< ಅರಸುಗಳು - ದ್ವಿತೀಯ ಭಾಗ 7 >

1 ಆಗ ಎಲೀಷನು ಅವನಿಗೆ, “ಯೆಹೋವನ ವಾಕ್ಯವನ್ನು ಕೇಳು, ಆತನು, ‘ನಾಳೆ ಈ ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಿಲಿನಲ್ಲಿ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ, ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಡುವುದು’” ಎನ್ನುತ್ತಾನೆ ಎಂದು ಹೇಳಿದನು.
एलीशाले भने, “परमप्रभुको वचन सुन्‍नुहोस् । परमप्रभु यसो भन्‍नुहुन्छ, 'भोलि यतिबेला सामरियाको मूल ढोकामा एक ग्राम चाँदीमा डेढ माना पिठो र एक ग्राम चाँदीमा तिन माना जौ बिक्री हुनेछ' ।”
2 ಇದನ್ನು ಕೇಳಿ ಅರಸನ ಸಮೀಪವರ್ತಿಯಾದ ಸರದಾರನು ದೇವರ ಮನುಷ್ಯನಿಗೆ, “ಯೆಹೋವನು ಆಕಾಶದಲ್ಲಿ ಕಿಂಡಿಗಳನ್ನು ಕೊರೆದರೂ ಇದು ಸಂಭವಿಸಲಾರದು” ಎನ್ನಲು ಎಲೀಷನು ಅವನಿಗೆ, “ಅದು ಸಂಭವಿಸುವುದನ್ನು ನೀನು ಕಣ್ಣಾರೆ ಕಾಣುವಿ, ಆದರೆ ನೀನು ಅದನ್ನು ಅನುಭವಿಸುವುದಿಲ್ಲ” ಎಂದು ಹೇಳಿದನು.
तब जुन अधिकारीको हातको भरमा राजा हिंड्थे तिनले परमेश्‍वरका मानिसलाई जवाफ दिए र भने, “हेर्नुहोस्, परमेश्‍वरले स्वर्गमा झ्यालहरू बनाउनुभयो भने पनि यसो हुन सक्ला र?” एलीशाले जवाफ दिए, “तिम्रा आफ्नै आँखाले यसो भएको तिमी देख्‍नेछौ, तर तिमीले यो खान पाउनेछैनौ ।”
3 ಊರುಬಾಗಿಲಿನ ಹತ್ತಿರ ನಾಲ್ಕು ಮಂದಿ ಕುಷ್ಠರೋಗಿಗಳಿದ್ದರು. ಅವರು ತಮ್ಮೊಳಗೆ, “ನಾವು ಸಾಯುವ ತನಕ ಇಲ್ಲೇ ಕುಳಿತಿರಬೇಕೋ?
मूल ढोकाको ठिक बाहिर कुष्ठरोग लागेका चार जना मानिस थिए । तिनीहरूले एक-अर्कालाई भने, “हामी नमरेसम्म हामी यहाँ किन बसिरहने?
4 ಪಟ್ಟಣದೊಳಗೆ ಬರವಿರುವುದರಿಂದ ಅಲ್ಲಿ ಹೋದರೂ ಸಾಯಬೇಕು, ಇಲ್ಲಿಯೇ ಕುಳಿತಿದ್ದರೂ ಸಾಯಬೇಕು. ಆದುದರಿಂದ ಹೊರಟುಹೋಗಿ ಅರಾಮ್ಯರ ಪಾಳೆಯವನ್ನು ಸೇರೋಣ. ಅವರು ನಮ್ಮನ್ನು ಉಳಿಸುವುದಾದರೆ ಉಳಿಸಲಿ, ಕೊಲ್ಲುವುದಾದರೆ ಕೊಲ್ಲಲಿ” ಎಂದು ಮಾತನಾಡಿಕೊಂಡರು.
