< ಸಮುವೇಲನು - ದ್ವಿತೀಯ ಭಾಗ 12 >

1 ಯೆಹೋವನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ದಾವೀದನ ಹತ್ತಿರ ಬಂದು ಹೇಳಿದ್ದೇನೆಂದರೆ, “ಒಂದು ಊರಿನಲ್ಲಿ ಇಬ್ಬರು ಮನುಷ್ಯರಿದ್ದರು. ಒಬ್ಬನು ಐಶ್ವರ್ಯವಂತನು ಇನ್ನೊಬ್ಬನು ಬಡವನು.
त्यसपछि परमप्रभुले नातानलाई दाऊदकहाँ पठाउनुभयो । उनी तिनीकहाँ आए र तिनलाई भने, “कुनै सहरमा दुई जना मानिस बस्थे । एक जना धनी थिए र अर्कोचाहिं गरीब थिए ।
2 ಐಶ್ವರ್ಯವಂತನಿಗೆ ಬಹಳ ಕುರಿದನಗಳಿದ್ದವು.
धनी मानिसको ठुलो संख्यामा भेडाबाख्रा र गाईवस्तु थिए,
3 ಬಡವನಿಗೆ ಒಂದು ಹೆಣ್ಣು ಕುರಿಮರಿಯ ಹೊರತು ಬೇರೇನೂ ಇರಲಿಲ್ಲ. ಅವನು ಅದನ್ನು ಕೊಂಡುಕೊಂಡು ಸಾಕುತ್ತಿದ್ದನು. ಅದು ಮಗಳಂತೆ ಅವನ ಸಂಗಡಲೂ, ಅವನ ಮಕ್ಕಳ ಸಂಗಡಲೂ ಬೆಳೆಯುತ್ತಾ, ಅವರೊಡನೆ ರೊಟ್ಟಿ ತಿನ್ನುತ್ತಾ, ಅವರ ಪಾತ್ರೆಯಲ್ಲೇ ನೀರು ಕುಡಿಯುತ್ತಾ ಇತ್ತು. ಅವನ ಎದೆ ಮೇಲೆಯೇ ಒರಗಿಕೊಂಡು ನಿದ್ದೆ ಮಾಡುತ್ತಿತ್ತು.
तर त्यो गरीब मानिससित भेडको एउटा पाठीबाहेक केही पनि थिएन, जसलाई त्‍यसले किनेर ल्‍याएको, र खुवाएर हुर्काएको थियो । त्‍यो उसँग र उसका छोराछोरीसँगै हुर्क्‍यो । यो पाठीले उसँगै खान्थ्यो, उसैको कचौराबाट पिउँथ्यो, र उसकै काखमा सुत्थ्यो र उसको छोरीजस्तै थियो ।
4 ಒಂದು ದಿನ ಐಶ್ವರ್ಯವಂತನ ಮನೆಗೆ ಒಬ್ಬ ಪ್ರಯಾಣಿಕನು ಬಂದನು. ಆಗ ಐಶ್ವರ್ಯವಂತನು ತನ್ನ ಕುರಿದನಗಳಿಂದ ಏನೂ ತೆಗೆದುಕೊಳ್ಳಲು ಮನಸ್ಸಿಲ್ಲದೆ, ಆ ಬಡವನ ಹೆಣ್ಣುಕುರಿಮರಿಯನ್ನು ಹಿಡಿದು ಅತಿಥಿಗೋಸ್ಕರ ಅಡಿಗೆ ಮಾಡಿಸಿದನು” ಎಂದು ಹೇಳಿದನು.
एक दिन त्यो धनी मानिसको घरमा एक जना पाहुना आए, तर तिनलाई खाना दिन त्यो धनी मानिसले आफ्नो भेडाबाख्रा र गाईवस्तु एउटा पशु लिन पनि इच्छुक भएन । बरु, त्यसले त्यो गरीब मानिसको भेडाको पाठी लियो र त्यो आफ्‍नो पाहुनाको निम्ति पकाइदियो ।”
5 ಇದನ್ನು ಕೇಳಿ ದಾವೀದನು ಆ ಮನುಷ್ಯನ ಮೇಲೆ ಬಹಳವಾಗಿ ಕೋಪಗೊಂಡು ನಾತಾನನಿಗೆ, “ಯೆಹೋವನ ಆಣೆ, ಆ ಮನುಷ್ಯನು ಸಾಯಲೇಬೇಕು.
