< ಅರಸುಗಳು - ದ್ವಿತೀಯ ಭಾಗ 25 >

1 ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹತ್ತನೆಯ ದಿನದಲ್ಲಿ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸರ್ವಸೈನ್ಯ ಸಹಿತನಾಗಿ ಯೆರೂಸಲೇಮಿಗೆ ಬಂದು, ಅಲ್ಲಿ ಪಾಳೆಯಮಾಡಿಕೊಂಡು ಅದರ ಸುತ್ತಲೂ ಮಣ್ಣಿನ ದಿಬ್ಬವನ್ನು ಮಾಡಿದನು.
और उसकी सल्तनत के नौवें बरस के दसवें महीने के दसवें दिन, यूँ हुआ कि शाह — ए — बाबुल नबूकदनज़र ने अपनी सारी फ़ौज के साथ येरूशलेम पर चढ़ाई की, और उसके सामने ख़ैमाज़न हुआ, और उन्होंने उसके सामने चारों तरफ़ घेराबन्दी की।
2 ಅವನು ಅರಸನಾದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆ ವರ್ಷದವರೆಗೆ ಪಟ್ಟಣಕ್ಕೆ ಮುತ್ತಿಗೆ ಹಾಕಿದನು.
और सिदक़ियाह बादशाह की सल्तनत के ग्यारहवें बरस तक शहर का मुहासिरा रहा।
3 ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರ ಸಿಕ್ಕದೇ ಹೋಯಿತು.
चौथे महीने के नौवें दिन से शहर में काल ऐसा सख़्त हो गया, कि मुल्क के लोगों के लिए कुछ खाने को न रहा।
4 ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಅದೇ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಅರಸನೂ ಅವನ ಎಲ್ಲಾ ಸೈನಿಕರೂ ಅದೇ ರಾತ್ರಿಯಲ್ಲಿ ಅರಸನ ತೋಟದ ಗೋಡೆಯ ಬಳಿಯಲ್ಲಿರುವ ಬಾಗಿಲಿನಿಂದ ಓಡಿಹೋದರು. ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು. ಅರಸನು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಓಡಿಹೋದನು.
तब शहर पनाह में सुराख़ हो गया, और दोनों दीवारों के बीच जो फाटक शाही बाग़ के बराबर था, उससे सब जंगी मर्द रात ही रात भाग गए, उस वक़्त कसदी शहर को घेरे हुए थे और बादशाह ने वीराने का रास्ता लिया।
5 ಕಸ್ದೀಯರ ಸೈನ್ಯದವರು ಅರಸನಾದ ಚಿದ್ಕೀಯನನ್ನು ಹಿಂದಟ್ಟಿ ಯೆರಿಕೋವಿನ ಬಯಲಿನಲ್ಲಿ ಅವನನ್ನು ಹಿಡಿದರು. ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದರಿ ಹೋಗಿದ್ದರು.
लेकिन कसदियों की फ़ौज ने बादशाह का पीछा किया और उसे यरीहू के मैदान में जा लिया, और उसका सारा लश्कर उसके पास से तितर बितर हो गया था।
6 ಅನಂತರ ಕಸ್ದೀಯರು ಬಾಬೆಲಿನ ಅರಸನನ್ನು ಹಿಡಿದು ರಿಬ್ಲದಲ್ಲಿದ್ದ ತಮ್ಮ ಅರಸನ ಬಳಿಗೆ ತೆಗೆದುಕೊಂಡು ಬಂದು ಅವನಿಗೆ ಶಿಕ್ಷೆಯನ್ನು ವಿಧಿಸಿದರು.
इसलिए वह बादशाह को पकड़ कर रिबला में शाह — ए — बाबुल के पास ले गए, और उन्होंने उस पर फ़तवा दिया।
7 ಚಿದ್ಕೀಯನ ಇಬ್ಬರು ಮಕ್ಕಳನ್ನು ಅವನ ಎದುರಿನಲ್ಲಿಯೇ ಕೊಂದುಹಾಕಿದರಲ್ಲದೆ ಅವನಿಗೆ ಬೇಡಿಹಾಕಿ, ಅವನ ಎರಡು ಕಣ್ಣುಗಳನ್ನು ಕಿತ್ತು ಬಾಬಿಲೋನಿಗೆ ತೆಗೆದುಕೊಂಡು ಹೋದರು.
