< ಅರಸುಗಳು - ದ್ವಿತೀಯ ಭಾಗ 25 >

1 ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹತ್ತನೆಯ ದಿನದಲ್ಲಿ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸರ್ವಸೈನ್ಯ ಸಹಿತನಾಗಿ ಯೆರೂಸಲೇಮಿಗೆ ಬಂದು, ಅಲ್ಲಿ ಪಾಳೆಯಮಾಡಿಕೊಂಡು ಅದರ ಸುತ್ತಲೂ ಮಣ್ಣಿನ ದಿಬ್ಬವನ್ನು ಮಾಡಿದನು.
सिद्कीयाने बाबेलाच्या राजाविरुध्द बंड केले आणि त्याच्या आज्ञा पाळण्याचे त्याने नाकारले. त्यामुळे बाबेलचा राजा नबुखद्नेस्सर आपल्या सैन्यासह यरूशलेमेवर चाल करून गेला. सिद्कीयाच्या कारकिर्दीचे ते नववे वर्ष, दहावा महिना, दहावा दिवस होता. नबुखद्नेस्सरच्या सैन्याने यरूशलेमेला वेढा देऊन लोकांचे येणे जाणे रोखले. मग त्याने नगराभोवती कचऱ्याचे अडसर निर्माण केले.
2 ಅವನು ಅರಸನಾದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆ ವರ್ಷದವರೆಗೆ ಪಟ್ಟಣಕ್ಕೆ ಮುತ್ತಿಗೆ ಹಾಕಿದನು.
सिद्कीया राजाच्या कारकिर्दीचे अकरावे वर्ष उजाडेपर्यंत या नगराला वेढा चालू राहिला.
3 ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರ ಸಿಕ್ಕದೇ ಹೋಯಿತು.
दुष्काळाने परिस्थिती बिकट झाली होती. चौथ्या महिन्याच्या नवव्या दिवसापर्यंत नगरातील सामान्य मनुष्याची अन्नान्नदशा झाली.
4 ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಅದೇ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಅರಸನೂ ಅವನ ಎಲ್ಲಾ ಸೈನಿಕರೂ ಅದೇ ರಾತ್ರಿಯಲ್ಲಿ ಅರಸನ ತೋಟದ ಗೋಡೆಯ ಬಳಿಯಲ್ಲಿರುವ ಬಾಗಿಲಿನಿಂದ ಓಡಿಹೋದರು. ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು. ಅರಸನು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಓಡಿಹೋದನು.
मग नगराच्या तटाला एक खिंड पाडण्यात आली; दोन्ही तटांच्यामध्ये जी वेस राजाच्या बागेजवळ होती त्या वाटेने सर्व योद्धे रातोरात पळून गेले; नगरास खास्द्यांचा वेढा पडलाच होता; इकडे राजाने अराबाचा रस्ता धरला.
5 ಕಸ್ದೀಯರ ಸೈನ್ಯದವರು ಅರಸನಾದ ಚಿದ್ಕೀಯನನ್ನು ಹಿಂದಟ್ಟಿ ಯೆರಿಕೋವಿನ ಬಯಲಿನಲ್ಲಿ ಅವನನ್ನು ಹಿಡಿದರು. ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದರಿ ಹೋಗಿದ್ದರು.
खास्दी सैन्याने राजाचा पाठलाग केला आणि त्यांना यरीहोजवळ गाठले. तेव्हा सिद्कीयाचे सैन्य त्यास एकटा सोडून पळून गेले.
6 ಅನಂತರ ಕಸ್ದೀಯರು ಬಾಬೆಲಿನ ಅರಸನನ್ನು ಹಿಡಿದು ರಿಬ್ಲದಲ್ಲಿದ್ದ ತಮ್ಮ ಅರಸನ ಬಳಿಗೆ ತೆಗೆದುಕೊಂಡು ಬಂದು ಅವನಿಗೆ ಶಿಕ್ಷೆಯನ್ನು ವಿಧಿಸಿದರು.
बाबेल देशाच्या लोकांनी राजा सिद्कीयाला धरुन रिब्ला येथे आपल्या राजाकडे नेले. या लोकांनी सिद्कीयाला जबर शासन करण्याचे ठरवले.
