< ಅರಸುಗಳು - ದ್ವಿತೀಯ ಭಾಗ 18 >

1 ಇಸ್ರಾಯೇಲರ ಅರಸನೂ ಏಲನ ಮಗನಾದ ಹೋಶೇಯನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಯೆಹೂದ ರಾಜನಾದ ಆಹಾಜನ ಮಗ ಹಿಜ್ಕೀಯನು ಆಳ್ವಿಕೆಗೆ ಬಂದನು.
ఇశ్రాయేలు రాజు, ఏలా కొడుకు హోషేయ పరిపాలనలో మూడో సంవత్సరంలో యూదా రాజు ఆహాజు కొడుకు హిజ్కియా ఏలడం ఆరంభించాడు.
2 ಇವನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷಗಳ ಕಾಲ ಆಳಿದನು. ಜೆಕರ್ಯನ ಮಗಳಾದ ಅಬೀ ಎಂಬಾಕೆಯು ಇವನ ತಾಯಿ.
అతడు 25 సంవత్సరాల వయస్సులో ఏలడం ఆరంభించి, యెరూషలేములో 29 సంవత్సరాలు ఏలాడు. అతని తల్లి పేరు అబీ. ఆమె జెకర్యా కూతురు.
3 ಇವನು ಎಲ್ಲಾ ವಿಷಯಗಳಲ್ಲಿಯೂ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು.
అతడు తన పూర్వికుడైన దావీదు ఆదర్శాన్ని అనుసరించి, యెహోవా దృష్టిలో ఏది సరైనదో అది చేశాడు.
4 ಪೂಜಾಸ್ಥಳಗಳನ್ನು ಹಾಳುಮಾಡಿ, ಕಲ್ಲುಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕತ್ತರಿಸಿ ಹಾಕಿದನು. ಮೋಶೆಯು ಮಾಡಿಸಿದ ತಾಮ್ರದ ಸರ್ಪವನ್ನು ಚೂರು‍ಚೂರು ಮಾಡಿದನು. ಇಸ್ರಾಯೇಲರು ಅದಕ್ಕೆ ಆ ವರೆಗೂ ಧೂಪವನ್ನರ್ಪಿಸುತ್ತಿದ್ದರು. ಅದಕ್ಕೆ “ನೆಹುಷ್ಟಾನ್” ಎಂಬ ಹೆಸರಿತ್ತು.
ఉన్నత స్థలాలను తొలగించి, విగ్రహాలను పగలగొట్టి, దేవతా స్తంభాలను పడగొట్టాడు. మోషే చేసిన ఇత్తడి సర్పాన్ని ముక్కలు ముక్కలు చేశాడు. దానికి ఇశ్రాయేలీయులు “నెహుష్టాను” అని పేరు పెట్టి, దానికి ధూపం వేసేవారు.
5 ಹಿಜ್ಕೀಯನು ಇಸ್ರಾಯೇಲರ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದನು. ಯೆಹೂದ್ಯರಲ್ಲಿ ಇವನಿಗೆ ಸಮಾನನಾದ ಅರಸನು ಹಿಂದೆಯೂ ಇರಲಿಲ್ಲ, ಆಮೇಲೂ ಇರಲಿಲ್ಲ.
అతడు ఇశ్రాయేలీయుల దేవుడైన యెహోవాలో విశ్వాసం ఉంచినవాడు. అతని తరువాత వచ్చిన యూదా రాజుల్లోనైనా, అతని పూర్వికులైన రాజుల్లోనైనా అతనితో సమానుడు ఒక్కడూ లేడు.
6 ಇದಲ್ಲದೆ, ಇವನು ಯೆಹೋವನನ್ನೇ ಆಶ್ರಯಿಸಿಕೊಂಡು ಆತನನ್ನು ಬಿಡದೆ ಹಿಂಬಾಲಿಸಿ, ಮೋಶೆಯ ಮುಖಾಂತರವಾಗಿ ಅನುಗ್ರಹಿಸಿದ ಆಜ್ಞೆಗಳನ್ನು ಕೈಕೊಂಡು ನಡೆದನು.
అతడు యెహోవాకు నమ్మకంగా ఉండి, ఆయన్ను వెంబడించడంలో వెనుతిరగకుండా, ఆయన మోషేకు ఆజ్ఞాపించిన ఆజ్ఞలన్నీ పాటిస్తూ ఉన్నాడు.
