< ಅರಸುಗಳು - ದ್ವಿತೀಯ ಭಾಗ 16 >
1 ೧ ರೆಮಲ್ಯನ ಮಗನಾದ ಪೆಕಹನ ಆಳ್ವಿಕೆಯ ಹದಿನೇಳನೆಯ ವರ್ಷದಲ್ಲಿ ಯೆಹೂದ ರಾಜನಾದ ಯೋತಾಮನ ಮಗ ಆಹಾಜನು ಆಳತೊಡಗಿದನು.
၁ရေမလိသား ပေကာနန်းစံဆယ်ခုနစ်နှစ်တွင် ယုဒရှင်ဘုရင် ယောသံသားအာခတ်သည် အသက် နှစ်ဆယ်ရှိသော် နန်းထိုင်၍၊
2 ೨ ಆಹಾಜನು ಪಟ್ಟಕ್ಕೆ ಬಂದಾಗ ಇಪ್ಪತ್ತು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಇವನು ತನ್ನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿರಲಿಲ್ಲ. ತನ್ನ ಪೂರ್ವಿಕನಾದ ದಾವೀದನ ಮಾರ್ಗವನ್ನು ಬಿಟ್ಟು ಇಸ್ರಾಯೇಲರ ಮಾರ್ಗವನ್ನು ಹಿಡಿದನು.
၂ယေရုရှလင်မြို့၌ ဆယ်ခြောက်နှစ်စိုးစံလေ၏။ ထိုမင်းသည် အဘဒါဝိဒ်ကဲ့သို့မကျင့်၊ ထာဝရဘုရား ရှေ့တော်၌ တရားသော အမှုကို မပြု၊
3 ೩ ಇದಲ್ಲದೆ, ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದುದಲ್ಲದೆ, ಯೆಹೋವನು ಇಸ್ರಾಯೇಲರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯವಾದ ಪೂಜಾಕಾರ್ಯಗಳನ್ನು ಅನುಸರಿಸಿ ತನ್ನ ಮಗನನ್ನು ಅಗ್ನಿಗೆ ಬಲಿಕೊಟ್ಟನು.
၃ဣသရေလရှင်ဘုရင်တို့ လိုက်သောလမ်းသို့ လိုက်၍၊ ထာဝရဘုရားသည် ဣသရေလ အမျိုးသားတို့ ရှေ့မှ၊ နှင်ထုတ်တော်မူသော တပါးအမျိုးသားတို့၏ ရွံရှာဘွယ် ထုံးစံအတိုင်း၊ မိမိသားကို မီးဖြင့်ပူဇော်၏။
4 ೪ ಪೂಜಾಸ್ಥಳಗಳಲ್ಲಿಯೂ, ದಿನ್ನೆಗಳ ಮೇಲೆಯೂ, ಎಲ್ಲಾ ಹಸಿರು ಮರಗಳ ಕೆಳಗಡೆಯೂ ಯಜ್ಞಧೂಪಗಳನ್ನು ಸಮರ್ಪಿಸಿದನು.
၄မြင့်သောအရပ်၊ တောင်ပေါ်၊ သစ်ပင်အောက် တို့၌ပူဇော်၍ နံ့သာပေါင်းကို မီးရှို့တတ်၏။
5 ೫ ಇವನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ್, ಇಸ್ರಾಯೇಲರ ಅರಸನೂ, ರೆಮಲ್ಯನ ಮಗನೂ ಆದ ಪೆಕಹ ಎಂಬುವವರು ಒಟ್ಟಿಗೆ ಸೇರಿ ಯೆರೂಸಲೇಮಿಗೆ ವಿರೋಧವಾಗಿ ಬಂದು ಆಹಾಜನನ್ನು ಸುತ್ತಿಕೊಂಡರು. ಆದರೆ ಅವನನ್ನು ಜಯಿಸುವುದು ಅವರಿಂದ ಆಗಲಿಲ್ಲ.
