< ಅರಸುಗಳು - ದ್ವಿತೀಯ ಭಾಗ 19 >

1 ಅರಸನಾದ ಹಿಜ್ಕೀಯನು ಅದನ್ನು ಕೇಳಿ, ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯಕ್ಕೆ ಹೋದನು.
जब हिज़क़ियाह बादशाह ने यह सुना, तो अपने कपड़े फाड़े और टाट ओढ़कर ख़ुदावन्द के घर में गया।
2 ಇದಲ್ಲದೆ, ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿಯೂ, ಲೇಖಕನಾದ ಶೆಬ್ನ, ವೃದ್ಧ ಯಾಜಕರು ಇವರನ್ನು ಕರೆಯಿಸಿ ಅವರಿಗೆ ಆಜ್ಞಾಪಿಸಿದ್ದೇನೆಂದರೆ, ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ, ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿರಿ.
और उसने घर के दीवान और इलियाक़ीम और शबनाह मुन्शी और काहिनों के बुज़ुर्गों को टाट उढ़ाकर आमूस के बेटे यसा'याह नबी के पास भेजा।
3 ಅವರು ಹಿಜ್ಕೀಯನಿಗೆ, “ಈ ದಿನದಲ್ಲಿ ನಮಗೆ ಮಹಾಕಷ್ಟವು ಸಂಭವಿಸಿರುತ್ತದೆ. ನಾವು ಅಪಮಾನವನ್ನು, ನಿಂದೆಯನ್ನು ಅನುಭವಿಸಬೇಕಾಗಿ ಬಂದಿದೆ. ಹೆರಿಗೆಯ ಕಾಲ ಬಂದಿದೆ; ಆದರೆ ಹೆರುವುದಕ್ಕೆ ಬಲ ಸಾಲದು.
और उन्होंने उससे कहा, हिज़क़ियाह यूँ कहता है, कि आज का दिन दुख, और मलामत, और तौहीन का दिन है; क्यूँकि बच्चे पैदा होने पर हैं, लेकिन विलादत की ताक़त नहीं।
4 ಜೀವಸ್ವರೂಪನಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದನೆಯ ಮಾತುಗಳನ್ನು, ನಿನ್ನ ದೇವರಾದ ಯೆಹೋವನು ಕೇಳಿರುವನು. ನಿನ್ನ ದೇವರಾದ ಯೆಹೋವನು ತಾನು ಹೇಳಿದ ಮಾತುಗಳ ನಿಮಿತ್ತ ಮುಯ್ಯಿತೀರಿಸುವನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗಾಗಿಯಾದರೂ ಆತನನ್ನು ಪ್ರಾರ್ಥಿಸು ಎಂಬುದಾಗಿ ಹಿಜ್ಕೀಯನು ಹೇಳುತ್ತಾನೆ” ಎಂದು ಹೇಳಿರಿ ಅಂದನು.
शायद ख़ुदावन्द तेरा ख़ुदा रबशाक़ी की सब बातें सुने जिसको उसके आक़ा शाह — ए — असूर ने भेजा है, कि “ज़िन्दा ख़ुदा की तौहीन करे और जो बातें ख़ुदावन्द तेरे ख़ुदा ने सुनी हैं उन पर वह मलामत करेगा। इसलिए तू उस बक़िया के लिए जो मौजूद है दुआ कर।”
5 ಅರಸನಾದ ಹಿಜ್ಕೀಯನ ಸೇವಕರು ಯೆಶಾಯನ ಬಳಿಗೆ ಬಂದಾಗ,
इसलिए हिज़क़ियाह बादशाह के मुलाज़िम यसा'याह के पास आए।
6 ಯೆಶಾಯನು ಅವರಿಗೆ, “ನೀವು ಹಿಂತಿರುಗಿ ಹೋಗಿ ನಿಮ್ಮ ರಾಜನಿಗೆ, ‘ಯೆಹೋವನು ಹೀಗೆ ಹೇಳುತ್ತಾನೆ, ನೀನು ಕೇಳಿದ ಮಾತುಗಳ ದೆಸೆಯಿಂದ ಹೆದರಬೇಡ, ಅಶ್ಶೂರದ ಅರಸನ ಸೇವಕರು ಆ ಮಾತುಗಳಿಂದ ನನ್ನನ್ನೇ ದೂಷಿಸಿದ್ದಾರೆ.
