< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 7 >

1 ಸೊಲೊಮೋನನು ಪ್ರಾರ್ಥಿಸುವುದನ್ನು ಮುಗಿಸಿದ ಕೂಡಲೆ, ಆಕಾಶದಿಂದ ಬೆಂಕಿಯು ಬಿದ್ದು ಸರ್ವಾಂಗಹೋಮಗಳನ್ನೂ, ಯಜ್ಞಮಾಂಸವನ್ನೂ ದಹಿಸಿ ಬಿಟ್ಟಿತು, ಯೆಹೋವನ ತೇಜಸ್ಸು ಆಲಯದ ತುಂಬಾ ತುಂಬಿಕೊಂಡಿತು.
शलमोनाची प्रार्थना संपल्याबरोबर स्वर्गातून अग्नी खाली उतरला आणि त्याने होमबली आणि यज्ञार्पणे भस्मसात केली. परमेश्वराच्या लखलखीत तेजाने मंदिर भरुन गेले.
2 ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿದ್ದರಿಂದ ಯಾಜಕರು ಒಳಗೆ ಪ್ರವೇಶಿಸಲಾರದೆ ಹೋದರು.
त्या तेजाने दिपलेल्या याजकांनाही परमेश्वराच्या मंदिरात जाता येईना.
3 ಇಸ್ರಾಯೇಲರೆಲ್ಲರೂ ಆಕಾಶದಿಂದ ಬೆಂಕಿ ಕೆಳಗೆ ಇಳಿದು ಬರುವುದನ್ನೂ ಮತ್ತು ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿರುವುದನ್ನು ನೋಡಿದಾಗ, ಜನರು ನೆಲದವರೆಗೆ ಸಾಷ್ಟಾಂಗವೆರಗಿ ಯೆಹೋವನನ್ನು ಆರಾಧಿಸಿ, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾದದ್ದು” ಎಂದು ಕೃತಜ್ಞತಾಸ್ತುತಿ ನಮನ ಮಾಡಿದರು.
सरळ स्वर्गातून अग्नी खाली येणे आणि परमेश्वराचे तेज मंदिरावर पसरणे या गोष्टी इस्राएलाच्या समस्त लोकांनी पाहिल्या. तेव्हा त्यांनी जमिनीपर्यंत लवून नमन केले, परमेश्वरास धन्यवाद दिले आणि ते म्हणाले, “परमेश्वर चांगला आहे त्याची कृपा सर्वकाळ राहते.”
4 ಅರಸನೂ ಮತ್ತು ಎಲ್ಲಾ ಜನರೂ ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮವನ್ನು ಅರ್ಪಿಸಿದರು.
शलमोनाने आणि सर्व इस्राएल लोकांनी परमेश्वरापुढे यज्ञ केले.
5 ಅರಸನಾದ ಸೊಲೊಮೋನನು ಯಜ್ಞಕ್ಕಾಗಿ ಇಪ್ಪತ್ತೆರಡು ಸಾವಿರ ಹೋರಿಗಳನ್ನು, ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸಿದನು. ಈ ಪ್ರಕಾರ ಅರಸನು ಮತ್ತು ಎಲ್ಲಾ ಇಸ್ರಾಯೇಲರು ಯೆಹೋವನ ದೇವಾಲಯವನ್ನು ಪ್ರತಿಷ್ಠೆ ಮಾಡಿದರು.
राजा शलमोनाने बावीस हजार बैल आणि एक लाख वीस हजार मेंढरे यांचा यज्ञ केला. अशा प्रकारे लोकांनी व राजाने देवाच्या घरा साठी समर्पण केले.
