< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 36 >

1 ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನು ಅವನ ತಂದೆಯ ಬದಲಾಗಿ ಯೆರೂಸಲೇಮಿನಲ್ಲಿ ಅವನನ್ನು ಅರಸನನ್ನಾಗಿ ಮಾಡಿದರು.
यहूदाच्या लोकांनी यरूशलेमेचा नवा राजा म्हणून यहोआहाजाची निवड केली; योआहाज हा योशीयाचा पुत्र.
2 ಯೆಹೋವಾಹಾಜನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತಮೂರು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು.
तो यहूदाचा राजा झाला तेव्हा तेवीस वर्षांचा होता. त्याने यरूशलेमेमध्ये तीन महिने राज्य केले.
3 ಐಗುಪ್ತದ ಅರಸನು ಯೆರೂಸಲೇಮಿಗೆ ಬಂದು ಅವನನ್ನು ಪಟ್ಟದಿಂದ ತೆಗೆದುಹಾಕಿ, ಯೆಹೂದ್ಯರು ತನಗೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರುವಂತೆ ಮಾಡಿದನು.
त्यानंतर मिसरच्या राजाने यरूशलेमेच्या राजाला पदच्युत केले व देशावर शंभर किक्कार चांदी आणि एक किक्कार सोने एवढी खंडणी लादली.
4 ಐಗುಪ್ತದ ಅರಸನಾದ ನೆಕೋವನು ಯೆಹೋವಾಹಾಜನ ಸಹೋದರನಾದ ಎಲ್ಯಾಕೀಮನನ್ನು ಯೆಹೂದದ ಮತ್ತು ಯೆರೂಸಲೇಮಿನ ಅರಸನನ್ನಾಗಿ ನೇಮಿಸಿ ಅವನಿಗೆ ಯೆಹೋಯಾಕೀಮನೆಂಬ ಹೆಸರಿಟ್ಟನು ಮತ್ತು ಅವನ ಸಹೋದರನಾದ ಯೆಹೋವಾಹಾಜನನ್ನು ಐಗುಪ್ತ ದೇಶಕ್ಕೆ ತೆಗೆದುಕೊಂಡು ಹೋದನು.
मिसरच्या राजाने आहाजाचा भाऊ एल्याकीम याला यहूदा आणि यरूशलेमेचा राजा केले. यानंतर त्याचे नामांतर करून यहोयाकीम असे ठेवले आणि यहोआहाजाला नखोने मिसरला नेले.
5 ಯೆಹೋಯಾಕೀಮನು ಅರಸನಾದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ಅವನು ತನ್ನ ದೇವರಾದ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
यहोयाकीम पंचविसाव्या वर्षी यहूदाचा राजा झाला. त्याने यरूशलेमामध्ये अकरा वर्षे राज्य केले. यहोयाकीमाने परमेश्वर देवाच्या दृष्टीने वाईट गोष्टी केल्या. त्याने परमेश्वर देवाविरुध्द पाप केले.
6 ಬಾಬೆಲಿನ, ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಯುದ್ಧಕ್ಕೆ ಬಂದು ಅವನನ್ನು ಬಾಬಿಲೋನಿಗೆ ಒಯ್ಯುವುದಕ್ಕೋಸ್ಕರ ಅವನಿಗೆ ಬೇಡಿಹಾಕಿ,
बाबेलचा राजा नबुखद्नेस्सर याने यहूदावर हल्ला केला. त्याने त्यास कैद केले आणि त्यास बेड्या ठोकल्या. तशा अवस्थेत त्यास नबुखद्नेस्सरने बाबेलला नेले.
7 ಯೆಹೋವನ ಆಲಯದ ಹಲವು ಸಾಮಾನುಗಳನ್ನು ತೆಗೆದುಕೊಂಡು ಹೋಗಿ ತನ್ನ ದೇವಾಲಯದಲ್ಲಿಟ್ಟನು.
नबुखद्नेनेस्सरने परमेश्वराच्या मंदिरातील काही वस्तू हस्तगत करून त्या बाबेलला नेल्या आणि स्वत: च्या घरात ठेवल्या.
8 ಯೆಹೋಯಾಕೀಮನ ಉಳಿದ ಚರಿತ್ರೆಯೂ, ಅವನು ನಡಿಸಿದ ಅಸಹ್ಯ ಕೃತ್ಯಗಳೂ, ಅವನಲ್ಲಿ ಕಂಡುಬಂದದ್ದೆಲ್ಲವೂ ಇಸ್ರಾಯೇಲರ ಮತ್ತು ಯೆಹೂದ್ಯರ ರಾಜ ಗ್ರಂಥದಲ್ಲಿ ಬರೆದಿರುತ್ತವೆ. ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಕೀನನು ಅರಸನಾದನು.