हामी सहरमा जाऔं भनौं भने, सहरमा अनिकाल परेको छ र हामी त्यहाँ मर्नेछौं । हामी यहीँ बसौँ भने पनि हामी मर्नेछौँ । अब हामी अरामीहरूका सेना भएको ठाउँमा जाऔँ । तिनीहरूले हामीलाई जिउँदै राखे भने हामी जिउनेछौँ, र तिनीहरूले हामीलाई मारे भने हामी मर्नेछौँ ।”
5 ಅವರು ಸಾಯಂಕಾಲವಾಗಲು ಅರಾಮ್ಯರ ಪಾಳೆಯಕ್ಕೆ ಹೊರಟರು. ಅವರು ಪಾಳೆಯದ ಅಂಚಿಗೆ ಬಂದಾಗ ಅಲ್ಲಿ ಒಬ್ಬನೂ ಕಾಣಿಸಲಿಲ್ಲ.
त्यसैले अरामी छाउनीभित्र जानलाई तिनीहरू साँझपख उठे । जब तिनीहरू छाउनीको बाहिरी भागमा आइपुगे, त्यहाँ कोही पनि थिएन ।
6 ಕರ್ತನು ಅರಾಮ್ಯರ ಪಾಳೆಯದವರಿಗೆ ರಥರಥಾಶ್ವಸಹಿತವಾದ ಮಹಾಸೈನ್ಯಘೋಷವು ಕೇಳಿಸುವಂತೆ ಮಾಡಿದ್ದರಿಂದ ಅವರು, “ಇಸ್ರಾಯೇಲರ ಅರಸನು ಹಿತ್ತಿಯ, ಐಗುಪ್ತ ಇವುಗಳ ಅರಸರಿಗೆ ಹಣಕೊಟ್ಟು ಅವರನ್ನು ನಮಗೆ ವಿರುದ್ಧವಾಗಿ ಕರೆದುತಂದಿದ್ದಾರೆ” ಅಂದುಕೊಂಡು,
किनकि परमप्रभुले अरामी सेनालाई रथहरू, घोडाहरूको होहल्‍लाजस्‍तै— अर्को ठुलो सेनाको होहल्‍ला सुन्‍ने पार्नुभएको थियो, अनि, अनि तिनीहरूले एक-अर्कालाई भने, “इस्राएलका राजाले हित्तीहरू र मिश्रीहरूका राजाहरूलाई भाडामा लिएर हाम्रो विरुद्धमा आएका छन् ।”
7 ತಮ್ಮ ಗುಡಾರಗಳನ್ನೂ, ಕತ್ತೆ ಕುದುರೆಗಳನ್ನೂ ಪಾಳೆಯದಲ್ಲಿದ್ದುದ್ದೆಲ್ಲವನ್ನೂ ಬಿಟ್ಟು ತಮ್ಮ ಜೀವರಕ್ಷಣೆಗಾಗಿ ಅದೇ ಸಾಯಂಕಾಲದಲ್ಲಿ ಓಡಿಹೋಗಿದ್ದರು.
त्यसैले सिपाहीहरू उठे र साँझमा नै भागे । तिनीहरूले आफ्ना पालहरू, घोडाहरू, गधाहरू र छाउनीलाई जस्ताको तस्तै छाडे र आफ्‍नो ज्यान बचाउन भागे ।
8 ಆ ಕುಷ್ಠರೋಗಿಗಳು ಪಾಳೆಯದ ಅಂಚಿಗೆ ಬಂದಾಗ ಮೊದಲನೆಯ ಡೇರೆಯನ್ನು ಹೊಕ್ಕು ಉಂಡು, ಕುಡಿದು ಅದರಲ್ಲಿದ್ದ ಬೆಳ್ಳಿ ಬಂಗಾರವನ್ನೂ, ಬಟ್ಟೆಗಳನ್ನೂ ತೆಗೆದುಕೊಂಡು ಅಡಗಿಸಿಟ್ಟರು. ಇನ್ನೊಂದು ಡೇರೆಯನ್ನು ಹೊಕ್ಕು ಅಲ್ಲಿಂದಲೂ ತೆಗೆದುಕೊಂಡು ಅಡಗಿಸಿಟ್ಟರು.
