< ಸಮುವೇಲನು - ದ್ವಿತೀಯ ಭಾಗ 11 >

1 ರಾಜರೆಲ್ಲರು ಸಾಮಾನ್ಯವಾಗಿ ವಸಂತಕಾಲದ ಪ್ರಾರಂಭದಲ್ಲಿ ಯುದ್ಧಕ್ಕೆ ಹೊರಡುವ ಸಮಯವನ್ನು ಗೊತ್ತುಮಾಡುತ್ತಿದ್ದರು. ದಾವೀದನು ಯೋವಾಬನನ್ನೂ, ತನ್ನ ಸೇವಕರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಯುದ್ಧಕ್ಕೆ ಕಳುಹಿಸಿದನು. ಇವರು ಹೋಗಿ ಅಮ್ಮೋನಿಯರ ಪ್ರಾಂತ್ಯಗಳನ್ನು ನಾಶ ಮಾಡಿ ರಬ್ಬಕ್ಕೆ ಮುತ್ತಿಗೆ ಹಾಕಿದರು. ಆದರೆ ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು.
बसन्त ऋतुमा यस्‍तो भयो, यो समयमा राजाहरू सामान्यतया युद्धमा जान्छन्, जसले गर्दा दाऊदले योआब, तिनका सेवकहरू र इस्राएलका सबै फौजलाई पठाए । तिनीहरूले अम्‍मोनका फौजलाई नाश गरे र रब्बालाई घराबन्दी गरे । तर दाऊदचाहिं यरूशलेममा नै बसे ।
2 ಅವನು ಒಂದು ದಿನ ಸಂಜೆ ಹೊತ್ತಿನಲ್ಲಿ ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಅವನು ಅಲ್ಲಿಂದ ಬಹು ಸುಂದರಿಯಾದ ಒಬ್ಬ ಸ್ತ್ರೀ ಸ್ನಾನಮಾಡುವುದನ್ನು ಕಂಡನು.
त्यसैले एक साँझ यस्‍तो भयो, दाऊद आफ्नो ओछ्‍यानबाट उठे र आफ्‍नो दरबारको छतमा हिंडिरहे । त्यहाँबाट तिनले एक जना स्‍त्रीलाई देखे जो नुहाइरहेकी थिइन्, र ती महिला हेर्दा साह्रै सुन्दरी थिइन् ।
3 ಕೂಡಲೆ ದಾವೀದನು ಒಬ್ಬನನ್ನು ಕರೆದು, “ಆ ಸ್ತ್ರೀ ಯಾರು?” ಎಂದು ವಿಚಾರಿಸಲು ಅವನು, “ಆಕೆಯು ಎಲೀಯಾಮನ ಮಗಳೂ, ಹಿತ್ತಿಯನಾದ ಊರೀಯನ ಹೆಂಡತಿಯೂ ಆಗಿರುವ ಬತ್ಷೆಬೆ ಅಲ್ಲವೇ?” ಎಂದು ಉತ್ತರ ಕೊಟ್ಟನು.
त्यसैले दाऊदले मानिसहरू बोलाए र ती स्‍त्रीलाई चिन्‍नेहरूलाई सोधे । कसैले भन्यो, “के यिनी एलीआमकी छोरी बतशेबा र हित्ती उरियाहकी पत्‍नी होइनन् र?”
4 ಆಗ ದಾವೀದನು ಆಗ ತಾನೇ ಋತುಸ್ನಾನಮಾಡಿಕೊಂಡಿದ್ದ ಆಕೆಯನ್ನು ಕರೆದು ತರುವಂತೆ ದೂತರನ್ನು ಕಳುಹಿಸಿದನು. ಆಕೆಯು ಬರಲು ಅವನು ಆಕೆಯನ್ನು ಸಂಗಮಿಸಿದನು. ಅನಂತರ ಆಕೆಯು ತನ್ನ ಮನೆಗೆ ಹೋದಳು.