यहोयाकीमाच्या इतर गोष्टी, त्याची दुष्कृत्ये आणि त्याचे अपराध हे सर्व इस्राएल व यहूदी राजांचा इतिहास या पुस्तकात लिहिलेले आहेत. यहोयाकीमाच्या जागी त्याचा पुत्र यहोयाखीन राज्य करु लागला.
9 ಯೆಹೋಯಾಕೀನನು ಅರಸನಾದಾಗ ಅವನು ಎಂಟು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿನಗಳ ಕಾಲ ಆಳಿದನು. ಅವನು ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
यहोखदीन यहूदाचा राजा झाला तेव्हा अठरा वर्षांचा होता. यरूशलेमामध्ये त्याची कारकिर्द तीन महिने आणि दहा दिवस होती. परमेश्वरास अमान्य असलेले वर्तन करून त्याने पाप केले.
10 ೧೦ ನೆಬೂಕದ್ನೆಚ್ಚರನು ವರ್ಷ ಆರಂಭದಲ್ಲಿ ಅವನನ್ನೂ, ಯೆಹೋವನ ದೇವಾಲಯದ ಬೆಲೆಯುಳ್ಳ ಸಾಮಾನುಗಳನ್ನು ಬಾಬಿಲೋನಿಗೆ ತರಿಸಿಕೊಂಡು, ಅವನ ಚಿಕ್ಕಪ್ಪನಾದ ಚಿದ್ಕೀಯನನ್ನು ಯೆಹೂದ ಮತ್ತು ಯೆರೂಸಲೇಮಿನ ಅರಸನನ್ನಾಗಿ ಮಾಡಿದನು.
१०राजा नबुखद्नेस्सरने वर्षारंभी काही सेवक पाठवून यहोयाखीनाला परमेश्वराच्या मंदिरातील बहुमोल खजिन्यासह बाबेलला आणवले. यहोयाखीनाच्या वडिलांचा भाऊ सिद्कीया याला नबखद्नेस्सरने यहूदा व यरूशलेमचा राजा केले.
11 ೧೧ ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು.
११सिद्कीया यहूदाचा राजा झाला तेव्हा एकवीस वर्षांचा होता. त्याने यरूशलेमेमध्ये अकरा वर्षे राज्य केले.
12 ೧೨ ಅವನು ತನ್ನ ದೇವರಾದ ಯೆಹೋವನಿಗೆ ವಿರೋಧವಾಗಿ ನಡೆದದ್ದಲ್ಲದೆ ಅವನ ಮಾತುಗಳನ್ನು ತನಗೆ ತಿಳಿಸುತ್ತಿದ್ದ ಪ್ರವಾದಿಯಾದ ಯೆರೆಮೀಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ.
१२परमेश्वराच्या दृष्टीने निंद्य असे त्याने केले. परमेश्वराचे आदेश संदेष्टा यिर्मया याच्याकडून येत असत. त्याच्यापुढेही सिदकीया विनम्र झाला नाही आणि यिर्मयाचे त्याने ऐकले नाही.
13 ೧೩ ಇದಲ್ಲದೆ, ಅರಸನಾದ ನೆಬೂಕದ್ನೆಚ್ಚರನಿಗೆ ಅಧೀನನಾಗಿರುತ್ತೇನೆ ಎಂದು ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿಸಿದ್ದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದದ್ದಲ್ಲದೆ ಇಸ್ರಾಯೇಲ್ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳದೆ ಹಠಮಾರಿಯಾಗಿ ತನ್ನ ಮನಸ್ಸನ್ನು ಕಠಿಣ ಮಾಡಿಕೊಂಡನು.
१३सिद्कीयाने नबुखद्नेस्सर विरुध्द उठाव केला. नबुखद्नेस्सरने पूर्वी सिद्कीया कडून स्वत: शी एकनिष्ठतेची शपथ वाहवली होती. सिद्कीयाने तेव्हा देवाची शपथ घेऊन तसे वचन दिले होते. पण तरीही सिद्कीयाने आडमुठेपणा केला आणि आपला आयुष्यक्रम बदलून इस्राएलच्या परमेश्वर देवाचे आज्ञापालन करायचे नाकारले.
