< ಅರಸುಗಳು - ದ್ವಿತೀಯ ಭಾಗ 17 >

1 ಯೆಹೂದದ ಅರಸನಾದ ಆಹಾಜನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಏಲನ ಮಗನಾದ ಹೋಶೇಯನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಒಂಭತ್ತು ವರ್ಷ ಆಳಿದನು.
यहूदाका राजा आहाजको बाह्रौं वर्षमा एलाहका छोरा होशियाले राज्‍य सुरु गरे । तिनले सामरियामा बसेर इस्राएलमाथि नौ वर्ष राज्य गरे ।
2 ಹೋಶೇಯನು ತನ್ನ ಪೂರ್ವಿಕರಾದ ಇಸ್ರಾಯೇಲರ ಅರಸರಷ್ಟು ಕೆಟ್ಟವನಾಗಿರಲಿಲ್ಲವಾದರೂ, ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.
परमप्रभुको दृष्‍टिमा जे खराब थियो तिनले त्यही गरे, तापनि तिनीभन्दा अगिका इस्राएलका राजाहरूले जस्तै भने होइन ।
3 ಅಶ್ಶೂರದ ಅರಸನಾದ ಶಲ್ಮನೆಸರನು ಹೋಶೇಯನಿಗೆ ವಿರುದ್ಧವಾಗಿ ಬಂದಾಗ, ಹೋಶೇಯನು ಅವನಿಗೆ ಅಧೀನನಾಗಿ ಕಪ್ಪಕೊಡುವವನಾದನು.
अश्शूरका राजा शलमनेशेरले होशियालाई आक्रमण गरे र उनी तिनका सेवक बने र तिनलाई कर तिरे ।
4 ಕೆಲವು ವರ್ಷಗಳಾದ ನಂತರ ಅರಸನಾದ ಹೋಶೇಯನು ಪ್ರತಿವರ್ಷವೂ ಕೊಡಬೇಕಾದ ಕಪ್ಪವನ್ನು ಕೊಡದೆಹೋದುದರಿಂದಲೂ, ಐಗುಪ್ತದ ಅರಸನಾದ ಸೋ ಎಂಬುವವನ ಬಳಿಗೆ ರಾಯಭಾರಿಗಳನ್ನು ಕಳುಹಿಸಿದ್ದರಿಂದಲೂ ಅಶ್ಶೂರದ ಅರಸನು ಇವನನ್ನು ದ್ರೋಹಿಯೆಂದು ತಿಳಿದು ಬಂಧಿಸಿ ಸೆರೆಯಲ್ಲಿಟ್ಟನು.
त्यसपछि आफ्‍नो विरुद्धमा होशियाले षड्यन्त्र गरेका कुराको जानकरी अश्शूरका राजाले थाहा पाए, किनकि होशियाले मिश्रका राजा सोकहाँ सन्देशवाहकहरू पठाएका थिए । साथै, तिनले अश्शूरका राजालाई वर्षैपिच्छे तिर्दै आएको कर पनि तिरेनन् । त्यसैले अश्शूरका राजाले तिनलाई बन्‍दी बनाए र झ्यालखानामा थुनेर राखे ।
5 ಇದಲ್ಲದೆ, ಅಶ್ಶೂರದ ಅರಸನು ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು ಸಮಾರ್ಯಕ್ಕೆ ಬಂದು ಮೂರು ವರ್ಷಗಳವರೆಗೂ ಅದಕ್ಕೆ ಮುತ್ತಿಗೆ ಹಾಕಿದನು.
तब अश्शूरका राजाले देशैभरि आक्रमण गरे, र सामरियामाथि आक्रमण गरे र यसलाई तिन वर्षसम्म घेराबन्दी गरे ।
6 ಹೋಶೇಯನ ಆಳ್ವಿಕೆಯ ಒಂಭತ್ತನೆಯ ವರ್ಷದಲ್ಲಿ, ಅಶ್ಶೂರದ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು, ಎಲ್ಲಾ ಇಸ್ರಾಯೇಲರನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ಒಯ್ದನು. ಅವರನ್ನು ಹಲಹು ಪ್ರಾಂತ್ಯದಲ್ಲಿಯೂ, ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ, ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.