दाऊदले दूतहरू पठाए र तिनलाई ल्याए । तिनकहाँ उनी आइन् र तिनी उनीसँग सुते (किनकि उनले आफूलाई रजस्वलाबाट भर्खरै मात्र शुद्ध पारेकी थिइन्)। त्‍यसपछि उनी आफ्नै घरमा फर्किन् ।
5 ಆಕೆಯು ತಾನು ಗರ್ಭಧರಿಸಿದ್ದು ಗೊತ್ತಾದಾಗ ದಾವೀದನಿಗೆ ವರ್ತಮಾನ ಕಳುಹಿಸಿದಳು.
ती स्‍त्री गर्भवती भइन् र उनले दाऊदलाई खबर पठाइन् र भनिन् । उनले भनिन्, “म गर्भवती भएछु ।”
6 ಆಗ ದಾವೀದನು ದೂತರ ಮುಖಾಂತರವಾಗಿ ಯೋವಾಬನಿಗೆ, “ಹಿತ್ತಿಯನಾದ ಊರೀಯನನ್ನು ನನ್ನ ಬಳಿಗೆ ಕಳುಹಿಸು” ಎಂದು ಹೇಳಿ ಕಳುಹಿಸಿದನು. ಅವನು ಊರೀಯನನ್ನು ಕಳುಹಿಸಿದನು.
त्यसपछि दाऊदले यआबलाई यसो भनेर खबर पठाए, “हित्ती उरियाहलाई मकहाँ पठाऊ ।” त्यसैले योआबले उरियाहलाई दाऊदकहाँ पठाए ।
7 ಊರೀಯನು ಬಂದಾಗ ದಾವೀದನು, “ಯೋವಾಬನೂ ಮತ್ತು ಸೈನ್ಯದವರೂ ಹೇಗಿರುತ್ತಾರೆ? ಯುದ್ಧವು ಹೇಗೆ ನಡೆದಿದೆ?” ಎಂದು ವಿಚಾರಿಸಿದ, ನಂತರ
जब उरियाह आइपुगे, तब दाऊदले योआब कस्ता छन्, फौज कस्तो छ र युद्ध कस्तो भइरहेको छ भनी सोधपुछ गरे ।
8 ಅವನಿಗೆ, “ಮನೆಗೆ ಹೋಗಿ ಕೈಕಾಲು ತೊಳೆದುಕೋ” ಎಂದು ಹೇಳಿದನು. ಊರೀಯನು ಅರಮನೆಯಿಂದ ಹೊರಟ ಕೂಡಲೆ ಅವನ ಹಿಂದೆಯೆ ಅರಸನ ಭೋಜನ ಪದಾರ್ಥಗಳು ಹೋದವು.
दाऊदले उरियाहलाई भने, “तल आफ्नो घरमा जाऊ र आफ्नो खुट्टा धोऊ ।” त्यसैले उरियाह राजाको दरबारबाट गए र राजाले उरियाह गएपछि तिनको पछिपछि उपहार पठाए ।
9 ಆದರೆ ಊರೀಯನು ತನ್ನ ಮನೆಗೆ ಹೋಗದೆ ಅರಸನ ಸೇವಕರೊಡನೆ ಅರಮನೆಯ ಬಾಗಿಲಲ್ಲೇ ಮಲಗಿಕೊಂಡನು.
तर उरियाह राजाको दरबारको ढोकामा आफ्ना मालिकका सेवकहरूसँगै सुते र तिनी तल आफ्नो घरमा गएनन् ।
10 ೧೦ ಊರೀಯನು ತನ್ನ ಮನೆಗೆ ಹೋಗಲಿಲ್ಲ ಎಂಬ ವರ್ತಮಾನವು ದಾವೀದನಿಗೆ ತಿಳಿದಾಗ ಅವನು ಊರೀಯನಿಗೆ, “ನೀನು ಪ್ರಯಾಣಮಾಡಿಕೊಂಡು ಬಂದಿಯಲ್ಲಾ, ಯಾಕೆ ಮನೆಗೆ ಹೋಗಲಿಲ್ಲ?” ಅಂದನು.
