< ಅರಸುಗಳು - ದ್ವಿತೀಯ ಭಾಗ 3 >

1 ಯೆಹೂದ್ಯರ ಅರಸನಾದ ಯೆಹೋಷಾಫಾಟನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಹಾಬನ ಮಗನಾದ ಯೋರಾಮನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹನ್ನೆರಡು ವರ್ಷ ಆಳಿದನು.
और शाह — ए — यहूदाह यहूसफ़त के अठारहवें बरस से अख़ीअब का बेटा यहूराम सामरिया में इस्राईल पर बादशाहत करने लगा, और उसने बारह साल बादशाहत की।
2 ಇವನು ತನ್ನ ತಂದೆತಾಯಿಗಳಷ್ಟು ದುಷ್ಟನಾಗಿರಲಿಲ್ಲ. ಆದರೂ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು. ತನ್ನ ತಂದೆ ಬಾಳನಿಗೋಸ್ಕರ ನಿಲ್ಲಿಸಿದ ಕಲ್ಲಿನ ಸ್ತಂಭ, ಸ್ಮಾರಕಗಳನ್ನು ತೆಗೆದುಹಾಕಿದನು.
और उसने ख़ुदावन्द के ख़िलाफ़ गुनाह किया; लेकिन अपने बाप और अपनी माँ की तरह नहीं, क्यूँकि उसने बा'ल के उस सुतून को जो उसके बाप ने बनाया था दूर कर दिया।
3 ಆದರೂ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡಲೇ ಇಲ್ಲ.
तोभी वह नबात के बेटे युरब'आम के गुनाहों से, जिनसे उसने इस्राईल से गुनाह कराया था लिपटा रहा, और उनसे अपने आपको अलग न किया।
4 ಅನೇಕ ಕುರಿಹಿಂಡುಗಳನ್ನು ಹೊಂದಿದ್ದ ಮೋವಾಬ್ಯರ ಅರಸನಾದ ಮೇಷನೆಂಬುವನು ಇಸ್ರಾಯೇಲರ ಅರಸನಿಗೆ ಒಂದು ಲಕ್ಷ ಕುರಿಗಳ ಮತ್ತು ಒಂದು ಲಕ್ಷ ಟಗರುಗಳ ಉಣ್ಣೆಯನ್ನು ಕಪ್ಪವಾಗಿ ಕೊಡುತ್ತಿದ್ದನು.
मोआब का बादशाह मीसा बहुत भेड़ बकरियाँ रखता था, और इस्राईल के बादशाह को एक लाख बर्रों और एक लाख मेंढों की ऊन देता था।
5 ಆದರೆ ಅಹಾಬನು ಮರಣಹೊಂದಿದ ನಂತರ ಮೋವಾಬ್ಯರ ಅರಸನು ಇಸ್ರಾಯೇಲರ ಅರಸನಿಗೆ ವಿರುದ್ಧವಾಗಿ ತಿರುಗಿಬಿದ್ದನು.
लेकिन जब अख़ीअब मर गया, तो मोआब का बादशाह इस्राईल के बादशाह से बाग़ी हो गया।
6 ಆದುದರಿಂದ ಅರಸನಾದ ಯೋರಾಮನು ಕೂಡಲೆ ಇಸ್ರಾಯೇಲರನ್ನು ಸೇರಿಸಿಕೊಂಡು ಸಮಾರ್ಯದಿಂದ ಹೊರಟು ಬಂದನು.