और उन्होंने सिदक़ियाह के बेटों को उसकी आँखों के सामने ज़बह किया और सिदक़ियाह की आँखें निकाल डालीं और उसे ज़ँजीरों से जकड़कर बाबुल को ले गए।
8 ಐದನೆಯ ತಿಂಗಳಿನ ಏಳನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ ಬಾಬೆಲಿನ ಅರಸನ ಸೇವಕನೂ, ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನ್ ಎಂಬುವವನು ಯೆರೂಸಲೇಮಿಗೆ ಬಂದನು.
और शाह — ए — बाबुल नबूकदनज़र के 'अहद के उन्नीसवें साल के पाँचवें महीने के सातवें दिन, शाह — ए — बाबुल का एक ख़ादिम नबूज़रादान जो जिलौदारों का सरदार था येरूशलेम में आया।
9 ಅವನು ಯೆಹೋವನ ಆಲಯವನ್ನೂ, ಅರಸನ ಅರಮನೆಯನ್ನೂ ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಹಾಗೂ ಪಟ್ಟಣದ ಮುಖ್ಯ ಕಟ್ಟಡಗಳನ್ನೂ ಸುಟ್ಟುಬಿಟ್ಟನು.
और उसने ख़ुदावन्द का घर और बादशाह का महल येरूशलेम के सब घर, या'नी हर एक बड़ा घर आग से जला दिया।
10 ೧೦ ಅವನ ಜೊತೆಯಲ್ಲಿ ಬಂದಿದ್ದ ಕಸ್ದೀಯರ ಸೈನ್ಯದವರು ಯೆರೂಸಲೇಮಿನ ಸುತ್ತುಗೋಡೆಗಳನ್ನು ಕೆಡವಿದರು.
और कसदियों के सारे लश्कर ने जो जिलौदारों के सरदार के साथ थे, येरूशलेम की फ़सील को चारों तरफ़ से गिरा दिया।
11 ೧೧ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ ಮೊದಲೇ ಬಾಬೆಲಿನ ಅರಸನ ಮರೆಹೊಕ್ಕವರನ್ನೂ ಒಟ್ಟಾರೆ ಎಲ್ಲಾ ಜನರನ್ನು ಸೆರೆಹಿಡಿದೊಯ್ದನು.
और बाक़ी लोगों को जो शहर में रह गए थे, और उनको जिन्होंने अपनों को छोड़ कर शाह — ए — बाबुल की पनाह ली थी, और 'अवाम में से जितने बाक़ी रह गए थे, उन सबको नबूज़रादान जिलौदारों का सरदार क़ैद करके ले गया।
12 ೧೨ ಹೊಲಗಳನ್ನೂ, ದ್ರಾಕ್ಷಿ ತೋಟಗಳನ್ನೂ, ವ್ಯವಸಾಯಮಾಡುವುದಕ್ಕಾಗಿ ದೇಶದ ಜನರಲ್ಲಿ ಕೇವಲ ಬಡವರನ್ನು ಮಾತ್ರ ಬಿಟ್ಟುಹೋದನು.
पर जिलौदारों के सरदार ने मुल्क के कंगालों को रहने दिया, ताकि खेती और बाग़ों की बाग़बानी करें।
13 ೧೩ ಕಸ್ದೀಯರು ಯೆಹೋವನ ಆಲಯದಲ್ಲಿದ್ದ ತಾಮ್ರದ ಕಂಬಗಳನ್ನು, ಪೀಠಗಳನ್ನೂ, ಕಡಲಿನ ಆಕಾರದ ಪಾತ್ರೆಯನ್ನೂ ಒಡೆದು ಅವುಗಳ ತಾಮ್ರವನ್ನೂ ಬಾಬಿಲೋನಿಗೆ ತೆಗೆದುಕೊಂಡು ಹೋದರು.
और पीतल के उन सुतूनों को जो ख़ुदावन्द के घर में थे, और कुर्सियों को और पीतल के बड़े हौज़ को, जो ख़ुदावन्द के घर में था, कसदियों ने तोड़ कर टुकड़े — टुकड़े किया और उनका पीतल बाबुल को ले गए।
14 ೧೪ ದೇವಾಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಧೂಪಾರತಿ ಮೊದಲಾದ ತಾಮ್ರದ ಸಾಮಾನುಗಳನ್ನೂ ತೆಗೆದುಕೊಂಡು ಹೋದರು.
