< ಅರಸುಗಳು - ದ್ವಿತೀಯ ಭಾಗ 23 >
1 ೧ ಅನಂತರ ಅರಸನು ದೂತರ ಮುಖಾಂತರವಾಗಿ ಯೆರೂಸಲೇಮಿನ ಮತ್ತು ಯೆಹೂದ ಪ್ರಾಂತ್ಯಗಳಲ್ಲಿರುವ ಎಲ್ಲಾ ಊರುಗಳ ಹಿರಿಯರನ್ನು ತನ್ನ ಬಳಿಗೆ ಕರೆಯಿಸಿದನು.
और बादशाह ने लोग भेजे, और उन्होंने यहूदाह और येरूशलेम के सब बुज़ुर्गों को उसके पास जमा' किया।
2 ೨ ಅರಸನು ಯೆರೂಸಲೇಮಿನವರನ್ನೂ, ಎಲ್ಲಾ ಯೆಹೂದ್ಯರನ್ನೂ, ಯಾಜಕರನ್ನೂ, ಪ್ರವಾದಿಗಳನ್ನೂ ಕರೆದುಕೊಂಡು ಯೆಹೋವನ ಆಲಯಕ್ಕೆ ಹೋದನು. ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೆ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಯೆಹೋವನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ನಿಬಂಧನ ಗ್ರಂಥವನ್ನು ಸಂಪೂರ್ಣವಾಗಿ ಓದಿಸಿದನು.
और बादशाह ख़ुदावन्द के घर को गया, और उसके साथ यहूदाह के सब लोग, और येरूशलेम के सब बाशिन्दे, और काहिन, और नबी, और सब छोटे बड़े आदमी थे, और उसने जो 'अहद की किताब ख़ुदावन्द के घर में मिली थी, उसकी सब बातें उनको पढ़ सुनाई।
3 ೩ ಅರಸನು ಕಂಬದ ಬಳಿಯಲ್ಲಿ ನಿಂತು, ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ, ಆತನ ಆಜ್ಞಾನಿಯಮ, ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಕೈಕೊಳ್ಳುವುದಾಗಿಯೂ ಆ ಒಡಂಬಡಿಕೆಯ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಎಲ್ಲಾ ಜನರ ಎದುರು ಪ್ರಮಾಣ ಮಾಡಿದನು.
और बादशाह सुतून के बराबर खड़ा हुआ, और उसने ख़ुदावन्द की पैरवी करने और उसके हुक्मों और शहादतों और तौर तरीक़े को अपने सारे दिल और सारी जान से मानने, और इस 'अहद की बातों पर जो उस किताब में लिखी हैं 'अमल करने के लिए ख़ुदावन्द के सामने 'अहद बाँधा, और सब लोग उस 'अहद पर क़ायम हुए।
4 ೪ ತರುವಾಯ ಅರಸನು ಮಹಾಯಾಜಕನಾದ ಹಿಲ್ಕೀಯನಿಗೆ, ಅವನ ಕೈಕೆಳಗಿರುವ ಯಾಜಕರ ಮತ್ತು ದ್ವಾರಪಾಲಕರ ಮುಖಾಂತರವಾಗಿ ಬಾಳ್, ಅಶೇರ್ ಎಂಬ ದೇವತೆಗಳಿಗಾಗಿಯೂ, ಆಕಾಶಸೈನ್ಯಗಳಿಗಾಗಿಯೂ, ಉಪಯೋಗಿಸುತ್ತಿದ್ದ ಎಲ್ಲಾ ಸಾಮಾನುಗಳನ್ನು ಯೆಹೋವನ ಆಲಯದಿಂದ ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಬಯಲಿನಲ್ಲಿ ಅವುಗಳನ್ನು ಸುಟ್ಟು ಬೂದಿಯನ್ನು ಬೇತೇಲಿಗೆ ಕಳುಹಿಸಿದನು.