14 ೧೪ ಪ್ರಧಾನಯಾಜಕರೂ, ಪ್ರಜೆಗಳೂ ಕೂಡ ಮಹಾ ದ್ರೋಹಿಗಳಾಗಿ, ಅನ್ಯಜನಾಂಗಗಳ ಅಸಹ್ಯ ಕೃತ್ಯಗಳನ್ನು ಅನುಸರಿಸಿ, ಯೆಹೋವನು ತನಗೆ ಪ್ರತಿಷ್ಠಿಸಿಕೊಂಡಿದ್ದ ಯೆರೂಸಲೇಮಿನ ದೇವಾಲಯವನ್ನು ಹೊಲೆಮಾಡಿದರು.
१४त्याचप्रमाणे याजकांचे प्रमुख, आणि यहूदातील वडिलधारी मंडळी यांचे दुराचरण वाढत चालले आणि त्यांनी अधिकाधिक पातके केली. ते परमेश्वराच्या बाबतीत अप्रमाणिक झाले. इतर देशांची अमंगळ कृत्यांची उदाहरणे त्यांनी समोर ठेवली. या प्रमुखांनी यरूशलेमामधल्या परमेश्वराने पवित्र केलेल्या मंदिराची धूळधान केली.
15 ೧೫ ಅವರ ಪೂರ್ವಿಕರ ದೇವರಾದ ಯೆಹೋವನು ತನ್ನ ಪ್ರಜೆಗಳನ್ನು, ತನ್ನ ನಿವಾಸಸ್ಥಾನವನ್ನೂ ಕನಿಕರಿಸಿ, ಸಾವಕಾಶ ಮಾಡದೆ ತನ್ನ ದೂತರ ಮುಖಾಂತರವಾಗಿ ಅವರನ್ನು ಎಚ್ಚರಿಸುತ್ತಾ ಬಂದರು.
१५त्यांच्या पूर्वजांच्या परमेश्वर देवाने लोकांस सावध करण्यासाठी मोठ्या निकडीने संदेष्टे पाठवले. आपल्या प्रजेविषयी आणि मंदिराविषयी त्याच्या मनात करुणा होती म्हणून परमेश्वर असे वागला. त्यांचा अथवा मंदिराचा नाश होऊ नये असे परमेश्वरास वाटत होते.
16 ೧೬ ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ.
१६पण या परमेश्वराच्या प्रजेने मात्र संदेष्ट्यांची टर उडवली. त्यांनी देवाच्या संदेष्ट्यांच्या सांगण्याकडे दुर्लक्ष केले. देवाच्या संदेशांची हेटाळणी केली. अखेर देवाचा क्रोध अनावर झाला. आता त्याचा संताप थोपवता येणे अशक्य झाले.
17 ೧೭ ಆತನು ಕಸ್ದೀಯರ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೆ ಒಪ್ಪಿಸಿದನು. ಅವನು ಅವರ ಯುವಭಟರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿ ಯುವಕರನ್ನೂ, ಕನ್ಯೆಯರನ್ನೂ, ಮುದುಕರನ್ನೂ, ಅತಿವೃದ್ಧರನ್ನೂ ಕನಿಕರಿಸದೆ ಎಲ್ಲರನ್ನೂ ಕೊಲ್ಲಿಸಿದನು.
१७तेव्हा खास्दी राजाला देवाने यहूदा व यरूशलेमेवर स्वारी करायला लावले. त्याने मंदिरात असलेल्या तरुणांनाही ठार केले. यहूदा व यरूशलेममधील लोकांवर त्याने दयामाया दाखवली नाही. लोकांस जिवे मारताना तरुण, कुमारी, वृध्द स्त्री-पुरुष, यावर त्याने तलवार चालवावी. देवानेच नबुखद्नेस्सराला यहूदा व यरूशलेमेच्या लोकांस शासन करायची मुभा दिली होती.
18 ೧೮ ದೇವಾಲಯದ ಎಲ್ಲಾ ಚಿಕ್ಕ, ದೊಡ್ಡ ಸಾಮಾನುಗಳನ್ನೂ ಯೆಹೋವನ ಮಂದಿರದ ಭಂಡಾರದ ಹಾಗೂ ಅರಸನ ಮತ್ತು ಅವನ ಸರದಾರರ ಭಂಡಾರದ ದ್ರವ್ಯವನ್ನೂ ಬಾಬಿಲೋನಿಗೆ ಒಯ್ದನು.
१८देवाच्या मंदिरातील लहानमोठी सर्व पात्रे व निधी, आणि राजा व त्याचे सरदार ह्यांचे निधी ही सर्व तो बाबेलास घेऊन गेला.