होशियाको नवौँ वर्षमा अश्शूरका राजाले सामरियालाई कब्जा गरे र इस्राएलीहरूलाई अश्शूरमा लगे । तिनीहरूलाई गोजानको हाबोर नदीको किनारको हलहमा र मादीहरूका सहरहरूमा तिनले बसाले ।
7 ಇಸ್ರಾಯೇಲರ ಈ ದುರ್ಗತಿಗೆ, ಅವರ ದುರ್ನಡತೆಯೇ ಕಾರಣ. ಹೇಗೆಂದರೆ ಅವರು ತಮ್ಮನ್ನು ಐಗುಪ್ತದ ಅರಸನಾದ ಫರೋಹನ ಕೈಯಿಂದ ಬಿಡಿಸಿ, ಅವನ ರಾಜ್ಯದಿಂದ ಹೊರತಂದ ದೇವರಾದ ಯೆಹೋವನಿಗೆ ಭಯಪಡದೆ, ಪಾಪಮಾಡಿ ಅನ್ಯದೇವತೆಗಳನ್ನು ಸೇವಿಸಿದರು.
इस्राएलीहरूले आफूलाई मिश्रदेशका राजा फारोको हातबाट छुटाउनुहुने, तिनीहरूलाई मिश्रदेशबाट ल्याउनुहुने परमप्रभु आफ्‍ना परमेश्‍वरको विरुद्धमा पाप गरेका हुनाले यसरी तिनीहरू बन्‍दी भए । यी मानिसहरूले अरू देवताहरूको पुजा गरिरहेका थिए,
8 ಯೆಹೋವನು ತಮ್ಮ ಎದುರಿನಿಂದ ಹೊರಡಿಸಿಬಿಟ್ಟ ಜನಾಂಗಗಳ ಮತ್ತು ಇಸ್ರಾಯೇಲ್ ರಾಜರ ದುರಾಚಾರಗಳನ್ನು ಅನುಸರಿಸಿದರು.
र इस्राएलका मानिसहरूका सामुबाट परमप्रभुले धपाउनुभएका जातिहरूका अभ्यासहरू तथा इस्राएलका राजाहरूका अभ्यासहरू गरिरहेका थिए ।
9 ಇಸ್ರಾಯೇಲರು ತಮ್ಮ ದೇವರಾದ ಯೆಹೋವನಿಗೆ ವಿರುದ್ಧವಾದ ಗುಪ್ತವಾದ ದುಷ್ಟ ಕೃತ್ಯಗಳನ್ನು ನಡಿಸಿದರು. ಕಾವಲುಗಾರರ ಗೋಪುರವುಳ್ಳ ಚಿಕ್ಕ ಊರು ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಪಟ್ಟಣದವರೆಗಿರುವ ಎಲ್ಲಾ ಊರುಗಳಲ್ಲಿ ತಮಗೋಸ್ಕರ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು.
इस्राएलका मानिसहरूले परमप्रभु आफ्‍ना परमेश्‍वरको विरुद्धमा जे कुराहरू गर्नु ठिक थिएन, गुप्‍त रूपमा त्यही गरे । धरहरादेखि किल्लासम्‍म नै आफ्‍ना सबै सहरहरूमा तिनीहरूले आफ्‍ना निम्‍ति उच्‍च थानहरू बनाए ।
10 ೧೦ ಎಲ್ಲಾ ದಿನ್ನೆಗಳ ಮೇಲೆ ಮತ್ತು ಎಲ್ಲಾ ಹಸುರು ಮರಗಳ ಕೆಳಗೆ ಕಲ್ಲು ಕಂಬ, ಅಶೇರ ವಿಗ್ರಹಸ್ತಂಭ ಇವುಗಳನ್ನು ನಿಲ್ಲಿಸಿದರು.
हरेक उच्‍च डाँडा रहरेक हरियो रुखमुनि तिनीहरूले डुङ्गाका मूर्तिहरू र अशेराका खम्बाहरू बनाए ।
11 ೧೧ ಅಲ್ಲಿ ಅವರು ಯೆಹೋವನು ತಮ್ಮ ಎದುರಿನಿಂದ ಹೊರಡಿಸಿ ಜಡಿಸಿದ ಅನ್ಯಜನಾಂಗಗಳಂತೆ ಎಲ್ಲಾ ಪೂಜಾಸ್ಥಳಗಳಲ್ಲಿಯೂ ಧೂಪವನ್ನು ಹಾಕಿ, ತಮ್ಮ ದುಷ್ಕೃತ್ಯಗಳಿಂದ ಆತನನ್ನು ರೇಗಿಸಿದರು.