दाऊद त्यो धनी मानिसप्रति रिसले आगो भए र नातानसँग जङ्गिए, “जस्‍तो परमप्रभु जीवित हुनुहुन्छ, त्‍यो मानिस जसले यसो गर्‍यो त्यो मारिन योग्य छ ।
6 ಅವನು ಕರುಣೆಯಿಲ್ಲದೆ ಹೀಗೆ ಮಾಡಿದ್ದರಿಂದ ಆ ಕುರಿಮರಿಗಾಗಿ ನಾಲ್ಕರಷ್ಟು ಹಿಂದಕ್ಕೆ ಕೊಡಬೇಕು” ಎಂದನು.
त्‍यो पाठीको चार गुणा त्यसले फिर्ता गर्नुपर्छ किनभने त्यसले यस्तो दुष्‍ट कुरा गरेको छ र त्यसले गरीब मानिसमाथ कुनै दया देखाएन ।”
7 ಆಗ ನಾತಾನನು ದಾವೀದನನ್ನು ನೋಡಿ, “ಆ ಮನುಷ್ಯನು ನೀನೇ. ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಹೇಳುವುದೇನೆಂದರೆ, ‘ನಿನ್ನನ್ನು ಅಭಿಷೇಕಿಸಿ ಇಸ್ರಾಯೇಲ್ಯರಿಗೆ ಅರಸನನ್ನಾಗಿ ಮಾಡಿದವನು, ಸೌಲನ ಕೈಗೆ ಸಿಕ್ಕದಂತೆ ತಪ್ಪಿಸಿದವನು ನಾನೇ.
त्यसपछि नातानले दाऊदलाई भने, “त्यो मानिस तपाईं नै हो! परमप्रभु इस्राएलका परमेश्‍वर भन्‍नुहुन्छ, 'मैले तँलाई इस्राएलमाथि राजा अभिषेक गरें र मैले तँलाई शाऊलको हातबाट बचाएँ ।
8 ಇದಲ್ಲದೆ ನಾನು ನಿನಗೆ ನಿನ್ನ ಯಜಮಾನನ ಮನೆಯನ್ನು ಒಪ್ಪಿಸಿದೆನು. ಅವನ ಹೆಂಡತಿಯರನ್ನು ನಿನ್ನ ಮಗ್ಗುಲಿಗೆ ಕೊಟ್ಟೆನು. ಇಸ್ರಾಯೇಲ್ ಹಾಗೂ ಯೆಹೂದ ಕುಲಗಳನ್ನು ನಿನಗೆ ವಶಪಡಿಸಿದೆನು. ಇದೂ ಸಾಕಾಗಾದೆ ಹೋಗಿದ್ದರೆ ನಾನು ನಿನಗೆ ಇನ್ನೂ ಬೇಕಾದದ್ದನ್ನು ಕೊಡುತ್ತಿದ್ದೆನು.
मैले तँलाई तेरो मालिकको घराना र तेरो मालिकका पत्‍नीहरूलाई तेरो हातमा दिएँ । मैले तँलाई इस्राएल र यहूदाको घराना पनि दिएँ । तर त्यसले नपुगेको भए, मैले तँलाई यसको अतिरिक्‍त अरू धेरै कुरा दिने थिएँ ।
9 ಹೀಗಿರಲು ನೀನು ಯೆಹೋವನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ, ನನ್ನ ದೃಷ್ಟಿಯಲ್ಲಿ ಅನೀತಿಯನ್ನು ಕೆಟ್ಟದ್ದಾಗಿರುವುದನ್ನು ಮಾಡಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿರುವೆ.
