು ಅಧಿಕಾರಿಗಳೂ, ದ್ವಾರಪಾಲಕರೂ ಲೇವಿಯರೇ ಆಗಿದ್ದರು.
१३फिर वे बोझियों के अधिकारी थे और भाँति-भाँति की सेवा और काम चलानेवाले थे, और कुछ लेवीय मुंशी सरदार और दरबान थे।
14 ೧೪ ಯೆಹೋವನ ಆಲಯದಲ್ಲಿ ಸಂಗ್ರಹವಾಗಿದ್ದ ಹಣವನ್ನು ಹೊರಗೆ ತೆಗೆಯುವಾಗ ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ಯೆಹೋವನ ಧರ್ಮೋಪದೇಶ ಗ್ರಂಥವು ಯಾಜಕನಾದ ಹಿಲ್ಕೀಯನಿಗೆ ಸಿಕ್ಕಿತು.
१४जब वे उस रुपये को जो यहोवा के भवन में पहुँचाया गया था, निकाल रहे थे, तब हिल्किय्याह याजक को मूसा के द्वारा दी हुई यहोवा की व्यवस्था की पुस्तक मिली।
15 ೧೫ ಹಿಲ್ಕೀಯನು ಲೇಖಕನಾದ ಶಾಫಾನನಿಗೆ, “ಯೆಹೋವನ ಆಲಯದಲ್ಲಿ ನನಗೆ ಧರ್ಮೋಪದೇಶ ಗ್ರಂಥವು ಸಿಕ್ಕಿರುತ್ತದೆ” ಎಂದು ಹೇಳಿ ಅದನ್ನು ಅವನ ಕೈಯಲ್ಲಿ ಕೊಟ್ಟನು.
१५तब हिल्किय्याह ने शापान मंत्री से कहा, “मुझे यहोवा के भवन में व्यवस्था की पुस्तक मिली है;” तब हिल्किय्याह ने शापान को वह पुस्तक दी।
16 ೧೬ ಶಾಫಾನನು ಆ ಗ್ರಂಥವನ್ನು ಅರಸನ ಬಳಿಗೆ ತೆಗೆದುಕೊಂಡು ಹೋಗಿ, “ನೀನು ಆಜ್ಞಾಪಿಸಿದ್ದೆಲ್ಲವನ್ನೂ ನಿನ್ನ ಸೇವಕರು ಮಾಡುತ್ತಿದ್ದಾರೆ.
१६तब शापान उस पुस्तक को राजा के पास ले गया, और यह सन्देश दिया, “जो-जो काम तेरे कर्मचारियों को सौंपा गया था उसे वे कर रहे हैं।
17 ೧೭ ಯೆಹೋವನ ದೇವಾಲಯದಲ್ಲಿ ಸಂಗ್ರಹವಾದ ಹಣವನ್ನು ತೆಗೆದು ಕೆಲಸ ಮಾಡಿಸುವವರಿಗೂ, ಮಾಡುವವರಿಗೂ ಒಪ್ಪಿಸಿದರು” ಎಂದು ತಿಳಿಸಿದನು.
१७जो रुपया यहोवा के भवन में मिला, उसको उन्होंने उण्डेलकर मुखियों और कारीगरों के हाथों में सौंप दिया है।”
18 ೧೮ ಇದಲ್ಲದೆ, ಲೇಖಕನಾದ ಶಾಫಾನನು ಅರಸನಿಗೆ, “ಯಾಜಕನಾದ ಹಿಲ್ಕೀಯನು ನನಗೊಂದು ಗ್ರಂಥವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಅವನ ಮುಂದೆ ಅದನ್ನು ಓದಿದನು.
१८फिर शापान मंत्री ने राजा को यह भी बता दिया कि हिल्किय्याह याजक ने मुझे एक पुस्तक दी है; तब शापान ने उसमें से राजा को पढ़कर सुनाया।
19 ೧೯ ಅರಸನು ಧರ್ಮಶಾಸ್ತ್ರದ ವಾಕ್ಯಗಳನ್ನು ಕೇಳಿದಾಗ ಬಟ್ಟೆಗಳನ್ನು ಹರಿದುಕೊಂಡನು.