यसा'याह ने उनसे कहा, “तुम अपने मालिक से यूँ कहना, 'ख़ुदावन्द यूँ फ़रमाता है कि तू उन बातों से जो तूने सुनी हैं, जिनसे शाह — ए — असूर के मुलाज़िमों ने मेरी बुराई की है, न डर।
7 ಆದುದರಿಂದ, ನಾನು ಅವನ ಮೇಲೆ ಭಯದ ಆತ್ಮವನ್ನು ಬರಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ಸ್ವದೇಶಕ್ಕೆ ಹಿಂದಿರುಗಿ ಹೋಗಿ ಅಲ್ಲಿ ಕತ್ತಿಯಿಂದ ನಾಶವಾಗುವಂತೆ ಮಾಡುವೆನು’ ಎಂಬುದಾಗಿ ಯೆಹೋವನು ನಿಮ್ಮ ಯಜಮಾನನಿಗೆ ಹೇಳುತ್ತಾನೆ” ಎಂದು ಉತ್ತರಕೊಟ್ಟನು.
देख, मैं उसमें एक रूह डाल दूँगा, और वह एक अफ़वाह सुनकर अपने मुल्क को लौट जाएगा, और मैं उसे उसी के मुल्क में तलवार से मरवा डालूँगा।”
8 ರಬ್ಷಾಕೆಯು ಹಿಂದಿರುಗಿ ಹೋಗುವಾಗ ದಾರಿಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನ ಕೇಳಿ ಲಿಬ್ನಕ್ಕೆ ಹೋಗಿ, ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣಕ್ಕೆ ವಿರುದ್ಧವಾಗಿ ಯುದ್ಧಮಾಡುತ್ತಾ ಇದ್ದನು.
इसलिए रबशाक़ी लौट गया और उसने शाह — ए — असूर को लिबनाह से लड़ते पाया, क्यूँकि उसने सुना था कि वह लकीस से चला गया है;
9 ಅಷ್ಟರಲ್ಲಿ ಐಗುಪ್ತದ ಅರಸನೂ ಮತ್ತು ಕೂಷಿನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡಲು ಹೊರಟಿದ್ದಾನೆ ಎಂಬ ಸುದ್ದಿಯನ್ನು ಸನ್ಹೇರೀಬನು ಕೇಳಿದಾಗ, ಯೆಹೂದದ ಅರಸನಾದ ಹಿಜ್ಕೀಯನ ಬಳಿಗೆ ಪುನಃ ದೂತರನ್ನು ಕಳುಹಿಸಿ,
और जब उसने कूश के बादशाह तिरहाक़ा के ज़रिए' ये कहते सुना कि “देख, वह तुझसे लड़ने को निकला है,” तो उसने फिर हिज़क़ियाह के पास क़ासिद रवाना किए और कहा,
10 ೧೦ ಅವರ ಮುಖಾಂತರ, “ಯೆಹೂದದ ಅರಸನಾದ ಹಿಜ್ಕೀಯನಿಗೆ, ‘ಯೆರೂಸಲೇಮನ್ನು ಅಶ್ಶೂರದ ಅರಸನಿಗೆ ಒಪ್ಪಿಸುವುದಿಲ್ಲವೆಂದು ನೀನು ನಂಬಿರುವ ನಿನ್ನ ದೇವರು ನಿನ್ನನ್ನು ಮೋಸಗೊಳಿಸದಿರಲಿ
कि “शाह — ए — यहूदाह हिज़क़ियाह से इस तरह कहना, 'तेरा ख़ुदा, जिस पर तेरा भरोसा है, तुझे यह कहकर धोखा न दे कि येरूशलेम शाह — ए — असूर के क़ब्ज़े में नहीं किया जाएगा।
11 ೧೧ ಅಶ್ಶೂರದ ಅರಸುಗಳು ಎಲ್ಲಾ ರಾಜ್ಯಗಳನ್ನು ಸಂಪೂರ್ಣವಾಗಿ ನಾಶಮಾಡಿರುವರೆಂದು ಕೇಳಿರುವೆಯಲ್ಲಾ. ಹೀಗಿದ್ದ ಮೇಲೆ ನೀನು ತಪ್ಪಿಸಿಕೊಳ್ಳುವೆಯೋ?