၅ထိုအခါ ရှုရိရှင်ဘုရင် ရေဇိန်နှင့် ဣသရေလ ရှင်ဘုရင် ရေမလိသားပေကာသည် ယေရုရှလင်မြို့သို့ စစ်ချီ၍ အာခတ်မင်းကို ဝိုင်းထားသော်လည်း မနိုင်ရ။
6 ೬ ಇದೇ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನನು ಏಲತ್ ಪಟ್ಟಣವನ್ನು ಅರಾಮ್ ರಾಜ್ಯಕ್ಕೆ ಸೇರಿಸಿಕೊಂಡು ಅದರಲ್ಲಿದ್ದ ಯೆಹೂದ್ಯರನ್ನೆಲ್ಲಾ ಓಡಿಸಿದನು. ಎದೋಮ್ಯರು ಬಂದು ಅಲ್ಲಿ ವಾಸಿಸತೊಡಗಿದರು. ಅವರು ಇಂದಿನವರೆಗೂ ಅಲ್ಲೇ ವಾಸವಾಗಿದ್ದಾರೆ.
၆သို့ရာတွင်၊ ရှုရိရှင်ဘုရင် ရေဇိန်သည် ဧလတ်မြို့ ကို ရှုရိနိုင်ငံ သို့သွင်းပြန်၍၊ ယုဒလူတို့ကို နှင်ထုတ်သဖြင့်၊ ရှုရိလူတို့သည်လာ၍ ယနေ့တိုင်အောင် ဧလတ်မြို့၌ နေကြ၏။
7 ೭ ಆಹಾಜನು ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ನಿನ್ನ ದಾಸನೂ, ಮಗನೂ ಆಗಿದ್ದೇನೆ. ನೀನು ಬಂದು ನನ್ನನ್ನು, ನನಗೆ ವಿರೋಧವಾಗಿ ಎದ್ದಿರುವ ಅರಾಮ್ಯರ ಮತ್ತು ಇಸ್ರಾಯೇಲರ ಅರಸುಗಳ ಕೈಗೆ ಸಿಕ್ಕದಂತೆ ತಪ್ಪಿಸು” ಎಂದು ಕೇಳಿಕೊಂಡನು.
၇ထိုကြောင့်အာခတ်သည် အာရှုရိရှင်ဘုရင် တိဂလတ်ပိလေသာထံသို့ သံတမန်ကို စေလွှတ်၍၊ ကျွန်ုပ်သည် ကိုယ်တော်သား၊ ကိုယ်တော်ကျွန်ဖြစ်ပါ၏။ လာပါ။ ကျွန်ုပ်ကို ရန်ဘက်ပြုသော ရှုရိရှင်ဘုရင်နှင့် ဣသရေလ ရှင်ဘုရင်လက်မှ ကယ်ယူပါဟု တောင်းပန်၏။
8 ೮ ಇದಲ್ಲದೆ, ಆಹಾಜನು ಯೆಹೋವನ ಆಲಯದಲ್ಲಿಯೂ, ಅರಮನೆಯ ಭಂಡಾರದಲ್ಲಿಯೂ ಇದ್ದ, ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅಶ್ಶೂರದ ಅರಸನಿಗೆ ಕಾಣಿಕೆಯಾಗಿ ಕಳುಹಿಸಿದನು.
၈တဖန်ဗိမာန်တော်၌၎င်း၊ နန်းတော်ဘဏ္ဍာတိုက် ၌၎င်း ရှိသော ရွှေငွေကို ယူ၍ အာရှုရိရှင်ဘုရင်ထံသို့ လက်ဆောင်ပေးလိုက်လေ၏။
9 ೯ ಅಶ್ಶೂರದ ಅರಸನು ಇವನ ಮಾತಿಗೆ ಒಪ್ಪಿ, ದಮಸ್ಕ ಪಟ್ಟಣಕ್ಕೆ ವಿರೋಧವಾಗಿ ಹೋಗಿ ರೆಚೀನನನ್ನು ಕೊಂದು ನಿವಾಸಿಗಳನ್ನು ಸೆರೆಹಿಡಿದು, ಕೀರ್ ಪ್ರಾಂತ್ಯಕ್ಕೆ ತಂದನು.