उस वक़्त यहूराम बादशाह ने सामरिया से निकलकर सारे इस्राईल का जाएज़ा लिया।
7 ಯೆಹೂದ್ಯರ ಅರಸನಾದ ಯೆಹೋಷಾಫಾಟನಿಗೆ ದೂತರ ಮುಖಾಂತರವಾಗಿ, “ಮೋವಾಬ್ಯರ ಅರಸನು ನನ್ನ ವಿರುದ್ಧವಾಗಿ ತಿರುಗಿಬಿದ್ದಿದ್ದಾನೆ. ಮೋವಾಬ್ಯರೊಡನೆ ಯುದ್ಧಮಾಡುವುದಕ್ಕೆ ನೀನೂ ನನ್ನ ಜೊತೆಯಲ್ಲಿ ಬರುತ್ತೀಯೋ?” ಎಂದು ಹೇಳಿ ಕಳುಹಿಸಿದನು. ಅದಕ್ಕೆ ಯೆಹೋಷಾಫಾಟನು, “ಬರುತ್ತೇನೆ. ನಾನೂ ನೀನೂ, ನನ್ನ ಜನರೂ, ನಿನ್ನ ಜನರೂ, ನನ್ನ ಕುದುರೆಗಳೂ, ನಿನ್ನ ಕುದುರೆಗಳೂ ಒಂದೇ ಅಲ್ಲವೋ” ಎಂದು ಉತ್ತರಕೊಟ್ಟನು.
और उसने जाकर यहूदाह के बादशाह यहूसफ़त से पुछवा भेजा,' “मोआब का बादशाह मुझ से बाग़ी हो गया है; इसलिए क्या तू मोआब से लड़ने के लिए मेरे साथ चलेगा?” उसने जवाब दिया, “मैं चलूँगा; क्यूँकि जैसा मैं हूँ। वैसा ही तू है, और जैसे मेरे लोग वैसे ही तेरे लोग, और जैसे मेरे घोड़े वैसे ही तेरे घोड़े हैं।”
8 ಮತ್ತೆ ಯೆಹೋಷಾಫಾಟನು, “ಯಾವ ಮಾರ್ಗವಾಗಿ ಹೋಗಬೇಕು?” ಎಂದು ವಿಚಾರಿಸಿದಾಗ ಯೋರಾಮನು, “ಎದೋಮ್ಯರ ಅರಣ್ಯ ಮಾರ್ಗವಾಗಿ” ಎಂದನು.
तब उसने पूछा, “हम किस रास्ते से जाएँ?” उसने जवाब दिया, “अदोम के रास्ते से।”
9 ಆಗ ಇಸ್ರಾಯೇಲ್, ಯೆಹೂದ್ಯ, ಎದೋಮ್ ರಾಜ್ಯಗಳ ಅರಸರು ಹೊರಟು ಸುತ್ತು ಬಳಸು ದಾರಿಯಿಂದ ಏಳು ದಿನಗಳವರೆಗೆ ಪ್ರಯಾಣ ಮಾಡಿದರು. ಮಾರ್ಗದಲ್ಲಿ ಅವರ ಸೈನಿಕರಿಗೂ, ಅವರು ತಂದ ಪಶುಗಳಿಗೂ ನೀರು ಸಿಕ್ಕದೆ ಹೋಯಿತು.
चुनाँचे इस्राईल के बादशाह और यहूदाह के बादशाह और अदोम के बादशाह निकले; और उन्होंने सात दिन की मन्ज़िल का चक्कर काटा, और उनके लश्कर और चौपायों के लिए, जो पीछे पीछे आते थे, कहीं पानी न था।
10 ೧೦ ಇಸ್ರಾಯೇಲರ ಅರಸರು, “ಅಯ್ಯೋ, ಯೆಹೋವನು ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕೋಸ್ಕರ ಇಲ್ಲಿಗೆ ಬರಮಾಡಿದ್ದಾನೆ” ಎಂದು ಗೋಳಾಡಿದರು.
