< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 36 >

1 ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನು ಅವನ ತಂದೆಯ ಬದಲಾಗಿ ಯೆರೂಸಲೇಮಿನಲ್ಲಿ ಅವನನ್ನು ಅರಸನನ್ನಾಗಿ ಮಾಡಿದರು.
त्यसपछि देशका मानिसहरूले योशियाहका छोरा यहोआहाजलाई लिए र यरूशलेममा तिनका बुबाको ठाउँमा तिनलाई राजा बनाए ।
2 ಯೆಹೋವಾಹಾಜನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತಮೂರು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು.
यहोआहाजले राज्य सुरु गर्दा तिनी तेइस वर्षका थिए, र तिनले यरूशलेममा तीन महिना राज्य गरे ।
3 ಐಗುಪ್ತದ ಅರಸನು ಯೆರೂಸಲೇಮಿಗೆ ಬಂದು ಅವನನ್ನು ಪಟ್ಟದಿಂದ ತೆಗೆದುಹಾಕಿ, ಯೆಹೂದ್ಯರು ತನಗೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರುವಂತೆ ಮಾಡಿದನು.
मिश्रदेशका राजाले यरूशलेममा तिनलाई हटाए, र देशमाथि एक सय तोडा चाँदी र एक तोडा सुनको जरिवाना लगाए ।
4 ಐಗುಪ್ತದ ಅರಸನಾದ ನೆಕೋವನು ಯೆಹೋವಾಹಾಜನ ಸಹೋದರನಾದ ಎಲ್ಯಾಕೀಮನನ್ನು ಯೆಹೂದದ ಮತ್ತು ಯೆರೂಸಲೇಮಿನ ಅರಸನನ್ನಾಗಿ ನೇಮಿಸಿ ಅವನಿಗೆ ಯೆಹೋಯಾಕೀಮನೆಂಬ ಹೆಸರಿಟ್ಟನು ಮತ್ತು ಅವನ ಸಹೋದರನಾದ ಯೆಹೋವಾಹಾಜನನ್ನು ಐಗುಪ್ತ ದೇಶಕ್ಕೆ ತೆಗೆದುಕೊಂಡು ಹೋದನು.
मिश्रदेशका राजाले यहोआहाजका भाइ एल्याकीमलाई यहूदा र यरूशलेममाथि राजा तुल्याए (र तिनको नाउँ यहोयाकीममा बदली गरे) । तब नेकोले तिनका दाजु यहोआहाजलाई मिश्रदेशमा लगे ।
5 ಯೆಹೋಯಾಕೀಮನು ಅರಸನಾದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ಅವನು ತನ್ನ ದೇವರಾದ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
यहोयाकीमले राज्य गर्न सुरु गर्दा तिनी पच्‍चिस वर्षका थिए, र तिनले यरूशलेममा एघार वर्ष राज्य गरे । तिनले परमप्रभु आफ्ना परमेश्‍वरको दृष्‍टिमा जे खराब थियो, त्यही गरे ।
6 ಬಾಬೆಲಿನ, ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಯುದ್ಧಕ್ಕೆ ಬಂದು ಅವನನ್ನು ಬಾಬಿಲೋನಿಗೆ ಒಯ್ಯುವುದಕ್ಕೋಸ್ಕರ ಅವನಿಗೆ ಬೇಡಿಹಾಕಿ,
त्यसपछि बेबिलोनका राजा नबूकदनेसरले तिनलाई आक्रमण गरे र तिनलाई बेबिलोनमा लानलाई तिनलाई साङ्लाले बाँधे ।
7 ಯೆಹೋವನ ಆಲಯದ ಹಲವು ಸಾಮಾನುಗಳನ್ನು ತೆಗೆದುಕೊಂಡು ಹೋಗಿ ತನ್ನ ದೇವಾಲಯದಲ್ಲಿಟ್ಟನು.
नबूकदनेसरले परमप्रभुको मन्दिरका केही सामानहरू पनि बेबिलोनमा लगे र तिनले ती बेबिलोनको आफ्नै दरबारमा राखे ।
8 ಯೆಹೋಯಾಕೀಮನ ಉಳಿದ ಚರಿತ್ರೆಯೂ, ಅವನು ನಡಿಸಿದ ಅಸಹ್ಯ ಕೃತ್ಯಗಳೂ, ಅವನಲ್ಲಿ ಕಂಡುಬಂದದ್ದೆಲ್ಲವೂ ಇಸ್ರಾಯೇಲರ ಮತ್ತು ಯೆಹೂದ್ಯರ ರಾಜ ಗ್ರಂಥದಲ್ಲಿ ಬರೆದಿರುತ್ತವೆ. ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಕೀನನು ಅರಸನಾದನು.