၉အာရှုရိရှင်ဘုရင်သည် နားထောင်၍ ဒမာ သက်မြို့သို့ စစ်ချီ၍ တိုက်ယူပြီးလဆင်၊ ပြည်သားတို့ကို ကိရမြို့သို့ သိမ်းသွား၏။ ရေဇိန်မင်းကိုလည်း သတ်၏။
10 ೧೦ ಅರಸನಾದ ಆಹಾಜನು ಅಶ್ಶೂರದ ಅರಸನಾದ ತಿಗ್ಲತ್ಪಿಲೆಸೆರನ ದರ್ಶನಕ್ಕಾಗಿ ದಮಸ್ಕಕ್ಕೆ ಹೋದನು. ಅವನು ಅಲ್ಲಿದ್ದ ಯಜ್ಞವೇದಿಯನ್ನು ಕಂಡು, ಅದರ ಒಂದು ಪ್ರತಿಮೆಯನ್ನೂ, ಅದರ ಎಲ್ಲಾ ಅಲಂಕಾರದ ನಕ್ಷೆಯನ್ನೂ ಬರೆಯಿಸಿ, ಯಾಜಕನಾದ ಊರೀಯನಿಗೆ ಕಳುಹಿಸಿದನು.
၁၀အာခတ်မင်းကြီးသည် အာရှုရိရှင်ဘုရင်ကို ခရီး ဦးကြိုပြုခြင်းငှါ ဒမာသက်မြို့သို့သွား၏။ ထိုမြို့မှာရှိသော ယဇ်ပလ္လင်ကိုမြင်လျှင်၊ ပလ္လင်ပုံ၊ အတိုင်းအရှည်၊ တန်ဆာ ရှိသမျှကိုရေး၍ ယဇ်ပုရောဟိတ်ဥရိယထံသို့ ပေးလိုက်၏။
11 ೧೧ ಅರಸನಾದ ಆಹಾಜನು ದಮಸ್ಕದಿಂದ ಬರುವಷ್ಟರಲ್ಲಿ ಊರೀಯನು ಅರಸನಿಂದ ತನಗೆ ಬಂದ ಮಾದರಿಯ ಪ್ರಕಾರ ಒಂದು ಯಜ್ಞವೇದಿಯನ್ನು ಮಾಡಿಸಿಟ್ಟಿದ್ದನು.
၁၁ထိုသို့ ဒမာသက်မြို့မှ အာခတ်မင်းပေးလိုက် သမျှအတိုင်း၊ ယဇ်ပုရောဟိတ်ဥရိယသည် အာခတ်မင်း မရောက်မှီ လုပ်နှင့်ပြီ။
12 ೧೨ ಅರಸನು ದಮಸ್ಕದಿಂದ ಹಿಂತಿರುಗಿ ಬಂದ ಮೇಲೆ ಆ ಯಜ್ಞವೇದಿಯನ್ನು ಕಂಡು, ಸಮೀಪಕ್ಕೆ ಹೋಗಿ, ಅದರ ಮೇಲೆ ಬಲಿಗಳನ್ನು ಅರ್ಪಿಸಿದನು.
၁၂ရှင်ဘုရင်သည် ဒမာသက်မြို့မှရောက်လာသော အခါ၊ ထိုယဇ်ပလ္လင်ကို မြင်၍ ချဉ်းကပ်သဖြင့်၊
13 ೧೩ ತಾನು ತಂದ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯನೈವೇದ್ಯ ಇವುಗಳನ್ನು ಸಮರ್ಪಿಸಿ ಸಮಾಧಾನಯಜ್ಞಕ್ಕಾಗಿ ವಧಿಸಿದ ಪಶುಗಳ ರಕ್ತವನ್ನು ಅದರ ಮೇಲೆ ಚಿಮುಕಿಸಿದನು.