त्यसैले तैंले परमप्रभुको दृष्‍टिमा जे खराब छ त्यही गरेर उहाँको आज्ञालाई किन तुच्‍छ ठानिस्? तैंले हित्ती उरियाहलाई तरवारले प्रहार गरिस् र त्यसको पत्‍नीलाई तेरो आफ्‍नै पत्‍नी हुनलाई लगेको छस् । तैंले अम्‍मोनको फौजको तरवारले त्यसलाई मारिस् ।
10 ೧೦ ನೀನು ನನ್ನ ಆಜ್ಞೆಯನ್ನು ತಿರಸ್ಕರಿಸಿದ್ದರಿಂದಲೂ, ಹಿತ್ತಿಯನಾದ ಊರೀಯನನ್ನು ಅಮ್ಮೋನಿಯರ ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡದ್ದರಿಂದಲೂ, ನೀತಿಯ ಕತ್ತಿಯು ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ.
त्यसैले अब तरवारले तेरो घरानालाई कहिल्यै छोड्ने छैन, किनभने तैंले मलाई घृणा गरेको छस् र हित्ती उरियाहको पत्‍नीलाई तेरो आफ्‍नो पत्‍नीको रूपमा लिएको छस् ।'
11 ೧೧ ಯೆಹೋವನಾದ ನನ್ನ ಮಾತನ್ನು ಕೇಳು. ನಾನು ನಿನ್ನ ಮನೆಯವರಿಂದಲೇ ನಿನಗೆ ಕೇಡು ಉಂಟಾಗುವಂತೆ ಮಾಡುವೆನು. ನಿನ್ನ ಹೆಂಡತಿಯರನ್ನು ತೆಗೆದು ನಿನ್ನೆದುರಿನಲ್ಲಿಯೇ ಇನ್ನೊಬ್ಬನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಕೂಡ ಮಲಗುವನು. ನೀನು ಅದನ್ನು ಗುಪ್ತವಾಗಿ ಮಾಡಿರುವೆ.
परमप्रभु भन्‍नुहुन्छ, 'हेर्, म तेरो आफ्नै घरानाबाट विपद् ल्‍याउने छु । तेरै आफ्‍नै आँखाको सामु तेरा पत्‍नीहरूलाई म लिने छु र ती तेरो छिमेकीलाई दिने छु, र दिनको उज्‍यालोमा त्यो तेरा पत्‍नीहरूसित सुत्‍ने छ ।
12 ೧೨ ನಾನು ಹೇಳುವ ಮಾತಾದರೋ ಎಲ್ಲಾ ಇಸ್ರಾಯೇಲ್ಯರ ಮುಂದೆ ಹಗಲಿನಲ್ಲೇ ನೆರವೇರುವುದು’” ಎಂದನು.
किनकि तैंले आफ्‍नो पाप गोप्‍य रूपमा गरिस्, तर म यो सारा इस्राएलको सामु घामको उज्यालोमा गर्ने छु’ ।”
13 ೧೩ ಆಗ ದಾವೀದನು ನಾತಾನನಿಗೆ, “ನಾನು ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡಿದ್ದೇನೆ” ಎಂದು ಹೇಳಿದನು. ನಾತಾನನು ಅವನಿಗೆ “ಯೆಹೋವನು ನಿನ್ನ ಪಾಪವನ್ನು ಕ್ಷಮಿಸಿದ್ದಾನೆ, ನೀನು ಸಾಯುವುದಿಲ್ಲ.
तब दाऊदले नातानलाई भने, “मैले परमप्रभुको विरुद्धमा पाप गरेको छु ।” नातानले दाऊदलाई जवाफ दिए, “परमप्रभुले तपाईंको पापलाई हटाइदिनुभएको छ । तपाईंलाई मारिने छैन ।
14 ೧೪ ಆದರೂ ನೀನು ಈ ಕೃತ್ಯದಿಂದ ಯೆಹೋವನ ವೈರಿಗಳು ಆತನನ್ನು ಬಹಳವಾಗಿ ನಿಂದಿಸುವುದಕ್ಕೆ ಆಸ್ಪದ ಕೊಟ್ಟಿದ್ದರಿಂದ ನಿನ್ನಿಂದ ಹುಟ್ಟಿರುವ ಮಗುವು ಸತ್ತೇ ಹೋಗುವುದು” ಎಂದು ಹೇಳಿ ಮನೆಗೆ ಹೊರಟುಹೋದನು.