जब तिनीहरूले दाऊदलाई भने, “उरियाह तल आफ्नो घरमा गएनन् ।” दाऊदले उरियाहलाई भने, “के तिमी यात्राबाट आएका होइनौ? तिमी तल आफ्नो घरमा किन नगएको?”
11 ೧೧ ಅದಕ್ಕೆ ಊರೀಯನು, “ಒಡಂಬಡಿಕೆಯ ಮಂಜೂಷವೂ, ಇಸ್ರಾಯೇಲ್ಯರೂ, ಯೆಹೂದ್ಯರೂ ಗುಡಾರಗಳಲ್ಲಿ ವಾಸವಾಗಿದ್ದಾರೆ. ನನ್ನ ಒಡೆಯನಾದ ಯೋವಾಬನೂ, ಅವನ ಸೇವಕರೂ ಬಯಲಿನಲ್ಲಿ ಪಾಳೆಯಮಾಡಿಕೊಂಡಿದ್ದಾರೆ. ಹೀಗಿರುವಾಗ ನಾನು ಮಾತ್ರ ನನ್ನ ಮನೆಗೆ ಹೋಗಿ ಊಟಮಾಡಿ, ಕುಡಿದು, ಹೆಂಡತಿಯೊಡನೆ ಮಲಗಿಕೊಳ್ಳುವುದು ಹೇಗೆ? ನಿನ್ನಾಣೆ, ನಿನ್ನ ಜೀವದ ಆಣೆ, ನಾನು ಇಂಥದ್ದನ್ನು ಮಾಡುವುದೇ ಇಲ್ಲ” ಎಂದು ಉತ್ತರಕೊಟ್ಟನು.
उरियाहले जवाफ दिए, “सन्दुक, इस्राएल र यहूदा पालमा बसिरहेका छन्, अनि मेरो मालिक योआब र मेरा मलिकका सेवकहरू खुल्‍ला मैदानमा छाउनीमा छन् । तब म आफ्‍नो घरमा खान, पिउन र मेरो पत्‍नीसँग सुत्‍नलाई कसरी जानु? जस्तो तपाईं जीवित हुनुहुन्छ, म यसो गर्ने छैन ।”
12 ೧೨ ಆಗ ದಾವೀದನು ಅವನಿಗೆ, “ನೀನು ಈ ಹೊತ್ತು ಇಲ್ಲೇ ಇರು. ನಾಳೆ ನಿನ್ನನ್ನು ಕಳುಹಿಸುತ್ತೇನೆ” ಎಂದು ಆಜ್ಞಾಪಿಸಿದನು. ಊರೀಯನು ಆ ದಿನ ಯೆರೂಸಲೇಮಿನಲ್ಲೇ ಇದ್ದನು.
त्यसैले दाऊदले उरियाहलाई भने, “आज पनि यहीं बस र म तिमीलाई भोलि पठाउने छु ।” त्यसैले उरियाह त्यस दिन र अर्को दिन यरूशलेममा नै बसे ।
13 ೧೩ ಮರುದಿನ ದಾವೀದನು ಅವನನ್ನು ಅನ್ನಪಾನಗಳನ್ನೂ ತೆಗೆದುಕೊಳ್ಳಬೇಕೆಂದು ತನ್ನ ಮನೆಗೆ ಕರೆದುಕೊಂಡು ಹೋಗಿ, ಮತ್ತನನ್ನಾಗಿ ಮಾಡಿದನು. ಆದರೆ ಆ ರಾತ್ರಿಯಲ್ಲಿಯೂ ಅವನು ಹೋಗಿ ಯಜಮಾನನ ಸೇವಕರ ಹತ್ತಿರ ಹಾಸಿಗೆ ಹಾಸಿಕೊಂಡು ಮಲಗಿಕೊಂಡನೇ ಹೊರತು ತನ್ನ ಮನೆಗೆ ಹೋಗಲಿಲ್ಲ.