यहोयाकीमको राजकालका अरू घटनाहरू, र तिनले गरेका घिनलाग्दा कामहरू, र तिनको विरुद्ध पाइएका कुराहरू यहूदा र इस्राएलका राजाहरूका इतिहासको पुस्तकमा लेखिएका छन् । त्यसपछि तिनको ठाउँमा तिनका छोरा यहोयाकीन राजा भए ।
9 ಯೆಹೋಯಾಕೀನನು ಅರಸನಾದಾಗ ಅವನು ಎಂಟು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿನಗಳ ಕಾಲ ಆಳಿದನು. ಅವನು ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
यहोयाकीन ले राज्य गर्न सुरु गर्दा तिनी आठ वर्षका थिए । तिनले यरूशलेममा तीन महिना दश दिन राज्य गरे । तिनले परमप्रभुको दृष्‍टिमा जे कुरो खराब थियो, त्यही गरे ।
10 ೧೦ ನೆಬೂಕದ್ನೆಚ್ಚರನು ವರ್ಷ ಆರಂಭದಲ್ಲಿ ಅವನನ್ನೂ, ಯೆಹೋವನ ದೇವಾಲಯದ ಬೆಲೆಯುಳ್ಳ ಸಾಮಾನುಗಳನ್ನು ಬಾಬಿಲೋನಿಗೆ ತರಿಸಿಕೊಂಡು, ಅವನ ಚಿಕ್ಕಪ್ಪನಾದ ಚಿದ್ಕೀಯನನ್ನು ಯೆಹೂದ ಮತ್ತು ಯೆರೂಸಲೇಮಿನ ಅರಸನನ್ನಾಗಿ ಮಾಡಿದನು.
बसन्त ऋतुमा राजा नबूकदनेसरले मानिसहरू पठाएर परमप्रभुको मन्दिरका मूल्यवान सामानहरूको साथमा तिनलाई बेबिलोनमा ल्याए, र तिनका आफन्त सिदकियाहलाई यहूदा र यरूशलेममाथि राजा तुल्याए ।
11 ೧೧ ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು.
सिदकियाहले राज्य गर्न सुरु गर्दा तिनी एक्‍काइस वर्षका थिए । तिनले यरूशलेममा एघार वर्ष राज्य गरे ।
12 ೧೨ ಅವನು ತನ್ನ ದೇವರಾದ ಯೆಹೋವನಿಗೆ ವಿರೋಧವಾಗಿ ನಡೆದದ್ದಲ್ಲದೆ ಅವನ ಮಾತುಗಳನ್ನು ತನಗೆ ತಿಳಿಸುತ್ತಿದ್ದ ಪ್ರವಾದಿಯಾದ ಯೆರೆಮೀಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ.
तिनले परमप्रभु तिनका परमेश्‍वरको दृष्‍टिमा जे खराब थियो त्यही गरे । परमप्रभुको वचन बोल्ने यर्मिया अगमवक्ताको सामु तिनले आफैलाई विनम्र पारेनन् ।
13 ೧೩ ಇದಲ್ಲದೆ, ಅರಸನಾದ ನೆಬೂಕದ್ನೆಚ್ಚರನಿಗೆ ಅಧೀನನಾಗಿರುತ್ತೇನೆ ಎಂದು ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿಸಿದ್ದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದದ್ದಲ್ಲದೆ ಇಸ್ರಾಯೇಲ್ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳದೆ ಹಠಮಾರಿಯಾಗಿ ತನ್ನ ಮನಸ್ಸನ್ನು ಕಠಿಣ ಮಾಡಿಕೊಂಡನು.
परमेश्‍वरको नाउँमा तिनलाई शपथ खुवाउने राजा नबूकदनेसरसँग पनि तिनले बिद्रोह गरे । तर सिदकियाहले परमप्रभु इस्राएलका परमेश्‍वरतिर फर्किआउने कुराको विरुद्ध तिनी हठी भए र आफ्नो हृदय कठोर पारे ।
14 ೧೪ ಪ್ರಧಾನಯಾಜಕರೂ, ಪ್ರಜೆಗಳೂ ಕೂಡ ಮಹಾ ದ್ರೋಹಿಗಳಾಗಿ, ಅನ್ಯಜನಾಂಗಗಳ ಅಸಹ್ಯ ಕೃತ್ಯಗಳನ್ನು ಅನುಸರಿಸಿ, ಯೆಹೋವನು ತನಗೆ ಪ್ರತಿಷ್ಠಿಸಿಕೊಂಡಿದ್ದ ಯೆರೂಸಲೇಮಿನ ದೇವಾಲಯವನ್ನು ಹೊಲೆಮಾಡಿದರು.
