< ಅರಸುಗಳು - ದ್ವಿತೀಯ ಭಾಗ 12 >
1 ೧ ಯೆಹೋವಾಷನು ಯೇಹುವಿನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅರಸನಾಗಿ, ಯೆರೂಸಲೇಮಿನಲ್ಲಿ ನಲ್ವತ್ತು ವರ್ಷ ಆಳಿದನು. ಬೇರ್ಷೆಬದವಳಾದ ಚಿಬ್ಯಳು ಇವನ ತಾಯಿ.
၁ဣသရေလပြည်ဘုရင်ယေဟုမင်း၏နန်း စံခုနစ်နှစ်မြောက်တွင် ယောရှသည်ယုဒပြည် ဘုရင်အဖြစ်နန်းတက်၍ ယေရုရှလင်မြို့၌ အနှစ်လေးဆယ်နန်းစံလေသည်။ သူ၏မယ် တော်ကားဗေရရှေဘမြို့သူဇိဗိဖြစ်၏။-
2 ೨ ಯಾಜಕನಾದ ಯೆಹೋಯಾದಾವನು ಯೆಹೋವಾಷನಿಗೆ ಬೋಧಕನಾಗಿದ್ದ ಕಾಲದಲ್ಲಿ ಅವನು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೇ ನಡೆದುಕೊಳ್ಳುತ್ತಿದ್ದನು.
၂သူသည်ယဇ်ပုရောဟိတ်ယောယဒ၏သွန် သင်မှုကိုခံယူရရှိသဖြင့် တစ်သက်လုံး ထာဝရဘုရားနှစ်သက်တော်မူသော အမှုများကိုပြု၏။-
3 ೩ ಆದರೆ ಅವನು ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲವಾದುದರಿಂದ ಜನರು ಅವುಗಳ ಮೇಲೆಯೇ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು.
၃သို့ရာတွင်ရုပ်တုကိုးကွယ်ရာဌာနများ ကိုမူကား မဖျက်မသိမ်းဘဲထားသဖြင့် ပြည်သူတို့သည်ထိုအရပ်များတွင်ယဇ် ပူဇော်၍နံ့သာပေါင်းကိုမီးရှို့ကြသေး၏။
4 ೪ ಯೆಹೋವಾಷನು ಯಾಜಕರಿಗೆ, “ನೀವು ಯೆಹೋವನ ಆಲಯಕ್ಕೆ ಸೇರಿದ ಎಲ್ಲಾ ಪರಿಶುದ್ಧ ದ್ರವ್ಯವನ್ನು ಅಂದರೆ ಜನಗಣತಿಯಲ್ಲಿ ಲೆಕ್ಕಿಸಲ್ಪಟ್ಟ ಪ್ರತಿಯೊಬ್ಬನೂ ತಂದುಕೊಡುವ ಹಣ, ದೇವರಿಗೆ ಪ್ರತಿಷ್ಠಿತನಾದ ಮನುಷ್ಯನು ತನ್ನ ಪ್ರಾಣವನ್ನು ಬಿಡಿಸಿಕೊಳ್ಳುವುದಕ್ಕಾಗಿ ತರುವ ಹಣ, ಜನರು ಯೆಹೋವನ ಆಲಯಕ್ಕೆ ಸ್ವೇಚ್ಛೆಯಿಂದ ತಂದೊಪ್ಪಿಸುವ ಹಣ ಇವುಗಳನ್ನು ತೆಗೆದುಕೊಂಡು,
၄ယောရှသည်ယဇ်ပုရောဟိတ်တို့ကိုခေါ်ပြီး လျှင် ဗိမာန်တော်အတွင်း၌ယဇ်ပူဇော်မှုနှင့် ပတ်သက်၍ရရှိသည့်ငွေများ၊ ယဇ်ကောင် များအတွက်ပေးချေငွေများနှင့် စေတနာ အလျောက်ပေးလှူငွေများကိုစုဆောင်း ထားရန်အမိန့်ပေး၏။-
5 ೫ ದೇವಾಲಯಕ್ಕೆ ಎಲ್ಲೆಲ್ಲಿ ದುರಸ್ತಿಯಾಗಬೇಕೆಂಬುದನ್ನು ನೋಡಿ ಅದನ್ನು ಸರಿಮಾಡುವುದಕ್ಕೋಸ್ಕರ ಉಪಯೋಗಿಸಿರಿ, ಪ್ರತಿಯೊಬ್ಬನೂ ತನ್ನ ತನ್ನ ಪರಿಚಿತರಿಂದಲೇ ಹಣವನ್ನು ತೆಗೆದುಕೊಳ್ಳಬೇಕು” ಎಂದು ಆಜ್ಞಾಪಿಸಿದನು.