7 ಯೆಹೋವನು ಹಿಜ್ಕೀಯನ ಸಂಗಡ ಇದ್ದುದರಿಂದ ಅವನು ಹೋದ ಎಲ್ಲ ಕಡೆ ಅಭಿವೃದ್ಧಿ ಹೊಂದಿದನು. ಇವನು ಅಶ್ಶೂರದ ಅರಸನಿಗೆ ವಿರುದ್ಧವಾಗಿ ದಂಗೆ ಎದ್ದು ಸ್ವತಂತ್ರನಾದನು.
కాబట్టి, యెహోవా అతనికి తోడుగా ఉన్నాడు. తాను వెళ్లిన ప్రతిచోటా అతడు జయం పొందాడు. అతడు అష్షూరు రాజుకు లోబడలేదు. అతని మీద తిరగబడ్డాడు.
8 ಗಾಜ ಪ್ರಾಂತ್ಯದವರೆಗೆ ವಾಸವಾಗಿದ್ದ ಫಿಲಿಷ್ಟಿಯರನ್ನು ಸೋಲಿಸಿ, ಕಾವಲುಗಾರರ ಗೋಪುರ ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಚಿಕ್ಕಗ್ರಾಮ ಮೊದಲುಗೊಂಡು ಮಹಾನಗರಗಳವರೆಗೂ ಎಲ್ಲಾ ಊರುಗಳನ್ನು ನಾಶಮಾಡಿದನು.
ఇంకా గాజా పట్టణం, దాని సరిహద్దుల వరకూ బురుజులనుండి ప్రాకారాల వరకూ ఫిలిష్తీయులపై దాడి చేశాడు.
9 ಇಸ್ರಾಯೇಲರ ಅರಸನೂ ಏಲನ ಮಗನೂ ಆದ ಹೋಶೇಯನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅಂದರೆ ಹಿಜ್ಕೀಯನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಅಶ್ಶೂರದ ಅರಸನಾದ ಶಲ್ಮನೆಸರನು ಸಮಾರ್ಯಕ್ಕೆ ವಿರೋಧವಾಗಿ ಬಂದು ಮೂರು ವರ್ಷಗಳವರೆಗೂ ಅದಕ್ಕೆ ಮುತ್ತಿಗೆ ಹಾಕಿ ಅದನ್ನು ವಶಪಡಿಸಿಕೊಂಡನು.
రాజైన హిజ్కియా పరిపాలనలో నాలుగో సంవత్సరంలో, ఇశ్రాయేలు రాజు ఏలా కొడుకు హోషేయ పరిపాలనలో ఏడో సంవత్సరంలో, అష్షూరురాజు షల్మనేసెరు షోమ్రోను పట్టణంపై దండెత్తి దాన్ని చుట్టుముట్టాడు.
10 ೧೦ ಮೂರು ವರ್ಷಗಳ ತರುವಾಯ, ಇಸ್ರಾಯೇಲರ ಅರಸನಾದ ಹೋಶೇಯನ ಆಳ್ವಿಕೆಯ ಒಂಭತ್ತನೆಯ ವರ್ಷದಲ್ಲಿ ಅಂದರೆ ಹಿಜ್ಕೀಯನ ಆಳ್ವಿಕೆಯ ಆರನೆಯ ವರ್ಷದಲ್ಲಿ ಅವನು ಸಮಾರ್ಯವನ್ನು ಸ್ವಾಧೀನಮಾಡಿಕೊಂಡನು.
౧౦మూడు సంవత్సరాలకు అష్షూరీయులు దాన్ని చేజిక్కించుకున్నారు. హిజ్కియా పరిపాలనలో ఆరో సంవత్సరంలో, ఇశ్రాయేలు రాజు హోషేయ పరిపాలనలో తొమ్మిదో సంవత్సరంలో షోమ్రోను పట్టణం శత్రువుల వశం అయ్యింది.
11 ೧೧ ಅಶ್ಶೂರದ ಅರಸನು ಇಸ್ರಾಯೇಲರನ್ನು ಸೆರೆಹಿಡಿದು ಅವರನ್ನು ಹಲಹು, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತ್ಯ, ಮೇದ್ಯರ ಪಟ್ಟಣಗಳಲ್ಲಿ ಇರಿಸಿದನು.