देख, तूने सुना है कि असूर के बादशाहों ने तमाम मुमालिक को बिल्कुल ग़ारत करके उनका क्या हाल बनाया है; इसलिए क्या तू बचा रहेगा?
12 ೧೨ ನನ್ನ ಪೂರ್ವಿಕರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನೂ ನಾಶಮಾಡುವುದಕ್ಕೆ ಹೋದಾಗ ಅವರ ದೇವತೆಗಳು ಅವರನ್ನು ಕಾಪಾಡಿದವೋ?
क्या उन क़ौमों के मा'बूदों ने उनको, या'नी जौज़ान और हारान और रसफ़ और बनी — 'अदन जो तिल्लसार में थे, जिनको हमारे बाप — दादा ने बर्बाद किया, छुड़ाया?
13 ೧೩ ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು? ಎಂದು ನಿನಗೆ ತಿಳಿಯದೋ ಎಂದು ಪತ್ರವನ್ನು ದೂತರ ಮೂಲಕ ಕಳುಹಿಸಿದ.’”
हमात का बादशाह और अरफ़ाद का बादशाह, और शहर सिफ़वाइम और हेना' और इवाह का बादशाह कहाँ है?”
14 ೧೪ ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟನು.
हिज़क़ियाह ने क़ासिदों के हाथ से ख़त लिया और उसे पढ़ा, और हिज़क़ियाह ने ख़ुदावन्द के घर में जाकर उसे ख़ुदावन्द के सामने फैला दिया।
15 ೧೫ ಹಿಜ್ಕೀಯನು ಯೆಹೋವನ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನೆಂದರೆ, “ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲರ ದೇವರೇ, ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕಭೂಲೋಕಗಳನ್ನು ಉಂಟುಮಾಡಿದವನು ನೀನೇ.
और हिज़क़ियाह ने ख़ुदावन्द के सामने इस तरह दुआ की, ऐ ख़ुदावन्द, इस्राईल के ख़ुदा, करूबियों के ऊपर बैठने वाले! तू ही अकेला ज़मीन की सब सल्तनतों का ख़ुदा है। तू ने ही आसमान और ज़मीन को पैदा किया।
16 ೧೬ ಯೆಹೋವನೇ, ಕಿವಿಗೊಟ್ಟು ಕೇಳು; ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪದೇವರಾದ ನಿನ್ನನ್ನು ನಿಂದಿಸುವುದಕ್ಕೋಸ್ಕರ ಹೇಳಿ ಕಳುಹಿಸಿದ ಮಾತುಗಳನ್ನು ಮನಸ್ಸಿಗೆ ತಂದುಕೋ.
ऐ ख़ुदावन्द, कान लगा और सुन! ऐ ख़ुदावन्द, अपनी आँखें खोल और देख; और सनहेरिब की बातों को, जिनसे ज़िन्दा ख़ुदा की तौहीन करने के लिए उसने इस आदमी को भेजा है, सुन ले।
17 ೧೭ ಯೆಹೋವನೇ, ಅಶ್ಶೂರದ ಅರಸರು ದೇಶಗಳನ್ನೂ ಜನಾಂಗಗಳನ್ನೂ ಹಾಳುಮಾಡಿದರು.