၅ယဇ်ပုရောဟိတ်အသီးသီးတို့သည်မိမိ တို့ယဇ်ပူဇော်ပေး၍ရရှိသည့်ငွေများဖြင့် ဗိမာန်တော်မွမ်းမံပြင်ဆင်မှုတွင်လိုအပ် သလိုအသုံးပြုရန်တာဝန်ယူရသည်။
6 ೬ ಯಾಜಕರು ಅರಸನಾದ ಯೆಹೋವಾಷನ ಆಳ್ವಿಕೆಯ ಇಪ್ಪತ್ತಮೂರನೆ ವರ್ಷದವರೆಗೂ ದೇವಾಲಯವನ್ನು ದುರಸ್ತಿ ಮಾಡಿರಲಿಲ್ಲ.
၆သို့ရာတွင်ယောရှ၏နန်းစံနှစ်ဆယ့်သုံးနှစ် မြောက်သို့ရောက်ရှိသည်တိုင်အောင် ဗိမာန်တော် တွင်မည်သည့်မွမ်းမံပြင်ဆင်မှုကိုမျှမပြု ရသေးသဖြင့်၊-
7 ೭ ಆದುದರಿಂದ ಅರಸನಾದ ಯೆಹೋವಾಷನು ಯೆಹೋಯಾದಾವ, ಮೊದಲಾದ ಯಾಜಕರನ್ನು ಕರೆದು ಅವರಿಗೆ, “ನೀವು ಈ ವರೆಗೂ ದೇವಾಲಯವನ್ನೇಕೆ ದುರಸ್ತಿ ಮಾಡಲಿಲ್ಲ? ಇನ್ನು ಮುಂದೆ ನಿಮ್ಮ ಪರಿಚಿತರಿಂದ ಹಣವನ್ನು ವಸೂಲಿಮಾಡಿಕೊಳ್ಳದೆ ನಿಮ್ಮಲಿರುವ ಹಣದಿಂದ ದೇವಾಲಯದ ದುರಸ್ತಿಗಾಗಿ ಕಾರ್ಯವನ್ನು ಮಾಡಿರಿ” ಎಂದು ಹೇಳಿದನು.
၇ယောရှသည်ယောယဒနှင့်အခြားယဇ်ပုရော ဟိတ်များကိုခေါ်၍``သင်တို့သည်အဘယ် ကြောင့်ဗိမာန်တော်ကိုမပြင်ဘဲနေကြသနည်း။ ယခုအချိန်မှအစပြု၍ သင်တို့သည်မိမိ တို့ရရှိသည့်ငွေကိုသိမ်းဆည်း၍မထားရ ကြ။ ဗိမာန်တော်မွမ်းမံပြင်ဆင်မှုအတွက် ပေးအပ်ရကြမည်'' ဟုဆို၏။-
8 ೮ ಆಗ ಯಾಜಕರು ಅವನಿಗೆ, “ನಾವು ಇನ್ನು ಮುಂದೆ ಜನರಿಂದ ಹಣ ತೆಗೆದುಕೊಳ್ಳುವುದಿಲ್ಲ. ದೇವಾಲಯದ ದುರಸ್ತಿಗಾಗಿ ಕೈಹಾಕುವುದಿಲ್ಲ” ಎಂಬುದಾಗಿ ಮಾತುಕೊಟ್ಟರು.
၈ယဇ်ပုရောဟိတ်တို့သည်လည်းငွေကိုပေး အပ်ရန်နှင့် ဗိမာန်တော်မွမ်းမံပြင်ဆင်မှုကို တာဝန်မယူရန်သဘောတူကြလေသည်။
9 ೯ ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು ಬಂದು ಅದರ ಮುಚ್ಚಳದಲ್ಲಿ ತೂತು ಮಾಡಿ, ಅದನ್ನು ಯೆಹೋವನ ಆಲಯದ ಬಾಗಿಲಿನ ಬಲಗಡೆಯಲ್ಲಿ ಯಜ್ಞವೇದಿಯ ಹತ್ತಿರ ಇಟ್ಟನು. ದ್ವಾರಪಾಲಕರಾದ ಯಾಜಕರು ಯೆಹೋವನ ಆಲಯಕ್ಕೆ ತರಲ್ಪಟ್ಟ ಹಣವನ್ನೆಲ್ಲಾ ಅದರಲ್ಲಿಯೇ ಹಾಕಿಸುತ್ತಿದ್ದರು.