और तमाम देगें और बेल्चे और गुलगीर और चम्चे, और पीतल के तमाम बर्तन जो वहाँ काम आते थे ले गए।
15 ೧೫ ಕಾವಲುದಂಡಿನ ಅಧಿಪತಿಯು ಬೆಳ್ಳಿಬಂಗಾರದ ಅಗ್ಗಿಷ್ಟಿಕೆ, ಬಟ್ಟಲು ಮೊದಲಾದವುಗಳನ್ನು ತೆಗೆದುಕೊಂಡನು.
और अंगीठियाँ और कटोरे, ग़रज़ जो कुछ सोने का था उसके सोने को, और जो कुछ चाँदी का था उसकी चाँदी को, जिलौदारों का सरदार ले गया।
16 ೧೬ ಸೊಲೊಮೋನನು ಯೆಹೋವನ ಆಲಯಕ್ಕಾಗಿ ಮಾಡಿಸಿದ ಎರಡು ಕಂಬಗಳು, ಕಡಲೆನಿಸಿಕೊಂಡ ಪಾತ್ರೆಯು, ಪೀಠಗಳು, ಇವುಗಳಿಗೆ ಲೆಕ್ಕವಿಲ್ಲದಷ್ಟು ತಾಮ್ರವನ್ನು ಬಳಸಲಾಗಿತ್ತು.
और दोनों सुतून और वह बड़ा हौज़ और वह कुर्सियाँ, जिनको सुलेमान ने ख़ुदावन्द के घर के लिए बनाया था, इन सब चीज़ों के पीतल का वज़न बेहिसाब था।
17 ೧೭ ಪ್ರತಿಯೊಂದು ಕಂಬವು ಹದಿನೆಂಟು ಮೊಳ ಎತ್ತರವಿತ್ತು. ಪ್ರತಿಯೊಂದರ ಮೇಲೆ ಮೂರು ಮೊಳ ಎತ್ತರವಾದ ಒಂದು ತಾಮ್ರದ ಕುಂಭವಿತ್ತು. ಆ ಕುಂಭಗಳ ಮೇಲೆ ಸುತ್ತಲೂ ತಾಮ್ರದ ಜಾಲರಿಯೂ ದಾಳಿಂಬೆ ಹಣ್ಣುಗಳೂ ಇದ್ದವು.
एक सुतून अठारह हाथ ऊँचा था, और उसके ऊपर पीतल का एक ताज था और वह ताज तीन हाथ बलन्द था; उस ताज पर चारों तरफ़ जालियाँ और अनार की कलियाँ, सब पीतल की बनी हुई थीं; और दूसरे सुतून के लवाज़िम भी जाली समेत इन्हीं की तरह थे।
18 ೧೮ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡು ಹೋಗಿದ್ದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ಯಾಜಕನಾದ ಚೆಫನ್ಯನು ಮೂರು ಮಂದಿ ದ್ವಾರಪಾಲಕರು,
जिलौदारों के सरदार ने सिरायाह सरदार काहिन को और काहिन — ए — सानी सफ़नियाह को और तीनों दरबानों को पकड़ लिया;
19 ೧೯ ಸೈನ್ಯ ಸಂಬಂಧವಾದ ಎಲ್ಲಾ ವ್ಯವಸ್ಥೆಯನ್ನು ಮಾಡುತ್ತಿದ್ದ ಕಂಚುಕಿ, ಪಟ್ಟಣದಲ್ಲಿ ಉಳಿದಿದ್ದ ಅರಸನಿಗೆ ಆಪ್ತರಾಗಿದ್ದ ಐದು ಮಂದಿ ಮಂತ್ರಿಗಳು, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಯನ್ನು ಮಾಡುವ ಸೇನಾಧಿಪತಿಯ ಲೇಖಕನು, ಪಟ್ಟಣದಲ್ಲಿದ್ದ ಅರುವತ್ತು ಮಂದಿ ಜನರೂ ಇದ್ದರು.