तिनीहरूका सामुबाट परमप्रभुले धपाउनुभएका जातिहरूले गरेजस्तै तिनीहरूले उच्‍च थानहरूमा धूप बाले । परमप्रभुलाई रिस उठाउनलाई इस्राएलीहरूले दुष्‍ट कुराहरू गरे,
12 ೧೨ “ನೀವು ಇಂತಹ ಕೃತ್ಯಗಳನ್ನು ಮಾಡಬಾರದು” ಎಂದು ಯೆಹೋವನು ಅವರಿಗೆ ಆಜ್ಞಾಪಿಸಿದ್ದರೂ ಅವರು ಆತನ ಅಜ್ಞೆಯನ್ನು ಮೀರಿ ಅವರು ವಿಗ್ರಹಗಳನ್ನು ಆರಾಧಿಸಿದರು.
तिनीहरूले मूर्तिहरूको पुजा गरे, जसका बारेमा परमप्रभुले तिनीहरूलाई भन्‍नुभएको थियो, “तिमीहरूले यो कुरा गर्ने छैनौ ।”
13 ೧೩ ಯೆಹೋವನು ದರ್ಶಕರೆನಿಸಿಕೊಂಡ ತನ್ನ ಪ್ರವಾದಿಗಳ ಮುಖಾಂತರವಾಗಿ ಇಸ್ರಾಯೇಲರಿಗೆ ಮತ್ತು ಯೆಹೂದ್ಯರಿಗೆ, “ನೀವು, ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪೂರ್ವಿಕರಿಗೂ, ನನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ನಿಮಗೆ ಕೊಟ್ಟಂಥ ನನ್ನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ನಡೆಯಿರಿ” ಎಂದು ಖಂಡಿತವಾಗಿ ಹೇಳಿಸಿದನು.
तापनि परमप्रभुले हरेक अगमवक्ता र हरेक दर्शीद्वारा इस्राएल र यहूदालाई यसो भनरे चेताउनी दिनुभएको थियो, “आ-आफ्ना दुष्‍ट मार्गहरूबाट फर्केर मेरा आज्ञाहरू र विधिहरू पालन गर, अनि मैले तिमीहरूका पुर्खाहरूलाई आज्ञा गरेका अनि आफ्‍ना सेवकहरू अर्थात् अगमवक्ताहरूद्वारा मैले तिमीहरूकहाँ पठाएका सबै आज्ञा पालन गर्न सावधना होओ ।”
14 ೧೪ ಆದರೆ ಅವರು ದೇವರಾದ ಯೆಹೋವನನ್ನು ನಂಬದೆ, ಆತನ ಆಜ್ಞೆಗಳಿಗೆ ಮಣಿಯದೆ ಇದ್ದ ತಮ್ಮ ಹಿರಿಯರಂತೆ ಯೆಹೋವನ ಮಾತಿಗೆ ಕಿವಿಗೊಡದೆ ಹೋದರು.
तर तिनीहरूले सुनेनन् । बरु परमप्रभु आफ्‍ना परमेश्‍वरमाथि विश्‍वास नगर्ने आफ्‍ना पुर्खाहरूजस्तै तिनीहरू ज्‍यादै हठी भए ।
15 ೧೫ ಆತನು ತಮ್ಮ ಪೂರ್ವಿಕರಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ, ತಮಗೆ ಹೇಳಿಸಿದ ಒಡಂಬಡಿಕೆಯನ್ನು ತಿರಸ್ಕರಿಸಿ, ವ್ಯರ್ಥವಾದ ದೇವತೆಗಳನ್ನು ಸೇವಿಸಿ ನಿಷ್ಪ್ರಯೋಜಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಯೆಹೋವನು ಆಜ್ಞಾಪಿಸಿದರೂ ಅವರು ಕೇಳದೆ, ಅವರನ್ನು ಅನುಸರಿಸಿದರು.
तिनीहरूले उहाँका विधिहरू र तिनीहरूका पुर्खाहरूसित उहाँले बाँध्‍नुभएको करार र उहाँले तिनीहरूलाई दिनुभएका करारका आज्ञाहरूलाई इन्कार गरे । तिनीहरूले बेकम्मा अभ्यासहरूको अनुसरण गरे अनि तिनीहरू आफै पनि बेकम्मा भए । तिनीहरूले आफ्नो वरिपरि भएका अरू जातिहरूको अनुसरण गरे जसको नकल्ल नगर्नू भनेर परमप्रभुले तिनीहरूलाई आज्ञा दिनुभएको थियो ।
16 ೧೬ ತಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಮೀರಿ ಎರಡು ಎರಕದ ಬಸವನಮೂರ್ತಿಗಳು, ಅಶೇರ ವಿಗ್ರಹಸ್ತಂಭ ಇವುಗಳನ್ನು ಮಾಡಿಕೊಂಡರು. ಆಕಾಶಸೈನ್ಯ, ಬಾಳ್ ದೇವತೆ ಇವುಗಳನ್ನು ಪೂಜಿಸಿದರು.