၉ထိုနောက်ယောယဒသည်သေတ္တာတစ်လုံး ကိုယူ၍အဖုံးတွင်အပေါက်ဖောက်ပြီးလျှင် ဗိမာန်တော်အဝင်လမ်းလက်ယာဘက်ရှိယဇ် ပလ္လင်အနီးတွင်ထား၏။ ဗိမာန်တော်အဝင်ဝ တွင်တာဝန်ကျသောယဇ်ပုရောဟိတ်များ သည် ဝတ်ပြုကိုးကွယ်ရန်လာရောက်သူတို့ ပေးလှူသောငွေတို့ကိုသေတ္တာထဲသို့ထည့် ကြ၏။-
10 ೧೦ ಯೆಹೋವನ ಆಲಯದ ಪೆಟ್ಟಿಗೆಯಲ್ಲಿ ಬೇಕಾದಷ್ಟು ಹಣ ಇದೆಯೆಂದು ಕಂಡು ಬಂದಾಗೆಲ್ಲಾ, ರಾಜಲೇಖಕನೂ, ಮಹಾಯಾಜಕನೂ ಬಂದು ಅದನ್ನು ಎಣಿಸಿ ಚೀಲಗಳಲ್ಲಿ ಕಟ್ಟಿ ಇಡುವರು.
၁၀အလှူခံသေတ္တာတွင်ငွေများလာသည့်အခါ တိုင်း ဘုရင့်အတွင်းဝန်နှင့်ယဇ်ပုရောဟိတ် မင်းတို့လာ၍ ငွေကိုထုတ်ယူကာအရည် ကြိုပြီးလျှင်ချိန်တွယ်ကြ၏။-
11 ೧೧ ಅವರು ತೂಕಮಾಡಿ ಎಣಿಸಿದ ಹಣವನ್ನು, ಯೆಹೋವನ ಆಲಯದ ಕೆಲಸವನ್ನು ನಡಿಸುವ ಮುಖ್ಯಸ್ಥರಿಗೆ ಒಪ್ಪಿಸುವರು. ಅವರು ಅದನ್ನು ಅಲ್ಲಿ ಕೆಲಸ ಮಾಡುವ ಬಡಗಿ, ಶಿಲ್ಪಿ, ಮೇಸ್ತ್ರಿ, ಕಲ್ಲುಕುಟಿಕ ಇವರ ಸಂಬಳಕ್ಕಾಗಿಯೂ.
၁၁သူတို့သည်အလေးချိန်အတိအကျကို မှတ်သားထားပြီးလျှင် ငွေကိုဗိမာန်တော် ပြင်ဆင်မှုလုပ်ငန်းကြီးကြပ်သူတို့၏လက် သို့ပေးအပ်ကြ၏။ ကြီးကြပ်သူတို့သည် ထိုငွေကိုလက်သမား၊-
12 ೧೨ ಮರ, ಕೆತ್ತಿದ ಕಲ್ಲುಗಳನ್ನು ಕೊಂಡುಕೊಳ್ಳುವುದಕ್ಕೂ, ಆಲಯವನ್ನು ದುರಸ್ತಿ ಮಾಡಲು ಬೇಕಾದ ಎಲ್ಲಾ ವೆಚ್ಚಕ್ಕಾಗಿಯೂ ಉಪಯೋಗಿಸಿದರು.
၁၂ပန်းရံသမားနှင့်ကျောက်ဆစ်သမားတို့၏ လုပ်ခများအတွက်လည်းကောင်း၊ မွမ်းမံပြင် ဆင်ရာတွင်လိုအပ်သောသစ်သား၊ ကျောက် ဝယ်ယူရန်နှင့်အခြားလိုအပ်သည့်စရိတ် များအတွက်လည်းကောင်းအသုံးပြုကြ၏။-
13 ೧೩ ಯೆಹೋವನ ಆಲಯದೊಳಗೆ ತಂದ ಹಣದಿಂದ ಬೆಳ್ಳಿಯ ಬಟ್ಟಲುಗಳನ್ನು, ಕತ್ತರಿಗಳನ್ನು, ಬೋಗುಣಿಗಳನ್ನು, ತುತ್ತೂರಿಗಳನ್ನೂ, ಬೆಳ್ಳಿ ಬಂಗಾರದ ಪಾತ್ರೆ ಇವುಗಳನ್ನು ಮಾಡುವುದಕ್ಕಾಗಿ ಉಪಯೋಗಿಸುತ್ತಿರಲಿಲ್ಲ.