१९व्यवस्था की वे बातें सुनकर राजा ने अपने वस्त्र फाड़े।
20 ೨೦ ಅರಸನು ಹಿಲ್ಕೀಯ, ಶಾಫಾನನ ಮಗನಾದ ಅಹೀಕಾಮ್, ಮೀಕನ ಮಗನಾದ ಅಬ್ದೋನ್, ಲೇಖಕನಾದ ಶಾಫಾನ್, ಅರಸನ ಸಹಕಾರಿಯಾದ ಅಸಾಯ ಎಂಬುವವರಿಗೆ ಅಜ್ಞಾಪಿಸಿದೇನೆಂದರೆ,
२०फिर राजा ने हिल्किय्याह, शापान के पुत्र अहीकाम, मीका के पुत्र अब्दोन, शापान मंत्री और असायाह नामक अपने कर्मचारी को आज्ञा दी,
21 ೨೧ “ನಮ್ಮ ಪೂರ್ವಿಕರು ಈ ಗ್ರಂಥದಲ್ಲಿ ಬರೆದಿರುವ ಯೆಹೋವನ ಆಜ್ಞೆಗಳನ್ನೆಲ್ಲಾ ಕೈಕೊಳ್ಳದೆ ಹೋದುದರಿಂದಲೇ ಯೆಹೋವನು ತನ್ನ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾನೆ; ಆದುದರಿಂದ ನೀವು ನನಗೋಸ್ಕರವೂ ಹಾಗೂ ಇಸ್ರಾಯೇಲ್ಯರಲ್ಲಿ, ಯೆಹೂದ್ಯರಲ್ಲಿ ಉಳಿದಿರುವವರಿಗೋಸ್ಕರವೂ ಯೆಹೋವನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ಅರ್ಥವನ್ನು ವಿವರವಾಗಿ ತಿಳಿದು ಬರಲು” ಆಜ್ಞಾಪಿಸಿದನು.
२१“तुम जाकर मेरी ओर से और इस्राएल और यहूदा में रहनेवालों की ओर से इस पाई हुई पुस्तक के वचनों के विषय यहोवा से पूछो; क्योंकि यहोवा की बड़ी ही जलजलाहट हम पर इसलिए भड़की है कि हमारे पुरखाओं ने यहोवा का वचन नहीं माना, और इस पुस्तक में लिखी हुई सब आज्ञाओं का पालन नहीं किया।”
22 ೨೨ ಆಗ ಹಿಲ್ಕೀಯನೂ ಅರಸನ ಜನರೂ ಹುಲ್ದ ಎಂಬ ಪ್ರವಾದಿನಿಯ ಬಳಿಗೆ ಹೋಗಿ, ಆಕೆಯ ಹತ್ತಿರ ವಿಚಾರಿಸಿದರು. ಹಸ್ರನ ಮೊಮ್ಮಗನೂ ತೊಕ್ಹತನ ಮಗನೂ ರಾಜವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಆಕೆಯ ಗಂಡನು. ಆಕೆಯು ಯೆರೂಸಲೇಮಿನ ಎರಡನೆಯ ಕೇರಿಯಲ್ಲಿ ವಾಸವಾಗಿದ್ದಳು.
२२तब हिल्किय्याह ने राजा के अन्य दूतों समेत हुल्दा नबिया के पास जाकर उससे उसी बात के अनुसार बातें की, वह तो उस शल्लूम की स्त्री थी जो तोखत का पुत्र और हस्रा का पोता और वस्त्रालय का रखवाला था: और वह स्त्री यरूशलेम के नये टोले में रहती थी।
23 ೨೩ ಹುಲ್ದಳು ಅವರಿಗೆ, ನಿಮ್ಮನ್ನು ಕಳುಹಿಸಿದವನಿಗೆ ಇಸ್ರಾಯೇಲ್ ದೇವರಾದ ಯೆಹೋವನ ಮಾತುಗಳನ್ನು ತಿಳಿಸಿರಿ,
२३उसने उनसे कहा, “इस्राएल का परमेश्वर यहोवा यह कहता है, कि जिस पुरुष ने तुम को मेरे पास भेजा, उससे यह कहो,
24 ೨೪ ಯೆಹೋವನು ಹೇಳಿದ್ದೇನೆಂದರೆ, “ಈ ದೇಶದ ಮೇಲೆಯೂ, ಜನರ ಮೇಲೆಯೂ ಯೆಹೂದದ ಅರಸನ ಮುಂದೆ ಪಾರಾಯಣವಾದ ಆ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನು ಬರಮಾಡುವೆನು;
२४‘यहोवा यह कहता है, कि सुन, मैं इस स्थान और इसके निवासियों पर विपत्ति डालकर यहूदा के राजा के सामने जो पुस्तक पढ़ी गई, उसमें जितने श्राप लिखे हैं उन सभी को पूरा करूँगा।
25 ೨೫ ಅವರು ನನ್ನನ್ನು ಬಿಟ್ಟು ಅನ್ಯ ದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದರಿಂದ ಈ ದೇಶದ ಮೇಲೆ ಉರಿಯುತ್ತಿರುವ ನನ್ನ ಕೋಪಾಗ್ನಿಯು ಆರಿಹೋಗುವುದಿಲ್ಲ” ಎನ್ನುತ್ತಾನೆ.