फिर बादशाह ने सरदार काहिन ख़िलक़ियाह को, और उन काहिनों को जो दूसरे दर्जे के थे, और दरबानों को हुक्म किया कि उन सब बर्तनों को जो बा'ल और यसीरत और आसमान की सारी फ़ौज के लिए बनाए गए थे, ख़ुदावन्द की हैकल से बाहर निकालें, और उसने येरूशलेम के बाहर क़िद्रोन के खेतों में उनको जला दिया और उनकी राख बैतएल पहुँचाई।
5 ೫ ಇದಲ್ಲದೆ, ಯೆಹೂದ ಪ್ರಾಂತ್ಯದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಸುತ್ತಣ ಪ್ರದೇಶಗಳಲ್ಲಿಯೂ ಇದ್ದ ಪೂಜಾಸ್ಥಳಗಳ ವಿಗ್ರಹಗಳಿಗೂ, ಬಾಳನಿಗೂ, ಸೂರ್ಯ, ಚಂದ್ರ ಹಾಗೂ ನಕ್ಷತ್ರಗಳು ಎನಿಸಿಕೊಳ್ಳುವ ಆಕಾಶಸೈನ್ಯಕ್ಕೂ, ಧೂಪಹಾಕುವುದಕ್ಕಾಗಿ ಯೆಹೂದ ರಾಜರಿಂದ ನೇಮಿಸಲ್ಪಟ್ಟ ಎಲ್ಲಾ ಪೂಜಾರಿಗಳನ್ನು ತೆಗೆದುಹಾಕಿದನು.
और उसने उन बुत परस्त काहिनों को, जिनको शाहान — ए — यहूदाह ने यहूदाह के शहरों के ऊँचे मक़ामों और येरूशलेम के आस — पास के मक़ामों में ख़ुशबू जलाने को मुक़र्रर किया था, और उनको भी जो बा'ल और चाँद और सूरज और सय्यारे और आसमान के सारे लश्कर के लिए ख़ुशबू जलाते थे, मौक़ूफ़ किया।
6 ೬ ಯೆಹೋವನ ಆಲಯದಲ್ಲಿದ್ದ ಅಶೇರ್ ವಿಗ್ರಹಸ್ತಂಭವನ್ನು ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಹಳ್ಳಕ್ಕೆ ತೆಗೆದುಕೊಂಡು ಹೋಗಿ ಅಲ್ಲಿ ಅದನ್ನು ಸುಟ್ಟು ಪುಡಿಪುಡಿ ಮಾಡಿಸಿ ಆ ಪುಡಿಯನ್ನು ಸಾಮಾನ್ಯ ಜನರ ಸ್ಮಶಾನದಲ್ಲಿ ಹಾಕಿಬಿಟ್ಟನು.
और वह यसीरत को ख़ुदावन्द के घर से येरूशलेम के बाहर क़िद्रोन के नाले पर ले गया, और उसे क़िद्रोन के नाले पर जला दिया और उसे कूट कूटकर ख़ाक बना दिया और उसे 'आम लोगों की क़ब्रों पर फेंक दिया।
7 ೭ ಯೆಹೋವನ ಆಲಯದ ಪ್ರಾಕಾರದೊಳಗಿದ್ದ ದೇವದಾಸ, ವೇಶ್ಯವೃತ್ತಿಯವರ ಮನೆಗಳನ್ನು ಕೆಡವಿಹಾಕಿಸಿದನು. ಆ ಮನೆಗಳಲ್ಲಿ ಸ್ತ್ರೀಯರು ಅಶೇರ್ ದೇವತೆಗಳಿಗಾಗಿ ಗುಡಾರದ ಬಟ್ಟೆಗಳನ್ನು ನೇಯುತ್ತಿದ್ದರು.
उसने लूतियों के मकानों को जो ख़ुदावन्द के घर में थे, जिनमें 'औरतें यसीरत के लिए पर्दे बुना करती थीं, ढा दिया।
8 ೮ ಅನಂತರ ಗೆಬದಿಂದ ಬೇರ್ಷೆಬದವರೆಗಿರುವ ಯೆಹೂದ ಪಟ್ಟಣಗಳ ಎಲ್ಲಾ ಯಾಜಕರನ್ನು ಕರೆಯಿಸಿಕೊಂಡು ಅವರು ಧೂಪಹಾಕುತ್ತಿದ್ದ ಪೂಜಾಸ್ಥಳಗಳನ್ನು ನಾಶಮಾಡಿಸಿದನು. ಪುರಾಧಿಕಾರಿಯಾದ ಯೆಹೋಶುವನ ಬಾಗಿಲಿನ ಎಡಗಡೆಯಲ್ಲಿದ್ದ ದ್ವಾರಗಳ ದೇವತೆಯ ಪೂಜಾಸ್ಥಳಗಳನ್ನು ಕೆಡವಿ ಹಾಕಿಸಿದನು.
