< ಸಮುವೇಲನು - ದ್ವಿತೀಯ ಭಾಗ 12 >

1 ಯೆಹೋವನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ದಾವೀದನ ಹತ್ತಿರ ಬಂದು ಹೇಳಿದ್ದೇನೆಂದರೆ, “ಒಂದು ಊರಿನಲ್ಲಿ ಇಬ್ಬರು ಮನುಷ್ಯರಿದ್ದರು. ಒಬ್ಬನು ಐಶ್ವರ್ಯವಂತನು ಇನ್ನೊಬ್ಬನು ಬಡವನು.
परमेश्वराने नाथानाला दावीदाकडे पाठवले. तेव्हा नाथान दावीदाकडे आला. नाथान म्हणाला, एका नगरात दोन माणसे होती एक श्रीमंत होता आणि एक गरीब.
2 ಐಶ್ವರ್ಯವಂತನಿಗೆ ಬಹಳ ಕುರಿದನಗಳಿದ್ದವು.
श्रीमंत मनुष्याकडे मेंढरे आणि गुरे भरपूर होती.
3 ಬಡವನಿಗೆ ಒಂದು ಹೆಣ್ಣು ಕುರಿಮರಿಯ ಹೊರತು ಬೇರೇನೂ ಇರಲಿಲ್ಲ. ಅವನು ಅದನ್ನು ಕೊಂಡುಕೊಂಡು ಸಾಕುತ್ತಿದ್ದನು. ಅದು ಮಗಳಂತೆ ಅವನ ಸಂಗಡಲೂ, ಅವನ ಮಕ್ಕಳ ಸಂಗಡಲೂ ಬೆಳೆಯುತ್ತಾ, ಅವರೊಡನೆ ರೊಟ್ಟಿ ತಿನ್ನುತ್ತಾ, ಅವರ ಪಾತ್ರೆಯಲ್ಲೇ ನೀರು ಕುಡಿಯುತ್ತಾ ಇತ್ತು. ಅವನ ಎದೆ ಮೇಲೆಯೇ ಒರಗಿಕೊಂಡು ನಿದ್ದೆ ಮಾಡುತ್ತಿತ್ತು.
पण गरीबाकडे त्याने विकत घेतलेल्या एका लहान मेंढी खेरीज काही नव्हते. त्याने मेंढीला खाऊपिऊ घातले. या गरीब मनुष्याच्या मुलाबाळांबरोबर ती वाढली त्याच्याच अन्नातला घास ती खाई त्याच्याच कपातले पाणी ती पिई त्याच्याच छातीवर डोके ठेवून झोपे त्या गरीबाला ती मेंढी मुलीसारखीच होती.
4 ಒಂದು ದಿನ ಐಶ್ವರ್ಯವಂತನ ಮನೆಗೆ ಒಬ್ಬ ಪ್ರಯಾಣಿಕನು ಬಂದನು. ಆಗ ಐಶ್ವರ್ಯವಂತನು ತನ್ನ ಕುರಿದನಗಳಿಂದ ಏನೂ ತೆಗೆದುಕೊಳ್ಳಲು ಮನಸ್ಸಿಲ್ಲದೆ, ಆ ಬಡವನ ಹೆಣ್ಣುಕುರಿಮರಿಯನ್ನು ಹಿಡಿದು ಅತಿಥಿಗೋಸ್ಕರ ಅಡಿಗೆ ಮಾಡಿಸಿದನು” ಎಂದು ಹೇಳಿದನು.
एकदा एक पाहुणा त्या श्रीमंत मनुष्याकडे आला. त्या पाहुण्याला खाऊपिऊ घालायची श्रीमंत मनुष्याची इच्छा होती. पण आपल्या गुरामेंढरांमधून त्यास काही काढून घ्यायचे नव्हते, म्हणून त्याने त्या गरीब मनुष्याची मेंढी घेतली. तिला मारले आणि त्या पाहुण्यासाठी अन्न शिजवले.
