< ಸಮುವೇಲನು - ದ್ವಿತೀಯ ಭಾಗ 18 >

1 ತರುವಾಯ ಅರಸನಾದ ದಾವೀದನು ತನ್ನ ಬಳಿಯಲ್ಲಿ ಇದ್ದ ಸೈನಿಕರನ್ನು ಎಣಿಸಿ, ಅವರ ಮೇಲೆ ಸಹಸ್ರಾಧಿಪತಿಗಳನ್ನೂ ಮತ್ತು ಶತಾಧಿಪತಿಗಳನ್ನು ನೇಮಿಸಿದನು.
दावीदाने आपल्या बरोबरच्या लोकांची शिरगणती केली. मग, शंभर-शंभर, हजार हजार मनुष्यांवर अधिकारी, सरदार नेमले.
2 ಅವನು ಸೈನ್ಯವನ್ನು ಮೂರು ಭಾಗ ಮಾಡಿ, ಒಂದು ಭಾಗವನ್ನು ಯೋವಾಬನಿಗೂ, ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ, ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ, “ನಾನು ನಿಮ್ಮೊಂದಿಗೆ ಬರುತ್ತೇನೆ” ಎಂದು ಹೇಳಿದನು.
सर्वांची त्याने तीन गटात विभागणी केली. यवाब, अबीशय यवाबाचा भाऊ आणि सरुवेचा मुलगा आणि गथ येथील इत्तय या तिघांना एकेक गटाचे प्रमुख म्हणून नेमले आणि सर्वांची रवानगी केली. तेव्हा राजा दावीद त्यांना म्हणाला, मी ही तुमच्याबरोबर येतो.
3 ಆಗ ಸೈನ್ಯದವರು ಅವನಿಗೆ, “ನೀನು ಬರಬಾರದು. ನಾವು ಸೋತು ಓಡಿಹೋದರೆ ಶತ್ರುಗಳು ಅದನ್ನು ಗಮನಿಸುವುದಿಲ್ಲ. ನಮ್ಮಲ್ಲಿ ಅರ್ಧ ಜನರು ಸತ್ತುಹೋದರೂ ಅದು ಅವರಿಗೆ ದೊಡ್ಡ ಲಾಭವಲ್ಲ. ನಮ್ಮಂಥ ಹತ್ತು ಸಾವಿರ ಜನರಿಗಿರುವ ಬೆಲೆ ನಿನ್ನೊಬ್ಬನಿಗೆ ಉಂಟು. ನೀನು ಊರಲ್ಲಿದ್ದುಕೊಂಡು ಅಲ್ಲಿಂದಲೇ ನಮಗೆ ಬೇಕಾದ ಸಹಾಯ ಮಾಡಬಹುದು” ಎಂದನು.
पण लोक म्हणाले नाही तुम्ही आमच्याबरोबर येता कामा नये. कारण आम्ही युध्दातून पळ काढला किंवा आमच्यातले निम्मे लोक या लढाईत कामी आले तरी अबशालोमच्या लोकांस त्याची फिकीर नाही. पण तुम्ही एकटे आम्हा दहाहजारांच्या ठिकाणी आहात. तेव्हा तुम्ही शहरात रहावे हे बरे. शिवाय गरज पडली तर तुम्ही आमच्या मदतीला येणारच.
4 ಅರಸನು ಅವರಿಗೆ, “ನಿಮಗೆ ಸರಿಕಂಡ ಹಾಗೆ ಮಾಡುತ್ತೇನೆ” ಎಂದು ಹೇಳಿ ಊರಬಾಗಿಲಿನ ಒಂದು ಕಡೆಯಲ್ಲಿ ನಿಂತನು. ಸೈನಿಕರು ನೂರು ನೂರು ಮಂದಿಯಾಗಿಯೂ, ಸಾವಿರ ಸಾವಿರ ಮಂದಿಯಾಗಿಯೂ ಹೊರಟರು.
