< ಅರಸುಗಳು - ದ್ವಿತೀಯ ಭಾಗ 22 >

1 ಯೋಷೀಯನು ಅರಸನಾದಾಗ ಎಂಟು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಮೂವತ್ತೊಂದು ವರ್ಷ ಆಳಿದನು. ಬೊಚ್ಕತೂರಿನವಳೂ ಅದಾಯನ ಮಗಳೂ ಆದ ಯೆದೀದಾ ಎಂಬಾಕೆಯು ಅವನ ತಾಯಿ.
योशियाहले राज्‍य गर्न सुरु गर्दा तिनी आठ वर्षका थिए । तिनले यरूशलेममा एकतिस वर्ष राज्य गरे । तिनकी आमाको नाउँ यदीता थियो (उनी बोस्कतकी अदायाहकी छोरी थिइन्) ।
2 ಅರಸನಾದ ಯೋಷೀಯನು ಯೆಹೋವನನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳದೆ ತನ್ನ ಪೂರ್ವಜನಾದ ದಾವೀದನ ಮಾರ್ಗದಲ್ಲಿಯೇ ನಡೆದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.
परमप्रभुको दृष्‍टिमा जे ठिक थियो, तिनले त्यही गरे । तिनी आफ्ना पुर्खा दाऊदका सबै मार्गमा हिंडे, र तिनी दायाँ र बायाँ लागेनन् ।
3 ಅರಸನಾದ ಯೋಷೀಯನು ತನ್ನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಚಲ್ಯನ ಮಗನೂ, ಮೆಷುಲ್ಲಾಮನ ಮೊಮ್ಮಗನೂ, ಯೆಹೋವನ ಆಲಯದ ಲೇಖಕನೂ ಆದ ಶಾಫಾನನನ್ನು ಕರೆದು ಅವನಿಗೆ,
राजा योशियाहको अठारौँ वर्षमा तिनले मशुल्लामका नाति, असल्याहका छोरा सचिव शापानलाई यसो भनेर परमप्रभुको मन्दिरमा पठाए,
4 “ನೀನು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗಿ, ಅವನಿಗೆ ದ್ವಾರಪಾಲಕರು ಯೆಹೋವನ ಆಲಯಕ್ಕೆ ಬರುವ ಜನರಿಂದ ಕೂಡಿಸಿದ ಹಣವನ್ನು ಲೆಕ್ಕಿಸಬೇಕು,
“प्रधान पुजारी हिल्कियाहकहाँ जाऊ, र परमप्रभुको मन्दिरमा ल्याइएको रुपियाँ-पैसा जसलाई मन्दिरका पहरादारहरूले मानिसहरूबाट जम्मा गरेका छन्, त्‍यो गन्‍न तिनलाई भन ।
5 ಅದಲ್ಲದೆ ಆಲಯದ ಕೆಲಸಮಾಡಿಸುವ ಮುಖ್ಯಸ್ಥರಿಗೆ ಅದನ್ನು ಒಪ್ಪಿಸು ಎಂದು ಹೇಳಬೇಕು, ಮುಖ್ಯಸ್ಥರು ಅದನ್ನು ಯೆಹೋವನ ಆಲಯದ ದುರಸ್ತಿ ಕೆಲಸಕ್ಕೆ ಉಪಯೋಗಿಸಲಿ,
परमप्रभुको मन्दिरको रेखदेख गर्ने मानिसहरूका हातमा त्‍यो दिनू, र तिनीहरूले परमप्रभुको मन्दिर मर्मत गर्ने कारिन्‍दाहरूलाई मन्‍दिरको मरम्‍मत गर्ने कामको निम्‍ति त्‍यो देऊन् ।
6 ಬಡಗಿ, ಶಿಲ್ಪಿ, ಮೇಸ್ತ್ರಿ ಮೊದಲಾದವರ ಸಂಬಳಕ್ಕಾಗಿಯೂ, ದೇವಾಲಯಕ್ಕೆ ಬೇಕಾದ ಮರ, ಕೆತ್ತಿದ ಕಲ್ಲು ಇವುಗಳನ್ನು ಕೊಂಡುಕೊಳ್ಳುವುದಕ್ಕಾಗಿಯೂ ಅದನ್ನು ಉಪಯೋಗಿಸಿಕೊಳ್ಳಲಿ,
मन्दिरको मर्मत गर्ने सिकर्मीहरू, निर्माण गर्नेहरू, र डकर्मीहरूलाई अनि काठपात किन्‍न र ढुङ्गा काटनलाई तिनीहरूले त्यो रुपियाँ-पैसा देऊन् ।”
7 ಅವರು ನಂಬಿಗಸ್ತರಾಗಿರುವುದರಿಂದ ಅವರ ವಶಕ್ಕೆ ಕೊಡಲ್ಪಡುವ ಹಣದ ಲೆಕ್ಕವನ್ನು ಕೇಳಬಾರದು” ಎಂದು ಆಜ್ಞಾಪಿಸಿ ಅವನನ್ನು ಯೆಹೋವನ ಆಲಯಕ್ಕೆ ಕಳುಹಿಸಿದನು.
