< ಅರಸುಗಳು - ದ್ವಿತೀಯ ಭಾಗ 3 >

1 ಯೆಹೂದ್ಯರ ಅರಸನಾದ ಯೆಹೋಷಾಫಾಟನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಹಾಬನ ಮಗನಾದ ಯೋರಾಮನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹನ್ನೆರಡು ವರ್ಷ ಆಳಿದನು.
यहूदाचा राजा यहोशाफाट याच्या कारकिर्दीच्या अठराव्या वर्षी, अहाबाचा मुलगा योराम शोमरोनात इस्राएलावर राज्य करू लागला; त्याने बारा वर्षे राज्य केले.
2 ಇವನು ತನ್ನ ತಂದೆತಾಯಿಗಳಷ್ಟು ದುಷ್ಟನಾಗಿರಲಿಲ್ಲ. ಆದರೂ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು. ತನ್ನ ತಂದೆ ಬಾಳನಿಗೋಸ್ಕರ ನಿಲ್ಲಿಸಿದ ಕಲ್ಲಿನ ಸ್ತಂಭ, ಸ್ಮಾರಕಗಳನ್ನು ತೆಗೆದುಹಾಕಿದನು.
यहोरामाने परमेश्वराच्या दृष्टीने दुष्ट अशी कृत्ये केली, पण आपल्या आई-वडिलांसारखे त्याने केले नाही; त्याने त्याच्या वडिलांनी बआलमूर्तीच्या पूजेसाठी केलेला स्तंभ काढून टाकला.
3 ಆದರೂ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡಲೇ ಇಲ್ಲ.
असे असले तरी नबाटचा मुलगा यराबाम ज्याने इस्राएलास पाप करायला लावले, त्याच्या पापास तो चिकटून राहिला. ती त्याने सोडली नाहीत.
4 ಅನೇಕ ಕುರಿಹಿಂಡುಗಳನ್ನು ಹೊಂದಿದ್ದ ಮೋವಾಬ್ಯರ ಅರಸನಾದ ಮೇಷನೆಂಬುವನು ಇಸ್ರಾಯೇಲರ ಅರಸನಿಗೆ ಒಂದು ಲಕ್ಷ ಕುರಿಗಳ ಮತ್ತು ಒಂದು ಲಕ್ಷ ಟಗರುಗಳ ಉಣ್ಣೆಯನ್ನು ಕಪ್ಪವಾಗಿ ಕೊಡುತ್ತಿದ್ದನು.
आता मवाबाचा राजा मेशा कळपांचा धनी होता. तो इस्राएलाच्या राजाला एक लक्ष मेंढया आणि एक लक्ष एडके लोकरींसूद्धा देत असे.
5 ಆದರೆ ಅಹಾಬನು ಮರಣಹೊಂದಿದ ನಂತರ ಮೋವಾಬ್ಯರ ಅರಸನು ಇಸ್ರಾಯೇಲರ ಅರಸನಿಗೆ ವಿರುದ್ಧವಾಗಿ ತಿರುಗಿಬಿದ್ದನು.
पण अहाबाच्या मूत्यूनंतर, मवाबाच्या राजाने इस्राएलाच्या राजाविरूद्ध बंड केले.
6 ಆದುದರಿಂದ ಅರಸನಾದ ಯೋರಾಮನು ಕೂಡಲೆ ಇಸ್ರಾಯೇಲರನ್ನು ಸೇರಿಸಿಕೊಂಡು ಸಮಾರ್ಯದಿಂದ ಹೊರಟು ಬಂದನು.
त्या वेळेस राजा योराम शोमरोन मधून बाहेर पडला आणि त्याने सर्व इस्राएल लोकांस एकत्र केले.
