< ಅರಸುಗಳು - ದ್ವಿತೀಯ ಭಾಗ 16 >

1 ರೆಮಲ್ಯನ ಮಗನಾದ ಪೆಕಹನ ಆಳ್ವಿಕೆಯ ಹದಿನೇಳನೆಯ ವರ್ಷದಲ್ಲಿ ಯೆಹೂದ ರಾಜನಾದ ಯೋತಾಮನ ಮಗ ಆಹಾಜನು ಆಳತೊಡಗಿದನು.
और रमलियाह के बेटे फ़िक़ह के सत्तरहवें बरस से शाह — ए — यहूदाह यूताम का बेटा आख़ज़ सल्तनत करने लगा।
2 ಆಹಾಜನು ಪಟ್ಟಕ್ಕೆ ಬಂದಾಗ ಇಪ್ಪತ್ತು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಇವನು ತನ್ನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿರಲಿಲ್ಲ. ತನ್ನ ಪೂರ್ವಿಕನಾದ ದಾವೀದನ ಮಾರ್ಗವನ್ನು ಬಿಟ್ಟು ಇಸ್ರಾಯೇಲರ ಮಾರ್ಗವನ್ನು ಹಿಡಿದನು.
जब आख़ज़ सल्तनत करने लगा तो बीस बरस का था, और उसने सोलह बरस येरूशलेम में बादशाही की। और उसने वह काम न किया जो ख़ुदावन्द उसके ख़ुदा की नज़र में सही है, जैसा उसके बाप दाऊद ने किया था।
3 ಇದಲ್ಲದೆ, ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದುದಲ್ಲದೆ, ಯೆಹೋವನು ಇಸ್ರಾಯೇಲರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯವಾದ ಪೂಜಾಕಾರ್ಯಗಳನ್ನು ಅನುಸರಿಸಿ ತನ್ನ ಮಗನನ್ನು ಅಗ್ನಿಗೆ ಬಲಿಕೊಟ್ಟನು.
बल्कि वह इस्राईल के बादशाहों के रास्ते पर चला और उसने उन क़ौमों के नफ़रती दस्तूर के मुताबिक़, जिनको ख़ुदावन्द ने बनी — इस्राईल के सामने से ख़ारिज कर दिया था, अपने बेटे को भी आग में चलवाया।
4 ಪೂಜಾಸ್ಥಳಗಳಲ್ಲಿಯೂ, ದಿನ್ನೆಗಳ ಮೇಲೆಯೂ, ಎಲ್ಲಾ ಹಸಿರು ಮರಗಳ ಕೆಳಗಡೆಯೂ ಯಜ್ಞಧೂಪಗಳನ್ನು ಸಮರ್ಪಿಸಿದನು.
और ऊँचे मक़ामों और टीलों पर और हर एक हरे दरख़्त के नीचे उसने क़ुर्बानी की और ख़ुशबू जलाया।
5 ಇವನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ್, ಇಸ್ರಾಯೇಲರ ಅರಸನೂ, ರೆಮಲ್ಯನ ಮಗನೂ ಆದ ಪೆಕಹ ಎಂಬುವವರು ಒಟ್ಟಿಗೆ ಸೇರಿ ಯೆರೂಸಲೇಮಿಗೆ ವಿರೋಧವಾಗಿ ಬಂದು ಆಹಾಜನನ್ನು ಸುತ್ತಿಕೊಂಡರು. ಆದರೆ ಅವನನ್ನು ಜಯಿಸುವುದು ಅವರಿಂದ ಆಗಲಿಲ್ಲ.
तब शाह — ए — अराम रज़ीन और शाह — ए — इस्राईल रमलियाह के बेटे फ़िक़ह ने लड़ने को येरूशलेम पर चढ़ाई की, और उन्होंने आख़ज़ को घेर लिया लेकिन उस पर ग़ालिब न आ सके।
6 ಇದೇ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನನು ಏಲತ್ ಪಟ್ಟಣವನ್ನು ಅರಾಮ್ ರಾಜ್ಯಕ್ಕೆ ಸೇರಿಸಿಕೊಂಡು ಅದರಲ್ಲಿದ್ದ ಯೆಹೂದ್ಯರನ್ನೆಲ್ಲಾ ಓಡಿಸಿದನು. ಎದೋಮ್ಯರು ಬಂದು ಅಲ್ಲಿ ವಾಸಿಸತೊಡಗಿದರು. ಅವರು ಇಂದಿನವರೆಗೂ ಅಲ್ಲೇ ವಾಸವಾಗಿದ್ದಾರೆ.
