< ಅರಸುಗಳು - ದ್ವಿತೀಯ ಭಾಗ 12 >

1 ಯೆಹೋವಾಷನು ಯೇಹುವಿನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅರಸನಾಗಿ, ಯೆರೂಸಲೇಮಿನಲ್ಲಿ ನಲ್ವತ್ತು ವರ್ಷ ಆಳಿದನು. ಬೇರ್ಷೆಬದವಳಾದ ಚಿಬ್ಯಳು ಇವನ ತಾಯಿ.
בשנת שבע ליהוא מלך יהואש וארבעים שנה מלך בירושלם ושם אמו צביה מבאר שבע
2 ಯಾಜಕನಾದ ಯೆಹೋಯಾದಾವನು ಯೆಹೋವಾಷನಿಗೆ ಬೋಧಕನಾಗಿದ್ದ ಕಾಲದಲ್ಲಿ ಅವನು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೇ ನಡೆದುಕೊಳ್ಳುತ್ತಿದ್ದನು.
ויעש יהואש הישר בעיני יהוה כל ימיו אשר הורהו יהוידע הכהן
3 ಆದರೆ ಅವನು ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲವಾದುದರಿಂದ ಜನರು ಅವುಗಳ ಮೇಲೆಯೇ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು.
רק הבמות לא סרו עוד העם מזבחים ומקטרים בבמות
4 ಯೆಹೋವಾಷನು ಯಾಜಕರಿಗೆ, “ನೀವು ಯೆಹೋವನ ಆಲಯಕ್ಕೆ ಸೇರಿದ ಎಲ್ಲಾ ಪರಿಶುದ್ಧ ದ್ರವ್ಯವನ್ನು ಅಂದರೆ ಜನಗಣತಿಯಲ್ಲಿ ಲೆಕ್ಕಿಸಲ್ಪಟ್ಟ ಪ್ರತಿಯೊಬ್ಬನೂ ತಂದುಕೊಡುವ ಹಣ, ದೇವರಿಗೆ ಪ್ರತಿಷ್ಠಿತನಾದ ಮನುಷ್ಯನು ತನ್ನ ಪ್ರಾಣವನ್ನು ಬಿಡಿಸಿಕೊಳ್ಳುವುದಕ್ಕಾಗಿ ತರುವ ಹಣ, ಜನರು ಯೆಹೋವನ ಆಲಯಕ್ಕೆ ಸ್ವೇಚ್ಛೆಯಿಂದ ತಂದೊಪ್ಪಿಸುವ ಹಣ ಇವುಗಳನ್ನು ತೆಗೆದುಕೊಂಡು,
ויאמר יהואש אל הכהנים כל כסף הקדשים אשר יובא בית יהוה כסף עובר--איש כסף נפשות ערכו כל כסף אשר יעלה על לב איש להביא בית יהוה
5 ದೇವಾಲಯಕ್ಕೆ ಎಲ್ಲೆಲ್ಲಿ ದುರಸ್ತಿಯಾಗಬೇಕೆಂಬುದನ್ನು ನೋಡಿ ಅದನ್ನು ಸರಿಮಾಡುವುದಕ್ಕೋಸ್ಕರ ಉಪಯೋಗಿಸಿರಿ, ಪ್ರತಿಯೊಬ್ಬನೂ ತನ್ನ ತನ್ನ ಪರಿಚಿತರಿಂದಲೇ ಹಣವನ್ನು ತೆಗೆದುಕೊಳ್ಳಬೇಕು” ಎಂದು ಆಜ್ಞಾಪಿಸಿದನು.
יקחו להם הכהנים איש מאת מכרו והם יחזקו את בדק הבית לכל אשר ימצא שם בדק
6 ಯಾಜಕರು ಅರಸನಾದ ಯೆಹೋವಾಷನ ಆಳ್ವಿಕೆಯ ಇಪ್ಪತ್ತಮೂರನೆ ವರ್ಷದವರೆಗೂ ದೇವಾಲಯವನ್ನು ದುರಸ್ತಿ ಮಾಡಿರಲಿಲ್ಲ.