7 ಚಿದ್ಕೀಯನ ಇಬ್ಬರು ಮಕ್ಕಳನ್ನು ಅವನ ಎದುರಿನಲ್ಲಿಯೇ ಕೊಂದುಹಾಕಿದರಲ್ಲದೆ ಅವನಿಗೆ ಬೇಡಿಹಾಕಿ, ಅವನ ಎರಡು ಕಣ್ಣುಗಳನ್ನು ಕಿತ್ತು ಬಾಬಿಲೋನಿಗೆ ತೆಗೆದುಕೊಂಡು ಹೋದರು.
त्यांनी सिद्कीयाच्या मुलांना त्याच्या नजरेसमोर जिवे मारले. नंतर सिद्कीयाचे डोळे काढले आणि त्यास जेरबंद करून बाबेलला नेले.
8 ಐದನೆಯ ತಿಂಗಳಿನ ಏಳನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ ಬಾಬೆಲಿನ ಅರಸನ ಸೇವಕನೂ, ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನ್ ಎಂಬುವವನು ಯೆರೂಸಲೇಮಿಗೆ ಬಂದನು.
बाबेलचा राजा नबुखद्नेस्सर याच्या कारकिर्दीच्या एकोणिसाव्या वर्षी, पाचव्या महिन्यात सातव्या दिवशी नबूजरदान यरूशलेमेवर चाल करून आला. नबुजरदान हा राजाच्या उत्तम, निवडक सैन्याचा नायक होता.
9 ಅವನು ಯೆಹೋವನ ಆಲಯವನ್ನೂ, ಅರಸನ ಅರಮನೆಯನ್ನೂ ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಹಾಗೂ ಪಟ್ಟಣದ ಮುಖ್ಯ ಕಟ್ಟಡಗಳನ್ನೂ ಸುಟ್ಟುಬಿಟ್ಟನು.
या नबुजरदानने परमेश्वराचे मंदिर, राजवाडा आणि यरूशलेममधील सर्व घरे जाळून टाकली. मोठमोठे वाडेही त्याने उद्ध्वस्त केले.
10 ೧೦ ಅವನ ಜೊತೆಯಲ್ಲಿ ಬಂದಿದ್ದ ಕಸ್ದೀಯರ ಸೈನ್ಯದವರು ಯೆರೂಸಲೇಮಿನ ಸುತ್ತುಗೋಡೆಗಳನ್ನು ಕೆಡವಿದರು.
१०मग खास्दी सैन्याने यरूशलेमची तटबंदी पाडली.
11 ೧೧ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ ಮೊದಲೇ ಬಾಬೆಲಿನ ಅರಸನ ಮರೆಹೊಕ್ಕವರನ್ನೂ ಒಟ್ಟಾರೆ ಎಲ್ಲಾ ಜನರನ್ನು ಸೆರೆಹಿಡಿದೊಯ್ದನು.
११नगरात अजून असलेले लोक बाबेलाच्या राज्याकडे फितून गेलेले लोक व उरलेले लोक यांना गारद्यांचा नायक नबूजरदानाने ताब्यात घेतले आणि त्यांच्यापैकी जे शरण यायला तयार होते त्यांच्यासह सर्वांना कैदी म्हणून नेले.
12 ೧೨ ಹೊಲಗಳನ್ನೂ, ದ್ರಾಕ್ಷಿ ತೋಟಗಳನ್ನೂ, ವ್ಯವಸಾಯಮಾಡುವುದಕ್ಕಾಗಿ ದೇಶದ ಜನರಲ್ಲಿ ಕೇವಲ ಬಡವರನ್ನು ಮಾತ್ರ ಬಿಟ್ಟುಹೋದನು.
१२अगदीच दरिद्री लोकांस तेवढे त्याने तेथेच राहू दिले. द्राक्षमळे आणि शेतीची देखभाल करण्यासाठी त्याने त्यांना तिथे ठेवले.
13 ೧೩ ಕಸ್ದೀಯರು ಯೆಹೋವನ ಆಲಯದಲ್ಲಿದ್ದ ತಾಮ್ರದ ಕಂಬಗಳನ್ನು, ಪೀಠಗಳನ್ನೂ, ಕಡಲಿನ ಆಕಾರದ ಪಾತ್ರೆಯನ್ನೂ ಒಡೆದು ಅವುಗಳ ತಾಮ್ರವನ್ನೂ ಬಾಬಿಲೋನಿಗೆ ತೆಗೆದುಕೊಂಡು ಹೋದರು.
१३परमेश्वराच्या मंदिरातील सर्व पितळी पात्रांची खास्दी सैन्याने मोडतोड केली. पितळी खांब, ढकलगाड्या, मोठमोठी पितळी घंगाळी यांची मोडतोड करून ते पितळ त्यांनी बाबेलला नेले.
