< ಅರಸುಗಳು - ದ್ವಿತೀಯ ಭಾಗ 19 >

1 ಅರಸನಾದ ಹಿಜ್ಕೀಯನು ಅದನ್ನು ಕೇಳಿ, ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯಕ್ಕೆ ಹೋದನು.
जब राजा हिजकियाले तिनीहरूको कुरा सुने, तब तिनले आफ्ना लुगा च्याते, भाङ्ग्रा लगाए र परमप्रभुको मन्दिरभित्र गए ।
2 ಇದಲ್ಲದೆ, ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿಯೂ, ಲೇಖಕನಾದ ಶೆಬ್ನ, ವೃದ್ಧ ಯಾಜಕರು ಇವರನ್ನು ಕರೆಯಿಸಿ ಅವರಿಗೆ ಆಜ್ಞಾಪಿಸಿದ್ದೇನೆಂದರೆ, ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ, ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿರಿ.
तिनले राजदरबारका निरिक्षक एल्याकीम, सचिव शेब्ना र पुजारीहरूका धर्म-गुरुहरू सबैलाई भाङ्ग्रा लगाएर आमोजका छोरा अगमवक्ता यशैयाकहाँ पठाए ।
3 ಅವರು ಹಿಜ್ಕೀಯನಿಗೆ, “ಈ ದಿನದಲ್ಲಿ ನಮಗೆ ಮಹಾಕಷ್ಟವು ಸಂಭವಿಸಿರುತ್ತದೆ. ನಾವು ಅಪಮಾನವನ್ನು, ನಿಂದೆಯನ್ನು ಅನುಭವಿಸಬೇಕಾಗಿ ಬಂದಿದೆ. ಹೆರಿಗೆಯ ಕಾಲ ಬಂದಿದೆ; ಆದರೆ ಹೆರುವುದಕ್ಕೆ ಬಲ ಸಾಲದು.
तिनीहरूले तिनलाई भने, “हिजकिया भन्‍नुहुन्छ, 'जसरी बच्‍चा जन्मन लाग्‍छ तर तिनीहरूमा जन्‍मिने बल हुँदैन, त्यसरी नै यो दिन कष्‍ट, हप्की र अनादरको दिन भएको छ ।
4 ಜೀವಸ್ವರೂಪನಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದನೆಯ ಮಾತುಗಳನ್ನು, ನಿನ್ನ ದೇವರಾದ ಯೆಹೋವನು ಕೇಳಿರುವನು. ನಿನ್ನ ದೇವರಾದ ಯೆಹೋವನು ತಾನು ಹೇಳಿದ ಮಾತುಗಳ ನಿಮಿತ್ತ ಮುಯ್ಯಿತೀರಿಸುವನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗಾಗಿಯಾದರೂ ಆತನನ್ನು ಪ್ರಾರ್ಥಿಸು ಎಂಬುದಾಗಿ ಹಿಜ್ಕೀಯನು ಹೇಳುತ್ತಾನೆ” ಎಂದು ಹೇಳಿರಿ ಅಂದನು.
सायद परमप्रभु तपाईंका परमेश्‍वरले प्रधान सेनापतिका सबै कुरा सुन्‍नुहुनेछ, जसलाई तिनका मालिक अश्शूरका राजाले जीवित परमेश्‍वरलाई विरोध गर्न पठाएका छन्, र परमप्रभु तपाईंका परमेश्‍वरले सुन्‍नुभएको कुराले उहाँले तिनलाई हप्काउनुहुनेछ । अब यहाँ अझै बाँचेकाहरुका निम्ति तपाईंले प्रार्थना गर्नुहोस् ।”
5 ಅರಸನಾದ ಹಿಜ್ಕೀಯನ ಸೇವಕರು ಯೆಶಾಯನ ಬಳಿಗೆ ಬಂದಾಗ,
त्यसैले राजा हिजकियाका सेवकहरू यशैयाकहाँ आए,
6 ಯೆಶಾಯನು ಅವರಿಗೆ, “ನೀವು ಹಿಂತಿರುಗಿ ಹೋಗಿ ನಿಮ್ಮ ರಾಜನಿಗೆ, ‘ಯೆಹೋವನು ಹೀಗೆ ಹೇಳುತ್ತಾನೆ, ನೀನು ಕೇಳಿದ ಮಾತುಗಳ ದೆಸೆಯಿಂದ ಹೆದರಬೇಡ, ಅಶ್ಶೂರದ ಅರಸನ ಸೇವಕರು ಆ ಮಾತುಗಳಿಂದ ನನ್ನನ್ನೇ ದೂಷಿಸಿದ್ದಾರೆ.
