< ಪೇತ್ರನು ಬರೆದ ಎರಡನೆಯ ಪತ್ರಿಕೆ 2 >

1 ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು.
Ἐγένοντο δὲ καὶ ψευδοπροφῆται ἐν τῷ λαῷ, ὡς καὶ ἐν ὑμῖν ἔσονται ψευδοδιδάσκαλοι, οἵτινες παρεισάξουσιν αἱρέσεις ἀπωλείας, καὶ τὸν ἀγοράσαντα αὐτοὺς δεσπότην ἀρνούμενοι, ἐπάγοντες ἑαυτοῖς ταχινὴν ἀπώλειαν.
2 ಅವರ ದುಷ್ಕರ್ಮಗಳ ಮಾರ್ಗವನ್ನು ಅನೇಕರು ಅನುಸರಿಸುವರು. ಅವರ ನಿಮಿತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವುದು.
καὶ πολλοὶ ἐξακολουθήσουσιν αὐτῶν ταῖς ἀσελγείαις, δι’ οὓς ἡ ὁδὸς τῆς ἀληθείας βλασφημηθήσεται·
3 ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ.
καὶ ἐν πλεονεξίᾳ πλαστοῖς λόγοις ὑμᾶς ἐμπορεύσονται· οἷς τὸ κρίμα ἔκπαλαι οὐκ ἀργεῖ, καὶ ἡ ἀπώλεια αὐτῶν οὐ νυστάζει.
4 ಹೇಗೆಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ ಕತ್ತಲೆಯ ಕೂಪಕ್ಕೆ ಒಪ್ಪಿಸಿದನು. (Tartaroō g5020)
εἰ γὰρ ὁ θεὸς ἀγγέλων ἁμαρτησάντων οὐκ ἐφείσατο, ἀλλὰ σιροῖς ζόφου ταρταρώσας παρέδωκεν εἰς κρίσιν τηρουμένους, (Tartaroō g5020)
5 ಆತನು ಭಕ್ತಿಹೀನರಾದ ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಅವರ ಮೇಲೆ ಜಲಪ್ರಳಯವನ್ನು ಬರಮಾಡಿದನು. ಆದರೆ ಸುನೀತಿಯನ್ನು ಸಾರುತ್ತಿದ್ದ ನೋಹನನ್ನೂ ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಉಳಿಸಿದನು.
καὶ ἀρχαίου κόσμου οὐκ ἐφείσατο, ἀλλὰ ὄγδοον Νῶε δικαιοσύνης κήρυκα ἐφύλαξεν, κατακλυσμὸν κόσμῳ ἀσεβῶν ἐπάξας,
6 ಆತನು ಸೊದೋಮ್ ಗೊಮೋರ ಪಟ್ಟಣಗಳನ್ನು ಸುಟ್ಟು ಬೂದಿಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರಿಗೆ ಬರುವ ದುರ್ಗತಿಯನ್ನು ಸೂಚಿಸುವುದಕ್ಕಾಗಿ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.
καὶ πόλεις Σοδόμων καὶ Γομόρρας τεφρώσας καταστροφῇ κατέκρινεν, ὑπόδειγμα μελλόντων ἀσεβεῖν τεθεικώς,
7 ಆದರೆ ದೇವರು ಆ ದುಷ್ಟರ ಅನೈತಿಕ ನಡತೆಗೆ ನೊಂದುಕೊಂಡಿದ್ದ ನೀತಿವಂತನಾದ ಲೋಟನನ್ನು ಕಾಪಾಡಿದನು.
καὶ δίκαιον Λὼτ καταπονούμενον ὑπὸ τῆς τῶν ἀθέσμων ἐν ἀσελγείᾳ ἀναστροφῆς ἐρρύσατο·
8 ಏಕೆಂದರೆ ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ಬಹಳವಾಗಿ ನೊಂದುಕೊಂಡನು.
βλέμματι γὰρ καὶ ἀκοῇ ὁ δίκαιος ἐνκατοικῶν ἐν αὐτοῖς ἡμέραν ἐξ ἡμέρας ψυχὴν δικαίαν ἀνόμοις ἔργοις ἐβασάνιζεν·
9 ಕರ್ತನು ಭಕ್ತರನ್ನು ಕಷ್ಟಗಳಿಂದ ರಕ್ಷಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವನಾಗಿದ್ದಾನೆ.
οἶδεν κύριος εὐσεβεῖς ἐκ πειρασμῶν ῥύεσθαι, ἀδίκους δὲ εἰς ἡμέραν κρίσεως κολαζομένους τηρεῖν,
10 ೧೦ ಮುಖ್ಯವಾಗಿ ಶಾರೀರಿಕ ಬಂಡುತನದ ದುರಾಶೆಗಳಲ್ಲಿ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೇ ಸ್ವೇಚ್ಛಾಪರರಾಗಿದ್ದಾರೆ. ಮಹಿಮಾಪದವಿಯವರನ್ನು ನಿರ್ಭಯವಾಗಿ ದೂಷಿಸುವರು.