उस वक़्त शाह — ए — अराम रज़ीन ने ऐलात को फ़तह करके फिर अराम में शामिल कर लिया, और यहूदियों को ऐलात से निकाल दिया; और अरामी ऐलात में आकर वहाँ बस गए जैसा आज तक है।
7 ಆಹಾಜನು ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ನಿನ್ನ ದಾಸನೂ, ಮಗನೂ ಆಗಿದ್ದೇನೆ. ನೀನು ಬಂದು ನನ್ನನ್ನು, ನನಗೆ ವಿರೋಧವಾಗಿ ಎದ್ದಿರುವ ಅರಾಮ್ಯರ ಮತ್ತು ಇಸ್ರಾಯೇಲರ ಅರಸುಗಳ ಕೈಗೆ ಸಿಕ್ಕದಂತೆ ತಪ್ಪಿಸು” ಎಂದು ಕೇಳಿಕೊಂಡನು.
इसलिए आख़ज़ ने शाह — ए — असूर तिगलत पिलासर के पास क़ासिद रवाना किए और कहला भेजा, “मैं तेरा ख़ादिम और बेटा हूँ, इसलिए तू आ और मुझ को शाह — ए — अराम के हाथ से और शाह — ए — इस्राईल के हाथ से जो मुझ पर चढ़ आए हैं, रिहाई दे।”
8 ಇದಲ್ಲದೆ, ಆಹಾಜನು ಯೆಹೋವನ ಆಲಯದಲ್ಲಿಯೂ, ಅರಮನೆಯ ಭಂಡಾರದಲ್ಲಿಯೂ ಇದ್ದ, ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅಶ್ಶೂರದ ಅರಸನಿಗೆ ಕಾಣಿಕೆಯಾಗಿ ಕಳುಹಿಸಿದನು.
और आख़ज़ ने उस चाँदी और सोने को जो ख़ुदावन्द के घर में और शाही महल के ख़ज़ानों में मिला, लेकर शाह — ए — असूर के लिए नज़राना भेजा।
9 ಅಶ್ಶೂರದ ಅರಸನು ಇವನ ಮಾತಿಗೆ ಒಪ್ಪಿ, ದಮಸ್ಕ ಪಟ್ಟಣಕ್ಕೆ ವಿರೋಧವಾಗಿ ಹೋಗಿ ರೆಚೀನನನ್ನು ಕೊಂದು ನಿವಾಸಿಗಳನ್ನು ಸೆರೆಹಿಡಿದು, ಕೀರ್ ಪ್ರಾಂತ್ಯಕ್ಕೆ ತಂದನು.
और शाह — ए — असूर ने उसकी बात मानी, चुनॉचे शाह — ए — असूर ने दमिश्क़ पर लश्करकशी की और उसे ले लिया, और वहाँ के लोगों को क़ैद करके क़ीर में ले गया और रज़ीन को क़त्ल किया।
10 ೧೦ ಅರಸನಾದ ಆಹಾಜನು ಅಶ್ಶೂರದ ಅರಸನಾದ ತಿಗ್ಲತ್ಪಿಲೆಸೆರನ ದರ್ಶನಕ್ಕಾಗಿ ದಮಸ್ಕಕ್ಕೆ ಹೋದನು. ಅವನು ಅಲ್ಲಿದ್ದ ಯಜ್ಞವೇದಿಯನ್ನು ಕಂಡು, ಅದರ ಒಂದು ಪ್ರತಿಮೆಯನ್ನೂ, ಅದರ ಎಲ್ಲಾ ಅಲಂಕಾರದ ನಕ್ಷೆಯನ್ನೂ ಬರೆಯಿಸಿ, ಯಾಜಕನಾದ ಊರೀಯನಿಗೆ ಕಳುಹಿಸಿದನು.
और आख़ज़ बादशाह, शाह — ए — असूर तिगलत पिलासर की मुलाक़ात के लिए दमिश्क़ को गया, और उस मज़बह को देखा जो दमिश्क़ में था; और आख़ज़ बादशाह ने उस मज़बह का नक़्शा और उसकी सारी सन'अत का नमूना ऊरिय्याह काहिन के पास भेजा।
11 ೧೧ ಅರಸನಾದ ಆಹಾಜನು ದಮಸ್ಕದಿಂದ ಬರುವಷ್ಟರಲ್ಲಿ ಊರೀಯನು ಅರಸನಿಂದ ತನಗೆ ಬಂದ ಮಾದರಿಯ ಪ್ರಕಾರ ಒಂದು ಯಜ್ಞವೇದಿಯನ್ನು ಮಾಡಿಸಿಟ್ಟಿದ್ದನು.