5 ಇದನ್ನು ಕೇಳಿ ದಾವೀದನು ಆ ಮನುಷ್ಯನ ಮೇಲೆ ಬಹಳವಾಗಿ ಕೋಪಗೊಂಡು ನಾತಾನನಿಗೆ, “ಯೆಹೋವನ ಆಣೆ, ಆ ಮನುಷ್ಯನು ಸಾಯಲೇಬೇಕು.
दावीदाला त्या श्रीमंत मनुष्याचा फारच राग आला. तो नाथानला म्हणाला, परमेश्वराची शपथ या मनुष्यास प्राणदंड मिळाला पाहिजे
6 ಅವನು ಕರುಣೆಯಿಲ್ಲದೆ ಹೀಗೆ ಮಾಡಿದ್ದರಿಂದ ಆ ಕುರಿಮರಿಗಾಗಿ ನಾಲ್ಕರಷ್ಟು ಹಿಂದಕ್ಕೆ ಕೊಡಬೇಕು” ಎಂದನು.
त्या मेंढीच्या चौपट पैसे त्याने भरले पाहिजेत, कारण त्याचे हे भयंकर कृत्य करताना त्यास दया आली नाही.
7 ಆಗ ನಾತಾನನು ದಾವೀದನನ್ನು ನೋಡಿ, “ಆ ಮನುಷ್ಯನು ನೀನೇ. ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಹೇಳುವುದೇನೆಂದರೆ, ‘ನಿನ್ನನ್ನು ಅಭಿಷೇಕಿಸಿ ಇಸ್ರಾಯೇಲ್ಯರಿಗೆ ಅರಸನನ್ನಾಗಿ ಮಾಡಿದವನು, ಸೌಲನ ಕೈಗೆ ಸಿಕ್ಕದಂತೆ ತಪ್ಪಿಸಿದವನು ನಾನೇ.
तेव्हा नाथान दावीदाला म्हणाला, तूच तो मनुष्य आहेस. इस्राएलचा देव परमेश्वर म्हणतो, इस्राएलचा राजा म्हणून मी तुला अभिषेक केला, तुला शौलापासून वाचवले.
8 ಇದಲ್ಲದೆ ನಾನು ನಿನಗೆ ನಿನ್ನ ಯಜಮಾನನ ಮನೆಯನ್ನು ಒಪ್ಪಿಸಿದೆನು. ಅವನ ಹೆಂಡತಿಯರನ್ನು ನಿನ್ನ ಮಗ್ಗುಲಿಗೆ ಕೊಟ್ಟೆನು. ಇಸ್ರಾಯೇಲ್ ಹಾಗೂ ಯೆಹೂದ ಕುಲಗಳನ್ನು ನಿನಗೆ ವಶಪಡಿಸಿದೆನು. ಇದೂ ಸಾಕಾಗಾದೆ ಹೋಗಿದ್ದರೆ ನಾನು ನಿನಗೆ ಇನ್ನೂ ಬೇಕಾದದ್ದನ್ನು ಕೊಡುತ್ತಿದ್ದೆನು.
त्याचे घरदार आणि स्त्रिया तुझ्या स्वाधीन केल्या. इस्राएल आणि यहूदाचा तुला राजा केले. एवढे पुरेसे नव्हते म्हणून तुला आणखीही देत राहिलो.
9 ಹೀಗಿರಲು ನೀನು ಯೆಹೋವನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ, ನನ್ನ ದೃಷ್ಟಿಯಲ್ಲಿ ಅನೀತಿಯನ್ನು ಕೆಟ್ಟದ್ದಾಗಿರುವುದನ್ನು ಮಾಡಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿರುವೆ.
असे असताना तू परमेश्वराची आज्ञा का मोडलीस? त्याच्या दृष्टीने वाईट असे कृत्य का केलेस? उरीया हित्तीला तू तलवारीने मारलेस, आणि त्याच्या पत्नीचा स्वतःची पत्नी म्हणून स्विकार केलास. होय, अम्मोन्यांच्या तलवारीने तू त्याचा वध करवलास.