तर तिनीहरूलाई दिइएको रुपियाँ-पैसाको हरहिसाब लिइएन किनकि तिनीहरूले यो कामलाई विश्‍वासका साथ सम्हालेका थिए ।
8 ಪ್ರಧಾನ ಯಾಜಕನಾದ ಹಿಲ್ಕೀಯನು ಲೇಖಕನಾದ ಶಾಫಾನನಿಗೆ, “ಯೆಹೋವನ ಆಲಯದಲ್ಲಿ ನನಗೆ ಧರ್ಮೋಪದೇಶಗ್ರಂಥವು ಸಿಕ್ಕಿರುತ್ತದೆ” ಎಂದು ಹೇಳಿ, ಅದನ್ನು ಅವನ ಕೈಯಲ್ಲಿ ಕೊಟ್ಟನು. ಶಾಫಾನನು ಅದನ್ನು ಓದಿದನು.
प्रधान पुजारी हिल्कियाहले सचिव शापानलाई भने, “मैले परमप्रभुको मन्दिरमा व्यवस्थाको पुस्तक भेट्टाएको छु ।” त्यसैले हिल्कियाहले त्यो पुस्तक शापानलाई दिए, र तिनले यो पढे ।
9 ಅನಂತರ ಲೇಖಕನಾದ ಶಾಫಾನನು ಹಿಂತಿರುಗಿ ಅರಸನ ಬಳಿಗೆ ಹೋಗಿ, “ನಿನ್ನ ಸೇವಕರು ಯೆಹೋವನ ದೇವಾಲಯದಲ್ಲಿ ಸಂಗ್ರಹವಾದ ಹಣವನ್ನು ತೆಗೆದು ದೇವಾಲಯದ ಕೆಲಸವನ್ನು ಮಾಡಿಸುವ ಮುಖ್ಯಸ್ಥರಿಗೆ ಒಪ್ಪಿಸಿದರು.
शापानले त्यो किताब राजाकहाँ लगे, र तिनलाई यसो भनी विवरण दिए, “तपाईंका दासहरूले मन्दिरमा भेट्टाइएका रुपियाँ-पैसा खर्च गरेका छन्, र तिनीहरूले यो परमप्रभुको मन्दिरको रेखदेख गर्ने कारिन्‍दहरूका हातमा दिएका छन् ।”
10 ೧೦ ಇದಲ್ಲದೆ, ಯಾಜಕನಾದ ಹಿಲ್ಕೀಯನು ಲೇಖಕನಾದ ಶಾಫಾನನಿಗೆ ಒಂದು ಗ್ರಂಥವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಅದನ್ನು ಅರಸನ ಮುಂದೆ ಓದಿದನು.
तब सचिव शापानले राजालाई भने, “प्रधान पुजारी हिल्कियाहले मलाई एउटा पुस्तक दिएका छन् ।” तब शापानले त्यो राजाको लागि पढे ।
11 ೧೧ ಅರಸನು ಧರ್ಮೋಪದೇಶಗ್ರಂಥದ ವಾಕ್ಯಗಳನ್ನು ಕೇಳಿದಾಗ, ಬಟ್ಟೆಗಳನ್ನು ಹರಿದುಕೊಂಡನು.