र यशैयाले तिनीहरूलाई भने, “आफ्‍ना मालिकलाई यसो भन, 'परमप्रभु यसो भन्‍नुहुन्छः अश्शूरका राजाका सेवकहरूले मेरो अपमान गरेर बोलेका कुरा सुनेर तँ नडरा ।
7 ಆದುದರಿಂದ, ನಾನು ಅವನ ಮೇಲೆ ಭಯದ ಆತ್ಮವನ್ನು ಬರಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ಸ್ವದೇಶಕ್ಕೆ ಹಿಂದಿರುಗಿ ಹೋಗಿ ಅಲ್ಲಿ ಕತ್ತಿಯಿಂದ ನಾಶವಾಗುವಂತೆ ಮಾಡುವೆನು’ ಎಂಬುದಾಗಿ ಯೆಹೋವನು ನಿಮ್ಮ ಯಜಮಾನನಿಗೆ ಹೇಳುತ್ತಾನೆ” ಎಂದು ಉತ್ತರಕೊಟ್ಟನು.
हेर्, म त्यसमा एउटा आत्मा हालिदिनेछु, र त्यसले एउटा खबर सुन्‍नेछ र आफ्नै देशमा फर्केर जानेछ । त्यसको आफ्नै देशमा म त्यसलाई तरवारले ढाल्न लगाउनेछु' ।”
8 ರಬ್ಷಾಕೆಯು ಹಿಂದಿರುಗಿ ಹೋಗುವಾಗ ದಾರಿಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನ ಕೇಳಿ ಲಿಬ್ನಕ್ಕೆ ಹೋಗಿ, ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣಕ್ಕೆ ವಿರುದ್ಧವಾಗಿ ಯುದ್ಧಮಾಡುತ್ತಾ ಇದ್ದನು.
तब प्रधान सेनापति फर्के, र अश्शूरका राजालाई लिब्नाको विरुद्धमा लडाइँ गरिरहेका भेट्टाए किनकि राजा लाकीशबाट गइसकेका थिए भनी तिनले सुनेका थिए ।
9 ಅಷ್ಟರಲ್ಲಿ ಐಗುಪ್ತದ ಅರಸನೂ ಮತ್ತು ಕೂಷಿನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡಲು ಹೊರಟಿದ್ದಾನೆ ಎಂಬ ಸುದ್ದಿಯನ್ನು ಸನ್ಹೇರೀಬನು ಕೇಳಿದಾಗ, ಯೆಹೂದದ ಅರಸನಾದ ಹಿಜ್ಕೀಯನ ಬಳಿಗೆ ಪುನಃ ದೂತರನ್ನು ಕಳುಹಿಸಿ,
त्यसै बेला सनहेरीबको विरुद्धमा लडाइँ गर्न कुश र मिश्रदेशका राजा तिर्हाकाहले सेना परिचालन गरेका छन् भनेर तिनले सुने, त्यसैले तिनले फेरि हिजकियाकहाँ यो समाचारसहित सन्देशवाहकहरू पठाए,
10 ೧೦ ಅವರ ಮುಖಾಂತರ, “ಯೆಹೂದದ ಅರಸನಾದ ಹಿಜ್ಕೀಯನಿಗೆ, ‘ಯೆರೂಸಲೇಮನ್ನು ಅಶ್ಶೂರದ ಅರಸನಿಗೆ ಒಪ್ಪಿಸುವುದಿಲ್ಲವೆಂದು ನೀನು ನಂಬಿರುವ ನಿನ್ನ ದೇವರು ನಿನ್ನನ್ನು ಮೋಸಗೊಳಿಸದಿರಲಿ
“यहूदाका राजा हिजकियालाई भन्‍नूः 'यरूशलेम अश्शूरका राजाको हातमा पर्नेछैन' भन्‍ने तिमीले भरोसा गरेका परमेश्‍वरले तिमीलाई धोका नदेऊन् ।
11 ೧೧ ಅಶ್ಶೂರದ ಅರಸುಗಳು ಎಲ್ಲಾ ರಾಜ್ಯಗಳನ್ನು ಸಂಪೂರ್ಣವಾಗಿ ನಾಶಮಾಡಿರುವರೆಂದು ಕೇಳಿರುವೆಯಲ್ಲಾ. ಹೀಗಿದ್ದ ಮೇಲೆ ನೀನು ತಪ್ಪಿಸಿಕೊಳ್ಳುವೆಯೋ?