और उसने शहर में से एक सरदार को पकड़ लिया जो जंगी मर्दों पर मुक़र्रर था, और जो लोग बादशाह के सामने हाज़िर रहते थे उनमें से पाँच आदमियों को जो शहर में मिले, और लश्कर के बड़े मुहर्रिर को जो अहल — ए — मुल्क की मौजूदात लेता था, और मुल्क के लोगों में से साठ आदमियों को जो शहर में मिले।
20 ೨೦ ನಂತರ ನೆಬೂಜರದಾನನು, ಇವರನ್ನೆಲ್ಲಾ ಹಿಡಿದುಕೊಂಡು ಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನಿಗೆ ಒಪ್ಪಿಸಲು,
इनको जिलौदारों का सरदार नबूज़रादान पकड़ कर शाह — ए — बाबुल के सामने रिबला में ले गया।
21 ೨೧ ಬಾಬೆಲಿನ ಅರಸನು ಹಮಾತ್ ಪ್ರದೇಶದ ಅವರನ್ನು ಕತ್ತಿಯಿಂದ ರಿಬ್ಲದಲ್ಲಿ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟು ಹೋಗಬೇಕಾಯಿತು.
और शाह — ए — बाबुल ने हमात के 'इलाक़े के रिबला में इनको मारा और क़त्ल किया। इसलिए यहूदाह भी अपने मुल्क से ग़ुलाम होकर चला गया।
22 ೨೨ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ ಅಹೀಕಾಮನ ಮಗನೂ, ಶಾಫಾನನ ಮೊಮ್ಮಗನೂ ಆದ ಗೆದಲ್ಯ ಎಂಬುವನನ್ನು ಅಧಿಪತಿಯನ್ನಾಗಿ ನೇಮಿಸಿದನು.
जो लोग यहूदाह की सर ज़मीन में रह गए, जिनको नबूकदनज़र शाह — ए — बाबुल ने छोड़ दिया, उन पर उसने जिदलियाह — बिन अख़ीक़ाम — बिन साफ़न को हाकिम मुक़र्रर किया।
23 ೨೩ ತಪ್ಪಿಸಿಕೊಂಡು ಉಳಿದಿದ್ದ ಯೆಹೂದ ಸೇನಾಧಿಪತಿಗಳು ಗೆದಲ್ಯನು ಬಾಬೆಲಿನ ಅರಸನಿಂದ ಅಧಿಪತಿಯಾಗಿ ನೇಮಿಸಲ್ಪಟ್ಟಿದ್ದಾನೆಂಬ ವರ್ತಮಾನವನ್ನು ಕೇಳಿ, ತಮ್ಮ ಜನರೊಡನೆ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋದರು. ಅವರು ಯಾರೆಂದರೆ, ನೆತನ್ಯನ ಮಗನಾದ ಇಷ್ಮಾಯೇಲನು, ಕಾರೇಹನ ಮಗನಾದ ಯೋಹಾನಾನ್, ನೆಟೋಫದವನಾದ, ತನ್ಹುಮೆತನ ಮಗನಾದ ಸೆರಾಯನು, ಮಾಕಾ ಊರಿನವನಾದ ಯಾಜನ್ಯನು ಇವರೇ.
जब लश्करों के सब सरदारों और उनकी सिपाह ने, या'नी इस्माईल — बिन — नतनियाह और यूहनान बिन क़रीह और सिरायाह बिन ताख़ूमत नातूफ़ाती और याजनियाह बिन मा'काती ने सुना कि शाह — ए — बाबुल ने जिदलियाह को हाकिम बनाया है, तो वह अपने लोगों समेत मिस्फ़ाह में जिदलियाह के पास आए।
24 ೨೪ ಗೆದಲ್ಯನು ಇವರಿಗೂ ಇವರ ಜನರಿಗೂ, “ಕಸ್ದೀಯರ ಸೈನ್ಯದವರಿಗೆ ಹೆದರಬೇಡಿರಿ, ಬಾಬೆಲಿನ ಅರಸನಿಗೆ ವಿಧೇಯರಾಗಿದ್ದು ಸೇವೆಮಾಡಿಕೊಂಡು ಇಲ್ಲಿಯೇ ವಾಸಮಾಡಿರಿ. ಆಗ ನಿಮಗೆ ಒಳಿತಾಗುವಾಗುವುದು” ಎಂದು ಹೇಳಿದನು.