जब कुष्‍टरोग लागेका मानिसहरू छाउनीको बाहिरी भागमा आइपुगे, तब तिनीहरू एउटा पालभित्र पसे र खानपान गरे अनि चाँदी, सुन र लुगाहरू उठाए र गएर ती लुकाए । तिनीहरू फर्केर आए र अर्को पालभित्र पसे र त्यहाँबाट पनि लुटका माल लगे र लुकाए ।
9 ಅನಂತರ ಅವರು, “ಇದು ಶುಭವಾರ್ತೆಯ ದಿನವಾಗಿದೆ. ನಾವು ಇದನ್ನು ಪ್ರಕಟಿಸದಿರುವುದು ಒಳ್ಳೇಯದಲ್ಲ. ಬೆಳಗಾಗುವವರೆಗೆ ತಡಮಾಡಿದರೆ ಶಿಕ್ಷೆಗೆ ಪಾತ್ರರಾದೇವು. ಆದುದರಿಂದ ಹೋಗಿ ಅರಸನಿಗೆ ಈ ಸಂಗತಿ ತಿಳಿಸೋಣ” ಎಂದು ಮಾತನಾಡಿಕೊಂಡು ಅಲ್ಲಿಂದ ಹೊರಟರು.
तब तिनीहरूले एक-अर्कालाई भने, “हामीले ठिक गरिरहेका छैनौँ । आजको दिन शुभ खबरको दिन हो, तर हामी यस बारेमा मौन बसिरहेका छौँ । बिहन नभएसम्म हामीले पर्ख्यौं भने हामीमाथि दण्ड आइपर्नेछ । तब हामी अब जाऔं र राजाको घरानालाई भनौं ।”
10 ೧೦ ಊರಬಾಗಿಲಿಗೆ ಬಂದು ಕಾವಲುಗಾರರಿಗೆ, “ನಾವು ಅರಾಮ್ಯರ ಪಾಳೆಯಕ್ಕೆ ಹೋಗಿದ್ದೆವು. ಅಲ್ಲಿ ನಮಗೆ ಯಾರೂ ಕಾಣಿಸಲಿಲ್ಲ, ಮನುಷ್ಯರ ಶಬ್ದವೇ ಕೇಳಿಸಲಿಲ್ಲ. ಕತ್ತೆ ಕುದುರೆಗಳನ್ನು ಅಲ್ಲಲ್ಲಿ ಕಟ್ಟಿಹಾಕಲಾಗಿತ್ತು ಡೇರೆಗಳು ಇದ್ದ ಹಾಗೆಯೇ ಇವೆ” ಎಂದು ಕೂಗಿ ಹೇಳಿದರು.
त्यसैले तिनीहरू गए र सहरका पालेहरूलाई बोलाए । तिनीहरूले उनीहरूलाई यसो भने, “हामी अरामीहरूका छाउनीमा गयौँ तर त्यहाँ कोही थिएन, कुनै मानिसको आवाज त्‍यहाँ सुनिएन, तर त्‍यहाँ घोडाहरू र गधाहरू बाँधिएका थिए अनि पालहरू जस्ताको तस्तै थिए ।”
11 ೧೧ ಬಾಗಿಲು ಕಾಯುವವರು ಕೂಡಲೆ ಅರಸನ ಮನೆಯವರನ್ನು ಕೂಗಿ, ಅವರಿಗೆ ಈ ವರ್ತಮಾನವನ್ನು ತಿಳಿಸಿದರು.
तब पालेहरूले त्यो खबर ठुलो स्‍वरले फैलाए, अनि त्‍यसपछि भित्र राजाको घरानालाई पनि त्‍यो कुरा बताइयो ।
12 ೧೨ ಅರಸನು ರಾತ್ರಿಯಲ್ಲೇ ಎದ್ದು ತನ್ನ ಪರಿವಾರದವರಿಗೆ, “ಅರಾಮ್ಯರ ಉಪಾಯವನ್ನು ಹೇಳುತ್ತೇನೆ ಕೇಳಿರಿ; ನಾವು ಹಸಿವೆಯಿಂದ ಸಾಯುವವರಾಗಿದ್ದೇವೆ ಎಂಬುವುದನ್ನು ಅವರು ಬಲ್ಲರು. ಆದುದರಿಂದ ಪಾಳೆಯವನ್ನು ಬಿಟ್ಟು ಹೋಗಿ ಅಡವಿಯಲ್ಲಿ ಅಡಗಿಕೊಂಡಿದ್ದಾರೆ. ನಾವು ಪಟ್ಟಣದಿಂದ ಹೊರಗೆ ಹೋದ ಕೂಡಲೆ ನಮ್ಮನ್ನು ಜೀವ ಸಹಿತವಾಗಿ ಹಿಡಿದು ಪಟ್ಟಣವನ್ನು ಪ್ರವೇಶಿಸಬೇಕೆಂದಿದ್ದಾರೆ” ಎಂದನು.