౧౧ఇశ్రాయేలు వారు తమ దేవుడైన యెహోవా చెప్పిన మాట వినకుండా ఆయన నిబంధనకూ, ఆయన సేవకుడైన మోషే ఆజ్ఞాపించిన దానంతటికీ లోబడలేదు. వాటిని అతిక్రమించారు.
12 ೧೨ ಏಕೆಂದರೆ ಅವರು ತಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆ ಆತನ ಒಡಂಬಡಿಕೆಯನ್ನು ಮೀರಿ, ಆತನ ಸೇವಕನಾದ ಮೋಶೆಯ ಆಜ್ಞೆಗಳಿಗೆ ವಿಧೇಯರಾಗಿ ನಡೆಯಲಿಲ್ಲ. ದೇವರ ಆಜ್ಞೆಗಳಿಗೆ ಕಿವಿಗೊಡದೇ ಅವುಗಳಂತೆ ನಡೆಯದೇ ಇದ್ದುದರಿಂದಲೇ ಹೀಗಾಯಿತು.
౧౨అష్షూరు రాజు ఇశ్రాయేలు వాళ్ళను అష్షూరు దేశానికి తీసుకెళ్ళి, గోజాను నది దగ్గర ఉన్న హాలహు, హాబోరు అనే పట్టణాల్లో, మాదీయుల పట్టణాల్లో వాళ్ళను ఉంచాడు.
13 ೧೩ ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಶ್ಶೂರದ ಅರಸನಾದ ಸನ್ಹೇರೀಬನು ಬಂದು ಯೆಹೂದ ಪ್ರಾಂತ್ಯದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.
౧౩హిజ్కియా రాజు పరిపాలనలో 14 వ సంవత్సరంలో అష్షూరురాజు సన్హెరీబు యూదా దేశంలో ఉన్న ప్రాకారాలున్న పట్టాణాలన్నిటి మీద దాడి చేసి వాటిని చేజిక్కించుకున్నాడు.
14 ೧೪ ಆಗ ಯೆಹೂದ್ಯರ ಅರಸನಾದ ಹಿಜ್ಕೀಯನು ಲಾಕೀಷಿನಲ್ಲಿದ್ದ ಅಶ್ಶೂರದ ಅರಸನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ಅಪರಾಧಿ; ನೀನು ನನ್ನನ್ನು ಬಿಟ್ಟು ಹೋಗು. ನೀನು ನನಗೆ ವಿಧಿಸುವಷ್ಟು ದಂಡವನ್ನು ಕೊಡುತ್ತೇನೆ” ಎಂದು ಹೇಳಿ ಕಳುಹಿಸಿದನು. ಅಶ್ಶೂರದ ಅರಸನು ಮುನ್ನೂರು ತಲಾಂತು ಬೆಳ್ಳಿಯನ್ನೂ, ಮೂವತ್ತು ತಲಾಂತು ಬಂಗಾರವನ್ನೂ ಕೊಡಬೇಕೆಂದು ಆಜ್ಞಾಪಿಸಿದನು.
౧౪యూదారాజు హిజ్కియా, లాకీషు పట్టణంలో ఉన్న అష్షూరు రాజు దగ్గరికి వార్తాహరులను పంపి “నావల్ల తప్పు జరిగింది. నా దగ్గర నుంచి నీవు వెనక్కి వెళ్ళిపోతే నీవు నా మీద మోపిన దాన్ని నేను భరిస్తాను” అని వార్త పంపించాడు. అష్షూరురాజు 600 మణుగుల వెండి, 60 మణుగుల బంగారం యూదా రాజు హిజ్కియా చెల్లించాలని విధించాడు.
15 ೧೫ ಆಗ ಹಿಜ್ಕೀಯನು ಯೆಹೋವನ ಆಲಯದಲ್ಲಿಯೂ, ಅರಸನ ಅರಮನೆಯ ಭಂಡಾರದಲ್ಲಿಯೂ ಸಿಕ್ಕಿದ ಬೆಳ್ಳಿಯನ್ನು ಅವನಿಗೆ ಕೊಟ್ಟನು.