और ऊरियाह काहिन ने ठीक उसी नमूने के मुताबिक़ जिसे आख़ज़ ने दमिश्क़ से भेजा था, एक मज़बह बनाया। और आख़ज़ बादशाह के दमिश्क़ से लौटने तक ऊरिय्याह काहिन ने उसे तैयार कर दिया।
12 ೧೨ ಅರಸನು ದಮಸ್ಕದಿಂದ ಹಿಂತಿರುಗಿ ಬಂದ ಮೇಲೆ ಆ ಯಜ್ಞವೇದಿಯನ್ನು ಕಂಡು, ಸಮೀಪಕ್ಕೆ ಹೋಗಿ, ಅದರ ಮೇಲೆ ಬಲಿಗಳನ್ನು ಅರ್ಪಿಸಿದನು.
जब बादशाह दमिश्क़ से लौट आया तो बादशाह ने मज़बह को देखा, और बादशाह मज़बह के पास गया और उस पर क़ुर्बानी पेश की।
13 ೧೩ ತಾನು ತಂದ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯನೈವೇದ್ಯ ಇವುಗಳನ್ನು ಸಮರ್ಪಿಸಿ ಸಮಾಧಾನಯಜ್ಞಕ್ಕಾಗಿ ವಧಿಸಿದ ಪಶುಗಳ ರಕ್ತವನ್ನು ಅದರ ಮೇಲೆ ಚಿಮುಕಿಸಿದನು.
उसने उस मज़बह पर अपनी सोख़्तनी क़ुर्बानी और अपनी नज़्र की क़ुर्बानी जलाई, और अपना तपावन तपाया और अपनी सलामती के ज़बीहों का ख़ून उसी मज़बह पर छिड़का।
14 ೧೪ ಇದಲ್ಲದೆ, ಯೆಹೋವನ ಆಲಯಕ್ಕೂ, ತನ್ನ ವೇದಿಗೂ ಮಧ್ಯದಲ್ಲಿದ್ದು ಆ ವರೆಗೂ ಯೆಹೋವನ ಸೇವೆಗೆ ಉಪಯೋಗಿಸಲ್ಪಡುತ್ತಿದ್ದ ತಾಮ್ರ ಯಜ್ಞವೇದಿಯನ್ನೂ ಆಲಯದ ಎದುರಿನಿಂದ ತೆಗೆಯಿಸಿ, ತನ್ನ ಯಜ್ಞವೇದಿಯ ಉತ್ತರ ದಿಕ್ಕಿನಲ್ಲಿಡಿಸಿದನು.
और उसने पीतल का वह मज़बह जो ख़ुदावन्द के आगे था, हैकल के सामने से या'नी अपने मज़बह और ख़ुदावन्द की हैकल के बीच में से, उठवाकर उसे अपने मज़बह के उत्तर की तरफ़ रखवा दिया।
15 ೧೫ ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ, “ಉದಯಕಾಲದಲ್ಲಿ ಸರ್ವಾಂಗಹೋಮವನ್ನೂ, ಸಾಯಂಕಾಲದಲ್ಲಿ ಧಾನ್ಯನೈವೇದ್ಯವನ್ನೂ, ಅರಸನು ತರುವ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ ಇವುಗಳನ್ನೂ, ಜನರು ತರುವ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯ ಇವುಗಳನ್ನೂ ಈ ಮಹಾವೇದಿಯ ಮೇಲೆ ಸಮರ್ಪಿಸಬೇಕು ಮತ್ತು ಸರ್ವಾಂಗಹೋಮಯಜ್ಞಗಳಿಗಾಗಿ ವಧಿಸುವ ಪಶುಗಳ ರಕ್ತವನ್ನು ಇದರ ಮೇಲೆಯೇ ಚಿಮುಕಿಸಬೇಕು. ತಾಮ್ರ ಯಜ್ಞವೇದಿಯನ್ನು ಕುರಿತಾಗಿ ನಾನೇ ಆಲೋಚಿಸಿ ನೋಡಿಕೊಳ್ಳುವೆನು” ಎಂದು ಹೇಳಿದನು.