तिनीहरूले परमप्रभु आफ्‍ना परमेश्‍वरका सबै आज्ञालाई बेवास्ता गरे । तिनीहरूले पुजा गर्नलाई पिटेर तयार पारिएका धातुको दुईवटा बाछाका बनाए । तिनीहरूले अशेरा देवीको खम्बा बनाए, र तिनीहरूले आकाशका सम्पूर्ण तारा र बालको पुजा गरे ।
17 ೧೭ ತಮ್ಮ ಗಂಡು ಹೆಣ್ಣು ಮಕ್ಕಳನ್ನು ಆಹುತಿ ಕೊಟ್ಟರು. ಯೆಹೋವನ ದೃಷ್ಟಿಯಲ್ಲಿ ನೀಚಕೃತ್ಯಗಳಾಗಿರುವ ಕಣಿಹೇಳುವುದು, ಮಾಟ ಮಂತ್ರಗಳನ್ನು ಮಾಡುವುದು ಮೊದಲಾದ ದುಷ್ಕೃತ್ಯಗಳಿಗೆ ತಮ್ಮನ್ನು ತೊಡಗಿಸಿಕೊಂಡು, ಯೆಹೋವನಿಗೆ ಕೋಪವನ್ನೆಬ್ಬಿಸಿದರು.
तिनीहरूले आफ्ना छोराछोरीलाई आगोमा हिंड्‍न लगाए, तिनीहरूले जोखना हेर र टुनामुना गरे, तिनीहरूले परमप्रभुको दृष्‍टिमा जे खराब छ, त्यही गर्न आफैलाई बेचे, र तिनीहरूले उहाँलाई रिस उठाए ।
18 ೧೮ ಇಸ್ರಾಯೇಲರು ಈ ಪ್ರಕಾರ ನಡೆದುಕೊಂಡುದರಿಂದ, ಯೆಹೋವನು ಅವರ ಮೇಲೆ ಬಹಳವಾಗಿ ಕೋಪಗೊಂಡು, ಯೆಹೂದ ಕುಲದವರ ಹೊರತು ಎಲ್ಲ ಕುಲಗಳವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು.
त्यसकारण परमप्रभु इस्राएलसित अत्यन्तै रिसाउनुभयो, र तिनीहरूलाई आफ्नो दृष्‍टिबाट हटाइदिनुभयो । त्यहाँ यहूदाको कुलबाहेक कोही पनि छोडिएन ।
19 ೧೯ ಯೆಹೂದ್ಯರೂ ಸಹ ತಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳದೆ ಇಸ್ರಾಯೇಲರ ಪದ್ಧತಿಯನ್ನು ಅನುಸರಿಸಿದರು.
यहूदाले पनि परमप्रभु आफ्‍ना परमेश्‍वरका आज्ञाहरू पालन गरेनन्, र तिनीहरूले इस्राएलले गरेका अभ्‍यासहरूको अनुसरण गरे ।
20 ೨೦ ಯೆಹೋವನು ಇಸ್ರಾಯೇಲರ ಕುಲಗಳಲ್ಲಿ ಉಳಿದಿದ್ದವರನ್ನೂ ಅಲಕ್ಷ್ಯಮಾಡಿ, ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟು, ಸೂರೆಮಾಡುವವರಿಗೆ ಒಪ್ಪಿಸಿ ಅವರನ್ನು ಬಾಧಿಸಿದನು.
यसैले परमप्रभुले इस्राएलका सबै सन्तानलाई इन्कार गर्नुभयो । उहाँले तिनीहरूलाई कष्‍ट दिनुभयो, र तिनीहरूलाई आफ्नो दृष्‍टिबाट नफल्‍नुभएसम्म उहाँले तिनीहरूलाई लुटको मालको रूपमा अधिकार गर्नेहरूको हातमा सुम्पिनुभयो ।
21 ೨೧ ಆತನು ಇಸ್ರಾಯೇಲರ ರಾಜ್ಯವನ್ನು ದಾವೀದ ಸಂತಾನದವರ ಕೈಯಿಂದ ಕಿತ್ತುಕೊಂಡ ನಂತರ ಇಸ್ರಾಯೇಲರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಅವನು ಅವರನ್ನು ಯೆಹೋವನ ಭಕ್ತಿಯಿಂದ ಬೀಳಿಸಿ ಮಹಾ ಪಾಪಕ್ಕೆ ಒಳಪಡಿಸಿದನು.