यसबाहेक अरू जातिहरूका सबै घिनलाग्दा कामका अनुसरण गरेर परमप्रभुले यरूशलेममा पवित्र गर्नुभएको उहाँको मन्दिरलाई अपवित्र पारेर पुजारीहरू र मानिसहरूका सबै अगुवाहरू अत्यन्तै विश्‍वासघाती भए । तिनीहरूले परमप्रभुले यरूशलेममा पवित्र गर्नुभएको मन्दिरलाई अपवित्र पारे ।
15 ೧೫ ಅವರ ಪೂರ್ವಿಕರ ದೇವರಾದ ಯೆಹೋವನು ತನ್ನ ಪ್ರಜೆಗಳನ್ನು, ತನ್ನ ನಿವಾಸಸ್ಥಾನವನ್ನೂ ಕನಿಕರಿಸಿ, ಸಾವಕಾಶ ಮಾಡದೆ ತನ್ನ ದೂತರ ಮುಖಾಂತರವಾಗಿ ಅವರನ್ನು ಎಚ್ಚರಿಸುತ್ತಾ ಬಂದರು.
परमप्रभु तिनीहरूका पुर्खाहरूका परमेश्‍वरले तिनीहरूलाई आफ्ना दूतहरूद्वारा घरिघरि वचन दिनुभयो, किनभने आफ्ना मानिस र आफ्नो वासस्थानमाथि उहाँले दया गर्नुभयो ।
16 ೧೬ ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ.
तर परमप्रभुको क्रोध उहाँका मानिसहरूमाथि नपरुञ्जेल र सहायता आउने बाटो बन्द हुनेगरी तिनीहरूले उहाँका दूतहरूको गिल्ला गरे, उहाँको वचनहरूको निन्दा गरे र उहाँका अगमवक्ताहरूलाई हाँसोमा उडाए ।
17 ೧೭ ಆತನು ಕಸ್ದೀಯರ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೆ ಒಪ್ಪಿಸಿದನು. ಅವನು ಅವರ ಯುವಭಟರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿ ಯುವಕರನ್ನೂ, ಕನ್ಯೆಯರನ್ನೂ, ಮುದುಕರನ್ನೂ, ಅತಿವೃದ್ಧರನ್ನೂ ಕನಿಕರಿಸದೆ ಎಲ್ಲರನ್ನೂ ಕೊಲ್ಲಿಸಿದನು.
यसैले परमेश्‍वरले तिनीहरूका विरुद्धमा कल्दीका राजालाई ल्याउनुभयो, जसले पवित्रस्थानभित्रै तिनीहरूका जवान मानिसहरूलाई तरवारले मारे, र जवान मानिसहरू, कन्‍याहरू, वृद्धहरू वा कपाल सेतै फुलेकाहरू कसैलाई पनि तिनले छोडेनन् । परमेश्‍वरले ती सबैलाई तिनको हातमा सुम्पिदिनुभयो ।
18 ೧೮ ದೇವಾಲಯದ ಎಲ್ಲಾ ಚಿಕ್ಕ, ದೊಡ್ಡ ಸಾಮಾನುಗಳನ್ನೂ ಯೆಹೋವನ ಮಂದಿರದ ಭಂಡಾರದ ಹಾಗೂ ಅರಸನ ಮತ್ತು ಅವನ ಸರದಾರರ ಭಂಡಾರದ ದ್ರವ್ಯವನ್ನೂ ಬಾಬಿಲೋನಿಗೆ ಒಯ್ದನು.
परमेश्‍वरको मन्दिरका सानाठूला सबै भाँडा र परमप्रभुको मन्दिर र राजा र तिनका अधिकारीहरूका दामीदामी थोकहरू सबै तिनले बेबिलोनमा लगे ।
19 ೧೯ ಅವನ ಜನರು ಯೆರೂಸಲೇಮಿನ ಪೌಳಿಗೋಡೆಗಳನ್ನು ಕೆಡವಿದರು. ಅದರ ಎಲ್ಲಾ ರಾಜಮಂದಿರಗಳನ್ನೂ, ದೇವಾಲಯವನ್ನೂ ಸುಟ್ಟು ನೆಲಸಮ ಮಾಡಿ; ಅಮೂಲ್ಯವಾದ ವಸ್ತುಗಳನ್ನು ನಾಶಮಾಡಿದರು.