हेर, अश्शूरका राजाहरूले सबै देशलाई पूर्ण रूपले नष्‍ट पारेका कुरा तिमीले सुनेका छौ । त्यसैले के तिमीले चाहिँ छुटकारा पाउनेछौ?
12 ೧೨ ನನ್ನ ಪೂರ್ವಿಕರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನೂ ನಾಶಮಾಡುವುದಕ್ಕೆ ಹೋದಾಗ ಅವರ ದೇವತೆಗಳು ಅವರನ್ನು ಕಾಪಾಡಿದವೋ?
मेरा पुर्खाहरूले नष्‍ट पारेकाः गोजान, हारान, रेसेप र तेल-अस्सारमा बस्‍ने अदनका मानिसहरूलाई ती जातिहरूका देवताहरूले छुटकारा दिएका छन्?
13 ೧೩ ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು? ಎಂದು ನಿನಗೆ ತಿಳಿಯದೋ ಎಂದು ಪತ್ರವನ್ನು ದೂತರ ಮೂಲಕ ಕಳುಹಿಸಿದ.’”
हमातका राजा, अर्पादका राजा, सपर्बेम, हेना र इव्वा सहरहरूका राजा कहाँ छन्?”
14 ೧೪ ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟನು.
हिजकियाले सन्देशवाहकरूबाट यो चिठी प्राप्‍त गरे, र तिनले यो पढे । तब तिनी परमप्रभुको मन्दिरमा उक्ले अनि उहाँको सामु यसलाई खोलेर राखिदिए ।
15 ೧೫ ಹಿಜ್ಕೀಯನು ಯೆಹೋವನ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನೆಂದರೆ, “ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲರ ದೇವರೇ, ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕಭೂಲೋಕಗಳನ್ನು ಉಂಟುಮಾಡಿದವನು ನೀನೇ.
तब हिजकियाले परमप्रभुको सामु प्रार्थना गरे, “हे सर्वशक्तिमान् परमप्रभु इस्राएलका परमेश्‍वर तपाईं जो करूबहरूमाथि विराजमान हुनुहुन्छ, तपाईं मात्र पृथ्वीका सबै राज्यमाथि राजा हुनुहुन्छ । तपाईंले नै स्वर्ग र पृथ्वीको सृष्‍टि गर्नुभयो ।
16 ೧೬ ಯೆಹೋವನೇ, ಕಿವಿಗೊಟ್ಟು ಕೇಳು; ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪದೇವರಾದ ನಿನ್ನನ್ನು ನಿಂದಿಸುವುದಕ್ಕೋಸ್ಕರ ಹೇಳಿ ಕಳುಹಿಸಿದ ಮಾತುಗಳನ್ನು ಮನಸ್ಸಿಗೆ ತಂದುಕೋ.
हे परमप्रभु, आफ्‍नो कान थाप्‍नुहोस् र सुन्‍नुहोस् । हे परमप्रभु, आफ्ना आँखा खोल्नुहोस्, र सनहेरीबका कुराहरू सुन्‍नुहोस् जुन त्‍यसले जीवित परमेश्‍वरको गिल्ला गर्न पठाएको छ ।
17 ೧೭ ಯೆಹೋವನೇ, ಅಶ್ಶೂರದ ಅರಸರು ದೇಶಗಳನ್ನೂ ಜನಾಂಗಗಳನ್ನೂ ಹಾಳುಮಾಡಿದರು.
