< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 7 >

1 ಸೊಲೊಮೋನನು ಪ್ರಾರ್ಥಿಸುವುದನ್ನು ಮುಗಿಸಿದ ಕೂಡಲೆ, ಆಕಾಶದಿಂದ ಬೆಂಕಿಯು ಬಿದ್ದು ಸರ್ವಾಂಗಹೋಮಗಳನ್ನೂ, ಯಜ್ಞಮಾಂಸವನ್ನೂ ದಹಿಸಿ ಬಿಟ್ಟಿತು, ಯೆಹೋವನ ತೇಜಸ್ಸು ಆಲಯದ ತುಂಬಾ ತುಂಬಿಕೊಂಡಿತು.
यति बेला जब सोलोमनले प्रार्थना गरेर सकेका थिए, तब स्‍वर्गबाट आगो तल झर्‍यो, र होमबलि र बलिदानहरू भस्‍म गर्‍यो, अनि परमप्रभुको महिमाले मन्‍दिर भरियो ।
2 ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿದ್ದರಿಂದ ಯಾಜಕರು ಒಳಗೆ ಪ್ರವೇಶಿಸಲಾರದೆ ಹೋದರು.
परमप्रभुको महिमाले उहाँको मन्‍दिर भरिएको हुनाले पुजारीहरू मन्‍दिरभित्र पस्‍न सकेनन्‌ ।
3 ಇಸ್ರಾಯೇಲರೆಲ್ಲರೂ ಆಕಾಶದಿಂದ ಬೆಂಕಿ ಕೆಳಗೆ ಇಳಿದು ಬರುವುದನ್ನೂ ಮತ್ತು ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿರುವುದನ್ನು ನೋಡಿದಾಗ, ಜನರು ನೆಲದವರೆಗೆ ಸಾಷ್ಟಾಂಗವೆರಗಿ ಯೆಹೋವನನ್ನು ಆರಾಧಿಸಿ, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾದದ್ದು” ಎಂದು ಕೃತಜ್ಞತಾಸ್ತುತಿ ನಮನ ಮಾಡಿದರು.
आगो तल झरेको र परमप्रभुको महिमा मन्‍दिरमा भएको जब सबै इस्राएलीले देखे, तब तिनीहरूले आफ्‍ना अनुहारहरू ढुङ्गाको छपनीमा घोप्‍टो पारे र आराधना गरे र परमप्रभुलाई धन्‍यवाद दिए । तिनीहरूले भने, “उहाँ भलो हुनुहुन्‍छ, किनकि उहाँको करारको बफादारीता सदासर्वदा रहन्‍छ ।”
4 ಅರಸನೂ ಮತ್ತು ಎಲ್ಲಾ ಜನರೂ ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮವನ್ನು ಅರ್ಪಿಸಿದರು.
यसरी राजा र सबै मानिसले परमप्रभुलाई बलिदानहरू चढाए ।
5 ಅರಸನಾದ ಸೊಲೊಮೋನನು ಯಜ್ಞಕ್ಕಾಗಿ ಇಪ್ಪತ್ತೆರಡು ಸಾವಿರ ಹೋರಿಗಳನ್ನು, ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸಿದನು. ಈ ಪ್ರಕಾರ ಅರಸನು ಮತ್ತು ಎಲ್ಲಾ ಇಸ್ರಾಯೇಲರು ಯೆಹೋವನ ದೇವಾಲಯವನ್ನು ಪ್ರತಿಷ್ಠೆ ಮಾಡಿದರು.