౧౫కాబట్టి హిజ్కియా యెహోవా మందిరంలో, రాజనగరంలో, వస్తువుల రూపంలో ఉన్న వెండి అంతా అతనికి ఇచ్చేశాడు.
16 ೧೬ ಅಲ್ಲದೆ ಹಿಜ್ಕೀಯನು ಯೆಹೋವನ ಆಲಯದ ಕದಗಳಿಗೂ, ಕಂಬಗಳಿಗೂ ಹೊದಿಸಿದ್ದ ಬಂಗಾರದ ತಗಡನ್ನೂ ತೆಗೆದು ಅಶ್ಶೂರದ ಅರಸನಿಗೆ ಕಳುಹಿಸಿದನು.
౧౬ఇంకా ఆ కాలంలో హిజ్కియా దేవాలయపు తలుపులకున్న బంగారం, తాను కట్టించిన స్తంభాలకున్న బంగారం తీయించి అష్షూరు రాజుకిచ్చాడు.
17 ೧೭ ಆದರೆ ಅಶ್ಶೂರದ ಅರಸನು ಲಾಕೀಷಿನಿಂದ ಮಹಾಸೈನ್ಯ ಸಹಿತವಾಗಿ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬುವವರನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವರು ಗಟ್ಟಾ ಹತ್ತಿ ಯೆರೂಸಲೇಮಿಗೆ ಬಂದು ಅಗಸರ ಹೊಲದ ಮೇಲೆ ಹೋಗುವ ರಾಜಮಾರ್ಗದ ಹತ್ತಿರ ಇರುವ ಕೆರೆಯ ಕಾಲುವೆಯ ಬಳಿಯಲ್ಲಿ ಪಾಳೆಯ ಮಾಡಿಕೊಂಡರು.
౧౭కాని, అష్షూరు రాజు తర్తాను, రబ్సారీసు, రబ్షాకేనులను లాకీషు పట్టణం నుంచి యెరూషలేములో ఉన్న హిజ్కియా రాజుపైకి పెద్ద సైన్యంతో పంపాడు. వారు యెరూషలేముపై దండెత్తి చాకిరేవు మార్గంలో ఉన్న మెరక కొలను కాలవ దగ్గర ప్రవేశించి, అక్కడ ఉండి రాజును పిలిపించాడు.
18 ೧೮ ಅವರು ಅರಸನನ್ನು ಕೂಗಿ ಕರೆದಾಗ, ಹಿಲ್ಕೀಯನ ಮಗನೂ, ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ಅವರ ಬಳಿಗೆ ಬಂದರು.
౧౮హిల్కీయా కొడుకూ, గృహ నిర్వాహకుడూ అయిన ఎల్యాకీము, శాస్త్రి షెబ్నా, రాజ్య లేఖనాల అధికారి అయిన ఆసాపు కొడుకు యోవాహు వాళ్ళ దగ్గరికి వెళ్ళారు.
19 ೧೯ ರಬ್ಷಾಕೆಯು ಅವರಿಗೆ, ನೀವು ಹೋಗಿ ಹಿಜ್ಕೀಯನಿಗೆ ಮಹಾರಾಜನಾದ ಅಶ್ಶೂರದ ಅರಸನ ಮಾತುಗಳನ್ನು ತಿಳಿಸಿರಿ. ಅವನು, “ನಿನ್ನ ಭರವಸಕ್ಕೆ ಯಾವ ಆಧಾರವುಂಟು?
౧౯అప్పుడు రబ్షాకే వాళ్ళతో అష్షూరురాజు హిజ్కియాతో చెప్పమన్నది ఈ విధంగా వినిపించాడు. “నీకున్న ఈ ధైర్యానికి ఆధారం ఏంటి?
20 ೨೦ ಬರೀ ಒಂದು ಬಾಯಿ ಮಾತಿನಲ್ಲಿ ಯುದ್ಧಕ್ಕೆ ಬೇಕಾದ ವಿವೇಕವೂ, ಬಲವೂ ಉಂಟೆಂದು ಅಂದುಕೊಳ್ಳುತ್ತಿರುವೆಯೋ? ನೀನು ಯಾರ ಮೇಲೆ ಭರವಸವಿಟ್ಟು ನನಗೆ ವಿರೋಧವಾಗಿ ತಿರುಗಿ ಬಿದ್ದಿರುವೆ?