जब राजाले व्यवस्थाका वचनहरू सुने तिनले आफ्ना लुगा च्याते ।
12 ೧೨ ಅರಸನು ಯಾಜಕನಾದ ಹಿಲ್ಕೀಯ, ಶಾಫಾನನ ಮಗನಾದ ಅಹೀಕಾಮ್, ಮೀಕಾಯನ ಮಗನಾದ ಅಕ್ಬೋರ್, ಲೇಖಕನಾದ ಶಾಫಾನ್, ತನ್ನ ಸಹಾಯಕನಾದ ಅಸಾಯ ಎಂಬುವವರಿಗೆ,
राजाले पुजारी हिल्कियाह, शापानका छोरा अहीकाम, मीकायाका छोरा अक्बोर, सचिव शापान र राजाका आफ्नै सेवक असायाहलाई हुकुम गरे,
13 ೧೩ “ನಮ್ಮ ಪೂರ್ವಿಕರು ನಮಗೆ ಸಿಕ್ಕಿರುವ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳಿಗೆ ಕಿವಿಗೊಡದೆಯೂ, ಅವುಗಳನ್ನು ಕೈಕೊಳ್ಳದೆಯೂ ಹೋದುದರಿಂದ ನಾವು ಯೆಹೋವನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದುದರಿಂದ ನೀವು ನನಗಾಗಿಯೂ, ಜನರಿಗಾಗಿಯೂ, ಮತ್ತು ಎಲ್ಲಾ ಯೆಹೂದ್ಯರಿಗಾಗಿಯೂ ಯೆಹೋವನ ಬಳಿಗೆ ಹೋಗಿ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳ ಕುರಿತಾಗಿ ವಿಚಾರಿಸಿರಿ” ಎಂದು ಆಜ್ಞಾಪಿಸಿದನು.
“जाओ, र यस पुस्तकमा पाइएका वचनहरूको कारणले मेरो लागि र सारा यहूदाका लागि परमप्रभुको सल्‍लाह खोज । किनकि हाम्रा विरुद्धमा भएको परमप्रभुको क्रोध भयानक छ, किनभने यस पुस्तकमा भएका हाम्रा सम्‍बन्‍धका वचनलाई हाम्रा पुर्खाहरूले जसरी पालन गर्नुपर्थ्‍यो त्‍यसरी तिनीहरूले गरेनन् ।”
14 ೧೪ ಆಗ ಯಾಜಕನಾದ ಹಿಲ್ಕೀಯನು, ಅಹೀಕಾಮ್, ಅಕ್ಬೋರ್, ಶಾಫಾನ್, ಅಸಾಯ, ಎಂಬುವವರು “ಹುಲ್ದ” ಎಂಬ ಪ್ರವಾದಿನಿಯ ಬಳಿಗೆ ಹೋಗಿ ಆಕೆಯ ಹತ್ತಿರ ವಿಚಾರಿಸಿದರು. ಹರ್ಹಸನ ಮೊಮ್ಮಗನೂ, ತಿಕ್ವನ ಮಗನೂ, ಯಾಜಕವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಈಕೆಯ ಪತಿ. ಈಕೆಯು ಯೆರೂಸಲೇಮಿನ ಎರಡನೆಯ ಕೇರಿಯಲ್ಲಿ ವಾಸಿಸುತ್ತಿದ್ದಳು.
त्यसैले पुजारी हिल्कियाह, अहीकाम, अक्बोर, शापान र असायाह अगमवादिनी हुल्दाकहाँ गए । उनी दरबारका लुगाफाटो हेरचाह गर्ने हरहसका नाति, तिक्भाका छोरा शल्लूमकी पत्‍नी थिइन् । (उनी यरूशलेमको दोस्रो टोलमा बस्थिन्) । तिनीहरूले उनीसित कुरा गरे ।
15 ೧೫ ಹುಲ್ದಳು ಅವರಿಗೆ, “ನಿಮ್ಮನ್ನು ಕಳುಹಿಸಿದವನಿಗೆ ಇಸ್ರಾಯೇಲರ ದೇವರಾದ ಯೆಹೋವನ ಮಾತನ್ನು ತಿಳಿಸಿರಿ.