ऐ ख़ुदावन्द, असूर के बादशाहों ने दर हक़ीक़त क़ौमों को उनके मुल्कों समेत तबाह किया:
18 ೧೮ ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ. ಅವು ದೇವತೆಗಳಲ್ಲ. ಮನುಷ್ಯರು ಕೆತ್ತಿದ ಕಲ್ಲು ಮತ್ತು ಮರಗಳ ಬೊಂಬೆಗಳಷ್ಟೇ. ಆದುದರಿಂದ ಅವುಗಳನ್ನು ಹಾಳುಮಾಡುವುದು ಅವರಿಗೆ ಸಾಧ್ಯವಾಯಿತು.
और उनके मा'बूदों को आग में डाला क्यूँकि वह ख़ुदा न थे, बल्कि आदमियों की दस्तकारी, या'नी लकड़ी और पत्थर थे; इसलिए उन्होंने उनको बर्बाद किया है।
19 ೧೯ ಯೆಹೋವನೇ, ನಮ್ಮ ದೇವರೇ, ನೀನೊಬ್ಬನೇ ದೇವರೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು” ಎಂದು ಪ್ರಾರ್ಥಿಸಿದನು.
इसलिए अब ऐ ख़ुदावन्द हमारे ख़ुदा मैं तेरी मिन्नत करता हूँ, कि तू हमको उसके हाथ से बचा ले, ताकि ज़मीन की सब सल्तनतें जान लें कि तू ही अकेला ख़ुदावन्द ख़ुदा है।”
20 ೨೦ ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ, “ಇಸ್ರಾಯೇಲರ ದೇವರಾದ ಯೆಹೋವನು ಹೀಗೆ ಅನ್ನುತ್ತಾನೆ, ‘ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹವನ್ನು ಕೇಳಿದ್ದೇನೆ.’
तब यसा'याह — बिन — आमूस ने हिज़क़ियाह को कहला भेजा कि ख़ुदावन्द इस्राईल का ख़ुदा यूँ फ़रमाता है: चूँकि तू ने शाह — ए — असूर सनहेरिब के ख़िलाफ़ मुझसे दू'आ की है, मैंने तेरी सुन ली।
21 ೨೧ ಯೆಹೋವನು ಅವನನ್ನು ಕುರಿತು, “ಕನ್ನಿಕೆಯಾಗಿರುವ ಚೀಯೋನಿನ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ ಪರಿಹಾಸ್ಯಮಾಡುತ್ತಾಳೆ. ಯೆರೂಸಲೇಮಿನ ಕುಮಾರ್ತೆಯು ನಿನ್ನ ಹಿಂದಿನಿಂದ ತಲೆಯಾಡಿಸುತ್ತಾಳೆ.
इसलिए ख़ुदावन्द ने उसके हक़ में यूँ फ़रमाया कि कुँवारी दुख़्तरें सिय्यून ने तुझे हक़ीर जाना और तेरा मज़ाक़ उड़ाया।
22 ೨೨ ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ದೀ? ಯಾರ ವಿರುದ್ಧವಾಗಿ ಬಾಯ್ದೆರೆದು ಹೀಯಾಳಿಸಿದ್ದಿ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ ಸದಮಲಸ್ವಾಮಿಯನ್ನಲ್ಲವೇ!
येरूशलेम की बेटी ने तुझ पर सर हिलाया है, तूने किसकी तौहीन — ओ — बुराई की है? तूने किसके ख़िलाफ़ अपनी आवाज़ बलन्द की, और अपनी आँखें ऊपर उठाई? इस्राईल के क़ुद्दूस के ख़िलाफ़!
23 ೨೩ ನೀನು ನಿನ್ನ ದೂತರ ಮುಖಾಂತರವಾಗಿ ಕರ್ತನನ್ನು ನಿಂದಿಸಿ, ರಥಸಮೂಹದೊಡನೆ ಪರ್ವತಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ. ಅದರ ಎತ್ತರವಾದ ದೇವದಾರುವೃಕ್ಷಗಳನ್ನೂ ಶ್ರೇಷ್ಠವಾದ ತುರಾಯಿಮರಗಳನ್ನೂ ಕಡಿದುಬಿಟ್ಟಿದ್ದೇನೆ. ಅಲ್ಲಿನ ಬಹು ದೂರ ನಿವಾಸಸ್ಥಳಗಳನ್ನೂ, ಉದ್ಯಾನವನಗಳನ್ನೂ ಪ್ರವೇಶಿಸಿದ್ದೇನೆ.