၁၃မီးရှို့ရာယဇ်နှင့် ဘောဇဉ်ပူဇော်သက္ကာကို မီးရှို့၏။ သွန်းလောင်းရာ ပူဇော်သက္ကာ ကိုလည်း သွန်းလောင်း၏။ မိဿဟာယယဇ်အသွေးကိုလည်း ယဇ် ပလ္လင်ပေါ်မှာဖြန်းလေ၏။
14 ೧೪ ಇದಲ್ಲದೆ, ಯೆಹೋವನ ಆಲಯಕ್ಕೂ, ತನ್ನ ವೇದಿಗೂ ಮಧ್ಯದಲ್ಲಿದ್ದು ಆ ವರೆಗೂ ಯೆಹೋವನ ಸೇವೆಗೆ ಉಪಯೋಗಿಸಲ್ಪಡುತ್ತಿದ್ದ ತಾಮ್ರ ಯಜ್ಞವೇದಿಯನ್ನೂ ಆಲಯದ ಎದುರಿನಿಂದ ತೆಗೆಯಿಸಿ, ತನ್ನ ಯಜ್ಞವೇದಿಯ ಉತ್ತರ ದಿಕ್ಕಿನಲ್ಲಿಡಿಸಿದನು.
၁၄ထာဝရဘုရားရှေ့တော်၌ရှိသော ကြေးဝါယဇ် ပလ္လင်ကို ဗိမာန်တော်ရှေ့၊ ယဇ်ပလ္လင်ကြီးနှင့် ဗိမာန်တော် စပ်ကြားအရပ်မှ ရွေ့၍ ယဇ်ပလ္လင်ကြီး မြောက်ဘက်၌ ထား၏။
15 ೧೫ ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ, “ಉದಯಕಾಲದಲ್ಲಿ ಸರ್ವಾಂಗಹೋಮವನ್ನೂ, ಸಾಯಂಕಾಲದಲ್ಲಿ ಧಾನ್ಯನೈವೇದ್ಯವನ್ನೂ, ಅರಸನು ತರುವ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ ಇವುಗಳನ್ನೂ, ಜನರು ತರುವ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯ ಇವುಗಳನ್ನೂ ಈ ಮಹಾವೇದಿಯ ಮೇಲೆ ಸಮರ್ಪಿಸಬೇಕು ಮತ್ತು ಸರ್ವಾಂಗಹೋಮಯಜ್ಞಗಳಿಗಾಗಿ ವಧಿಸುವ ಪಶುಗಳ ರಕ್ತವನ್ನು ಇದರ ಮೇಲೆಯೇ ಚಿಮುಕಿಸಬೇಕು. ತಾಮ್ರ ಯಜ್ಞವೇದಿಯನ್ನು ಕುರಿತಾಗಿ ನಾನೇ ಆಲೋಚಿಸಿ ನೋಡಿಕೊಳ್ಳುವೆನು” ಎಂದು ಹೇಳಿದನು.
၁၅တဖန်ယဇ်ပုရောဟိတ်ဥရိယကို မှာထားသည် ကား၊ နံနက် မီးရှို့ရာယဇ်နှင့် ညဦးယံဘောဇဉ် ပူဇော် သက္ကာ၊ ရှင်ဘုရင်မီးရှို့ရာယဇ်နှင့် ဘောဇဉ်ပူဇော်သက္ကာ၊ သွန်းလောင်းရာပူဇော်သက္ကာတို့ကို ယဇ်ပလ္လင်ကြီးပေါ်မှာ မီးရှို့လော့။ မီးရှို့ရာယဇ်အစရှိသော ယဇ်မျိုးအသွေးကို လည်း ထိုပလ္လင်ပေါ်မှာဖြန်းလော့။ ကြေးဝါယဇ်ပလ္လင် သည် ငါမေးမြန်းစရာဘို့ ရှိရမည်ဟု၊
16 ೧೬ ಯಾಜಕನಾದ ಊರೀಯನು ಅರಸನಾದ ಆಹಾಜನು ಹೇಳಿದಂತೆಯೇ ಮಾಡಿದನು.