7 ಯೆಹೂದ್ಯರ ಅರಸನಾದ ಯೆಹೋಷಾಫಾಟನಿಗೆ ದೂತರ ಮುಖಾಂತರವಾಗಿ, “ಮೋವಾಬ್ಯರ ಅರಸನು ನನ್ನ ವಿರುದ್ಧವಾಗಿ ತಿರುಗಿಬಿದ್ದಿದ್ದಾನೆ. ಮೋವಾಬ್ಯರೊಡನೆ ಯುದ್ಧಮಾಡುವುದಕ್ಕೆ ನೀನೂ ನನ್ನ ಜೊತೆಯಲ್ಲಿ ಬರುತ್ತೀಯೋ?” ಎಂದು ಹೇಳಿ ಕಳುಹಿಸಿದನು. ಅದಕ್ಕೆ ಯೆಹೋಷಾಫಾಟನು, “ಬರುತ್ತೇನೆ. ನಾನೂ ನೀನೂ, ನನ್ನ ಜನರೂ, ನಿನ್ನ ಜನರೂ, ನನ್ನ ಕುದುರೆಗಳೂ, ನಿನ್ನ ಕುದುರೆಗಳೂ ಒಂದೇ ಅಲ್ಲವೋ” ಎಂದು ಉತ್ತರಕೊಟ್ಟನು.
यहूदाचा राजा यहोशाफाट याच्याकडे त्याने असा निरोप पाठवला की, “मवाबाच्या राजाने माझ्याविरुध्द बंड केले आहे. तू माझ्याबरोबर मवाबाविरूद्ध लढाईला येशील काय?” यहोशाफाटाने सांगितले, “होय, मी जरुर येईन, जसा तू तसा मी, जसे तुझे लोक तसे माझे लोक, जसे तुझे घोडे तसे माझे घोडे.”
8 ಮತ್ತೆ ಯೆಹೋಷಾಫಾಟನು, “ಯಾವ ಮಾರ್ಗವಾಗಿ ಹೋಗಬೇಕು?” ಎಂದು ವಿಚಾರಿಸಿದಾಗ ಯೋರಾಮನು, “ಎದೋಮ್ಯರ ಅರಣ್ಯ ಮಾರ್ಗವಾಗಿ” ಎಂದನು.
नंतर तो बोलला “कोणत्या वाटेने हल्ला करायला जायचे?” यावर, “अदोमच्या वाळवंटाच्या दिशेने” असे यहोशाफाट ने सांगितले.
9 ಆಗ ಇಸ್ರಾಯೇಲ್, ಯೆಹೂದ್ಯ, ಎದೋಮ್ ರಾಜ್ಯಗಳ ಅರಸರು ಹೊರಟು ಸುತ್ತು ಬಳಸು ದಾರಿಯಿಂದ ಏಳು ದಿನಗಳವರೆಗೆ ಪ್ರಯಾಣ ಮಾಡಿದರು. ಮಾರ್ಗದಲ್ಲಿ ಅವರ ಸೈನಿಕರಿಗೂ, ಅವರು ತಂದ ಪಶುಗಳಿಗೂ ನೀರು ಸಿಕ್ಕದೆ ಹೋಯಿತು.
मग इस्राएलचा राजा, यहूदा आणि अदोमाच्या राजाबरोबर चालत सात दिवसाच्या वाटेचा फेरा केल्यावर, तिथे त्यांच्या सैन्याला, घोड्यांना, तसेच त्यांच्याबरोबरची जनावरे याकरिता पाणी सापडले नाही.
10 ೧೦ ಇಸ್ರಾಯೇಲರ ಅರಸರು, “ಅಯ್ಯೋ, ಯೆಹೋವನು ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕೋಸ್ಕರ ಇಲ್ಲಿಗೆ ಬರಮಾಡಿದ್ದಾನೆ” ಎಂದು ಗೋಳಾಡಿದರು.
१०तेव्हा इस्राएलाचा राजा यहोराम म्हणाला, “हे काय आहे? मवाबांच्या हातून पराभव पत्करावा म्हणून परमेश्वराने आम्हा तीन राजांना एकत्र आणले काय?”
