< ಅರಸುಗಳು - ದ್ವಿತೀಯ ಭಾಗ 20 >

1 ಆ ಕಾಲದಲ್ಲಿ ಹಿಜ್ಕೀಯನನ್ನು ಮರಣಕರವಾದ ರೋಗವು ಬಾಧಿಸಿತು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “‘ನಿನ್ನ ಮನೆಯ ಕಾರ್ಯಗಳನ್ನೆಲ್ಲಾ ಕ್ರಮಪಡಿಸಿ ಸೂಕ್ತಮಾಡಿಕೋ, ನೀನು ಮರಣ ಹೊಂದುವಿ’ ಎಂದು ಯೆಹೋವನು ತಿಳಿಸಿದ್ದಾನೆ” ಎಂದು ಹೇಳಿದನು.
याच सुमारास हिज्कीया आजारी पडून मरणास टेकला. तेव्हा आमोजचा मुलगा यशया हा संदेष्टा त्याच्याकडे येऊन म्हणाला, “परमेश्वराचे म्हणणे आहे, ‘तुझ्या घराची तू व्यवस्था कर, कारण तू मरणार, वाचणार नाहीस.”
2 ಇದನ್ನು ಕೇಳಿದೊಡನೆ ಹಿಜ್ಕೀಯನು ಗೋಡೆಯ ಕಡೆಗೆ ತಿರುಗಿಕೊಂಡು ಯೆಹೋವನಿಗೆ ಪ್ರಾರ್ಥಿಸಿ, ಹೀಗೆ ವಿಜ್ಞಾಪಿಸಿಕೊಂಡನು.
तेव्हा हिज्कीयाने आपले तोंड भिंतीकडे वळवले आणि परमेश्वराची प्रार्थना करून तो म्हणाला.
3 “ಯೆಹೋವನೇ, ದಯವಿಟ್ಟು ನಾನು ನಂಬಿಗಸ್ತನಾಗಿಯೂ ನಿನಗೆ, ಪ್ರಾಮಾಣಿಕನಾಗಿಯೂ ಶ್ರದ್ಧೆಯಿಂದಲೂ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪುಮಾಡಿಕೋ” ಎಂದು ಹೇಳಿ ಹಿಜ್ಕೀಯನು ಬಹಳವಾಗಿ ಕಣ್ಣೀರಿಟ್ಟು ಪ್ರಾರ್ಥಿಸಿದನು.
“परमेश्वरा, मी तुझी मन: पूर्वक सेवा केली आहे हे लक्षात असू दे. तुझ्या दृष्टीने जे उचित तेच मी केले.” तेव्हा हिज्कीया फार रडला.
4 ಯೆಶಾಯನು ಅರಮನೆಯ ಮಧ್ಯಪ್ರಾಕಾರವನ್ನು ದಾಟುವುದಕ್ಕೆ ಮೊದಲು ಯೆಹೋವನಿಂದ ಅಪ್ಪಣೆಯಾಯಿತು.
यशया मधला चौक ओलांडून शहराच्या बाहेर जाण्यापूर्वी पुन्हा त्यास परमेश्वराचे शब्द ऐकू आले. परमेश्वर म्हणाला,
5 “ನೀನು ಹಿಂದಿರುಗಿ ಹೋಗಿ, ನನ್ನ ಜನಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ನಿನ್ನ ಪಿತೃವಾದ ದಾವೀದನ ದೇವರಾದ ಯೆಹೋವನು ಹೇಳಿದ್ದೇನೆಂದರೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ.
“पुन्हा मागे फिर आणि माझ्या प्रजेचा नेता हिज्कीया याच्याशी बोल.” त्यास म्हणावे, “तुझा पूर्वज दावीद याचा परमेश्वर देव म्हणतो: तुझी प्रार्थना मी ऐकली आहे आणि तुझे अश्रू पाहिले आहेत. तेव्हा मी तुला बरे करतो, तिसऱ्या दिवशी तू परमेश्वराचे मंदिर चढून जाशील.
