< ಅರಸುಗಳು - ದ್ವಿತೀಯ ಭಾಗ 22 >

1 ಯೋಷೀಯನು ಅರಸನಾದಾಗ ಎಂಟು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಮೂವತ್ತೊಂದು ವರ್ಷ ಆಳಿದನು. ಬೊಚ್ಕತೂರಿನವಳೂ ಅದಾಯನ ಮಗಳೂ ಆದ ಯೆದೀದಾ ಎಂಬಾಕೆಯು ಅವನ ತಾಯಿ.
योशीया राज्य करु लागला तेव्हा आठ वर्षांचा होता. त्याने यरूशलेमामध्ये एकतीस वर्षे राज्य केले. याच्या आईचे नाव यदीदा. ती बसकाथमधील अदाया याची मुलगी.
2 ಅರಸನಾದ ಯೋಷೀಯನು ಯೆಹೋವನನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳದೆ ತನ್ನ ಪೂರ್ವಜನಾದ ದಾವೀದನ ಮಾರ್ಗದಲ್ಲಿಯೇ ನಡೆದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.
योशीयाचे वर्तन परमेश्वराच्या दृष्टीने नीट ते तो करीत असे. आपला पूर्वज दावीद याच्याप्रमाणे तो चालला. परमेश्वराच्या शिकवणुकी प्रमाणेच वागला. देवाला जसे पाहिजे तेच त्याने केले.
3 ಅರಸನಾದ ಯೋಷೀಯನು ತನ್ನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಚಲ್ಯನ ಮಗನೂ, ಮೆಷುಲ್ಲಾಮನ ಮೊಮ್ಮಗನೂ, ಯೆಹೋವನ ಆಲಯದ ಲೇಖಕನೂ ಆದ ಶಾಫಾನನನ್ನು ಕರೆದು ಅವನಿಗೆ,
मशुल्लामचा मुलगा असल्या याचा मुलगा शाफान चिटणीस, याला योशीया राजाने कारकिर्दीच्या अठराव्या वर्षी परमेश्वराच्या मंदिरात पाठवले आणि सांगितले.
4 “ನೀನು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗಿ, ಅವನಿಗೆ ದ್ವಾರಪಾಲಕರು ಯೆಹೋವನ ಆಲಯಕ್ಕೆ ಬರುವ ಜನರಿಂದ ಕೂಡಿಸಿದ ಹಣವನ್ನು ಲೆಕ್ಕಿಸಬೇಕು,
“तिथे तू महायाजक हिल्कीया याच्याकडे जा. द्वारपालांनी लोकांकडून गोळा केलेले पैसे या याजकाकडे जमा व्हायला हवेत. हा परमेश्वराच्या मंदिरात जमा झालेला पैसा आहे.
5 ಅದಲ್ಲದೆ ಆಲಯದ ಕೆಲಸಮಾಡಿಸುವ ಮುಖ್ಯಸ್ಥರಿಗೆ ಅದನ್ನು ಒಪ್ಪಿಸು ಎಂದು ಹೇಳಬೇಕು, ಮುಖ್ಯಸ್ಥರು ಅದನ್ನು ಯೆಹೋವನ ಆಲಯದ ದುರಸ್ತಿ ಕೆಲಸಕ್ಕೆ ಉಪಯೋಗಿಸಲಿ,
परमेश्वराच्या मंदिराच्या कामावर देखेरख करणाऱ्यांना याजकांनी यातील पैसे द्यावेत. मंदिराची दुरुस्ती करणाऱ्या कारागिरांना देण्यासाठी या पैशाचा विनियोग व्हावा.
6 ಬಡಗಿ, ಶಿಲ್ಪಿ, ಮೇಸ್ತ್ರಿ ಮೊದಲಾದವರ ಸಂಬಳಕ್ಕಾಗಿಯೂ, ದೇವಾಲಯಕ್ಕೆ ಬೇಕಾದ ಮರ, ಕೆತ್ತಿದ ಕಲ್ಲು ಇವುಗಳನ್ನು ಕೊಂಡುಕೊಳ್ಳುವುದಕ್ಕಾಗಿಯೂ ಅದನ್ನು ಉಪಯೋಗಿಸಿಕೊಳ್ಳಲಿ,
सुतार, गवंडी, पाथरवट यांना तसेच लाकूड घेणे, चिरे घडवणे यासाठी पैसे द्यावेत.