6 ಪ್ರತಿಯೊಬ್ಬ ಯಾಜಕನು ತನ್ನ ಸೇವೆಗನುಸಾರವಾಗಿ ನಿಂತರು. ಲೇವಿಯರೂ ಮತ್ತು ದಾವೀದ ರಾಜನು ಯೆಹೋವನ ಗಾಯನ ಸೇವೆಗೋಸ್ಕರ ಮಾಡಿಸಿದ ವಾದ್ಯಗಳನ್ನು ತಮ್ಮ ಕೈಗಳಲ್ಲಿ ಹಿಡಿದುಕೊಂಡು, ದೇವಾರಾಧನೆ ಮಾಡುತ್ತಾ, “ಆತನ ಕೃಪೆಯು ಶಾಶ್ವತವಾದದ್ದು” ಎಂಬುದಾಗಿ ಸ್ತುತಿ ಸಲ್ಲಿಸಿದರು. ಎಲ್ಲಾ ಯಾಜಕರು ಅವರ ಮುಂದೆ ತುತ್ತೂರಿಗಳನ್ನು ಊದಿದರು. ಸಮಸ್ತ ಇಸ್ರಾಯೇಲ್ಯರು ಎದ್ದು ನಿಂತಿದ್ದರು.
याजक आपल्या कामाला सिध्द झाले. परमेश्वराच्या भजनाची वाद्ये घेऊन लेवीही उभे राहिले. राजा दाविदाने ही वाद्ये परमेश्वराच्या स्तवनासाठी करून घेतली होती. “परमेश्वराचे स्तवन करा कारण त्याची कृपा सनातन आहे” असे याजक आणि लेवी गात होते. लेवीच्या समोर उभे राहून याजक कर्णे वाजवत होते. सर्व इस्राएल लोक तिथे उभे होते.
7 ಸೊಲೊಮೋನನು ಯೆಹೋವನ ಆಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠೆ ಮಾಡಿದನು. ಸೊಲೊಮೋನನು ಮಾಡಿಸಿದ ತಾಮ್ರದ ಯಜ್ಞವೇದಿಯ ಮೇಲೆ ಸರ್ವಾಂಗಹೋಮವನ್ನೂ, ಸಮಾಧಾನ ಯಜ್ಞದ ಕೊಬ್ಬನ್ನೂ ಇಡುವುದಕ್ಕೆ ಸ್ಥಳ ಸಾಲದೆ ಇದ್ದುದರಿಂದ, ಅಲ್ಲಿ ಅವನು ಸರ್ವಾಂಗಹೋಮವನ್ನೂ, ಧಾನ್ಯನೈವೇದ್ಯಗಳನ್ನೂ, ಸಮಾಧಾನ ಯಜ್ಞದ ಕೊಬ್ಬಿನ ಕಾಣಿಕೆಯನ್ನು ಸಮರ್ಪಿಸಿದನು.
परमेश्वराच्या मंदिरासमोरचे मधले दालन शलमोनाने पवित्र केले. या जागी त्याने होमार्पणे आणि शांत्यर्पणांची वपा वाहिली. होमार्पणे, अन्नार्पणे आणि वपा यांचे प्रमाण एवढे प्रचंड होते की पितळी वेदीवर ते सर्व मावेना म्हणून मधले दालन त्याने वापरले.
8 ಈ ಪ್ರಕಾರ ಸೊಲೊಮೋನನೂ ಹಮಾತಿನ ದಾರಿಯಿಂದ ಐಗುಪ್ತದ ಹಳ್ಳದ ವರೆಗಿರುವ ಪ್ರಾಂತ್ಯಗಳಿಂದ, ಮಹಾ ಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲರೂ ಅಲ್ಲಿ ಏಳು ದಿನಗಳವರೆಗೂ ಪರ್ಣಶಾಲೆಗಳ ಜಾತ್ರೆ ಆಚರಿಸಿದರು.
शलमोन आणि इस्राएल लोक यांनी सात दिवस हा सण साजरा केला. हमाथच्या वेशीपासून ते मिसरच्या झऱ्या पर्यंतच्या भागातले सगळे इस्राएल लोक इथे आल्यामुळे शलमोनबरोबरचा जमाव खूपच मोठा होता.
9 ತರುವಾಯ ಎಂಟನೆಯ ದಿನದಲ್ಲಿ ಪರಿಶುದ್ಧ ಸಭೆ ನಡಿಸಿದರು. ಹೀಗೆ ಏಳು ದಿನ ಯಜ್ಞವೇದಿಯ ಪ್ರತಿಷ್ಠೆಯನ್ನು ಮತ್ತು ಇನ್ನು ಏಳು ದಿನ ಜಾತ್ರೆಯ ಹಬ್ಬವನ್ನು ಆಚರಿಸಿದರು.