और उसने यहूदाह के शहरों से सब काहिनों को लाकर, जिबा' से बैरसबा' तक उन सब ऊँचे मक़ामों में जहाँ काहिनों ने ख़ुशबू जलाया था, नजासत डलवाई; और उसने फाटकों के उन ऊँचे मक़ामों को जो शहर के नाज़िम यशू'आ के फाटक के मदखल, या'नी शहर के फाटक के बाएँ हाथ को थे, गिरा दिया।
9 ೯ ಪೂಜಾಸ್ಥಳಗಳಿಂದ ಬಂದ ಯಾಜಕರಿಗೆ ಇತರ ಯಾಜಕರೊಡನೆ ಹುಳಿಯಿಲ್ಲದ ರೊಟ್ಟಿಗಳಲ್ಲಿ ಪಾಲುಸಿಕ್ಕಿದರೂ, ಅವರಿಗೆ ಯೆರೂಸಲೇಮಿನಲ್ಲಿದ್ದ ಯೆಹೋವನ ಯಜ್ಞವೇದಿಯ ಸಮೀಪಕ್ಕೆ ಹೋಗುವುದಕ್ಕೆ ಅಪ್ಪಣೆಯಿರಲಿಲ್ಲ.
तोभी ऊँचे मक़ामों के काहिन येरूशलेम में ख़ुदावन्द के मज़बह के पास न आए, लेकिन वह अपने भाइयों के साथ बेख़मीरी रोटी खा लेते थे।
10 ೧೦ ತಮ್ಮ ಗಂಡುಹೆಣ್ಣು ಮಕ್ಕಳನ್ನು ಮೋಲೆಕನಿಗೋಸ್ಕರ ಆಹುತಿ ಕೊಡದಂತೆ ಬೆನ್ ಹಿನ್ನೋಮ್ ತಗ್ಗಿನಲ್ಲಿದ್ದ “ತೋಫೆತ್” ಎಂಬ ಯಜ್ಞವೇದಿಯ ಸ್ಥಳವನ್ನು ಹೊಲೆಮಾಡಿದನು.
और उसने तूफ़त में जो बनी — हिन्नूम की वादी में है, नजासत फिंकवाई ताकि कोई शख़्स मोलक के लिए अपने बेटे या बेटी को आग में न जला सके।
11 ೧೧ ಯೆಹೂದ ರಾಜರು ಸೂರ್ಯದೇವತೆಗೋಸ್ಕರ ಪ್ರತಿಷ್ಠಿಸಿದ ಕುದುರೆಗಳನ್ನು ತೆಗೆದುಹಾಕಿ ರಥಗಳನ್ನು ಸುಟ್ಟುಬಿಟ್ಟನು. ಅವು ಯೆಹೋವನ ಆಲಯದ ಹೆಬ್ಬಾಗಿಲಿನ ಹೊರಗೆ “ಪರ್ವರೀಮ್” ಎಂಬ ಸ್ಥಳದಲ್ಲಿ ಕಂಚುಕಿಯಾದ ನಾತಾನ್ ಮೆಲೆಕನ ಕೋಣೆಯ ಹತ್ತಿರ ಇಡಲ್ಪಟ್ಟಿದ್ದವು.
और उसने उन घोड़ों को दूर कर दिया जिनको यहूदाह के बादशाहों ने सूरज के लिए मख़्सूस करके ख़ुदावन्द के घर के आसताने पर, नातन मलिक ख़्वाजासरा की कोठरी के बराबर रख्खा था जो हैकल की हद के अन्दर थी, और सूरज के रथों को आग से जला दिया।
12 ೧೨ ಇದಲ್ಲದೆ, ಯೆಹೂದ್ಯರ ಅರಸರು ದೇವಸ್ಥಾನದ ಮಾಳಿಗೆಯ ಮೇಲೆ ಆಹಾಜನ ಉಪ್ಪರಿಗೆಯ ಹತ್ತಿರ ಕಟ್ಟಿಸಿದ್ದ ಯಜ್ಞವೇದಿಗಳನ್ನೂ, ಮನಸ್ಸೆಯು ಯೆಹೋವನ ಆಲಯದ ಎರಡು ಪ್ರಾಕಾರಗಳಲ್ಲಿ ಕಟ್ಟಿಸಿದ ಯಜ್ಞವೇದಿಗಳನ್ನೂ ಕೆಡವಿ ಪುಡಿಪುಡಿ ಮಾಡಿ ಅವುಗಳ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು.
