< ಅರಸುಗಳು - ದ್ವಿತೀಯ ಭಾಗ 12 >
1 ೧ ಯೆಹೋವಾಷನು ಯೇಹುವಿನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅರಸನಾಗಿ, ಯೆರೂಸಲೇಮಿನಲ್ಲಿ ನಲ್ವತ್ತು ವರ್ಷ ಆಳಿದನು. ಬೇರ್ಷೆಬದವಳಾದ ಚಿಬ್ಯಳು ಇವನ ತಾಯಿ.
१येहूच्या सातव्या वर्षी योवाश राज्य करू लागला. त्याने यरूशलेमेवर चाळीस वर्षे राज्य केले. योवाशाच्या आईचे नाव सिब्या, ती बैर-शेबा इथली होती.
2 ೨ ಯಾಜಕನಾದ ಯೆಹೋಯಾದಾವನು ಯೆಹೋವಾಷನಿಗೆ ಬೋಧಕನಾಗಿದ್ದ ಕಾಲದಲ್ಲಿ ಅವನು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೇ ನಡೆದುಕೊಳ್ಳುತ್ತಿದ್ದನು.
२योवाशाचे वर्तन परमेश्वराच्या दृष्टीने उचित असेच होते. त्याने आयुष्यभर परमेश्वराचे ऐकले. याजक यहोयाद याने शिकवले तसे तो वागत होता.
3 ೩ ಆದರೆ ಅವನು ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲವಾದುದರಿಂದ ಜನರು ಅವುಗಳ ಮೇಲೆಯೇ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು.
३पण उंचवट्यावरील पुजास्थळांना त्याने धक्का लावला नाही. लोक यज्ञ करायला, धूप जाळायला तिथे जातच राहिले.
4 ೪ ಯೆಹೋವಾಷನು ಯಾಜಕರಿಗೆ, “ನೀವು ಯೆಹೋವನ ಆಲಯಕ್ಕೆ ಸೇರಿದ ಎಲ್ಲಾ ಪರಿಶುದ್ಧ ದ್ರವ್ಯವನ್ನು ಅಂದರೆ ಜನಗಣತಿಯಲ್ಲಿ ಲೆಕ್ಕಿಸಲ್ಪಟ್ಟ ಪ್ರತಿಯೊಬ್ಬನೂ ತಂದುಕೊಡುವ ಹಣ, ದೇವರಿಗೆ ಪ್ರತಿಷ್ಠಿತನಾದ ಮನುಷ್ಯನು ತನ್ನ ಪ್ರಾಣವನ್ನು ಬಿಡಿಸಿಕೊಳ್ಳುವುದಕ್ಕಾಗಿ ತರುವ ಹಣ, ಜನರು ಯೆಹೋವನ ಆಲಯಕ್ಕೆ ಸ್ವೇಚ್ಛೆಯಿಂದ ತಂದೊಪ್ಪಿಸುವ ಹಣ ಇವುಗಳನ್ನು ತೆಗೆದುಕೊಂಡು,
४योवाश याजकांना म्हणाला, “परमेश्वराच्या मंदिराची पवित्र वस्तूंचा जो काही येईल तो सर्व पैसा, कोणी शिरगणती झाली त्याचा पैसा, आणि परमेश्वराच्या घरात आणायला कोणाच्या मनात येईल तो सगळा पैसा.
5 ೫ ದೇವಾಲಯಕ್ಕೆ ಎಲ್ಲೆಲ್ಲಿ ದುರಸ್ತಿಯಾಗಬೇಕೆಂಬುದನ್ನು ನೋಡಿ ಅದನ್ನು ಸರಿಮಾಡುವುದಕ್ಕೋಸ್ಕರ ಉಪಯೋಗಿಸಿರಿ, ಪ್ರತಿಯೊಬ್ಬನೂ ತನ್ನ ತನ್ನ ಪರಿಚಿತರಿಂದಲೇ ಹಣವನ್ನು ತೆಗೆದುಕೊಳ್ಳಬೇಕು” ಎಂದು ಆಜ್ಞಾಪಿಸಿದನು.
५याजकाने आपापल्या करदात्यांच्या कडून मिळालेले पैसे घ्यावे आणि परमेश्वराच्या मंदिरात काही मोडतोड झाली असेत तर या पैशातून तिची दुरुस्ती करावी.”
6 ೬ ಯಾಜಕರು ಅರಸನಾದ ಯೆಹೋವಾಷನ ಆಳ್ವಿಕೆಯ ಇಪ್ಪತ್ತಮೂರನೆ ವರ್ಷದವರೆಗೂ ದೇವಾಲಯವನ್ನು ದುರಸ್ತಿ ಮಾಡಿರಲಿಲ್ಲ.