౨౦యుద్ధం విషయంలో నీ ఆలోచన, నీ బలం అన్నీ వట్టి మాటలే. నా మీద తిరుగుబాటు చెయ్యడానికి నీకు ధైర్యం ఇచ్చింది ఎవరు?
21 ೨೧ ಜಜ್ಜಿದ ದಂಟಿಗೆ ಸಮಾನವಾಗಿರುವ ಐಗುಪ್ತದಲ್ಲಿ ಭರವಸವಿಟ್ಟಿರುವೆಯೋ? ಒಬ್ಬನು ಅಂಥ ದಂಟಿನ ಮೇಲೆ ಕೈಯೂರಿಕೊಳ್ಳುವುದಾದರೆ ಅದು ಅವನ ಕೈಯನ್ನು ತಿವಿದು ಒಳಗೆ ಹೋಗುತ್ತದಲ್ಲವೇ; ಐಗುಪ್ತದ ಅರಸನಾದ ಫರೋಹನನಲ್ಲಿ ಭರವಸವಿಟ್ಟವರಿಗೆ ಇದೇ ಗತಿಯಾಗುವುದು.
౨౧నలిగిన రెల్లులాంటి ఈ ఐగుప్తును నమ్ముకుంటున్నావు. కాని, ఎవరైనా దాని మీద ఆనుకుంటే అది అతని చేతికి గుచ్చుకుని లోపలికి దిగుతుంది. అతన్ని నమ్ముకున్న వాళ్ళందరికీ ఐగుప్తురాజు ఫరో అలాంటివాడే.
22 ೨೨ ಒಂದು ವೇಳೆ ನೀವು, ‘ನಮ್ಮ ದೇವರಾದ ಯೆಹೋವನ ಮೇಲೆ ಭರವಸವಿಟ್ಟಿದ್ದೇವೆ’ ಎಂದು ಹೇಳುವುದಾದರೆ ಹಿಜ್ಕೀಯನು, ‘ಯೆರೂಸಲೇಮಿನ ಯಜ್ಞವೇದಿಯ ಮುಂದೆಯೇ ಆರಾಧನೆಮಾಡಬೇಕು’ ಎಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ ಆ ಯೆಹೋವನ ಪೂಜಾಸ್ಥಳಗಳನ್ನೂ, ಎಲ್ಲಾ ಯಜ್ಞವೇದಿಗಳನ್ನೂ ಹಾಳುಮಾಡಿದ್ದಾನಲ್ಲಾ,
౨౨మా దేవుడు యెహోవాను మేము నమ్ముకుంటున్నాము, అని ఒకవేళ మీరు నాతో చెప్తారేమో. యెరూషలేములో ఉన్న ఈ బలిపీఠం దగ్గర మాత్రమే మీరు నమస్కారం చెయ్యాలని యూదా వాళ్ళకూ, యెరూషలేము వాళ్ళకూ ఆజ్ఞ ఇచ్చి, హిజ్కియా ఎవరి ఉన్నత స్థలాలూ, బలిపీఠాలూ పడగొట్టాడో ఆయనే గదా యెహోవా?
23 ೨೩ ನನ್ನ ಒಡೆಯನಾದ ಅಶ್ಶೂರದ ಅರಸನೊಂದಿಗೆ ಸವಾಲು ಮಾಡಿನೋಡು. ಆಗ ಕುದುರೆ ಸವಾರರನ್ನು ಬಳಸಲು ನಿನಗೆ ಸಾಮರ್ಥ್ಯವಿದ್ದರೆ ಆತನು ಎರಡು ಸಾವಿರ ಕುದುರೆಗಳನ್ನು ಕೊಡುತ್ತಾನೆ.
౨౩కాబట్టి, నా యజమాని అష్షూరు రాజు పక్షంగా నిన్ను సవాలు చేస్తున్నాను. చాలినంత మంది రౌతులు నీ దగ్గర ఉంటే రెండువేల గుర్రాలు నేను నీకిస్తాను.
24 ೨೪ ಹೀಗಿದ್ದಾಗ ನೀನು ನನ್ನ ಒಡೆಯನ ಸೇನಾಧಿಪತಿಗಳಲ್ಲಿ ಅತಿ ಸಣ್ಣವನನ್ನಾದರೂ ಸೋಲಿಸುವುದು ಸಾಧ್ಯವೇ? ರಥಾಶ್ವಬಲಗಳ ವಿಷಯವಾಗಿ ನೀನು ಐಗುಪ್ತರ ಮೇಲೆ ಭರವಸೆಯಿಟ್ಟಿರುವೆ.