सोलोमन राजाले बाईस हजार साँढे र एक लाख बीस हजार भेडा-बाख्रा बलि चढाए । यसरी राजा र सबै मानिसले परमेश्‍वरको मन्‍दिरको समर्पण गरे ।
6 ಪ್ರತಿಯೊಬ್ಬ ಯಾಜಕನು ತನ್ನ ಸೇವೆಗನುಸಾರವಾಗಿ ನಿಂತರು. ಲೇವಿಯರೂ ಮತ್ತು ದಾವೀದ ರಾಜನು ಯೆಹೋವನ ಗಾಯನ ಸೇವೆಗೋಸ್ಕರ ಮಾಡಿಸಿದ ವಾದ್ಯಗಳನ್ನು ತಮ್ಮ ಕೈಗಳಲ್ಲಿ ಹಿಡಿದುಕೊಂಡು, ದೇವಾರಾಧನೆ ಮಾಡುತ್ತಾ, “ಆತನ ಕೃಪೆಯು ಶಾಶ್ವತವಾದದ್ದು” ಎಂಬುದಾಗಿ ಸ್ತುತಿ ಸಲ್ಲಿಸಿದರು. ಎಲ್ಲಾ ಯಾಜಕರು ಅವರ ಮುಂದೆ ತುತ್ತೂರಿಗಳನ್ನು ಊದಿದರು. ಸಮಸ್ತ ಇಸ್ರಾಯೇಲ್ಯರು ಎದ್ದು ನಿಂತಿದ್ದರು.
पुजारीहरू प्रत्‍येक आफूले सेवा गर्ने ठाउँमा उभिएर खडा भएर । लेवीहरू पनि परमप्रभुको संगीतका बाजाहरू लिएर खडा भए, जसलाई दाऊद राजाले गीतद्वारा परमप्रभुलाई धन्यवाद दिनको निम्ति बनाएका थिए, “उहाँको करारको विश्‍वस्‍तता सदासर्वदा रहन्‍छ ।” तिनीहरूका सामु सबै पुजारीले आआफ्ना तुरही बजाए, र सबै इस्राएली खडा भए ।
7 ಸೊಲೊಮೋನನು ಯೆಹೋವನ ಆಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠೆ ಮಾಡಿದನು. ಸೊಲೊಮೋನನು ಮಾಡಿಸಿದ ತಾಮ್ರದ ಯಜ್ಞವೇದಿಯ ಮೇಲೆ ಸರ್ವಾಂಗಹೋಮವನ್ನೂ, ಸಮಾಧಾನ ಯಜ್ಞದ ಕೊಬ್ಬನ್ನೂ ಇಡುವುದಕ್ಕೆ ಸ್ಥಳ ಸಾಲದೆ ಇದ್ದುದರಿಂದ, ಅಲ್ಲಿ ಅವನು ಸರ್ವಾಂಗಹೋಮವನ್ನೂ, ಧಾನ್ಯನೈವೇದ್ಯಗಳನ್ನೂ, ಸಮಾಧಾನ ಯಜ್ಞದ ಕೊಬ್ಬಿನ ಕಾಣಿಕೆಯನ್ನು ಸಮರ್ಪಿಸಿದನು.
सोलोमनले परमप्रभुका मन्‍दिरको सामुन्‍नेको चोकको मध्‍य भागलाई अलग गरे । त्‍यहाँ तिनले होमबलिहरू र मेलबलिहरूका बोसोको भाग चढाए, किनभने तिनले बनाएको काँसाको वेदीमा होमबलि, अन्‍नबलि र बोसोका भागहरू अटाएनन्‌ ।
8 ಈ ಪ್ರಕಾರ ಸೊಲೊಮೋನನೂ ಹಮಾತಿನ ದಾರಿಯಿಂದ ಐಗುಪ್ತದ ಹಳ್ಳದ ವರೆಗಿರುವ ಪ್ರಾಂತ್ಯಗಳಿಂದ, ಮಹಾ ಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲರೂ ಅಲ್ಲಿ ಏಳು ದಿನಗಳವರೆಗೂ ಪರ್ಣಶಾಲೆಗಳ ಜಾತ್ರೆ ಆಚರಿಸಿದರು.
यसरी सोलोमन र तिनीसँग भएका सबै इस्राएली, लेबो-हमातदेखि मिश्रदेशको खोलासम्‍मको एउटा ठूलो समुदायले त्‍यस बेला सात दिनसम्‍म चाड मनाए ।
9 ತರುವಾಯ ಎಂಟನೆಯ ದಿನದಲ್ಲಿ ಪರಿಶುದ್ಧ ಸಭೆ ನಡಿಸಿದರು. ಹೀಗೆ ಏಳು ದಿನ ಯಜ್ಞವೇದಿಯ ಪ್ರತಿಷ್ಠೆಯನ್ನು ಮತ್ತು ಇನ್ನು ಏಳು ದಿನ ಜಾತ್ರೆಯ ಹಬ್ಬವನ್ನು ಆಚರಿಸಿದರು.