μάλιστα δὲ τοὺς ὀπίσω σαρκὸς ἐν ἐπιθυμίᾳ μιασμοῦ πορευομένους καὶ κυριότητος καταφρονοῦντας. τολμηταί, αὐθάδεις, δόξας οὐ τρέμουσιν βλασφημοῦντες,
11 ೧೧ ದೇವದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಅವರಿಗೆ ವಿರೋಧವಾಗಿ ದೂಷಣೆಯನ್ನು, ನಿಂದೆಯನ್ನು ಹೇಳದಿರಲು, ಆ ಗರ್ವಿಷ್ಠರು ಮಹಿಮಾಪದವಿಗಳನ್ನು ದೂಷಿಸಲು ಹಿಂಜರಿಯುವುದಿಲ್ಲ.
ὅπου ἄγγελοι ἰσχύϊ καὶ δυνάμει μείζονες ὄντες οὐ φέρουσιν κατ’ αὐτῶν παρὰ κυρίῳ βλάσφημον κρίσιν.
12 ೧೨ ಸ್ವಾಭಾವಿಕವಾಗಿ ಸೆರೆಹಿಡಿಯಲ್ಪಟ್ಟು ನಾಶವಾಗುವುದಕ್ಕೆ ಹುಟ್ಟಿರುವ ವಿವೇಕಶೂನ್ಯ ಪ್ರಾಣಿಗಳಂತಿರುವ ಈ ದುರ್ಬೋಧಕರು ತಮಗೆ ತಿಳಿಯದವುಗಳ ವಿಷಯವಾಗಿ ದೂಷಿಸುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ತಾವೇ ಸಂಪೂರ್ಣ ನಾಶವಾಗುವರು.
οὗτοι δέ, ὡς ἄλογα ζῷα γεγεννημένα φυσικὰ εἰς ἅλωσιν καὶ φθοράν, ἐν οἷς ἀγνοοῦσιν βλασφημοῦντες, ἐν τῇ φθορᾷ αὐτῶν καὶ φθαρήσονται,
13 ೧೩ ತಮ್ಮ ದುರ್ನೀತಿಗೆ ಸರಿಯಾದ ದುಷ್ಫಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವುದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮೊಂದಿಗೆ ಔತಣ ಮಾಡುತ್ತಿರುವಾಗ ವಂಚಕರಾಗಿದ್ದು ಉಂಡು ಕುಡಿದು ಕಳಂಕಕ್ಕೂ, ಅವಮಾನಕ್ಕೂ ಕಾರಣರಾಗಿದ್ದಾರೆ.
κομιούμενοι μισθὸν ἀδικίας· ἡδονὴν ἡγούμενοι τὴν ἐν ἡμέρᾳ τρυφήν, σπίλοι καὶ μῶμοι ἐντρυφῶντες ἐν ταῖς ἀπάταις αὐτῶν συνευωχούμενοι ὑμῖν,
14 ೧೪ ಇವರು ವ್ಯಭಿಚಾರಿಣಿಯನ್ನು ಕಂಡು ಆನಂದಿಸುವವರೂ, ಪಾಪವನ್ನು ಕಂಡು ತೃಪ್ತಿಹೊಂದದ ಕಣ್ಣುಳ್ಳವರೂ, ಚಂಚಲತೆ ಮನಸ್ಸುವುಳ್ಳವರನ್ನು ಮರುಳುಗೊಳಿಸುವವರೂ, ಹಣದಾಸೆಯಲ್ಲಿ ಪರಿಣಿತಿ ಪಡೆದ ಹೃದಯವುಳ್ಳವರೂ, ಶಾಪಗ್ರಸ್ತ ಮಕ್ಕಳೂ ಆಗಿದ್ದಾರೆ.
ὀφθαλμοὺς ἔχοντες μεστοὺς μοιχαλίδος καὶ ἀκαταπαύστους ἁμαρτίας, δελεάζοντες ψυχὰς ἀστηρίκτους, καρδίαν γεγυμνασμένην πλεονεξίας ἔχοντες, κατάρας τέκνα,
15 ೧೫ ಇವರು ಸನ್ಮಾರ್ಗವನ್ನು ಬಿಟ್ಟವರು. ಹಾದಿ ತಪ್ಪಿದವರು ಮತ್ತು ಬೇಯೋರಿನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದವರಾಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಭಾವನೆಯನ್ನು ಪ್ರೀತಿಸಿದನು.