और उन मज़बहों को जो आख़ज़ के बालाख़ाने की छत पर थे, जिनको शाहान — ए — यहूदाह ने बनाया था और उन मज़बहों को जिनको मनस्सी ने ख़ुदावन्द के घर के दोनों सहनों में बनाया था, बादशाह ने ढा दिया और वहाँ से उनको चूर — चूर करके उनकी ख़ाक को क़िद्रोन के नाले में फिकवा दिया।
13 ೧೩ ಇಸ್ರಾಯೇಲರ ಅರಸನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್ ದೇವತೆ, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಯೆರೂಸಲೇಮಿನ ಎದುರಿನಲ್ಲಿಯೂ, ವಿಘ್ನಪರ್ವತದ ದಕ್ಷಿಣದಿಕ್ಕಿನಲ್ಲಿಯೂ ಸ್ಥಾಪಿಸಿದ್ದ ಪೂಜಾಸ್ಥಳಗಳನ್ನು ಅರಸನು ಹೊಲೆ ಮಾಡಿದನು.
और बादशाह ने उन ऊँचे मक़ामों पर नजासत डलवाई जो येरूशलेम के मुक़ाबिल कोह — ए — आलायश की दहनी तरफ़ थे, जिनको इस्राईल के बादशाह सुलेमान ने सैदानियों की नफ़रती 'अस्तारात और मोआबियों, के नफ़रती कमूस और बनी 'अम्मोंन के नफरती मिल्कोम के लिए बनाया था।
14 ೧೪ ಕಲ್ಲು ಕಂಬಗಳನ್ನು ಒಡೆದುಹಾಕಿ ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಬಿಟ್ಟು ಅವುಗಳಲ್ಲಿದ್ದ ಸ್ಥಳಗಳನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.
और उसने सुतूनों को टुकड़े — टुकड़े कर दिया और यसीरतों को काट डाला, और उनकी जगह में मुर्दों की हड्डियाँ भर दीं।
15 ೧೫ ಇದಲ್ಲದೆ, ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನು ಬೇತೇಲಿನಲ್ಲಿ ನಿರ್ಮಿಸಿದ್ದ ಪೂಜಾಸ್ಥಳವನ್ನೂ, ಅದರಲ್ಲಿದ್ದ ಯಜ್ಞವೇದಿಯನ್ನೂ ಕೆಡವಿಬಿಟ್ಟನು. ಪೂಜಾಸ್ಥಳವನ್ನೂ ಅದರಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನೂ ಸುಟ್ಟು ಬೂದಿಮಾಡಿನು.
फिर बैतएल का वह मज़बह और वह ऊँचा मक़ाम जिसे नबात के बेटे युरब'आम ने बनाया था, जिसने इस्राईल से गुनाह कराया, इसलिए इस मज़बह और ऊँचे मक़ाम दोनों को उसने ढा दिया, और ऊँचे मक़ाम को जला दिया और उसे कूट — कूटकर ख़ाक कर दिया, और यसीरत को जला दिया।
16 ೧೬ ಯೋಷೀಯನು ಹಿಂದಿರುಗಿ ನೋಡಿದಾಗ ಅಲ್ಲಿನ ಗುಡ್ಡಗಳಲ್ಲಿ ಸಮಾಧಿಗಳನ್ನು ಕಂಡು, ಅವುಗಳಲ್ಲಿದ್ದ ಎಲುಬುಗಳನ್ನು ತರಿಸಿ ಆ ಯಜ್ಞವೇದಿಯ ಮೇಲೆ ಸುಟ್ಟು ಅವುಗಳನ್ನು ನಾಶಮಾಡಿದನು. ಹೀಗೆ ದೇವರ ಮನುಷ್ಯನೊಬ್ಬನು ಪ್ರಕಟಿಸಿದ ಯೆಹೋವನ ವಾಕ್ಯವು ನೆರವೇರಿತು.
और जब यूसियाह मुड़ा तो उसने उन क़ब्रों को देखा जो वहाँ उस पहाड़ पर थीं, इसलिए उसने लोग भेज कर उन क़ब्रों में से हड्डियाँ निकलवाई, और उनको उस मज़बह पर जलाकर उसे नापाक किया। ये ख़ुदावन्द के सुख़न के मुताबिक़ हुआ, जिसे उस मर्द — ए — ख़ुदा ने जिसने इन बातों की ख़बर दी थी सुनाया था।
17 ೧೭ ಇದಲ್ಲದೆ, ಅವನು ಒಂದು ಸಮಾಧಿಶಿಲೆಯನ್ನು ಕಂಡು, ಅದು ಏನು? ಎಂದು ವಿಚಾರಿಸಲು ಆ ಊರಿನವರು, “ನೀನು ಈಗ ಬೇತೇಲಿನ ಯಜ್ಞವೇದಿಗೆ ಮಾಡಿದ್ದನ್ನು ಮುಂತಿಳಿಸಿದ ಯೆಹೂದ ದೇಶದವನಾದ ದೇವರ ಮನುಷ್ಯನ ಸಮಾಧಿ” ಎಂದು ಉತ್ತರಕೊಟ್ಟರು.