६पण योवाश राजाच्या तेविसाव्या वर्षीही याजकांनी मंदिराची दुरुस्ती केली नाही.
7 ೭ ಆದುದರಿಂದ ಅರಸನಾದ ಯೆಹೋವಾಷನು ಯೆಹೋಯಾದಾವ, ಮೊದಲಾದ ಯಾಜಕರನ್ನು ಕರೆದು ಅವರಿಗೆ, “ನೀವು ಈ ವರೆಗೂ ದೇವಾಲಯವನ್ನೇಕೆ ದುರಸ್ತಿ ಮಾಡಲಿಲ್ಲ? ಇನ್ನು ಮುಂದೆ ನಿಮ್ಮ ಪರಿಚಿತರಿಂದ ಹಣವನ್ನು ವಸೂಲಿಮಾಡಿಕೊಳ್ಳದೆ ನಿಮ್ಮಲಿರುವ ಹಣದಿಂದ ದೇವಾಲಯದ ದುರಸ್ತಿಗಾಗಿ ಕಾರ್ಯವನ್ನು ಮಾಡಿರಿ” ಎಂದು ಹೇಳಿದನು.
७तेव्हा मात्र राजा योवाशाने यहोयाद आणि आणखी काही याजक यांना बोलावणे पाठवले. त्यांना तो म्हणाला, “अजूनही तुमच्या हातून मंदिराची दुरुस्ती का झाली नाही? आता आपापल्या लोकांकडून पैसे घेणे आणि ते पैसे वापरणे बंद करा. त्या पैशाचा विनियोग मंदिराच्या दुरुस्तीसाठीच झाला पाहिजे.”
8 ೮ ಆಗ ಯಾಜಕರು ಅವನಿಗೆ, “ನಾವು ಇನ್ನು ಮುಂದೆ ಜನರಿಂದ ಹಣ ತೆಗೆದುಕೊಳ್ಳುವುದಿಲ್ಲ. ದೇವಾಲಯದ ದುರಸ್ತಿಗಾಗಿ ಕೈಹಾಕುವುದಿಲ್ಲ” ಎಂಬುದಾಗಿ ಮಾತುಕೊಟ್ಟರು.
८याजकांनी लोकाकडून पैसे घेण्याचे थांबवण्याबद्दल आपली सहमती दर्शवली खरी पण मंदिराची दुरुस्ती करायची नाही असेही ठरविले.
9 ೯ ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು ಬಂದು ಅದರ ಮುಚ್ಚಳದಲ್ಲಿ ತೂತು ಮಾಡಿ, ಅದನ್ನು ಯೆಹೋವನ ಆಲಯದ ಬಾಗಿಲಿನ ಬಲಗಡೆಯಲ್ಲಿ ಯಜ್ಞವೇದಿಯ ಹತ್ತಿರ ಇಟ್ಟನು. ದ್ವಾರಪಾಲಕರಾದ ಯಾಜಕರು ಯೆಹೋವನ ಆಲಯಕ್ಕೆ ತರಲ್ಪಟ್ಟ ಹಣವನ್ನೆಲ್ಲಾ ಅದರಲ್ಲಿಯೇ ಹಾಕಿಸುತ್ತಿದ್ದರು.
९तेव्हा यहोयाद या याजकाने एक पेटी घेतली आणि तिच्या झाकणाला एक भोक ठेवले. ही पेटी त्याने वेदीच्या दक्षिण बाजूला ठेवली. लोक परमेश्वराच्या मंदिरात शिरल्याबरोबर ती पेटी दाराशीच होती. काही याजक उंबरठ्यापाशीच असत आणि लोकांनी परमेश्वरास वाहिलेले पैसे ते उचलून या पेटीत टाकत.
10 ೧೦ ಯೆಹೋವನ ಆಲಯದ ಪೆಟ್ಟಿಗೆಯಲ್ಲಿ ಬೇಕಾದಷ್ಟು ಹಣ ಇದೆಯೆಂದು ಕಂಡು ಬಂದಾಗೆಲ್ಲಾ, ರಾಜಲೇಖಕನೂ, ಮಹಾಯಾಜಕನೂ ಬಂದು ಅದನ್ನು ಎಣಿಸಿ ಚೀಲಗಳಲ್ಲಿ ಕಟ್ಟಿ ಇಡುವರು.
१०मग लोकही परमेश्वराच्या मंदिरात आल्यावर पेटीतच पैसे टाकत. राजाचा चिटणीस आणि मुख्य याजक अधून मधून येत आणि पेटीत बरेच पैसे साठलेले दिसले की ते पैसे काढून घेत. थैल्यांमध्ये भरुन ते मोजत.