उनले तिनीहरूलाई भनिन्, “इस्राएलका परमप्रभु परमेश्‍वर यसो भन्‍नुहुन्छ, 'तिमीहरूलाई मकहाँ पठाउने मानिसलाई भन्,
16 ೧೬ ಯೆಹೋವನು, ‘ಈ ದೇಶದ ಮೇಲೆಯೂ ಮತ್ತು ಜನರ ಮೇಲೆಯೂ ಯೆಹೂದದ ಅರಸನು ಓದಿಸಿದ ಗ್ರಂಥದಲ್ಲಿ ಬರೆದಿರುವ ಎಲ್ಲಾ ಆಪತ್ತುಗಳನ್ನು ಬರಮಾಡುವನು.
“परमप्रभु यसो भन्‍नुहुन्छः हेर्, यहूदाका राजाले यस पुस्तकमा पढेअनुसार यस ठाउँ र यसका बासिन्दाहरूमा म विपत्ति ल्याउनेछु ।
17 ೧೭ ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ಕೋಪಗೊಳ್ಳುವಂತೆ ಮಾಡಿರುವುದರಿಂದ ನನ್ನ ಕೋಪಾಗ್ನಿಯು ಈ ದೇಶದ ಮೇಲೆ ಉರಿಯಹತ್ತಿದೆ, ಅದು ಆರಿಹೋಗುವುದೇ ಇಲ್ಲ’ ಎನ್ನುತ್ತಾನೆ.
किनकि तिनीहरूले मलाई त्यागे अनि अन्य देवताहरूलाई धूप बाले, यसरी तिनीहरूले गरेका सबै कामले तिनीहरूले मलाई रिस उठाए— यसकारण यस ठाउँको विरुद्धमा मेरो क्रोध दन्केको छ, र यो निभाइने छैन' ।”
18 ೧೮ ತಾನು ಕೇಳಿದ ವಾಕ್ಯಗಳ ವಿಷಯವಾಗಿ ಯೆಹೋವನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ತಿಳಿಸಬೇಕಾದ ಇಸ್ರಾಯೇಲರ ದೇವರಾದ ಯೆಹೋವನ ಮಾತೇನೆಂದರೆ,
तर परमप्रभुको इच्छा जान्‍न तिमीहरूलाई पठाउने यहूदाका राजालाई चाहिं तिमीहरूले यसो भन, 'तपाईंले सुन्‍नुभएको वचनको विषयमा इस्राएलका परमप्रभु परमेश्‍वर यसो भन्‍नुहुन्छः
19 ೧೯ ‘ನಾನು ಈ ದೇಶವನ್ನೂ, ನಿವಾಸಿಗಳನ್ನೂ, ಶಾಪವಿಸ್ಮಯಗಳಿಗೆ ಗುರಿಮಾಡುವೆನೆಂಬುವುದನ್ನು ನೀನು ಕೇಳಿದಾಗ, ದುಃಖಪಟ್ಟು ಯೆಹೋವನಾದ ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದಲೂ, ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು’
तिनीहरू उजाड र श्रापित हुनेछन् भनी मैले यस ठाउँ र यसका बासिन्दाहरूको विरुद्धमा भनेको सुनेर तैँले आफ्‍नो ह्रदय कोमल बनाएको र तैँले परमप्रभुको सामु आफैलाई विनम्र तुल्याएको अनि तैँले आफ्ना लुगा च्यातेको र मेरो सामु रोएका हुनाले मैले तेरो कुरा पनि सुनेको छु—यो परमप्रभुको घोषणा हो ।
20 ೨೦ ಆದುದರಿಂದ, ‘ನಾನು ಈ ದೇಶಕ್ಕೆ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮರಣಹೊಂದಿ ಸಮಾಧಿ ಸೇರುವಂತೆ ಆಶೀರ್ವದಿಸುವೆನು’ ಎಂದು ಹೇಳಿದ್ದನ್ನು ತಿಳಿಸಿರಿ” ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.
हेर्, म तँलाई तेरा पुर्खाहरूसित जम्मा गर्नेछु, र तँ शान्तिसित तेरो चिहानमा जानेछस् । मैले यस ठाउँमा ल्याउने सबै विपत्तिलाई तेरा आँखाले देख्‍नेछैनस् । यसरी मानिसहरूले राजाकहाँ यो सन्देश लिएर गए ।

< ಅರಸುಗಳು - ದ್ವಿತೀಯ ಭಾಗ 22 >