10 ೧೦ ನೀನು ನನ್ನ ಆಜ್ಞೆಯನ್ನು ತಿರಸ್ಕರಿಸಿದ್ದರಿಂದಲೂ, ಹಿತ್ತಿಯನಾದ ಊರೀಯನನ್ನು ಅಮ್ಮೋನಿಯರ ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡದ್ದರಿಂದಲೂ, ನೀತಿಯ ಕತ್ತಿಯು ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ.
१०तेव्हा आता ही तलवार तुझ्या कुटुंबाचा पिच्छा सोडणार नाही. तू उरीया हित्तीच्या पत्नीचे हरण केलेस. तुला माझी पर्वा नाही हेच यातून दिसते.
11 ೧೧ ಯೆಹೋವನಾದ ನನ್ನ ಮಾತನ್ನು ಕೇಳು. ನಾನು ನಿನ್ನ ಮನೆಯವರಿಂದಲೇ ನಿನಗೆ ಕೇಡು ಉಂಟಾಗುವಂತೆ ಮಾಡುವೆನು. ನಿನ್ನ ಹೆಂಡತಿಯರನ್ನು ತೆಗೆದು ನಿನ್ನೆದುರಿನಲ್ಲಿಯೇ ಇನ್ನೊಬ್ಬನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಕೂಡ ಮಲಗುವನು. ನೀನು ಅದನ್ನು ಗುಪ್ತವಾಗಿ ಮಾಡಿರುವೆ.
११परमेश्वर म्हणतो, आता तुझ्यावर संकटे कोसळतील. अडचणींना सुरुवात तुझ्या घरातूनच होईल. तुझ्या स्त्रिया तुझ्यापासून मी हिरावून घेऊन. त्या तुझ्या एका आप्ताच्याच हवाली करीन. तो तुझ्या बायकां बरोबर झोपेल आणि ही गोष्ट सर्वांसमक्ष घडेल.
12 ೧೨ ನಾನು ಹೇಳುವ ಮಾತಾದರೋ ಎಲ್ಲಾ ಇಸ್ರಾಯೇಲ್ಯರ ಮುಂದೆ ಹಗಲಿನಲ್ಲೇ ನೆರವೇರುವುದು’” ಎಂದನು.
१२बथशेबाचा उपभोग तू गुपचूप घेतलास, पण हे मात्र सूर्याच्या साक्षीने, सर्व इस्राएलादेखत होईल.
13 ೧೩ ಆಗ ದಾವೀದನು ನಾತಾನನಿಗೆ, “ನಾನು ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡಿದ್ದೇನೆ” ಎಂದು ಹೇಳಿದನು. ನಾತಾನನು ಅವನಿಗೆ “ಯೆಹೋವನು ನಿನ್ನ ಪಾಪವನ್ನು ಕ್ಷಮಿಸಿದ್ದಾನೆ, ನೀನು ಸಾಯುವುದಿಲ್ಲ.
१३मग दावीद नाथानला म्हणाला, माझ्याहातून परमेश्वराचा मोठा अपराध घडला आहे. नाथान तेव्हा दावीदाला म्हणाला, परमेश्वराने हा तुझा अपराध दूर केला आहे. तू मरणार नाहीस.
14 ೧೪ ಆದರೂ ನೀನು ಈ ಕೃತ್ಯದಿಂದ ಯೆಹೋವನ ವೈರಿಗಳು ಆತನನ್ನು ಬಹಳವಾಗಿ ನಿಂದಿಸುವುದಕ್ಕೆ ಆಸ್ಪದ ಕೊಟ್ಟಿದ್ದರಿಂದ ನಿನ್ನಿಂದ ಹುಟ್ಟಿರುವ ಮಗುವು ಸತ್ತೇ ಹೋಗುವುದು” ಎಂದು ಹೇಳಿ ಮನೆಗೆ ಹೊರಟುಹೋದನು.