तापनि, यो कामद्वारा तपाईंले परमप्रभुलाई तुच्‍छ तुल्‍याउनुभएको हुनाले, तपाईंबाट जन्म‍ने बालकचाहिं निश्‍चय नै मार्ने छ ।”
15 ೧೫ ಊರೀಯನ ಹೆಂಡತಿಯಲ್ಲಿ ದಾವೀದನಿಗೆ ಹುಟ್ಟಿದ ಮಗು ಯೆಹೋವನ ಪೆಟ್ಟಿನಿಂದ ಬಹಳವಾಗಿ ಅಸ್ವಸ್ಥವಾಯಿತು.
त्यसपछि नातान विदा भए र घर गए । उरियाहको पत्‍नीले दाऊदबाट जन्माएको बालकलाई परमप्रभुले प्रहार गर्नुभयो र त्यो गम्भीर बिरामी भयो ।
16 ೧೬ ದಾವೀದನು ಮಗುವಿಗೋಸ್ಕರ ದೇವರನ್ನು ಪ್ರಾರ್ಥಿಸುತ್ತಾ, ಉಪವಾಸ ಮಾಡುತ್ತಾ, ಒಳಗಿನ ಕೋಣೆಗೆ ಹೋಗಿ ರಾತ್ರಿಯೆಲ್ಲಾ ನೆಲದ ಮೇಲೆಯೇ ಬಿದ್ದುಕೊಂಡಿದ್ದನು.
दाऊदले त्‍यो केटाको निम्‍ति परमप्रभुसँग बिन्ती गरे । दाऊद उपवास बसे र भित्र गए र रातभरि भुईंमा पल्टिरहे ।
17 ೧೭ ಅವನ ಮನೆಯ ಹಿರಿಯ ಸೇವಕರು ಅವನನ್ನು ಎಬ್ಬಿಸುವುದಕ್ಕೆ ಹೋದರು. ಆದರೆ ಅವನು ಏಳಲೇ ಇಲ್ಲ. ಅವರೊಡನೆ ಆಹಾರ ತೆಗೆದುಕೊಳ್ಳಲೂ ಇಲ್ಲ.
तिनका घरानाका ठुलाहरू उठे र तिनलाई भुईंबाट उठाउन तिनको छेउमा खडा भए, तर तिनी उठेनन् र तिनले तिनीहरूसँग केही पनि खाएनन् ।
18 ೧೮ ಏಳನೆಯ ದಿನ ಮಗು ಸತ್ತುಹೋಯಿತು. ಅವನ ಸೇವಕರು ಭಯಪಟ್ಟು ಈ ವರ್ತಮಾನವನ್ನು ದಾವೀದನಿಗೆ ತಿಳಿಸಲಿಲ್ಲ. ಅವರು, “ಹುಡುಗನು ಜೀವದಿಂದಿದ್ದಾಗಲೇ ಅವನು ನಮ್ಮ ಸಂತೈಸುವಿಕೆಯನ್ನು ಲಕ್ಷಿಸಲಿಲ್ಲ. ಹೀಗಿರುವಲ್ಲಿ ಮಗುವಿನ ಮರಣದ ವಾರ್ತೆಯನ್ನು ಅವನಿಗೆ ತಿಳಿಸಿದರೆ ಅವನು ತನಗೆ ಏನಾದರೂ ಕೇಡುಮಾಡಿಕೊಂಡಾನಲ್ಲವೇ” ಎಂದು ಮಾತನಾಡಿಕೊಳ್ಳುತ್ತಿದ್ದರು.
सातौं दिनमा त्‍यो बालक मर्‍यो । त्‍यो बालक मर्‍यो भनेर दाऊदका सेवकहरूले तिनलाई भन्‍न डराए, किनकि तिनीहरूले भने, “हेर्नुहोस्, त्‍यो बालक जीवितै हुँदा हामीले उहँसित बोल्‍यौं र उहाँले हाम्रा कुरा सुन्‍नुभएन । हामीले त्‍यो बालक मर्‍यो भन्यौं भने, उहाँले आफूलाई के गर्नुहोला?”