और इस्राईल के बादशाह ने कहा, “अफ़सोस कि ख़ुदावन्द ने इन तीन बादशाहों को इकट्ठा किया है, ताकि उनको मोआब के बादशाह के हवाले कर दे।”
11 ೧೧ ಆದರೆ ಯೆಹೋಷಾಫಾಟನು, “ಯೆಹೋವನ ಸನ್ನಿಧಿಯಲ್ಲಿ ನಮಗೋಸ್ಕರ ವಿಚಾರಿಸಬಲ್ಲವನಾದ ಒಬ್ಬ ಪ್ರವಾದಿಯು ಇಲ್ಲಿ ಇಲ್ಲವೇ?” ಎಂದು ಕೇಳಿದನು. ಆಗ ಇಸ್ರಾಯೇಲರ ಅರಸನ ಸೇವಕರಲ್ಲೊಬ್ಬನು ಅವನಿಗೆ, “ಶಾಫಾಟನ ಮಗನು, ಎಲೀಯನ ಕೈಗೆ ನೀರು ಕೊಡುತ್ತಿದ್ದವನೂ ಆದ ಎಲೀಷನೆಂಬ ಪ್ರವಾದಿಯು ಇಲ್ಲಿರುತ್ತಾನೆ” ಎಂದು ಉತ್ತರಕೊಟ್ಟನು.
लेकिन यहूसफ़त ने कहा, “क्या ख़ुदावन्द के नबियों में से कोई यहाँ नहीं है, ताकि उसके वसीले से हम ख़ुदावन्द की मर्ज़ी मा'लूम करें?” और इस्राईल के बादशाह के ख़ादिमों में से एक ने जवाब दिया, “इलीशा' — बिन — साफ़त यहाँ है, जो एलियाह के हाथ पर पानी डालता था।”
12 ೧೨ ಯೆಹೋಷಾಫಾಟನು, “ಅವನು ಹೇಗೂ ಯೆಹೋವನ ಉತ್ತರವನ್ನು ತಿಳಿಸುವನು” ಅಂದನು. ಆಗ ಇಸ್ರಾಯೇಲ್, ಎದೋಮ್ ರಾಜ್ಯಗಳ ಅರಸರು ಯೆಹೋಷಾಫಾಟನೊಡನೆ ಎಲೀಷನ ಬಳಿಗೆ ಹೋದರು.
यहूसफ़त ने कहा, “ख़ुदावन्द का कलाम उसके साथ है।” तब इस्राईल के बादशाह और यहूसफ़त और अदोम के बादशाह उसके पास गए।
13 ೧೩ ಎಲೀಷನು ಇಸ್ರಾಯೇಲರ ಅರಸನಿಗೆ, “ನನಗೂ ನಿನಗೂ ಏನು ಸಂಬಂಧ? ನಿನ್ನ ತಂದೆತಾಯಿಗಳ ಪ್ರವಾದಿಗಳ ಬಳಿಗೆ ಹೋಗು” ಎಂದು ಹೇಳಿದನು. ಅದಕ್ಕೆ ಇಸ್ರಾಯೇಲರ ಅರಸನು, “ಹಾಗೆ ಹೇಳಬೇಡ, ಯೆಹೋವನು ಈ ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕೋಸ್ಕರ ಇಲ್ಲಿಗೆ ಬರಮಾಡಿದನಲ್ಲವೇ?” ಎಂದನು.
तब इलीशा' ने इस्राईल के बादशाह से कहा, “मुझ को तुझ से क्या काम? तू अपने बाप के नबियों और अपनी माँ के नबियों के पास जा।” पर इस्राईल के बादशाह ने उससे कहा, “नहीं, नहीं, क्यूँकि ख़ुदावन्द ने इन तीनों बादशाहों को इकट्ठा किया है, ताकि उनको मोआब के हवाले कर दे।”
14 ೧೪ ಆಗ ಎಲೀಷನು, “ನಾನು ಸೇವೆಮಾಡುತ್ತಿರುವ ಸೇನಾಧೀಶ್ವರನಾದ ಯೆಹೋವನಾಣೆ, ಯೆಹೂದ್ಯರ ಅರಸನಾದ ಯೆಹೋಷಾಫಾಟನು ನಿನ್ನ ಜೊತೆಯಲ್ಲಿರದಿದ್ದರೆ ನಾನು ನಿನ್ನನ್ನು ನೋಡುತ್ತಿರಲಿಲ್ಲ. ನಿನ್ನನ್ನು ಲಕ್ಷಿಸುತ್ತಲೂ ಇರಲಿಲ್ಲ.