आठव्या दिवशी त्यांनी पवित्र सभा घेतली कारण त्या आधी सात दिवस त्यांनी सण साजरा केला होता व समर्पणे सात दिवस वेदीवर ठेवली होती, ती फक्त परमेश्वराच्या उपासनेसाठी वापरायची होती. सात दिवस त्यांनी सण साजरा केला.
10 ೧೦ ಏಳನೆಯ ತಿಂಗಳಿನ ಇಪ್ಪತ್ತ ಮೂರನೆಯ ದಿನದಲ್ಲಿ, ಅರಸನು ಜನರಿಗೆ ಅಪ್ಪಣೆಕೊಡಲು ಅವರು ಯೆಹೋವನಿಂದ ದಾವೀದ, ಸೊಲೊಮೋನರಿಗೂ, ಆತನ ಪ್ರಜೆಗಳಾದ ಇಸ್ರಾಯೇಲರಿಗೂ ಉಂಟಾದ ಉಪಕಾರಗಳನ್ನು ನೆನಪುಮಾಡಿಕೊಂಡು ಆನಂದಭರಿತರಾಗಿ, ಸಂತೋಷಿಸುತ್ತಾ ತಮ್ಮ ತಮ್ಮ ನಿವಾಸಗಳಿಗೆ ಹೊರಟು ಹೋದರು.
१०सातव्या महिन्याच्या तेविसाव्या दिवशी शलमोनाने लोकांस घरोघरी परतायला सांगितले. दावीद, शलमोन आणि इस्राएल लोक यांच्यावर परमेश्वराने कृपा केल्यामुळे लोक आनंदी झाले होते. त्यांची अंत: करणे आनंदाने भरुन गेली होती.
11 ೧೧ ಸೊಲೊಮೋನನು ಯೆಹೋವನ ಆಲಯವನ್ನೂ, ತನ್ನ ಅರಮನೆಯನ್ನೂ ಕಟ್ಟಿಸಿ, ಆ ಕಟ್ಟಡಗಳ ವಿಷಯವಾಗಿ ತನ್ನ ಹೃದಯದಲ್ಲಿದ್ದ ಎಲ್ಲವನ್ನೂ ಅರಸನು ಈಡೇರಿಸಿದನು.
११परमेश्वराचे मंदिर आणि राजगृह बांधण्याचे काम शलमोनाने पार पाडले. परमेश्वराचे मंदिर आणि आपले निवासस्थान यांच्याबाबतीत योजलेल्या सर्व गोष्टी त्याने यशस्वीपणे पूर्ण केल्या.
12 ೧೨ ಯೆಹೋವನು ಸೊಲೊಮೋನನಿಗೆ ರಾತ್ರಿಯಲ್ಲಿ ಪ್ರತ್ಯಕ್ಷನಾಗಿ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನು ಲಾಲಿಸಿ, ಬಲಿಯನ್ನರ್ಪಿಸುವ ಆಲಯವಾಗಿ ಈ ಸ್ಥಳವನ್ನು ಆರಿಸಿಕೊಂಡಿದ್ದೇನೆ.
१२नंतर एकदा रात्री परमेश्वराने शलमोनाला दर्शन दिले. तो शलमोनाला म्हणाला, “शलमोना तुझी प्रार्थना मी ऐकली आहे. हे स्थळ यज्ञगृह म्हणून मी निवडले आहे.