हे परमप्रभु, अश्शूरका राजाहरूले जातिहरू र तिनीहरूका देशहरूलाई साँच्‍चै नै नाश पारेका छन् ।
18 ೧೮ ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ. ಅವು ದೇವತೆಗಳಲ್ಲ. ಮನುಷ್ಯರು ಕೆತ್ತಿದ ಕಲ್ಲು ಮತ್ತು ಮರಗಳ ಬೊಂಬೆಗಳಷ್ಟೇ. ಆದುದರಿಂದ ಅವುಗಳನ್ನು ಹಾಳುಮಾಡುವುದು ಅವರಿಗೆ ಸಾಧ್ಯವಾಯಿತು.
तिनीहरूले उनीहरूका देवताहरूलाई आगोमा फालेका छन् किनकि तिनीहरू ईश्‍वरहरू थिएनन्, तर मानिसका हातका काम अर्थात् काठ र ढुङ्गाहरू थिए । त्यसैले अश्शूरीहरूले तिनलाई नष्‍ट पारे ।
19 ೧೯ ಯೆಹೋವನೇ, ನಮ್ಮ ದೇವರೇ, ನೀನೊಬ್ಬನೇ ದೇವರೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು” ಎಂದು ಪ್ರಾರ್ಥಿಸಿದನು.
अब हे परमप्रभु हाम्रा परमेश्‍वर, म बिन्ती गर्छु, कि त्‍यसको शक्तिबाट हामीलाई बचाउनुहोस्, ताकि पृथ्वीका सबै राज्यले तपाईँ परमप्रभु मात्र परमेश्‍वर हुनुहुन्छ भनी जान्‍न सकून् ।”
20 ೨೦ ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ, “ಇಸ್ರಾಯೇಲರ ದೇವರಾದ ಯೆಹೋವನು ಹೀಗೆ ಅನ್ನುತ್ತಾನೆ, ‘ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹವನ್ನು ಕೇಳಿದ್ದೇನೆ.’
तब आमोजका छोरा यशैयाले हिजकियालाई यसो भनेर समाचार पठाए, “इस्राएलका परमप्रभु परमेश्‍वर यसो भन्‍नुहुन्छ, 'तैँले अश्शूरका राजा सनहेरीबको बारेमा मलाई प्रार्थना गरेकोले म तेरो कुरा सुन्‍नेछु ।
21 ೨೧ ಯೆಹೋವನು ಅವನನ್ನು ಕುರಿತು, “ಕನ್ನಿಕೆಯಾಗಿರುವ ಚೀಯೋನಿನ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ ಪರಿಹಾಸ್ಯಮಾಡುತ್ತಾಳೆ. ಯೆರೂಸಲೇಮಿನ ಕುಮಾರ್ತೆಯು ನಿನ್ನ ಹಿಂದಿನಿಂದ ತಲೆಯಾಡಿಸುತ್ತಾಳೆ.
त्यसको विषयमा परमप्रभुले भन्‍नुभएको वचन यही होः “सियोनकी कन्या-छोरीले तँलाई तिरस्कार गर्छे, र तेरो खिल्ली उडाउँछे । यरूशलेमकी छोरीले तँलाई हेर्दै आफ्नो शिर हल्लाउँछे ।
22 ೨೨ ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ದೀ? ಯಾರ ವಿರುದ್ಧವಾಗಿ ಬಾಯ್ದೆರೆದು ಹೀಯಾಳಿಸಿದ್ದಿ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ ಸದಮಲಸ್ವಾಮಿಯನ್ನಲ್ಲವೇ!
तैँले कसको गिल्ला गरेको छस् र अपमान गरेको छस्? तैँले कसको विरुद्धमा आफ्नो सोर उच्‍च पारेको छस् र घमण्डका साथ आफ्ना आँखा माथि उठाएको छस्? इस्राएलका परमपवित्रको विरुद्धमा हो!