२५उन लोगों ने मुझे त्याग कर पराए देवताओं के लिये धूप जलाया है और अपनी बनाई हुई सब वस्तुओं के द्वारा मुझे क्रोध दिलाया है, इस कारण मेरी जलजलाहट इस स्थान पर भड़क उठी है, और शान्त न होगी।
26 ೨೬ ತಾನು ಕೇಳಿದ ವಾಕ್ಯಗಳ ವಿಷಯವಾಗಿ, ಇಸ್ರಾಯೇಲ್ ದೇವರಾದ ಯೆಹೋವನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ತಿಳಿಸಬೇಕಾದ ಮಾತೇನೆಂದರೆ,
२६परन्तु यहूदा का राजा जिसने तुम्हें यहोवा से पूछने को भेज दिया है उससे तुम यह कहो, कि इस्राएल का परमेश्वर यहोवा यह कहता है,
27 ೨೭ “ಇಸ್ರಾಯೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ; ಈ ದೇಶದ ಮತ್ತು ಅದರ ನಿವಾಸಿಗಳ ವಿಷಯ ನಾನು ಹೇಳಿದ ಮಾತುಗಳನ್ನು ಕೇಳಿದಾಗ ನೀನು ದುಃಖಪಟ್ಟು ದೇವರಾದ ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದಲೂ, ದೀನಮನಸ್ಸಿನಿಂದ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು.
२७कि इसलिए कि तू वे बातें सुनकर दीन हुआ, और परमेश्वर के सामने अपना सिर झुकाया, और उसकी बातें सुनकर जो उसने इस स्थान और इसके निवासियों के विरुद्ध कहीं, तूने मेरे सामने अपना सिर झुकाया, और वस्त्र फाड़कर मेरे सामने रोया है, इस कारण मैंने तेरी सुनी है; यहोवा की यही वाणी है।
28 ೨೮ ನಾನು ಈ ದೇಶದ ಮೇಲೆಯೂ, ಅದರ ನಿವಾಸಿಗಳ ಮೇಲೆಯೂ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮರಣಹೊಂದಿ ಸಮಾಧಿ ಸೇರುವಂತೆ ಅನುಗ್ರಹಿಸುವೆನು ಎಂಬುದಾಗಿ ತಿಳಿಸಿದೆ ಎಂದು ಅರಸನಿಗೆ ತಿಳಿಸಿರಿ” ಎಂದು ಹೇಳಿದಳು.
२८सुन, मैं तुझे तेरे पुरखाओं के संग ऐसा मिलाऊँगा कि तू शान्ति से अपनी कब्र को पहुँचाया जाएगा; और जो विपत्ति मैं इस स्थान पर, और इसके निवासियों पर डालना चाहता हूँ, उसमें से तुझे अपनी आँखों से कुछ भी देखना न पड़ेगा।’” तब उन लोगों ने लौटकर राजा को यही सन्देश दिया।
29 ೨೯ ಅನಂತರ ಅರಸನು ದೂತರ ಮುಖಾಂತರ ಯೆರೂಸಲೇಮಿನ ಮತ್ತು ಯೆಹೂದದ ಎಲ್ಲಾ ಹಿರಿಯರನ್ನು ಒಟ್ಟಾಗಿ ಸೇರಿಸಿದನು.