7 ಅವರು ನಂಬಿಗಸ್ತರಾಗಿರುವುದರಿಂದ ಅವರ ವಶಕ್ಕೆ ಕೊಡಲ್ಪಡುವ ಹಣದ ಲೆಕ್ಕವನ್ನು ಕೇಳಬಾರದು” ಎಂದು ಆಜ್ಞಾಪಿಸಿ ಅವನನ್ನು ಯೆಹೋವನ ಆಲಯಕ್ಕೆ ಕಳುಹಿಸಿದನು.
पण त्यांना दिलेल्या पैशाचा हिशोब मागू नये कारण ही मंडळी विश्वसनीय आहे.”
8 ಪ್ರಧಾನ ಯಾಜಕನಾದ ಹಿಲ್ಕೀಯನು ಲೇಖಕನಾದ ಶಾಫಾನನಿಗೆ, “ಯೆಹೋವನ ಆಲಯದಲ್ಲಿ ನನಗೆ ಧರ್ಮೋಪದೇಶಗ್ರಂಥವು ಸಿಕ್ಕಿರುತ್ತದೆ” ಎಂದು ಹೇಳಿ, ಅದನ್ನು ಅವನ ಕೈಯಲ್ಲಿ ಕೊಟ್ಟನು. ಶಾಫಾನನು ಅದನ್ನು ಓದಿದನು.
महायाजक चिटणीस शाफान याला म्हणाला, “मला परमेश्वराच्या मंदिरात नियमशास्त्राचे पुस्तक सापडले आहे.” मग ते पुस्तक याजक हिल्कीयाने शाफानला दिले. शाफानने ते वाचले.
9 ಅನಂತರ ಲೇಖಕನಾದ ಶಾಫಾನನು ಹಿಂತಿರುಗಿ ಅರಸನ ಬಳಿಗೆ ಹೋಗಿ, “ನಿನ್ನ ಸೇವಕರು ಯೆಹೋವನ ದೇವಾಲಯದಲ್ಲಿ ಸಂಗ್ರಹವಾದ ಹಣವನ್ನು ತೆಗೆದು ದೇವಾಲಯದ ಕೆಲಸವನ್ನು ಮಾಡಿಸುವ ಮುಖ್ಯಸ್ಥರಿಗೆ ಒಪ್ಪಿಸಿದರು.
शाफानने परत येऊन राजाला सर्व वर्तमान सांगितले. तो म्हणाला, “तुझ्या सेवकांनी मंदिरातील सर्व पैसा एकत्र करून तो परमेश्वराच्या मंदिराच्या कामावर देखरेख करणाऱ्यांना त्यांनी दिला आहे.”
10 ೧೦ ಇದಲ್ಲದೆ, ಯಾಜಕನಾದ ಹಿಲ್ಕೀಯನು ಲೇಖಕನಾದ ಶಾಫಾನನಿಗೆ ಒಂದು ಗ್ರಂಥವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಅದನ್ನು ಅರಸನ ಮುಂದೆ ಓದಿದನು.
१०पुढे शाफान राजाला म्हणाला, “याजक हिल्कीया याने हे पुस्तकही मला दिले.” शाफानने ते राजाला वाचून दाखवले.
11 ೧೧ ಅರಸನು ಧರ್ಮೋಪದೇಶಗ್ರಂಥದ ವಾಕ್ಯಗಳನ್ನು ಕೇಳಿದಾಗ, ಬಟ್ಟೆಗಳನ್ನು ಹರಿದುಕೊಂಡನು.
११नियमशास्त्रातील वचने ऐकून राजाने अति दु: ख प्रदर्शित करण्यासाठी आपली वस्त्रे फाडली.