उहाँले इस्राएललाई दाऊदको राजकीय वंशबाट अलग गर्नुभयो, र तिनीहरूले नबातका छोरा यारोबामलाई राजा बनाए । यारोबामले इस्राएललाई परमप्रभुको अनुसरण गर्नबाट बहकाए र तिनीहरूलाई ठुलो पाप गर्न लगाए ।
22 ೨೨ ಇಸ್ರಾಯೇಲರು ಯಾರೊಬ್ಬಾಮನ ದುರ್ಮಾರ್ಗದಲ್ಲಿ ನಡೆದು ಅವನು ಮಾಡಿದ ಪಾಪಗಳನ್ನು ತೊರೆದು ಬಿಡಲಿಲ್ಲ.
इस्राएलका मानिसहरूले यारोबामका सबै पापको अनुसरण गरे र तिनीहरू ती कुराबाट फर्केनन्,
23 ೨೩ ಯೆಹೋವನು ತನ್ನ ಸೇವಕರಾದ ಎಲ್ಲಾ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದಂತೆ, ಇಸ್ರಾಯೇಲರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು. ಅವರು ಸೆರೆಯವರಾಗಿ ತಮ್ಮ ದೇಶದಿಂದ ಅಶ್ಶೂರ್ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲಿಯೇ ಇದ್ದಾರೆ.
त्यसैले परमप्रभुले आफ्ना सबै सेवक अगमवक्ताहरूद्वारा आफूले गर्छु भन्‍नुभएझैँ इस्राएललाई आफ्नो दृष्‍टिबाट हटाउनुभयो । यसरी तिनीहरूको आफ्नै देशबाट इस्राएललाई अश्शूरमा बन्दी बनाएर लगियो, र आजको दिनसम्म पनि त्‍यस्‍तै भएको छ ।
24 ೨೪ ಅಶ್ಶೂರದ ಅರಸನು ಸಮಾರ್ಯಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಾಯೇಲರನ್ನು ಸೆರೆಯಾಗಿ ಒಯ್ದ ನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಅಲ್ಲಿಗೆ ಕಳುಹಿಸಿದನು. ಅವರು ಸಮಾರ್ಯ ದೇಶವನ್ನು ಸ್ವತಂತ್ರಪಡಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಮಾಡಿದರು.
अश्शूरका राजाले बेबिलोनबाट र कूताबाट र अव्वाबाट हमात र सपर्बेमबाट मानिसहरू ल्याए र इस्राएलका मनिसहरूको साटोमा तिनीहरूलाई सामरियाका सहरहरूमा बसाले । तिनीहरूले सामरिया कब्जा गरे र यसका सहरहरूमा बसे ।
25 ೨೫ ಅವರಿಗೆ ಆರಂಭದಲ್ಲಿ ಯೆಹೋವನ ಭಯಭಕ್ತಿ ಇರಲಿಲ್ಲ. ಆದುದರಿಂದ ಆತನು ಸಿಂಹಗಳನ್ನು ಕಳುಹಿಸಿದನು. ಅವು ಅವರಲ್ಲಿ ಕೆಲವರನ್ನು ಕೊಂದವು.
तिनीहरूले बसोबाससुरु गर्दा तिनीहरूले परमप्रभुलाई आदर गरेनन् । त्यसैले परमप्रभुले तिनीहरूका बिचमा सिंहहरू पठाउनुभयो जसलेतिनीहरूमा कसैलाई मारे ।
26 ೨೬ ಅಶ್ಶೂರದ ಅರಸನ ಸೇವಕರು ತಮ್ಮ ಅರಸನಿಗೆ, “ನೀನು ಸಮಾರ್ಯ ಪಟ್ಟಣಗಳಿಗೆ ಕಳುಹಿಸಿದ ಆಯಾ ಊರುಗಳ ಜನರು ಆ ದೇಶದ ದೇವರಿಗೆ ನಡೆಯತಕ್ಕ ರೀತಿಯನ್ನು ಅರಿಯದವರಾಗಿದ್ದಾರೆ. ಆದುದರಿಂದ ಅಲ್ಲಿ ದೇವರು ಸಿಂಹಗಳನ್ನು ಕಳುಹಿಸಿ ಅವರನ್ನು ಸಂಹರಿಸುತ್ತಿದ್ದಾನೆ” ಎಂದು ತಿಳಿಸಿದರು.