6 ಇದಲ್ಲದೆ, ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಹೆಚ್ಚಿಸಿದ್ದೇನೆ, ನಿನ್ನನ್ನೂ, ಈ ಪಟ್ಟಣವನ್ನೂ ಅಶ್ಶೂರನ ಅರಸನ ಕೈಗೆ ಬೀಳದಂತೆ ತಪ್ಪಿಸುವೆನು. ನನಗಾಗಿಯೂ, ನನ್ನ ಸೇವಕನಾದ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು’ ಎಂಬುದಾಗಿ ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನು ಹೇಳುತ್ತಾನೆ ಎಂದು ತಿಳಿಸು” ಅಂದನು.
तुला मी आणखी पंधरा वर्ष आयुष्य दिले आहे. अश्शूरच्या राजाच्या हातून तुझी आणि या नगराची मी सोडवणूक करीन. या नगराचे मी रक्षण करीन स्वत: साठी तसेच माझा सेवक दावीद याला मी दिलेल्या वचनासाठी मी हे करीन.”
7 ಅನಂತರ ಯೆಶಾಯನು, ಒಂದು ಅಂಜೂರಹಣ್ಣನ್ನು ತೆಗೆದು ಅವನ ಗಾಯದ ಮೇಲೆ ಇಟ್ಟಾಗ ಹಿಜ್ಕೀಯನು ಗುಣಹೊಂದಿದನು.
मग यशया म्हणाला, “अंजीराचे मिश्रण करुन ते याच्या दुखऱ्या भागावर लावा.” तेव्हा त्यांनी अंजीरांचे मिश्रण करून हिज्कीयाच्या दुखऱ्या भागावर त्याचा लेप दिला. तेव्हा हिज्कीया बरा झाला.
8 ಹಿಜ್ಕೀಯನು ಯೆಶಾಯನಿಗೆ, “ಯೆಹೋವನು ನನ್ನನ್ನು ಗುಣಪಡಿಸುವನೆಂಬುವುದಕ್ಕೂ, ನಾನು ಮೂರನೆಯ ದಿನ ಆತನ ಆಲಯಕ್ಕೆ ಹೋಗುವೆನೆಂಬುವುದಕ್ಕೂ, ಇರುವ ಗುರುತು ಏನು?” ಎಂದು ಕೇಳಿದನು.
हिज्कीया यशयाला म्हणाला, “परमेश्वराच्या कृपेने माझ्या प्रकृतीला उतार पडेल आणि तिसऱ्या दिवशी मी परमेश्वराचे मंदिर चढू शकेन याबद्दल काही खूण देता येईल का?”
9 ಅದಕ್ಕೆ ಯೆಶಾಯನು, “ಯೆಹೋವನು ನುಡಿದಿದ್ದನ್ನು ನೆರವೇರಿಸುವನು ಎಂಬುದಕ್ಕೆ ಯೆಹೋವನಿಂದ ಉಂಟಾದ ಗುರುತು ಕೇಳುತ್ತಿರುವೆ, ಹಾಗಾದರೆ ನೆರಳು ಹತ್ತು ಮೆಟ್ಟಲು ಮುಂದೆ ಹೋಗಬೇಕೋ? ಹಿಂದೆ ಬರಬೇಕೋ? ಹೇಳು ಹಿಂದೆ ಹೋಗಬೇಕೋ ಹೇಳು?” ಎಂದು ಕೇಳಿದನು.
यशया म्हणाला, “तुला काय हवे बोल. सावली दहा पावले पुढे जाऊ किंवा मागे येऊ दे? परमेश्वराने तुझ्या बाबतीत जे घडेल असे कबूल केले आहे त्याची ही खूण आहे.”
10 ೧೦ ಅದಕ್ಕೆ ಹಿಜ್ಕೀಯನು, “ನೆರಳು ಮುಂದೆ ಹೋಗುವುದು ಸುಲಭ, ಆದುದರಿಂದ ಹತ್ತು ಮೆಟ್ಟಲು ಹಿಂದೆ ಬರುವಂತೆ ಮಾಡು” ಎಂದು ಹೇಳಿದನು.
१०हिज्कीया म्हणाला, “सावली दहा पावले पुढे जाणे स्वाभाविक आहे. तेव्हा तसे नको, ती दहा पावले मागे यावी.”
