< ಅರಸುಗಳು - ದ್ವಿತೀಯ ಭಾಗ 19 >

1 ಅರಸನಾದ ಹಿಜ್ಕೀಯನು ಅದನ್ನು ಕೇಳಿ, ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯಕ್ಕೆ ಹೋದನು.
וַיְהִ֗י כִּשְׁמֹ֙עַ֙ הַמֶּ֣לֶךְ חִזְקִיָּ֔הוּ וַיִּקְרַ֖ע אֶת־בְּגָדָ֑יו וַיִּתְכַּ֣ס בַּשָּׂ֔ק וַיָּבֹ֖א בֵּ֥ית יְהוָֽה׃
2 ಇದಲ್ಲದೆ, ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿಯೂ, ಲೇಖಕನಾದ ಶೆಬ್ನ, ವೃದ್ಧ ಯಾಜಕರು ಇವರನ್ನು ಕರೆಯಿಸಿ ಅವರಿಗೆ ಆಜ್ಞಾಪಿಸಿದ್ದೇನೆಂದರೆ, ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ, ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿರಿ.
וַ֠יִּשְׁלַח אֶת־אֶלְיָקִ֨ים אֲשֶׁר־עַל־הַבַּ֜יִת וְשֶׁבְנָ֣א הַסֹּפֵ֗ר וְאֵת֙ זִקְנֵ֣י הַכֹּֽהֲנִ֔ים מִתְכַּסִּ֖ים בַּשַּׂקִּ֑ים אֶל־יְשַֽׁעְיָ֥הוּ הַנָּבִ֖יא בֶּן־אָמֽוֹץ׃
3 ಅವರು ಹಿಜ್ಕೀಯನಿಗೆ, “ಈ ದಿನದಲ್ಲಿ ನಮಗೆ ಮಹಾಕಷ್ಟವು ಸಂಭವಿಸಿರುತ್ತದೆ. ನಾವು ಅಪಮಾನವನ್ನು, ನಿಂದೆಯನ್ನು ಅನುಭವಿಸಬೇಕಾಗಿ ಬಂದಿದೆ. ಹೆರಿಗೆಯ ಕಾಲ ಬಂದಿದೆ; ಆದರೆ ಹೆರುವುದಕ್ಕೆ ಬಲ ಸಾಲದು.
וַיֹּאמְר֣וּ אֵלָ֗יו כֹּ֚ה אָמַ֣ר חִזְקִיָּ֔הוּ יוֹם־צָרָ֧ה וְתוֹכֵחָ֛ה וּנְאָצָ֖ה הַיּ֣וֹם הַזֶּ֑ה כִּ֣י בָ֤אוּ בָנִים֙ עַד־מַשְׁבֵּ֔ר וְכֹ֥חַ אַ֖יִן לְלֵדָֽה׃
4 ಜೀವಸ್ವರೂಪನಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದನೆಯ ಮಾತುಗಳನ್ನು, ನಿನ್ನ ದೇವರಾದ ಯೆಹೋವನು ಕೇಳಿರುವನು. ನಿನ್ನ ದೇವರಾದ ಯೆಹೋವನು ತಾನು ಹೇಳಿದ ಮಾತುಗಳ ನಿಮಿತ್ತ ಮುಯ್ಯಿತೀರಿಸುವನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗಾಗಿಯಾದರೂ ಆತನನ್ನು ಪ್ರಾರ್ಥಿಸು ಎಂಬುದಾಗಿ ಹಿಜ್ಕೀಯನು ಹೇಳುತ್ತಾನೆ” ಎಂದು ಹೇಳಿರಿ ಅಂದನು.