फिर उसने पूछा, “ये कैसी यादगार है जिसे मैं देखता हूँ?” शहर के लोगों ने उसे बताया, “ये उस मर्द — ए — ख़ुदा की क़ब्र है, जिसने यहूदाह से आकर इन कामों की जो तू ने बैतएल के मज़बह से किए, ख़बर दी।”
18 ೧೮ ಆಗ ಯೋಷೀಯನು, “ಬಿಡಿರಿ, ಆ ಮನುಷ್ಯನ ಎಲುಬುಗಳನ್ನು ಯಾರೂ ಮುಟ್ಟಬಾರದು” ಎಂದು ಹೇಳಿದನು. ಆದುದರಿಂದ ಅವರು ಅವನ ಮತ್ತು ಸಮಾರ್ಯದೇಶದ ಪ್ರವಾದಿಯ ಎಲುಬುಗಳನ್ನು ಮುಟ್ಟಲಿಲ್ಲ.
तब उसने कहा, “उसे रहने दो, कोई उसकी हड्डियों को न सरकाए।” इसलिए उन्होंने उसकी हडिडयाँ उस नबी की हड्डियों के साथ जो सामरिया से आया था रहने दीं।
19 ೧೯ ಇಸ್ರಾಯೇಲ್ ರಾಜರು ಸಮಾರ್ಯದ ಪಟ್ಟಣಗಳಲ್ಲಿ ಪೂಜಾಸ್ಥಳಗಳನ್ನು ಗುಡಿಗಳನ್ನು ಕಟ್ಟಿಸಿ, ಯೆಹೋವನ ಕೋಪಕ್ಕೆ ಕಾರಣವಾದಂಥವುಗಳನ್ನು ಯೋಷೀಯನು ತೆಗೆದುಕೊಂಡು, ಬೇತೇಲಿನಲ್ಲಿ ನಾಶಮಾಡಿದ ಹಾಗೆ ಅವೆಲ್ಲವನ್ನು ನಾಶಮಾಡಿದನು.
और यूसियाह ने उन ऊँचे मक़ामों के सब घरों को भी जो सामरिया के शहरों में थे, जिनको इस्राईल के बादशाहों ने ख़ुदावन्द को ग़ुस्सा दिलाने को बनाया था ढाया, और जैसा उसने बैतएल में किया था वैसा ही उनसे भी किया।
20 ೨೦ ಯೋಷೀಯನು ಅವುಗಳನ್ನು ಕೆಡವಿಬಿಟ್ಟು ಅವುಗಳ ಪೂಜಾರಿಗಳನ್ನು ಯಜ್ಞವೇದಿಯ ಮೇಲೆ ವಧಿಸಿ ಆ ಮನುಷ್ಯರ ಎಲುಬುಗಳನ್ನು ಸುಟ್ಟು ಯೆರೂಸಲೇಮಿಗೆ ಹಿಂದಿರುಗಿ ಹೋದನು.
और उसने ऊँचे मक़ामों के सब काहिनों को जो वहाँ थे, उन मज़बहों पर क़त्ल किया और आदमियों की हड्डियाँ उन पर जलाई; फिर वह येरूशलेम को लौट आया।
21 ೨೧ ಅನಂತರ ಅರಸನು ಎಲ್ಲಾ ಜನರಿಗೆ, “ಈ ಒಡಂಬಡಿಕೆಯ ಗ್ರಂಥದಲ್ಲಿ ಬರೆದಿರುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನಿಗಾಗಿ ಪಸ್ಕಹಬ್ಬವನ್ನು ಆಚರಿಸಬೇಕು” ಎಂದು ಆಜ್ಞಾಪಿಸಿದನು.
