< ಅರಸುಗಳು - ದ್ವಿತೀಯ ಭಾಗ 11 >
1 ೧ ಅಹಜ್ಯನು ಮರಣಹೊಂದಿದನೆಂದು ಅವನ ತಾಯಿಯಾದ ಅತಲ್ಯಳು ಕೇಳಿದಾಗ ಪಕ್ಕನೆ ರಾಜಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟಳು.
१जब अहज्याह की माता अतल्याह ने देखा, कि उसका पुत्र मर गया, तब उसने पूरे राजवंश को नाश कर डाला।
2 ೨ ಆದರೆ ಅರಸನಾದ ಯೆಹೋರಾಮನ ಮಗಳೂ, ಅಹಜ್ಯನ ತಂಗಿಯೂ ಆದ ಯೆಹೋಷೆಬಳೆಂಬಾಕೆಯು ಯಾರಿಗೂ ತಿಳಿಯದಂತೆ ತನ್ನ ಅಣ್ಣನ ಮಗನಾದ ಯೆಹೋವಾಷನನ್ನು ಅತಲ್ಯಳಿಂದ ಹತರಾಗಿದ್ದ ರಾಜಪುತ್ರರ ಮಧ್ಯದಿಂದ ಅವನ ದಾದಿಯರೊಡನೆ ಅವನನ್ನು ತೆಗೆದುಕೊಂಡು ಹೋಗಿ, ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು
२परन्तु यहोशेबा जो राजा योराम की बेटी, और अहज्याह की बहन थी, उसने अहज्याह के पुत्र योआश को घात होनेवाले राजकुमारों के बीच में से चुराकर दाई समेत बिछौने रखने की कोठरी में छिपा दिया। और उन्होंने उसे अतल्याह से ऐसा छिपा रखा, कि वह मारा न गया।
3 ೩ ಹೀಗೆ ಅವನು ಅತಲ್ಯಳಿಂದ ಹತವಾಗದಂತೆ ತಪ್ಪಿಸಿ ಕೊಂಡು ಆರು ವರ್ಷಗಳವರೆಗೂ ಯೆಹೋಷೆಬಳೊಡನೆ ಗುಪ್ತವಾಗಿ ಯೆಹೋವನ ಆಲಯದಲ್ಲಿದ್ದನು. ಆ ಆರು ವರ್ಷಗಳಲ್ಲಿ ಅತಲ್ಯಳೇ ದೇಶವನ್ನು ಆಳುತ್ತಿದ್ದಳು.
३और वह उसके पास यहोवा के भवन में छः वर्ष छिपा रहा, और अतल्याह देश पर राज्य करती रही।
4 ೪ ಏಳನೆಯ ವರ್ಷದಲ್ಲಿ, ಯೆಹೋಯಾದಾವನು ಕಾರಿಯರ ಎಂಬ ಸಿಪಾಯಿಗಳ ಮತ್ತು ಕಾವಲುದಂಡಿನವರ ಶತಾಧಿಪತಿಗಳನ್ನು ತನ್ನ ಹತ್ತಿರ ಯೆಹೋವನ ಆಲಯಕ್ಕೆ ಕರೆಯಿಸಿದನು. ಅಲ್ಲಿ ಅವನು ಅವರ ಸಂಗಡ ಆಪ್ತನಾಗಿದ್ದು ಪ್ರಮಾಣಪೂರ್ವಕವಾದ ಒಡಂಬಡಿಕೆಯನ್ನು ಮಾಡಿಕೊಂಡ ನಂತರ ರಾಜಕುಮಾರನನ್ನು ತೋರಿಸಿದನು.
४सातवें वर्ष में यहोयादा ने अंगरक्षकों और पहरुओं के शतपतियों को बुला भेजा, और उनको यहोवा के भवन में अपने पास ले आया; और उनसे वाचा बाँधी और यहोवा के भवन में उनको शपथ खिलाकर, उनको राजपुत्र दिखाया।
5 ೫ ಯೆಹೋಯಾದಾವನು ಅವರಿಗೆ, “ಸಬ್ಬತ್ ದಿನದಲ್ಲಿ ಮನೆಗೆ ಹೋಗುವ ಸೈನ್ಯದ ಮೂರರಲ್ಲೊಂದು ಭಾಗವು ರಾಜರ ಅರಮನೆಯನ್ನು ಕಾಯಬೇಕು,
५और उसने उन्हें आज्ञा दी, “एक काम करो: अर्थात् तुम में से एक तिहाई लोग जो विश्रामदिन को आनेवाले हों, वे राजभवन का पहरा दें।
6 ೬ ಮೂರರಲ್ಲೊಂದು ಭಾಗವು ಸೂರ್ ಬಾಗಿಲಿನಲ್ಲಿಯೂ, ಮತ್ತೊಂದು ಭಾಗವು ಕಾವಲುದಂಡಿನ ಹಿಂದಿನ ಬಾಗಿಲಿನಲ್ಲಿಯೂ ಇರಬೇಕು. ಈ ಪ್ರಕಾರ ನೀವು ಅರಮನೆಯನ್ನು ಭದ್ರವಾಗಿ ಕಾಯಬೇಕು.