१४पण परमेश्वराच्या शत्रूंना तू त्याचा उपहास करायला मोठे कारण दिलेस, म्हणून हा तुझा पुत्र मरेल.
15 ೧೫ ಊರೀಯನ ಹೆಂಡತಿಯಲ್ಲಿ ದಾವೀದನಿಗೆ ಹುಟ್ಟಿದ ಮಗು ಯೆಹೋವನ ಪೆಟ್ಟಿನಿಂದ ಬಹಳವಾಗಿ ಅಸ್ವಸ್ಥವಾಯಿತು.
१५यानंतर नाथान घरी परतला. उरीयाची पत्नी बथशेबा आणि दावीद यांना झालेला मुलगा परमेश्वराच्या कोपामुळे खूप आजारी पडला.
16 ೧೬ ದಾವೀದನು ಮಗುವಿಗೋಸ್ಕರ ದೇವರನ್ನು ಪ್ರಾರ್ಥಿಸುತ್ತಾ, ಉಪವಾಸ ಮಾಡುತ್ತಾ, ಒಳಗಿನ ಕೋಣೆಗೆ ಹೋಗಿ ರಾತ್ರಿಯೆಲ್ಲಾ ನೆಲದ ಮೇಲೆಯೇ ಬಿದ್ದುಕೊಂಡಿದ್ದನು.
१६दावीदाने बाळासाठी देवाची प्रार्थना केली. दावीदाने अन्नपाण्याचा त्याग केला. घरात जाऊन रात्रभर जमिनीवर पडून राहिला.
17 ೧೭ ಅವನ ಮನೆಯ ಹಿರಿಯ ಸೇವಕರು ಅವನನ್ನು ಎಬ್ಬಿಸುವುದಕ್ಕೆ ಹೋದರು. ಆದರೆ ಅವನು ಏಳಲೇ ಇಲ್ಲ. ಅವರೊಡನೆ ಆಹಾರ ತೆಗೆದುಕೊಳ್ಳಲೂ ಇಲ್ಲ.
१७घरातील वडीलधाऱ्या मनुष्यांनी येऊन दावीदाला जमिनीवरून उठवायचा खूप प्रयत्न केला. पण काही केल्या दावीद तेथून हलेना. त्यांच्याबरोबर खायला प्यायलाही त्याने नकार दिला.
18 ೧೮ ಏಳನೆಯ ದಿನ ಮಗು ಸತ್ತುಹೋಯಿತು. ಅವನ ಸೇವಕರು ಭಯಪಟ್ಟು ಈ ವರ್ತಮಾನವನ್ನು ದಾವೀದನಿಗೆ ತಿಳಿಸಲಿಲ್ಲ. ಅವರು, “ಹುಡುಗನು ಜೀವದಿಂದಿದ್ದಾಗಲೇ ಅವನು ನಮ್ಮ ಸಂತೈಸುವಿಕೆಯನ್ನು ಲಕ್ಷಿಸಲಿಲ್ಲ. ಹೀಗಿರುವಲ್ಲಿ ಮಗುವಿನ ಮರಣದ ವಾರ್ತೆಯನ್ನು ಅವನಿಗೆ ತಿಳಿಸಿದರೆ ಅವನು ತನಗೆ ಏನಾದರೂ ಕೇಡುಮಾಡಿಕೊಂಡಾನಲ್ಲವೇ” ಎಂದು ಮಾತನಾಡಿಕೊಳ್ಳುತ್ತಿದ್ದರು.
१८सातव्या दिवशी ते मूल मरण पावले. मुलाच्या मृत्यूची बातमी दावीदाला द्यायला त्याचे नोकर कचरु लागले. ते म्हणाले, मुलगा जिवंत असतानाही आम्ही दावीदाशी बोलायला गेलो तरी तो ऐकत नसे, मग आता तर मूल मरण पावले असे आम्ही सांगितले तर तो आपल्या जिवाचे काही बरेवाईट करून घेईल.