၁၃ငွေခွက်၊ ငွေဖလား၊ ငွေတံပိုးခရာနှင့်ငွေ မီးညှပ်များပြုလုပ်ရန်အတွက်သော်လည်း ကောင်း ထိုငွေကိုလုံးဝအသုံးမပြုကြ။-
14 ೧೪ ಯೆಹೋವನ ಆಲಯಕ್ಕೆ ತರಲ್ಪಟ್ಟ ಹಣವನ್ನು ದುರಸ್ತಿ ಕಾರ್ಯಮಾಡುವವರ ಸಂಬಳಕ್ಕಾಗಿ ಉಪಯೋಗಿಸುತ್ತಿದ್ದರು.
၁၄အလုပ်သမားခများပေးရန်နှင့်မွမ်းမံ ပြင်ဆင်မှုဆိုင်ရာပစ္စည်းများဝယ်ယူရန် အတွက်သာ ထိုငွေကိုအသုံးပြုကြ၏။-
15 ೧೫ ಕೆಲಸಗಾರರಿಗೆ ಸಂಬಳಕೊಡುವ ಮುಖ್ಯಸ್ಥರು ನಂಬಿಗಸ್ತರಾಗಿದ್ದರಿಂದ ಅವರ ವಶಕ್ಕೆ ಕೊಡಲ್ಪಟ್ಟ ಹಣದ ಲೆಕ್ಕವನ್ನು ಯಾರೂ ಕೇಳುತ್ತಿರಲಿಲ್ಲ.
၁၅လုပ်ငန်းကြီးကြပ်သူတို့သည်လုံးဝယုံ ကြည်စိတ်ချရသူများဖြစ်သဖြင့် သူတို့ အားငွေစာရင်းအင်းများကိုတင်ပြခိုင်း ရန်မလိုချေ။-
16 ೧೬ ಅಪರಾಧ ಪ್ರಾಯಶ್ಚಿತ್ತಕ್ಕಾಗಿಯೂ, ದೋಷಪರಿಹಾರಕ್ಕಾಗಿಯೂ ತರಲ್ಪಟ್ಟ ಹಣವು ಯಾಜಕರ ಪಾಲಿಗೆ ಸೇರುತ್ತಿತ್ತು. ಅದು ಯೆಹೋವನ ಆಲಯಕ್ಕೆ ಸೇರುತ್ತಿರಲಿಲ್ಲ.
၁၆ဒုစရိုက်ဖြေရာပူဇော်သကာနှင့်အပြစ်ဖြေ ရာပူဇော်သကာတို့မှရရှိသည့်ငွေကိုမူ အလှူခံသေတ္တာထဲသို့မထည့်ဘဲယဇ်ပုရော ဟိတ်တို့ယူရကြ၏။
17 ೧೭ ಇದೇ ಕಾಲದಲ್ಲಿ ಅರಾಮ್ಯರ ಅರಸನಾದ ಹಜಾಯೇಲನು ಬಂದು ಗತ್ ಊರಿಗೆ ಮುತ್ತಿಗೆ ಹಾಕಿ, ಅದನ್ನು ಸ್ವಾಧೀನಪಡಿಸಿಕೊಂಡನು. ಅಲ್ಲಿಂದ ಅವನು ಯೆರೂಸಲೇಮಿಗೆ ವಿರೋಧವಾಗಿ ಹೊರಟನು.