11 ೧೧ ಆಗ ಪ್ರವಾದಿಯಾದ ಯೆಶಾಯನು ಯೆಹೋವನಿಗೆ ಮೊರೆಯಿಡಲು ಆತನು ಆಹಾಜನ ಗಡಿಯಾರದ ವೇಳಾನುಸಾರ ಹತ್ತು ಮೆಟ್ಟಲು ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಟಲು ಹಿಂದೆ ಬರುವಂತೆ ಮಾಡಿದನು.
११मग यशया संदेष्ट्याने परमेश्वराची प्रार्थना केली याप्रकारे परमेश्वराने आहाजाची सावली दहा पावले मागे घेतली. जिथून ती पुढे गेली होती तिथेच ती पूर्ववत आली.
12 ೧೨ ಅದೇ ಕಾಲದಲ್ಲಿ ಬಲದಾನನ ಮಗನೂ, ಬಾಬೆಲಿನ ಅರಸನೂ ಆದ ಬೆರೋದಕಬಲದಾನ ಎಂಬುವವನು ಹಿಜ್ಕೀಯನು ಅಸ್ವಸ್ಥನಾಗಿದ್ದಾನೆಂದು ಕೇಳಿ, ದೂತರ ಮುಖಾಂತರವಾಗಿ ಅವನಿಗೆ ಪತ್ರವನ್ನೂ, ಬಹುಮಾನವನ್ನೂ ಕಳುಹಿಸಿದನು.
१२यावेळी बलदानचा मुलगा बरोदख-बलदान हा बाबेलचा राजा होता. त्याने हिज्कीयाकडे पत्रे आणि भेटवस्तू पाठवल्या. हिज्कीया आजारी असल्याचे त्याने ऐकले होते.
13 ೧೩ ಹಿಜ್ಕೀಯನು ಬಂದಂಥ ದೂತರ ಮಾತನ್ನು ಕೇಳಿ, ಅವರಿಗೆ ಬೆಳ್ಳಿಬಂಗಾರ, ಸುಗಂಧದ್ರವ್ಯ, ಪರಿಮಳತೈಲ, ಮೊದಲಾದ ಪದಾರ್ಥಗಳಿರುವ ಮನೆಯನ್ನೂ, ಆಯುಧಶಾಲೆಯನ್ನೂ, ತನ್ನ ಭಂಡಾರದಲ್ಲಿದ್ದದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲಿಯೂ, ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.
१३हिज्कीयाने त्याच्याकडून आलेल्या मनुष्यांचे आगतस्वागत केले. त्यांना आपल्या घरातील सर्व मौल्यवान वस्तू दाखवल्या. सोने, चांदी, मसाल्याचे पदार्थ, किंमती अत्तरे, शस्त्रास्त्रे असा आपला सर्व खजिना त्यांना दाखवला. आपल्या घरातील आणि राज्यातील कोणतीही गोष्ट त्याने त्यांना दाखवायची शिल्लक ठेवली नाही.
14 ೧೪ ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನನ್ನು, “ಆ ಮನುಷ್ಯರು ಎಲ್ಲಿಯವರು? ಏನು ಹೇಳಿದರು?” ಎಂದು ಕೇಳಲು ಅವನು, “ಅವರು ಬಹು ದೂರ ದೇಶವಾದ ಬಾಬೆಲಿನಿಂದ ಬಂದವರು” ಎಂದು ಉತ್ತರ ಕೊಟ್ಟನು.
१४तेव्हा यशया संदेष्टा राजाकडे येऊन म्हणाला, “हे लोक कोण? त्यांचे काय म्हणणे आहे?” हिज्कीया म्हणाला, “हे फार लांबच्या प्रांतातून बाबेलमधून आले आहेत.”
15 ೧೫ ಯೆಶಾಯನು ತಿರುಗಿ ಹಿಜ್ಕೀಯನನ್ನು, “ಅವರು ನಿನ್ನ ಮನೆಯಲ್ಲಿ ಏನು ನೋಡಿದರು?” ಎಂದು ಕೇಳಲು ಅವನು, “ಅರಮನೆಯಲ್ಲಿ ಇರುವುದೆಲ್ಲವನ್ನೂ ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದಿದ್ದ ಒಂದು ವಸ್ತುವು ಇರುವುದಿಲ್ಲ” ಎಂದನು.