त्यसैले तिनीहरूले अश्शूरका राजालाई यसो भने, “तपाईंले बन्दी बनाएर लैजानुभएका जातिहरू र सामरियाका सहरहरूमा बसोबास गरेका मानिसहरूले यस देशका देवताले चाहेका अभ्यासहरूका जान्‍दैनन् । त्यसैले उहाँले तिनीहरूका बिचमा सिंहहरू पठाउनुभएको छ, र सिंहहरूले यहाँ मानिसहरूलाई मर्दैछन् किनकि तिनीहरूले यस देशका देवताले चाहेका अभ्यासहरू जान्‍दैनन् ।”
27 ೨೭ ಆಗ ಅಶ್ಶೂರದ ಅರಸನು ಅವರಿಗೆ, “ಅಲ್ಲಿಂದ ಇಲ್ಲಿಗೆ ಸೆರೆಯವರಾಗಿ ಬಂದಿರುವ ಯಾಜಕರಲ್ಲಿ ಒಬ್ಬನನ್ನು ಅಲ್ಲಿಗೆ ಕಳುಹಿಸಿರಿ. ಅವನು ಹೋಗಿ ಅಲ್ಲಿ ವಾಸವಾಗಿದ್ದು ಆ ದೇಶದ ದೇವರಿಗೆ ನಡೆಯತಕ್ಕ ರೀತಿಯನ್ನು ಅವರಿಗೆ ಕಲಿಸಲಿ” ಎಂದು ಆಜ್ಞಾಪಿಸಿದನು.
तब अश्शूरका राजाले यसो भनेर आज्ञा दिए, “तिमीहरूले त्यहाँबाट ल्याएका पुजारीहरूमध्ये एउटालाई लिएर जाओ । तिनी गएर त्यहीँ बसून्, र तिनले त्यस देशका देवताले चाहेका अभ्यासहरू मानिसहरूलाई सिकाऊन् ।”
28 ೨೮ ಅವರು ಸಮಾರ್ಯದಿಂದ ಸೆರೆಯವನಾಗಿ ಬಂದಿದ್ದ ಒಬ್ಬ ಯಾಜಕನನ್ನು ಅಲ್ಲಿಗೆ ಕಳುಹಿಸಿದರು. ಇವನು ಬೇತೇಲಿನಲ್ಲಿ ವಾಸವಾಗಿದ್ದು ಜನರಿಗೆ ಯೆಹೋವನ ಭಕ್ತಿಯನ್ನು ಬೋಧಿಸಿದನು.
त्यसैले तिनीहरूले सामरियाबाट बन्दी बनाएर लगेका पुजारीहरूमध्ये एक जना आए र बेथेलमा बसे । तिनीहरूले परमप्रभुलाई कसरी आदर गर्नुपर्छ भनी तिनले तिनीहरूलाई सिकाए ।
29 ೨೯ ಆದರೂ ಆ ಜನಾಂಗಗಳವರು ತಮ್ಮ ದೇವತೆಯ ವಿಗ್ರಹಗಳನ್ನು ಮಾಡಿಕೊಂಡು ತಾವು ವಾಸಿಸುವ ಊರುಗಳಲ್ಲಿ ಸಮಾರ್ಯದವರು ಏರ್ಪಡಿಸಿದ್ದ ಪೂಜಾಸ್ಥಳಗಳಲ್ಲಿ ಅವುಗಳನ್ನಿಟ್ಟು ಪ್ರತಿಷ್ಠಿಸಿ ಪೂಜಿಸುತ್ತಿದ್ದರು.
हरेक जातिले आ-आफ्ना देवताहरू बनाए, अनि सामरीहरूले बनाएका उच्‍च थानहरूमा तिनलाई राखे । आफू बसोबास गर्ने ठाउँमा हरेक जातिले त्‍यसै गरे ।
30 ೩೦ ಬಾಬೆಲಿನವರು ಸುಕ್ಕೋತ್ಬೆನೋತ್ ನನ್ನೂ, ಕೂತದವರು ನೇರ್ಗೆಲ್ ನನ್ನೂ ಹಮಾತಿನವರು ಅಷೀಮನನ್ನು ಮಾಡಿದರು.
बेबिलोनका मानिसहरूले सुक्‍कोन-बनोत बनाए, कूताका मानिसहरूले नेर्गल बनाए, हमातका मानिसहरूले अशीमा बनाए,
31 ೩೧ ಅವ್ವಿಯರು ನಿಭಜ್ ಮತ್ತು ತರ್ತಕ್ ಎಂಬ ದೇವತೆಗಳನ್ನು ಮಾಡಿ ಪೂಜಿಸುತ್ತಿದ್ದರು. ಸೆಫರ್ವಯಿಮಿನವರು ಅದ್ರಮ್ಮೆಲೆಕ್, ಅನಮ್ಮೆಲೆಕ್ ಎಂಬ ತಮ್ಮ ಕುಲ ದೇವತೆಗಳನ್ನಾಗಿ ಪೂಜಿಸುತ್ತಾ ತಮ್ಮ ಮಕ್ಕಳನ್ನು ಬಲಿ ಅಗ್ನಿಪ್ರವೇಶ ಮಾಡಿಸುತ್ತಿದ್ದರು.