12 ೧೨ ಅರಸನು ಯಾಜಕನಾದ ಹಿಲ್ಕೀಯ, ಶಾಫಾನನ ಮಗನಾದ ಅಹೀಕಾಮ್, ಮೀಕಾಯನ ಮಗನಾದ ಅಕ್ಬೋರ್, ಲೇಖಕನಾದ ಶಾಫಾನ್, ತನ್ನ ಸಹಾಯಕನಾದ ಅಸಾಯ ಎಂಬುವವರಿಗೆ,
१२मग राजाने याजक हिल्कीया, शाफानचा मुलगा अहीकाम, मिखायाचा मुलगा अखबोर, शाफान चिटणीस आणि सेवक असाया यांना आज्ञा केली की,
13 ೧೩ “ನಮ್ಮ ಪೂರ್ವಿಕರು ನಮಗೆ ಸಿಕ್ಕಿರುವ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳಿಗೆ ಕಿವಿಗೊಡದೆಯೂ, ಅವುಗಳನ್ನು ಕೈಕೊಳ್ಳದೆಯೂ ಹೋದುದರಿಂದ ನಾವು ಯೆಹೋವನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದುದರಿಂದ ನೀವು ನನಗಾಗಿಯೂ, ಜನರಿಗಾಗಿಯೂ, ಮತ್ತು ಎಲ್ಲಾ ಯೆಹೂದ್ಯರಿಗಾಗಿಯೂ ಯೆಹೋವನ ಬಳಿಗೆ ಹೋಗಿ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳ ಕುರಿತಾಗಿ ವಿಚಾರಿಸಿರಿ” ಎಂದು ಆಜ್ಞಾಪಿಸಿದನು.
१३“आता जाऊन परमेश्वराचा कौल घ्या. मी, आपले लोक आणि सर्व यहूदा यांच्या वतीने त्यास या पुस्तकातील वचनांविषयी विचारा. परमेश्वराचा आपल्यावर कोप झाला आहे. कारण आपल्या पूर्वंजांनी या पुस्तकातील वचनांचा भंग केला आहे. आपल्यासाठी लिहून ठेवलेल्या सर्व गोष्टी त्यांनी आचरणात आणल्या नाहीत.
14 ೧೪ ಆಗ ಯಾಜಕನಾದ ಹಿಲ್ಕೀಯನು, ಅಹೀಕಾಮ್, ಅಕ್ಬೋರ್, ಶಾಫಾನ್, ಅಸಾಯ, ಎಂಬುವವರು “ಹುಲ್ದ” ಎಂಬ ಪ್ರವಾದಿನಿಯ ಬಳಿಗೆ ಹೋಗಿ ಆಕೆಯ ಹತ್ತಿರ ವಿಚಾರಿಸಿದರು. ಹರ್ಹಸನ ಮೊಮ್ಮಗನೂ, ತಿಕ್ವನ ಮಗನೂ, ಯಾಜಕವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಈಕೆಯ ಪತಿ. ಈಕೆಯು ಯೆರೂಸಲೇಮಿನ ಎರಡನೆಯ ಕೇರಿಯಲ್ಲಿ ವಾಸಿಸುತ್ತಿದ್ದಳು.
१४मग हिल्कीया याजक, अहीकाम, अखबोर, शाफान, असाया हे सर्व हुल्दा या संदेष्ट्रीकडे गेले. हरहसचा मुलगा तिकवा याचा मुलगा शल्लूम याची ती पत्नी. शल्लूम याजकांच्या कपड्यांचे खाते सांभाळी, हुल्दा यरूशलेमामध्ये दुसऱ्या भागात राहत होती. हे सर्वजण तिच्याकडे गेले आणि तिच्याशी बोलले.”
15 ೧೫ ಹುಲ್ದಳು ಅವರಿಗೆ, “ನಿಮ್ಮನ್ನು ಕಳುಹಿಸಿದವನಿಗೆ ಇಸ್ರಾಯೇಲರ ದೇವರಾದ ಯೆಹೋವನ ಮಾತನ್ನು ತಿಳಿಸಿರಿ.