तेव्हा दावीद राजा लोकांस म्हणाला, मी तुमच्या म्हणण्याप्रमाणे करीन. राजा मग वेशीपाशी उभा राहिला. सैन्य बाहेर पडले, शंभर आणि हजाराच्या गटात ते निघाले.
5 ಅರಸನು ಯೋವಾಬ, ಅಬೀಷೈ ಮತ್ತು ಇತ್ತೈ ಎಂಬುವರಿಗೆ, “ನನಗೋಸ್ಕರವಾಗಿ ಯೌವನಸ್ಥನಾದ ಅಬ್ಷಾಲೋಮನಿಗೆ ದಯೆ ತೋರಿಸಿರಿ” ಎಂದು ಆಜ್ಞಾಪಿಸಿದನು. ದಾವೀದನು ಸೇನಾಧಿಪತಿಗಳಿಗೆ ಕೊಟ್ಟ ಈ ಅಪ್ಪಣೆಯು ಸೈನ್ಯದವರಿಗೆಲ್ಲಾ ಕೇಳಿಸಿತು.
यवाब, अबीशय आणि इत्तय यांना राजाने आज्ञा दिली माझ्यासाठी एक करा, अबशालोमशी सौम्यपणाने वागा राजाची ही आज्ञा सर्वांच्या कानावर गेली.
6 ಅನಂತರ ಸೈನಿಕರು ಇಸ್ರಾಯೇಲರಿಗೆ ವಿರೋಧವಾಗಿ ಹೊರಟು ಬಯಲಿಗೆ ಬಂದರು. ಎಫ್ರಾಯೀಮಿನ ಕಾಡಿನಲ್ಲಿ ಯುದ್ಧವಾಯಿತು.
अबशालोमच्या इस्राएल सैन्यावर दावीदाचे सैन्य चालून गेले. एफ्राईमाच्या अरण्यात ते लढले.
7 ಇಸ್ರಾಯೇಲರು ದಾವೀದನ ಸೈನಿಕರಿಂದ ಪೂರ್ಣವಾಗಿ ಸೋಲಿಸಲ್ಪಟ್ಟರು. ಆ ದಿನ ಇಪ್ಪತ್ತು ಸಾವಿರ ಜನರು ಹತರಾದರು.
दावीदाच्या सैन्याने इस्राएलाचा पराभव केला. त्यांची वीस हजार माणसे त्यादिवशी मारली गेली.
8 ಯುದ್ಧವು ಸುತ್ತಣ ಪ್ರದೇಶಗಳಲ್ಲಿ ಹಬ್ಬಿಕೊಂಡಿತು. ಆ ದಿನ ಕತ್ತಿಯಿಂದ ಹತರಾದವರಿಗಿಂತ ಕಾಡಿನಲ್ಲಿ ಹತರಾದವರೇ ಹೆಚ್ಚಾಗಿದ್ದರು.
देशभर युध्द पेटले. त्या दिवशी तलवारीला बळी पडली त्यापेक्षा जास्त माणसे जंगलामुळे मरण पावली.
9 ಅಬ್ಷಾಲೋಮನು ದಾವೀದನ ಸೇವಕರ ಕೈಗೆ ಸಿಕ್ಕಿದನು. ಹೇಗೆಂದರೆ ಅವನು ಹತ್ತಿದ ಹೆಸರುಗತ್ತೆಯು ಒಂದು ದೊಡ್ಡ ದೇವದಾರು (ಕರ್ಪೂರತೈಲದ) ಮರದ ಕೆಳಗೆ ಹಾದುಹೋಗುವಾಗ ಅವನ ತಲೆಯ ಕೂದಲು ಒಂದು ದೊಡ್ಡದಾದ ಕೊಂಬೆಗೆ ಸಿಕ್ಕಿಕೊಂಡಿತು. ಹೇಸರಗತ್ತೆಯು ಅವನ ಕೆಳಗಿನಿಂದ ಓಡಿಹೋಯಿತು. ಅವನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನೇತಾಡುತ್ತಿದ್ದನು.