אוּלַ֡י יִשְׁמַע֩ יְהוָ֨ה אֱלֹהֶ֜יךָ אֵ֣ת ׀ כָּל־דִּבְרֵ֣י רַב־שָׁקֵ֗ה אֲשֶׁר֩ שְׁלָח֨וֹ מֶֽלֶךְ־אַשּׁ֤וּר ׀ אֲדֹנָיו֙ לְחָרֵף֙ אֱלֹהִ֣ים חַ֔י וְהוֹכִ֙יחַ֙ בַּדְּבָרִ֔ים אֲשֶׁ֥ר שָׁמַ֖ע יְהוָ֣ה אֱלֹהֶ֑יךָ וְנָשָׂ֣אתָ תְפִלָּ֔ה בְּעַ֥ד הַשְּׁאֵרִ֖ית הַנִּמְצָאָֽה׃
5 ಅರಸನಾದ ಹಿಜ್ಕೀಯನ ಸೇವಕರು ಯೆಶಾಯನ ಬಳಿಗೆ ಬಂದಾಗ,
וַיָּבֹ֗אוּ עַבְדֵ֛י הַמֶּ֥לֶךְ חִזְקִיָּ֖הוּ אֶל־יְשַֽׁעַיָֽהוּ׃
6 ಯೆಶಾಯನು ಅವರಿಗೆ, “ನೀವು ಹಿಂತಿರುಗಿ ಹೋಗಿ ನಿಮ್ಮ ರಾಜನಿಗೆ, ‘ಯೆಹೋವನು ಹೀಗೆ ಹೇಳುತ್ತಾನೆ, ನೀನು ಕೇಳಿದ ಮಾತುಗಳ ದೆಸೆಯಿಂದ ಹೆದರಬೇಡ, ಅಶ್ಶೂರದ ಅರಸನ ಸೇವಕರು ಆ ಮಾತುಗಳಿಂದ ನನ್ನನ್ನೇ ದೂಷಿಸಿದ್ದಾರೆ.
וַיֹּ֤אמֶר לָהֶם֙ יְשַֽׁעְיָ֔הוּ כֹּ֥ה תֹאמְר֖וּן אֶל־אֲדֹֽנֵיכֶ֑ם כֹּ֣ה ׀ אָמַ֣ר יְהוָ֗ה אַל־תִּירָא֙ מִפְּנֵ֤י הַדְּבָרִים֙ אֲשֶׁ֣ר שָׁמַ֗עְתָּ אֲשֶׁ֧ר גִּדְּפ֛וּ נַעֲרֵ֥י מֶֽלֶךְ־אַשּׁ֖וּר אֹתִֽי׃
7 ಆದುದರಿಂದ, ನಾನು ಅವನ ಮೇಲೆ ಭಯದ ಆತ್ಮವನ್ನು ಬರಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ಸ್ವದೇಶಕ್ಕೆ ಹಿಂದಿರುಗಿ ಹೋಗಿ ಅಲ್ಲಿ ಕತ್ತಿಯಿಂದ ನಾಶವಾಗುವಂತೆ ಮಾಡುವೆನು’ ಎಂಬುದಾಗಿ ಯೆಹೋವನು ನಿಮ್ಮ ಯಜಮಾನನಿಗೆ ಹೇಳುತ್ತಾನೆ” ಎಂದು ಉತ್ತರಕೊಟ್ಟನು.
הִנְנִ֨י נֹתֵ֥ן בּוֹ֙ ר֔וּחַ וְשָׁמַ֥ע שְׁמוּעָ֖ה וְשָׁ֣ב לְאַרְצ֑וֹ וְהִפַּלְתִּ֥יו בַּחֶ֖רֶב בְּאַרְצֽוֹ׃
8 ರಬ್ಷಾಕೆಯು ಹಿಂದಿರುಗಿ ಹೋಗುವಾಗ ದಾರಿಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನ ಕೇಳಿ ಲಿಬ್ನಕ್ಕೆ ಹೋಗಿ, ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣಕ್ಕೆ ವಿರುದ್ಧವಾಗಿ ಯುದ್ಧಮಾಡುತ್ತಾ ಇದ್ದನು.