౨౪అలా ఐతే నీవు నా యజమాని సేవకుల్లో అతి తక్కువ వాడైన ఒక్క అధిపతినైనా ఎలా ఎదిరించగలవు? రథాలూ, రౌతులూ పంపుతాడని ఐగుప్తురాజును నీవు ఆశ్రయించావు గదా!
25 ೨೫ ಈ ದೇಶವನ್ನು ಹಾಳುಮಾಡುವುದಕ್ಕೆ ಯೆಹೋವನ ಚಿತ್ತವಿಲ್ಲದೆ ಬಂದೆನೆಂದು ನೆನಸುತ್ತೀಯೋ? ‘ಈ ದೇಶಕ್ಕೆ ಬಂದು, ಇದನ್ನು ಹಾಳುಮಾಡಿಬಿಡು ಎಂದು ಯೆಹೋವನೇ ನನಗೆ ಆಜ್ಞಾಪಿಸಿದ್ದಾನೆ’” ಎಂದನು.
౨౫యెహోవా ఇష్టం లేకుండానే ఈ దేశంపై యుద్ధం చేసి నాశనం చెయ్యడానికి నేను వచ్చానా? ‘ఆ దేశంపై దాడి చేసి నాశనం చెయ్యి’ అని యెహోవాయే నాకు ఆజ్ఞ ఇచ్చాడు” అన్నాడు.
26 ೨೬ ಆಗ ಹಿಲ್ಕೀಯನ ಮಗನಾದ ಎಲ್ಯಾಕೀಮ್, ಶೆಬ್ನ, ಯೋವ ಎಂಬುವವರು ರಬ್ಷಾಕೆಗೆ, “ನೀನು ಮಾತನಾಡುವುದು ಪೌಳಿಗೋಡೆಯ ಮೇಲಿರುವ ಯೆಹೂದ್ಯರಿಗೂ ಕೇಳಿಸುತ್ತದೆ. ಆದುದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತನಾಡು, ಅದು ನಮಗೆ ತಿಳಿಯುತ್ತದೆ. ಆದರೆ ಯೂದಾಯ ಭಾಷೆಯಲ್ಲಿ ಮಾತನಾಡಬೇಡ” ಎಂದು ಹೇಳಿದರು.
౨౬రబ్షాకేతో హిల్కీయా కొడుకు ఎల్యాకీము, షెబ్నా, యోవాహు ఇలా అన్నారు. “నీ దాసులమైన మాకు సిరియా భాష తెలుసు గనుక ఆ భాషలో మాట్లాడండి. ప్రాకారాల మీద ఉన్న ప్రజలకు తెలిసిన యూదుల భాషలో దయచేసి మాట్లాడొద్దు” అన్నారు.
27 ೨೭ ಅದಕ್ಕೆ ರಬ್ಷಾಕೆಯು, “ನನ್ನ ಯಜಮಾನನು ನಿಮ್ಮ ಸಂಗಡವಾಗಲಿ, ನಿಮ್ಮ ಒಡೆಯನ ಸಂಗಡವಾಗಲಿ ಮಾತನಾಡಬೇಕೆಂದು ನನ್ನನ್ನು ಕಳುಹಿಸಲಿಲ್ಲ. ಈ ಪೌಳಿಗೋಡೆಯ ಮೇಲೆ ಕುಳಿತಿರುವ ಜನರ ಸಂಗಡ ಮಾತನಾಡುವುದಕ್ಕೋಸ್ಕರ ಕಳುಹಿಸಿದ್ದಾನೆ. ಅವರು ನಿಮ್ಮೊಡನೆ ಇದ್ದರೆ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕಾಗುವುದು” ಎಂದು ಉತ್ತರಕೊಟ್ಟನು.
౨౭రబ్షాకే “ఈ మాటలు చెప్పడానికి నీ యజమాని దగ్గరకూ, నీ దగ్గరికి మాత్రమేనా నా యజమాని నన్ను పంపింది? త్వరలో మీతో పాటు తమ మలం తిని తమ మూత్రం తాగాల్సిన ఈ ప్రాకారాల మీద కూర్చున్న వాళ్ళ దగ్గరికి కూడా నన్ను పంపాడు గదా” అని చెప్పాడు.