14 ೧೪ ದೇವಾಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಧೂಪಾರತಿ ಮೊದಲಾದ ತಾಮ್ರದ ಸಾಮಾನುಗಳನ್ನೂ ತೆಗೆದುಕೊಂಡು ಹೋದರು.
१४इतर पात्रे, फावडी, वाती कापण्याच्या कात्र्या, पळ्या, पितळी थाळ्या ही परमेश्वराच्या मंदिरातली सर्व उपकरणेही त्यांनी घेतली.
15 ೧೫ ಕಾವಲುದಂಡಿನ ಅಧಿಪತಿಯು ಬೆಳ್ಳಿಬಂಗಾರದ ಅಗ್ಗಿಷ್ಟಿಕೆ, ಬಟ್ಟಲು ಮೊದಲಾದವುಗಳನ್ನು ತೆಗೆದುಕೊಂಡನು.
१५अग्नीपात्रे, वाडगे, सोने-चांदीच्या लोभापायी सोन्यारुप्याची भांडीही नबुजरदानने हस्तगत केली.
16 ೧೬ ಸೊಲೊಮೋನನು ಯೆಹೋವನ ಆಲಯಕ್ಕಾಗಿ ಮಾಡಿಸಿದ ಎರಡು ಕಂಬಗಳು, ಕಡಲೆನಿಸಿಕೊಂಡ ಪಾತ್ರೆಯು, ಪೀಠಗಳು, ಇವುಗಳಿಗೆ ಲೆಕ್ಕವಿಲ್ಲದಷ್ಟು ತಾಮ್ರವನ್ನು ಬಳಸಲಾಗಿತ್ತು.
१६अशाप्रकारे, नबुजरदानने बळकावलेल्या वस्तू दोन पितळी स्तंभ. एक मोठे पितळी घंगाळ परमेश्वराच्या मंदिरासाठी शलमोनने करवून घेतलेल्या ढकलगाड्या, यांत इतके पितळ होते की त्याचे वजन करणे शक्य नव्हते.
17 ೧೭ ಪ್ರತಿಯೊಂದು ಕಂಬವು ಹದಿನೆಂಟು ಮೊಳ ಎತ್ತರವಿತ್ತು. ಪ್ರತಿಯೊಂದರ ಮೇಲೆ ಮೂರು ಮೊಳ ಎತ್ತರವಾದ ಒಂದು ತಾಮ್ರದ ಕುಂಭವಿತ್ತು. ಆ ಕುಂಭಗಳ ಮೇಲೆ ಸುತ್ತಲೂ ತಾಮ್ರದ ಜಾಲರಿಯೂ ದಾಳಿಂಬೆ ಹಣ್ಣುಗಳೂ ಇದ್ದವು.
१७प्रत्येक स्तंभाची उंची सत्तावीस फूट त्यावरील कळस साडेचार फूट उंचीचे तेही पितळी असून त्यावर जाळीकाम आणि डाळिंबाची नक्षी होती, दोन्ही स्तंभ अगदी सारखेच होते.
18 ೧೮ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡು ಹೋಗಿದ್ದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ಯಾಜಕನಾದ ಚೆಫನ್ಯನು ಮೂರು ಮಂದಿ ದ್ವಾರಪಾಲಕರು,
१८नबुजरदानने लोकांस मंदिरातून खाली नेले व मुख्य याजक सराया दुय्यम याजक सफन्या आणि तीन द्वारपाल
19 ೧೯ ಸೈನ್ಯ ಸಂಬಂಧವಾದ ಎಲ್ಲಾ ವ್ಯವಸ್ಥೆಯನ್ನು ಮಾಡುತ್ತಿದ್ದ ಕಂಚುಕಿ, ಪಟ್ಟಣದಲ್ಲಿ ಉಳಿದಿದ್ದ ಅರಸನಿಗೆ ಆಪ್ತರಾಗಿದ್ದ ಐದು ಮಂದಿ ಮಂತ್ರಿಗಳು, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಯನ್ನು ಮಾಡುವ ಸೇನಾಧಿಪತಿಯ ಲೇಖಕನು, ಪಟ್ಟಣದಲ್ಲಿದ್ದ ಅರುವತ್ತು ಮಂದಿ ಜನರೂ ಇದ್ದರು.