19 ೧೯ ಸೇವಕರು ಈ ಪ್ರಕಾರ ಪಿಸುಗುಟ್ಟುವುದನ್ನು ಕಂಡು ದಾವೀದನು, ಮಗು ಸತ್ತು ಹೋಯಿತೆಂದು ತಿಳಿದು ಸೇವಕರನ್ನು, “ಮಗು ಸತ್ತುಹೋಯಿತೋ?” ಎಂದು ಕೇಳಿದನು. ಅವರು, “ಹೌದು ಸತ್ತುಹೋಯಿತು” ಎಂದು ಉತ್ತರ ಕೊಟ್ಟರು
तर जब दाऊदले आफ्‍ना सेवकहरूले आपसमा कानेखुसी गरिरहेको देखे, तब बालक मरेछ भनी दाऊदले थाहा पाए । तिनले आफ्ना सेवकहरूलाई भने, “के त्‍यो बालक मर्‍यो?” तिनीहरूले जवाफ दिए, “त्‍यो मर्‍यो ।”
20 ೨೦ ಆಗ ದಾವೀದನು ನೆಲದಿಂದೆದ್ದು, ಸ್ನಾನ ಮಾಡಿ, ತೈಲ ಹಚ್ಚಿಕೊಂಡು, ತನ್ನ ಬಟ್ಟೆಗಳನ್ನು ಬದಲಿಸಿ, ಯೆಹೋವನ ಮಂದಿರಕ್ಕೆ ಹೋಗಿ ಆರಾಧನೆ ಮಾಡಿದನು. ಅನಂತರ ಮನೆಗೆ ಬಂದು ಆಹಾರ ತರಿಸಿ ಊಟಮಾಡಿದನು.
तब दाऊद भुईंबाट उठे र आफू नुहाए, आफूलाई तेल घसे र आफ्‍ना लुगा फेरे । तिनी परमप्रभुको पवित्र वासस्थानमा गए र त्यहाँ आराधना गरे र त्‍यसपछि आफ्‍नो दरबारमा फर्केर आए । तिनले खाने कुराहरू मागेपछि, तिनीहरूले खाने कुरा दिए र तिनले खाए ।
21 ೨೧ ಇದನ್ನು ನೋಡಿ ಅವನ ಸೇವಕರು ಅವನಿಗೆ, “ಇದೇನು ನೀನು ಮಾಡಿದ್ದು? ಹುಡುಗನು ಜೀವದಿಂದಿದ್ದಾಗ ಅಳುತ್ತಾ ಉಪವಾಸಮಾಡಿದ್ದೀ. ಹುಡುಗನು ಸತ್ತ ನಂತರ ಎದ್ದು ಊಟ ಮಾಡಿರುವೆ” ಎಂದರು.
तब तिनका सेवकहरूले तिनलाई भने, “तपाईंले किन यसो गर्नुभएको छ? त्‍यो बालक जिउँदो हुँदा तपाईं उपवास बस्‍नुभयो र रुनुभयो, तर जब बालक मर्‍यो, तब तपाईं उठ्नुभयो र खानुभयो ।”
22 ೨೨ ದಾವೀದನು ಅವರಿಗೆ, “ಹುಡುಗನು ಜೀವದಿಂದಿದ್ದಾಗ ಒಂದು ವೇಳೆ ಯೆಹೋವನು ಕೃಪೆಮಾಡಿ ಅವನನ್ನು ಉಳಿಸಾನು ಅಂದುಕೊಂಡು ಉಪವಾಸ ಮಾಡಿದೆನು, ಅತ್ತೆನು.
दाऊदले जवाफ दिए, “बालक जीवित हुँदा म उपवास बसें र रोएँ । मैले भनें, 'कसले जान्दछ कतै परमप्रभु अनुग्रही हुनुहुने छ ताकि बालक बाँच्‍न सकोस्?'