19 ೧೯ ಸೇವಕರು ಈ ಪ್ರಕಾರ ಪಿಸುಗುಟ್ಟುವುದನ್ನು ಕಂಡು ದಾವೀದನು, ಮಗು ಸತ್ತು ಹೋಯಿತೆಂದು ತಿಳಿದು ಸೇವಕರನ್ನು, “ಮಗು ಸತ್ತುಹೋಯಿತೋ?” ಎಂದು ಕೇಳಿದನು. ಅವರು, “ಹೌದು ಸತ್ತುಹೋಯಿತು” ಎಂದು ಉತ್ತರ ಕೊಟ್ಟರು
१९पण आपल्या नोकरांची कुजबूज दावीदाने ऐकली त्यावरून मूल गेल्याचे तो मनोमन उमजला. त्याने नोकरांना विचारले, मूल गेले का? नोकरांनी होय म्हणून उत्तर दिले.
20 ೨೦ ಆಗ ದಾವೀದನು ನೆಲದಿಂದೆದ್ದು, ಸ್ನಾನ ಮಾಡಿ, ತೈಲ ಹಚ್ಚಿಕೊಂಡು, ತನ್ನ ಬಟ್ಟೆಗಳನ್ನು ಬದಲಿಸಿ, ಯೆಹೋವನ ಮಂದಿರಕ್ಕೆ ಹೋಗಿ ಆರಾಧನೆ ಮಾಡಿದನು. ಅನಂತರ ಮನೆಗೆ ಬಂದು ಆಹಾರ ತರಿಸಿ ಊಟಮಾಡಿದನು.
२०तेव्हा दावीद जमिनीवरून उठला त्यांने आंघोळ केली, कपडे बदलून तयार झाला. मग आराधना करण्यासाठी परमेश्वराच्या मंदिरात गेला. त्यानंतर घरी जाऊन त्याने खायला मागितले. सेवकांनी त्यास वाढले आणि तो जेवला.
21 ೨೧ ಇದನ್ನು ನೋಡಿ ಅವನ ಸೇವಕರು ಅವನಿಗೆ, “ಇದೇನು ನೀನು ಮಾಡಿದ್ದು? ಹುಡುಗನು ಜೀವದಿಂದಿದ್ದಾಗ ಅಳುತ್ತಾ ಉಪವಾಸಮಾಡಿದ್ದೀ. ಹುಡುಗನು ಸತ್ತ ನಂತರ ಎದ್ದು ಊಟ ಮಾಡಿರುವೆ” ಎಂದರು.
२१दावीदाचे सेवक त्यास म्हणाले, तुम्ही असे का वागलात? मूल जिवंत असताना तुम्ही अन्नत्याग केलात, शोक केलात. पण मुलगा वारल्यावर मात्र तुम्ही उठलात आणि खाल्लेत.
22 ೨೨ ದಾವೀದನು ಅವರಿಗೆ, “ಹುಡುಗನು ಜೀವದಿಂದಿದ್ದಾಗ ಒಂದು ವೇಳೆ ಯೆಹೋವನು ಕೃಪೆಮಾಡಿ ಅವನನ್ನು ಉಳಿಸಾನು ಅಂದುಕೊಂಡು ಉಪವಾಸ ಮಾಡಿದೆನು, ಅತ್ತೆನು.
२२दावीदाने सांगितले, मूल जिवंत होते तेव्हा मी अन्न वर्ज्य केले आणि शोक केला, कारण मला वाटले न जाणो परमेश्वरास माझी दया येईल आणि बाळ जगेल.