और बादशाह ने सब लोगों को ये हुक्म दिया, कि “ख़ुदावन्द अपने ख़ुदा के लिए फ़सह मनाओ, जैसा 'अहद की इस किताब में लिखा है।”
22 ೨೨ ಇಂಥ ಪಸ್ಕಹಬ್ಬವು ಇಸ್ರಾಯೇಲರನ್ನು ಪಾಲಿಸಿದ ನ್ಯಾಯಸ್ಥಾಪಕರ ಕಾಲದಲ್ಲಾಗಲಿ, ಇಸ್ರಾಯೇಲರ ಮತ್ತು ಯೆಹೂದ್ಯರ ಅರಸರ ಕಾಲದಲ್ಲಾಗಲಿ ನಡೆಯಲೇ ಇಲ್ಲ.
और यक़ीनन क़ाजियों के ज़माने से जो इस्राईल की 'अदालत करते थे, और इस्राईल के बादशाहों और यहूदाह के बादशाहों के कुल दिनों में ऐसी 'ईद — ए — फ़सह कभी नहीं हुई थी।
23 ೨೩ ಈ ಪಸ್ಕಹಬ್ಬವು ಅರಸನಾದ ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಯೆರೂಸಲೇಮಿನಲ್ಲಿ ಯೆಹೋವನಿಗಾಗಿ ಆಚರಿಸಲ್ಪಟ್ಟಿತು.
यूसियाह बादशाह के अठारहवें बरस ये फ़सह येरूशलेम में ख़ुदावन्द के लिए मनाई गई।
24 ೨೪ ಇದಲ್ಲದೆ, ಯೋಷೀಯನು ಸತ್ತವರಲ್ಲಿ ವಿಚಾರಿಸುವವರನ್ನೂ, ಭೂತ ಪ್ರೇತ ಆರಾಧಕರನ್ನೂ, ಯೆರೂಸಲೇಮ್, ಯೆಹೂದ ಪ್ರಾಂತ್ಯ ಇವುಗಳಲ್ಲಿದ್ದ ಎಲ್ಲಾ ತೆರಾಫೀಮ್ ಎಂಬ ಬೊಂಬೆಗಳನ್ನೂ, ಮೂರ್ತಿಗಳನ್ನೂ ಎಲ್ಲಾ ಅಸಹ್ಯ ವಿಗ್ರಹಗಳನ್ನೂ ತೆಗೆದುಹಾಕಿ ಯಾಜಕನಾದ ಹಿಲ್ಕೀಯನಿಗೆ ಯೆಹೋವನ ಆಲಯದಲ್ಲಿ ಸಿಕ್ಕಿದ್ದ ಧರ್ಮೋಪದೇಶಗ್ರಂಥದಲ್ಲಿದ್ದ ಆಜ್ಞೆಗಳನ್ನು ನೆರವೇರಿಸಿದನು.
इसके सिवा यूसियाह ने जिन्नात के यारों और जादूगरों और मूरतों और बुतों, और सब नफ़रती चीज़ों को जो मुल्क — ए — यहूदाह और येरूशलेम में नज़र आई दूर कर दिया, ताकि वह शरी'अत की उन बातों को पूरा करे जो उस किताब में लिखी थी, जो ख़िलक़ियाह काहिन को ख़ुदावन्द के घर में मिली थी।
25 ೨೫ ಯೆಹೋವನ ಕಡೆಗೆ ತಿರುಗಿಕೊಂಡು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣಬಲದಿಂದಲೂ ಮೋಶೆಯ ಧರ್ಮಶಾಸ್ತ್ರವನ್ನು ಅನುಸರಿಸಿದ ಯೋಷೀಯನಿಗೆ ಸಮಾನನಾದ ಅರಸನು ಹಿಂದಿನ ಕಾಲದಲ್ಲೂ ಆ ನಂತರದ ಕಾಲದಲ್ಲೂ ಇರಲಿಲ್ಲ.
उससे पहले कोई बादशाह उसकी तरह नहीं हुआ था, जो अपने सारे दिल और अपनी सारी जान और अपने सारे ज़ोर से मूसा की सारी शरी'अत के मुताबिक़ ख़ुदावन्द की तरफ़ रुजू' लाया हो; और न उसके बाद कोई उसकी तरह खड़ा हुआ।
26 ೨೬ ಆದರೂ ಮನಸ್ಸೆಯ ದುಷ್ಕೃತ್ಯಗಳ ದೆಸೆಯಿಂದ ಯೆಹೂದ್ಯರ ಮೇಲಿದ್ದ ಯೆಹೋವನ ಉಗ್ರಕೋಪವು ಇಳಿಯಲಿಲ್ಲ.