तूने अपने क़ासिदों के ज़रिए' से ख़ुदावन्द की तौहीन की, और कहा, कि मैं बहुत से रथों को साथ लेकर पहाड़ों की चोटियों पर, बल्कि लुबनान के वस्ती हिस्सों तक चढ़आया हूँ; और मैं उसके ऊँचे — ऊँचे देवदारों और अच्छे से अच्छे सनोबर के दरख़्तों को काट डालूँगा; और मैं उसके दूर से दूर मक़ाम में, जहाँ उसकी बेशक़ीमती ज़मीन का जंगल है घुसा चला जाऊँगा।
24 ೨೪ ನಾನು ಅನ್ಯದೇಶದಲ್ಲಿ ಬಾವಿಗಳನ್ನು ಅಗೆದು ನೀರು ತೆಗೆದು ಕುಡಿದಿದ್ದೇನೆ! ನನ್ನ ಪಾದಗಳಿಂದ ಐಗುಪ್ತದ ಎಲ್ಲಾ ನದಿಗಳನ್ನು ಬತ್ತಿಸಿದ್ದೇನೆ ಎಂಬುದಾಗಿ ನೀನು ಕೊಚ್ಚಿಕೊಂಡಿದ್ದೀಯಲ್ಲವೇ?”
मैंने जगह — जगह का पानी खोद — खोद कर पिया है और मैं अपने पाँव के तलवे से मिस्र की सब नदियाँ सुखा डालूँगा।
25 ೨೫ ಬಹು ಕಾಲದ ಹಿಂದೆಯೇ ಇದನೆಲ್ಲ ಗೊತ್ತುಮಾಡಿದವನು ನಾನಲ್ಲವೇ? ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದುದರಿಂದ ಕೋಟೆ, ಕೊತ್ತಲುಗಳುಳ್ಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವುದು ನಿನಗೆ ಸಾಧ್ಯವಾಯಿತೋ?
क्या तू ने नहीं सुना कि मुझे यह किए हुए मुद्दत हुई और मैने इसे गुज़रे दिनों में ठहरा दिया था? अब मैने उसको पूरा किया है कि तू फ़सीलदार शहरों को उजाड़ कर खंडर बना देने के लिए खड़ा हो।
26 ೨೬ ಅವುಗಳ ನಿವಾಸಿಗಳು ಬಲವಿಲ್ಲದವರಾಗಿ ಹೆದರಿ ಆಶಾಭಂಗಪಟ್ಟು ಕಳವಳಗೊಂಡರು; ಅವರು ಹೊಲದ ಗಿಡಕ್ಕೂ ಕಾಯಿ ಪಲ್ಯಕ್ಕೂ ಹಸಿರು ಹುಲ್ಲಿಗೂ, ಮನೆಯ ಮೇಲೆ ಬೆಳೆಯುವ ಹಾಗೂ, ಹೊಲದ ಹುಲ್ಲಿನ ಹಾಗೆ ಬೆಳೆಯುವುದಕ್ಕಿಂತ ಮೊದಲೇ ಸುಟ್ಟುಹೋದ ಪೈರಿಗೆ ಸಮಾನರಾದರು.
इसी वजह से उनके बाशिन्दे कमज़ोर हुए और वह घबरा गए, और शर्मिन्दा हुए वह मैदान की घास और हरी पौद और छतों पर की घास, और उस अनाज की तरह हो गए, जो बढ़ने से पहले सूख जाए।
27 ೨೭ “ನೀನು ಕುಳಿತುಕೊಳ್ಳುವುದು, ಹೋಗುವುದು, ಬರುವುದೂ ನನಗೆ ಗೊತ್ತುಂಟು. ನೀನು ನನ್ನ ಮೇಲೆ ರೌದ್ರಾವೇಷವಾಗಿರುವುದನ್ನು ಬಲ್ಲೆನು.