आठौं दिनमा तिनीहरूले धार्मिक सभा राखे, किनकि तिनीहरूले वेदीका समर्पणको सेवा सात दिनसम्‍म र चाड सात दिनसम्‍म मानेका थिए ।
10 ೧೦ ಏಳನೆಯ ತಿಂಗಳಿನ ಇಪ್ಪತ್ತ ಮೂರನೆಯ ದಿನದಲ್ಲಿ, ಅರಸನು ಜನರಿಗೆ ಅಪ್ಪಣೆಕೊಡಲು ಅವರು ಯೆಹೋವನಿಂದ ದಾವೀದ, ಸೊಲೊಮೋನರಿಗೂ, ಆತನ ಪ್ರಜೆಗಳಾದ ಇಸ್ರಾಯೇಲರಿಗೂ ಉಂಟಾದ ಉಪಕಾರಗಳನ್ನು ನೆನಪುಮಾಡಿಕೊಂಡು ಆನಂದಭರಿತರಾಗಿ, ಸಂತೋಷಿಸುತ್ತಾ ತಮ್ಮ ತಮ್ಮ ನಿವಾಸಗಳಿಗೆ ಹೊರಟು ಹೋದರು.
परमप्रभुले दाऊद र सोलोमन र आफ्‍ना मानिस इस्राएललाई दिनुभएका सबै सुदिनको कारणले खुशी र आनन्‍दित हृदयहरूका साथ सातौं महिनाको तेईसौं दिनमा सोलोमनले मानिसहरूलाई आआफ्‍ना घर पठाइदिए ।
11 ೧೧ ಸೊಲೊಮೋನನು ಯೆಹೋವನ ಆಲಯವನ್ನೂ, ತನ್ನ ಅರಮನೆಯನ್ನೂ ಕಟ್ಟಿಸಿ, ಆ ಕಟ್ಟಡಗಳ ವಿಷಯವಾಗಿ ತನ್ನ ಹೃದಯದಲ್ಲಿದ್ದ ಎಲ್ಲವನ್ನೂ ಅರಸನು ಈಡೇರಿಸಿದನು.
यसरी सोलोमनले परमप्रभुको मन्‍दिर र तिनको आफ्नै राजमहल बनाइसके । परमप्रभुको मन्‍दिर र तिनको आफ्‍नो राजमहल बनाउनको निम्ति तिनको हृदयमा आएका हरेक कुरा तिनले सफलतापूर्वक पूरा गरे ।
12 ೧೨ ಯೆಹೋವನು ಸೊಲೊಮೋನನಿಗೆ ರಾತ್ರಿಯಲ್ಲಿ ಪ್ರತ್ಯಕ್ಷನಾಗಿ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನು ಲಾಲಿಸಿ, ಬಲಿಯನ್ನರ್ಪಿಸುವ ಆಲಯವಾಗಿ ಈ ಸ್ಥಳವನ್ನು ಆರಿಸಿಕೊಂಡಿದ್ದೇನೆ.
परमप्रभु राती सोलोमोनकहाँ देखा परेर तिनलाई भन्‍नुभयोः “मैले तेरो प्रार्थना सुनेको छु, र बलिदानको मन्‍दिरको रूपमा यो स्‍थानलाई मैले आफ्‍नो बासस्थानको निम्‍ति चुनेको छु ।
13 ೧೩ ನಾನು ಆಕಾಶವನ್ನು ಮಳೆಗರೆಯದಂತೆ ಮುಚ್ಚುವಾಗಲೂ, ದೇಶವನ್ನು ತಿಂದು ಬಿಡುವುದಕ್ಕೆ ಮಿಡತೆಗಳನ್ನು ಕಳುಹಿಸುವಾಗಲೂ, ನನ್ನ ಪ್ರಜೆಯ ಮೇಲೆ ಘೋರವ್ಯಾಧಿಯನ್ನು ಬರಮಾಡುವಾಗಲೂ,
मैले आकाशलाई बन्‍द गरें र पानी परेन भने, वा देशलाई नष्‍ट गर्न भनी सलहहरूलाई मैले आज्ञा दिएँ भने, वा मेरो मानिसमाथि मैले विपत्ति पठाएँ भने,
14 ೧೪ ಈಗ ನನ್ನವರೆಂದು ಹೆಸರುಗೊಂಡಿರುವ ನನ್ನ ಪ್ರಜೆಗಳು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಕೆಟ್ಟ ನಡತೆಯನ್ನು ಬಿಟ್ಟು ನನ್ನ ಕಡೆಗೆ ತಿರುಗಿಕೊಂಡು, ನನ್ನನ್ನು ಕುರಿತು ಪ್ರಾರ್ಥಿಸಿ, ನನ್ನ ದರ್ಶನವನ್ನು ಬಯಸುವುದಾದರೆ, ನಾನು ಪರಲೋಕದಿಂದ ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ದೇಶಕ್ಕೆ ಆರೋಗ್ಯವನ್ನು ದಯಪಾಲಿಸುವೆನು.