၁၇ထိုကာလ၌ရှုရိဘုရင်ဟာဇေလသည် ဂါသ မြို့ကိုတိုက်ခိုက်သိမ်းယူလေသည်။ ထိုနောက် ယေရုရှလင်မြို့ကိုတိုက်ခိုက်ရန်ချီတက် လာသည့်ကာလ၊-
18 ೧೮ ಯೆಹೂದದ ಅರಸನಾದ ಯೆಹೋವಾಷನು ಇದನ್ನು ಕೇಳಿ ತಾನೂ ತನ್ನ ಪೂರ್ವಿಕರಾದ ಯೆಹೋಷಾಫಾಟನೂ, ಯೆಹೋರಾಮನೂ, ಅಹಜ್ಯನೂ, ಯೆಹೂದ ರಾಜರೂ ದೇವಸ್ಥಾನಕ್ಕೆ ಕಾಣಿಕೆಯಾಗಿ ಕೊಟ್ಟ ಒಡವೆಗಳು, ಯೆಹೋವನ ಆಲಯದ ಪ್ರತಿಷ್ಠೆಗಾಗಿ ಅರಮನೆಯ ಭಂಡಾರಗಳಲ್ಲಿದ್ದ ಬಂಗಾರ ಇವುಗಳನ್ನು ತೆಗೆದುಕೊಂಡು ಅರಾಮ್ಯರ ಅರಸನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಯೆರೂಸಲೇಮನ್ನು ಬಿಟ್ಟು ಹೋದನು.
၁၈ယုဒဘုရင်ယောရှသည်မိမိ၏အလျင် အုပ်စိုးခဲ့ကြသောယောရှဖတ်မင်း၊ ယဟောရံ မင်းနှင့်အာခဇိမင်းတို့ထာဝရဘုရားအား ဆက်ကပ်လှူဒါန်းခဲ့သည့်ပူဇော်သကာများနှင့် မိမိကိုယ်တိုင်ပေးလှူထားသည့်ပူဇော်သကာ များကိုလည်းကောင်း၊ ဗိမာန်တော်နှင့်နန်းတော် ဘဏ္ဍာတိုက်များတွင်ရှိသမျှသောရွှေကိုလည်း ကောင်းယူ၍ လက်ဆောင်ပဏ္ဏာအဖြစ်ဟာဇေလ မင်းထံပေးပို့လိုက်၏။ ထိုအခါဟာဇေလ သည်မိမိ၏တပ်မတော်ကို ယေရုရှလင်မြို့ မှရုပ်သိမ်းသွားလေ၏။
19 ೧೯ ಯೆಹೋವಾಷನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
၁၉ယောရှမင်းလုပ်ဆောင်ခဲ့သည့်အခြားအမှု အရာအလုံးစုံတို့ကို ယုဒရာဇဝင်တွင်ရေး ထားသတည်း။
20 ೨೦ ಯೆಹೋವಾಷನ ಉದ್ಯೋಗಸ್ಥರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ “ಸಿಲ್ಲಾ” ಊರಿಗೆ ಇಳಿದು ಹೋಗುವ ಮಾರ್ಗವಾದ “ಮಿಲ್ಲೋ” ಗೃಹದಲ್ಲಿ ಯೆಹೋವಾಷನನ್ನು ಕೊಂದರು.
၂၀ယောရှမင်း၏မှူးမတ်တို့သည်သူ့အားလုပ်ကြံရန် လျှို့ဝှက်ကြံစည်ကြ၏။ ထိုသူတို့အနက်ရှိမတ် ၏သားယောဇကာနှင့်ရှောမေရ၏သားယဟော ဇဗပ်တို့သည် ယေရုရှလင်မြို့အရှေ့ပိုင်းသိလ ရွာသွားရာလမ်းရှိဖို့မြေပေါ်တွင်တည်ဆောက် ထားသောစံနန်း၌သူ့အားလုပ်ကြံကြ၏။ သူ့ အားဒါဝိဒ်မြို့ရှိသင်္ချိုင်းတော်တွင်သင်္ဂြိုဟ်ကြ၏။ ထိုနောက်သူ၏သားတော်အာမဇိသည် ခမည်း တော်၏အရိုက်အရာကိုဆက်ခံ၍နန်းတက် လေသည်။
21 ೨೧ ಅವರಲ್ಲಿ ಶಿಮೆಯಾತನ ಮಗನಾದ ಯೋಜಾಕಾರ್, ಶೋಮೆರನ ಮಗನಾದ ಯೆಹೋಜಾಬಾದ್ ಎಂಬುವವರು ಅವನ ಮೇಲೆ ಬಿದ್ದು ಅವನನ್ನು ಕೊಂದರು. ಅವನ ಜನರು ಅವನ ಶವವನ್ನು ದಾವೀದ ನಗರದೊಳಗೆ ಅವನ ಪೂರ್ವಿಕರ ಸ್ಮಶಾನ ಭೂಮಿಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಅಮಚ್ಯನು ಅರಸನಾದನು.
၂၁