11 ೧೧ ಆದರೆ ಯೆಹೋಷಾಫಾಟನು, “ಯೆಹೋವನ ಸನ್ನಿಧಿಯಲ್ಲಿ ನಮಗೋಸ್ಕರ ವಿಚಾರಿಸಬಲ್ಲವನಾದ ಒಬ್ಬ ಪ್ರವಾದಿಯು ಇಲ್ಲಿ ಇಲ್ಲವೇ?” ಎಂದು ಕೇಳಿದನು. ಆಗ ಇಸ್ರಾಯೇಲರ ಅರಸನ ಸೇವಕರಲ್ಲೊಬ್ಬನು ಅವನಿಗೆ, “ಶಾಫಾಟನ ಮಗನು, ಎಲೀಯನ ಕೈಗೆ ನೀರು ಕೊಡುತ್ತಿದ್ದವನೂ ಆದ ಎಲೀಷನೆಂಬ ಪ್ರವಾದಿಯು ಇಲ್ಲಿರುತ್ತಾನೆ” ಎಂದು ಉತ್ತರಕೊಟ್ಟನು.
११परंतू यहोशाफाट म्हणाला, “ज्याच्याकडून आपण परमेश्वराचा सल्ला घ्यावा असा येथे परमेश्वराचा एखादा संदेष्टा नाही काय?” तेव्हा इस्राएलाच्या राजाच्या एका सेवकाने उत्तर दिले, “शाफाटाचा मुलगा अलीशा इथेच आहे, जो एलीयाच्या हातावर पाणी घालत असे.”
12 ೧೨ ಯೆಹೋಷಾಫಾಟನು, “ಅವನು ಹೇಗೂ ಯೆಹೋವನ ಉತ್ತರವನ್ನು ತಿಳಿಸುವನು” ಅಂದನು. ಆಗ ಇಸ್ರಾಯೇಲ್, ಎದೋಮ್ ರಾಜ್ಯಗಳ ಅರಸರು ಯೆಹೋಷಾಫಾಟನೊಡನೆ ಎಲೀಷನ ಬಳಿಗೆ ಹೋದರು.
१२यहोशाफाट म्हणाला, “परमेश्वराचे वचन त्याच्या सोबत आहे.” तेव्हा इस्राएलाचा राजा व यहोशाफाट आणि अदोमचा राजा खाली त्याच्याकडे गेले.
13 ೧೩ ಎಲೀಷನು ಇಸ್ರಾಯೇಲರ ಅರಸನಿಗೆ, “ನನಗೂ ನಿನಗೂ ಏನು ಸಂಬಂಧ? ನಿನ್ನ ತಂದೆತಾಯಿಗಳ ಪ್ರವಾದಿಗಳ ಬಳಿಗೆ ಹೋಗು” ಎಂದು ಹೇಳಿದನು. ಅದಕ್ಕೆ ಇಸ್ರಾಯೇಲರ ಅರಸನು, “ಹಾಗೆ ಹೇಳಬೇಡ, ಯೆಹೋವನು ಈ ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕೋಸ್ಕರ ಇಲ್ಲಿಗೆ ಬರಮಾಡಿದನಲ್ಲವೇ?” ಎಂದನು.
१३अलीशा इस्राएलाच्या राजाला म्हणाला, “तुझे माझे काय आहे? तू आपल्या वडिलांच्या किंवा आईच्या संदेष्ट्यांकडे जा.” तेव्हा इस्राएलाच्या राजा अलीशाला म्हणाला, “नाही, कारण परमेश्वराने आम्हा तीन राजांना एकत्र आणले, ह्यासाठी की मवाबाकडून आम्ही पराभूत व्हावे.”
14 ೧೪ ಆಗ ಎಲೀಷನು, “ನಾನು ಸೇವೆಮಾಡುತ್ತಿರುವ ಸೇನಾಧೀಶ್ವರನಾದ ಯೆಹೋವನಾಣೆ, ಯೆಹೂದ್ಯರ ಅರಸನಾದ ಯೆಹೋಷಾಫಾಟನು ನಿನ್ನ ಜೊತೆಯಲ್ಲಿರದಿದ್ದರೆ ನಾನು ನಿನ್ನನ್ನು ನೋಡುತ್ತಿರಲಿಲ್ಲ. ನಿನ್ನನ್ನು ಲಕ್ಷಿಸುತ್ತಲೂ ಇರಲಿಲ್ಲ.