καταλείποντες εὐθεῖαν ὁδὸν ἐπλανήθησαν, ἐξακολουθήσαντες τῇ ὁδῷ τοῦ Βαλαὰμ τοῦ Βοσόρ, ὃς μισθὸν ἀδικίας ἠγάπησεν
16 ೧೬ ಆದರೆ ಅವನ ದುಷ್ಟ ಕೃತ್ಯಕ್ಕೆ ಖಂಡನೆಯಾಯಿತು. ಮೂಕ ಪ್ರಾಣಿಯಾದ ಕತ್ತೆಯು ಮನುಷ್ಯಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನವನ್ನು ಅಡ್ಡಿ ಮಾಡಿತು.
ἔλεγξιν δὲ ἔσχεν ἰδίας παρανομίας· ὑποζύγιον ἄφωνον ἐν ἀνθρώπου φωνῇ φθεγξάμενον ἐκώλυσεν τὴν τοῦ προφήτου παραφρονίαν.
17 ೧೭ ಇವರು ನೀರಿಲ್ಲದ ಹಾಳು ಬಾವಿಗಳೂ, ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮೋಡಗಳೂ ಆಗಿದ್ದಾರೆ. ಇಂಥವರಿಗಾಗಿ ಕಗ್ಗತ್ತಲೆಯನ್ನು ಸಂಗ್ರಹಿಸಿ ಇಡಲಾಗಿದೆ. (questioned)
οὗτοί εἰσιν πηγαὶ ἄνυδροι καὶ ὁμίχλαι ὑπὸ λαίλαπος ἐλαυνόμεναι, οἷς ὁ ζόφος τοῦ σκότους τετήρηται.
18 ೧೮ ಕೇಡುಕಿನ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ಪೊಳ್ಳು ಮಾತುಗಳನ್ನಾಡಿ ಕೆಟ್ಟ ಕಾಮಾಭಿಲಾಷೆ ಹುಟ್ಟಿಸಿ ಅತಿಯಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
ὑπέρογκα γὰρ ματαιότητος φθεγγόμενοι δελεάζουσιν ἐν ἐπιθυμίαις σαρκὸς ἀσελγείαις τοὺς ὀλίγως ἀποφεύγοντας τοὺς ἐν πλάνῃ ἀναστρεφομένους,
19 ೧೯ ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನಮಾಡುತ್ತಾರೆ. ಆದರೆ ತಾವೇ ಕೆಟ್ಟತನಕ್ಕೆ ದಾಸರಾಗಿದ್ದಾರೆ. ಒಬ್ಬನು ಯಾವುದಕ್ಕೆ ಸೋಲುವನೋ ಅವನು ಅದರ ದಾಸನಾಗಿದ್ದಾನಷ್ಟೇ.
ἐλευθερίαν αὐτοῖς ἐπαγγελλόμενοι, αὐτοὶ δοῦλοι ὑπάρχοντες τῆς φθορᾶς· ᾧ γάρ τις ἥττηται, τούτῳ δεδούλωται.
20 ೨೦ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನನ್ನು ಕುರಿತಾದ ಪರಿಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು.
εἰ γὰρ ἀποφυγόντες τὰ μιάσματα τοῦ κόσμου ἐν ἐπιγνώσει τοῦ κυρίου ἡμῶν καὶ σωτῆρος Ἰησοῦ Χριστοῦ τούτοις δὲ πάλιν ἐμπλακέντες ἡττῶνται, γέγονεν αὐτοῖς τὰ ἔσχατα χείρονα τῶν πρώτων.
21 ೨೧ ಅವರು ನೀತಿಮಾರ್ಗವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯನ್ನು ಬಿಟ್ಟು ದೂರ ಹೋಗುವುದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಹೋಗಿದ್ದರೆ ಚೆನ್ನಾಗಿತ್ತು.
κρεῖσσον γὰρ ἦν αὐτοῖς μὴ ἐπεγνωκέναι τὴν ὁδὸν τῆς δικαιοσύνης ἢ ἐπιγνοῦσιν ὑποστρέψαι ἐκ τῆς παραδοθείσης αὐτοῖς ἁγίας ἐντολῆς.
22 ೨೨ “ನಾಯಿ ತಾನು ಕಕ್ಕಿದ್ದನ್ನು ನೆಕ್ಕುವುದಕ್ಕೆ ತಿರುಗಿಕೊಂಡಿತು. ಮತ್ತು ಮೈತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವುದಕ್ಕೆ ಹೋಯಿತು.” ಎಂಬ ಗಾದೆ ಅವರಿಗೆ ಸರಿಯಾಗಿ ಅನ್ವಯಿಸುತ್ತದೆ.
συμβέβηκεν αὐτοῖς τὸ τῆς ἀληθοῦς παροιμίας, κύων ἐπιστρέψας ἐπὶ τὸ ἴδιον ἐξέραμα, καί, ὗς λουσαμένη εἰς κυλισμὸν βορβόρου.

< ಪೇತ್ರನು ಬರೆದ ಎರಡನೆಯ ಪತ್ರಿಕೆ 2 >