१५यशयाने विचारले, “त्यांनी या घरातले काय काय पाहिले?” हिज्कीयाने सांगितले, “त्यांनी सगळेच पाहिले. माझे सगळे भांडार मी त्यांच्यापुढे उघडे केले.”
16 ೧೬ ಆಗ ಯೆಶಾಯನು ಹಿಜ್ಕೀಯನಿಗೆ, “ಯೆಹೋವನ ಮಾತನ್ನು ಕೇಳು,
१६तेव्हा यशया हिज्कीयाला म्हणाला, “आता परमेश्वराचा हा निरोप ऐक.
17 ೧೭ ‘ಆತನು ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವನ್ನು ಬಾಬಿಲೋನಿಗೆ ಒಯ್ಯಲ್ಪಡುವ ದಿನವು ಬರುವುದು, ಇಲ್ಲಿ ಏನೂ ಉಳಿಯುವುದಿಲ್ಲ ಎಂದು ಯೆಹೋವನು ಹೇಳುತ್ತಾನೆ.
१७तुझ्या घरातील सर्व चीजवस्तू आणि तुझ्या पूर्वजांनी जमवलेले सर्व धन आत्ता बाबेलला नेण्यात येईल. ती वेळ आता येऊन ठेपली आहे. काही म्हणता काही मागे उरणार नाही. ही परमेश्वराची वाणी आहे.
18 ೧೮ ಬಾಬೆಲಿನ ಅರಸನು ಬಂದು ನಿನ್ನಿಂದ ಹುಟ್ಟುವಂಥ ಮಕ್ಕಳನ್ನು ತೆಗೆದುಕೊಂಡು ಹೋಗಿ, ಅವರನ್ನು ತಮ್ಮ ಅರಮನೆಯಲ್ಲಿ ಕಂಚುಕಿಗಳನ್ನಾಗಿ ನೇಮಿಸಿಕೊಳ್ಳುವರು ಎಂದು ಯೆಹೋವನು ಅನ್ನುತ್ತಾನೆ’” ಎಂದು ಹೇಳಿದನು.
१८बाबेलचे लोक तुझ्या मुलांना घेऊन जातील. ती मुले बाबेलच्या राजवाड्यात खोजे बनून राहतील.”
19 ೧೯ ಹಿಜ್ಕೀಯನು ಯೆಶಾಯನಿಗೆ, “ನೀನು ತಿಳಿಸಿದ ಯೆಹೋವನ ಮಾತು ಒಳ್ಳೆಯದಾಗಿದೆ. ನನ್ನ ಜೀವಮಾನ ಕಾಲದಲ್ಲಿ ಸಮಾಧಾನವೂ, ಭದ್ರತೆಯೂ ಇರುವುದಲ್ಲವೇ?” ಎಂದು ಕೊಂಡನು.
१९तेव्हा हिज्कीया यशयाला म्हणाला, “परमेश्वराचे म्हणणे योग्यच आहे.” तो पुढे म्हणाला, “निदान माझ्या कारकिर्दीत तरी शांतता लाभेल ना?”
20 ೨೦ ಹಿಜ್ಕೀಯನ ಉಳಿದ ಚರಿತ್ರೆಯೂ, ಅವನ ಪರಾಕ್ರಮಕೃತ್ಯಗಳೂ, ಅವನು ಕೆರೆಕಾಲುವೆಗಳನ್ನು ಮಾಡಿಸಿ ಊರೊಳಗೆ ನೀರನ್ನು ತಂದ ವಿವರವೂ ಯೆಹೂದ ರಾಜಕಾಲವೃತ್ತಾಂತ ಪುಸ್ತಕ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
२०शहराला पाणीपुरवठा करणारी तळी आणि कालवे यांच्यासकट हिज्कीयाने जी कामगिरी बजावली तिची नोंद यहूदाच्या राजांचा इतिहास या पुस्तकात आहे.
21 ೨೧ ಹಿಜ್ಕೀಯನು ಪೂರ್ವಿಕರ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಮನಸ್ಸೆಯು ಅರಸನಾದನು.
२१हिज्कीया निधन पावला आणि त्याचा पूर्वजांशेजारी त्याचे दफन झाले. त्याचा मुलगा मनश्शे गादीवर आला.

< ಅರಸುಗಳು - ದ್ವಿತೀಯ ಭಾಗ 20 >