तब मेरो आफ्‍नै नाउँ दिइएको मेरा मानिसहरूले आफैलाई नम्र पार्छन्, प्रार्थना गर्छन्, मेरो मुहारको खोजी गर्छन् र आफ्‍ना दुष्‍ट चालहरूबाट फर्किन्‍छ्न् भने, म स्‍वर्गबाट सुन्‍नेछु, तिनीहरूका पाप क्षमा गर्नेछु, र तिनीहरूका देशलाई निको पार्नेछु ।
15 ೧೫ ಇನ್ನು ಮುಂದೆ ಈ ಸ್ಥಳದಲ್ಲಿ ಪ್ರಾರ್ಥಿಸುವವರನ್ನು ಕಟಾಕ್ಷಿಸಿ ಅವರ ವಿಜ್ಞಾಪನೆಗಳಿಗೆ ಕಿವಿಗೊಡುವೆನು.
यस ठाउँमा गरिएका प्रार्थनातिर अब मेरा आँखा खुला हुनेछन् र मेरा कानले सुन्‍नेछन्‌ ।
16 ೧೬ ನನ್ನ ನಾಮ ಮಹತ್ತು ಈ ಆಲಯದಲ್ಲಿ ಶಾಶ್ವತವಾಗಿರುವಂತೆ ಇದನ್ನು ನನಗೋಸ್ಕರ ಆರಿಸಿ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಠಿಯೂ, ಮನಸ್ಸೂ ಸದಾ ಇಲ್ಲೇ ಇರುತ್ತದೆ.
किनकि अब मैले यस मन्‍दिरलाई चुनेको छु र त्‍यसलाई अलग गरेको छु ताकि त्‍यहाँ सदासर्वदा मेरो नाउँ रहोस् । मेरो दृष्‍टि र मेरो हृदय हरेक दिन त्‍यहाँ रहनेछ ।
17 ೧೭ ನೀನು ನಿನ್ನ ತಂದೆಯಾದ ದಾವೀದನಂತೆ ನನಗೆ ವಿಧೇಯನಾಗಿ ನಡೆದುಕೊಂಡು ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಕೊಳ್ಳುವುದಾದರೆ,
तेरो बारेमाचाहिं, मैले तँलाई दिएका सबै आज्ञा पालन गरेर र मेरा विधिहरू र आदेशहरू पालन गरेर तेरा बुबा दाऊद मेरो दृष्‍टिमा हिंडेझैं हिंडिस्‌ भने,
18 ೧೮ ನಿನ್ನ ರಾಜ್ಯಸಿಂಹಾಸನವನ್ನು ಸ್ಥಿರಪಡಿಸುವೆನು; ಅಲ್ಲದೆ ಇಸ್ರಾಯೇಲರಲ್ಲಿ ನಿನ್ನ ಸಂತಾನದವರು ತಪ್ಪದೆ ಸದಾಕಾಲ ರಾಜ್ಯಾಭಾರ ನಡಿಸುವರು ಎಂಬುದಾಗಿ ನಿನ್ನ ತಂದೆಯಾದ ದಾವೀದನಿಗೆ ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು.