“लेकिन मैं तेरी मजलिस और आमद — ओ — रफ़्त और तेरा मुझ पर झुंझलाना मैं जानता हूँ।
28 ೨೮ ನೀನು ನನಗೆ ವಿರುದ್ಧವಾಗಿ ಉಬ್ಬಿಕೊಂಡಿರುವುದೂ, ಕೋಪವುಳ್ಳವನಾಗಿರುವುದೂ ನನಗೆ ತಿಳಿದು ಬಂದಿದೆ. ಆದುದರಿಂದ ನಿನ್ನ ಮೂಗಿಗೂ, ನಿನ್ನ ಬಾಯಿಗೂ ಕಡಿವಾಣವನ್ನೂ ಹಾಕಿ, ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು” ಎಂಬುದಾಗಿ ಹೇಳಿದ್ದಾನೆ.
तेरे मुझ पर झंझलाने की वजह से, और इसलिए कि तेरा घमण्ड मेरे कानों तक पहुँचा है, मैं अपनी नकेल तेरी नाक में, और अपनी लगाम तेरे मुँह में डालूँगा; और तू जिस रास्ते से आया है, मैं तुझे उसी रास्ते से वापस लौटा दूँगा।
29 ೨೯ ಈ ಮಾತುಗಳು ನೆರವೇರುವವು ಎಂಬುದಕ್ಕೆ ನೀವು ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಮುಂದಿನ ವರ್ಷದಲ್ಲಿ ಮಿಕ್ಕಿರುವ ಬೆಳೆಯನ್ನೂ, ಮೂರನೆಯ ವರ್ಷ ನೀವು ಹೊಲಗಳಲ್ಲಿ ಬಿತ್ತಿ ಬೆಳೆದದ್ದನ್ನು, ದ್ರಾಕ್ಷಿತೋಟಗಳಲ್ಲಿ ವ್ಯವಸಾಯ ಮಾಡಿ ಕೂಡಿಸಿದ್ದನ್ನೂ ಅನುಭವಿಸುವುದೇ ಗುರುತಾಗಿರುವುದು.
“और तेरे लिए ये निशान होगा कि तुम इस साल वह चीज़ें जो ख़ुद से उगती हैं, और दूसरे साल वह चीज़ें जो उनसे पैदा हों खाओगे; और तीसरे साल तुम बोना और काटना, और बाग़ लगाकर उनका फल खाना।
30 ೩೦ ತಪ್ಪಿಸಿಕೊಂಡು ಉಳಿದ ಯೆಹೂದ್ಯರು ದೇಶದಲ್ಲಿ ನೆಲೆಗೊಂಡು ಅಭಿವೃದ್ದಿಯಾಗುವರು.
और वह जो यहूदाह के घराने से बचा रहा है फिर नीचे की तरफ़ जड़ पकड़ेगा और ऊपर कि तरफ़ फल लाएगा।
31 ೩೧ ಯೆರೂಸಲೇಮಿನಲ್ಲಿ ಉಳಿದವರು ಹಬ್ಬಿ ಹರಡಿಕೊಳ್ಳುವರು, ಚೀಯೋನ್ ಪರ್ವತದಲ್ಲಿ ತಪ್ಪಿಸಿಕೊಂಡವರು ಅಭಿವೃದ್ದಿಹೊಂದುವರು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವೇ ಇದನ್ನು ನೆರವೇರಿಸುವುದು.