और आख़ज़ बादशाह ने ऊरिय्याह काहिन को हुक्म दिया, “बड़े मज़बह पर सुबह की सोख़्तनी कु़र्बानी, और शाम की नज़्र की कु़र्बानी, और बादशाह की सोख़्तनी कु़र्बानी, और उसकी नज़्र की कु़र्बानी, और ममलुकत के सब लोगों की सोख़्तनी कु़र्बानी, और उनकी नज़्र की कु़बानी, और उनका तपावन चढ़ाया कर, और सोख़्तनी क़ुर्बानी का सारा खू़न, और ज़बीहे का सारा ख़ून उस पर छिड़क कर; और पीतल का वह मज़बह मेरे सवाल करने के लिए रहेगा।”
16 ೧೬ ಯಾಜಕನಾದ ಊರೀಯನು ಅರಸನಾದ ಆಹಾಜನು ಹೇಳಿದಂತೆಯೇ ಮಾಡಿದನು.
इसलिए जो कुछ आख़ज़ बादशाह ने फ़रमाया, ऊरिय्याह काहिन ने वह सब किया।
17 ೧೭ ಅರಸನಾದ ಆಹಾಜನು ಅಶ್ಶೂರದ ಅರಸನ ನಿಮಿತ್ತವಾಗಿ ಯಜ್ಞವೇದಿಗಳ ಪಟ್ಟಿಗಳನ್ನು ಕತ್ತರಿಸಿದನು, ಅವುಗಳ ಮೇಲಿದ್ದ ಗಂಗಾಳಗಳನ್ನು ತೆಗೆದಿಟ್ಟನು. ಕಡಲೆನಿಸುವ ಪಾತ್ರೆಯನ್ನು ತಾಮ್ರದ ಹೋರಿಗಳ ಮೇಲಣಿಂದ ಇಳಿಸಿ ಕಲ್ಲುಕಟ್ಟೆಗಳ ಮೇಲೆ ಇಡಿಸಿದನು.
और आख़ज़ बादशाह ने कुर्सियों के किनारों को काट डाला, और उनके ऊपर के हौज़ को उनसे जुदा कर दिया; और उस बड़े हौज़ को पीतल के बैलों पर से जो उसके नीचे थे उतार कर पत्थरों के फ़र्श पर रख दिया।
18 ೧೮ ಯೆಹೋವನ ಆಲಯದ ಪ್ರಾಕಾರದೊಳಗೆ ಸಬ್ಬತ್ ದಿನದ ಆರಾಧನೆಗಾಗಿ ರಾಜರಿಗಾಗಿ ಕಟ್ಟಲ್ಪಟ್ಟಿದ್ದ ಮಂಟಪವನ್ನು ಹಾಗೂ ಅರಮನೆಯಿಂದ ದೇವಸ್ಥಾನಕ್ಕೆ ಹೋಗುವ ಹೊರಗಿನ ಬಾಗಿಲನ್ನೂ ಬದಲಾಯಿಸಿದವನು ಅಶ್ಶೂರದ ಅರಸನಾದ ಈ ಆಹಾಜನೇ.
और उसने उस रास्ते को जिस पर छत थी, और जिसे उन्होंने सबत के दिन के लिए हैकल के अन्दर बनाया था, और बादशाह के आने के रास्ते को जो बाहर था, शाह — ए — असूर की वजह से ख़ुदावन्द के घर में शामिल कर दिया'।
19 ೧೯ ಆಹಾಜನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಯೆಹೂದ್ಯರ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.
और आख़ज़ के बाक़ी काम और सब कुछ जो उसने किया, इसलिए क्या वह यहूदाह के बादशाहों की तवारीख़ की किताब में लिखा नहीं?
20 ೨೦ ಆಹಾಜನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದನ ಪಟ್ಟಣದೊಳಗೆ ಅವನ ಕುಟುಂಬ ಸ್ಮಶಾನದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಹಿಜ್ಕೀಯನು ಅರಸನಾದನು.
और आख़ज़ अपने बाप दादा के साथ सो गया, और दाऊद के शहर में अपने बाप — दादा के साथ दफ़न हुआ; और उसका बेटा हिज़क़ियाह उसकी जगह बादशाह हुआ।

< ಅರಸುಗಳು - ದ್ವಿತೀಯ ಭಾಗ 16 >