अबशालोमचा दावीदाच्या अधिकाऱ्यांशी सामना झाला, तेव्हा अबशालोम खेचरावर बसून निसटायचा प्रयत्न करू लागला. ते खेचर एका मोठ्या एला वृक्षाच्या खालून जात असताना त्याच्या जाडजूड फांद्यामध्ये अबशालोमचे डोके अडकले. खेचर निघून गेले आणि अबशालोम अधांतरी लोंबकळत राहिला.
10 ೧೦ ಇದನ್ನು ನೋಡಿದ ಒಬ್ಬ ಮನುಷ್ಯನು ಯೋವಾಬನಿಗೆ, “ಅಗೋ, ಆ ದೇವದಾರು ಮರದಲ್ಲಿ ಅಬ್ಷಾಲೋಮನು ನೇತಾಡುತ್ತಿರುವುದನ್ನು ಕಂಡೆನು” ಎಂದು ಹೇಳಿದನು.
१०एकाने हे पाहिले आणि यवाबाला सांगितले, अबशालोमला मी एला वृक्षावरून लोंबकळताना पाहिले.
11 ೧೧ ಯೋವಾಬನು ಅವನಿಗೆ, “ನೀನು ಕಂಡ ಕೂಡಲೆ ಯಾಕೆ ಅವನನ್ನು ಕಡಿದು ನೆಲಕ್ಕುರುಳಿಸಲಿಲ್ಲ? ಹಾಗೆ ಮಾಡಿದ್ದರೆ ನಾನು ನಿನಗೆ ಹತ್ತು ತಲಾಂತು ಬೆಳ್ಳಿಯನ್ನು, ಒಂದು ನಡುಕಟ್ಟನ್ನೂ ಕೊಡುತ್ತಿದ್ದೆನು” ಎಂದನು.
११यवाब त्या मनुष्यास म्हणाला, मग तू त्याचा वध करून त्यास जमिनीवर का पाडले नाहीस? मी तुला दहा रौप्यमुद्रा आणि एक पट्टा इनाम दिला असता.
12 ೧೨ ಅದಕ್ಕೆ ಆ ಮನುಷ್ಯನು ಯೋವಾಬನಿಗೆ, “ನೀನು ನನ್ನ ಕೈಯಲ್ಲಿ ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಟ್ಟರೂ ನಾನು ಅರಸನ ಮಗನಿಗೆ ವಿರೋಧವಾಗಿ ಕೈಯೆತ್ತುವುದಿಲ್ಲ. ಅರಸನು ನಮ್ಮೆಲ್ಲರಿಗೆ ಕೇಳಿಸುವಂತೆ ನಿನಗೂ, ಅಬೀಷೈಗೂ ಮತ್ತು ಇತ್ತೈಗೂ, ‘ಜಾಗರೂಕತೆಯಿಂದಿರಿ, ಯೌವನಸ್ಥನಾದ ಅಬ್ಷಾಲೋಮನನ್ನು ಯಾರೂ ಮುಟ್ಟಬಾರದು’ ಎಂದು ಆಜ್ಞಾಪಿಸಿದ್ದಾನಲ್ಲವೇ?
१२तो मनुष्य म्हणाला, तुम्ही हजार रौप्यमुद्रा देऊ केल्या असत्या तरी मी राजकुमाराला इजा पोचू दिली नसती. कारण तुम्ही, अबीशय, आणि इत्तय यांना राजाने केलेला हुकूम आम्ही ऐकला आहे. राजा म्हणाला होता, लहान अबशालोमला घातपात होणार नाही याची काळजी घ्या.
13 ೧೩ ನಾನು ಅವನ ಪ್ರಾಣಕ್ಕೆ ಅಪಾಯವನ್ನುಂಟುಮಾಡಿದರೆ ಅದು ಅರಸನಿಗೆ ತಿಳಿಯದೆ ಇರುವುದಿಲ್ಲ. ಆಗ ನೀನೂ ನನ್ನನ್ನು ಕೈಬಿಟ್ಟು ದೂರ ನಿಲ್ಲುವಿ” ಎಂದು ಉತ್ತರ ಕೊಟ್ಟನು.