१५तेव्हा हुल्दा त्यांना म्हणाली, इस्राएलचा देव परमेश्वर म्हणतो: तुम्हास माझ्याकडे ज्याने पाठवले त्यास सांगा,
16 ೧೬ ಯೆಹೋವನು, ‘ಈ ದೇಶದ ಮೇಲೆಯೂ ಮತ್ತು ಜನರ ಮೇಲೆಯೂ ಯೆಹೂದದ ಅರಸನು ಓದಿಸಿದ ಗ್ರಂಥದಲ್ಲಿ ಬರೆದಿರುವ ಎಲ್ಲಾ ಆಪತ್ತುಗಳನ್ನು ಬರಮಾಡುವನು.
१६“परमेश्वराचे म्हणणे आहे की, हा प्रदेश आणि तेथे राहणारे लोक यांच्यावर आता मी अरिष्ट आणणार आहे. यहूदाच्या राजाने त्या पुस्तकात वाचली तीच संकटे येतील.”
17 ೧೭ ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ಕೋಪಗೊಳ್ಳುವಂತೆ ಮಾಡಿರುವುದರಿಂದ ನನ್ನ ಕೋಪಾಗ್ನಿಯು ಈ ದೇಶದ ಮೇಲೆ ಉರಿಯಹತ್ತಿದೆ, ಅದು ಆರಿಹೋಗುವುದೇ ಇಲ್ಲ’ ಎನ್ನುತ್ತಾನೆ.
१७यहूदाच्या लोकांनी माझा त्याग केला. इतर दैवतांपुढे त्यांनी धूप जाळला. त्यांनी मला संताप आणला, त्यांनी अनेक मूर्तींही केल्या. म्हणून या प्रदेशावर माझा राग आहे. न विझवता येणाऱ्या अग्नीसारखा माझा संताप असेल.
18 ೧೮ ತಾನು ಕೇಳಿದ ವಾಕ್ಯಗಳ ವಿಷಯವಾಗಿ ಯೆಹೋವನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ತಿಳಿಸಬೇಕಾದ ಇಸ್ರಾಯೇಲರ ದೇವರಾದ ಯೆಹೋವನ ಮಾತೇನೆಂದರೆ,
१८“यहूदाचा राजा योशीया याने तुम्हास परमेश्वराचा कौल घ्यायला पाठवले. योशीयाला हे सांगा: ‘इस्राएलाचा देव परमेश्वराची वचने तू ऐकलीस. हा प्रदेश आणि येथील लोक यांच्याविषयी मी सांगितले ते ऐकलेस.
19 ೧೯ ‘ನಾನು ಈ ದೇಶವನ್ನೂ, ನಿವಾಸಿಗಳನ್ನೂ, ಶಾಪವಿಸ್ಮಯಗಳಿಗೆ ಗುರಿಮಾಡುವೆನೆಂಬುವುದನ್ನು ನೀನು ಕೇಳಿದಾಗ, ದುಃಖಪಟ್ಟು ಯೆಹೋವನಾದ ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದಲೂ, ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು’
१९तू मृदू मनाचा आहेस. या गोष्टी ऐकून तुला दु: ख झाले. यरूशलेमेवर अरिष्ट येईल असे मी म्हणालो तेव्हा शोकाने तू वस्त्रे फाडलीस आणि रडलास. म्हणून मीही तुझे ऐकले आहे.” हे परमेश्वराचे शब्द आहेत.
20 ೨೦ ಆದುದರಿಂದ, ‘ನಾನು ಈ ದೇಶಕ್ಕೆ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮರಣಹೊಂದಿ ಸಮಾಧಿ ಸೇರುವಂತೆ ಆಶೀರ್ವದಿಸುವೆನು’ ಎಂದು ಹೇಳಿದ್ದನ್ನು ತಿಳಿಸಿರಿ” ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.
२०“ती तुझी तुझ्या पूर्वजांशी भेट करून देईन. तुला मरण येईल आणि तू सुखाने कबरीत पडशील. यरूशलेमेवर येणारे अरिष्ट तुला आपल्या डोळ्यांनी पाहावे लागणार नाही.” मग याजक हिल्कीया, अहीकाम, अखबोर, शाफान, असाया यांनी हा संदेश राजाला सांगितला.

< ಅರಸುಗಳು - ದ್ವಿತೀಯ ಭಾಗ 22 >