ויהי בשנת עשרים ושלש שנה--למלך יהואש לא חזקו הכהנים את בדק הבית
7 ಆದುದರಿಂದ ಅರಸನಾದ ಯೆಹೋವಾಷನು ಯೆಹೋಯಾದಾವ, ಮೊದಲಾದ ಯಾಜಕರನ್ನು ಕರೆದು ಅವರಿಗೆ, “ನೀವು ಈ ವರೆಗೂ ದೇವಾಲಯವನ್ನೇಕೆ ದುರಸ್ತಿ ಮಾಡಲಿಲ್ಲ? ಇನ್ನು ಮುಂದೆ ನಿಮ್ಮ ಪರಿಚಿತರಿಂದ ಹಣವನ್ನು ವಸೂಲಿಮಾಡಿಕೊಳ್ಳದೆ ನಿಮ್ಮಲಿರುವ ಹಣದಿಂದ ದೇವಾಲಯದ ದುರಸ್ತಿಗಾಗಿ ಕಾರ್ಯವನ್ನು ಮಾಡಿರಿ” ಎಂದು ಹೇಳಿದನು.
ויקרא המלך יהואש ליהוידע הכהן ולכהנים ויאמר אלהם מדוע אינכם מחזקים את בדק הבית ועתה אל תקחו כסף מאת מכריכם כי לבדק הבית תתנהו
8 ಆಗ ಯಾಜಕರು ಅವನಿಗೆ, “ನಾವು ಇನ್ನು ಮುಂದೆ ಜನರಿಂದ ಹಣ ತೆಗೆದುಕೊಳ್ಳುವುದಿಲ್ಲ. ದೇವಾಲಯದ ದುರಸ್ತಿಗಾಗಿ ಕೈಹಾಕುವುದಿಲ್ಲ” ಎಂಬುದಾಗಿ ಮಾತುಕೊಟ್ಟರು.
ויאתו הכהנים לבלתי קחת כסף מאת העם ולבלתי חזק את בדק הבית
9 ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು ಬಂದು ಅದರ ಮುಚ್ಚಳದಲ್ಲಿ ತೂತು ಮಾಡಿ, ಅದನ್ನು ಯೆಹೋವನ ಆಲಯದ ಬಾಗಿಲಿನ ಬಲಗಡೆಯಲ್ಲಿ ಯಜ್ಞವೇದಿಯ ಹತ್ತಿರ ಇಟ್ಟನು. ದ್ವಾರಪಾಲಕರಾದ ಯಾಜಕರು ಯೆಹೋವನ ಆಲಯಕ್ಕೆ ತರಲ್ಪಟ್ಟ ಹಣವನ್ನೆಲ್ಲಾ ಅದರಲ್ಲಿಯೇ ಹಾಕಿಸುತ್ತಿದ್ದರು.
ויקח יהוידע הכהן ארון אחד ויקב חר בדלתו ויתן אתו אצל המזבח בימין (מימין) בבוא איש בית יהוה ונתנו שמה הכהנים שמרי הסף את כל הכסף המובא בית יהוה
10 ೧೦ ಯೆಹೋವನ ಆಲಯದ ಪೆಟ್ಟಿಗೆಯಲ್ಲಿ ಬೇಕಾದಷ್ಟು ಹಣ ಇದೆಯೆಂದು ಕಂಡು ಬಂದಾಗೆಲ್ಲಾ, ರಾಜಲೇಖಕನೂ, ಮಹಾಯಾಜಕನೂ ಬಂದು ಅದನ್ನು ಎಣಿಸಿ ಚೀಲಗಳಲ್ಲಿ ಕಟ್ಟಿ ಇಡುವರು.