וַיָּ֙שָׁב֙ רַב־שָׁקֵ֔ה וַיִּמְצָא֙ אֶת־מֶ֣לֶךְ אַשּׁ֔וּר נִלְחָ֖ם עַל־לִבְנָ֑ה כִּ֣י שָׁמַ֔ע כִּ֥י נָסַ֖ע מִלָּכִֽישׁ׃
9 ಅಷ್ಟರಲ್ಲಿ ಐಗುಪ್ತದ ಅರಸನೂ ಮತ್ತು ಕೂಷಿನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡಲು ಹೊರಟಿದ್ದಾನೆ ಎಂಬ ಸುದ್ದಿಯನ್ನು ಸನ್ಹೇರೀಬನು ಕೇಳಿದಾಗ, ಯೆಹೂದದ ಅರಸನಾದ ಹಿಜ್ಕೀಯನ ಬಳಿಗೆ ಪುನಃ ದೂತರನ್ನು ಕಳುಹಿಸಿ,
וַיִּשְׁמַ֗ע אֶל־תִּרְהָ֤קָה מֶֽלֶך־כּוּשׁ֙ לֵאמֹ֔ר הִנֵּ֥ה יָצָ֖א לְהִלָּחֵ֣ם אִתָּ֑ךְ וַיָּ֙שָׁב֙ וַיִּשְׁלַ֣ח מַלְאָכִ֔ים אֶל־חִזְקִיָּ֖הוּ לֵאמֹֽר׃
10 ೧೦ ಅವರ ಮುಖಾಂತರ, “ಯೆಹೂದದ ಅರಸನಾದ ಹಿಜ್ಕೀಯನಿಗೆ, ‘ಯೆರೂಸಲೇಮನ್ನು ಅಶ್ಶೂರದ ಅರಸನಿಗೆ ಒಪ್ಪಿಸುವುದಿಲ್ಲವೆಂದು ನೀನು ನಂಬಿರುವ ನಿನ್ನ ದೇವರು ನಿನ್ನನ್ನು ಮೋಸಗೊಳಿಸದಿರಲಿ
כֹּ֣ה תֹאמְר֗וּן אֶל־חִזְקִיָּ֤הוּ מֶֽלֶךְ־יְהוּדָה֙ לֵאמֹ֔ר אַל־יַשִּׁאֲךָ֣ אֱלֹהֶ֔יךָ אֲשֶׁ֥ר אַתָּ֛ה בֹּטֵ֥חַ בּ֖וֹ לֵאמֹ֑ר לֹ֤א תִנָּתֵן֙ יְר֣וּשָׁלִַ֔ם בְּיַ֖ד מֶ֥לֶךְ אַשּֽׁוּר׃
11 ೧೧ ಅಶ್ಶೂರದ ಅರಸುಗಳು ಎಲ್ಲಾ ರಾಜ್ಯಗಳನ್ನು ಸಂಪೂರ್ಣವಾಗಿ ನಾಶಮಾಡಿರುವರೆಂದು ಕೇಳಿರುವೆಯಲ್ಲಾ. ಹೀಗಿದ್ದ ಮೇಲೆ ನೀನು ತಪ್ಪಿಸಿಕೊಳ್ಳುವೆಯೋ?
הִנֵּ֣ה ׀ אַתָּ֣ה שָׁמַ֗עְתָּ אֵת֩ אֲשֶׁ֨ר עָשׂ֜וּ מַלְכֵ֥י אַשּׁ֛וּר לְכָל־הָאֲרָצ֖וֹת לְהַֽחֲרִימָ֑ם וְאַתָּ֖ה תִּנָּצֵֽל׃
12 ೧೨ ನನ್ನ ಪೂರ್ವಿಕರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನೂ ನಾಶಮಾಡುವುದಕ್ಕೆ ಹೋದಾಗ ಅವರ ದೇವತೆಗಳು ಅವರನ್ನು ಕಾಪಾಡಿದವೋ?
הַהִצִּ֨ילוּ אֹתָ֜ם אֱלֹהֵ֤י הַגּוֹיִם֙ אֲשֶׁ֣ר שִׁחֲת֣וּ אֲבוֹתַ֔י אֶת־גּוֹזָ֖ן וְאֶת־חָרָ֑ן וְרֶ֥צֶף וּבְנֵי־עֶ֖דֶן אֲשֶׁ֥ר בִּתְלַאשָּֽׂר׃
13 ೧೩ ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು? ಎಂದು ನಿನಗೆ ತಿಳಿಯದೋ ಎಂದು ಪತ್ರವನ್ನು ದೂತರ ಮೂಲಕ ಕಳುಹಿಸಿದ.’”
אַיּ֤וֹ מֶֽלֶךְ־חֲמָת֙ וּמֶ֣לֶךְ אַרְפָּ֔ד וּמֶ֖לֶךְ לָעִ֣יר סְפַרְוָ֑יִם הֵנַ֖ע וְעִוָּֽה׃
14 ೧೪ ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟನು.