उनीहरूले परमप्रभुको मन्दिर जलाइदिए, र यरूशलेमको पर्खाल भत्काइदिए, सहरका सबै महलहरू जलाइदिए, र त्यहाँ भएका सबै सुन्दर कुरा नष्‍ट गरे ।
20 ೨೦ ಕತ್ತಿಗೆ ತಪ್ಪಿಸಿಕೊಂಡವರನ್ನು ಅರಸನು ಬಾಬಿಲೋನಿಗೆ ಸೆರೆಯೊಯ್ದನು. ಪಾರಸಿಯರ ಪ್ರಭುತ್ವವು ಅಲ್ಲಿ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.
तरवारबाट उम्केकाहरूलाई राजाले कैद गरेर बेबिलोनमा लगे । तिनीहरू फारसको शासनमा नआउञ्जेल उनका र उनका छोराहरूका दास-दासी भए ।
21 ೨೧ ಈ ಪ್ರಕಾರ ಯೆರೆಮೀಯನ ಮುಖಾಂತರ ಹೇಳಿಸಿದ ಯೆಹೋವನ ಮಾತು ನೆರವೇರಿತು; ದೇಶವು ತನ್ನ ಸಬ್ಬತ್ ಕಾಲವನ್ನು ಅನುಭವಿಸುವವರೆಗೂ ಸಮಾಧಾನವಾಗಿತ್ತಷ್ಟೇ. ದೇಶವು ಎಪ್ಪತ್ತು ವರ್ಷಗಳು ಪೂರ್ಣವಾಗುವವರೆಗೂ ಅದು ಶೂನ್ಯವಾಗಿದ್ದ ಸಬ್ಬತ್ತನ್ನು ಅನುಭವಿಸಿತು.
यर्मिया अगमवक्ताद्वारा बोलिएको परमप्रभुको वचन पूरा हुनलाई, देशले आफ्नो शबाथको बिश्रामको आनन्द नलिउञ्जेलसम्म यसो भयो । यसरी नै सत्तरी वर्ष पूरा नगुञ्जेल र विश्रामको पूरा समय नकाटुञ्जेल नाश भएको सबै समयभरि नै देशले शबाथको विश्राम पालन गर्दैरह्यो ।
22 ೨೨ ಪಾರಸಿಯ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಆ ಪಾರಸಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ,
फारसका राजा कोरेसको पहिलो वर्षमा यर्मियाद्वारा भनिएको परमप्रभुको वचन पूरा हुन परमप्रभुले फारसका राजाको आत्मालाई प्रोत्साहित पार्नुभयो, ताकि उनले आफ्नो साम्राज्यभरि एउटा घोषणा निकाले र त्यसलाई लेख्‍ने काम पनि गरे । तिनले यसो भने:
23 ೨೩ ಪಾರಸಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ, “ಪರಲೋಕದ ದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನು ಒಪ್ಪಿಸಿ, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಆಲಯವನ್ನು ಕಟ್ಟಬೇಕೆಂದು ಆಜ್ಞಾಪಿಸಿದ್ದಾನೆ. ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ ಅವರು ಸ್ವದೇಶಕ್ಕೆ ಪ್ರಯಾಣ ಬೆಳೆಸಲಿ; ಅವರ ದೇವರಾದ ಯೆಹೋವನು ಅವರ ಸಂಗಡ ಇರುವನು” ಎಂದು ಪ್ರಕಟಿಸಿದನು.
“फारसका राजा कोरेस यसो भन्छन्: परमप्रभु स्वर्गका परमेश्‍वरले पृथ्वीका सबै राज्य मलाई दिनुभएको छ । उहाँले मलाई यहूदाको यरूशलेममा उहाँको निम्ति एउटा मन्दिर बनाउन आज्ञा गर्नुभएको छ । उहाँका सबै मानिसध्येबाट जो-जो अहिले यहाँ छौ, परमप्रभु आफ्‍ना परमेश्‍वर तिमीहरूसँग रहनुभएको होस् । त्यो आफ्‍नो देशमा यरूशलेममा जाओस् ।”

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 36 >