६और एक तिहाई लोग सूर नामक फाटक में ठहरे रहें, और एक तिहाई लोग पहरुओं के पीछे के फाटक में रहें; अतः तुम भवन की चौकसी करके लोगों को रोके रहना;
7 ೭ ಇದಲ್ಲದೆ, ಸಬ್ಬತ್ ದಿನದಲ್ಲಿ ಅರಸನೊಂದಿಗೆ ಯೆಹೋವನ ಆಲಯವನ್ನು ಕಾಯುವುದಕ್ಕಾಗಿ ಬರುವ ಸೈನ್ಯವು ಇಬ್ಬಗೆಯಾಗಿದ್ದುಕೊಂಡು ಯೆಹೋವನ ಆಲಯವನ್ನು ಕಾಯಬೇಕು.
७और तुम्हारे दो दल अर्थात् जितने विश्रामदिन को बाहर जानेवाले हों वह राजा के आस-पास होकर यहोवा के भवन की चौकसी करें।
8 ೮ ನೀವು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅವನ ಸುತ್ತಲೂ ನಿಂತು, ಅವನ ಗುಂಪಿನಲ್ಲಿ ನುಗ್ಗುವಂತವನನ್ನು ಸಂಹರಿಸಬೇಕು. ಅರಸನು ಹೊರಗೆ ಹೋಗಿ ಬರುವಾಗಲೆಲ್ಲಾ ನೀವು ಅವನ ಜೊತೆಯಲ್ಲೇ ಇರಬೇಕು. ಇದೇ ನನ್ನ ಅಪ್ಪಣೆ” ಎಂದು ಹೇಳಿದನು.
८तुम अपने-अपने हाथ में हथियार लिये हुए राजा के चारों और रहना, और जो कोई पाँतियों के भीतर घुसना चाहे वह मार डाला जाए, और तुम राजा के आते-जाते समय उसके संग रहना।”
9 ೯ ಯಾಜಕನಾದ ಯೆಹೋಯಾದಾಮನು ಆಜ್ಞಾಪಿಸಿದಂತೆ, ಶತಾಧಿಪತಿಗಳು ಸಬ್ಬತ್ ದಿನದಲ್ಲಿ ಮನೆಗೆ ಹೋಗತಕ್ಕ ಮತ್ತು ಕಾಯುವುದಕ್ಕಾಗಿ ಬರತಕ್ಕ ಸಿಪಾಯಿಗಳನ್ನು ಕರೆದುಕೊಂಡು ರಾಜಪುತ್ರನ ಬಳಿಗೆ ಬಂದರು.
९यहोयादा याजक की इन सब आज्ञाओं के अनुसार शतपतियों ने किया। वे विश्रामदिन को आनेवाले और जानेवाले दोनों दलों के अपने-अपने जनों को संग लेकर यहोयादा याजक के पास गए।
10 ೧೦ ಯಾಜಕನಾದ ಯೆಹೋಯಾದಾವನು ಆ ಶತಾಧಿಪತಿಗಳಿಗೆ ಯೆಹೋವನ ಆಲಯದಲ್ಲಿ ಇಡಲ್ಪಟ್ಟಿದ್ದ ರಾಜನಾದ ದಾವೀದನ ಬರ್ಜಿಯನ್ನೂ, ಗುರಾಣಿಗಳನ್ನೂ ಕೊಟ್ಟನು.