23 ೨೩ ನೀನು ನಿನ್ನ ದೂತರ ಮುಖಾಂತರವಾಗಿ ಕರ್ತನನ್ನು ನಿಂದಿಸಿ, ರಥಸಮೂಹದೊಡನೆ ಪರ್ವತಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ. ಅದರ ಎತ್ತರವಾದ ದೇವದಾರುವೃಕ್ಷಗಳನ್ನೂ ಶ್ರೇಷ್ಠವಾದ ತುರಾಯಿಮರಗಳನ್ನೂ ಕಡಿದುಬಿಟ್ಟಿದ್ದೇನೆ. ಅಲ್ಲಿನ ಬಹು ದೂರ ನಿವಾಸಸ್ಥಳಗಳನ್ನೂ, ಉದ್ಯಾನವನಗಳನ್ನೂ ಪ್ರವೇಶಿಸಿದ್ದೇನೆ.
तेरा सन्देशवाहकहरूद्वारा तैँले परमप्रभुको गिल्ला गरेको छस्, र भनेको छस्, 'मेरा धेरै रथहरूसँगै म पर्वतहरूका टाकुराहरूमा, लेबनानका सबैभन्दा उच्‍च टाकुराहरूमा उक्लेको छु । म त्यहाँका अग्ला-अग्ला देवदारुका रुखहरू र सबैभन्दा असल सल्लाका रुखहरू काटेर ढाल्‍नेछु । म त्यसको पल्लो कुनामा, त्यसको सबैभन्दा फलदायी वनभित्र प्रवेश गर्नेछु ।
24 ೨೪ ನಾನು ಅನ್ಯದೇಶದಲ್ಲಿ ಬಾವಿಗಳನ್ನು ಅಗೆದು ನೀರು ತೆಗೆದು ಕುಡಿದಿದ್ದೇನೆ! ನನ್ನ ಪಾದಗಳಿಂದ ಐಗುಪ್ತದ ಎಲ್ಲಾ ನದಿಗಳನ್ನು ಬತ್ತಿಸಿದ್ದೇನೆ ಎಂಬುದಾಗಿ ನೀನು ಕೊಚ್ಚಿಕೊಂಡಿದ್ದೀಯಲ್ಲವೇ?”
मैले इनारहरू खनेको छु, र विदेशी पानी पिएको छु । मैले आफ्‍ना खुट्टाका पैतलामुनि मिश्रदेशका सबै नदी सुकाएँ ।'
25 ೨೫ ಬಹು ಕಾಲದ ಹಿಂದೆಯೇ ಇದನೆಲ್ಲ ಗೊತ್ತುಮಾಡಿದವನು ನಾನಲ್ಲವೇ? ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದುದರಿಂದ ಕೋಟೆ, ಕೊತ್ತಲುಗಳುಳ್ಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವುದು ನಿನಗೆ ಸಾಧ್ಯವಾಯಿತೋ?
के धेरै पहिले नै मैले यसको निधो गरेको अनि प्राचीन समयमा नै मैले यो रचेको तैँले सुनेको छैनस् र? अब मैले यसलाई कार्यान्वयन गर्न खोज्दैछु । तैँले यहाँ किल्ला भएका सहरहरूलाई भग्‍नावशेषको थुप्रोमा समेटेको छस् ।
26 ೨೬ ಅವುಗಳ ನಿವಾಸಿಗಳು ಬಲವಿಲ್ಲದವರಾಗಿ ಹೆದರಿ ಆಶಾಭಂಗಪಟ್ಟು ಕಳವಳಗೊಂಡರು; ಅವರು ಹೊಲದ ಗಿಡಕ್ಕೂ ಕಾಯಿ ಪಲ್ಯಕ್ಕೂ ಹಸಿರು ಹುಲ್ಲಿಗೂ, ಮನೆಯ ಮೇಲೆ ಬೆಳೆಯುವ ಹಾಗೂ, ಹೊಲದ ಹುಲ್ಲಿನ ಹಾಗೆ ಬೆಳೆಯುವುದಕ್ಕಿಂತ ಮೊದಲೇ ಸುಟ್ಟುಹೋದ ಪೈರಿಗೆ ಸಮಾನರಾದರು.
तिनका थोरै बल भएका बासिन्दाहरू, थाकेका र लाजमा परेका छन् । तिनीहरू मैदानका बिरुवाहरू हुन्, हरिया घाँस छानामाथिका वा मैदान घाँस हुन् जुन उम्रनअगि नै सुक्छन् ।
27 ೨೭ “ನೀನು ಕುಳಿತುಕೊಳ್ಳುವುದು, ಹೋಗುವುದು, ಬರುವುದೂ ನನಗೆ ಗೊತ್ತುಂಟು. ನೀನು ನನ್ನ ಮೇಲೆ ರೌದ್ರಾವೇಷವಾಗಿರುವುದನ್ನು ಬಲ್ಲೆನು.