२९तब राजा ने यहूदा और यरूशलेम के सब पुरनियों को इकट्ठे होने को बुलवा भेजा।
30 ೩೦ ಅರಸನು ಯೆರೂಸಲೇಮಿನವರನ್ನೂ, ಬೇರೆ ಎಲ್ಲಾ ಯೆಹೂದ್ಯರನ್ನೂ, ಯಾಜಕರನ್ನೂ, ಲೇವಿಯರನ್ನೂ ಕರೆದುಕೊಂಡು ಯೆಹೋವನ ಆಲಯಕ್ಕೆ ಹೋದನು. ದೊಡ್ಡವರು ಮೊದಲುಗೊಂಡು ಚಿಕ್ಕವರವರೆಗೂ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಯೆಹೋವನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ಗ್ರಂಥವನ್ನು ಸಂಪೂರ್ಣವಾಗಿ ಓದಿಸಿದನು.
३०राजा यहूदा के सब लोगों और यरूशलेम के सब निवासियों और याजकों और लेवियों वरन् छोटे बड़े सारी प्रजा के लोगों को संग लेकर यहोवा के भवन को गया; तब उसने जो वाचा की पुस्तक यहोवा के भवन में मिली थी उसमें की सारी बातें उनको पढ़कर सुनाई।
31 ೩೧ ಅರಸನು ತನ್ನ ಸ್ಥಳದಲ್ಲಿ ನಿಂತು, ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞಾನಿಯಮ ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಕೈಕೊಳ್ಳುವುದಾಗಿಯೂ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಪ್ರಮಾಣಮಾಡಿದನು.
३१तब राजा ने अपने स्थान पर खड़े होकर, यहोवा से इस आशय की वाचा बाँधी कि मैं यहोवा के पीछे-पीछे चलूँगा, और अपने सम्पूर्ण मन और सम्पूर्ण जीव से उसकी आज्ञाओं, चेतावनियों और विधियों का पालन करूँगा, और इन वाचा की बातों को जो इस पुस्तक में लिखी हैं, पूरी करूँगा।
32 ೩೨ ಆಮೇಲೆ ಎಲ್ಲಾ ಯೆರೂಸಲೇಮಿನವರಿಂದಲೂ, ಬೆನ್ಯಾಮೀನ್ಯರಿಂದಲೂ ಪ್ರಮಾಣಮಾಡಿಸಿದನು. ಯೆರೂಸಲೇಮಿನವರು ಏಕದೇವರಾದ ತಮ್ಮ ಪೂರ್ವಿಕರ ದೇವರ ನಿಬಂಧನೆಯನ್ನು ಕೈಕೊಳ್ಳುವವರಾದರು.
३२फिर उसने उन सभी से जो यरूशलेम में और बिन्यामीन में थे वैसी ही वाचा बँधाई: और यरूशलेम के निवासी, परमेश्वर जो उनके पितरों का परमेश्वर था, उसकी वाचा के अनुसार करने लगे।
33 ೩೩ ಯೋಷೀಯನು ಇಸ್ರಾಯೇಲರಿಗೆ ಸೇರಿದ ಎಲ್ಲಾ ಪ್ರಾಂತ್ಯಗಳೊಳಗಿನ ಅಸಹ್ಯ ಮೂರ್ತಿಗಳನ್ನೆಲ್ಲಾ ತೆಗೆದುಹಾಕಿಸಿ, ಇಸ್ರಾಯೇಲರಲ್ಲಿ ಉಳಿದಿರುವವರು ತಮ್ಮ ದೇವರಾದ ಯೆಹೋವನನ್ನೇ ಆರಾಧಿಸುವಂತೆ ಮಾಡಿದನು. ಅವನ ಜೀವಮಾನದಲ್ಲೆಲ್ಲಾ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಬಿಡದೆ ಹಿಂಬಾಲಿಸಿದರು.
३३योशिय्याह ने इस्राएलियों के सब देशों में से सब अशुद्ध वस्तुओं को दूर करके जितने इस्राएल में मिले, उन सभी से उपासना कराई; अर्थात् उनके परमेश्वर यहोवा की उपासना कराई; उसके जीवन भर उन्होंने अपने पूर्वजों के परमेश्वर यहोवा के पीछे चलना न छोड़ा।

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 34 >