၁၆အာခက်မင်းကြီးမှာထားသမျှအတိုင်း ယဇ် ပုရောဟိတ်ဥရိယ ပြု၏။
17 ೧೭ ಅರಸನಾದ ಆಹಾಜನು ಅಶ್ಶೂರದ ಅರಸನ ನಿಮಿತ್ತವಾಗಿ ಯಜ್ಞವೇದಿಗಳ ಪಟ್ಟಿಗಳನ್ನು ಕತ್ತರಿಸಿದನು, ಅವುಗಳ ಮೇಲಿದ್ದ ಗಂಗಾಳಗಳನ್ನು ತೆಗೆದಿಟ್ಟನು. ಕಡಲೆನಿಸುವ ಪಾತ್ರೆಯನ್ನು ತಾಮ್ರದ ಹೋರಿಗಳ ಮೇಲಣಿಂದ ಇಳಿಸಿ ಕಲ್ಲುಕಟ್ಟೆಗಳ ಮೇಲೆ ಇಡಿಸಿದನು.
၁၇အာခတ်မင်းကြီးသည် ကြေးဝါခုံတန်ဆာတို့ကို ပယ်၍ အင်တုံကို လည်းရွေ့၏။ ကြေးဝါရေကန်ကိုလည်း ကြေးဝါနွားတို့အပေါ်ကချ၍ ကျောက်ခင်းပေါ်မှာ တင်ထား၏။
18 ೧೮ ಯೆಹೋವನ ಆಲಯದ ಪ್ರಾಕಾರದೊಳಗೆ ಸಬ್ಬತ್ ದಿನದ ಆರಾಧನೆಗಾಗಿ ರಾಜರಿಗಾಗಿ ಕಟ್ಟಲ್ಪಟ್ಟಿದ್ದ ಮಂಟಪವನ್ನು ಹಾಗೂ ಅರಮನೆಯಿಂದ ದೇವಸ್ಥಾನಕ್ಕೆ ಹೋಗುವ ಹೊರಗಿನ ಬಾಗಿಲನ್ನೂ ಬದಲಾಯಿಸಿದವನು ಅಶ್ಶೂರದ ಅರಸನಾದ ಈ ಆಹಾಜನೇ.
၁၈ဗိမာန်တော်၌ ဥပုသ်စောင့်စရာဘို့ ဆောက် သောမဏ္ဍပ်ကို၎င်း၊ ရှင်ဘုရင်တက်ရာစောင်းတန်းကို၎င်း၊ အာရှုရိရှင်ဘုရင်ကြောင့် ပယ်၏။
19 ೧೯ ಆಹಾಜನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಯೆಹೂದ್ಯರ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.
၁၉အာခတ်ပြုမူသော အမှုအရာကြွင်းလေသမျှ တို့သည် ယုဒရာဇဝင်၌ရေးထားလျက်ရှိ၏။
20 ೨೦ ಆಹಾಜನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದನ ಪಟ್ಟಣದೊಳಗೆ ಅವನ ಕುಟುಂಬ ಸ್ಮಶಾನದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಹಿಜ್ಕೀಯನು ಅರಸನಾದನು.
၂၀အာခတ်သည်ဘိုးဘေးတို့နှင့် အိပ်ပျော်၍၊ သူတို့ နှင့်အတူ ဒါဝိဒ်မြို့၌ သင်္ဂြိုဟ်ခြင်းကိုခံလေ၏။ သားတော် ဟေဇကိသည် ခမည်းတော်အရာ၌ နန်းထိုင်၏။