ויהי כראותם כי רב הכסף בארון ויעל ספר המלך והכהן הגדול ויצרו וימנו את הכסף הנמצא בית יהוה
11 ೧೧ ಅವರು ತೂಕಮಾಡಿ ಎಣಿಸಿದ ಹಣವನ್ನು, ಯೆಹೋವನ ಆಲಯದ ಕೆಲಸವನ್ನು ನಡಿಸುವ ಮುಖ್ಯಸ್ಥರಿಗೆ ಒಪ್ಪಿಸುವರು. ಅವರು ಅದನ್ನು ಅಲ್ಲಿ ಕೆಲಸ ಮಾಡುವ ಬಡಗಿ, ಶಿಲ್ಪಿ, ಮೇಸ್ತ್ರಿ, ಕಲ್ಲುಕುಟಿಕ ಇವರ ಸಂಬಳಕ್ಕಾಗಿಯೂ.
ונתנו את הכסף המתכן על יד (ידי) עשי המלאכה הפקדים (המפקדים) בית יהוה ויוציאהו לחרשי העץ ולבנים העשים בית יהוה
12 ೧೨ ಮರ, ಕೆತ್ತಿದ ಕಲ್ಲುಗಳನ್ನು ಕೊಂಡುಕೊಳ್ಳುವುದಕ್ಕೂ, ಆಲಯವನ್ನು ದುರಸ್ತಿ ಮಾಡಲು ಬೇಕಾದ ಎಲ್ಲಾ ವೆಚ್ಚಕ್ಕಾಗಿಯೂ ಉಪಯೋಗಿಸಿದರು.
ולגדרים ולחצבי האבן ולקנות עצים ואבני מחצב לחזק את בדק בית יהוה ולכל אשר יצא על הבית לחזקה
13 ೧೩ ಯೆಹೋವನ ಆಲಯದೊಳಗೆ ತಂದ ಹಣದಿಂದ ಬೆಳ್ಳಿಯ ಬಟ್ಟಲುಗಳನ್ನು, ಕತ್ತರಿಗಳನ್ನು, ಬೋಗುಣಿಗಳನ್ನು, ತುತ್ತೂರಿಗಳನ್ನೂ, ಬೆಳ್ಳಿ ಬಂಗಾರದ ಪಾತ್ರೆ ಇವುಗಳನ್ನು ಮಾಡುವುದಕ್ಕಾಗಿ ಉಪಯೋಗಿಸುತ್ತಿರಲಿಲ್ಲ.
אך לא יעשה בית יהוה ספות כסף מזמרות מזרקות חצצרות כל כלי זהב וכלי כסף--מן הכסף המובא בית יהוה
14 ೧೪ ಯೆಹೋವನ ಆಲಯಕ್ಕೆ ತರಲ್ಪಟ್ಟ ಹಣವನ್ನು ದುರಸ್ತಿ ಕಾರ್ಯಮಾಡುವವರ ಸಂಬಳಕ್ಕಾಗಿ ಉಪಯೋಗಿಸುತ್ತಿದ್ದರು.
כי לעשי המלאכה יתנהו וחזקו בו את בית יהוה
15 ೧೫ ಕೆಲಸಗಾರರಿಗೆ ಸಂಬಳಕೊಡುವ ಮುಖ್ಯಸ್ಥರು ನಂಬಿಗಸ್ತರಾಗಿದ್ದರಿಂದ ಅವರ ವಶಕ್ಕೆ ಕೊಡಲ್ಪಟ್ಟ ಹಣದ ಲೆಕ್ಕವನ್ನು ಯಾರೂ ಕೇಳುತ್ತಿರಲಿಲ್ಲ.
ולא יחשבו את האנשים אשר יתנו את הכסף על ידם לתת לעשי המלאכה כי באמנה הם עשים
16 ೧೬ ಅಪರಾಧ ಪ್ರಾಯಶ್ಚಿತ್ತಕ್ಕಾಗಿಯೂ, ದೋಷಪರಿಹಾರಕ್ಕಾಗಿಯೂ ತರಲ್ಪಟ್ಟ ಹಣವು ಯಾಜಕರ ಪಾಲಿಗೆ ಸೇರುತ್ತಿತ್ತು. ಅದು ಯೆಹೋವನ ಆಲಯಕ್ಕೆ ಸೇರುತ್ತಿರಲಿಲ್ಲ.