तब तेरो राज्‍यको सिंहासन म स्थापित गर्नेछु, जसरी मैले तेरा बुबा दाऊदलाई यसो भनेर करारद्वारा प्रतिज्ञा गरेको थिएँ, ‘इस्राएलमाथि राज्‍य गर्न तेरा सन्तानहरूको अभाव हुनेछैन’ ।’
19 ೧೯ ಆದರೆ ನೀವು ದ್ರೋಹಿಗಳಾಗಿ ಯೆಹೋವನ ಆಜ್ಞಾವಿಧಿಗಳನ್ನು ಉಲ್ಲಂಘಿಸಿ, ಅನ್ಯದೇವತೆಗಳನ್ನು ಆರಾಧಿಸಿ,
तर मैले तँलाई दिएका मेरा विधिहरू र आज्ञाहरू पालन गरिनस् र ती त्‍यागिस् र तँ गएर अरू देवताहरूको पुजा गरिस् र तिनीहरूका सामु दण्‍डवत् गरिस् भने,
20 ೨೦ ಅವುಗಳಿಗೆ ಕೈಮುಗಿಯುವುದಾದರೆ ನಾನು ಇಸ್ರಾಯೇಲ್ಯರಿಗೆ ಕೊಟ್ಟ ನನ್ನ ದೇಶದಿಂದ ಅವರನ್ನು ಹೊರಗೆ ಹಾಕಿ ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಿರಾಕರಿಸಿ ಅದು ಎಲ್ಲಾ ಜನಾಂಗಗಳವರಿಗೂ ಶಾಪದ ಮಾದರಿ ಮಾತಾಗಿಯೂ ನಿಂದೆಗೆ ಆಸ್ಪದವಾಗುವಂತೆಯೂ ಮಾಡುವೆನು.
तब मैले तिनीहरूलाई दिएको मेरो देशबाट म तिनीहरूलाई जरैसमेत उखेलिदिनेछु । मेरो नाउँ रहनलाई मैले अलग गरेको यस मन्‍दिरलाई म त्‍याग्‍नेछु, र सबै मानिसका बिचमा म त्‍यसलाई एउटा उखान र गिल्‍लाको पात्र बनाउनेछु ।
21 ೨೧ ಉನ್ನತವಾದ ಮಂದಿರದ ಈ ಮಾರ್ಗವಾಗಿ ಹೋಗುವವರು ಅದನ್ನು ನೋಡಿ ಬೆರಗಾಗಿ, ‘ಯೆಹೋವನು ಈ ದೇಶವನ್ನೂ ಆಲಯವನ್ನೂ ಹೀಗೇಕೆ ಮಾಡಿದನು?’ ಎಂದು ಕೇಳುವರು.
अहिले यो मन्‍दिर ज्‍यादै गौरवशाली भए तापनि, यसलाई देखेर आउनेजाने हरेक मानिस अवाक्‌ भएर सुस्‍केरा निकाल्‍नेछ । तिनीहरूले सोध्‍नेछन्, ‘परमप्रभुले किन यस देश र यस मन्‍दिरसित यस्‍तो गर्नुभयो?’
22 ೨೨ ಆಗ ಅವರಿಗೆ, ‘ಈ ದೇಶದವರು ತಮ್ಮನ್ನು ಐಗುಪ್ತ ದೇಶದಿಂದ ಬರಮಾಡಿದ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಕಡೆಗಣಿಸಿ, ಅನ್ಯ ದೇವತೆಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಆರಾಧಿಸಿದ್ದರಿಂದಲೇ ಆತನು ಈ ಎಲ್ಲಾ ಆಪತ್ತನ್ನು ಅವರಿಗೆ ಬರಮಾಡಿದ್ದಾನೆ.’” ಎಂದು ಉತ್ತರ ಕೊಡುವರು ಎಂದನು.
अरूले यस्‍तो जवाफ दिनेछन्, ‘किनभने तिनीहरूले आफ्‍ना परमप्रभु परमेश्‍वरलाई त्‍यागे जसले तिनीहरूका पुर्खाहरूलाई मिश्रदेशबाट बाहिर निकालेर ल्‍याउनुभयो । अनि तिनीहरूले अरू देवताहरू स्‍थापना गरे र तिनीहरूको सामु दण्‍डवत गरे र तिनीहरूको पुजा गरे । यसैकारण परमप्रभुले यी सबै विपत्ति तिनीहरूमाथि ल्‍याउनुभयो ।’”

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 7 >