तब रातमा राजा उठे र आफ्ना सेवकहरूलाई भने, “अब अरामीहरूले हामीलाई के गरेका छन् भनी म तिमीहरूलाई भन्‍नेछु । हामी भोकाएका छौँ भनी तिनीहरूलाई थाहा छ । त्यसैले तिनीहरू छाउनीबाहिर खेतबारीमा लुक्‍न गएका छन् । तिनीहरू भन्दैछन्, 'जब तिनीहरू सहरबाहिर आउँछन्, तब हामी तिनीहरूलाई जिउँदै समात्‍ने छौँ, र सहरभित्र पस्‍नेछौँ’ ।”
13 ೧೩ ಆಗ ಅವರಲ್ಲೊಬ್ಬನು ಅರಸನಿಗೆ, “ರಾಹುತರು ಪಟ್ಟಣದಲ್ಲಿ ಉಳಿದಿರುವ ಕುದುರೆಗಳಲ್ಲಿ ನಾಲ್ಕೈದು ಕುದುರೆಗಳನ್ನು ತೆಗೆದುಕೊಂಡು ನೋಡುವುದಕ್ಕೆ ಹೋಗಲಿ; ಅವರಿಗೆ ಪಟ್ಟಣದಲ್ಲಿ ಉಳಿದಿರುವ ಇಸ್ರಾಯೇಲರ ಗತಿಯಾಗಲಿ, ಸತ್ತುಹೋದವರ ಗತಿಯಾಗಲಿ, ಸಂಭವಿಸುವುದಷ್ಟೆ” ಎಂದು ಹೇಳಿದನು.
राजाका एक जना सेवकले जवाफ दिए र भने, “केही मानिसहरूले सहरमा छाडिएका पाँचवटा घोडा लिएर जाऊन् । तिनीहरू इस्राएलका बाँकी जनसङ्ख्याजस्तै छन् अर्थात् अधिकांश मरिसकेका छन् । हामी तिनीहरूलाई पठाऊँ र हेरौँ।”
14 ೧೪ ಕೂಡಲೆ ಅರಸನು ಎರಡು ಜೋಡಿ ಕುದುರೆಗಳನ್ನು ತರಿಸಿ, ಅರಾಮ್ಯರ ಸೈನ್ಯವು ಎಲ್ಲಿರುತ್ತದೆ ಎಂಬುವುದನ್ನು ನೋಡಿ, ಬರುವುದಕ್ಕಾಗಿ ರಾಹುತರನ್ನು ಕಳುಹಿಸಿದನು.
त्यसैले तिनीहरूले घोडाहरूसँगै दुईवटा रथ लिए र राजाले तिनीहरूलाई यसो भनेर अरामीहरूको सेनाको पछि पठाए, “जाओ र हेर ।”
15 ೧೫ ಅವರು ಯೊರ್ದನ್ ನದಿಯವರೆಗೂ ಹೋಗಿ, ಅವಸರದಿಂದ ಓಡಿಹೋದ ಅರಾಮ್ಯರು ದಾರಿಯಲ್ಲೆಲ್ಲಾ ತಮ್ಮ ಬಟ್ಟೆಗಳನ್ನು ಸಾಮಾನುಗಳನ್ನು ಬಿಸಾಡಿದ್ದನ್ನೂ ಕಂಡು, ಹಿಂದಿರುಗಿ ಬಂದು ಅರಸನಿಗೆ ತಿಳಿಸಿದರು.
तिनीहरू यर्दन नदीसम्मै तिनीहरूका पछि गए र अरामीहरूले हतारमा फालेका लुगा र सामनहरूले सबै बाटो भरिएका थिए । त्यसैले सन्देशवाहकहरू फर्के र राजालाई बताइदिए ।
16 ೧೬ ಆಗ ಜನರು ಹೊರಗೆ ಹೋಗಿ ಅರಾಮ್ಯರ ಪಾಳೆಯವನ್ನು ಸೂರೆಮಾಡಿಬಿಟ್ಟರು. ಯೆಹೋವನ ಮಾತಿನಂತೆ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ, ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಟ್ಟವು.