जब दाऊदले उनलाई बोलाए, उनले तिनको सामु खाए र पिए र दाऊदले तिनलाई मत्‍याए । साँझमा उरियाह आफ्नो मालिकका सेवकहरूसँगै भएको आफ्‍नो ओछ्‍यानमा सुत्‍न गए । उनी तल आफ्नो घरमा गएनन् ।
14 ೧೪ ಮರುದಿನ ಬೆಳಿಗ್ಗೆ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು ಅದನ್ನು ಊರೀಯನ ಕೈಯಲ್ಲಿ ಕೊಟ್ಟು ಕಳುಹಿಸಿದನು.
त्यसैले बिहान दाऊदले योआबलाई पत्र लेखे र यो उरियाहको हातमा पठाए ।
15 ೧೫ ಅದರಲ್ಲಿ, “ಊರೀಯನು ಗಾಯಗೊಂಡು ಸಾಯುವಂತೆ ಅವನನ್ನು ಘೋರ ಯುದ್ಧ ನಡೆಯುತ್ತಿರುವ ಕಡೆ ಮುಂಭಾಗದಲ್ಲಿ ನಿಲ್ಲಿಸಿ, ನೀವು ಹಿಂದಕ್ಕೆ ಸರಿದುಕೊಳ್ಳಿರಿ” ಎಂಬುದಾಗಿ ಬರೆದಿದ್ದನು.
दाऊदले पत्र यसो भनेर लेखे, “धेरै भयङ्‍कर युद्धको अग्र पङ्‍तीमा उरियाहलाई राख्‍नू र त्यसबाट पछि हट्नू, ताकि त्यसलाई प्रहार गरियोस् र मारियोस् ।”
16 ೧೬ ಯೋವಾಬನು ಪಟ್ಟಣಕ್ಕೆ ಮುತ್ತಿಗೆ ಹಾಕುವಾಗ ಶೂರರಾದ ಶತ್ರುಸೈನಿಕರು ಎಲ್ಲಿರುತ್ತಾರೆಂದು ಗೊತ್ತುಮಾಡಿಕೊಂಡು ಊರೀಯನನ್ನು ಅಲ್ಲಿ ನಿಲ್ಲಿಸಿದನು.
त्यसैले जब योआबले सहरमाथिको घेराबन्धीलाई हेरे, तब तिनले लड्नलाई बलियो शत्रु सिपाहीहरू छन् भनी जानेका ठाउँमा उरियाहलाई खटाए ।
17 ೧೭ ಆ ಊರಿನ ಜನರು ಹೊರಗೆ ಬಂದು ಯೋವಾಬನೊಡನೆ ಕಾದಾಡಿದಾಗ ದಾವೀದನ ಸೇವಕರಲ್ಲಿ ಕೆಲವರು ಸತ್ತರು. ಹಿತ್ತಿಯನಾದ ಊರೀಯನೂ ಸಹ ಸತ್ತನು.
जब सहरका मानिसहरू बाहिर निस्‍के र योआबका फौजसँग युद्ध लडे, तब दाऊदका केही सिपाहीहरू मरे र हित्ती उरियाहलाई पनि त्यहीं मारियो ।
18 ೧೮ ಅನಂತರ ಯೋವಾಬನು ಒಬ್ಬ ದೂತನನ್ನು ಕರೆದು ಅವನಿಗೆ, “ನೀನು ಹೋಗಿ ದಾವೀದನಿಗೆ ಯುದ್ಧ ವರ್ತಮಾನವನ್ನೆಲ್ಲಾ ತಿಳಿಸು.