१४अलीशा म्हणाला, “ज्या परमेश्वराच्या सान्निध्यात मी उभा राहतो, तो सैन्याचा परमेश्वर जिवंत आहे. जर यहूदाचा राजा यहोशाफाट ह्याच्या उपस्थितीचा मी आदर केला नसता, तर खरोखर मी तुझी दखल घेतली नसती व तुझ्याकडे पाहिलेही नसते.
15 ೧೫ ಈಗ, ಒಬ್ಬ ವಾದ್ಯಗಾರನನ್ನು ನನ್ನ ಹತ್ತಿರ ಕರೆದುಕೊಂಡು ಬನ್ನಿರಿ” ಎಂದು ಹೇಳಿದನು. ವಾದ್ಯಗಳ ಸ್ವರವನ್ನು ಕೇಳುವಾಗಲೆಲ್ಲಾ ಎಲೀಷನಲ್ಲಿ ಯೆಹೋವನ ಬಲವು ಬರುತ್ತಿತ್ತು.
१५तेव्हा आता एखादा वीणावादक माझ्याकडे आणा.” आणि असे झाले की वीणावादक वाजवत असता, परमेश्वराचा हात अलीशावर आला.
16 ೧೬ ಅನಂತರ ಎಲೀಷನು ಇಸ್ರಾಯೇಲರ ಅರಸನಿಗೆ, ಯೆಹೋವನು ಹೀಗೆ ಹೇಳುತ್ತಾನೆ, “ಈ ಹಳ್ಳದಲ್ಲಿ ತುಂಬಾ ಗುಂಡಿಗಳನ್ನು ಮಾಡಿರಿ.
१६मग अलीशा म्हणाला, “परमेश्वर असे म्हणतो: या कोरड्या नदीच्या खोऱ्यात जागोजागी खणून ठेवा.
17 ೧೭ ‘ನೀವು ಗಾಳಿ, ಮಳೆಗಳನ್ನು ಕಾಣದಿದ್ದರೂ, ಅದು ನೀರಿನಿಂದ ತುಂಬುವುದು. ನೀವೂ, ನಿಮ್ಮ ಕುರಿದನಗಳೂ, ನೀರನ್ನು ಕುಡಿಯಬಹುದು’ ಎಂಬುದಾಗಿ ಯೆಹೋವನು ಅನ್ನುತ್ತಾನೆ.
१७कारण परमेश्वर असे म्हणतो, तुम्हास वारा, पाऊस काही दिसणार नाही पण तरीही हे खोरे पाण्याने भरुन जाईल, आणि तुम्ही प्याल, तुम्ही व तुमच्या जनावरांनाही पाणी मिळेल.
18 ೧೮ “ಯೆಹೋವನ ದೃಷ್ಟಿಯಲ್ಲಿ ಈ ಕಾರ್ಯವೂ ಸುಲಭವಾಗಿರುವುದು. ಅದೇ ರೀತಿಯಾಗಿ ಯೆಹೋವನು ಮೋವಾಬ್ಯರನ್ನೂ ನಿಮ್ಮ ಕೈಗೆ ಒಪ್ಪಿಸುವನು.
१८कारण हे तर परमेश्वराच्या दृष्टीने सोपे आहे. तो तुम्हास मवाबांवरही विजय मिळवून देईल.
19 ೧೯ ನೀವು ಅವರ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ, ವಿಶೇಷವಾದ ಎಲ್ಲಾ ಊರುಗಳನ್ನೂ ಸ್ವಾಧೀನಮಾಡಿಕೊಂಡು, ಎಲ್ಲಾ ಹಣ್ಣಿನ ಮರಗಳನ್ನೂ ಕಡಿದುಹಾಕಿ, ಒರತೆಗಳನ್ನು ಮುಚ್ಚಿಬಿಟ್ಟು, ಹೊಲಗಳಲ್ಲಿ ಕಲ್ಲುಗಳನ್ನು ತುಂಬಿಸಿ ಹಾಳುಮಾಡುವಿರಿ” ಎಂದು ನುಡಿದನು.