इलीशा' ने कहा, “रब्ब — उल — अफ़वाज की हयात की क़सम, जिसके आगे मैं खड़ा हूँ, अगर मुझे यहूदाह के बादशाह यहूसफ़त की हुज़ूरी के नज़दीक न होता, तो मैं तेरी तरफ़ नज़र भी न करता और न तुझे देखता।
15 ೧೫ ಈಗ, ಒಬ್ಬ ವಾದ್ಯಗಾರನನ್ನು ನನ್ನ ಹತ್ತಿರ ಕರೆದುಕೊಂಡು ಬನ್ನಿರಿ” ಎಂದು ಹೇಳಿದನು. ವಾದ್ಯಗಳ ಸ್ವರವನ್ನು ಕೇಳುವಾಗಲೆಲ್ಲಾ ಎಲೀಷನಲ್ಲಿ ಯೆಹೋವನ ಬಲವು ಬರುತ್ತಿತ್ತು.
लेकिन ख़ैर, किसी बजाने वाले को मेरे पास लाओ।” और ऐसा हुआ कि जब उस बजाने वाले ने बजाया, तो ख़ुदावन्द का हाथ उस पर ठहरा।
16 ೧೬ ಅನಂತರ ಎಲೀಷನು ಇಸ್ರಾಯೇಲರ ಅರಸನಿಗೆ, ಯೆಹೋವನು ಹೀಗೆ ಹೇಳುತ್ತಾನೆ, “ಈ ಹಳ್ಳದಲ್ಲಿ ತುಂಬಾ ಗುಂಡಿಗಳನ್ನು ಮಾಡಿರಿ.
तब उसने कहा, “ख़ुदावन्द यूँ फ़रमाता है, इस जंगल में ख़न्दक़ ही ख़न्दक़ खोद डालो।
17 ೧೭ ‘ನೀವು ಗಾಳಿ, ಮಳೆಗಳನ್ನು ಕಾಣದಿದ್ದರೂ, ಅದು ನೀರಿನಿಂದ ತುಂಬುವುದು. ನೀವೂ, ನಿಮ್ಮ ಕುರಿದನಗಳೂ, ನೀರನ್ನು ಕುಡಿಯಬಹುದು’ ಎಂಬುದಾಗಿ ಯೆಹೋವನು ಅನ್ನುತ್ತಾನೆ.
क्यूँकि ख़ुदावन्द यूँ फ़रमाता है, 'तुम न हवा आती देखोगे और न पानी आते देखोगे, तोभी ये वादी पानी से भर जाएगी, और तुम भी पियोगे और तुम्हारे मवेशी और तुम्हारे जानवर भी।
18 ೧೮ “ಯೆಹೋವನ ದೃಷ್ಟಿಯಲ್ಲಿ ಈ ಕಾರ್ಯವೂ ಸುಲಭವಾಗಿರುವುದು. ಅದೇ ರೀತಿಯಾಗಿ ಯೆಹೋವನು ಮೋವಾಬ್ಯರನ್ನೂ ನಿಮ್ಮ ಕೈಗೆ ಒಪ್ಪಿಸುವನು.
और ये ख़ुदावन्द के लिए एक हल्की सी बात है; वह मोआबियों को भी तुम्हारे हाथ में कर देगा।
19 ೧೯ ನೀವು ಅವರ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ, ವಿಶೇಷವಾದ ಎಲ್ಲಾ ಊರುಗಳನ್ನೂ ಸ್ವಾಧೀನಮಾಡಿಕೊಂಡು, ಎಲ್ಲಾ ಹಣ್ಣಿನ ಮರಗಳನ್ನೂ ಕಡಿದುಹಾಕಿ, ಒರತೆಗಳನ್ನು ಮುಚ್ಚಿಬಿಟ್ಟು, ಹೊಲಗಳಲ್ಲಿ ಕಲ್ಲುಗಳನ್ನು ತುಂಬಿಸಿ ಹಾಳುಮಾಡುವಿರಿ” ಎಂದು ನುಡಿದನು.