19 ೧೯ ಅವನ ಜನರು ಯೆರೂಸಲೇಮಿನ ಪೌಳಿಗೋಡೆಗಳನ್ನು ಕೆಡವಿದರು. ಅದರ ಎಲ್ಲಾ ರಾಜಮಂದಿರಗಳನ್ನೂ, ದೇವಾಲಯವನ್ನೂ ಸುಟ್ಟು ನೆಲಸಮ ಮಾಡಿ; ಅಮೂಲ್ಯವಾದ ವಸ್ತುಗಳನ್ನು ನಾಶಮಾಡಿದರು.
१९त्यांनी देवाच्या घराला आग लावली, यरूशलेमची तटबंदी उद्ध्वस्त केली, राजा आणि सरदार यांच्या मालकीची घरे जाळली. यरूशलेम येथील प्रत्येक मौल्यवान वस्तू लुटून नेली किंवा नष्ट केली.
20 ೨೦ ಕತ್ತಿಗೆ ತಪ್ಪಿಸಿಕೊಂಡವರನ್ನು ಅರಸನು ಬಾಬಿಲೋನಿಗೆ ಸೆರೆಯೊಯ್ದನು. ಪಾರಸಿಯರ ಪ್ರಭುತ್ವವು ಅಲ್ಲಿ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.
२०अजूनही हयात असलेल्या व तलवारीपासून वाचलेल्या लोकांस नबुखद्नेस्सरने बाबेलला नेऊन गुलाम केले. पुढे पारसाचे राज्य येऊन त्यांनी बाबेलचा पराभव करेपर्यंत हे गुलाम तेथेच राहिले.
21 ೨೧ ಈ ಪ್ರಕಾರ ಯೆರೆಮೀಯನ ಮುಖಾಂತರ ಹೇಳಿಸಿದ ಯೆಹೋವನ ಮಾತು ನೆರವೇರಿತು; ದೇಶವು ತನ್ನ ಸಬ್ಬತ್ ಕಾಲವನ್ನು ಅನುಭವಿಸುವವರೆಗೂ ಸಮಾಧಾನವಾಗಿತ್ತಷ್ಟೇ. ದೇಶವು ಎಪ್ಪತ್ತು ವರ್ಷಗಳು ಪೂರ್ಣವಾಗುವವರೆಗೂ ಅದು ಶೂನ್ಯವಾಗಿದ್ದ ಸಬ್ಬತ್ತನ್ನು ಅನುಭವಿಸಿತು.
२१अशाप्रकारे, यिर्मयाकडून इस्राएलाबद्दल परमेश्वराने जे वदवले ते प्रत्यक्षात घडले. परमेश्वर यिर्मयाद्वारे म्हणाला होता: हे ठिकाण सत्तर वर्षे निर्मनुष्य आणि उजाड राहील. लोकांनी न पाळलेल्या शब्बाथाच्या भरपाईसाठी असे होईल.
22 ೨೨ ಪಾರಸಿಯ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಆ ಪಾರಸಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ,
२२कोरेश पारसाचा राजा असताना पहिल्याच वर्षी परमेश्वराने त्यास एक फर्मान काढायला प्रेरणा दिली. यिर्मयाच्या तोंडून वदवलेली भविष्यवाणी प्रत्यक्षात येण्यासाठी परमेश्वराने त्यालाही स्फूर्ती दिली. कोरेशने आपल्या दूताकरवी राज्यभर असा संदेश पाठवला की,
23 ೨೩ ಪಾರಸಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ, “ಪರಲೋಕದ ದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನು ಒಪ್ಪಿಸಿ, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಆಲಯವನ್ನು ಕಟ್ಟಬೇಕೆಂದು ಆಜ್ಞಾಪಿಸಿದ್ದಾನೆ. ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ ಅವರು ಸ್ವದೇಶಕ್ಕೆ ಪ್ರಯಾಣ ಬೆಳೆಸಲಿ; ಅವರ ದೇವರಾದ ಯೆಹೋವನು ಅವರ ಸಂಗಡ ಇರುವನು” ಎಂದು ಪ್ರಕಟಿಸಿದನು.
२३“पारसचा राजा कोरेश म्हणतो; स्वर्गातील परमेश्वर देव याने मला या पृथ्वीचा सम्राट केले आहे. त्याच्यासाठी यहूदातील यरूशलेमेमध्ये मंदिर बांधण्याची जबाबदारीही माझ्यावर सोपवली आहे. आता तुमच्यापैकी देवाला मानणारे सर्वजण निर्धास्तपणे यरूशलेमेला जाऊ शकता, परमेश्वर देव तुमच्याबरोबर असो.”

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 36 >