כסף אשם וכסף חטאות לא יובא בית יהוה לכהנים יהיו
17 ೧೭ ಇದೇ ಕಾಲದಲ್ಲಿ ಅರಾಮ್ಯರ ಅರಸನಾದ ಹಜಾಯೇಲನು ಬಂದು ಗತ್ ಊರಿಗೆ ಮುತ್ತಿಗೆ ಹಾಕಿ, ಅದನ್ನು ಸ್ವಾಧೀನಪಡಿಸಿಕೊಂಡನು. ಅಲ್ಲಿಂದ ಅವನು ಯೆರೂಸಲೇಮಿಗೆ ವಿರೋಧವಾಗಿ ಹೊರಟನು.
אז יעלה חזאל מלך ארם וילחם על גת וילכדה וישם חזאל פניו לעלות על ירושלם
18 ೧೮ ಯೆಹೂದದ ಅರಸನಾದ ಯೆಹೋವಾಷನು ಇದನ್ನು ಕೇಳಿ ತಾನೂ ತನ್ನ ಪೂರ್ವಿಕರಾದ ಯೆಹೋಷಾಫಾಟನೂ, ಯೆಹೋರಾಮನೂ, ಅಹಜ್ಯನೂ, ಯೆಹೂದ ರಾಜರೂ ದೇವಸ್ಥಾನಕ್ಕೆ ಕಾಣಿಕೆಯಾಗಿ ಕೊಟ್ಟ ಒಡವೆಗಳು, ಯೆಹೋವನ ಆಲಯದ ಪ್ರತಿಷ್ಠೆಗಾಗಿ ಅರಮನೆಯ ಭಂಡಾರಗಳಲ್ಲಿದ್ದ ಬಂಗಾರ ಇವುಗಳನ್ನು ತೆಗೆದುಕೊಂಡು ಅರಾಮ್ಯರ ಅರಸನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಯೆರೂಸಲೇಮನ್ನು ಬಿಟ್ಟು ಹೋದನು.
ויקח יהואש מלך יהודה את כל הקדשים אשר הקדישו יהושפט ויהורם ואחזיהו אבתיו מלכי יהודה ואת קדשיו ואת כל הזהב הנמצא באצרות בית יהוה ובית המלך וישלח לחזאל מלך ארם ויעל מעל ירושלם
19 ೧೯ ಯೆಹೋವಾಷನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
ויתר דברי יואש וכל אשר עשה הלוא הם כתובים על ספר דברי הימים--למלכי יהודה
20 ೨೦ ಯೆಹೋವಾಷನ ಉದ್ಯೋಗಸ್ಥರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ “ಸಿಲ್ಲಾ” ಊರಿಗೆ ಇಳಿದು ಹೋಗುವ ಮಾರ್ಗವಾದ “ಮಿಲ್ಲೋ” ಗೃಹದಲ್ಲಿ ಯೆಹೋವಾಷನನ್ನು ಕೊಂದರು.
ויקמו עבדיו ויקשרו קשר ויכו את יואש בית מלא הירד סלא
21 ೨೧ ಅವರಲ್ಲಿ ಶಿಮೆಯಾತನ ಮಗನಾದ ಯೋಜಾಕಾರ್, ಶೋಮೆರನ ಮಗನಾದ ಯೆಹೋಜಾಬಾದ್ ಎಂಬುವವರು ಅವನ ಮೇಲೆ ಬಿದ್ದು ಅವನನ್ನು ಕೊಂದರು. ಅವನ ಜನರು ಅವನ ಶವವನ್ನು ದಾವೀದ ನಗರದೊಳಗೆ ಅವನ ಪೂರ್ವಿಕರ ಸ್ಮಶಾನ ಭೂಮಿಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಅಮಚ್ಯನು ಅರಸನಾದನು.
ויוזכר בן שמעת ויהוזבד בן שמר עבדיו הכהו וימת ויקברו אתו עם אבתיו בעיר דוד וימלך אמציה בנו תחתיו

< ಅರಸುಗಳು - ದ್ವಿತೀಯ ಭಾಗ 12 >