जब योआबले युद्धको बारेमा हरेक खबर दाऊदलाई पठाए,
19 ೧೯ ನೀನು ಯುದ್ಧ ಸಮಾಚಾರವನ್ನು ಹೇಳಿ ಮುಗಿಸಿದ ನಂತರ ಅರಸನು ಕೋಪಗೊಂಡು ನಿನ್ನನ್ನು,
तब तिनले दूतहरूलाई यसो भनेर आज्ञा दिए, “जब तैंले राजालाई युद्धका बारेमा सबै कुराहरू भनेर सिद्ध्याउँछस्,
20 ೨೦ ‘ನೀವು ಯುದ್ಧ ಮಾಡುವುದಕ್ಕಾಗಿ ಪಟ್ಟಣದ ಸಮೀಪಕ್ಕೆ ಹೋದದ್ದೇಕೆ? ಶತ್ರುಗಳು ಊರಗೋಡೆಯ ಮೇಲಣಿಂದ ಬಾಣಗಳನ್ನು ಎಸೆಯುವರೆಂದು ನಿಮಗೆ ತಿಳಿದಿರಲಿಲ್ಲವೋ?
तब राजा रिसाउन सक्‍छन् र तिनले भन्‍ने छन्, 'तिमीहरू युद्ध गर्न सहरको यति नजिक किन गयौ? के उनीहरूले पर्खालबाट काँड हान्छन् भन्‍ने तिमीहरूले जानेनौ?
21 ೨೧ ಯೆರುಬ್ಬೇಷೆತನ ಮಗನಾದ ಅಬೀಮೆಲೇಕನನ್ನು ಕೊಂದವರು ಯಾರು ಎಂದು ನಿಮಗೆ ಗೊತ್ತಿಲ್ಲವೋ? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲನ್ನು ಅವನ ಮೇಲೆ ಎತ್ತಿ ಹಾಕಿ ಅವನನ್ನು ಕೊಂದಳಲ್ಲವೇ. ಹೀಗಿರುವುದರಿಂದ ನೀವು ಗೋಡೆಯ ಸಮೀಪಕ್ಕೆ ಹೋದದ್ದೇಕೆ?’ ಎಂದು ಕೇಳಿದರೆ ನೀನು, ಹಿತ್ತಿಯನಾದ ನಿನ್ನ ಸೇವಕ ಊರೀಯನು ಮೃತನಾದನೆಂದು ಹೇಳು” ಎಂಬುದಾಗಿ ಆಜ್ಞಾಪಿಸಿ ಅವನನ್ನು ಕಳುಹಿಸಿದನು.
यरूब-बेसेतका छोरा अबीमेलेकलाई कसले मार्‍यो? के एक जना स्‍त्रीले जाँतोको माथिल्‍को ढुङ्गा पर्खालबाट खसालेर तिनी तेबेसमा मरेकी थिइनन्? तिमीहरू किन पर्खालको यति नजिक गयौ?' तब तैंले जवाफ दिनुपर्छ, 'तपाईंको दास हित्ती उरियाह पनि मरे' ।”
22 ೨೨ ಆ ದೂತನು ಹೋಗಿ ಯೋವಾಬನ ಆಜ್ಞೆಯಂತೆ ದಾವೀದನಿಗೆ ತಿಳಿಸಿದ್ದೇನೆಂದರೆ,
त्यसैले त्‍यो दूत विदा भयो र दाऊदकहाँ गयो र योआबले तिनलाई भन्‍न पठाएका हरेक कुरा भनिदिए ।
23 ೨೩ “ಆ ಊರಿನವರು ಮಹಾಸೈನ್ಯಬಲದೊಡನೆ ಯುದ್ಧಮಾಡುವುದಕ್ಕೆ ಬಯಲಿಗೆ ಬಂದರು. ನಾವು ಅವರನ್ನು ಊರ ಬಾಗಿಲಿನವರೆಗೂ ಹಿಂದಟ್ಟಿದೆವು.