१३अबशालोमला मी मारले असते तर राजाला ते समजलेच असते आणि तुम्ही मला शिक्षा केली असती.
14 ೧೪ ಆಗ ಯೋವಾಬನು, “ಇಲ್ಲಿ ನಿಂತು ತಡಮಾಡುವುದೇಕೆ” ಎಂದು ಹೇಳಿ ಕೂಡಲೆ ಕೈಯಲ್ಲಿ ಮೂರು ಈಟಿಗಳನ್ನು ತೆಗೆದುಕೊಂಡು ಹೋಗಿ ಅಬ್ಷಾಲೋಮನ ಎದೆಗೆ ತಿವಿದನು. ಅವನು ಇನ್ನೂ ಜೀವದಿಂದ ಓಕ್ ಮರದಲ್ಲಿ ನೇತಾಡುತ್ತಿರುವಾಗಲೇ
१४यवाब म्हणाला, इथे वेळ दवडण्यात काही अर्थ नाही. अबशालोम अजून जिवंत असून एलावृक्षात अजून तसाच लटकत होता. यवाबाने तीन भाले घेतले आणि ते अबशालोमवर फेकले. भाले अबशालोमच्या हृदयातून आरपार गेले.
15 ೧೫ ಯೋವಾಬನ ಆಯುಧಗಳನ್ನು ಹೊರುವ ಹತ್ತು ಮಂದಿ ಯೌವನಸ್ಥರು ಬಂದು ಅವನನ್ನು ಕೊಂದು ಹಾಕಿದರು.
१५यवाबाजवळ दहा तरुण सैनिक त्याचे लढाईतील मदतनीस म्हणून होते. त्यांनी भोवती जमून अबशालोमचा वध केला.
16 ೧೬ ಕೂಡಲೆ ಯೋವಾಬನು ತನ್ನ ಜನರನ್ನು ತಡೆಯುವುದಕ್ಕಾಗಿ ತುತ್ತೂರಿಯನ್ನು ಊದಿಸಲು ಸೈನ್ಯದವರೆಲ್ಲಾ ಇಸ್ರಾಯೇಲ್ಯರನ್ನು ಹಿಂದಟ್ಟುವುದನ್ನು ಬಿಟ್ಟು ಹಿಂದಿರುಗಿದರು.
१६यवाबाने रणशिंग फुंकले आणि लोकांस अबशालोमच्या इस्राएली सैन्याचा पाठलाग थांबवायला सांगितले.
17 ೧೭ ಅವರು ಅಬ್ಷಾಲೋಮನ ಶವವನ್ನು ಆ ಕಾಡಿನಲ್ಲಿದ್ದ ಒಂದು ದೊಡ್ಡ ಗುಂಡಿಯೊಳಗೆ ಹಾಕಿ ಅದರ ಮೇಲೆ ದೊಡ್ಡದಾದ ಕಲ್ಲು ಕುಪ್ಪೆಯನ್ನು ಮಾಡಿದರು. ಇಸ್ರಾಯೇಲ್ಯರಾದರೋ ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.
१७यवाबाच्या मनुष्यांनी अबशालोमचा मृतदेह अरण्यातील एका खंदकात नेऊन टाकला. त्यावर दगडांची रास रचून तो खंदक भरून टाकला. अबशालोमाबरोबर आलेल्या इस्राएलींनी पळ काढला आणि ते घरी परतले.