मानिसहरू बाहिर निस्के र अरामीहरूको छाउनी लुटे । त्यसैले जस्‍तो परमप्रभुले भन्‍नुभएको थियो त्‍यस्‍तै भयो, एक ग्राम चाँदीमा डेढ माना पिठो र एक ग्राम चाँदीमा तिन माना जौ बेचियो ।
17 ೧೭ ಅರಸನು ತನ್ನ ಸಹವರ್ತಿಯಾದ ಸರದಾರನನ್ನು ಊರಬಾಗಿಲು ಕಾಯುವುದಕ್ಕಾಗಿ ಕಳುಹಿಸಿದ್ದರಿಂದ, ಅವನು ಜನರಿಂದ ತುಳಿಯಲ್ಪಟ್ಟು ಸತ್ತು ಹೋದನು. ಹೀಗೆ ದೇವರ ಮನುಷ್ಯನು ಅರಸನ ಜೊತೆಯಲ್ಲಿ, ತನ್ನ ಬಳಿಗೆ ಬಂದಿದ್ದ ಆ ಸರದಾರನಿಗೆ ಹೇಳಿದ ಮಾತು ನೆರವೇರಿತು.
जसको हातमा भर परेर राजा हिंड्थे ती अधिकारीलाई तिनले मूल ढोका हेर्ने जिम्मा दिएका थिए र मानिसहरूले तिनलाई मूल ढोकामा कुल्चे । राजाले परमेश्‍वरका मानिसलाई तिनको घरमा भेट्न जाँदा तिनले अगमवाणी गरेजस्‍तै तिनको मृत्‍यु भयो ।
18 ೧೮ ದೇವರ ಮನುಷ್ಯನು ಅರಸನಿಗೆ, “ನಾಳೆ ಇಷ್ಟು ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಿಲಿನಲ್ಲಿ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಡುವವು” ಎಂದು ಹೇಳಿದನು.
त्‍यसैले त्‍यस्‍तै भयो जास्‍तो परमेश्‍वरका मानिसले राजालाई यसो भनेका थिए, “यति बेलातिर सामरियाको मूल ढोकामा एक ग्राम चाँदीमा तिन माना जौ र एक ग्राम चाँदीमा डेढ माना पिठो पाइनेछ ।”
19 ೧೯ ಆ ಸರದಾರನು ದೇವರ ಮನುಷ್ಯನಿಗೆ, “ಯೆಹೋವನು ಆಕಾಶದಲ್ಲಿ ಕಿಂಡಿಗಳನ್ನು ಕೊರೆದರೂ, ಇದು ಸಂಭವಿಸಲು ಸಾಧ್ಯವಿಲ್ಲ?” ಎಂದು ಹೇಳಿದ್ದನು. ಆಗ ದೇವರ ಮನುಷ್ಯನಾದ ಎಲೀಷನು ಅವನಿಗೆ, “ನೀನು, ಅದನ್ನು ಕಣ್ಣಾರೆ ಕಾಣುವಿ, ಆದರೆ ಅದನ್ನು ಅನುಭವಿಸುವುದಿಲ್ಲ” ಎಂದು ನುಡಿದಿದ್ದನು.
ती अधिकारीले परमेश्‍वरका मानिसलाई जवाफ दिएका थिए, “हेर्नुहोस्, परमेश्‍वरले स्वर्गमा झ्यालहरू बनाउनुभयो भने पनि यसो हुन सक्ला र?” एलीशाले जवाफ दिएका थिए, “तिम्रा आफ्नै आँखाले यसो भएको तिमी देख्‍नेछौ, तर तिमीले यो खान पाउनेछैनौ ।”
20 ೨೦ ಅವನು ಊರುಬಾಗಿಲಿನಲ್ಲಿ ಜನರಿಂದ ತುಳಿಯಲ್ಪಟ್ಟು ಮರಣ ಹೊಂದಿದನು. ಎಲೀಷನು ಹೇಳಿದ ಈ ಮಾತು ನೆರವೇರಿತು.
तिनलाई ठिक त्यस्तै हुन आयो, किनकि मानिसहरूले तिनलाई मूल ढोकामा कुल्चे र तिनी मरे ।

< ಅರಸುಗಳು - ದ್ವಿತೀಯ ಭಾಗ 7 >