१०तब याजक ने शतपतियों को राजा दाऊद के बर्छे, और ढालें जो यहोवा के भवन में थीं दे दीं।
11 ೧೧ ಕಾವಲುದಂಡಿನವರು ಆಯುಧ ಹಿಡಿದುಕೊಂಡು ಅರಸನನ್ನು ಕಾಯುವುದಕ್ಕೋಸ್ಕರ ದೇವಾಲಯದ ದಕ್ಷಿಣ ದಿಕ್ಕಿನ ಮೂಲೆಯಿಂದ ಯಜ್ಞವೇದಿಯವರೆಗೂ, ಅಲ್ಲಿಂದ ಉತ್ತರ ದಿಕ್ಕಿನ ಮೂಲೆಯವರೆಗೂ ಸಾಲಾಗಿ ನಿಂತರು.
११इसलिए वे पहरुए अपने-अपने हाथ में हथियार लिए हुए भवन के दक्षिणी कोने से लेकर उत्तरी कोने तक वेदी और भवन के पास, राजा के चारों ओर उसको घेरकर खड़े हुए।
12 ೧೨ ಯೆಹೋಯಾದಾವನು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು, ಅವನ ತಲೆಯ ಮೇಲೆ ಕಿರೀಟವನ್ನು ಇಟ್ಟು ಕೈಯಲ್ಲಿ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ರಾಜ್ಯಾಭಿಷೇಕ ಮಾಡಿದನು. ಕೂಡಲೆ ಜನರು ಚಪ್ಪಾಳೆ ತಟ್ಟುತ್ತಾ, “ಅರಸನು ಚಿರಂಜೀವಿಯಾಗಿರಲಿ” ಎಂದು ಕೂಗಿದರು.
१२तब उसने राजकुमार को बाहर लाकर उसके सिर पर मुकुट, और साक्षीपत्र रख दिया; तब लोगों ने उसका अभिषेक करके उसको राजा बनाया; फिर ताली बजा-बजाकर बोल उठे, “राजा जीवित रहे!”
13 ೧೩ ಅತಲ್ಯಳು ಕಾವಲುದಂಡಿನವರ ಮತ್ತು ಇತರ ಜನರ ಗದ್ದಲವನ್ನು ಕೇಳಿ ಅವರು ಸೇರಿ ಬಂದಿದ್ದ ಯೆಹೋವನ ಆಲಯಕ್ಕೆ ಬಂದಳು.
१३जब अतल्याह को पहरुओं और लोगों की हलचल सुनाई पड़ी, तब वह उनके पास यहोवा के भवन में गई;
14 ೧೪ ಅಲ್ಲಿ ಅರಸನು ಪದ್ದತಿಯ ಪ್ರಕಾರ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಅಧಿಪತಿಗಳೂ, ತುತ್ತೂರಿಯನ್ನು ಊದುವವರೂ ಅರಸನ ಹತ್ತಿರ ನಿಂತಿದ್ದರು. ದೇಶದ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.
१४और उसने क्या देखा कि राजा रीति के अनुसार खम्भे के पास खड़ा है, और राजा के पास प्रधान और तुरही बजानेवाले खड़े हैं। और सब लोग आनन्द करते और तुरहियां बजा रहे हैं। तब अतल्याह अपने वस्त्र फाड़कर, “राजद्रोह! राजद्रोह!” पुकारने लगी।
15 ೧೫ ಆಗ ಯಾಜಕನಾದ ಯೆಹೋಯಾದಾವನು ಸೇನಾನಿಗಳಾದ, ಶತಾಧಿಪತಿಗಳಿಗೆ, “ಈಕೆಯನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿರಿ ಸಿಪಾಯಿಗಳ ಮಧ್ಯದಲ್ಲಿ ಆಕೆಯನ್ನು ಹೊರಗೆ ಕರೆದುಕೊಂಡು ಹೋಗಿರಿ ಮತ್ತು ಆಕೆಯನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಲ್ಲಿರಿ” ಎಂದು ಆಜ್ಞಾಪಿಸಿದನು.
१५तब यहोयादा याजक ने दल के अधिकारी शतपतियों को आज्ञा दी, “उसे अपनी पाँतियों के बीच से निकाल ले जाओ; और जो कोई उसके पीछे चले उसे तलवार से मार डालो।” क्योंकि याजक ने कहा, “वह यहोवा के भवन में न मार डाली जाए।”
16 ೧೬ ಅವರು ಆಕೆಯನ್ನು ಹಿಡಿದು ಕುದುರೆಗಳ ಬಾಗಿಲಿನಿಂದ ರಾಜನ ಅರಮನೆಗೆ ಕರೆದೊಯ್ದು ಅಲ್ಲಿ ಹತ್ಯೆ ಮಾಡಿದರು.