तर तँ भुइँमा बसेको र तँ बाहिर गएको र भित्र आएको अनि मेरो विरुद्धमा तैंले रिस गरेको मलाई थाहा छ ।
28 ೨೮ ನೀನು ನನಗೆ ವಿರುದ್ಧವಾಗಿ ಉಬ್ಬಿಕೊಂಡಿರುವುದೂ, ಕೋಪವುಳ್ಳವನಾಗಿರುವುದೂ ನನಗೆ ತಿಳಿದು ಬಂದಿದೆ. ಆದುದರಿಂದ ನಿನ್ನ ಮೂಗಿಗೂ, ನಿನ್ನ ಬಾಯಿಗೂ ಕಡಿವಾಣವನ್ನೂ ಹಾಕಿ, ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು” ಎಂಬುದಾಗಿ ಹೇಳಿದ್ದಾನೆ.
तैँले मेरो विरुद्धमा रिस देखाएको हुनाले र तेरो घमण्ड मेरो कानसम्म पुगेको हुनाले म तेरो नाकमा मेरो बल्छी लगाउनेछु, र तेरो मुखमा मेरो लगाम लगाउनेछु । म तँलाई तँ आएकै बाटो फर्काउनेछु ।”
29 ೨೯ ಈ ಮಾತುಗಳು ನೆರವೇರುವವು ಎಂಬುದಕ್ಕೆ ನೀವು ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಮುಂದಿನ ವರ್ಷದಲ್ಲಿ ಮಿಕ್ಕಿರುವ ಬೆಳೆಯನ್ನೂ, ಮೂರನೆಯ ವರ್ಷ ನೀವು ಹೊಲಗಳಲ್ಲಿ ಬಿತ್ತಿ ಬೆಳೆದದ್ದನ್ನು, ದ್ರಾಕ್ಷಿತೋಟಗಳಲ್ಲಿ ವ್ಯವಸಾಯ ಮಾಡಿ ಕೂಡಿಸಿದ್ದನ್ನೂ ಅನುಭವಿಸುವುದೇ ಗುರುತಾಗಿರುವುದು.
तेरो लागि चिन्हचाहिँ यो हुने छः यो साल तैँले आफै उम्रेको अन्‍न खानेछस्, र अर्को साल त्यसैबाट उम्रेको खानेछस् । तर तेस्रो वर्षमा चाहिँ तैँले अन्‍न रोप्‍ने अनि कटनी गर्नेछस्, दाखबारी लगाउनेछस् र तिनका फल खानेछस् ।
30 ೩೦ ತಪ್ಪಿಸಿಕೊಂಡು ಉಳಿದ ಯೆಹೂದ್ಯರು ದೇಶದಲ್ಲಿ ನೆಲೆಗೊಂಡು ಅಭಿವೃದ್ದಿಯಾಗುವರು.
यहूदाको घरानाका बाँचेर बाँकी बाँचेकाहरूले फेरि जरा हाल्‍नेछन् र फल फलाउनेछन् ।
31 ೩೧ ಯೆರೂಸಲೇಮಿನಲ್ಲಿ ಉಳಿದವರು ಹಬ್ಬಿ ಹರಡಿಕೊಳ್ಳುವರು, ಚೀಯೋನ್ ಪರ್ವತದಲ್ಲಿ ತಪ್ಪಿಸಿಕೊಂಡವರು ಅಭಿವೃದ್ದಿಹೊಂದುವರು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವೇ ಇದನ್ನು ನೆರವೇರಿಸುವುದು.