11 ೧೧ ಅವರು ತೂಕಮಾಡಿ ಎಣಿಸಿದ ಹಣವನ್ನು, ಯೆಹೋವನ ಆಲಯದ ಕೆಲಸವನ್ನು ನಡಿಸುವ ಮುಖ್ಯಸ್ಥರಿಗೆ ಒಪ್ಪಿಸುವರು. ಅವರು ಅದನ್ನು ಅಲ್ಲಿ ಕೆಲಸ ಮಾಡುವ ಬಡಗಿ, ಶಿಲ್ಪಿ, ಮೇಸ್ತ್ರಿ, ಕಲ್ಲುಕುಟಿಕ ಇವರ ಸಂಬಳಕ್ಕಾಗಿಯೂ.
११मग दुरुस्तीचे काम करणाऱ्या मजुरांना ते पैसे देत. त्यामध्ये सुतार होते तसेच परमेश्वराच्या मंदिराचे काम करणारे इतर गवंडीही होते.
12 ೧೨ ಮರ, ಕೆತ್ತಿದ ಕಲ್ಲುಗಳನ್ನು ಕೊಂಡುಕೊಳ್ಳುವುದಕ್ಕೂ, ಆಲಯವನ್ನು ದುರಸ್ತಿ ಮಾಡಲು ಬೇಕಾದ ಎಲ್ಲಾ ವೆಚ್ಚಕ್ಕಾಗಿಯೂ ಉಪಯೋಗಿಸಿದರು.
१२दगड फोडणारे, दगडाचे घडीव चिरे बनवणारे यांना देण्यासाठी तसेच लाकूड विकत घेणे दगड घडविणे आणि परमेश्वराच्या मंदिरासाठी दुरुस्तीचे इतर सामान विकत घेण्यासाठी हे पैसे वापरले जात.
13 ೧೩ ಯೆಹೋವನ ಆಲಯದೊಳಗೆ ತಂದ ಹಣದಿಂದ ಬೆಳ್ಳಿಯ ಬಟ್ಟಲುಗಳನ್ನು, ಕತ್ತರಿಗಳನ್ನು, ಬೋಗುಣಿಗಳನ್ನು, ತುತ್ತೂರಿಗಳನ್ನೂ, ಬೆಳ್ಳಿ ಬಂಗಾರದ ಪಾತ್ರೆ ಇವುಗಳನ್ನು ಮಾಡುವುದಕ್ಕಾಗಿ ಉಪಯೋಗಿಸುತ್ತಿರಲಿಲ್ಲ.
१३लोक परमेश्वराच्या मंदिरासाठी पैसे देत. पण ते चांदीची उपकरणी, कात्र्या, वाडगे, कर्णे, सोन्या-चांदीची तबके त्या पैशातून करण्यात आले नव्हते,
14 ೧೪ ಯೆಹೋವನ ಆಲಯಕ್ಕೆ ತರಲ್ಪಟ್ಟ ಹಣವನ್ನು ದುರಸ್ತಿ ಕಾರ್ಯಮಾಡುವವರ ಸಂಬಳಕ್ಕಾಗಿ ಉಪಯೋಗಿಸುತ್ತಿದ್ದರು.
१४तर कारागिरांनाच ते पैसे दिले जात. त्या पैशाने ते परमेश्वराच्या मंदिराची दुरुस्ती करत.
15 ೧೫ ಕೆಲಸಗಾರರಿಗೆ ಸಂಬಳಕೊಡುವ ಮುಖ್ಯಸ್ಥರು ನಂಬಿಗಸ್ತರಾಗಿದ್ದರಿಂದ ಅವರ ವಶಕ್ಕೆ ಕೊಡಲ್ಪಟ್ಟ ಹಣದ ಲೆಕ್ಕವನ್ನು ಯಾರೂ ಕೇಳುತ್ತಿರಲಿಲ್ಲ.
१५कोणीही त्या पैशाची मोजदाद केली नाही की त्या पैशाचा हिशोब कारगिरांना विचारला नाही इतके ते कारागीर विश्वासू होते.
16 ೧೬ ಅಪರಾಧ ಪ್ರಾಯಶ್ಚಿತ್ತಕ್ಕಾಗಿಯೂ, ದೋಷಪರಿಹಾರಕ್ಕಾಗಿಯೂ ತರಲ್ಪಟ್ಟ ಹಣವು ಯಾಜಕರ ಪಾಲಿಗೆ ಸೇರುತ್ತಿತ್ತು. ಅದು ಯೆಹೋವನ ಆಲಯಕ್ಕೆ ಸೇರುತ್ತಿರಲಿಲ್ಲ.
१६परंतु दोषार्पणाचा पैसा व पापार्पणाचा पैसा परमेश्वराच्या घरात त्यांनी आणला नाही, कारण तो याजकांचा होता.