13 ೧೩ ನಾನು ಆಕಾಶವನ್ನು ಮಳೆಗರೆಯದಂತೆ ಮುಚ್ಚುವಾಗಲೂ, ದೇಶವನ್ನು ತಿಂದು ಬಿಡುವುದಕ್ಕೆ ಮಿಡತೆಗಳನ್ನು ಕಳುಹಿಸುವಾಗಲೂ, ನನ್ನ ಪ್ರಜೆಯ ಮೇಲೆ ಘೋರವ್ಯಾಧಿಯನ್ನು ಬರಮಾಡುವಾಗಲೂ,
१३कधी जर पर्जन्यवृष्टी होऊ नये म्हणून मी आकाशमार्ग बंद केला, धान्य फस्त करायला टोळधाड पाठवली किंवा माझ्या लोकांमध्ये रोगाराईचा प्रसार केला
14 ೧೪ ಈಗ ನನ್ನವರೆಂದು ಹೆಸರುಗೊಂಡಿರುವ ನನ್ನ ಪ್ರಜೆಗಳು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಕೆಟ್ಟ ನಡತೆಯನ್ನು ಬಿಟ್ಟು ನನ್ನ ಕಡೆಗೆ ತಿರುಗಿಕೊಂಡು, ನನ್ನನ್ನು ಕುರಿತು ಪ್ರಾರ್ಥಿಸಿ, ನನ್ನ ದರ್ಶನವನ್ನು ಬಯಸುವುದಾದರೆ, ನಾನು ಪರಲೋಕದಿಂದ ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ದೇಶಕ್ಕೆ ಆರೋಗ್ಯವನ್ನು ದಯಪಾಲಿಸುವೆನು.
१४आणि अशावेळी लोकांनी नम्र होऊन माझा धावा करून माझ्या दर्शनाची इच्छा बाळगली, दुराचाराचा त्याग केला तर मी स्वर्गातून त्यांच्या हाकेला उत्तर देईन. त्यांना त्यांच्या पापाची क्षमा करेन आणि त्यांची भूमी संकटमुक्त करीन.
15 ೧೫ ಇನ್ನು ಮುಂದೆ ಈ ಸ್ಥಳದಲ್ಲಿ ಪ್ರಾರ್ಥಿಸುವವರನ್ನು ಕಟಾಕ್ಷಿಸಿ ಅವರ ವಿಜ್ಞಾಪನೆಗಳಿಗೆ ಕಿವಿಗೊಡುವೆನು.
१५आता माझी दृष्टी याठिकाणी वळलेली आहे. इथे होणाऱ्या प्रार्थना ऐकायला माझे कान उत्सुक आहेत.
16 ೧೬ ನನ್ನ ನಾಮ ಮಹತ್ತು ಈ ಆಲಯದಲ್ಲಿ ಶಾಶ್ವತವಾಗಿರುವಂತೆ ಇದನ್ನು ನನಗೋಸ್ಕರ ಆರಿಸಿ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಠಿಯೂ, ಮನಸ್ಸೂ ಸದಾ ಇಲ್ಲೇ ಇರುತ್ತದೆ.
१६हे मंदिर मी माझे म्हणून निवडले आहे माझे नाव येथे सदासर्वकाळ रहावे म्हणून मी हे स्थान पवित्र केले आहे माझी दृष्टी आणि माझे चित्त नेहमी या मंदिराकडे लागलेले असेल.
17 ೧೭ ನೀನು ನಿನ್ನ ತಂದೆಯಾದ ದಾವೀದನಂತೆ ನನಗೆ ವಿಧೇಯನಾಗಿ ನಡೆದುಕೊಂಡು ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಕೊಳ್ಳುವುದಾದರೆ,
१७शलमोना, तुझे पिता दावीद यांच्या प्रमाणेच तू माझ्याशी वागलास, माझ्या आज्ञांचे पालन केलेस, माझे विधी आणि नियम पाळलेस,
18 ೧೮ ನಿನ್ನ ರಾಜ್ಯಸಿಂಹಾಸನವನ್ನು ಸ್ಥಿರಪಡಿಸುವೆನು; ಅಲ್ಲದೆ ಇಸ್ರಾಯೇಲರಲ್ಲಿ ನಿನ್ನ ಸಂತಾನದವರು ತಪ್ಪದೆ ಸದಾಕಾಲ ರಾಜ್ಯಾಭಾರ ನಡಿಸುವರು ಎಂಬುದಾಗಿ ನಿನ್ನ ತಂದೆಯಾದ ದಾವೀದನಿಗೆ ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು.