अव्वीहरूले नेभज र तर्ताक बनाए । सपर्बेमीहरूले आफ्ना देवता अद्रम्मलेक र अनम्मलेकका निम्ति आफ्ना छोराछोरीलाई आगोमा जलाए ।
32 ೩೨ ಅವರು ಯೆಹೋವನ ಭಕ್ತರಾಗಿದ್ದರೂ ಮನಸ್ಸಿಗೆ ಬಂದವರನ್ನು ಉನ್ನತ ಪೂಜಾಸ್ಥಳಗಳ ಯಾಜಕರನ್ನಾಗಿ ನೇಮಿಸಿಕೊಂಡು ಅವರ ಮುಖಾಂತರವಾಗಿ ಪೂಜಾಸ್ಥಳದ ಗುಡಿಗಳಲ್ಲಿ ಆರಾಧನೆ ನಡಿಸುತ್ತಿದ್ದರು.
तिनीहरूले परमप्रभुको पनि आदर गरे, र तिनीहरूका बिचबाट उच्‍च थानहरूमा पुजारीहरू नियुक्त गरे, जसले उच्‍च स्‍थानमा निर्मित मन्दिरहरूमा आफ्‍ना निम्ति बलि चढाए ।
33 ೩೩ ಯೆಹೋವನ ಭಕ್ತರಾಗಿದ್ದರೂ ತಾವು ಬಿಟ್ಟು ಬಂದ ದೇಶಗಳ ಪದ್ಧತಿಯ ಪ್ರಕಾರ ತಮ್ಮ ಕುಲದೇವತೆಗಳ ಆರಾಧನೆಯನ್ನೂ ಮಾಡುತ್ತಿದ್ದರು.
तिनीहरूले परमप्रभुलाई आदर गर्थे र जुन जातिहरूबाट आफू ल्याइएका थिए तिनीहरूकै प्रचलनअनुसार आ-आफ्नै देवताहरूको पनि पुज्थे ।
34 ೩೪ ಅವರು ಆ ಕಾಲದಲ್ಲಿ ರೂಢಿಯಾದ ಪದ್ಧತಿಯಂತೆ ಇಂದಿನವರೆಗೂ ನಡೆಯುತ್ತಿದ್ದಾರೆ. ಅವರು ಯೆಹೋವನಲ್ಲಿ ಭಯಭಕ್ತಿಯುಳ್ಳವರಲ್ಲ. ಆತನಿಂದ ಇಸ್ರಾಯೇಲನೆಂಬ ಹೆಸರು ಹೊಂದಿದ ಯಾಕೋಬನ ಸಂತಾನದವರಿಗೆ ಕೊಡಲ್ಪಟ್ಟ ಆಜ್ಞಾವಿಧಿಗಳನ್ನು, ಧರ್ಮನಿಯಮಗಳನ್ನು ಅನುಸರಿಸುವುದಿಲ್ಲ.
आजको दिनसम्म तिनीहरू आफ्‍ना पुराना प्रचलनहरूमा लागेकै छन् । तिनीहरूले न परमप्रभुलाई आदर गर्छन्, न त परमप्रभुले इस्राएल नाउँ दिनुभएको याकूबका मानिसहरूलाई उहाँले दिनुभएका विधिहरू, उर्दीहरू, व्यवस्था वा आज्ञाहरू नै तिनीहरूले पालन गर्छन्—
35 ೩೫ ಯೆಹೋವನು ಇಸ್ರಾಯೇಲರೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ, “ನೀವು ಅನ್ಯದೇವತೆಗಳಿಗೆ ಭಯಪಡಬಾರದು, ಅವುಗಳಿಗೆ ಕೈಮುಗಿಯಲೂ ಬಾರದು, ಆರಾಧಿಸಲೂಬಾರದು, ಯಜ್ಞವನ್ನರ್ಪಿಸಲೂಬಾರದು.