१९आणि शहरातून एक सैन्याधिकारी अजूनही नगरात असलेले राजाचे पांच सल्लागार सैन्याधिकाऱ्याचा सचिव. हा जनगणना प्रमुख असून सैनिकांची निवड करत असे. शहरात सापडलेली साठ माणसेही त्याने घेतली.
20 ೨೦ ನಂತರ ನೆಬೂಜರದಾನನು, ಇವರನ್ನೆಲ್ಲಾ ಹಿಡಿದುಕೊಂಡು ಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನಿಗೆ ಒಪ್ಪಿಸಲು,
२०बाबेलातील रिब्ला येथे नबूजरदानाने या सर्वांना राजासमोर हजर केले.
21 ೨೧ ಬಾಬೆಲಿನ ಅರಸನು ಹಮಾತ್ ಪ್ರದೇಶದ ಅವರನ್ನು ಕತ್ತಿಯಿಂದ ರಿಬ್ಲದಲ್ಲಿ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟು ಹೋಗಬೇಕಾಯಿತು.
२१बाबेलाच्या राजाने त्या सर्वांची हमाथ देशातील रिब्ला येथे हत्या केली. अशाप्रकारे यहूदी यांना आपल्या भूमीतून बंदीवान म्हणून जावे लागले.
22 ೨೨ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ ಅಹೀಕಾಮನ ಮಗನೂ, ಶಾಫಾನನ ಮೊಮ್ಮಗನೂ ಆದ ಗೆದಲ್ಯ ಎಂಬುವನನ್ನು ಅಧಿಪತಿಯನ್ನಾಗಿ ನೇಮಿಸಿದನು.
२२बाबेलचा राजा नबुखद्नेस्सरने काही लोकांस यहूदातच राहू दिले. त्यामध्ये एकजण होता त्याचे नाव गदल्या. हा अहीकामचा मुलगा आणि अहीकाम शाफानचा. या गदल्याला नबुखद्नेस्सरने यहूदा प्रांतावर अधिकारी म्हणून नेमले.
23 ೨೩ ತಪ್ಪಿಸಿಕೊಂಡು ಉಳಿದಿದ್ದ ಯೆಹೂದ ಸೇನಾಧಿಪತಿಗಳು ಗೆದಲ್ಯನು ಬಾಬೆಲಿನ ಅರಸನಿಂದ ಅಧಿಪತಿಯಾಗಿ ನೇಮಿಸಲ್ಪಟ್ಟಿದ್ದಾನೆಂಬ ವರ್ತಮಾನವನ್ನು ಕೇಳಿ, ತಮ್ಮ ಜನರೊಡನೆ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋದರು. ಅವರು ಯಾರೆಂದರೆ, ನೆತನ್ಯನ ಮಗನಾದ ಇಷ್ಮಾಯೇಲನು, ಕಾರೇಹನ ಮಗನಾದ ಯೋಹಾನಾನ್, ನೆಟೋಫದವನಾದ, ತನ್ಹುಮೆತನ ಮಗನಾದ ಸೆರಾಯನು, ಮಾಕಾ ಊರಿನವನಾದ ಯಾಜನ್ಯನು ಇವರೇ.
२३नथन्याचा मुलगा इश्माएल, कारेहाचा मुलगा यहोहानान आणि नटोफाथी तन्हुमेथाचा मुलगा सराया व माकाथीचा मुलगा याजन्या हे सैन्यातील सरदार होते. त्यांनी बाबेलाच्या राजाने गदल्याला अधिकारी केल्याचे ऐकले म्हणून ते त्यास भेटायला मिस्पा येथे आले.
24 ೨೪ ಗೆದಲ್ಯನು ಇವರಿಗೂ ಇವರ ಜನರಿಗೂ, “ಕಸ್ದೀಯರ ಸೈನ್ಯದವರಿಗೆ ಹೆದರಬೇಡಿರಿ, ಬಾಬೆಲಿನ ಅರಸನಿಗೆ ವಿಧೇಯರಾಗಿದ್ದು ಸೇವೆಮಾಡಿಕೊಂಡು ಇಲ್ಲಿಯೇ ವಾಸಮಾಡಿರಿ. ಆಗ ನಿಮಗೆ ಒಳಿತಾಗುವಾಗುವುದು” ಎಂದು ಹೇಳಿದನು.
२४गदल्याने त्या सर्वांना शपथ दिली आणि तो त्यांना म्हणाला, “खास्दी अधिकाऱ्यांचे भय बाळगू नका. या देशातच राहून बाबेलाच्या राजाची सेवा करा, म्हणजे तुमचे भले होईल.”