23 ೨೩ ಈಗ ಸತ್ತುಹೋದನಲ್ಲಾ. ನಾನೇಕೆ ಉಪವಾಸಮಾಡಬೇಕು? ಅವನನ್ನು ಹಿಂದಕ್ಕೆ ತರುವುದು ನನ್ನಿಂದಾದೀತೆ? ನಾನಾಗಿ ಅವನ ಬಳಿಗೆ ಹೋಗಬೇಕೇ ಹೊರತು ಅವನು ನನ್ನ ಬಳಿಗೆ ಬರುವುದಿಲ್ಲ” ಎಂದು ಉತ್ತರ ಕೊಟ್ಟನು.
२३पण आता ते गेलेच. तेव्हा आता मी कशासाठी उपास करू? मुलाचे तर प्राण मी परत आणू शकत नाही. ते गेलेच. एक दिवस मीच त्याच्या भेटीला जाईन पण तो आता परत येणे नाही.
24 ೨೪ ದಾವೀದನು ತನ್ನ ಹೆಂಡತಿಯಾದ ಬತ್ಷೆಬೆಯ ಬಳಿಗೆ ಹೋಗಿ ಆಕೆಯನ್ನು ಸಂತೈಸಿ ಆಕೆಯ ಸಂಗಡ ಮಲಗಿದನು. ಆಕೆಯು ಒಬ್ಬ ಮಗನನ್ನು ಹೆತ್ತಾಗ ದಾವೀದನು ಅವನಿಗೆ “ಸೊಲೊಮೋನನು” ಎಂದು ಹೆಸರಿಟ್ಟನು. ಯೆಹೋವನು ಅವನನ್ನು ಪ್ರೀತಿಸಿದನು.
२४दावीदाने मग आपली पत्नी बथशेबा हिचे सांत्वन केले. तिच्याशी त्याने शरीरसंबंध केला. बथशेबा पुन्हा गरोदर राहिली. तिला दुसरा मुलगा झाला. दावीदाने त्याचे नाव शलमोन ठेवले. शलमोनावर परमेश्वराची प्रीती होती.
25 ೨೫ ಪ್ರವಾದಿಯಾದ ನಾತಾನನು ಯೆಹೋವನು ತನಗೆ ಆಜ್ಞಾಪಿಸಿದಂತೆ ಯೆಹೋವನ ಪ್ರೀತಿಯ ನಿಮಿತ್ತ ಆ ಹುಡುಗನಿಗೆ “ಯೆದೀದ್ಯ” ಎಂದು ಹೆಸರಿಟ್ಟನು.
२५त्याने नाथान या संदेष्ट्यामार्फत दावीदाला निरोप पाठविला. नाथानने त्याचे नाव यदीद्या, म्हणजेच देवाला प्रिय असे ठेवले. परमेश्वराच्या वतीने नाथानने हे केले.
26 ೨೬ ಯೋವಾಬನು ಅಮ್ಮೋನಿಯರ ಪಟ್ಟಣವಾದ ರಬ್ಬಕ್ಕೆ ಮುತ್ತಿಗೆ ಹಾಕಿ ಅರಮನೆಯಿದ್ದ ಭಾಗವನ್ನು ಸ್ವಾಧೀನಮಾಡಿಕೊಂಡನು.
२६अम्मोन्यांच्या राब्बावर हल्ला करून यवाबाने हे राजधानीचे नगर काबीज केले.
27 ೨೭ ಯೋವಾಬನು ದಾವೀದನಿಗೆ ದೂತರ ಮುಖಾಂತರವಾಗಿ, “ನಾನು ರಬ್ಬಕ್ಕೆ ಮುತ್ತಿಗೆ ಹಾಕಿ, ಹೊಳೆಯ ಬಳಿಯಲ್ಲಿರುವ ಭಾಗವನ್ನು ಸ್ವಾಧೀನ ಮಾಡಿಕೊಂಡಿದ್ದೇನೆ.
२७यवाबाने निरोप्यामार्फत दावीदाला निरोप पाठवला राब्बाशी लढाई देऊन मी हे जलनगर हस्तगत केले आहे.