अनि तिनीहरूसित परमप्रभुले करार बाँध्‍नुभयो र तिनीहरूलाई आज्ञा दिनुभयो, “तिमीहरूले अन्य देवताहरूको भय मान्‍ने छैनौ, न तिनीहरूको सामु निहुरिनेछौ, न तिनीहरूकको पुजा गर्नेछौ न त तिनीहरूलाई बलि चढाउनेछौ ।
36 ೩೬ ನಿಮ್ಮನ್ನು ಮಹಾಶಕ್ತಿ, ಭುಜಬಲಪರಾಕ್ರಮ ಇವುಗಳ ಮೂಲಕವಾಗಿ ಐಗುಪ್ತ ದೇಶದಿಂದ ಕರೆದುಕೊಂಡು ಬಂದ ಯೆಹೋವನಾದ ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನಗೊಬ್ಬನಿಗೇ ಕೈಮುಗಿದು ಯಜ್ಞವರ್ಪಿಸಬೇಕು.
तर महान् शक्ति र उठेका हातहरूले तिमीहरूलाई मिश्रदेशबाट ल्याउनुहुने परमप्रभुलाई मात्र तिमीहरूले आदर गर्नुपर्छ । तिमीहरूले उहाँलाई मात्र दण्डवत् गर्नुपर्छ, र उहाँलाई मात्र बलि चढाउनुपर्छ ।
37 ೩೭ ಯೆಹೋವನಾದ ನಾನು ನಿಮಗೆ ಬರೆಯಿಸಿ ಕೊಟ್ಟ ಆಜ್ಞಾವಿಧಿಗಳನ್ನು ಧರ್ಮನಿಯಮಗಳನ್ನು ತಪ್ಪದೇ ಕೈಕೊಳ್ಳಬೇಕು. ನೀವು ಅನ್ಯ ದೇವತೆಗಳಿಗೆ ಭಯಪಡಬಾರದು.
उहाँले तिमीहरूका निम्ति लेख्‍नुभएका विधिहरू र उर्दीहरू, व्यवस्था र आज्ञाहरूलाई तिमीहरूले सदासर्वदा पालन गर्नेछौ । त्यसैले तिमीहरू अन्य देवताहरूको डर मान्‍नुहुँदैन,
38 ೩೮ ನಾನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆಯದೆ ಇರಬೇಕು. ಅನ್ಯದೇವತೆಗಳನ್ನು ಪೂಜಿಸಬಾರದು.
र मैले तिमीहरूसित बाँधेको करार तिमीहरूले बिर्सनेछेनौ, न त तिमीहरूले अन्य देवताहरूको आदर गर्नेछौ ।
39 ೩೯ ಆದರೆ, ನಿಮ್ಮ ದೇವರಾದ ಯೆಹೋವನಲ್ಲಿ ನೀವು ಭಯಭಕ್ತಿಯುಳ್ಳವರಾಗಿರಬೇಕು. ಆಗ ಆತನು ನಿಮ್ಮನ್ನು ಎಲ್ಲಾ ಶತ್ರುಗಳ ಕೈಗೆ ಸಿಕ್ಕದಂತೆ ಕಾಪಾಡುವನು” ಎಂದು ಹೇಳಿದನು.
तर तिमीहरूले आफ्‍ना परमप्रभु परमेश्‍वरको आदर गर्नेछौ । उहाँले तिमीहरूका शत्रुहरूको शक्तिबाट तिमीहरूलाई छुटकारा दिनुहुनेछ ।”
40 ೪೦ ಅವರು ಅದನ್ನು ಲಕ್ಷ್ಯಕ್ಕೆ ತಂದುಕೊಳ್ಳದೆ ತಮ್ಮ ಹಿಂದಿನ ಪದ್ಧತಿಗಳನ್ನೇ ಅನುಸರಿಸಿದರು.
तिनीहरूले यो कुरा सुनेनन्, किनकि तिनीहरूले विगतमा गरेका कुरामा तिनीहरू लागिरहे ।
41 ೪೧ ಆ ಜನಾಂಗಗಳವರು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದರೂ ವಿಗ್ರಹಗಳನ್ನೂ ಆರಾಧಿಸುತ್ತಿದ್ದರು. ಅವರ ಸಂತಾನದವರು ಇಂದಿನವರೆಗೂ ಹಾಗೆಯೇ ಮಾಡುತ್ತಿದ್ದಾರೆ.
यसरी यी जातिहरू परमप्रभुदेखि डराए र आफूले खोपेर बनाएका मूर्तिहरूको पनि तिनीहरूले पुजा गरे, अनि तिनीहरूका छोराछोरी र नातिनातिनाले पनि त्‍यसै गरे । आजको दिनसम्म आफ्ना पुर्खाहरूले गरेझैँ तिनीहरूले निरन्‍तर त्‍यसै गर्दैछन् ।

< ಅರಸುಗಳು - ದ್ವಿತೀಯ ಭಾಗ 17 >