१८तर मी तुला समर्थ राजा बनवील आणि तुझे राज्य महान होईल. तुझे पिता दावीद यांना मी तसे वचन दिले आहे. त्यांना मी म्हटले होते, ‘दावीद तुझ्या घराण्यातील पुरुषच इस्राएलाच्या राजपदावर आरुढ होईल.’
19 ೧೯ ಆದರೆ ನೀವು ದ್ರೋಹಿಗಳಾಗಿ ಯೆಹೋವನ ಆಜ್ಞಾವಿಧಿಗಳನ್ನು ಉಲ್ಲಂಘಿಸಿ, ಅನ್ಯದೇವತೆಗಳನ್ನು ಆರಾಧಿಸಿ,
१९पण जर माझ्या आज्ञा आणि नियम तू पाळले नाहीस. इतर दैवतांची उपासना व सेवा केलीस,
20 ೨೦ ಅವುಗಳಿಗೆ ಕೈಮುಗಿಯುವುದಾದರೆ ನಾನು ಇಸ್ರಾಯೇಲ್ಯರಿಗೆ ಕೊಟ್ಟ ನನ್ನ ದೇಶದಿಂದ ಅವರನ್ನು ಹೊರಗೆ ಹಾಕಿ ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಿರಾಕರಿಸಿ ಅದು ಎಲ್ಲಾ ಜನಾಂಗಗಳವರಿಗೂ ಶಾಪದ ಮಾದರಿ ಮಾತಾಗಿಯೂ ನಿಂದೆಗೆ ಆಸ್ಪದವಾಗುವಂತೆಯೂ ಮಾಡುವೆನು.
२०तर मात्र मी दिलेल्या या भूमीतून इस्राएल लोकांस मी हुसकावून लावीन. माझ्या नावाप्रीत्यर्थ असलेले हे पवित्र मंदिर मी सोडून जाईन. इतकेच नव्हे तर त्यांना मी देशामध्ये निंदेचा विषय करीन.
21 ೨೧ ಉನ್ನತವಾದ ಮಂದಿರದ ಈ ಮಾರ್ಗವಾಗಿ ಹೋಗುವವರು ಅದನ್ನು ನೋಡಿ ಬೆರಗಾಗಿ, ‘ಯೆಹೋವನು ಈ ದೇಶವನ್ನೂ ಆಲಯವನ್ನೂ ಹೀಗೇಕೆ ಮಾಡಿದನು?’ ಎಂದು ಕೇಳುವರು.
२१एकेकाळी पूज्य मानल्या गेलेल्या या मंदिरावरुन जाणाऱ्या येणाऱ्या प्रत्येकाला आता आश्चर्य वाटेल. ते लोक म्हणतील, ‘हा प्रदेश आणि हे मंदिर यांची अशी अवस्था परमेश्वराने का केली बरे?’
22 ೨೨ ಆಗ ಅವರಿಗೆ, ‘ಈ ದೇಶದವರು ತಮ್ಮನ್ನು ಐಗುಪ್ತ ದೇಶದಿಂದ ಬರಮಾಡಿದ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಕಡೆಗಣಿಸಿ, ಅನ್ಯ ದೇವತೆಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಆರಾಧಿಸಿದ್ದರಿಂದಲೇ ಆತನು ಈ ಎಲ್ಲಾ ಆಪತ್ತನ್ನು ಅವರಿಗೆ ಬರಮಾಡಿದ್ದಾನೆ.’” ಎಂದು ಉತ್ತರ ಕೊಡುವರು ಎಂದನು.
२२तेव्हा त्यांना इतर लोक सांगतील, ‘कारण आपल्या पूर्वजांचा देव परमेश्वर याचे या इस्राएल लोकांनी ऐकले नाही. या लोकांस या परमेश्वरानेच मिसरातून बाहेर आणले. तरी हे इतर दैवतांच्या भजनी लागले. त्यांनी त्यांची उपासना व सेवा केली. त्यांनी मूर्तीपूजा सुरु केली. म्हणून इस्राएल लोकांवर परमेश्वराने हे अरिष्ट आणले.’”

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 7 >