וַיִּקַּ֨ח חִזְקִיָּ֧הוּ אֶת־הַסְּפָרִ֛ים מִיַּ֥ד הַמַּלְאָכִ֖ים וַיִּקְרָאֵ֑ם וַיַּ֙עַל֙ בֵּ֣ית יְהוָ֔ה וַיִּפְרְשֵׂ֥הוּ חִזְקִיָּ֖הוּ לִפְנֵ֥י יְהוָֽה׃ פ
15 ೧೫ ಹಿಜ್ಕೀಯನು ಯೆಹೋವನ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನೆಂದರೆ, “ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲರ ದೇವರೇ, ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕಭೂಲೋಕಗಳನ್ನು ಉಂಟುಮಾಡಿದವನು ನೀನೇ.
וַיִּתְפַּלֵּ֨ל חִזְקִיָּ֜הוּ לִפְנֵ֣י יְהוָה֮ וַיֹּאמַר֒ יְהוָ֞ה אֱלֹהֵ֤י יִשְׂרָאֵל֙ יֹשֵׁ֣ב הַכְּרֻבִ֔ים אַתָּה־ה֤וּא הָֽאֱלֹהִים֙ לְבַדְּךָ֔ לְכֹ֖ל מַמְלְכ֣וֹת הָאָ֑רֶץ אַתָּ֣ה עָשִׂ֔יתָ אֶת־הַשָּׁמַ֖יִם וְאֶת־הָאָֽרֶץ׃
16 ೧೬ ಯೆಹೋವನೇ, ಕಿವಿಗೊಟ್ಟು ಕೇಳು; ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪದೇವರಾದ ನಿನ್ನನ್ನು ನಿಂದಿಸುವುದಕ್ಕೋಸ್ಕರ ಹೇಳಿ ಕಳುಹಿಸಿದ ಮಾತುಗಳನ್ನು ಮನಸ್ಸಿಗೆ ತಂದುಕೋ.
הַטֵּ֨ה יְהוָ֤ה ׀ אָזְנְךָ֙ וּֽשֲׁמָ֔ע פְּקַ֧ח יְהוָ֛ה עֵינֶ֖יךָ וּרְאֵ֑ה וּשְׁמַ֗ע אֵ֚ת דִּבְרֵ֣י סַנְחֵרִ֔יב אֲשֶׁ֣ר שְׁלָח֔וֹ לְחָרֵ֖ף אֱלֹהִ֥ים חָֽי׃
17 ೧೭ ಯೆಹೋವನೇ, ಅಶ್ಶೂರದ ಅರಸರು ದೇಶಗಳನ್ನೂ ಜನಾಂಗಗಳನ್ನೂ ಹಾಳುಮಾಡಿದರು.
אָמְנָ֖ם יְהוָ֑ה הֶחֱרִ֜יבוּ מַלְכֵ֥י אַשּׁ֛וּר אֶת־הַגּוֹיִ֖ם וְאֶת־אַרְצָֽם׃
18 ೧೮ ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ. ಅವು ದೇವತೆಗಳಲ್ಲ. ಮನುಷ್ಯರು ಕೆತ್ತಿದ ಕಲ್ಲು ಮತ್ತು ಮರಗಳ ಬೊಂಬೆಗಳಷ್ಟೇ. ಆದುದರಿಂದ ಅವುಗಳನ್ನು ಹಾಳುಮಾಡುವುದು ಅವರಿಗೆ ಸಾಧ್ಯವಾಯಿತು.
וְנָתְנ֥וּ אֶת־אֱלֹהֵיהֶ֖ם בָּאֵ֑שׁ כִּי֩ לֹ֨א אֱלֹהִ֜ים הֵ֗מָּה כִּ֣י אִם־מַעֲשֵׂ֧ה יְדֵֽי־אָדָ֛ם עֵ֥ץ וָאֶ֖בֶן וַֽיְאַבְּדֽוּם׃
19 ೧೯ ಯೆಹೋವನೇ, ನಮ್ಮ ದೇವರೇ, ನೀನೊಬ್ಬನೇ ದೇವರೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು” ಎಂದು ಪ್ರಾರ್ಥಿಸಿದನು.
וְעַתָּה֙ יְהוָ֣ה אֱלֹהֵ֔ינוּ הוֹשִׁיעֵ֥נוּ נָ֖א מִיָּד֑וֹ וְיֵֽדְעוּ֙ כָּל־מַמְלְכ֣וֹת הָאָ֔רֶץ כִּ֥י אַתָּ֛ה יְהוָ֥ה אֱלֹהִ֖ים לְבַדֶּֽךָ׃ ס
20 ೨೦ ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ, “ಇಸ್ರಾಯೇಲರ ದೇವರಾದ ಯೆಹೋವನು ಹೀಗೆ ಅನ್ನುತ್ತಾನೆ, ‘ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹವನ್ನು ಕೇಳಿದ್ದೇನೆ.’