क्यूँकि एक बक़िया येरूशलेम से, और वह जो बच रहे हैं कोह — ए — सिय्यून से निकलेंगे। ख़ुदावन्द की ग़य्यूरी ये कर दिखाएगी।
32 ೩೨ ಯೆಹೋವನು ಅಶ್ಶೂರದ ಅರಸನ ವಿಷಯವಾಗಿ, “ನನ್ನ ಮಾತನ್ನು ಕೇಳು ಅವನು ಪಟ್ಟಣವನ್ನು ಸಮೀಪಿಸುವುದಿಲ್ಲ. ಅದಕ್ಕೆ ಬಾಣವನ್ನೆಸೆಯುವುದಿಲ್ಲ. ಗುರಾಣಿ ಹಿಡಿದಿರುವವರನ್ನು ಕಳುಹಿಸುವುದಿಲ್ಲ. ಅದನ್ನು ಕೆಡವಿಬಿಡುವುದಕ್ಕೋಸ್ಕರ ಅದರ ಎದುರಾಗಿ ಮಣ್ಣಿನ ದಿಬ್ಬವನ್ನು ಸೃಷ್ಟಿಸುವುದಿಲ್ಲ.
“इसलिए ख़ुदावन्द शाह — ए — असूर के हक़ में यूँ फ़रमाता है कि वह इस शहर में आने, या यहाँ तीर चलाने न पाएगा; वह न तो सिपर लेकर उसके सामने आने, और न उसके मुक़ाबिल दमदमा बाँधने पाएगा।
33 ೩೩ ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು. ಈ ಪಟ್ಟಣಕ್ಕೆ ಬರುವುದೇ ಇಲ್ಲ ಎಂದು ಹೇಳಿದ್ದಲ್ಲದೆ
बल्कि ख़ुदावन्द फ़रमाता है कि जिस रास्ते से वह आया, उसी रास्ते से लौट जाएगा; और इस शहर में आने न पाएगा।
34 ೩೪ ನನಗಾಗಿಯೂ, ನನ್ನ ಸೇವಕನಾದ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು” ಎಂದು ವಾಗ್ದಾನ ಮಾಡಿದ್ದಾನೆ.
क्यूँकि मैं अपनी ख़ातिर और अपने बन्दे दाऊद की ख़ातिर इस शहर की हिमायत करूँगा ताकि इसे बचा लें।”
35 ೩೫ ಅದೇ ರಾತ್ರಿಯಲ್ಲಿ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯದ ಪಾಳೆಯದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಸೈನಿಕರನ್ನು ಸಂಹರಿಸಿದನು. ಅಶ್ಶೂರ್ಯರು ಬೆಳಿಗ್ಗೆ ಎದ್ದು ನೋಡಿದಾಗ ಪಾಳೆಯದ ತುಂಬಾ ಹೆಣಗಳು ಬಿದ್ದಿದ್ದವು.
इसलिए उसी रात को ख़ुदावन्द के फ़रिश्ते ने निकल कर असूर की लश्करगाह में एक लाख पचासी हज़ार आदमी मार डाले, और सुबह को जब लोग सवेरे उठे तो देखा, कि वह सब मरे पड़े हैं।
36 ೩೬ ಆಗ ಅಶ್ಶೂರ್ಯರ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಮಾಡಿದನು.
तब शाह — ए — असूर सनहेरिब वहाँ से चला गया और लौटकर नीनवा में रहने लगा।
37 ೩೭ ಅವನು ಒಂದು ದಿನ ದೇವಾಲಯಕ್ಕೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಆರಾಧಿಸುತ್ತಿದ್ದಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬುವವರು ಅವನನ್ನು ಕತ್ತಿಯಿಂದ ಕೊಂದು ಅರರಾಟ್ ದೇಶಕ್ಕೆ ಓಡಿಹೋದರು. ಅವನ ನಂತರ ಅವನ ಮಗನಾದ ಏಸರ್ ಹದ್ದೋನನು ಅರಸನಾದನು.
और जब वह अपने मा'बूद निसरूक के बुतख़ाने में इबादत कर रहा था, तो अदरम्मलिक और शराज़र ने उसे तलवार से क़त्ल किया, और अरारात की सरज़मीन को भाग गए। और उसका बेटा असरहद्दून उसकी जगह बादशाह हुआ।

< ಅರಸುಗಳು - ದ್ವಿತೀಯ ಭಾಗ 19 >