25 ೨೫ ಆದರೆ ಏಳನೆಯ ತಿಂಗಳಿನಲ್ಲಿ ರಾಜವಂಶದವನೂ, ಎಲೀಷಾಮನ ಮೊಮ್ಮಗನೂ, ನೆತನ್ಯನ ಮಗನೂ ಆದ ಇಷ್ಮಾಯೇಲನು ಹತ್ತು ಮಂದಿ ಆಳುಗಳೊಡನೆ ಬಂದು ಗೆದಲ್ಯನನ್ನೂ, ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನೂ, ಕಸ್ದೀಯರನ್ನೂ ಸಂಹರಿಸಿದನು.
२५अलीशामचा मुलगा नथन्या याचा मुलगा इश्माएल हा राजसंतानांपैकी होता. त्याने आणखी दहाजणांसमवेत सातव्या महिन्यात गदल्यावर हल्ला केला आणि सर्व यहूदी तसेच खास्दी यांना मिस्पा येथे ठार केले.
26 ೨೬ ಆಗ ಎಲ್ಲಾ ಚಿಕ್ಕವರೂ, ದೊಡ್ಡವರೂ, ಸೇನಾಧಿಪತಿಗಳೂ ಕಸ್ದೀಯರಿಗೆ ಹೆದರಿ ಐಗುಪ್ತಕ್ಕೆ ಓಡಿಹೋದರು.
२६मग सर्व सैन्याधिकारी आणि लोक मिसरला पळून गेले. खास्दी लोकांच्या धास्तीने कनिष्ठ पदावर असलेल्यापासून श्रेष्ठ पदावर असलेल्यांपर्यंत सर्व पळाले.
27 ೨೭ ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ ಅಂದರೆ ಯೆಹೂದದ ಅರಸನಾದ ಯೆಹೋಯಾಖೀನನು ಸೆರೆಯಾಗಿದ್ದ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ, ಯೆಹೋಯಾಖೀನನನ್ನು ಕಟಾಕ್ಷಿಸಿ ಅವನನ್ನು ಸೆರೆಮನೆಯಿಂದ ಬಿಡಿಸಿ, ಅವನನ್ನು ಅಭಿವೃದ್ಧಿಗೆ ತಂದನು.
२७पुढे अबील मरोदख हा बाबेलचा राजा झाला. त्याने यहूदाचा राजा यहोयाखीन याची कैदेतून सुटका केली. यहोयाखीनाला तोपर्यंत तुरुंगात पडून सदतीस वर्षे झाली होती. अबील मरोदखने सत्तेवर आल्यावर बाराव्या महिन्याच्या सत्ताविसाव्या दिवशी हे सुटकेचे काम केले.
28 ೨೮ ಅಲ್ಲದೆ ಅವನೊಡನೆ ಪ್ರೀತಿಯಿಂದ ಮಾತನಾಡಿ ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸುಗಳಲ್ಲಿ ಅವನಿಗೆ ಉನ್ನತಸ್ಥಾನವನ್ನು ಕೊಟ್ಟನು.
२८त्याच्याशी त्याने चांगले बोलून बाबेलात जे राजे त्याच्या बंदीत होते त्याने त्यांच्याहून त्यास दरबारात उच्चासन दिले.
29 ೨೯ ಎವೀಲ್ಮೆರೋದಕನು ಯೆಹೋಯಾಖೀನನ ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದಿರುವವರೆಗೂ ಅರಸನ ಪಂಕ್ತಿಯಲ್ಲಿ ಊಟಮಾಡಿದನು.
२९अबील मरोदखने त्यास तुरुंगातले कपडे बदलायला लावले. पुढे आयुष्यभर यहोयाखीन अबील मरोदखच्या शेजारी मेजावर बसून जेवत असे.
30 ೩೦ ಅವನು ಬದುಕಿರುವವರೆಗೂ ಅವನಿಗೆ ಬೇಕಾಗುವ ಎಲ್ಲಾ ಪದಾರ್ಥಗಳು ಪ್ರತಿನಿತ್ಯವೂ ಅರಸನಿಂದಲೇ ಅವನಿಗೆ ಕೊಡಲಾಗುತ್ತಿತ್ತು.
३०अबील मरोदख राजाने त्यास पुढे त्याच्या आयुष्यभर रोज जेवण दिले.

< ಅರಸುಗಳು - ದ್ವಿತೀಯ ಭಾಗ 25 >