१९प्रत्येक तटबंदीच्या व चांगल्या बंदोबस्त असलेल्या अशा निवडक नगरांवर तुम्ही हल्ला कराल. प्रत्येक चांगला वृक्ष तुम्ही तोडून टाकाल, पाण्याचे झरे, विहिरी बुजवून टाकाल. दगडफेक करून चांगल्या शेतांची नासाडी कराल.”
20 ೨೦ ಮುಂಜಾನೆ ವೇಳೆಯಲ್ಲಿ ನೈವೇದ್ಯವನ್ನು ಸಮರ್ಪಿಸುವ ಹೊತ್ತಿನಲ್ಲಿ ಪಕ್ಕನೆ ಎದೋಮಿನ ಕಡೆಯಿಂದ ನೀರು ಬಂದು ದೇಶದಲ್ಲೆಲ್ಲಾ ತುಂಬಿಕೊಂಡಿತು.
२०मग सकाळी, अर्पणाच्या वेळी, अदोमाच्या बाजूने पाण्याचा लोंढा आला आणि देश पाण्याने भरला.
21 ೨೧ ಅರಸರು ತಮಗೆ ವಿರುದ್ಧವಾಗಿ ಯುದ್ಧಕ್ಕೆ ಬಂದಿದ್ದಾರೆಂಬುವುದನ್ನು ಮೋವಾಬ್ಯರು ಕೇಳಿ ಆಯುಧಗಳನ್ನು ಧರಿಸಲು ಶಕ್ತರಾದ ಎಲ್ಲಾ ಯೌವನಸ್ಥರನ್ನೂ ಕೂಡಿಸಿಕೊಂಡು ತಮ್ಮ ದೇಶದ ಗಡಿಪ್ರದೇಶಕ್ಕೆ ಬಂದರು.
२१राजे आपल्यावर हल्ला करायला आले आहेत हे मवाबाच्या लोकांनी ऐकले तेव्हा, त्यांनी आपल्याकडच्या युध्दात उतरता येण्याजोग्या सर्व पुरुषांना एकत्र केले. युध्दासाठी सज्ज होऊन ते सीमेवर जाऊन थांबले.
22 ೨೨ ಬೆಳಿಗ್ಗೆ ಎದ್ದು ನೋಡಲಾಗಿ, ಎದುರಿಗೆ ಇದ್ದ ನೀರು ಮೋವಾಬ್ಯರ ದೃಷ್ಟಿಗೆ ಬಿದ್ದಿತು. ಸೂರ್ಯಪ್ರಕಾಶದಿಂದ ಆ ನೀರು ರಕ್ತದಂತೆ ಕೆಂಪಾಗಿ ಕಾಣಿಸುತ್ತಿತ್ತು.
२२ते लोक त्या दिवशी भल्या पहाटे उठले तेव्हा उगवत्या सूर्याची लाली पाण्यात प्रतिबिंबित होती. मवाबी लोकांस त्यांच्या विरूद्ध दिशेला असलेले पाणी दिसले असता, ते त्यांना रक्तासारखे लाल दिसले.
23 ೨೩ ಇವರು, “ಅದು ರಕ್ತ! ಅರಸರು ತಮ್ಮ ತಮ್ಮೊಳಗೆ ಜಗಳವಾಡಿ ಸಂಹಾರರಾಗಿರಬೇಕು. ಮೋವಾಬ್ಯರೇ ಏಳಿರಿ, ಸುಲಿಗೆಗೆ ಹೋಗೋಣ!” ಎಂದು ಕೂಗಿಕೊಂಡು ಇಸ್ರಾಯೇಲರ ಪಾಳೆಯಕ್ಕೆ ಹೋದರು.
२३ते म्हणाले, “हे रक्त आहे! या राजांची नक्कीच आपापसात लढाई झालेली दिसते, त्यांनी परस्परांना मारले! तर आता मवाब्यांनो त्यांना लुटायला चला.”
24 ೨೪ ಆದರೆ ಇಸ್ರಾಯೇಲರು ಎದ್ದು ಮೋವಾಬ್ಯರನ್ನು ಸೋಲಿಸಿ ಓಡಿಸಿಬಿಟ್ಟರು. ಇದಲ್ಲದೆ ಅವರು ಮೋವಾಬ್ಯರನ್ನು ಸಂಹರಿಸಿದರು.