जिदलियाह ने उनसे और उनकी सिपाह से क़सम खाकर कहा, “कसदियों के मुलाज़िमों से मत डरो; मुल्क में बसे रहो और शाह — ए — बाबुल की ख़िदमत करो और तुम्हारी भलाई होगी।”
25 ೨೫ ಆದರೆ ಏಳನೆಯ ತಿಂಗಳಿನಲ್ಲಿ ರಾಜವಂಶದವನೂ, ಎಲೀಷಾಮನ ಮೊಮ್ಮಗನೂ, ನೆತನ್ಯನ ಮಗನೂ ಆದ ಇಷ್ಮಾಯೇಲನು ಹತ್ತು ಮಂದಿ ಆಳುಗಳೊಡನೆ ಬಂದು ಗೆದಲ್ಯನನ್ನೂ, ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನೂ, ಕಸ್ದೀಯರನ್ನೂ ಸಂಹರಿಸಿದನು.
मगर सातवें महीने ऐसा हुआ कि इस्माईल — बिन — नतनियाह — बिन — इलीसमा' जो बादशाह की नस्ल से था, अपने साथ दस मर्द लेकर आया और जिदलियाह को ऐसा मारा कि वह मर गया; और उन यहूदियों और कसदियों को भी जो उसके साथ मिस्फ़ाह में थे क़त्ल किया।
26 ೨೬ ಆಗ ಎಲ್ಲಾ ಚಿಕ್ಕವರೂ, ದೊಡ್ಡವರೂ, ಸೇನಾಧಿಪತಿಗಳೂ ಕಸ್ದೀಯರಿಗೆ ಹೆದರಿ ಐಗುಪ್ತಕ್ಕೆ ಓಡಿಹೋದರು.
तब सब लोग, क्या छोटे क्या बड़े और लोगों के सरदार उठ कर मिस्र को चले गए क्यूँकि वह कसदियों से डरते थे।
27 ೨೭ ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ ಅಂದರೆ ಯೆಹೂದದ ಅರಸನಾದ ಯೆಹೋಯಾಖೀನನು ಸೆರೆಯಾಗಿದ್ದ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ, ಯೆಹೋಯಾಖೀನನನ್ನು ಕಟಾಕ್ಷಿಸಿ ಅವನನ್ನು ಸೆರೆಮನೆಯಿಂದ ಬಿಡಿಸಿ, ಅವನನ್ನು ಅಭಿವೃದ್ಧಿಗೆ ತಂದನು.
और यहूयाकीन शाह — ए — यहूदाह की ग़ुलामी के सैंतीसवें साल के बारहवें महीने के सत्ताइसवें दिन ऐसा हुआ, कि शाह — ए — बाबुल ईवील मरदूक़ ने अपनी सल्तनत के पहले ही साल यहूयाकीन शाह — ए — यहूदाह को क़ैदख़ाने से निकाल कर सरफ़राज़ किया;
28 ೨೮ ಅಲ್ಲದೆ ಅವನೊಡನೆ ಪ್ರೀತಿಯಿಂದ ಮಾತನಾಡಿ ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸುಗಳಲ್ಲಿ ಅವನಿಗೆ ಉನ್ನತಸ್ಥಾನವನ್ನು ಕೊಟ್ಟನು.
और उसके साथ मेहरबानी से बातें कीं, और उसकी कुर्सी उन सब बादशाहों की कुर्सियों से जो उसके साथ बाबुल में थे बलन्द की।
29 ೨೯ ಎವೀಲ್ಮೆರೋದಕನು ಯೆಹೋಯಾಖೀನನ ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದಿರುವವರೆಗೂ ಅರಸನ ಪಂಕ್ತಿಯಲ್ಲಿ ಊಟಮಾಡಿದನು.
इसलिए वह अपने क़ैदख़ाने के कपड़े बदलकर उम्र भर बराबर उसके सामने खाना खाता रहा;
30 ೩೦ ಅವನು ಬದುಕಿರುವವರೆಗೂ ಅವನಿಗೆ ಬೇಕಾಗುವ ಎಲ್ಲಾ ಪದಾರ್ಥಗಳು ಪ್ರತಿನಿತ್ಯವೂ ಅರಸನಿಂದಲೇ ಅವನಿಗೆ ಕೊಡಲಾಗುತ್ತಿತ್ತು.
और उसको उम्र भर बादशाह की तरफ़ से वज़ीफ़े के तौर पर हर रोज़ ख़र्चा मिलता रहा।

< ಅರಸುಗಳು - ದ್ವಿತೀಯ ಭಾಗ 25 >