18 ೧೮ ಅಬ್ಷಾಲೋಮನು ಜೀವದಿಂದ ಇದ್ದಾಗ ತನ್ನ ಹೆಸರನ್ನುಳಿಸಲು ಮಗನಿಲ್ಲದೆ ಇದ್ದುದರಿಂದ ಒಂದು ಕಲ್ಲಿನ ಕಂಬವನ್ನು ತರಿಸಿ, ಅದನ್ನು ಅರಸನ ತಗ್ಗಿನಲ್ಲಿ ತನ್ನ ಜ್ಞಾಪಕಾರ್ಥವಾಗಿ ನಿಲ್ಲಿಸಿ, ಅದಕ್ಕೆ ತನ್ನ ಹೆಸರನ್ನಿಟ್ಟಿದ್ದನು. ಅದು ಇಂದಿನ ವರೆಗೂ ಅಬ್ಷಾಲೋಮನ ಜ್ಞಾಪಕಸ್ತಂಭ ಎಂದು ಕರೆಯಲಾಗುತ್ತಿದೆ.
१८अबशालोमने राजाच्या खोऱ्यात पूर्वीच एक स्तंभ उभारलेला होता. आपले नाव चालवायला पुत्र नाही म्हणून त्याने त्या स्तंभाला स्वत: चेच नाव दिले होते. आजही तो अबशालोम स्मृतीस्तंभ म्हणून ओळखला जातो.
19 ೧೯ ಚಾದೋಕನ ಮಗನಾದ ಅಹೀಮಾಚನು ಯೋವಾಬನಿಗೆ, “ಅಪ್ಪಣೆಯಾಗಲಿ ನಾನು ಅರಸನ ಬಳಿಗೆ ಓಡಿಹೋಗಿ ಯೆಹೋವನು ಅವನ ವೈರಿಗಳಿಗೆ ಮುಯ್ಯಿ ತೀರಿಸಿದ್ದಾನೆಂಬ ಶುಭ ವರ್ತಮಾನವನ್ನು ತಿಳಿಸುವೆನು” ಎಂದನು.
१९सादोकाचा मुलगा अहीमास यवाबाला म्हणाला मला धावत जाऊन ही बातमी राजाला सांगू दे. परमेश्वराने त्याच्या शत्रूचा नि: पात केला आहे हे मी त्यास सांगतो.
20 ೨೦ ಯೋವಾಬನು ಅವನಿಗೆ, “ಈ ಹೊತ್ತಿನ ಸುದ್ದಿಯನ್ನು ತೆಗೆದುಕೊಂಡು ಹೋಗತಕ್ಕವನು ನೀನಲ್ಲ. ಇನ್ನೊಂದು ಸಾರಿ ನಿನ್ನನ್ನು ಕಳುಹಿಸುತ್ತೇನೆ, ಈ ಹೊತ್ತು ಅರಸನ ಮಗನು ಸತ್ತಿರುವುದರಿಂದ ವರ್ತಮಾನವು ಶುಭವಾದುದಲ್ಲ” ಎಂದು ಹೇಳಿದನು.
२०यवाब त्यास म्हणाला, आज तुला दावीदाकडे ही बातमी घेऊन जाता येणार नाही. नंतर जाऊन तू सांग पण आज नको. कारण खुद्द राजाचा पुत्र मरण पावला आहे.
21 ೨೧ ಯೋವಾಬನು ತನ್ನ ಬಳಿಯಲ್ಲಿದ್ದ ಒಬ್ಬ ಕೂಷ್ಯನನ್ನು ಕರೆದು ಅವನಿಗೆ, “ನೀನು ಹೋಗಿ ಕಂಡದ್ದನ್ನು ಅರಸನಿಗೆ ತಿಳಿಸು” ಎಂದು ಆಜ್ಞಾಪಿಸಿದನು. ಅವನು ಯೋವಾಬನಿಗೆ ನಮಸ್ಕರಿಸಿ ಹೊರಟುಹೋದನು.
२१मग यवाब कूश येथील एकाला म्हणाला, तू पाहिलेस त्याचे वर्तमान राजाला जाऊन सांग त्या मनुष्याने यवाबला अभिवादन केले मग तो दावीदाकडे निघाला.