וַיִּשְׁלַח֙ יְשַֽׁעְיָ֣הוּ בֶן־אָמ֔וֹץ אֶל־חִזְקִיָּ֖הוּ לֵאמֹ֑ר כֹּֽה־אָמַ֤ר יְהוָה֙ אֱלֹהֵ֣י יִשְׂרָאֵ֔ל אֲשֶׁ֨ר הִתְפַּלַּ֧לְתָּ אֵלַ֛י אֶל־סַנְחֵרִ֥ב מֶֽלֶךְ־אַשּׁ֖וּר שָׁמָֽעְתִּי׃
21 ೨೧ ಯೆಹೋವನು ಅವನನ್ನು ಕುರಿತು, “ಕನ್ನಿಕೆಯಾಗಿರುವ ಚೀಯೋನಿನ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ ಪರಿಹಾಸ್ಯಮಾಡುತ್ತಾಳೆ. ಯೆರೂಸಲೇಮಿನ ಕುಮಾರ್ತೆಯು ನಿನ್ನ ಹಿಂದಿನಿಂದ ತಲೆಯಾಡಿಸುತ್ತಾಳೆ.
זֶ֣ה הַדָּבָ֔ר אֲשֶׁר־דִּבֶּ֥ר יְהוָ֖ה עָלָ֑יו בָּזָ֨ה לְךָ֜ לָעֲגָ֣ה לְךָ֗ בְּתוּלַת֙ בַּת־צִיּ֔וֹן אַחֲרֶ֙יךָ֙ רֹ֣אשׁ הֵנִ֔יעָה בַּ֖ת יְרוּשָׁלִָֽם׃
22 ೨೨ ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ದೀ? ಯಾರ ವಿರುದ್ಧವಾಗಿ ಬಾಯ್ದೆರೆದು ಹೀಯಾಳಿಸಿದ್ದಿ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ ಸದಮಲಸ್ವಾಮಿಯನ್ನಲ್ಲವೇ!
אֶת־מִ֤י חֵרַ֙פְתָּ֙ וְגִדַּ֔פְתָּ וְעַל־מִ֖י הֲרִימ֣וֹתָ קּ֑וֹל וַתִּשָּׂ֥א מָר֛וֹם עֵינֶ֖יךָ עַל־קְד֥וֹשׁ יִשְׂרָאֵֽל׃
23 ೨೩ ನೀನು ನಿನ್ನ ದೂತರ ಮುಖಾಂತರವಾಗಿ ಕರ್ತನನ್ನು ನಿಂದಿಸಿ, ರಥಸಮೂಹದೊಡನೆ ಪರ್ವತಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ. ಅದರ ಎತ್ತರವಾದ ದೇವದಾರುವೃಕ್ಷಗಳನ್ನೂ ಶ್ರೇಷ್ಠವಾದ ತುರಾಯಿಮರಗಳನ್ನೂ ಕಡಿದುಬಿಟ್ಟಿದ್ದೇನೆ. ಅಲ್ಲಿನ ಬಹು ದೂರ ನಿವಾಸಸ್ಥಳಗಳನ್ನೂ, ಉದ್ಯಾನವನಗಳನ್ನೂ ಪ್ರವೇಶಿಸಿದ್ದೇನೆ.
בְּיַ֣ד מַלְאָכֶיךָ֮ חֵרַ֣פְתָּ ׀ אֲדֹנָי֒ וַתֹּ֗אמֶר ברכב רִכְבִּ֛י אֲנִ֥י עָלִ֛יתִי מְר֥וֹם הָרִ֖ים יַרְכְּתֵ֣י לְבָנ֑וֹן וְאֶכְרֹ֞ת קוֹמַ֤ת אֲרָזָיו֙ מִבְח֣וֹר בְּרֹשָׁ֔יו וְאָב֙וֹאָה֙ מְל֣וֹן קִצֹּ֔ה יַ֖עַר כַּרְמִלּֽוֹ׃
24 ೨೪ ನಾನು ಅನ್ಯದೇಶದಲ್ಲಿ ಬಾವಿಗಳನ್ನು ಅಗೆದು ನೀರು ತೆಗೆದು ಕುಡಿದಿದ್ದೇನೆ! ನನ್ನ ಪಾದಗಳಿಂದ ಐಗುಪ್ತದ ಎಲ್ಲಾ ನದಿಗಳನ್ನು ಬತ್ತಿಸಿದ್ದೇನೆ ಎಂಬುದಾಗಿ ನೀನು ಕೊಚ್ಚಿಕೊಂಡಿದ್ದೀಯಲ್ಲವೇ?”