23 ೨೩ ಈಗ ಸತ್ತುಹೋದನಲ್ಲಾ. ನಾನೇಕೆ ಉಪವಾಸಮಾಡಬೇಕು? ಅವನನ್ನು ಹಿಂದಕ್ಕೆ ತರುವುದು ನನ್ನಿಂದಾದೀತೆ? ನಾನಾಗಿ ಅವನ ಬಳಿಗೆ ಹೋಗಬೇಕೇ ಹೊರತು ಅವನು ನನ್ನ ಬಳಿಗೆ ಬರುವುದಿಲ್ಲ” ಎಂದು ಉತ್ತರ ಕೊಟ್ಟನು.
तर अब त्यो मर्‍यो, त्यसैले म किन उपवास बस्‍ने? के म त्यसलाई फेरि फर्काएर ल्याउन सक्छु र? म त्यसकहाँ जाने छु, तर त्यो मकहाँ फर्केर आउने छैन ।”
24 ೨೪ ದಾವೀದನು ತನ್ನ ಹೆಂಡತಿಯಾದ ಬತ್ಷೆಬೆಯ ಬಳಿಗೆ ಹೋಗಿ ಆಕೆಯನ್ನು ಸಂತೈಸಿ ಆಕೆಯ ಸಂಗಡ ಮಲಗಿದನು. ಆಕೆಯು ಒಬ್ಬ ಮಗನನ್ನು ಹೆತ್ತಾಗ ದಾವೀದನು ಅವನಿಗೆ “ಸೊಲೊಮೋನನು” ಎಂದು ಹೆಸರಿಟ್ಟನು. ಯೆಹೋವನು ಅವನನ್ನು ಪ್ರೀತಿಸಿದನು.
दाऊदले आफ्‍नी पत्‍नी बतशेबालाई सान्त्वना दिए र उनकहाँ गए र उनीसँग सुते । पछि उनले एउटा छोरा जन्माइन् र त्‍यो बालककको नाउँ सोलोमन राखियो । परमप्रभुले त्‍यसलाई प्रेम गर्नुभयो
25 ೨೫ ಪ್ರವಾದಿಯಾದ ನಾತಾನನು ಯೆಹೋವನು ತನಗೆ ಆಜ್ಞಾಪಿಸಿದಂತೆ ಯೆಹೋವನ ಪ್ರೀತಿಯ ನಿಮಿತ್ತ ಆ ಹುಡುಗನಿಗೆ “ಯೆದೀದ್ಯ” ಎಂದು ಹೆಸರಿಟ್ಟನು.
र तिनको नाउँ यददीयाह राख्‍नू भनी उहाँले नातान अगमवक्‍ताद्वारा सन्देश पठाउनुभयो, किनभने परमप्रभुले तिनलाई प्रेम गर्नुभयो ।
26 ೨೬ ಯೋವಾಬನು ಅಮ್ಮೋನಿಯರ ಪಟ್ಟಣವಾದ ರಬ್ಬಕ್ಕೆ ಮುತ್ತಿಗೆ ಹಾಕಿ ಅರಮನೆಯಿದ್ದ ಭಾಗವನ್ನು ಸ್ವಾಧೀನಮಾಡಿಕೊಂಡನು.
यति बेला योआबले अम्मोनीहरूको रब्बाको विरुद्ध युद्ध गरे र तिनले राजकीय सहर कब्जा गरे ।
27 ೨೭ ಯೋವಾಬನು ದಾವೀದನಿಗೆ ದೂತರ ಮುಖಾಂತರವಾಗಿ, “ನಾನು ರಬ್ಬಕ್ಕೆ ಮುತ್ತಿಗೆ ಹಾಕಿ, ಹೊಳೆಯ ಬಳಿಯಲ್ಲಿರುವ ಭಾಗವನ್ನು ಸ್ವಾಧೀನ ಮಾಡಿಕೊಂಡಿದ್ದೇನೆ.