28 ೨೮ ನಂತರ, ರಬ್ಷಾಕೆಯು ಎದ್ದು ನಿಂತು ಯೂದಾಯ ಭಾಷೆಯಲ್ಲಿ, “ಅಶ್ಶೂರದ ಮಹಾರಾಜನ ಮಾತನ್ನು ಕೇಳಿರಿ.
౨౮అతడు పెద్ద స్వరంతో యూదుల భాషలో “మహారాజైన అష్షూరురాజు చెప్పిన మాటలు వినండి. రాజు చెప్పదేమంటే,
29 ೨೯ ಅರಸನು ನಿಮಗೆ, ‘ಹಿಜ್ಕೀಯನಿಂದ ಮೋಸಹೋಗಬೇಡಿರಿ, ಅವನು ನಿಮ್ಮನ್ನು ನನ್ನ ಕೈಯಿಂದ ಬಿಡಿಸಲಾರನು’
౨౯హిజ్కియా వల్ల మోసపోకండి. నా చేతిలోనుంచి మిమ్మల్ని విడిపించడానికి అతనికి శక్తి చాలదు.
30 ೩೦ ಹಿಜ್ಕೀಯನು ನಿಮಗೆ, ‘ಯೆಹೋವನ ಮೇಲೆ ಭರವಸದಿಂದಿರಿ; ಆತನು ನಿಮ್ಮನ್ನು ಹೇಗೂ ರಕ್ಷಿಸುವನು. ಈ ಪಟ್ಟಣವು ಅಶ್ಶೂರದ ಅರಸನ ವಶವಾಗುವುದಿಲ್ಲ’ ಎಂಬುದಾಗಿ ಹೇಳಿದರೆ ಅವನ ಮಾತಿಗೆ ಕಿವಿಗೊಡಬೇಡಿರಿ, ಒಪ್ಪಬೇಡಿರಿ”
౩౦యెహోవా పేరట మిమ్మల్ని నమ్మించి, ‘యెహోవా మనలను విడిపిస్తాడు, ఈ పట్టణం అష్షూరురాజు చేతికి చిక్కదు’ అని హిజ్కియా చెప్తున్నాడు.
31 ೩೧ ಹಿಜ್ಕೀಯನ ಮಾತನ್ನು ಕೇಳಬೇಡಿರಿ. ಅಶ್ಶೂರದ ಅರಸನಾದ ನನ್ನ ಮಾತನ್ನು ಕೇಳಿರಿ, “ನನ್ನೊಡನೆ ಒಡಂಬಡಿಕೆ ಮಾಡಿಕೊಂಡು ನನ್ನ ಬಳಿಗೆ ಬಂದು ನನ್ನೊಡನೆ ಒಪ್ಪಂದ ಮಾಡಿಕೊಂಡು ನನ್ನ ಆಶ್ರಯಕ್ಕೆ ಬನ್ನಿ ಆಗ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಅಂಜೂರ ಮರ, ದ್ರಾಕ್ಷಾಲತೆ ಇವುಗಳ ಹಣ್ಣುಗಳನ್ನು ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು.
౩౧హిజ్కియా చెప్పిన మాట మీరు నమ్మవద్దు. అష్షూరురాజు చెప్పేదేమంటే, నాతో సంధి చేసుకుని మీరు బయటికి నా దగ్గరికి వస్తే, మీలో ప్రతి మనిషీ తన సొంత ద్రాక్షచెట్టు ఫలం, తన అంజూరపు చెట్టు ఫలం తింటూ, తన సొంత బావిలో నీళ్లు తాగుతాడు.
32 ೩೨ ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ ಆಹಾರ, ದ್ರಾಕ್ಷಿತೋಟ, ಎಣ್ಣೆಮರ, ಜೇನುತುಪ್ಪವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು. ನೀವು ಸಾಯುವುದಿಲ್ಲ, ಬದುಕುವಿರಿ. ಯೆಹೋವನು ನಿಮ್ಮನ್ನು ರಕ್ಷಿಸುವನು ಎಂಬ ನಂಬಿಕೆಯನ್ನು ನಿಮ್ಮಲ್ಲಿ ಹುಟ್ಟಿಸುವುದಕ್ಕೆ ಪ್ರಯತ್ನಿಸುವ ಹಿಜ್ಕೀಯನಿಗೆ ಕಿವಿಗೊಡಬೇಡಿರಿ.