אֲנִ֣י קַ֔רְתִּי וְשָׁתִ֖יתִי מַ֣יִם זָרִ֑ים וְאַחְרִב֙ בְּכַף־פְּעָמַ֔י כֹּ֖ל יְאֹרֵ֥י מָצֽוֹר׃
25 ೨೫ ಬಹು ಕಾಲದ ಹಿಂದೆಯೇ ಇದನೆಲ್ಲ ಗೊತ್ತುಮಾಡಿದವನು ನಾನಲ್ಲವೇ? ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದುದರಿಂದ ಕೋಟೆ, ಕೊತ್ತಲುಗಳುಳ್ಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವುದು ನಿನಗೆ ಸಾಧ್ಯವಾಯಿತೋ?
הֲלֹֽא־שָׁמַ֤עְתָּ לְמֵֽרָחוֹק֙ אֹתָ֣הּ עָשִׂ֔יתִי לְמִ֥ימֵי קֶ֖דֶם וִֽיצַרְתִּ֑יהָ עַתָּ֣ה הֲבֵיאתִ֗יהָ וּתְהִ֗י לַהְשׁ֛וֹת גַּלִּ֥ים נִצִּ֖ים עָרִ֥ים בְּצֻרֽוֹת׃
26 ೨೬ ಅವುಗಳ ನಿವಾಸಿಗಳು ಬಲವಿಲ್ಲದವರಾಗಿ ಹೆದರಿ ಆಶಾಭಂಗಪಟ್ಟು ಕಳವಳಗೊಂಡರು; ಅವರು ಹೊಲದ ಗಿಡಕ್ಕೂ ಕಾಯಿ ಪಲ್ಯಕ್ಕೂ ಹಸಿರು ಹುಲ್ಲಿಗೂ, ಮನೆಯ ಮೇಲೆ ಬೆಳೆಯುವ ಹಾಗೂ, ಹೊಲದ ಹುಲ್ಲಿನ ಹಾಗೆ ಬೆಳೆಯುವುದಕ್ಕಿಂತ ಮೊದಲೇ ಸುಟ್ಟುಹೋದ ಪೈರಿಗೆ ಸಮಾನರಾದರು.
וְיֹֽשְׁבֵיהֶן֙ קִצְרֵי־יָ֔ד חַ֖תּוּ וַיֵּבֹ֑שׁוּ הָי֞וּ עֵ֤שֶׂב שָׂדֶה֙ וִ֣ירַק דֶּ֔שֶׁא חֲצִ֣יר גַּגּ֔וֹת וּשְׁדֵפָ֖ה לִפְנֵ֥י קָמָֽה׃
27 ೨೭ “ನೀನು ಕುಳಿತುಕೊಳ್ಳುವುದು, ಹೋಗುವುದು, ಬರುವುದೂ ನನಗೆ ಗೊತ್ತುಂಟು. ನೀನು ನನ್ನ ಮೇಲೆ ರೌದ್ರಾವೇಷವಾಗಿರುವುದನ್ನು ಬಲ್ಲೆನು.
וְשִׁבְתְּךָ֛ וְצֵאתְךָ֥ וּבֹאֲךָ֖ יָדָ֑עְתִּי וְאֵ֖ת הִֽתְרַגֶּזְךָ֥ אֵלָֽי׃
28 ೨೮ ನೀನು ನನಗೆ ವಿರುದ್ಧವಾಗಿ ಉಬ್ಬಿಕೊಂಡಿರುವುದೂ, ಕೋಪವುಳ್ಳವನಾಗಿರುವುದೂ ನನಗೆ ತಿಳಿದು ಬಂದಿದೆ. ಆದುದರಿಂದ ನಿನ್ನ ಮೂಗಿಗೂ, ನಿನ್ನ ಬಾಯಿಗೂ ಕಡಿವಾಣವನ್ನೂ ಹಾಕಿ, ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು” ಎಂಬುದಾಗಿ ಹೇಳಿದ್ದಾನೆ.