त्यसैले योआबले दाऊदकहाँ दूतहरू पठाए र भने, “मैले रब्‍बाको विरुद्धमा युद्ध लडेको छु र मैले सहरको पानीको आपुर्तीलाई कब्जा गरेको छु ।
28 ೨೮ ನೀನು ಬೇಗನೆ ಉಳಿದ ಸೈನ್ಯವನ್ನು ಕೂಡಿಸಿಕೊಂಡು ಬಂದು ಪಟ್ಟಣಕ್ಕೆ ಮುತ್ತಿಗೆ ಹಾಕಿ, ಉಳಿದ ಭಾಗವನ್ನು ಸ್ವಾಧೀನಪಡಿಸಿಕೋ, ಅದನ್ನು ನಾನೇ ಹಿಡಿದರೆ ಅದಕ್ಕೆ ನನ್ನ ಹೆಸರು ಬರುವುದು” ಎಂದು ಹೇಳಿ ಕಳುಹಿಸಿದನು.
यसकारण बाँकी फौजलाई भेला गर्नुहोस् र यो सहर विरुद्ध छआउनी हाल्नुहोस् र यसलाई कब्जा गर्नुहोस्, किनकि मैले त्‍यो सहर लिएँ भने, त्‍यसलाई मेरो नाउँ दिइने छ ।
29 ೨೯ ಆಗ ದಾವೀದನು ಜನರೆಲ್ಲರನ್ನು ಕೂಡಿಸಿಕೊಂಡು ಹೋಗಿ, ರಬ್ಬಕ್ಕೆ ಮುತ್ತಿಗೆ ಹಾಕಿ ಅದನ್ನು ವಶಮಾಡಿಕೊಂಡನು.
त्यसैले दाऊदले सबै फौजलाई एकसाथ भेला गरे र रब्बातिर गए । तिनले त्यो सहरको विरुद्ध युद्ध लडे र त्‍यो कब्जा गरे ।
30 ೩೦ ಇದಲ್ಲದೆ ಅವನು ಮಲ್ಕಾಮ ಮೂರ್ತಿಯ ತಲೆಯ ಮೇಲಿದ್ದ ಬಂಗಾರದ ಕಿರೀಟವನ್ನು ತೆಗೆದುಕೊಂಡನು. ಅದು ನಾಲ್ಕು ಸಾವಿರ ತೊಲೆ ತೂಕವುಳ್ಳದ್ದಾಗಿತ್ತು. ಅಲ್ಲದೆ ಅದರಲ್ಲಿ ಅಮೂಲ್ಯರತ್ನವನ್ನು ಇರಿಸಲಾಗಿತ್ತು. ಅವರು ಅದನ್ನು ದಾವೀದನ ಶಿರಸ್ಸಿನ ಮೇಲಿರಿಸಿದರು. ಆ ಪಟ್ಟಣದಿಂದ ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಹೋದರು.
दाऊदले तिनीहरूका राजाको शिरबाट शिरपेच लिए, यसको तौल एक तोडा सुन थियो, र त्‍यसमा बहुमूल्‍य पत्‍थरहरू थिए । त्यो शिरपेच दाऊदको आफ्नै शिरमा लगाइयो । त्‍यसपछि तिनले त्यस सहरको लुटका मालहरू ठुलो मात्रामा लिएर आए ।
31 ೩೧ ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಮಾಡುವ ಕೆಲಸಮಾಡುವುದಕ್ಕೂ ಇಟ್ಟಿಗೆಗಳನ್ನು ಮಾಡುವುದಕ್ಕೂ ಹಚ್ಚಿದರು. ಅಮ್ಮೋನಿಯರ ಎಲ್ಲಾ ಪಟ್ಟಣದವರಿಗೂ ಇದೇ ಗತಿಯಾಯಿತು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಯೆರೂಸಲೇಮಿಗೆ ಹೋದನು.
तिनले त्यस सहरमा भएका मानिसहरूलाई लिएर आए, र तिनीहरूलाई आराहरू, फलामको हतियारको र बन्चरोको कामहरू गर्न बाध्य पारे । तिनले उनीहरूलाई इँटको भट्टाहरूमा काम गर्न लगाए । दाऊदले अम्‍मोनका मानिसहरूका सबै सहरलाई यो श्रमको काम गर्न लगाए । तब दाऊद र सबै फौज यरूशलेम फर्के ।

< ಸಮುವೇಲನು - ದ್ವಿತೀಯ ಭಾಗ 12 >