किनकि यरूशलेमबाट बाँकी रहेको एउटा भाग आउनेछ, सियोन पर्वतबाट बाँचेकाहरू आउनेछन् । सर्वशक्तिमान् परमप्रभुको जोसले यो गर्नेछ ।
32 ೩೨ ಯೆಹೋವನು ಅಶ್ಶೂರದ ಅರಸನ ವಿಷಯವಾಗಿ, “ನನ್ನ ಮಾತನ್ನು ಕೇಳು ಅವನು ಪಟ್ಟಣವನ್ನು ಸಮೀಪಿಸುವುದಿಲ್ಲ. ಅದಕ್ಕೆ ಬಾಣವನ್ನೆಸೆಯುವುದಿಲ್ಲ. ಗುರಾಣಿ ಹಿಡಿದಿರುವವರನ್ನು ಕಳುಹಿಸುವುದಿಲ್ಲ. ಅದನ್ನು ಕೆಡವಿಬಿಡುವುದಕ್ಕೋಸ್ಕರ ಅದರ ಎದುರಾಗಿ ಮಣ್ಣಿನ ದಿಬ್ಬವನ್ನು ಸೃಷ್ಟಿಸುವುದಿಲ್ಲ.
त्यसकारण अश्शूरका राजाको विषयमा परमप्रभु यसो भन्‍नुहुन्‍छः “ऊ यो सहरमा आउनेछैन, न त त्यसले यहाँ काँड हान्‍नेछ । न त यसको सामु त्यो ढाल लिएर आउनेछ वा यसको विरुद्धमा घेरा-मचान लगाउनेछ ।
33 ೩೩ ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು. ಈ ಪಟ್ಟಣಕ್ಕೆ ಬರುವುದೇ ಇಲ್ಲ ಎಂದು ಹೇಳಿದ್ದಲ್ಲದೆ
जुन बाटोबाट ऊ आएको थियो ऊ त्‍यही बाटो फर्केर जानेछ । ऊ यस सहरमा पस्‍नेछैन— यो परमप्रभुको घोषणा हो ।
34 ೩೪ ನನಗಾಗಿಯೂ, ನನ್ನ ಸೇವಕನಾದ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು” ಎಂದು ವಾಗ್ದಾನ ಮಾಡಿದ್ದಾನೆ.
किनकि मेरो आफ्नै निम्‍ति र मेरा दास दाऊदको निम्‍ति म यस सहरको रक्षा गर्नेछु र यसलाई बचाउनेछु ।”
35 ೩೫ ಅದೇ ರಾತ್ರಿಯಲ್ಲಿ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯದ ಪಾಳೆಯದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಸೈನಿಕರನ್ನು ಸಂಹರಿಸಿದನು. ಅಶ್ಶೂರ್ಯರು ಬೆಳಿಗ್ಗೆ ಎದ್ದು ನೋಡಿದಾಗ ಪಾಳೆಯದ ತುಂಬಾ ಹೆಣಗಳು ಬಿದ್ದಿದ್ದವು.
त्यस राज परमप्रभुका दूत बाहिर निस्के र अश्शूरीहरूको छाउनीलाई आक्रमण गरे, र एक लाख पचासी हजार सिपाहीलाई मारे । जब मानिसहरू बिहान सबेरै उठे तब जताततै लाश छरिएका थिए ।
36 ೩೬ ಆಗ ಅಶ್ಶೂರ್ಯರ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಮಾಡಿದನು.
त्यसैले अश्शूरका राजा सनहेरीबले इस्राएल चोडे र घरमा गए, र निनवेमा बसे ।
37 ೩೭ ಅವನು ಒಂದು ದಿನ ದೇವಾಲಯಕ್ಕೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಆರಾಧಿಸುತ್ತಿದ್ದಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬುವವರು ಅವನನ್ನು ಕತ್ತಿಯಿಂದ ಕೊಂದು ಅರರಾಟ್ ದೇಶಕ್ಕೆ ಓಡಿಹೋದರು. ಅವನ ನಂತರ ಅವನ ಮಗನಾದ ಏಸರ್ ಹದ್ದೋನನು ಅರಸನಾದನು.
पछि तिनले आफ्नो देवता निस्रोकको मन्‍दिरमा पुजा गरिरहँदा तिनका छोराहरू अद्रम्मलेक र शरेसेरले तिनलाई तरवारले मारे । अनि तिनीहरू आरारात देशमा भागेर गए । तब तिनको ठाउँमा तिनका छोरा एसरहदोन राजा भए ।

< ಅರಸುಗಳು - ದ್ವಿತೀಯ ಭಾಗ 19 >