יַ֚עַן הִתְרַגֶּזְךָ֣ אֵלַ֔י וְשַׁאֲנַנְךָ֖ עָלָ֣ה בְאָזְנָ֑י וְשַׂמְתִּ֨י חַחִ֜י בְּאַפֶּ֗ךָ וּמִתְגִּי֙ בִּשְׂפָתֶ֔יךָ וַהֲשִׁ֣בֹתִ֔יךָ בַּדֶּ֖רֶךְ אֲשֶׁר־בָּ֥אתָ בָּֽהּ׃
29 ೨೯ ಈ ಮಾತುಗಳು ನೆರವೇರುವವು ಎಂಬುದಕ್ಕೆ ನೀವು ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಮುಂದಿನ ವರ್ಷದಲ್ಲಿ ಮಿಕ್ಕಿರುವ ಬೆಳೆಯನ್ನೂ, ಮೂರನೆಯ ವರ್ಷ ನೀವು ಹೊಲಗಳಲ್ಲಿ ಬಿತ್ತಿ ಬೆಳೆದದ್ದನ್ನು, ದ್ರಾಕ್ಷಿತೋಟಗಳಲ್ಲಿ ವ್ಯವಸಾಯ ಮಾಡಿ ಕೂಡಿಸಿದ್ದನ್ನೂ ಅನುಭವಿಸುವುದೇ ಗುರುತಾಗಿರುವುದು.
וְזֶה־לְּךָ֣ הָא֔וֹת אָכ֤וֹל הַשָּׁנָה֙ סָפִ֔יחַ וּבַשָּׁנָ֥ה הַשֵּׁנִ֖ית סָחִ֑ישׁ וּבַשָּׁנָ֣ה הַשְּׁלִישִׁ֗ית זִרְע֧וּ וְקִצְר֛וּ וְנִטְע֥וּ כְרָמִ֖ים וְאִכְל֥וּ פִרְיָֽם׃
30 ೩೦ ತಪ್ಪಿಸಿಕೊಂಡು ಉಳಿದ ಯೆಹೂದ್ಯರು ದೇಶದಲ್ಲಿ ನೆಲೆಗೊಂಡು ಅಭಿವೃದ್ದಿಯಾಗುವರು.
וְיָ֨סְפָ֜ה פְּלֵיטַ֧ת בֵּית־יְהוּדָ֛ה הַנִּשְׁאָרָ֖ה שֹׁ֣רֶשׁ לְמָ֑טָּה וְעָשָׂ֥ה פְרִ֖י לְמָֽעְלָה׃
31 ೩೧ ಯೆರೂಸಲೇಮಿನಲ್ಲಿ ಉಳಿದವರು ಹಬ್ಬಿ ಹರಡಿಕೊಳ್ಳುವರು, ಚೀಯೋನ್ ಪರ್ವತದಲ್ಲಿ ತಪ್ಪಿಸಿಕೊಂಡವರು ಅಭಿವೃದ್ದಿಹೊಂದುವರು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವೇ ಇದನ್ನು ನೆರವೇರಿಸುವುದು.
כִּ֤י מִירוּשָׁלִַ֙ם֙ תֵּצֵ֣א שְׁאֵרִ֔ית וּפְלֵיטָ֖ה מֵהַ֣ר צִיּ֑וֹן קִנְאַ֛ת יְהוָ֥ה תַּֽעֲשֶׂה־זֹּֽאת׃ ס
32 ೩೨ ಯೆಹೋವನು ಅಶ್ಶೂರದ ಅರಸನ ವಿಷಯವಾಗಿ, “ನನ್ನ ಮಾತನ್ನು ಕೇಳು ಅವನು ಪಟ್ಟಣವನ್ನು ಸಮೀಪಿಸುವುದಿಲ್ಲ. ಅದಕ್ಕೆ ಬಾಣವನ್ನೆಸೆಯುವುದಿಲ್ಲ. ಗುರಾಣಿ ಹಿಡಿದಿರುವವರನ್ನು ಕಳುಹಿಸುವುದಿಲ್ಲ. ಅದನ್ನು ಕೆಡವಿಬಿಡುವುದಕ್ಕೋಸ್ಕರ ಅದರ ಎದುರಾಗಿ ಮಣ್ಣಿನ ದಿಬ್ಬವನ್ನು ಸೃಷ್ಟಿಸುವುದಿಲ್ಲ.