22 ೨೨ ಚಾದೋಕನ ಮಗನಾದ ಅಹೀಮಾಚನು ಪುನಃ ಯೋವಾಬನಿಗೆ, “ಆಗಿದ್ದಾಗಲಿ, ದಯವಿಟ್ಟು ಆ ಕೂಷ್ಯನ ಹಿಂದೆ ಹೋಗುವುದಕ್ಕೆ ನನಗೆ ಅಪ್ಪಣೆ ಕೊಡು” ಎಂದು ಬೇಡಿಕೊಂಡನು. ಅದಕ್ಕೆ ಅವನು, “ಮಗನೇ ಯಾಕೆ ಹೋಗಬೇಕೆನ್ನುತ್ತೀ? ಅದಕ್ಕಾಗಿ ನಿನಗೆ ಬಹುಮಾನ ಸಿಕ್ಕುವುದಿಲ್ಲವಲ್ಲಾ” ಎಂದನು.
२२सादोकाचा मुलगा अहीमास याने पुन्हा यवाबाकडे विनवणी केली. काय होईल ते होईल, पण मलाही त्या कूशीच्या पाठोपाठ धावत जाऊ दे. यवाब म्हणाला मुला तू ही बातमी नेऊन काय करणार? त्यासाठी काही तुला इनाम मिळायचे नाही.
23 ೨೩ ಆಗ ಅಹೀಮಾಚನು ಪುನಃ “ಚಿಂತೆಯಿಲ್ಲ ನನ್ನನ್ನು ಕಳುಹಿಸು” ಎಂದು ಒತ್ತಾಯಪಡಿಸಿದ್ದರಿಂದ ಯೋವಾಬನು “ಹೋಗು” ಎಂದು ಹೇಳಿದನು. ಆಗ ಅಹೀಮಾಚನು ಯೊರ್ದನ್ ತಗ್ಗಿನಲ್ಲಿರುವ ದಾರಿಯನ್ನು ಹಿಡಿದು ಆ ಕೂಷ್ಯನಿಗಿಂತ ಮುಂದಾಗಿ ಓಡಿದನು.
२३अहीमास म्हणाला; “काहीही होवो, मला धावत जाऊ द्या.” तेव्हा यवाबाने त्यास म्हटले, “धाव.” अहीमास मग यार्देनच्या खोऱ्यातून धावत निघाला. त्याने त्या कूशीला मागे टाकले.
24 ೨೪ ದಾವೀದನು ಒಳಗಣ ಮತ್ತು ಹೊರಗಣ ಬಾಗಿಲುಗಳ ಮಧ್ಯದಲ್ಲಿ ಕುಳಿತುಕೊಂಡಿದ್ದನು. ಅಷ್ಟರಲ್ಲಿ ಕಾವಲುಗಾರರು ಗೋಪುರದ ಮಾಳಿಗೆಯನ್ನು ಹತ್ತಿ ಪ್ರಾಕಾರದ ಗೋಡೆಯ ಬಳಿಯಲ್ಲಿ ನಿಂತು ನೋಡಲು ಒಬ್ಬಂಟಿಗನಾಗಿ ಬರುವ ಒಬ್ಬ ಮನುಷ್ಯನನ್ನು ಕಂಡರು.
२४राजा वेशीच्या दोन दरवाजांमध्येच बसला होता. तेव्हा पहारेकरी तटबंदीवरील छपरावर चढला. त्याने इकडे तिकडे पाहिले तेव्हा त्यास एक मनुष्य धावत येताना दिसला.
25 ೨೫ ಅವನು ಕೂಡಲೆ ದಾವೀದನಿಗೆ ತಿಳಿಸಲು ದಾವೀದನು, “ಅವನು ಒಬ್ಬನಾಗಿ ಇದ್ದರೆ ಸಮಾಚಾರ ತರುವವನಾಗಿರಬಹುದು” ಎಂದನು. ಆ ಮನುಷ್ಯನು ಬರಬರುತ್ತಾ ಸಮೀಪವಾದನು.