और तुम हर फ़सीलदार शहर और उम्दा शहर क़ब्ज़ा लोगे, और हर अच्छे दरख़्त को काट डालोगे, और पानी के सब चश्मों को भर दोगे, और हर अच्छे खेत को पत्थरों से ख़राब कर दोगे।”
20 ೨೦ ಮುಂಜಾನೆ ವೇಳೆಯಲ್ಲಿ ನೈವೇದ್ಯವನ್ನು ಸಮರ್ಪಿಸುವ ಹೊತ್ತಿನಲ್ಲಿ ಪಕ್ಕನೆ ಎದೋಮಿನ ಕಡೆಯಿಂದ ನೀರು ಬಂದು ದೇಶದಲ್ಲೆಲ್ಲಾ ತುಂಬಿಕೊಂಡಿತು.
इसलिए सुबह को क़ुर्बानी पेश करने के वक़्त ऐसा हुआ, कि अदोम की राह से पानी बहता आया और वह मुल्क पानी से भर गया।
21 ೨೧ ಅರಸರು ತಮಗೆ ವಿರುದ್ಧವಾಗಿ ಯುದ್ಧಕ್ಕೆ ಬಂದಿದ್ದಾರೆಂಬುವುದನ್ನು ಮೋವಾಬ್ಯರು ಕೇಳಿ ಆಯುಧಗಳನ್ನು ಧರಿಸಲು ಶಕ್ತರಾದ ಎಲ್ಲಾ ಯೌವನಸ್ಥರನ್ನೂ ಕೂಡಿಸಿಕೊಂಡು ತಮ್ಮ ದೇಶದ ಗಡಿಪ್ರದೇಶಕ್ಕೆ ಬಂದರು.
जब सब मोआबियों ने ये सुना कि बादशाहों ने उनसे लड़ने के लिए चढ़ाई की है, तो वह सब जो हथियार बाँधने के क़ाबिल थे, और उम्र दराज़ भी, इकट्ठे होकर सरहद पर खड़े हो गए;
22 ೨೨ ಬೆಳಿಗ್ಗೆ ಎದ್ದು ನೋಡಲಾಗಿ, ಎದುರಿಗೆ ಇದ್ದ ನೀರು ಮೋವಾಬ್ಯರ ದೃಷ್ಟಿಗೆ ಬಿದ್ದಿತು. ಸೂರ್ಯಪ್ರಕಾಶದಿಂದ ಆ ನೀರು ರಕ್ತದಂತೆ ಕೆಂಪಾಗಿ ಕಾಣಿಸುತ್ತಿತ್ತು.
और वह सुबह सवेरे उठे और सूरज पानी पर चमक रहा था, और मोआबियों को वह पानी जो उनके सामने था, ख़ून की तरह सुर्ख़ दिखाई दिया।
23 ೨೩ ಇವರು, “ಅದು ರಕ್ತ! ಅರಸರು ತಮ್ಮ ತಮ್ಮೊಳಗೆ ಜಗಳವಾಡಿ ಸಂಹಾರರಾಗಿರಬೇಕು. ಮೋವಾಬ್ಯರೇ ಏಳಿರಿ, ಸುಲಿಗೆಗೆ ಹೋಗೋಣ!” ಎಂದು ಕೂಗಿಕೊಂಡು ಇಸ್ರಾಯೇಲರ ಪಾಳೆಯಕ್ಕೆ ಹೋದರು.
तब वह कहने लगे, “ये तो खू़न है; वह बादशाह यक़ीनन हलाक हो गए हैं, और उन्होंने आपस में एक दूसरे को मार दिया है। इसलिए अब ऐ मोआब, लूट को चल।”
24 ೨೪ ಆದರೆ ಇಸ್ರಾಯೇಲರು ಎದ್ದು ಮೋವಾಬ್ಯರನ್ನು ಸೋಲಿಸಿ ಓಡಿಸಿಬಿಟ್ಟರು. ಇದಲ್ಲದೆ ಅವರು ಮೋವಾಬ್ಯರನ್ನು ಸಂಹರಿಸಿದರು.