౩౨ఆ తరువాత మీరు చనిపోకుండా బ్రతికేలా మేము వచ్చి మీ దేశం లాంటి దేశానికీ, అంటే గోదుమలు, ద్రాక్షారసం ఉన్న దేశానికీ, ఆహారం, ద్రాక్షచెట్లు ఉన్న దేశానికీ, ఒలీవ నూనె, తేనె ఉన్న దేశానికీ మిమ్మల్ని తీసుకు పోతాము. అక్కడ మీరు సుఖంగా ఉంటారు. కాబట్టి, యెహోవా మిమ్మల్ని విడిపిస్తాడని హిజ్కియా మీకు బోధించే మాటలు వినొద్దు.
33 ೩೩ ಯಾವ ಜನಾಂಗದ ದೇವತೆಯು ತನ್ನ ದೇಶವನ್ನು ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡಲು ಸಾಧ್ಯ?
౩౩వివిధ ప్రజల దేవుళ్లలో ఎవరైనా తమ దేశాన్ని అష్షూరురాజు చేతిలోనుంచి విడిపించారా?
34 ೩೪ ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ ಮತ್ತು ಇವ್ವಾ ಎಂಬ ಪಟ್ಟಣಗಳ ದೇವತೆಗಳೇನಾದವು? ಅವು ಸಮಾರ್ಯವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಲು ಸಾಧ್ಯವಾಯಿತೇ?
౩౪హమాతు దేవుళ్ళు ఏమయ్యారు? అర్పాదు దేవుళ్ళు ఏమయ్యారు? సెపర్వయీము దేవుళ్ళు ఏమయ్యారు? హేన ఇవ్వా అనే వాళ్ళ దేవుళ్ళు ఏమయ్యారు? (షోమ్రోను దేశపు) దేవుళ్ళు మా చేతిలోనుంచి షోమ్రోనును విడిపించారా?
35 ೩೫ ಯಾವ ಜನಾಂಗದ ದೇವತೆಯಾದರೂ ತನ್ನ ದೇಶವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡಲು ಆಗದೆ ಹೋದ ಮೇಲೆ ಯೆಹೋವನು ಯೆರೂಸಲೇಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡುವನೋ?” ಎಂದು ಹೇಳಿದನು.
౩౫మా చేతిలోనుంచి యెహోవా యెరూషలేమును విడిపిస్తాడు అనడానికి, వివిధ దేశాల దేవుళ్లలో ఎవరైనా తమ దేశాన్ని మా చేతిలోనుంచి విడిపించిన సందర్భం ఉందా?” అన్నాడు.
36 ೩೬ ಆ ಸೇನಾಪತಿಗಳಿಗೆ ಯಾವ ಉತ್ತರವನ್ನೂ ಕೊಡಬಾರದೆಂದು ಅರಸನು ತನ್ನ ಪ್ರಜೆಗಳಿಗೆ ಆಜ್ಞಾಪಿಸಿದ್ದರಿಂದ ಅವರು ಸುಮ್ಮನಿದ್ದರು. ಏನೂ ಹೇಳಲಿಲ್ಲ.
౩౬అయితే అతనికి జవాబు ఇవ్వొద్దని రాజు చెప్పిన కారణంగా ప్రజలు ఏమాత్రం మాట్లాడకుండా మౌనంగా ఉన్నారు.
37 ೩೭ ಹಿಲ್ಕೀಯನ ಮಗನೂ, ರಾಜಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್ ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.
౩౭గృహ నిర్వాహకుడైన హిల్కీయా కొడుకు ఎల్యాకీము, శాస్త్రి షెబ్నా, రాజ్య లేఖనాల అధిపతి ఆసాపు కొడుకు యోవాహు, బట్టలు చింపుకుని హిజ్కియా దగ్గరికి వచ్చి, రబ్షాకే పలికిన మాటలన్నీ తెలియజేశారు.

< ಅರಸುಗಳು - ದ್ವಿತೀಯ ಭಾಗ 18 >