२५पहारेकऱ्याने हे राजाला ओरडून मोठ्याने सांगितले. राजा दावीद म्हणाला, तो एकटाच असेल तर त्याचा अर्थ तो काहीतरी बातमी घेऊन येत आहे. धावता धावता तो मनुष्य शहराच्या जवळ येऊन पोहचतो तोच,
26 ೨೬ ಅಷ್ಟರಲ್ಲಿ ಕಾವಲುಗಾರರು ಓಡುತ್ತಾ ಬರುವ ಇನ್ನೊಬ್ಬನನ್ನು ಕಂಡು ದ್ವಾರಪಾಲಕನ ಮುಖಾಂತರ, “ಇಗೋ, ಇನ್ನೊಬ್ಬನು ಒಬ್ಬಂಟಿಗನಾಗಿ ಬರುತ್ತಿದ್ದಾನೆ” ಎಂದು ಅರಸನಿಗೆ ತಿಳಿಸಿದನು. ಆಗ ಅರಸನು, “ಹಾಗಾದರೆ ಅವನೂ ಸಮಾಚಾರ ತರುವವನು” ಎಂದು ಹೇಳಿದನು.
२६पहारेकऱ्याने आणखी एकाला धावत येताना पाहिले. पहारेकरी द्वाररक्षकाला म्हणाला, तो पाहा आणखी एक मनुष्य एकटाच धावत येतोय तेव्हा राजा म्हणाला, तो ही बातमी आणतोय.
27 ೨೭ ಆಗ ಕಾವಲುಗಾರನು, “ಮುಂದಾಗಿ ಬರುತ್ತಿರುವವನ ಓಟವು ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಕಾಣುತ್ತದೆ” ಎಂದನು. ಅದಕ್ಕೆ ಅರಸನು, “ಅವನು ಒಳ್ಳೆಯವನು, ಶುಭವರ್ತಮಾನ ತರುವವನು” ಎಂದನು.
२७पहारेकरी म्हणाला, पहिल्याचे धावणे मला सादोकाचा मुलगा अहीमास याच्यासारखे वाटते. राजा म्हणाला, अहीमास चांगला गृहस्थ आहे. त्याच्याजवळ चांगलीच बातमी असणार
28 ೨೮ ಅಹೀಮಾಚನು ಹತ್ತಿರ ಬಂದು ಅರಸನಿಗೆ, “ಶುಭವಾಗಲಿ” ಎಂದು ಹೇಳಿ ಸಾಷ್ಟಾಂಗನಮಸ್ಕಾರ ಮಾಡಿ, “ಅರಸನಿಗೆ ವಿರೋಧವಾಗಿ ಕೈಯೆತ್ತಿದವರನ್ನು ಸ್ವಾಧೀನಪಡಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ” ಎಂದನು.
२८अहीमासने “सर्व कुशल असो, असे म्हणून राजाला वाकून अभिवादन केले. पुढे तो म्हणाला, परमेश्वर देवाला धन्यवाद द्या. धनीस्वामी, तुमच्याविरुध्द ज्यांनी उठाव केला त्यांना परमेश्वराने पराभूत केले आहे.”
29 ೨೯ ಆಗ ಅರಸನು ಅವನನ್ನು, “ಯೌವನಸ್ಥನಾದ ಅಬ್ಷಾಲೋಮನು ಸುರಕ್ಷಿತವಾಗಿದ್ದಾನೋ” ಎಂದು ಕೇಳಿದನು. ಅದಕ್ಕೆ ಅಹೀಮಾಚನು, “ಯೋವಾಬನು ಒಡೆಯರ ಸೇವಕನಾದ ನನ್ನನ್ನು ಕಳುಹಿಸುವಾಗ ನಾನು ಒಂದು ದೊಡ್ಡ ದೊಂಬಿಯನ್ನು ಕಂಡೆನು, ಆದರೆ ಸಂಗತಿ ಏನೆಂಬುದು ನನಗೆ ಗೊತ್ತಾಗಲಿಲ್ಲ” ಎಂದು ಉತ್ತರಕೊಟ್ಟನು.