त्यसपछि त्‍यो दूतले दाऊदलाई भने, “सुरुमा हामीभन्‍दा शत्रुहरू बलिया थिए । उनीहरू हामीमाथि खुल्ला मैदानमा आए, तर हामीले उनीहरूलाई भित्र पस्‍ने ढोकातिर नै फर्कायौं ।
24 ೨೪ ಆಗ ಬಿಲ್ಲುಗಾರರು ಗೋಡೆಯ ಮೇಲಿನಿಂದ ನಿನ್ನ ಸೇವಕರ ಮೇಲೆ ಬಾಣಗಳನ್ನು ಎಸೆದದ್ದರಿಂದ ಅವರಲ್ಲಿ ಕೆಲವರು ಸತ್ತರು. ಹಿತ್ತಿಯನಾದ ನಿನ್ನ ಸೇವಕ ಊರೀಯನೂ ಸತ್ತನು” ಎಂದನು.
तब उनीहरूका काँड हान्‍नेहरूले पर्खाल माथिबाट तपाईंका केही सिपाहीलाई काँड हाने र राजाका केही सेवक मारिए र तपाईंको दास हित्ती उरियाह पनि मारिए ।”
25 ೨೫ ಅದಕ್ಕೆ ದಾವೀದನು ದೂತನಿಗೆ, “ನೀನು ಹೋಗು, ಇದಕ್ಕೋಸ್ಕರ ವ್ಯಸನಪಡಬೇಡ. ಕತ್ತಿಯು ಈ ಹೊತ್ತು ಒಬ್ಬನನ್ನು ನುಂಗಿದರೆ, ನಾಳೆ ಇನ್ನೊಬ್ಬನನ್ನು ನುಂಗುವುದು, ಮತ್ತಷ್ಟು ಶೂರತನದಿಂದ ಯುದ್ಧಮಾಡಿ ಪಟ್ಟಣವನ್ನು ಕೆಡವಿಬಿಡಿರಿ ಎಂಬುದಾಗಿ ಅರಸನು ಆಜ್ಞಾಪಿಸುತ್ತಾನೆ ಎಂದು ಯೋವಾಬನಿಗೆ ಹೇಳಿ ಅವನನ್ನು ಧೈರ್ಯಪಡಿಸು” ಎಂದನು.
दाऊदले त्‍यस दूतलाई भने, “योआबलाई भन्, 'यसले तिमीलाई दुःखित नतुल्याओस्, किनकि तरवारले एउटा वा अर्कोलाई नष्‍ट पार्छ । त्‍यो सहरको विरुद्ध तिम्रो युद्ध अझ धेरै बलियो पार र त्‍यसलाई नाश पार,' र तिनलाई उत्साह दिए ।”
26 ೨೬ ಊರೀಯನ ಮರಣದ ವಾರ್ತೆಯನ್ನು ಅವನ ಹೆಂಡತಿಯು ಕೇಳಿ ಗಂಡನಿಗೋಸ್ಕರ ಗೋಳಾಡಿದಳು.
जब उरियाहको पत्‍नीले आफ्‍नो पति उरियाह मरेको खबर सुनिन्, तब आफ्नो पतिको निम्ति तिनले गहिरो शोक गरिन् ।
27 ೨೭ ದುಃಖಕಾಲವು ತೀರಿದ ನಂತರ ದಾವೀದನು ಆಕೆಯನ್ನು ತನ್ನ ಮನೆಗೆ ಕರತರಿಸಿ, ತನ್ನ ಹೆಂಡತಿಯನ್ನಾಗಿ ಮಾಡಿಕೊಂಡನು. ಆಕೆಯು ಅವನಿಂದ ಒಬ್ಬ ಮಗನನ್ನು ಹೆತ್ತಳು. ದಾವೀದನು ಮಾಡಿದ ಈ ಕೃತ್ಯಗಳು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದೂ, ಅನೀತಿಯೂ ಆಗಿತ್ತು.
जब उनको विलाप पुरा भयो, दाऊदले उनलाई आफ्नो दरबारमा ल्याउन लिन पठाए र उनी तिनको पत्‍नी भइन् र तिनको निति एउटा छोरा जन्माइन् । तर दाऊदले गरेको कुराले परमप्रभुलाई दुःखी तुल्यायो ।

< ಸಮುವೇಲನು - ದ್ವಿತೀಯ ಭಾಗ 11 >