बावजूद इसके मनस्सी की सब बदकारियों की वजह से, जिनसे उसने ख़ुदावन्द को ग़ुस्सा दिलाया था, ख़ुदावन्द अपने सख़्त — ओ — शदीद क़हर से, जिससे उसका ग़ज़ब यहूदाह पर भड़का था, बाज़ न आया।
27 ೨೭ ಯೆಹೋವನು, “ಇಸ್ರಾಯೇಲರನ್ನು ತೆಗೆದುಹಾಕಿದಂತೆ, ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು, ನಾನು ಆರಿಸಿಕೊಂಡ ಯೆರೂಸಲೇಮ್ ಪಟ್ಟಣವನ್ನೂ ನನ್ನ ನಾಮದ ಮಹಿಮೆಗಾಗಿ ಸ್ವೀಕರಿಸಿಕೊಂಡ ದೇವಾಲಯವನ್ನೂ ತಿರಸ್ಕರಿಸುವೆನು” ಎಂದು ಹೇಳಿದನು.
और ख़ुदावन्द ने फ़रमाया, कि “मैं यहूदाह को भी अपनी आँखों के सामने से दूर करूँगा, जैसे मैंने इस्राईल को दूर किया; और मैं इस शहर को जिसे मैंने चुना या'नी येरूशलेम को, और इस घर को जिसके ज़रिए' मैंने कहा था की मेरा नाम वहाँ होगा रद्द कर दूँगा”
28 ೨೮ ಯೋಷೀಯನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆಯಲಾಗಿದೆ.
और यूसियाह के बाक़ी काम और सब कुछ जो उसने किया, इसलिए क्या वह यहूदाह के बादशाहों की तवारीख़ की किताब में लिखे नहीं?
29 ೨೯ ಅವನ ಕಾಲದಲ್ಲಿ, ಐಗುಪ್ತದ ಅರಸನಾದ ಫರೋಹ ನೆಕೋ ಎಂಬುವವನು ಅಶ್ಶೂರದ ಅರಸನಿಗೆ ವಿರುದ್ಧವಾಗಿ ಎದ್ದು ಯುದ್ಧಮಾಡುವುದಕ್ಕಾಗಿ ಯೂಫ್ರೆಟಿಸ್ ನದಿಯ ಬಳಿಗೆ ಹೋದನು. ಅವನು ಅಲ್ಲಿಗೆ ಹೋಗುತ್ತಿರುವಾಗ ಯೋಷೀಯನು ಮೆಗಿದ್ದೋವಿನಲ್ಲಿ ಅವನನ್ನು ಎದುರುಗೊಂಡು ಅಲ್ಲಿ ಅವನಿಂದ ಹತನಾದನು.
उसी के अय्याम में शाह — ए — मिस्र फ़िर'औन निकोह शाह — ए — असूर पर चढ़ाई करने के लिए दरिया — ए — फ़रात को गया था; और यूसियाह बादशाह उसका सामना करने को निकला, इसलिए उसने उसे देखते ही मजिद्दो में क़त्ल कर दिया।
30 ೩೦ ಯೋಷೀಯನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಮೆಗಿದ್ದೋವಿನಿಂದ ಯೆರೂಸಲೇಮಿಗೆ ತಂದು ಅವನ ಸ್ವಂತ ಸಮಾಧಿಯಲ್ಲಿ ಇಟ್ಟರು. ಜನರು ಅವನ ನಂತರ ಅವನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ ಅರಸನನ್ನಾಗಿ ಮಾಡಿದರು.
और उसके मुलाज़िम उसको एक रथ में मजिद्दो से मरा हुआ ले गए, और उसे येरूशलेम में लाकर उसी की क़ब्र में दफ़्न किया। और उस मुल्क के लोगों ने यूसियाह के बेटे यहूआख़ज़ को लेकर उसे मसह किया, और उसके बाप की जगह उसे बादशाह बनाया।
31 ೩೧ ಯೆಹೋವಾಹಾಜನು ಅರಸನಾದಾಗ ಅವನು ಇಪ್ಪತ್ತಮೂರು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳುಗಳ ಕಾಲ ಆಳಿದನು. ಲಿಬ್ನದವನಾದ ಯೆರೆಮೀಯನ ಮಗಳಾದ ಹಮೂಟಲ್ ಎಂಬಾಕೆಯು ಇವನ ತಾಯಿ.