२४मवाबी लोक इस्राएलांच्या छावणीपाशी आले असता, इस्राएल लोकांनी बाहेर येऊन मवाबी सैन्यावर हल्ला केला. तेव्हा मवाबी लोक पळत सुटले व इस्राएल लोक त्यांच्या प्रदेशातही त्यांना मारत गेले.
25 ೨೫ ಅವರು ದೇಶದೊಳಗೆ ನುಗ್ಗಿ ಎಲ್ಲಾ ಪಟ್ಟಣಗಳನ್ನು ನಾಶಮಾಡಿದ್ದರು. ಹೊಲಗಳನ್ನು ಕಲ್ಲುಗಳಿಂದ ತುಂಬಿಸಿದರು. ಒರತೆಗಳನ್ನು ಮುಚ್ಚಿ, ಹಣ್ಣಿನ ಮರಗಳನ್ನು ಕಡಿದುಹಾಕಿದರು. ಕೀರ್ಹರೆಷೆತ್ ಎಂಬ ಒಂದು ಮಾರ್ಗ ಉಳಿಯಿತು. ಕವಣೆಹೊಡೆಯುವವರು ಅದನ್ನು ಸುತ್ತಿಕೊಂಡು ಕಲ್ಲೆಸೆದರು.
२५इस्राएल लोकांनी त्यांची नगरे उध्वस्त केली, त्यांच्या प्रत्येक शेतांत दगडांचा मारा करून ते बुजवले. त्यांनी पाण्याच्या सर्व विहिरी बुजवल्या व सर्व चांगली झाडे तोडून टाकली केली. फक्त कीर-हरेसमधे त्यांनी त्यांचे दगड राहू दिले. पण गोफण चालवणाऱ्या सैन्यांनी त्या नगरावर हल्ला केला.
26 ೨೬ ಮೋವಾಬ್ಯರ ಅರಸನು ತಾನು ಯುದ್ಧದಲ್ಲಿ ಗೆಲ್ಲಲಾರೆನೆಂದು ತಿಳಿದು, ಏಳು ನೂರು ಮಂದಿ ಭಟರೊಡನೆ, ಸೈನ್ಯದೊಳಗೆ ನುಗ್ಗಿ ಎದೋಮ್ಯರ ಅರಸನ ಕಡೆಗೆ ಹೋಗಲು ಪ್ರಯತ್ನಿಸಿದನು. ಆದರೆ ಆಗದೆಹೋಯಿತು.
२६या लढाईला तोंड देणे आपल्याला जड जात आहे हे मवाबाचा राजा मेशाने जाणले. तेव्हा त्याने तलवारधारी सातशे निवडक माणसे बरोबर घेतली आणि वेढा फोडून अदोमाच्या राजाला तो मारायला निघाला पण त्यास ते जमले नाही.
27 ೨೭ ಆಗ ಅವನು ತನಗೆ ಬದಲಾಗಿ ಅರಸನಾಗತಕ್ಕ ತನ್ನ ಚೊಚ್ಚಲಮಗನನ್ನು ಹಿಡಿದು ವಧಿಸಿ ಗೋಡೆಯ ಮೇಲೆ ಸರ್ವಾಂಗಹೋಮ ಮಾಡಿದನು. ಇದರಿಂದ ಮೋವಾಬ್ಯರಿಗೆ ಇಸ್ರಾಯೇಲರ ಮೇಲೆ ಕೋಪೋದ್ರೇಕ ಉಂಟಾಗಲು ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹೊರಟುಹೋದರು.
२७मग मवाबाच्या राजाने आपल्या थोरल्या मुलाला बरोबर घेतले, जो त्यानंतर त्याच्या गादीवर बसणार होता. नगराच्या तटबंदीच्या भिंतीवर या राजाने आपल्या मोठ्या मुलाचा यज्ञात बली दिला. तेव्हा इस्राएलवर मोठा कोप झाला. मग ते मवाबाचा राजा मेशा याला सोडून आपल्या देशात परत आले.

< ಅರಸುಗಳು - ದ್ವಿತೀಯ ಭಾಗ 3 >