17 ೧೭ ಇದೇ ಕಾಲದಲ್ಲಿ ಅರಾಮ್ಯರ ಅರಸನಾದ ಹಜಾಯೇಲನು ಬಂದು ಗತ್ ಊರಿಗೆ ಮುತ್ತಿಗೆ ಹಾಕಿ, ಅದನ್ನು ಸ್ವಾಧೀನಪಡಿಸಿಕೊಂಡನು. ಅಲ್ಲಿಂದ ಅವನು ಯೆರೂಸಲೇಮಿಗೆ ವಿರೋಧವಾಗಿ ಹೊರಟನು.
१७हजाएल अरामाचा राजा होता. तो गथवर स्वारी करून गेला. गथचा त्याने पाडाव केला आणि तो यरूशलेमेवर चढाई करायचा विचार करु लागला.
18 ೧೮ ಯೆಹೂದದ ಅರಸನಾದ ಯೆಹೋವಾಷನು ಇದನ್ನು ಕೇಳಿ ತಾನೂ ತನ್ನ ಪೂರ್ವಿಕರಾದ ಯೆಹೋಷಾಫಾಟನೂ, ಯೆಹೋರಾಮನೂ, ಅಹಜ್ಯನೂ, ಯೆಹೂದ ರಾಜರೂ ದೇವಸ್ಥಾನಕ್ಕೆ ಕಾಣಿಕೆಯಾಗಿ ಕೊಟ್ಟ ಒಡವೆಗಳು, ಯೆಹೋವನ ಆಲಯದ ಪ್ರತಿಷ್ಠೆಗಾಗಿ ಅರಮನೆಯ ಭಂಡಾರಗಳಲ್ಲಿದ್ದ ಬಂಗಾರ ಇವುಗಳನ್ನು ತೆಗೆದುಕೊಂಡು ಅರಾಮ್ಯರ ಅರಸನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಯೆರೂಸಲೇಮನ್ನು ಬಿಟ್ಟು ಹೋದನು.
१८योवाशाच्या आधी त्याचे पूर्वज यहोशाफाट, यहोराम आणि अहज्या हे यहूदाचे राजे होते. त्यांनी परमेश्वरास बऱ्याच पवित्र गोष्टी अर्पण केल्या होत्या. त्या मंदिरातच होत्या. योवाशानेही बरेच काही परमेश्वरास दिले होते. योवाशाने ती सर्व चीजवस्तू, घरातील तसेच मंदिरातील सोने बाहेर काढले. या मौल्यवान गोष्टी त्याने अरामाचा राजा हजाएल याला पाठवल्या. यरूशलेमेला त्यांची भेट झाली. हजाएलने त्या शहराविरुध्द लढाई केली नाही.
19 ೧೯ ಯೆಹೋವಾಷನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
१९“यहूदाच्या राजांचा इतिहास” या ग्रंथात योवाशाच्या थोर कृत्यांची नोंद आहे.
20 ೨೦ ಯೆಹೋವಾಷನ ಉದ್ಯೋಗಸ್ಥರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ “ಸಿಲ್ಲಾ” ಊರಿಗೆ ಇಳಿದು ಹೋಗುವ ಮಾರ್ಗವಾದ “ಮಿಲ್ಲೋ” ಗೃಹದಲ್ಲಿ ಯೆಹೋವಾಷನನ್ನು ಕೊಂದರು.
२०योवाशाच्या कारभाऱ्यांनी योवाशाविरुध्द कट केला. शिल्ला येथे जाणाऱ्या रस्तावरील मिल्लोच्या घरात त्यांनी योवाशाचा वध केला.
21 ೨೧ ಅವರಲ್ಲಿ ಶಿಮೆಯಾತನ ಮಗನಾದ ಯೋಜಾಕಾರ್, ಶೋಮೆರನ ಮಗನಾದ ಯೆಹೋಜಾಬಾದ್ ಎಂಬುವವರು ಅವನ ಮೇಲೆ ಬಿದ್ದು ಅವನನ್ನು ಕೊಂದರು. ಅವನ ಜನರು ಅವನ ಶವವನ್ನು ದಾವೀದ ನಗರದೊಳಗೆ ಅವನ ಪೂರ್ವಿಕರ ಸ್ಮಶಾನ ಭೂಮಿಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಅಮಚ್ಯನು ಅರಸನಾದನು.
२१शिमाथचा मुलगा योजाखार आणि शोमरचा मुलगा यहोजाबाद हे योवाशाचे कारभारी होते. त्यांनी हे कृत्य केले. दावीद नगरात लोकांनी योवाशाला त्याच्या पूर्वजांसमवेत पुरले. योवाशाचा मुलगा अमस्या त्यानंतर राज्य करु लागला.