לָכֵ֗ן כֹּֽה־אָמַ֤ר יְהוָה֙ אֶל־מֶ֣לֶךְ אַשּׁ֔וּר לֹ֤א יָבֹא֙ אֶל־הָעִ֣יר הַזֹּ֔את וְלֹֽא־יוֹרֶ֥ה שָׁ֖ם חֵ֑ץ וְלֹֽא־יְקַדְּמֶ֣נָּה מָגֵ֔ן וְלֹֽא־יִשְׁפֹּ֥ךְ עָלֶ֖יהָ סֹלְלָֽה׃
33 ೩೩ ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು. ಈ ಪಟ್ಟಣಕ್ಕೆ ಬರುವುದೇ ಇಲ್ಲ ಎಂದು ಹೇಳಿದ್ದಲ್ಲದೆ
בַּדֶּ֥רֶךְ אֲשֶׁר־יָבֹ֖א בָּ֣הּ יָשׁ֑וּב וְאֶל־הָעִ֥יר הַזֹּ֛את לֹ֥א יָבֹ֖א נְאֻם־יְהוָֽה׃
34 ೩೪ ನನಗಾಗಿಯೂ, ನನ್ನ ಸೇವಕನಾದ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು” ಎಂದು ವಾಗ್ದಾನ ಮಾಡಿದ್ದಾನೆ.
וְגַנּוֹתִ֛י אֶל־הָעִ֥יר הַזֹּ֖את לְהֽוֹשִׁיעָ֑הּ לְמַֽעֲנִ֔י וּלְמַ֖עַן דָּוִ֥ד עַבְדִּֽי׃
35 ೩೫ ಅದೇ ರಾತ್ರಿಯಲ್ಲಿ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯದ ಪಾಳೆಯದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಸೈನಿಕರನ್ನು ಸಂಹರಿಸಿದನು. ಅಶ್ಶೂರ್ಯರು ಬೆಳಿಗ್ಗೆ ಎದ್ದು ನೋಡಿದಾಗ ಪಾಳೆಯದ ತುಂಬಾ ಹೆಣಗಳು ಬಿದ್ದಿದ್ದವು.
וַיְהִי֮ בַּלַּ֣יְלָה הַהוּא֒ וַיֵּצֵ֣א ׀ מַלְאַ֣ךְ יְהוָ֗ה וַיַּךְ֙ בְּמַחֲנֵ֣ה אַשּׁ֔וּר מֵאָ֛ה שְׁמוֹנִ֥ים וַחֲמִשָּׁ֖ה אָ֑לֶף וַיַּשְׁכִּ֣ימוּ בַבֹּ֔קֶר וְהִנֵּ֥ה כֻלָּ֖ם פְּגָרִ֥ים מֵתִֽים׃
36 ೩೬ ಆಗ ಅಶ್ಶೂರ್ಯರ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಮಾಡಿದನು.
וַיִּסַּ֣ע וַיֵּ֔לֶךְ וַיָּ֖שָׁב סַנְחֵרִ֣יב מֶֽלֶךְ־אַשּׁ֑וּר וַיֵּ֖שֶׁב בְּנִֽינְוֵֽה׃
37 ೩೭ ಅವನು ಒಂದು ದಿನ ದೇವಾಲಯಕ್ಕೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಆರಾಧಿಸುತ್ತಿದ್ದಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬುವವರು ಅವನನ್ನು ಕತ್ತಿಯಿಂದ ಕೊಂದು ಅರರಾಟ್ ದೇಶಕ್ಕೆ ಓಡಿಹೋದರು. ಅವನ ನಂತರ ಅವನ ಮಗನಾದ ಏಸರ್ ಹದ್ದೋನನು ಅರಸನಾದನು.
וַיְהִי֩ ה֨וּא מִֽשְׁתַּחֲוֶ֜ה בֵּ֣ית ׀ נִסְרֹ֣ךְ אֱלֹהָ֗יו וְֽאַדְרַמֶּ֨לֶךְ וְשַׂרְאֶ֤צֶר הִכֻּ֣הוּ בַחֶ֔רֶב וְהֵ֥מָּה נִמְלְט֖וּ אֶ֣רֶץ אֲרָרָ֑ט וַיִּמְלֹ֛ךְ אֵֽסַר־חַדֹּ֥ן בְּנ֖וֹ תַּחְתָּֽיו׃ פ

< ಅರಸುಗಳು - ದ್ವಿತೀಯ ಭಾಗ 19 >