२९राजाने विचारले अबशालोमचे कुशल आहे ना? अहीमास म्हणाला, यवाबाने मला पाठवले तेव्हा मोठी धांदल उडालेली दिसलेली, पण ती कशाबद्दल हे मला कळले नाही.
30 ೩೦ ಆಗ ಅರಸನು ಅವನಿಗೆ, “ನೀನು ಇತ್ತ ನಿಲ್ಲು” ಎಂದು ಆಜ್ಞಾಪಿಸಿದನು. ಅವನು ನಿಂತನು.
३०राजाने मग त्यास बाजूला उभे राहून थांबायला सांगितले. अहीमास त्याप्रमाणे पलीकडे झाला आणि थांबला.
31 ೩೧ ಅಷ್ಟರಲ್ಲಿ ಕೂಷ್ಯನು ಬಂದು, “ನನ್ನ ಒಡೆಯನಾದ ಅರಸನಿಗೆ ಶುಭವರ್ತಮಾನ ತಂದಿದ್ದೇನೆ. ಯೆಹೋವನು ನಿನಗೆ ವಿರೋಧವಾಗಿ ಎದ್ದವರೆಲ್ಲರಿಗೂ ಮುಯ್ಯಿತೀರಿಸಿದ್ದಾನೆ” ಎಂದನು.
३१मग तो कूशी आला. तो म्हणाला, माझ्या स्वामीसाठी ही बातमी आहे. तुमच्या विरूद्ध पक्षाच्या लोकांस परमेश्वराने चांगली अद्दल घडवली.
32 ೩೨ ಅರಸನು ಅವನನ್ನು, “ಯೌವನಸ್ಥನಾದ ಅಬ್ಷಾಲೋಮನು ಸುರಕ್ಷಿತನಾಗಿದ್ದಾನೋ?” ಎಂದು ಕೇಳಲು ಅವನು, “ನನ್ನ ಒಡೆಯನಾದ ಅರಸನ ಶತ್ರುಗಳಿಗೂ, ಅವನಿಗೆ ಕೇಡು ಮಾಡುವುದಕ್ಕೆ ಎದ್ದು ನಿಂತವರೆಲ್ಲರಿಗೂ ಆ ಯೌವನಸ್ಥನಿಗಾದ ಗತಿಯೇ ಆಗಲಿ” ಎಂದು ಉತ್ತರ ಕೊಟ್ಟನು.
३२राजाने त्यास विचारले, अबशालोम ठीक आहे ना? त्यावर कूशीने सांगितले तुमचे शत्रू आणि तुमच्या वाईटावर असलेले लोक या सगळ्यांची त्या तरुण माणासा सारखी, अबशालोमासारखीच गत होवो.
33 ೩೩ ಇದನ್ನು ಕೇಳಿ ಅರಸನು ಎದೆಯೊಡದವನಾಗಿ, “ನನ್ನ ಮಗನೇ, ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ಅಬ್ಷಾಲೋಮನೇ! ನನ್ನ ಮಗನೇ, ನನ್ನ ಮಗನೇ!” ಎಂದು ಕೂಗಿ ಅಳುತ್ತಾ ಪಟ್ಟಣದ ಹೆಬ್ಬಾಗಿಲಿನ ಮೇಲಿರುವ ಕೋಣೆಗೆ ಹೋದನು.
३३यावरुन अबशालोम मरण पावला हे राजाला उमगले. तो फार शोकाकुल झाला. वेशीच्या भिंतीवर बांधलेल्या खोलीत तो गेला. तेथे त्यास रडू कोसळले, आपल्या दालनात जाताना तो म्हणाला, “अबशालोम, माझ्या पुत्रा, तुझ्या ऐवजी मीच मरायला हवे होते माझ्या पुत्रा!”

< ಸಮುವೇಲನು - ದ್ವಿತೀಯ ಭಾಗ 18 >