28 ೨೮ ನೀನು ಬೇಗನೆ ಉಳಿದ ಸೈನ್ಯವನ್ನು ಕೂಡಿಸಿಕೊಂಡು ಬಂದು ಪಟ್ಟಣಕ್ಕೆ ಮುತ್ತಿಗೆ ಹಾಕಿ, ಉಳಿದ ಭಾಗವನ್ನು ಸ್ವಾಧೀನಪಡಿಸಿಕೋ, ಅದನ್ನು ನಾನೇ ಹಿಡಿದರೆ ಅದಕ್ಕೆ ನನ್ನ ಹೆಸರು ಬರುವುದು” ಎಂದು ಹೇಳಿ ಕಳುಹಿಸಿದನು.
२८आता इतर लोकांस एकत्र आणून या शहराचा ताबा घ्या मी घेण्यापूर्वी हे करा. मी जर आधी ताबा घेतला तर ते नगर माझ्या नावाने ओळखले जाईल.
29 ೨೯ ಆಗ ದಾವೀದನು ಜನರೆಲ್ಲರನ್ನು ಕೂಡಿಸಿಕೊಂಡು ಹೋಗಿ, ರಬ್ಬಕ್ಕೆ ಮುತ್ತಿಗೆ ಹಾಕಿ ಅದನ್ನು ವಶಮಾಡಿಕೊಂಡನು.
२९मग दावीद सर्व लोकांस घेऊन राब्बाकडे गेला. राब्बा येथे लढाई करून त्याने त्याचा ताबा घेतला.
30 ೩೦ ಇದಲ್ಲದೆ ಅವನು ಮಲ್ಕಾಮ ಮೂರ್ತಿಯ ತಲೆಯ ಮೇಲಿದ್ದ ಬಂಗಾರದ ಕಿರೀಟವನ್ನು ತೆಗೆದುಕೊಂಡನು. ಅದು ನಾಲ್ಕು ಸಾವಿರ ತೊಲೆ ತೂಕವುಳ್ಳದ್ದಾಗಿತ್ತು. ಅಲ್ಲದೆ ಅದರಲ್ಲಿ ಅಮೂಲ್ಯರತ್ನವನ್ನು ಇರಿಸಲಾಗಿತ್ತು. ಅವರು ಅದನ್ನು ದಾವೀದನ ಶಿರಸ್ಸಿನ ಮೇಲಿರಿಸಿದರು. ಆ ಪಟ್ಟಣದಿಂದ ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಹೋದರು.
३०त्यांच्या राजाच्या मस्तकावरचा मुकुट दावीदाने काढला. हा मुकुट सोन्याचा असून त्याचे वजन सुमारे एक किक्कार होते. त्यामध्ये मौल्यवान रत्ने जडवलेली होती, तो मुकुट लोकांनी दावीदाच्या मस्तकावर ठेवला. दावीदाने बऱ्याच किंमती वस्तू आपल्याबरोबर आणल्या.
31 ೩೧ ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಮಾಡುವ ಕೆಲಸಮಾಡುವುದಕ್ಕೂ ಇಟ್ಟಿಗೆಗಳನ್ನು ಮಾಡುವುದಕ್ಕೂ ಹಚ್ಚಿದರು. ಅಮ್ಮೋನಿಯರ ಎಲ್ಲಾ ಪಟ್ಟಣದವರಿಗೂ ಇದೇ ಗತಿಯಾಯಿತು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಯೆರೂಸಲೇಮಿಗೆ ಹೋದನು.
३१राब्बा नगरातील लोकांसही त्याने बाहेर नेले त्यांना कुऱ्हाडी, करवती, लोखंडी दाताळी यांनी काम करायला ठेवले. त्यांच्याकडून जबरदस्तीने वीट कामही करून घेतले. सर्व अम्मोनी नगरांमध्ये दावीदाने असेच केले. नंतर दावीद आपल्या सैन्यासह यरूशलेमेला परतला.

< ಸಮುವೇಲನು - ದ್ವಿತೀಯ ಭಾಗ 12 >