१६इसलिए उन्होंने दोनों ओर से उसको जगह दी, और वह उस मार्ग के बीच से चली गई, जिससे घोड़े राजभवन में जाया करते थे; और वहाँ वह मार डाली गई।
17 ೧೭ ಅನಂತರ ಯೆಹೋಯಾದಾವನ ಪ್ರೇರಣೆಯಿಂದ ಅರಸನೂ, ಪ್ರಜೆಗಳೂ ತಾವು ಯೆಹೋವನ ಪ್ರಜೆಗಳಾಗಿರುವುದಾಗಿ ಅಲ್ಲಿ ಪ್ರಮಾಣ ಮಾಡಿದರು. ಇದಲ್ಲದೆ ರಾಜಪ್ರಜೆಗಳೂ ಒಡಂಬಡಿಕೆಮಾಡಿಕೊಂಡರು.
१७तब यहोयादा ने यहोवा के, और राजा-प्रजा के बीच यहोवा की प्रजा होने की वाचा बँधाई, और उसने राजा और प्रजा के मध्य भी वाचा बँधाई।
18 ೧೮ ಯೆಹೂದ್ಯರೆಲ್ಲರೂ ಬಾಳನ ದೇವಸ್ಥಾನಕ್ಕೆ ಹೋಗಿ ಬಾಳನ ಪೂಜಾರಿಯಾದ ಮತ್ತಾನನನ್ನು ಬಲಿಪೀಠಗಳ ಎದುರಿನಲ್ಲಿಯೇ ಕೊಂದು, ದೇವಸ್ಥಾನವನ್ನೂ ಅದರಲ್ಲಿದ್ದ ಬಲಿಪೀಠಗಳನ್ನೂ, ವಿಗ್ರಹಗಳನ್ನೂ ಸಂಪೂರ್ಣವಾಗಿ ಹಾಳುಮಾಡಿದರು. ಯೆಹೋಯಾದಾವನು ಯೆಹೋವನ ದೇವಾಲಯಕ್ಕೆ ಕಾವಲಿಟ್ಟನು.
१८तब सब लोगों ने बाल के भवन को जाकर ढा दिया, और उसकी वेदियाँ और मूरतें भली भाँति तोड़ दीं; और मत्तान नामक बाल के याजक को वेदियों के सामने ही घात किया। याजक ने यहोवा के भवन पर अधिकारी ठहरा दिए।
19 ೧೯ ಅಲ್ಲದೆ ಯೆಹೋಯಾದಾವನು ಶತಾಧಿಪತಿಗಳನ್ನು, ಕಾರಿಯರು ಎನ್ನಿಸಿಕೊಳ್ಳುವ ಸೈನ್ಯಗಳ ಕಾವಲುದಂಡನ್ನು, ಸಾಧಾರಣ ಜನರನ್ನು ಅವರೊಡನೆ ಅರಸನಾದ ಯೆಹೋವಾಷನನ್ನು ಯೆಹೋವನ ಆಲಯದಲ್ಲಿ ಕಾವಲುದಂಡಿನವರ ಬಾಗಿಲಿನ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಹೋಗಿ ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.
१९तब वह शतपतियों, अंगरक्षकों और पहरुओं और सब लोगों को साथ लेकर राजा को यहोवा के भवन से नीचे ले गया, और पहरुओं के फाटक के मार्ग से राजभवन को पहुँचा दिया। और राजा राजगद्दी पर विराजमान हुआ।
20 ೨೦ ದೇಶದವರೆಲ್ಲರೂ ಬಹಳವಾಗಿ ಸಂತೋಷಪಟ್ಟರು. ಪಟ್ಟಣದಲ್ಲಿ ಶಾಂತಿ ನೆಲೆಸಿತು. ಅತಲ್ಯಳನ್ನು ರಾಜನ ಅರಮನೆಯ ಸಮೀಪದಲ್ಲಿ ಕತ್ತಿಯಿಂದ ಸಂಹರಿಸಿದರು.
२०तब सब लोग आनन्दित हुए, और नगर में शान्ति हुई। अतल्याह तो राजभवन के पास तलवार से मार डाली गई थी।
21 ೨೧ ಯೆಹೋವಾಷನು ಅರಸನಾದಾಗ ಅವನು ಏಳು ವರ್ಷದವನಾಗಿದ್ದನು.
२१जब योआश राजा हुआ उस समय वह सात वर्ष का था।