और यहूआख़ज़ जब सल्तनत करने लगा तो तेईस साल का था, उसने येरूशलेम में तीन महीने सल्तनत की। उसकी माँ का नाम हमूतल था, जो लिबनाही यरमियाह की बेटी थी।
32 ೩೨ ಯೆಹೋವಾಹಾಜನು ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
और जो — जो उसके बाप — दादा ने किया था उसके मुताबिक़ इसने भी ख़ुदावन्द की नज़र में गुनाह किया।
33 ೩೩ ಫರೋಹ ನೆಕೋವನು ಇವನನ್ನು ಯೆರೂಸಲೇಮಿನಲ್ಲಿ ಬಹು ದಿನಗಳವರೆಗೆ ಆಳಗೊಡಲಿಲ್ಲ. ಅವನು ಹಮಾತ ದೇಶದ ರಿಬ್ಲಾ ಎಂಬ ಊರಲ್ಲಿ ಇವನನ್ನು ಸೆರೆಯಲ್ಲಿಟ್ಟದ್ದಲ್ಲದೆ ಯೆಹೂದ್ಯರು ಅವನಿಗೆ ನೂರು ತಲಾಂತು ಬೆಳ್ಳಿಯನ್ನೂ, ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾಯಿತು.
इसलिए फ़िर'औन निकोह ने उसे रिबला में, जो मुल्क — ए — हमात में है, क़ैद कर दिया ताकि वह येरूशलेम में सल्तनत न करने पाए; और उस मुल्क पर सौ क़िन्तार चाँदी और एक क़िन्तार सोना ख़िराज मुक़र्रर किया।
34 ೩೪ ಫರೋಹ ನೆಕೋವನು ಯೋಷೀಯನಿಗೆ ಬದಲಾಗಿ ಅವನ ಮಗನಾದ ಎಲ್ಯಾಕೀಮನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ಯೆಹೋಯಾಕೀಮನೆಂಬ ಹೊಸ ಹೆಸರನ್ನಿಟ್ಟು ಯೆಹೋವಾಹಾಜನನ್ನು ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದನು. ಯೆಹೋವಾಹಾಜನು ಅಲ್ಲಿ ಮರಣ ಹೊಂದಿದನು.
और फ़िर'औन निकोह ने यूसियाह के बेटे इलियाक़ीम को उसके बाप यूसियाह की जगह बादशाह बनाया, और उसका नाम बदलकर यहूयक़ीम रखा, लेकिन यहूआख़ज़ को ले गया, इसलिए वह मिस्र में आकर वहाँ मर गया।
35 ೩೫ ಫರೋಹನು ಗೊತ್ತುಮಾಡಿದಷ್ಟು ಬೆಳ್ಳಿ ಬಂಗಾರವನ್ನು ಕೊಡುವುದಕ್ಕಾಗಿ ಯೆಹೋಯಾಕೀಮನು ತನ್ನ ದೇಶದಲ್ಲಿ ತೆರಿಗೆಯನ್ನು ವಿಧಿಸಿದನು. ತೆರಿಗೆಕೊಡಬೇಕಾದ ಪ್ರತಿಯೊಬ್ಬನು ತನಗೆ ನೇಮಕವಾದಷ್ಟು ಬೆಳ್ಳಿ ಬಂಗಾರವನ್ನು ದೇಶದ ಜನರಿಂದ ವಸೂಲಿಮಾಡಿಕೊಂಡು ಫರೋಹ ನೆಕೋವನಿಗೆ ತಂದೊಪ್ಪಿಸಿದನು.
यहूयक़ीम ने वह चाँदी और सोना फ़िर'औन को पहुँचाया, पर इस नक़दी को फ़िर'औन के हुक्म के मुताबिक़ देने के लिए उसने ममलुकत पर ख़िराज मुक़र्रर किया; या'नी उसने उस मुल्क के लोगों से हर शख़्स के लगान के मुताबिक़ चाँदी और सोना लिया ताकि फ़िर'औन निकोह को दे।
36 ೩೬ ಯೆಹೋಯಾಕೀಮನು ಅರಸನಾದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ರೂಮನ ಪೆದಾಯನ ಮಗಳಾದ ಜೆಬೂದಾ ಎಂಬಾಕೆಯು ಅವನ ತಾಯಿ.
यहूयक़ीम जब सल्तनत करने लगा, तो पच्चीस बरस का था, उसने येरूशलेम में ग्यारह बरस सल्तनत की। उसकी माँ का नाम ज़बूदा था, जो रूमाह के फ़िदायाह की बेटी थी।
37 ೩೭ ಯೆಹೋಯಾಕೀಮನು ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.
और जो — जो उसके बाप — दादा ने किया था, उसी के मुताबिक़ उसने भी ख़ुदावन्द की नज़र में बुराई की।