जब वह इस्राईल की लश्करगाह में आए, तो इस्राईलियों ने उठकर मोआबियों को ऐसा मारा कि वह उनके आगे से भागे; पर वह आगे बढ़ कर मोआबियों को मारते मारते उनके मुल्क' में घुस गए।
25 ೨೫ ಅವರು ದೇಶದೊಳಗೆ ನುಗ್ಗಿ ಎಲ್ಲಾ ಪಟ್ಟಣಗಳನ್ನು ನಾಶಮಾಡಿದ್ದರು. ಹೊಲಗಳನ್ನು ಕಲ್ಲುಗಳಿಂದ ತುಂಬಿಸಿದರು. ಒರತೆಗಳನ್ನು ಮುಚ್ಚಿ, ಹಣ್ಣಿನ ಮರಗಳನ್ನು ಕಡಿದುಹಾಕಿದರು. ಕೀರ್ಹರೆಷೆತ್ ಎಂಬ ಒಂದು ಮಾರ್ಗ ಉಳಿಯಿತು. ಕವಣೆಹೊಡೆಯುವವರು ಅದನ್ನು ಸುತ್ತಿಕೊಂಡು ಕಲ್ಲೆಸೆದರು.
और उन्होंने शहरों को गिरा दिया, और ज़मीन के हर अच्छे ख़ित्ते' पर सभी ने एक एक पत्थर डालकर उसे भर दिया, और उन्होंने पानी के सब चश्में बन्द कर दिए, और सब अच्छे दरख़्त काट डाले, सिर्फ़ हरासत के पहाड़ ही के पत्थरों को बाक़ी छोड़ा, पर गोफ़न चलाने वालों ने उसको भी जा घेराऔर उसे मारा।
26 ೨೬ ಮೋವಾಬ್ಯರ ಅರಸನು ತಾನು ಯುದ್ಧದಲ್ಲಿ ಗೆಲ್ಲಲಾರೆನೆಂದು ತಿಳಿದು, ಏಳು ನೂರು ಮಂದಿ ಭಟರೊಡನೆ, ಸೈನ್ಯದೊಳಗೆ ನುಗ್ಗಿ ಎದೋಮ್ಯರ ಅರಸನ ಕಡೆಗೆ ಹೋಗಲು ಪ್ರಯತ್ನಿಸಿದನು. ಆದರೆ ಆಗದೆಹೋಯಿತು.
जब मोआब के बादशाह ने देखा कि जंग उसके लिए निहायत सख़्त हो गई, तो उसने सात सौ तलवार वाले मर्द अपने साथ लिए, ताकि सफ़ चीर कर अदोम के बादशाह तक जा पहुँचे; पर वह ऐसा न कर सके।
27 ೨೭ ಆಗ ಅವನು ತನಗೆ ಬದಲಾಗಿ ಅರಸನಾಗತಕ್ಕ ತನ್ನ ಚೊಚ್ಚಲಮಗನನ್ನು ಹಿಡಿದು ವಧಿಸಿ ಗೋಡೆಯ ಮೇಲೆ ಸರ್ವಾಂಗಹೋಮ ಮಾಡಿದನು. ಇದರಿಂದ ಮೋವಾಬ್ಯರಿಗೆ ಇಸ್ರಾಯೇಲರ ಮೇಲೆ ಕೋಪೋದ್ರೇಕ ಉಂಟಾಗಲು ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹೊರಟುಹೋದರು.
तब उसने अपने पहलौठे बेटे को लिया, जो उसकी जगह बादशाह होता, और उसे दीवार पर सोख़्तनी क़ुर्बानी के तौर पर पेश किया। यूँ इस्राईल पर बड़ा ग़ज़ब हुआ; तब वह उसके पास से हट गए और अपने मुल्क को लौट आए।

< ಅರಸುಗಳು - ದ್ವಿತೀಯ ಭಾಗ 3 >